Tag: janasena party

  • ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಪವನ್ ಕಲ್ಯಾಣ್

    ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಪವನ್ ಕಲ್ಯಾಣ್

    ಟಾಲಿವುಡ್‌ನ (Tollywood) ಪವನ್ ಕಲ್ಯಾಣ್ (Pawan Kalyan) ಕೆಲ ದಿನಗಳಿಂದ ತಮ್ಮ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಪವನ್ ಕಲ್ಯಾಣ್ ಅವರು ದಾಂಪತ್ಯ (Wedding Life) ಬದುಕು ಸರಿಯಿಲ್ಲ. 3ನೇ ಪತ್ನಿಗೂ ಡಿವೋರ್ಸ್ ನೀಡ್ತಿದ್ದಾರೆ ಎಂಬ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗಿತ್ತು ಮತ್ತು ಸುದ್ದಿಯಾಗಿತ್ತು. ಈ ಎಲ್ಲಾ ಊಹಾಪೋಹಗಳಿಗೂ ಆ ಒಂದು ಪೋಸ್ಟ್‌ನಿಂದ ಉತ್ತರ ನೀಡಿದ್ದಾರೆ. ಈ ಮೂಲಕ ಗಾಸಿಪ್ ಪ್ರಿಯರ ಬಾಯಿಗೆ ಬೀಗ ಹಾಕಿದ್ದಾರೆ. ಇದನ್ನೂಓದಿ:ದೊಡ್ಮನೆ ಕುಡಿ ‘ಯುವʼ ಸಿನಿಮಾ ಏನಾಯ್ತು? ಇಲ್ಲಿದೆ ಅಪ್‌ಡೇಟ್

    ಪವನ್ ಕಲ್ಯಾಣ್‌ಗೆ ಟಾಲಿವುಡ್‌ನಲ್ಲಿ (Tollywood) ಅತಿ ಹೆಚ್ಚು ಫ್ಯಾನ್ ಫಾಲೊಯಿಂಗ್ ಹೊಂದಿರುವ ನಟ. ಇವರ ಸಿನಿಮಾ ಸೋಲಲಿ ಗೆಲ್ಲಲಿ. ಭಕ್ತಗಣ ಸಂಖ್ಯೆ ಮಾತ್ರ ಕಮ್ಮಿಯಾಗಲ್ಲ. ನೋಡಲು ಸುರಸುಂದರ ಅಲ್ಲ, ಅದ್ಭುತ ಡಾನ್ಸ್ ಮಾಡುತ್ತಾರೆ ಎನ್ನುವಂತಿಲ್ಲ. ಇಂಥ ಅನೇಕ ಇಲ್ಲ ಇಲ್ಲಗಳ ನಡುವೆಯೂ ಟಾಲಿವುಡ್ ಪವರ್‌ಸ್ಟಾರ್ ಖದರ್ ಉಳಿದುಕೊಂಡು ಬಂದಿದ್ದಾರೆ. ಇದೇ ಪವನ್ ಅನೇಕ ವಿವಾದಕ್ಕೂ ಕಾರಣವಾಗಿದ್ದಾರೆ. ಅದು ಸಿನಿಮಾ, ರಾಜಕೀಯ ಹಾಗೂ ವೈಯಕ್ತಿಕ ಎಲ್ಲದರಲ್ಲೂ ಒಂದಿಲ್ಲೊಂದು ಕಪ್ಪು ಚುಕ್ಕೆ ಕಾಣುತ್ತದೆ. ಇದೀಗ ಮೂರನೇ ಪತ್ನಿ ಅನ್ನಾ ಲೇಜ್ನೇವಾರಿಂದಲೂ ದೂರವಾಗಿದ್ದಾರೆ ಎಂಬ ಸುದ್ದಿ ಸಿಕ್ಕಾಪಟ್ಟೆ ಸಂಚಲನ ಮೂಡಿಸಿತ್ತು.

    ಪವನ್ ಮೊಟ್ಟಮೊದಲು ಮದುವೆಯಾಗಿದ್ದು ನಂದಿನಿ ಜೊತೆ. ಬಳಿಕ ಕೆಲವು ವರ್ಷಗಳ ನಂತರ ಡಿವೋರ್ಸ್ ನೀಡಿ, ನಂತರ ಹೀರೋಯಿನ್ ರೇಣು ದೇಸಾಯಿ ಜೊತೆ ಸಪ್ತಪದಿ ತುಳಿದರು. ಎರಡು ಮಕ್ಕಳು ಹುಟ್ಟಿದವು. ಕೆಲವು ವರ್ಷ ಅನ್ಯೋನ್ಯವಾಗಿದ್ದ ದಂಪತಿ ಏಕಾಏಕಿ ದೂರವಾದರು. ಎರಡು ವರ್ಷ ಅಷ್ಟೇ. ರಷ್ಯಾ ಮೂಲದ ಅನ್ನಾ ಲೇಜ್ನೇವಾ ಜೊತೆ ರಿಜಿಸ್ಟರ್ ಮ್ಯಾರೇಜ್ ಮಾಡಿಕೊಂಡರು ಪವನ್. ಇಬ್ಬರು ಮಕ್ಕಳೂ ಇದ್ದಾರೆ. ಮೊದಮೊದಲು ಜಂಟಿಯಾಗಿ ಸಮಾರಂಭಗಳಲ್ಲಿ ಕಾಣಿಸುತ್ತಿತ್ತು ಈ ಜೋಡಿ. ಆದರೆ ಇತ್ತೀಚೆಗೆ ನಡೆದ ಸಂಬಂಧಿ ಮದುವೆ ಹಾಗೂ ರಾಮ್-ಉಪಾಸನಾ ಮಗುವಿನ ನಾಮಕರಣಕ್ಕೂ ಪವನ್ ಏಕಾಂಗಿಯಾಗಿ ಹಾಜರಾದರು. ಹಾಗಾಗಿ ಮತ್ತೆ ಡಿವೋರ್ಸ್ (Divorce) ವಿಚಾರ ಚಾಲ್ತಿಗೆ ಬಂದಿತ್ತು.

    ಅನ್ನಾ ಸಿಂಗಪೂರ್ ಅಥವಾ ದುಬೈನಲ್ಲಿ ಮಕ್ಕಳೊಂದಿಗೆ ನೆಲೆಸಿದ್ದಾರಂತೆ ಅಥವಾ ರಷ್ಯಾಕ್ಕೇ ಹೋಗಿರಬಹುದು ಎಂದು ಯಾವಾಗ ಇದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಬಂತೋ.ಪವನ್ ಕಲ್ಯಾಣ್ ಆಪ್ತ ಕಮ್ ನಿರ್ಮಾಪಕ ಬಂಡ್ಲಾ ಗಣೇಶ್ ಗರಂ ಆಗಿದ್ದರು. ಇದೆಲ್ಲ ನಿಜ ಎಂದು ನಿಮಗೆ ಯಾರು ಹೇಳಿದ್ದು? ಎಂದು ಪ್ರಶ್ನಿಸಿ ಪವನ್ ಕಲ್ಯಾಣ್ ಸ್ನೇಹಿತ ಫುಲ್ ಗರಂ ಆಗಿದ್ದರು.

    ಈಗ ಡಿವೋರ್ಸ್ ಅಂತೆ ಕಂತೆ ಸುದ್ದಿಗೆ ಸ್ವತಃ ಪವನ್ ಕಲ್ಯಾಣ್ ಅವರೇ ಬ್ರೇಕ್ ಹಾಕಿದ್ದಾರೆ. ಪತ್ನಿ ಅನ್ನಾ ಲೇಜ್ನೇವಾ ಜೊತೆಗಿನ ಫೋಟೋವನ್ನ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಇಬ್ಬರು ನಗು ನಗುತ್ತಾ ಹೆಜ್ಜೆ ಇಡ್ತಿರುವ ಫೋಟೋವನ್ನ ತಮ್ಮ ಜನಸೇನಾ ಪಕ್ಷದ (Janasena Party) ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿ, ಡಿವೋರ್ಸ್ ಎಂದು ಹೇಳವವರಿಗೆ ಬಾಯಿ ಮುಚ್ಚಿಸಿದ್ದಾರೆ. ನಮ್ಮ ನಡುವೆ ಎಲ್ಲವೂ ಸರಿಯಿದೆ ಎಂದು ಪವನ್ ಕಲ್ಯಾಣ್ ಪರೋಕ್ಷವಾಗಿ ಸೂಚಿಸಿದ್ದಾರೆ. ಈ ಫೋಟೋ ನೋಡ್ತಿದ್ದಂತೆ ಅಭಿಮಾನಿಗಳು ಖುಷಿಯಾಗಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಂಧ್ರದಲ್ಲಿ ಮದ್ಯಪ್ರಿಯರಿಗೆ ನಟ ಪವನ್ ಕಲ್ಯಾಣ್ ಬಂಪರ್ ಆಫರ್

    ಆಂಧ್ರದಲ್ಲಿ ಮದ್ಯಪ್ರಿಯರಿಗೆ ನಟ ಪವನ್ ಕಲ್ಯಾಣ್ ಬಂಪರ್ ಆಫರ್

    ಆಂಧ್ರದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಗದ್ದುಗೆಗಾಗಿ ರಾಜಕೀಯ ಪಕ್ಷಗಳು ಈಗಾಗಲೇ ಗುದ್ದಾಟಕ್ಕೆ ಇಳಿದಿವೆ. ಅದಕ್ಕಾಗಿ ಮತದಾರರಿಗೆ ಬಂಪರ್ ಆಫರ್ಸ್ ಕೊಡ್ತಿದ್ದಾರೆ. ಎಲೆಕ್ಷನ್ ಗೆಲ್ಲೋಕೆ ರಾಜಕಾರಣಿಗಳು ಏನೇನೋ ತಂತ್ರ ಮಾಡ್ತಾರೆ. ಭರವಸೆ ಕೊಡ್ತಾರೆ. ಅದಕ್ಕೆ ಟಾಲಿವುಡ್ (Tollywood) ಪವರ್‌ಸ್ಟಾರ್ ಪವನ್ ಕಲ್ಯಾಣ್ (Pawan Kalyan) ಕೂಡ ಹೊರತಲ್ಲ. ಯಾಕಂದ್ರೆ ಪವನ್ ಇದೀಗ ಕುಡುಕರಿಗೆ ನೀಡಿರುವ ಆಫರ್ ಹಾಗಿದೆ. ಮತದಾರರಿಗೆ ಪವನ್ ಕೊಟ್ಟ ಪವರ್ ಆಫರ್ ದೇಶಾದ್ಯಂತ ಚರ್ಚೆಯಲ್ಲಿದೆ. ಏನದು ಗೊತ್ತಾ?

    ಮತ ಪಡೆಯೋಕೆ ಕುಡಿಸಿ, ತಿನ್ನಿಸಿ, ಹಣ ಹಂಚಿ ಮತ ಹಾಕಿಸಿಕೊಳ್ಳೊ ರಾಜಕಾರಣಿಗಳನ್ನ ನೋಡಿದ್ದೀವಿ. ಹೀಗ್ ಮಾಡಿದ್ಮೇಲೂ ರಾಜಕಾರಣಿಗಳು ನಾವೇ ಕುಡಿಸಿದ್ದು ಅಂತ ಹೇಳಿಕೊಳ್ಳಲ್ಲ. ಆದರೆ ಮುಖ್ಯಮಂತ್ರಿ ಪಟ್ಟದ ಕನಸು ಕಾಣುತ್ತಿರುವ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ ಮದ್ಯಪ್ರಿಯರನ್ನೇ ಬುಟ್ಟಿಗೆ ಹಾಕಿಕೊಳ್ಳುವಂಥ ಭರ್ಜರಿ ಆಫರ್ ಘೋಷಿಸಿದ್ದಾರೆ. ಅಧಿಕಾರಕ್ಕೆ ಬಂದರೆ ಮದ್ಯದ ಬೆಲೆ ಇಳಿಸುವುದಾಗಿ ಹೇಳಿದ್ದಾರೆ. ಈ ಸುದ್ದಿಗೆ ಕುಡುಕರು ಒಂದ್ ಪೆಗ್ ಹೆಚ್ಚೇ ಗಂಟಲಿಗೇರಿಸಿ ಕೇಕೆ ಹಾಕಿದ್ದಾರೆ.

    ಆಂಧ್ರ ವಿಧಾನಸಭೆ ಚುನಾವಣೆಗಾಗಿ ಪವನ್ ಪ್ರಚಾರ ಮಾಡ್ತಿದ್ದಾರೆ. ಇತ್ತೀಚೆಗೆ ವಾರಾಹಿ ಯಾತ್ರೆಯಲ್ಲಿ ಮಾತನಾಡ್ತಾ ಕುಡುಕರಿಗೆ ಕಲ್ಲಂಗಡಿ ತಿನ್ನಿಸಿದ್ದಾರೆ. ಹಾಲಿ ಸಿಎಂ ಜಗನ್ ಅಧಿಕಾರಕ್ಕೇರೋ ಮುನ್ನ ಮದ್ಯ ಬ್ಯಾನ್ ಮಾಡೋದಾಗಿ ಹೇಳಿದ್ರು. ಹಾಗೆ ಮಾಡದೇ ಬರೀ ತೆರಿಗೆ ಹೆಚ್ಚಿಸಿ, ಶ್ರಮಿಕರಿಗೆ ಹೊರೆಯಾಗಿದ್ರು. ಫಲಿತಾಂಶ ಕಳ್ ಬಟ್ಟಿ ಕುಡಿದು ಜನ ಹಾಳಾಗುತ್ತಿದ್ದಾರೆ. ಅದಕ್ಕೆ ನಾನು ಮದ್ಯದ ಬೆಲೆ ಕಮ್ಮಿ ಮಾಡ್ತೀನಿ ಎಂದಿದ್ದಾರೆ ಪವನ್. ಕುಡುಕರಿಗೆ ಮೆಗಾ ಕರುಣೆ ತೋರಿಸಿ ಆಂಧ್ರಕ್ಕೇ ಕಿಕ್ಕೇರಿಸಿದ್ದಾರೆ. ಈ ಪರಿಣಾಮ, ನಲ್ಲಿನಲ್ಲಿಯಲ್ಲಿ ಗುಂಡು ಗಲ್ಲಿಗಲ್ಲಿಯಲ್ಲಿ ಕುಡುಕರ ದಂಡು ಶುರುವಾಗೋದು ಗ್ಯಾರೆಂಟಿ. ಇದನ್ನೂ ಓದಿ:ಗಿನ್ನಿಸ್ ಗಾಗಿ ‘ದೇವರ ಆಟ ಬಲ್ಲವರಾರು’ ಟೀಮ್ ಮಾಡಿದ್ದೇನು?

    ಈ ವರ್ಷ ಕರ್ನಾಟಕದಲ್ಲಿ ಸಿಎಂ ಪಟ್ಟಕ್ಕಾಗಿ ಗದ್ದುಗೆ ಗುದ್ದಾಟ ಜೋರಾಗಿತ್ತು. ಸಾಕಷ್ಟು ಬಂಪರ್ ಆಫರ್‌ಗಳನ್ನ ನೀಡಿ, ಮತದಾರರಿಗೆ ಕಾಂಗ್ರೆಸ್ ಪಕ್ಷ ಮನವೊಲಿಸಿತ್ತು. ಅದರಲ್ಲಿ ಯಶಸ್ವಿ ಕೂಡ ಆದರು. ಕರ್ನಾಟಕದಲ್ಲಿ ಈಗ ಕಾಂಗ್ರೆಸ್ ಸರ್ಕಾರ ಚಾಲ್ತಿಯಲ್ಲಿದೆ. ಈ ಬೆನ್ನಲ್ಲೇ ಆಂಧ್ರ ವಿಧಾನಸಭೆ ಎಲೆಕ್ಷನ್ ಭರಾಟೆ ಜೋರಾಗಿದೆ. ಸಿಎಂ ಪಟ್ಟ ಯಾರಿಗೆ ಸಿಗಲಿದೆ ಎಂಬುದನ್ನ ಕಾಯಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]