Tag: Janardhana Reddy

  • ರೆಡ್ಡಿ Vs ರಾಮುಲು – ಒಂದೇ ರಾತ್ರಿಗೆ ಗಂಭೀರ ಹಂತಕ್ಕೆ ಹೋಯ್ತು ಕಲಹ!

    ರೆಡ್ಡಿ Vs ರಾಮುಲು – ಒಂದೇ ರಾತ್ರಿಗೆ ಗಂಭೀರ ಹಂತಕ್ಕೆ ಹೋಯ್ತು ಕಲಹ!

    ಬೆಂಗಳೂರು: ಕುಚಿಕು ಗೆಳೆಯರಾದ ಜನಾರ್ದನ ರೆಡ್ಡಿ (Janardhana Reddy), ಬಿ ಶ್ರೀರಾಮುಲು (B Sriramulu) ಮಧ್ಯೆ ಬಂಗಾರು ಹನುಮಂತು ಕಿಡಿ ಹೊತ್ತಿಸಿದ್ದು, ಬಿಜೆಪಿಯಲ್ಲಿ ಮತ್ತೊಂದು ಕಲಹಕ್ಕೆ ವೇದಿಕೆ ಸೃಷ್ಟಿಯಾಗಿದೆ.

    ಇಲ್ಲಿಯವರೆಗೆ ವಿಜಯೇಂದ್ರ ವರ್ಸಸ್ ಯತ್ನಾಳ್ ಕಚ್ಚಾಟದ ಮಧ್ಯೆ ರೆಡ್ಡಿ ವರ್ಸಸ್ ರಾಮುಲು ಫೈಟ್ ಆರಂಭವಾಗಿದ್ದು ಹೈಕಮಾಂಡ್‌ಗೆ ಹೊಸ ತಲೆನೋವು ಆರಂಭವಾಗಿದೆ. ಒಂದೇ ರಾತ್ರಿಗೆ ಗಂಭೀರ ಹಂತಕ್ಕೆ ರೆಡ್ಡಿ, ರಾಮುಲು ಕಲಹ ಹೋಗಿದ್ದು ಪಕ್ಷದ ಕೋರ್‌ ಕಮಿಟಿ ಸಭೆಯಲ್ಲೇ ರೆಬೆಲ್ ರಾಮುಲು ಅಸಮಧಾನ ಸ್ಫೋಟವಾಗಿದೆ. ಇದನ್ನೂ ಓದಿ: ಬಿಜೆಪಿ ಕೋರ್‌ ಕಮಿಟಿ ಸಭೆ – ರಾಮುಲುಗೆ ರಾಧಾಮೋಹನ್‌ ದಾಸ್‌ ಕ್ಲಾಸ್‌!

    ಸಂಡೂರು ಉಪಚುನಾವಣೆಯಲ್ಲಿ ನಾನು ಸರಿಯಾಗಿ ಕೆಲಸ ಮಾಡಿದ್ದೇನೆ. ಆದರೆ ಸಂಡೂರು ಸೋಲನ್ನು ನನ್ನ ತಲೆಗೆ ಕಟ್ಟುತ್ತಿದ್ದಾರೆ. ಇಷ್ಟು ವರ್ಷ ಪಕ್ಷಕ್ಕಾಗಿ ದುಡಿದು ತ್ಯಾಗ ಮಾಡಿದ ಹಿರಿಯ ನಾಯಕ ನಾನು. ನನಗೆ ಈಗ ಪಕ್ಷದ ವೇದಿಕೆಯಲ್ಲೇ ಅಪಮಾನ ನಡೆದಿದೆ ಎಂದು ಕೆರಳಿರುವ ಶ್ರೀರಾಮುಲು ರಾಜ್ಯ ಉಸ್ತುವಾರಿ ರಾಧಾ ಮೋಹನ ದಾಸ್, ಜನಾರ್ದನ ರೆಡ್ಡಿ ಹಾಗೂ ವಿಜಯೇಂದ್ರ ವಿರುದ್ಧ ಸಂಘಕ್ಕೆ ಮೌಖಿಕ ದೂರು ನೀಡಿದ್ದಾರೆ. ಇದನ್ನೂ ಓದಿ: ಸಭೆಯಲ್ಲಿ ನನಗೆ ಅಪಮಾನ ಮಾಡಿದ್ದಾರೆ – ರಾಧಾಮೋಹನ್ ದಾಸ್ ವಿರುದ್ಧ ಶ್ರೀರಾಮುಲು ಗರಂ

     

    ಜನಾರ್ದನ ರೆಡ್ಡಿ ತಮ್ಮನ್ನು ರಾಜಕೀಯವಾಗಿ ಮುಗಿಸಲು ತಂತ್ರ ಮಾಡುತ್ತಿದ್ದಾರೆ ಎನ್ನುವುದು ರಾಮುಲು ಆರೋಪ. ಹೈಕಮಾಂಡ್ ಮೆಟ್ಟಿಲೇರಲು ರಾಮುಲು ತಯಾರಿ ನಡೆಸಿದ್ದು ಬಿ ಎಲ್ ಸಂತೋಷ್‌ ಅವರಿಗೂ ದೂರು ಕೊಟ್ಟು ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ.

    ಈ ಮಧ್ಯೆ ಇಂದು ಜನಾರ್ದನ ರೆಡ್ಡಿ ಸುದ್ದಿಗೋಷ್ಠಿ ನಡೆಸಿ ರಾಮುಲು ಮಾಡಿದ ಆರೋಪಗಳಿಗೆ ರೆಡ್ಡಿ ಠಕ್ಕರ್‌ ನೀಡುವ ಸಾಧ್ಯತೆಯಿದೆ.

     

  • ಸಭೆಯಲ್ಲಿ ನನಗೆ ಅಪಮಾನ ಮಾಡಿದ್ದಾರೆ – ರಾಧಾಮೋಹನ್ ದಾಸ್ ವಿರುದ್ಧ ಶ್ರೀರಾಮುಲು ಗರಂ

    ಸಭೆಯಲ್ಲಿ ನನಗೆ ಅಪಮಾನ ಮಾಡಿದ್ದಾರೆ – ರಾಧಾಮೋಹನ್ ದಾಸ್ ವಿರುದ್ಧ ಶ್ರೀರಾಮುಲು ಗರಂ

    ಬೆಂಗಳೂರು: ಕೋರ್ ಕಮಿಟಿ ಸಭೆಯಲ್ಲಿ ನನಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ (BJP) ಉಸ್ತುವಾರಿ ರಾಧಾಮೋಹನ ದಾಸ್ (Radha Mohan Das Agarwal) ವಿರುದ್ಧ ಮಾಜಿ ಸಚಿವ ಶ್ರೀರಾಮುಲು (Sriramulu) ಗರಂ ಆಗಿದ್ದಾರೆ.

    ನಗರದಲ್ಲಿ `ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನನಗೆ ಸಭೆಯಲ್ಲಿ ಅಪಮಾನ ಮಾಡಿದ್ದಾರೆ. ಜನಾರ್ದನ ರೆಡ್ಡಿ ನನ್ನ ಟಾರ್ಗೆಟ್ ಮಾಡ್ತಾ ಇದ್ದಾರೆ. ವಿಜಯೇಂದ್ರ ನನ್ನ ಪರ ಇರಲಿಲ್ಲ. ನಾನು ಪಕ್ಷ ಬಿಡುತ್ತೇನೆ, ನಿಮಗೆ ನಾನು ಬೇಡ ಅಂದ್ರೆ ಹೇಳಿ ಅಂದಿದ್ದೆ ಎಂದು ಅಬ್ಬರಿಸಿದ್ದಾರೆ.

    ಸಂಡೂರು ಸೋಲಿಗೆ ಶ್ರೀರಾಮುಲು ಕಾರಣ ಎಂದು ಪರಾಜಿತ ಅಭ್ಯರ್ಥಿ ಬಂಗಾರು ಹನುಮಂತು ಹೈಕಮಾಂಡ್‍ಗೆ ದೂರು ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ರಾಮುಲು ಅವರಿಗೆ ರಾಧಾ ಮೋಹನದಾಸ್ ಅಗರವಾಲ್ ಸಭೆಯಲ್ಲಿ ತರಾಟೆ ತೆಗೆದುಕೊಂಡಿದ್ದರು. ಇದರಿಂದ ಅಸಮಾಧಾನಗೊಂಡ ರಾಮುಲು, ಆರ್‍ಎಸ್‍ಎಸ್ ನಾಯಕರು ಹಾಗೂ ಕರೆ ಮಾಡಿ ಮೌಖಿಕ ದೂರು ಕೊಟ್ಟಿದ್ದಾರೆ. ಅಲ್ಲದೇ, ನಾನು ಚುನಾವಣೆ ಸೋಲಿನ ನೋವಲ್ಲಿ ಇದ್ದೇನೆ. ಇಂತಹ ಸಂದರ್ಭದಲ್ಲಿ ಈ ಆರೋಪ ಸರಿ ಇಲ್ಲ ಎಂದು ಹೇಳಿದ್ದಾರೆ.

    ಜನಾರ್ದನ ರೆಡ್ಡಿ (Janardhana Reddy) ಬಿಜೆಪಿ ಸೇರ್ಪಡೆಗೆ ರಾಮುಲು ಅಡ್ಡಗಾಲು ಹಾಕಿದ್ದರು ಎನ್ನುವ ಆರೋಪ ಇತ್ತು. ಅಲ್ಲಿಂದ ಜನಾರ್ದನ ರೆಡ್ಡಿ ಹಾಗೂ ರಾಮುಲು ನಡುವೆ ಮುನಿಸು ಆರಂಭಗೊಂಡಿತ್ತು. ಅದಾದ ಬಳಿಕ ಸವಾಲಾಗಿ ಸ್ವೀಕರಿಸಿ ಗಂಗಾವತಿಯಿಂದ ಹೊಸ ಪಕ್ಷ ಕಟ್ಟಿ ಸ್ಪರ್ಧೆಗಿಳಿದು, ಜನಾರ್ದನ ರೆಡ್ಡಿ ಗೆದ್ದಿದ್ದರು.

    ಸಭೆಯಲ್ಲಿ ಆಗಿದ್ದೇನು?

    ಕೋರ್ ಕಮಿಟಿ ಸಭೆಯಲ್ಲಿ ಶ್ರೀರಾಮುಲುಗೆ (Sriramulu) ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ (Radha Mohan Das Agarwal) ಕ್ಲಾಸ್ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಸಭೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ (Sandur By Election) ಬಂಗಾರು ಹನುಮಂತು (Bangaru Hanumanthu) ಸೋಲಿನ ಬಗ್ಗೆ ಚರ್ಚೆ ನಡೆದಿತ್ತು. ಚುನಾವಣೆಯ ಫಲಿತಾಂಶದ ಬಳಿಕ ಶ್ರೀರಾಮುಲು ವಿರುದ್ಧ ಬಿಜೆಪಿ ನಾಯಕರಿಗೆ ಬಂಗಾರು ಹನುಮಂತು ದೂರು ನೀಡಿದ್ದರು. ಬಂಗಾರು ಹನುಮಂತು ದೂರನ್ನು ಆಧರಿಸಿ, ಕೋರ್ ಕಮಿಟಿ ಸಭೆಯಲ್ಲಿ ರಾಧಾಮೋಹನ್ ದಾಸ್ ಅಗರ್‌ವಾಲ್ ರಾಮುಲು ಅವರ ಕಾರ್ಯವೈಖರಿ ಪ್ರಶ್ನಿಸಿದ್ದರು.

    ಕೋರ್ ಕಮಿಟಿ ಸಭೆ ಮುಕ್ತಾಯವಾಗುತ್ತಿದ್ದಂತೆ ಮಾಧ್ಯಮಗಳ ಮುಂದೆ ಬಂದು ಹೇಳಿಕೆ ನೀಡಲು ಶ್ರೀರಾಮುಲು ನಿಂತಿದ್ದರು. ಈ ವೇಳೆ ರಾಮುಲು ಅವರನ್ನು ಸಿ.ಟಿ. ರವಿ ಹಾಗೂ ವಿಜಯೇಂದ್ರ ತಡೆದಿದ್ದರು.

  • ಪಂಚಮಸಾಲಿ ಹೋರಾಟಗಾರರ ಮೇಲೆ ಬ್ರಿಟಿಷರ ರೀತಿ ಲಾಠಿ ಚಾರ್ಜ್: ಜನಾರ್ದನ ರೆಡ್ಡಿ

    ಪಂಚಮಸಾಲಿ ಹೋರಾಟಗಾರರ ಮೇಲೆ ಬ್ರಿಟಿಷರ ರೀತಿ ಲಾಠಿ ಚಾರ್ಜ್: ಜನಾರ್ದನ ರೆಡ್ಡಿ

    – ಕೂಡಲೇ ಸಿಎಂ ಸಮಾಜದ ಕ್ಷಮೆ ಕೇಳಲಿ

    ಬಳ್ಳಾರಿ: ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿ (Panchamasali Reservation) ಹೋರಾಟಗಾರರ ಮೇಲೆ ಸರ್ಕಾರ ಸೇಡಿನಿಂದ ಲಾಠಿ ಚಾರ್ಜ್ ಮಾಡಿಸಿ, ಹೋರಾಟಗಾರಿಗೆ ಹಿಂಸೆ ನೀಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಶಾಸಕ ಜನಾರ್ದನ ರೆಡ್ಡಿ (Janardhana Reddy) ತೀವ್ರ ಆಕ್ರೋಶ ಹೊರಹಾಕಿದ್ದಾರೆ.

    ಬಳ್ಳಾರಿಯ ಜಿಲ್ಲಾ ಬಿಜೆಪಿ (BJP) ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಸರ್ಕಾರ ಬ್ರಿಟಿಷರ ಮಾದರಿಯಲ್ಲಿ ಭಯಾನಕವಾಗಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿಸಿದೆ. ವಯಸ್ಸು, ಹಿರಿಯರು, ಕಿರಿಯರು ಎನ್ನುವುದನ್ನು ನೋಡದೇ ಹೊಡೆದಿದ್ದಾರೆ ಎಂದು ದೂರಿದರು.

    ಬಸವ ಜಯ ಮೃತ್ಯಂಜಯ ಸ್ವಾಮೀಜಿ ಅವರನ್ನ ಬಂಧನದಲ್ಲಿಟ್ಟಿದ್ದಾರೆ. ಹೋರಾಟಕ್ಕೆ ಬೆಂಬಲ ನೀಡಿದ್ದ ಪ್ರತಿಪಕ್ಷದ ನಾಯಕರನ್ನೂ ಬಂಧನ ಮಾಡಿದ್ದಾರೆ. ಅಮಾಯಕ ಜನರನ್ನ ಅಟ್ಟಾಡಿಸಿ ಮನಬಂದಂತೆ ಹೊಡೆದಿದ್ದಾರೆ. ಎಡಿಜಿಪಿ ಅವರು ಓಡೋಡಿ ಬಂದು ಸದನದಲ್ಲಿ ಮುಖ್ಯಮಂತ್ರಿ ಭೇಟಿಯಾದ್ರು. ಐದು ನಿಮಿಷಗಳಲ್ಲಿ ಸಿಎಂ ಹೊರಗೆ ಹೋಗಿ ಎಡಿಜಿಪಿ ಜೊತೆ ಸಭೆ ಮಾಡಿದ್ರು. ಆಮೇಲೆ ಏನೆಲ್ಲಾ ಅನಾಹುತ ಆಗಬೇಕಿತ್ತೋ ಅದೆಲ್ಲಾ ಆಯ್ತು. ಬ್ರಿಟಿಷರಂತೆ ಕೆಟ್ಟ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ ಎಂದು ಸಿಟ್ಟು ಹೊರಹಾಕಿದರು.  ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ -ಹೋರಾಟಗಾರರ ಮೇಲೆ ಲಾಠಿಚಾರ್ಜ್‌

     

    ಹೋರಾಟದ ಸ್ಥಳಕ್ಕೆ ಬಂದು ಸಿಎಂ ಭರವಸೆ ಕೊಡುವ ಕೆಲಸ ಮಾಡಬೇಕಿತ್ತು. 50 ಸಾವಿರಕ್ಕೂ ಹೆಚ್ಚು ಸಮುದಾಯದ ಜನ ಹೋರಾಟಕ್ಕೆ ಬಂದಿದ್ರು. ಹೋರಾಟದ ಸ್ಥಳಕ್ಕೆ ಬಾರದೇ ನಿರ್ಲಕ್ಷ್ಯ ಮಾಡಿರುವ ಸಿಎಂ ಸಿದ್ದರಾಮಯ್ಯ ಆಮೇಲೆ ಮಾಧ್ಯಮಕ್ಕೆ ತಪ್ಪು ಮಾಹಿತಿ ಕೊಟ್ಟಿದ್ದಾರೆ. ಜಯ ಮೃತ್ಯುಂಜಯ ಸ್ವಾಮೀಜಿಯವರನ್ನು ಕರೆದ್ರೂ ಬರಲಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಜಯ ಮೃತ್ಯಂಜಯ ಸ್ವಾಮೀಜಿ ಇಲ್ಲಿಯವರೆಗೆ ಶಾಂತಿಯುತವಾಗಿ ಪ್ರತಿಭಟನೆ ಮಾಡಿದ್ರು. ಸಿಎಂ ಐದು ನಿಮಿಷ ಅಲ್ಲಿಗೆ ಹೋಗಿ ಮನವರಿಕೆ ಮಾಡಿಕೊಡಬೇಕಿತ್ತು. ಆದ್ರೆ ಅದೆಲ್ಲವನ್ನೂ ಬಿಟ್ಟು, ಯಾವುದೇ ನೆಪ ಹೇಳಿ ಲಾಠಿ ಚಾರ್ಜ್ ಮಾಡಿಸಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: 2028ಕ್ಕೆ ನಮಗೆ ಬೇಕಾದ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ: ಜಯ ಮೃತ್ಯುಂಜಯ ಸ್ವಾಮೀಜಿ

    ಇನ್ಮುಂದೆ ಹೋರಾಟಕ್ಕೆ ಮುಂದೆ ಬರಬಾರದು, ಹೋರಾಟ ಮಾಡಬಾರದು ಅನ್ನೋ ರೀತಿಯ ಭಯ ಹುಟ್ಟಿಸುವ ಕೆಲಸ ಮಾಡಿದ್ದಾರೆ. ಕೈ, ಕಾಲು ಮುರಿದು, ರಕ್ತ ಬರುವ ರೀತಿ ಹೊಡೆದಿದ್ದಾರೆ. ಇಡೀ ಪಂಚಮಸಾಲಿ ಸಮಾಜಕ್ಕೆ ಮಾತ್ರ ಅಲ್ಲ, ಇಡೀ ಸಮಾಜಕ್ಕೆ ಕ್ಷಮೆ ಕೇಳುವ ಕೆಲಸ ಮಾಡಬೇಕಿದೆ. ಇದಕ್ಕೆ ಸಿಎಂ ಫುಲ್ ಸ್ಟಾಪ್ ಇಡಬೇಕಿದೆ. ಕೂಡಲೇ ಕ್ಷಮೆ ಕೇಳಿ, ಸ್ವಾಮೀಜಿಯವರನ್ನ ಭೇಟಿ ಮಾಡಿ, ಸಾಂತ್ವನ ಹೇಳಬೇಕಿದೆ. ಈ ರೀತಿ ಆಗೋದಿಲ್ಲ ಎಂದು ಭರವಸೆ ಕೊಡಬೇಕಿದೆ ಎಂದರು.

     

  • ಸಂಡೂರು ಸೋಲನ್ನ ಒಪ್ಪಿಕೊಳ್ತೇವೆ, 2028ಕ್ಕೆ ಬಂಗಾರು ಗೆಲ್ತಾರೆ: ಜನಾರ್ದನ ರೆಡ್ಡಿ

    ಸಂಡೂರು ಸೋಲನ್ನ ಒಪ್ಪಿಕೊಳ್ತೇವೆ, 2028ಕ್ಕೆ ಬಂಗಾರು ಗೆಲ್ತಾರೆ: ಜನಾರ್ದನ ರೆಡ್ಡಿ

    – ಹಣ, ಅಧಿಕಾರ ದುರುಪಯೋಗ ಮಾಡಿದ್ದಾರೆ
    – ಗ್ಯಾರಂಟಿ ಹಣ ಮೂರು ಕ್ಷೇತ್ರಗಳಿಗೆ ಮಾತ್ರ ಹಾಕಿದ್ದಾರೆ

    ಬಳ್ಳಾರಿ: ಸಂಡೂರು (Sandur By Election) ಸೋಲನ್ನು ಒಪ್ಪಿಕೊಳ್ಳುತ್ತೇವೆ. ಈ ರೀತಿಯಲ್ಲಿ ಸೋಲುತ್ತೇವೆ ಎಂದು ಅಂದುಕೊಂಡಿರಲಿಲ್ಲಾ ಎಂದು ಶಾಸಕ ಜನಾರ್ದನ ರೆಡ್ಡಿ (Janardhana Reddy) ಬೇಸರ ವ್ಯಕ್ತಪಡಿಸಿದ್ದಾರೆ.

    ಸಂಡೂರು ಉಪಚುನಾವಣೆಯಲ್ಲಿ ಬಿಜೆಪಿ (BJP) ಸೋಲನ್ನು ಅನುಭವಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 5 ಸಾವಿರ ಮತಗಳಿಂದ ನಾವು ಗೆಲ್ಲುತ್ತೇವೆ ಅಂತ ಇತ್ತು. ಆದರೆ 9 ಸಾವಿರಕ್ಕೂ ಹೆಚ್ಚು ಅಂತರದಿಂದ ಕಾಂಗ್ರೆಸ್‌ಗೆ (Congress) ಗೆಲುವಾಗಿದೆ. ಸಿಎಂ ಸಿದ್ದರಾಮಯ್ಯ ಪಂಚಾಯತ್ ಲೆವಲ್‌ನಲ್ಲಿ ಪ್ರಚಾರ ಮಾಡಿದ್ದಾರೆ. 100 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿದ್ದಾರೆ. ಹಣ, ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಸಂಡೂರು ಸರ್ಕಲ್ ಇನ್ಸ್ಪೆಕ್ಟರ್, ಮಹೇಶ್ ಗೌಡ ಸೇರಿದಂತೆ ಅನೇಕ ಪೊಲೀಸರ ದುರ್ಬಳಕೆ ಆಗಿದೆ. ಸಂಡೂರು ಜನರ 83 ಸಾವಿರ ಮತಗಳು ಬಂಗಾರು ಹನುಮಂತು ಅವರಿಗೆ ಬಂದಿವೆ ಎಂದರು. ಇದನ್ನೂ ಓದಿ: ಅಭಿವೃದ್ಧಿಗೆ ಒಲವು, ಗ್ಯಾರಂಟಿಗೆ ಗೆಲುವು – ಬೈಎಲೆಕ್ಷನ್‌ ಫಲಿತಾಂಶಕ್ಕೆ ಕಾಂಗ್ರೆಸ್‌ ಸಂತಸ

    ನಮಗೆ ಇನ್ನೂ 5 ಸಾವಿರ ಮತಗಳು ನಮಗೆ ಬೇಕಿತ್ತು. ಸಿಎಂ ಸಿದ್ದರಾಮಯ್ಯ ಅವರು ಬಂದು ಕ್ಯಾಂಪೇನ್ ಮಾಡಿದ್ದಾರೆ. ಹಣದ ಹೊಳೆ ಹಂಚಿದ್ದಾರೆ. ಅಧಿಕಾರ ದುರುಪಯೋಗ ಆಗಿದೆ. ವಾಲ್ಮೀಕಿ ಹಗರಣ, ಮುಡಾ ಹಗರಣ ಇವೆಲ್ಲವೂ ಇವತ್ತು ಕೆಲಸ ಮಾಡಿದೆ. ತುಕಾರಾಂ ಅವರಿಗೆ ಎಂಪಿ ಚುನಾವಣೆಯಲ್ಲಿ ಲೀಡ್ ಎಷ್ಟಿತ್ತು, ಈಗ ಎಷ್ಟಿದೆ ನೋಡಿ. 83 ಸಾವಿರ ಮತಗಳು ನಮಗೆ ಬಂದಿವೆ. 30-40 ಸಾವಿರ ಮತಗಳ ಅಂತರದಿಂದ ನಾವು ಸೋತಿಲ್ಲಾ. ನಮಗೆ 5,000 ಮತಗಳು ಬೇಕಿತ್ತು. ರಾಜ್ಯದಲ್ಲಿ ಮೂರು ಕಡೆ ಕಾಂಗ್ರೆಸ್ ಬಂದಿದೆ. ಅಧಿಕಾರ ದುರುಪಯೋಗ ಮಾಡಲಾಗಿದೆ. ಆಡಳಿತ ಪಕ್ಷ ಇರೋ ಸಮಯದಲ್ಲಿ ಸಹಜವಾಗಿ ಆ ಪಕ್ಷ ಗೆಲ್ಲುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಹಣದ ಹೊಳೆಯನ್ನೇ ಹರಿಸಿದೆ: ಭರತ್ ಬೊಮ್ಮಾಯಿ

    ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಹಣಬಲ, ತೋಳಬಲ ಉಪಯೋಗಿಸುವುದು ಸರ್ವೇ ಸಾಮಾನ್ಯ. ಉಪಚುನಾವಣೆ, ಜನರಲ್ ಎಲೆಕ್ಷನ್‌ಗೆ ಹೋಲಿಕೆ ಮಾಡಲು ಆಗಲ್ಲ. ಮೂರು ಕ್ಷೇತ್ರಗಳಲ್ಲಿ ಮತದಾನದ ಮುಂಚೆ ದಿನ ಗೃಹಲಕ್ಷ್ಮೀ ಯೋಜನೆಯ ಹಣ ಹಾಕಿದ್ದರು. ಗ್ಯಾರಂಟಿ ಯೋಜನೆಯ ಹಣ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹಾಕದೇ ಕೇವಲ ಮೂರು ಕ್ಷೇತ್ರಗಳಿಗೆ ಹಾಕಿದ್ದರು. ನೂರಾರು ಕೋಟಿ ಹಣ ಚೆಲ್ಲಿದ್ದಾರೆ. 2028ರಲ್ಲಿ ಬಂಗಾರು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿಎಂಗೆ ಮುಹೂರ್ತ ಇಡ್ತಿದ್ರು, ಈಗ ಯಾರು ಬದಲಾಗ್ತಾರೆ ನೋಡೋಣ – ಬಿವೈವಿಗೆ ಮಧು ಬಂಗಾರಪ್ಪ ತಿರುಗೇಟು

  • ತುಕಾರಾಂ ಕುಟುಂಬಕ್ಕೆ ಟಿಕೆಟ್‌ ನೀಡಬೇಡಿ – ಬೆಂಗಳೂರು ಕಡೆಗೆ ಅತೃಪ್ತರ ಮುಖ

    ತುಕಾರಾಂ ಕುಟುಂಬಕ್ಕೆ ಟಿಕೆಟ್‌ ನೀಡಬೇಡಿ – ಬೆಂಗಳೂರು ಕಡೆಗೆ ಅತೃಪ್ತರ ಮುಖ

    ಬಳ್ಳಾರಿ: ಸಂಡೂರು ಉಪಚುನಾವಣೆ (Sandur By Election) ರಾಜಕೀಯ ಕೂಡ ಜೋರಾಗಿದೆ. ಸಂಸದ ತುಕಾರಾಂ (Tukaram) ಕುಟುಂಬಕ್ಕೆ ಟಿಕೆಟ್ ನೀಡೋದಕ್ಕೆ ಭಾರೀ ವಿರೋಧ ವ್ಯಕ್ತವಾಗ್ತಿದ್ದು, ಇದು ರಾಜ್ಯ ಕಾಂಗ್ರೆಸ್ ನಾಯಕರ ತಲೆಬಿಸಿಗೆ ಕಾರಣವಾಗಿದೆ.

    ಗುರುವಾರ ಸಂಡೂರಲ್ಲಿ ಸಭೆ ನಡೆಸಿದ್ದ ಅತೃಪ್ತರು ಬೆಂಗಳೂರು ಕಡೆ ಮುಖ ಮಾಡಿದ್ದಾರೆ. ಉಪಸಮರವನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಜನಾರ್ದನ ರೆಡ್ಡಿ (Janardhana Reddy) ಇಂದು ಸಂಡೂರಲ್ಲಿ ಹೊಸಮನೆಯ ಗೃಹಪ್ರವೇಶ ಮಾಡಿದ್ದಾರೆ. ಅಷ್ಟೇ ಅಲ್ಲದೇ ತುಕಾರಾಮ್ ಸಹೋದರಿ ಪುಷ್ಪಾವತಿ ನಾಗರಾಜ್ ಮನೆಗೆ ಭೇಟಿ ನೀಡಿ ಬೆಂಬಲ ಯಾಚಿಸಿದ್ದಾರೆ. ಇದನ್ನೂ ಓದಿ: ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ

     

    ಈ ಸಂದರ್ಭದಲ್ಲಿ ನಾನು ಸಂಡೂರು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ರಾಮುಲು (Sriramulu) ಘೋಷಿಸಿದ್ದಾರೆ.

  • ನಾನು ಬಳ್ಳಾರಿ ಹೋಗೋವಾಗ ಪಾದಯಾತ್ರೆ ಮಾಡಿ ಸಿಎಂ ಆದವರು ಮನ:ಶಾಂತಿ ಕಳೆದುಕೊಂಡಿದ್ದಾರೆ: ಜನಾರ್ದನ ರೆಡ್ಡಿ

    ನಾನು ಬಳ್ಳಾರಿ ಹೋಗೋವಾಗ ಪಾದಯಾತ್ರೆ ಮಾಡಿ ಸಿಎಂ ಆದವರು ಮನ:ಶಾಂತಿ ಕಳೆದುಕೊಂಡಿದ್ದಾರೆ: ಜನಾರ್ದನ ರೆಡ್ಡಿ

    – ಹುಟ್ಟೂರು ಬಿಟ್ಟು ಹೋಗುವ ಸ್ಥಿತಿ ಯಾವ ಶತ್ರುವಿಗೂ ಬೇಡ

    ಕೊಪ್ಪಳ: 14 ವರ್ಷಗಳ ಬಳಿಕ ಮತ್ತೆ ಬಳ್ಳಾರಿಗೆ ಬರಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ, ಶಾಸಕ ಜನಾರ್ದನ ರೆಡ್ಡಿ (Janardhana Reddy ) ದಂಪತಿ ಸಮೇತ ಗಂಗಾವತಿ (Gangavati ) ನಗರದ ಚನ್ನಬಸವಸ್ವಾಮಿ ದೇವಾಲಯದ ಬೆಳ್ಳಿ ರಥ ಎಳೆಯುವ ಮೂಲಕ ಹರಕೆ ತೀರಿಸಿದ್ದಾರೆ.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 14 ವರ್ಷಗಳ ನಂತರ ಬಳ್ಳಾರಿಗೆ ಹೋಗುತ್ತಿದ್ದೇನೆ. ಹುಟ್ಟೂರಿಗೆ ಹೋಗುತ್ತಿರುವುದು ನನಗೆ ಸಂತಸ ತಂದಿದೆ. ಗಂಗಾವತಿ ನನಗೆ ರಾಜಕೀಯ ಪುನರ್ಜನ್ಮ ನೀಡಿದೆ. ಹನುಮಂತನ ಆಶಿರ್ವಾದದಿಂದ ಬಳ್ಳಾರಿಗೆ ಹೋಗುತ್ತಿದ್ದೇನೆ. ಹುಟ್ಟೂರು ಬಿಟ್ಟು ಬದುಕುವ ಸ್ಥಿತಿ ಯಾವ ಶತ್ರುವಿಗೂ ಬರಬಾರದು ಎಂದಿದ್ದಾರೆ. ಇದನ್ನೂ ಓದಿ: 1 ವರ್ಷ ದೇವಿಯ ಆಶೀರ್ವಾದ ಸಿಗಲಿ ಎನ್ನುತ್ತಾ ಅಧಿಕಾರ ಹಂಚಿಕೆಯ ಸುಳಿವು ನೀಡಿದ್ರಾ? – ಕುತೂಹಲ ಮೂಡಿಸಿದ ಸಿಎಂ ಮಾತು

    ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸುವ ಮುನ್ನ ಗಂಗಾವತಿ ವಿಜಯವೃಂದ ಗಣಪತಿ ಮುಂದೆ ಅರ್ಜಿ ಇಟ್ಟು ಪೂಜೆ ಮಾಡಿದ್ದೆ. ಈಗ ದೇವರ ಕೃಪೆಯಿಂದ ನಾನು ಮತ್ತೆ ಹುಟ್ಟೂರಿಗೆ ಹೋಗುತ್ತಿದ್ದೇನೆ ಎಂದಿದ್ದಾರೆ.

    ನಾವು ಯಾವುದೇ ತಪ್ಪು ಮಾಡದೇ ಇದ್ದರೂ ನಮ್ಮ ಮೇಲೆ ಆರೋಪ ಮಾಡಿದ್ದರು. ನಮ್ಮ ವಿರುದ್ಧ ಸಿಎಂ ಆಗುವ ಸ್ವಾರ್ಥದಿಂದ ಪಾದಯಾತ್ರೆ ಮಾಡಿದ್ದರು. ಇಂದು ನಾನು ಬಳ್ಳಾರಿಗೆ ಪ್ರವೇಶ ಮಾಡುತ್ತಿದ್ದೇನೆ. ಆದರೆ ಅವರು ಹಗರಣದಲ್ಲಿ ಸಿಲುಕಿ ಮನ:ಶಾಂತಿ ಕಳೆದುಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕುಟುಕಿದರು.

    ಈ ಹಿಂದೆ ನನ್ನ ಹಾಗೂ ಯಡಿಯೂರಪ್ಪ ವಿರುದ್ಧ ಸಿಬಿಐ ಕೇಸ್ ಹಾಕಬೇಕು ಎಂದು ಸಿದ್ದರಾಮಯ್ಯ ಹೇಳಿದ್ದರು. ಆಗ ಅಡ್ವಾಣಿಯವರು ಕರೆ ಮಾಡಿದ್ದರು. ನನಗೆ ಮತ್ತು ಯಡಿಯೂರಪ್ಪಗೆ ಕರೆ ಮಾಡಿ, ಆರೋಪ ಮುಕ್ತವಾಗುವವರೆಗೂ ರಾಜೀನಾಮೆ ನೀಡಲು ಹೇಳಿದ್ದರು. ನಾವು ನಗುತ್ತಲೇ ಹೋಗಿ ರಾಜೀನಾಮೆ ನೀಡಿದ್ದೆವು. ಈಗ ಸಿದ್ದರಾಮಯ್ಯನವರು ರಾಜೀನಾಮೆ ನೀಡಲು ಮುಂದಾಗುತ್ತಿಲ್ಲ. ಮುಡಾ ಸೈಟ್ ತನಿಖೆಯಾದರೆ ದೊಡ್ಡ ಹಗರಣ ಹೊರಬರುತ್ತದೆ. ನೈತಿಕತೆ ಎಂಬುದು ಸಿದ್ದರಾಮಯ್ಯನವರಿಗೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.

    ನನ್ನ ಜನ್ಮಸ್ಥಳ ಬಳ್ಳಾರಿ, ರಾಜಕೀಯ ಪುನರ್ಜನ್ಮ ನೀಡಿದ್ದು ಗಂಗಾವತಿ ಹೀಗಾಗಿ ಜೀವ ಇರೋವರೆಗೂ ಗಂಗಾವತಿ ಬಿಡೋದಿಲ್ಲ ಎಂದಿದ್ದಾರೆ.

    ಬಳ್ಳಾರಿಯಲ್ಲಿ ಮತ್ತೆ ಪಕ್ಷವನ್ನು ತಳಮಟ್ಟದಿಂದ ಕಟ್ಟುತ್ತೇನೆ. ಮೊದಲಿನಂತೆ ಬಳ್ಳಾರಿಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ. ನಾಳೆಯಿಂದ ಸಂಡೂರು ಕ್ಷೇತ್ರದ ಚುನಾವಣಾ ಪ್ರಚಾರ ಆರಂಭ ಮಾಡುತ್ತೇನೆ. ಸಂಡೂರು ಕ್ಷೇತ್ರದ ಗೆಲುವಿನ ಮೂಲಕವೇ ಬಳ್ಳಾರಿ ಜಿಲ್ಲೆಯಲ್ಲಿ ಕಮಲ ಅರಳಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಕೆಂದ್ರದಿಂದ ತರೋದನ್ನು ರಾಜ್ಯಕ್ಕೆ ತನ್ನಿ, ರಾಜೀನಾಮೆ ಕೇಳುತ್ತಾ ಕೂತರೆ ಹೇಗೆ – ಹೆಚ್‌ಡಿಕೆ ವಿರುದ್ಧವೇ ಜಿಟಿಡಿ ಕಿಡಿ

  • ಜನಾರ್ದನ ರೆಡ್ಡಿಗೆ ಸುಪ್ರೀಂ ರಿಲೀಫ್ – ಬಳ್ಳಾರಿ ಪ್ರವೇಶಕ್ಕೆ ಗ್ರೀನ್‌ಸಿಗ್ನಲ್‌

    ಜನಾರ್ದನ ರೆಡ್ಡಿಗೆ ಸುಪ್ರೀಂ ರಿಲೀಫ್ – ಬಳ್ಳಾರಿ ಪ್ರವೇಶಕ್ಕೆ ಗ್ರೀನ್‌ಸಿಗ್ನಲ್‌

    ನವದೆಹಲಿ/ ಬಳ್ಳಾರಿ:  ಅಕ್ರಮ ಗಣಿಗಾರಿಕೆಯ (Illegal Mining) ಪ್ರಮುಖ ಆರೋಪಿ ಮಾಜಿ ಸಚಿವ ಗಂಗಾವತಿ ವಿಧಾನಸಭೆ ಕ್ಷೇತ್ರದ ಹಾಲಿ ಶಾಸಕ ಜನಾರ್ದನ ರೆಡ್ಡಿಗೆ (Janardhana Reddy) ಬಿಗ್ ರಿಲೀಫ್ ಸಿಕ್ಕಿದ್ದು, ಬಳ್ಳಾರಿ (Ballari) ಜಿಲ್ಲಾ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್‌ (Supreme Court) ತೆರವು ಮಾಡಿದೆ.  ಯಾವುದೇ ಪೂರ್ವಾನುಮತಿ ಇಲ್ಲದೇ ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

    ಜನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠ ಈ ಆದೇಶ ನೀಡಿದೆ. ಪ್ರಕರಣದ ತನಿಖೆ ಮುಕ್ತಾಯಗೊಂಡು ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು ಈ ಹಂತದಲ್ಲಿ ಸಾಕ್ಷ್ಯ ನಾಶ ಸಾಧ್ಯವಿಲ್ಲ ಎನ್ನುವ ವಾದ ಪುರಸ್ಕರಿಸಿದ ಕೋರ್ಟ್ ಜಾಮೀನಿನಲ್ಲಿದ್ದ ಷರತ್ತನ್ನು ರದ್ದು ಮಾಡಿದೆ.

    ನಿಷೇಧ ಹೇರಿದ್ದು ಯಾಕೆ?
    ಆಂಧ್ರದ ಅನಂತಪುರ, ಕರ್ನೂಲು ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ 2011 ಸೆಪ್ಟೆಂಬರ್ 5ರಂದು ಜನಾರ್ದನ ರೆಡ್ಡಿಯ ಬಂಧನವಾಗಿತ್ತು.

    ಬಂಧನದ ಬಳಿಕ ನಡೆದ ವಿಚಾರಣೆಯಲ್ಲಿ ಜನಾರ್ದನ ರೆಡ್ಡಿ ಪ್ರಭಾವಿಯಾಗಿದ್ದು ಸಾಕ್ಷಿ ನಾಶ ಮಾಡುವ ಆತಂಕವಿದೆ. ಈ ಕಾರಣಕ್ಕೆ ಬಳ್ಳಾರಿ, ಕರ್ನೂಲು ಮತ್ತು ಆನಂತಪುರ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಬೇಕು ಎಂದು ಸಿಬಿಐ (CBI) ಮನವಿ ಮಾಡಿತ್ತು. ಸಿಬಿಐ ಮನವಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್‌ ಮೂರು ಜಿಲ್ಲೆಗಳ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು.

    ಈ ಮಧ್ಯೆ ಮಗಳ ಮದುವೆ, ಮೊಮ್ಮೊಗಳ ನಾಮಕರಣ ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ಮಾತ್ರ ಕೋರ್ಟ್ ಅನುಮತಿ ನೀಡಿತ್ತು. 2021ರ ನವೆಂಬರ್ ನಲ್ಲಿ ಕೊನೆಯದಾಗಿ ಬಳ್ಳಾರಿಗೆ ಜನಾರ್ದನ ರೆಡ್ಡಿ ಬಳ್ಳಾರಿಗೆ ಆಗಮಿಸಿದ್ದರು

    2011ರಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧಿತರಾಗಿದ್ದ ಜನಾರ್ದನ ರೆಡ್ಡಿ ಮೂರು ವರ್ಷ ನಾಲ್ಕು ತಿಂಗಳು ಜೈಲು ವಾಸ ಅನುಭವಿಸಿದ್ದರು. ಜೈಲುವಾಸದ ಬಳಿಕ 2015 ರಲ್ಲಿ ಬಿಡುಗಡೆಯಾಗಿದ್ದರು. ಬಳ್ಳಾರಿ ಜಿಲ್ಲೆಯಿಂದ ದೂರವೇ ಇದ್ದ ಜನಾರ್ದನ ರೆಡ್ಡಿ 2023ರ ವಿಧಾನಸಭೆ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

  • ತುಂಗಭದ್ರಾ ಡ್ಯಾಂ ವಾರ್ಷಿಕ ನಿರ್ವಹಣಾ ಗುತ್ತಿಗೆಗೆ ಎಷ್ಟು ಕೋಟಿ ಹಣ ಸಂದಾಯವಾಗಿದೆ? – ಜನಾರ್ದನ ರೆಡ್ಡಿ ಪ್ರಶ್ನೆ

    ತುಂಗಭದ್ರಾ ಡ್ಯಾಂ ವಾರ್ಷಿಕ ನಿರ್ವಹಣಾ ಗುತ್ತಿಗೆಗೆ ಎಷ್ಟು ಕೋಟಿ ಹಣ ಸಂದಾಯವಾಗಿದೆ? – ಜನಾರ್ದನ ರೆಡ್ಡಿ ಪ್ರಶ್ನೆ

    – ವಿಶ್ವದಲ್ಲಿರುವ ಎಲ್ಲಾ ಟೆಕ್ನಾಲಜಿ ಬಳಸಿ, ಡ್ಯಾಂ ಸರಿಪಡಿಸುವಂತೆ ಆಗ್ರಹ

    ಕೊಪ್ಪಳ: ತುಂಗಭದ್ರಾ ಡ್ಯಾಂನ (Tungabhadra Dam) ವಾರ್ಷಿಕ ನಿರ್ವಹಣಾ ಗುತ್ತಿಗೆದಾರರು ಯಾರು? ಅವರಿಗೆ ಎಷ್ಟು ಕೋಟಿ ಹಣ ಸಂದಾಯ ಆಗಿದೆ? ಅಂತ ಬಹಿರಂಗ ಪಡಿಸಬೇಕು ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    ತುಂಗಭದ್ರಾ ಜಲಾಶಯದಲ್ಲಿ ಕಳಚಿಕೊಂಡ 19ನೇ ಕ್ರಸ್ಟ್‌ಗೇಟ್‌ (TB Dam crest gate collapse) ವೀಕ್ಷಣೆ ಮಾಡಿದ ಶಾಸಕ ಜನಾರ್ದನ ರೆಡ್ಡಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ತುಂಗಭದ್ರಾ ಜಲಾಶಯದ ನಿರ್ವಹಣೆಗೆ ಯಾರಿಗೆ ಕೊಟ್ಟಿದ್ದಾರೆ? ಇದಕ್ಕೆ ಎಲ್ಲಾ ಸರ್ಕರವೇ ಹೊಣೆ. ಡಿಕೆಶಿ ಅಚಾನಕ್ ಆಗಿದೆ ಅಂತ ಹೇಳ್ತಾರೆ, ಇದನ್ನ ಒಪ್ಪುವ ಪ್ರಶ್ನೆಯೇ ಬರಲ್ಲ ಅಂತ ಹೇಳಿದ್ದಾರೆ. ಇದನ್ನೂ ಓದಿ: Tungabhadra Dam | 5 ದಿನಗಳಲ್ಲಿ ಗೇಟ್‌ ರಿಪೇರಿ – ಸರ್ಕಾರಕ್ಕೆ ಅಧಿಕಾರಿಗಳ ಭರವಸೆ

    ಸಿಬಿಐ ತನಿಖೆ ಆಗಲಿ:
    ತುಂಗಭದ್ರಾ ಡ್ಯಾಂ ವಿಚಾರದಲ್ಲಿ ನಾನು ಯಾರ ಮೇಲೂ ವೈಯಕ್ತಿಕ ಆರೋಪ ಮಾಡಲ್ಲ. ಆದ್ರೆ ಈ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯತನದ ವಿರುದ್ಧ ಸಿಬಿಐ ತನಿಖೆಯಾಗಬೇಕು. ಡ್ಯಾಂನ ವಾರ್ಷಿಕ ನಿರ್ವಹಣಾ ಗುತ್ತಿಗೆದಾರರು ಯಾರು? ಅವರಿಗೆ ಎಷ್ಟು ಕೋಟಿ ಹಣ ಸಂದಾಯ ಆಗಿದೆ? ಅಂತ ಸರ್ಕಾರ ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ಗೆ ಡಿಜಿಟಲ್‌ ಸ್ಪರ್ಶ – ಇನ್ಮುಂದೆ ಆನ್‌ಲೈನ್‌ನಲ್ಲಿ ಊಟ ಬುಕ್ಕಿಂಗ್‌!

    ಅಲ್ಲದೇ ಗೇಟ್‌ ಅನ್ನು ನೀವು ಸರಿ ಮಾಡದಿದ್ದರೇ ಯಾರಾದ್ರೂ ಒಬ್ಬರು ಸರಿಪಡಿಸ್ತಾರೆ. ಆದ್ರೆ ಇದು ನಮ್ಮ ಭಾಗದ ರೈತರಿಗೆ (Farmers) ಆದ ದೊಡ್ಡ ಅನ್ಯಾಯ. ಸರ್ಕಾರ ಇದರ ಸಂಪೂರ್ಣ ಜವಾಬ್ದಾರಿ ಹೊರಬೇಕು, ನಿರ್ಲಕ್ಷತನ ತೋರಿದವರ ವಿರುದ್ಧ ಕ್ರಮ ಆಗಬೇಕು ಒತ್ತಾಯಿಸಿದ್ದಾರೆ.

    ಬೇಸಿಗೆ ಕಾಲದಲ್ಲಿ ಡ್ಯಾಂ ಗೇಟ್‌ ಪರಿಶೀಲಿಸಿ, ನಿರ್ವಹಣೆ ಮಾಡಬೇಕು. ಸರ್ಕಾರ ಯಾವ ಕೆಲಸವನ್ನೂ ಮಾಡಿಲ್ಲ. ಹಳೇ ಡ್ಯಾಂಗಳ ನಿರ್ವಹಣೆಗೆ ಕೇಂದ್ರ ಸರ್ಕಾರ ತಂಡ ರಚನೆ ಮಾಡಿದೆ. ಅದನ್ನ ಇವರು ಸಂಪರ್ಕ ಮಾಡಿದ್ದಾರಾ? ಇದೆಲ್ಲವೂ ಮುಖ್ಯವಾಗುತ್ತೆ. ಇದಕ್ಕಾಗಿ ಸರ್ಕಾರ ಸಾಕಷ್ಟು ಹಣ ಖರ್ಚು ಮಾಡುತ್ತೆ? ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಇದ್ಯಾವುದೇ ನಿಯಮಗಳನ್ನ ಅನುಸರಿಸುತ್ತಿಲ್ಲ ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರಿಂದ ಹೋರಾಟ – ಸರ್ಕಾರಿ ಶಾಲೆಗಳಲ್ಲಿ ತರಗತಿ ವ್ಯತ್ಯಯ?

    ವಿಶ್ವದಲ್ಲಿರುವ ಎಲ್ಲಾ ಟೆಕ್ನಾಲಜಿ ಬಳಸಿ:
    ಸರಿಯಾಗಿ ನಿರ್ವಹಣೆ ಮಾಡಿದ್ದರೇ ಈ ಘಟನೆ ನಡೆಯುತ್ತಿರಲಿಲ್ಲ. ಇದರಲ್ಲಿ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತೆ. ಇದು ಮೂರು ರಾಜ್ಯಕ್ಕೆ ಸಂಬಂಧಿಸಿದ ವಿಚಾರವಾದ್ರೂ ಡ್ಯಾಂ ನಮ್ಮ ಸುಪರ್ದಿಯಲ್ಲಿದೆ. ನಾನು ಯಾವುದೇ ರಾಜಕೀಯ ಉದ್ದೇಶದಿಂದ ಮಾತನಾಡುತ್ತಿಲ್ಲ. ವಿಶ್ವದಲ್ಲಿ ಇರುವ ಎಲ್ಲಾ ರೀತಿಯ ಟೆಕ್ನಾಲಜಿ ಬಳಸಿ ಇದನ್ನ ಕೂಡಲೇ ನಿರ್ವಹಣೆ ಮಾಡಿ ಡ್ಯಾಂ ಉಳಿಸುವ ಕೆಲಸ ಮಾಡಬೇಕು. ಡಿಕೆಶಿ ಹೇಳಿದಂತೆ ಅಚಾನಕ್ ಆಗಿ ಕಟ್ ಆಗಿದೆ ಅಂದ್ರೆ ಸಣ್ಣ ಮಕ್ಕಳು ಕೂಡಾ ನಗ್ತಾರೆ. ಈ ವೈಪಲ್ಯಕ್ಕೆ ಸಂಪೂರ್ಣ ಜವಾಬ್ದಾರಿ ಸರ್ಕಾರವೇ ತಗೊಬೇಕು. ಇದು ಡಿಬಿ ಡ್ಯಾಂ ಬೋರ್ಡ್‌ ಹಾಗೂ ಸರ್ಕಾರ ಎರಡರ ವೈಫಲ್ಯವೂ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

     

  • ಜನಾರ್ದನ ರೆಡ್ಡಿ ಹಣೆಬರಹ ಚೆನ್ನಾಗಿ ಗೊತ್ತು: ತಂಗಡಗಿ ಕಿಡಿ

    ಜನಾರ್ದನ ರೆಡ್ಡಿ ಹಣೆಬರಹ ಚೆನ್ನಾಗಿ ಗೊತ್ತು: ತಂಗಡಗಿ ಕಿಡಿ

    ಕೊಪ್ಪಳ: ಪಕ್ಷೇತರನಾಗಿ ಗೆದ್ದ ಕೂಡಲೇ ನಿನ್ನ ಕಾವಲುಗಾರರು ನನ್ನ ಮನೆ ಮುಂದೆ ನಿಂತು ಕಾಯುತ್ತಿದ್ದದ್ದು ಮರೆತು ಹೋಯಿತೆ? ಎಂದು ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಶಾಸಕ ಜನಾರ್ದನ ರೆಡ್ಡಿ (Janardhana Reddy) ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.

    ಕಾರಟಗಿಯಲ್ಲಿ ಕಾಂಗ್ರೆಸ್‍ನ (Congress) ಪ್ರಚಾರ ಸಭೆಯಲ್ಲಿ ಅವರು ಮಾತಾಡಿದ್ದಾರೆ. ಈ ವೇಳೆ, ಟಗರು ಬೆಂಗಳೂರಿಂದ ಬಳ್ಳಾರಿಗೆ ಬಂದು ಗುದ್ದಿದ್ದು ನೆನಪಿದೆಯಾ? ರಾಜ್ಯಸಭಾ ಚುನಾವಣೆಗೂ ಮುನ್ನ ನನ್ನ ಮನೆ ಸುತ್ತಾ ಓಡಾಡಿದ್ದನ್ನು ಬಹಿರಂಗಪಡಿಸಬೇಕಾ? ಸಂಸ್ಕಾರವುಳ್ಳ ಕುಟುಂಬದಿಂದ ಬಂದಿದ್ದಕ್ಕೆ ನಿನ್ನನ್ನು ಸುಮ್ಮನೆ ಬಿಟ್ಟಿದ್ದೇನೆ ಎಂದು ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: 40ಕ್ಕೂ ಹೆಚ್ಚು ಪೊಲೀಸರು ಬಂದು ಹೊಡೆದಿದ್ದಾರೆ – ಏಟಿನ ಭಯಕ್ಕೆ ಸುಳ್ಳು ಹೇಳಿದ್ದೇವೆ

    ನನ್ನನ್ನು ಸೇರಿ ಐವರು ಶಾಸಕರ ಬೆಂಬಲದಿಂದ ನೀನು, ನಿನ್ನ ಸರ್ಕಾರ ಅಂದು ಅಧಿಕಾರಕ್ಕೆ ಬಂದಿತ್ತು. ನಿನ್ನ ಹಣೆಬರಹ ನನಗೆ ಚೆನ್ನಾಗಿ ಗೊತ್ತು. ನಿನ್ನಿಂದ ತಂಗಡಗಿ ಮಂತ್ರಿಯಾಗಿರಲಿಲ್ಲ. ಕನಕಗಿರಿ ಕ್ಷೇತ್ರದ ಜನರ ಆಶೀರ್ವಾದದಿಂದ ಮಂತ್ರಿಯಾಗಿದ್ದೆ. ಇನ್ನೂ ಎರಡು ಹೆಜ್ಜೆ ಮುಂದೆ ಹೋಗಿ ಮಾತನಾಡಬೇಕಾದಿತು ಹುಷಾರ್ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

    ನೀನು ಹೇಳಿದ ಪದ ನಾನು ಬಳಸಬಲ್ಲೇ, ಆ ತಾಕತ್ತು ನನಗೂ ಇದೆ. ನನಗೂ ನಾಲಿಗೆ ಇದೆ. ನಿನ್ನ ಸಂಸ್ಕಾರ ನನ್ನದ್ದಲ್ಲ ಎಂದು ಅವರು ಕುಟುಕಿದ್ದಾರೆ. ಇದನ್ನೂ ಓದಿ: Exclusive: ರೇವಣ್ಣ ಕಿಡ್ನ್ಯಾಪ್‌ ಕೇಸ್‌ – ಅಪಹರಿಸಿ ಸಂತ್ರಸ್ತೆಯನ್ನಿರಿಸಿದ್ದ ತೋಟದ ಮನೆ ಪತ್ತೆ; ಕೂಲಿ ಕಾರ್ಮಿಕರಿಂದ ಸ್ಫೋಟಕ ಮಾಹಿತಿ!

  • ನನ್ನ ರಕ್ತದ ಕಣಕಣದಲ್ಲೂ ಬಿಜೆಪಿ ಇದೆ, ಷರತ್ತುಗಳಿಲ್ಲದೇ ಪಕ್ಷ ಸೇರಿದ್ದೇನೆ: ಜನಾರ್ದನ ರೆಡ್ಡಿ

    ನನ್ನ ರಕ್ತದ ಕಣಕಣದಲ್ಲೂ ಬಿಜೆಪಿ ಇದೆ, ಷರತ್ತುಗಳಿಲ್ಲದೇ ಪಕ್ಷ ಸೇರಿದ್ದೇನೆ: ಜನಾರ್ದನ ರೆಡ್ಡಿ

    – ಬಿಜೆಪಿ ನೆಲೆಯೂರಲು ದೇವರು ಕಳಿಸಿದ ಅದ್ಭುತ ಸೃಷ್ಟಿ ಯಡಿಯೂರಪ್ಪ
    – ಅಪ್ಪ-ಮಗನನ್ನು ಕೊಂಡಾಡಿದ ಶಾಸಕ

    ಬೆಂಗಳೂರು: ಕೆಆರ್‌ಪಿಪಿ ಪಕ್ಷದ ಸ್ಥಾಪಕ ಶಾಸಕ ಜನಾರ್ದನ ರೆಡ್ಡಿ (Janardhana Reddy) ಅವರಿಂದು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವರಾದ ಶ್ರೀರಾಮುಲು, ಆನಂದ್ ಸಿಂಗ್, ಸಿಟಿ ರವಿ, ಅಶ್ವಥ್‌ನಾರಾಯಣ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

    ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ (Bengaluru BJP Office) ನಡೆದ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕೆಆರ್‌ಪಿಪಿ ಪಕ್ಷವನ್ನು ಬಿಜೆಪಿ ಜೊತೆಗೆ ವಿಲೀನ ಮಾಡಿದ್ದೇನೆ. ನನ್ನ ಪತ್ನಿ ಹಾಗೂ ನನ್ನ ಕಷ್ಟದ ಕಾಲದಲ್ಲಿ ಜೊತೆಗೆ ನಿಂತ ಎಲ್ರೂ ಬಿಜೆಪಿ ಸೇರಿದ್ದೇವೆ. ನನ್ನ ಗೆಳೆಯ ಶ್ರೀರಾಮುಲು ಅವರಿಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದು ಭಾವುಕರಾಗಿದ್ದಾರೆ.

    ಮೋದಿಯವರ ಕೈ ಬಲಪಡಿಸುವ ದೃಷ್ಟಿಯಿಂದ ಅಮಿತ್ ಶಾ ಅವರು ದೆಹಲಿಗೆ ಆಹ್ವಾನಿಸಿದ್ದರು. ಬಾಹ್ಯ ಬೆಂಬಲ ಬೇಡ, ಪಕ್ಷಕ್ಕೆ ಸೇರುವಂತೆ ಪ್ರೀತಿಯಿಂದ ಆಹ್ವಾನ ನೀಡಿದರು. ಅದನ್ನು ಒಪ್ಪಿ ಬಿಜೆಪಿಗೆ ಮತ್ತೆ ಸೇರಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಪರೀಕ್ಷಾ ದಿನವೇ SSLC ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಯಾವುದೇ ಷರತ್ತು ಹಾಕಿಲ್ಲ:
    ಯಡಿಯೂರಪ್ಪ (BS Yediyurappa) ಅವರ ಬಗ್ಗೆ ಎರಡು ಮಾತಲ್ಲಿ ಹೇಳಲಾಗಲ್ಲ. ರಾಜ್ಯದಲ್ಲಿ ಬಿಜೆಪಿ ನೆಲೆಯೂರಲು ದೇವರು ಕಳಿಸಿದ ಅದ್ಭುತ ಸೃಷ್ಟಿ ಯಡಿಯೂರಪ್ಪ. ಅವರ ಜೊತೆ ಚಿಕ್ಕ ವಯಸ್ಸಲ್ಲೇ ಸೇರಿಕೊಂಡು ಪಕ್ಷ ಕಟ್ಟಿದ್ದು ನನ್ನ ಪೂರ್ವ ಜನ್ಮದ ಪುಣ್ಯ. ತಂದೆ-ಮಗನ ಜೊತೆಗೂಡಿ ಈಗ ಮತ್ತೆ ಪಕ್ಷದ ಕೆಲಸ ಮಾಡ್ತೀನಿ. ಇದು ಬಹಳ ಸಂತೋಷ ತಂದಿದೆ. ಯಾವುದೇ ಷರತ್ತು ಹಾಕಿಲ್ಲ, ಫಲಾಫೇಕ್ಷೆ ಬಯಸದೇ ಸೇರಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಆಟೋ ಪಾರ್ಕಿಂಗ್ ವಿಚಾರಕ್ಕೆ ಶುರುವಾದ ಗಲಾಟೆ; ಪರಿಸ್ಥಿತಿ ಉದ್ವಿಗ್ನ – ಮೂವರು ಅರೆಸ್ಟ್

    ತಾಯಿ ಮಡಿಲಿಗೆ ಸೇರಿದ್ದೇನೆ:
    ಬಿಜೆಪಿ ನನಗೆ ಎಲ್ಲವೂ ಕೊಟ್ಟಿದೆ. ಅನೇಕ ಏಳು-ಬೀಳು ಕಂಡಿದ್ದೇನೆ, ಯಾವುದೇ ಜವಾಬ್ದಾರಿ ಕೊಟ್ಟರೂ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಕೆಲಸ ಮಾಡ್ತೇನೆ. ನಾನು ನನ್ನ ಮನೆಗೆ ವಾಪಸ್ ಬಂದಿದ್ದೇನೆ. ರಕ್ತದ ಕಣಕಣದಲ್ಲೂ ಬಿಜೆಪಿ ಇದೆ. ಯಾವುದೋ ಅನಿವಾರ್ಯ ಕಾರಣದಿಂದ ಪಕ್ಷ ಬಿಡಬೇಕಾಗಿತ್ತು. ಈಗ ನಾನು ಸ್ವಂತ ಮನೆಗೆ ಮರಳಿದ್ದೇನೆ, ತಾಯಿ ಮಡಿಲಿಗೆ ಸೇರಿದ್ದೇನೆ. ನಾನು-ರಾಮುಲು ಒಂದು ಕುಟುಂಬ, ಒಟ್ಟಿಗೇ ಇರ್ತೀವಿ. ಇದು ನನ್ನ ಪಕ್ಷ ಎಂದು ಬೀಗಿದ್ದಾರೆ.  ಇದನ್ನೂ ಓದಿ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಸ್ಪಿರಿಟ್ ಟ್ಯಾಂಕರ್ – ತಪ್ಪಿದ ಭಾರೀ ದುರಂತ