Tag: Janata Pancharatna Yatra

  • ಹೆಚ್‌.ಡಿ.ದೇವೇಗೌಡರ ಆರೋಗ್ಯ ಸ್ಥಿತಿ ಸರಿಯಿಲ್ಲ ಎಂದ ವೈದ್ಯರು – ಹೆಚ್‌ಡಿಡಿ 100 ಕಿ.ಮೀ ರೋಡ್‌ ಶೋ ರದ್ದು

    ಹೆಚ್‌.ಡಿ.ದೇವೇಗೌಡರ ಆರೋಗ್ಯ ಸ್ಥಿತಿ ಸರಿಯಿಲ್ಲ ಎಂದ ವೈದ್ಯರು – ಹೆಚ್‌ಡಿಡಿ 100 ಕಿ.ಮೀ ರೋಡ್‌ ಶೋ ರದ್ದು

    ಬೆಂಗಳೂರು: ಪಂಚರತ್ನ ರಥಯಾತ್ರೆಯ ಸಮಾರೋಪ ಕಾರ್ಯಕ್ರಮ ನಡೆಯುವ ಮೊದಲು ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡರ (HD Devegowda) ನೇತೃತ್ವದಲ್ಲಿ ನಡೆಯಬೇಕಿದ್ದ 100 ಕಿ.ಮೀ ರೋಡ್‌ ಶೋ ರದ್ದುಗೊಳಿಸಲಾಗಿದೆ.

    ವೈದ್ಯರ ಸಲಹೆ ಮೇರೆಗೆ ದೇವೇಗೌಡರ ರೋಡ್ ಶೋ ರದ್ದುಗೊಳಿಸಿರುವುದಾಗಿ ಜೆಡಿಎಸ್‌ ತಿಳಿಸಿದೆ. ರೋಡ್‌ ಶೋ ಬದಲಿಗೆ ಕೇವಲ ಸಮಾರೋಪ ಸಮಾರಂಭ ಮಾಡಲು ನಿರ್ಧರಿಸಲಾಗಿದೆ ಎಂದು ಪಕ್ಷ ಮಾಹಿತಿ ನೀಡಿದೆ. ಈ ಸಮಾರೋಪ ಸಮಾರಂಭದಲ್ಲಿ ಹೆಚ್‌.ಡಿ.ದೇವೇಗೌಡರು ಪಾಲ್ಗೊಳ್ಳಲಿದ್ದಾರೆ.

    ರೋಡ್‌ ಶೋ ರದ್ದುಗೊಳಿಸಿರುವ ಬಗ್ಗೆ ಮಾತನಾಡಿದ ಮಾಜಿ ಸಿಎಂ ಹೆಚ್‌.ಡಿ.‌ಕುಮಾರಸ್ವಾಮಿ, ವೈದ್ಯರ ಸಲಹೆ ಮೇರೆಗೆ 100 ಕಿಮೀ ರೋಡ್ ಶೋ ರದ್ದು ಮಾಡಲಾಗಿದೆ. ದೇವೇಗೌಡರ ಆರೋಗ್ಯ ಸ್ಥಿತಿ ಸರಿಯಿಲ್ಲ. ವೈದ್ಯರು ಈ‌ ಸಮಯದಲ್ಲಿ ಇಷ್ಟು ದೊಡ್ಡ ರೋಡ್ ಶೋ ಬೇಡ ಅಂತಾ ಹೇಳಿದ್ದಾರೆ. ಹೀಗಾಗಿ ರೋಡ್ ಶೋ ರದ್ದು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.‌

    ಸಮಾವೇಶ ಜಾಗದಲ್ಲಿ 2ರಿಂದ 3 ಕಿ.ಮೀ ರೋಡ್ ಶೋ ಮಾಡ್ತೀವಿ ಅಷ್ಟೆ. ಮೈಸೂರಿನಲ್ಲಿ‌‌ ನಿಗದಿಯಂತೆ ಸಮಾರಂಭ ಸಮಾರಂಭ ನಡೆಯುತ್ತದೆ ಎಂದು ಹೇಳಿದ್ದಾರೆ.

    ಕುಂಬಳಗೋಡಿನಿಂದ ಮೈಸೂರಿನವರೆಗೆ ಸುಮಾರು 100 ಕಿಮೀ ದೂರ ಬೃಹತ್ ರೋಡ್ ಶೋ ನಡೆಸುವ ಬಗ್ಗೆ ಈ ಹಿಂದೆ ಜೆಡಿಎಸ್‌ ನಿರ್ಧಾರ ಕೈಗೊಂಡಿತ್ತು. ಆ ರೋಡ್ ಶೋದಲ್ಲಿ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರನ್ನು ತೆರೆದ ವಾಹನದಲ್ಲಿ ಕರೆದುಕೊಂಡು ಹೋಗುವ ಯೋಜನೆ ಕೂಡ ಹಾಕಿಕೊಂಡಿತ್ತು.

  • ನ. 1 ರಿಂದ ಜೆಡಿಎಸ್ ಜನತಾ ಪಂಚರತ್ನ ಯಾತ್ರೆ ಆರಂಭ – ಪಕ್ಷ ಸಂಘಟನೆಗೆ ಒತ್ತು: ಹೆಚ್‍ಡಿಕೆ

    ನ. 1 ರಿಂದ ಜೆಡಿಎಸ್ ಜನತಾ ಪಂಚರತ್ನ ಯಾತ್ರೆ ಆರಂಭ – ಪಕ್ಷ ಸಂಘಟನೆಗೆ ಒತ್ತು: ಹೆಚ್‍ಡಿಕೆ

    ಬೆಂಗಳೂರು: ಹಳೇ ಮೈಸೂರು ಭಾಗಕ್ಕೆ ಮಾತ್ರ ಜೆಡಿಎಸ್ (JDS) ಸೀಮಿತವಾಗಲ್ಲ. ರಾಜ್ಯದೆಲ್ಲೆಡೆ ಪಕ್ಷವನ್ನು ಸಂಘಟನೆ ಮಾಡುತ್ತಿದ್ದೇವೆ. ಪಕ್ಷದ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ (Pancharatna Yatra)  ನವೆಂಬರ್ 1 ಕನ್ನಡ ರಾಜ್ಯೋತ್ಸವ ದಿನದಂದು ಚಾಲನೆ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D Kumaraswamy) ಘೋಷಿಸಿದರು.

    ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಈಗಾಗಲೇ ಪೂರ್ವ ಸಿದ್ಧತೆ ಕಾರ್ಯಗಳು ನಡೆಯುತ್ತಿವೆ. ಇದಕ್ಕಾಗಿ ವಾಹನಗಳು ಸಹ ಸಿದ್ಧಗೊಳ್ಳುತ್ತಿದೆ. ಕಲ್ಯಾಣ ಕರ್ನಾಟಕ (Karnataka) ಭಾಗದಲ್ಲಿ ಈಗಾಗಲೇ ಸಂಘಟನೆ ಆರಂಭಿಸಿದ್ದೇವೆ. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಅಸ್ತಿತ್ವ ಏನು ಎಂಬುದನ್ನು ಈ ಕಾರ್ಯಕ್ರಮಗಳ ಮೂಲಕ ತೋರಿಸುತ್ತೇವೆ ಅಂದು ಹೇಳಿದರು. ಇದನ್ನೂ ಓದಿ: ಡಿಕೆ ಬ್ರದರ್ಸ್‍ಗೆ ಸಂಕಷ್ಟ – ನಾಳೆ ವಿಚಾರಣೆಗೆ ಹಾಜರಾಗಿ ಎಂದ ED

    ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ (Chandrashekar Rao) ಅವರು ಜೆಡಿಎಸ್ ಪರ ಪ್ರಚಾರಕ್ಕೆ ಬರಲಿದ್ದಾರೆ. ಈ ಬಗ್ಗೆ ಎರಡೂ ಪಕ್ಷಗಳು ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.

    ಬಿಬಿಎಂಪಿ ಚುನಾವಣಾ ಪ್ರಚಾರ:
    ಅಕ್ಟೋಬರ್ 8ಕ್ಕೆ ಜನತಾಮಿತ್ರ ಸಮಾರೋಪ ಸಮಾರಂಭ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಆಯೋಜಿಸಿದ್ದೇವೆ. ಈ ಸಂಬಂಧ ಪೂರ್ವ ಸಿದ್ಧತೆಗಾಗಿ ಚರ್ಚೆ ಮಾಡಲು ಬೆಂಗಳೂರು ನಗರ ಘಟಕದ ಪದಾಧಿಕಾರಿಗಳ ಸಭೆ ಕರೆದಿದ್ದೇನೆ. ಮಳೆಯಿಂದಾಗಿ ಜನತಾ ಮಿತ್ರ ಸಮಾರೋಪ ಕಾರ್ಯಕ್ರಮ ಎರಡು ಬಾರಿ ಮುಂದೂಡಿಕೆ ಆಗಿತ್ತು. ಅಕ್ಟೋಬರ್ 8ರಂದು ಮಧ್ಯಾಹ್ನ ಈ ಕಾರ್ಯಕ್ರಮ ನಡೆಸಲಾಗುತ್ತದೆ. ಮುಂದಿನ ಬಿಬಿಎಂಪಿ (BBMP) ಚುನಾವಣಾ ಪ್ರಚಾರದ ಸಮಾವೇಶ ಕೂಡ ಇದೇ ಕಾರ್ಯಕ್ರಮದಿಂದ ಪ್ರಾರಂಭವಾಗಲಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆ ವೇಳೆ ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಹೇಳಿಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಸಿಎಂಗೆ ಮೆಚ್ಯುರಿಟಿ ಇದೆಯೇ ಎಂದು ಕೇಳಬೇಕಿದೆ. ಶಾಸಕರ ಶಿಷ್ಟಾಚಾರ ನೀವೇ ಮಾಡಿದ್ದು, ಆದರೆ ಈಗ ಏನಾಯ್ತು. ಕಲಾವಿದರ ಕೋಟಾದಿಂದ ಬಂದವರಿಗೆ 50 ಕೋಟಿ ಅನುದಾನ ಕೊಡುವುದೆಂದರೆ ಹೇಗೆ?. ಕಾರ್ಯಕ್ರಮ ರದ್ದಾಗಿದೆ ಅಂತ ಹಿಂದಿನ ದಿನ ಹೇಳಿದ್ದಾರೆ. ಆದರೆ ಮತ್ತೆ ಯಾಕೆ ಕಾರ್ಯಕ್ರಮ ಮಾಡಿದರು ಎಂದು ಸಿಎಂ ವಿರುದ್ಧ ಗರಂ ಆದರು.

    ಸರ್ಕಾರಿ ಕಾರ್ಯಕ್ರಮ ಶಾಸಕರ ನೇತೃತ್ವದಲ್ಲಿ ನಡೆಯಬೇಕು. ನಾನು ಇದನ್ನು ಇಲ್ಲಿಗೆ ಬಿಡುವುದಿಲ್ಲ. ಕಲ್ಲು ತೂರಾಟ ಯಾಕೆ ಆಯ್ತು. ಬೇರೊಂದು ಕಾರ್ಯಕ್ರಮಕ್ಕೆ ಬೇರೆ ಮಾರ್ಗದಲ್ಲಿ ಹೋಗಬಹುದಿತ್ತು. ಶಾಂತಿಯುತವಾಗಿ ಇದ್ದವರನ್ನು ಲಾಠಿ ಚಾರ್ಜ್ ಮಾಡಿದ್ದು ಪೊಲೀಸರು. ಗಲಭೆ ಸೃಷ್ಟಿ ಮಾಡಿದ್ದು ಯಾರು ಹಾಗಾದರೆ? ತಾಕತ್ ಇದೆ ಅನ್ನುವ ಭಾಷಣ ಮಾಡಿದರಲ್ಲಾ, ನಿಮ್ಮ ಶಾಸಕರನ್ನು ಹದ್ದು ಬಸ್ತಿನಲ್ಲಿ ಇಡದೇ ನನ್ನ ಬಗ್ಗೆ ಮಾತಾಡ್ತೀರಾ ಎಂದು ತಿರುಗೇಟು ನೀಡಿದರು.

    Live Tv
    [brid partner=56869869 player=32851 video=960834 autoplay=true]