Tag: Janathadarshana

  • ಮಧ್ಯರಾತ್ರಿವರೆಗೂ ಎಚ್‍ಡಿಕೆ ಜನತಾದರ್ಶನ – ಗೃಹ ಕಚೇರಿ `ಕೃಷ್ಣಾ’ದಲ್ಲಿ ಕಣ್ಣೀರ ಕಥೆಗಳ ದರ್ಶನ

    ಮಧ್ಯರಾತ್ರಿವರೆಗೂ ಎಚ್‍ಡಿಕೆ ಜನತಾದರ್ಶನ – ಗೃಹ ಕಚೇರಿ `ಕೃಷ್ಣಾ’ದಲ್ಲಿ ಕಣ್ಣೀರ ಕಥೆಗಳ ದರ್ಶನ

    – ನೊಂದವರ ಬದುಕಿಗೊಂದು ಸಾಂತ್ವನದ ಸ್ಪರ್ಶ

    ಬೆಂಗಳೂರು: ಸಿಎಂ ಎಚ್.ಡಿ ಕುಮಾರಸ್ವಾಮಿ ಶನಿವಾರ ಮಧ್ಯರಾತ್ರಿವರೆಗೂ ಜನರ ದೂರು ದುಮ್ಮಾನಗಳಿಗೆ ಕಿವಿಯಾದರು. ಅಂಗವಿಕಲರು, ವೃದ್ಧರು, ಮಹಿಳೆಯರು, ಮಕ್ಕಳು, ಅಂಧರು, ಬಾಣಂತಿಯರು ಹೀಗೆ ನೂರಾರು ದುಃಖಿತರ ಕಣ್ಣೀರ ಕಥೆಗಳಿಗೆ ಮುಖ್ಯಮಂತ್ರಿ ಗೃಹ ಚೇರಿ ಕೃಷ್ಣಾ ಸಾಕ್ಷಿಯಾಯಿತು.

    ನಿನ್ನೆ ಮಧ್ಯಾಹ್ನ 12.15ಕ್ಕೆ ಆರಂಭವಾದ ಸಿಎಂ ಕುಮಾರಸ್ವಾಮಿ ಅವರ ಜನತಾದರ್ಶನ ತಡರಾತ್ರಿ 11.30ರವರೆಗೂ ನಡೀತು. ಕರುಳು ಕಿತ್ತು ಬರುವಂತಹ ನೋವುಗಳ ಮಹಾಪೂರದಲ್ಲಿ ಜನತಾದರ್ಶನ ಮಿಂದು ಹೋಯಿತು. ನಿನ್ನೆ ಸುಮಾರು 1600 ಕ್ಕೂ ಹೆಚ್ಚು ಅರ್ಜಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಖುದ್ದು ಮಾತನಾಡಿ, ಪರಿಹಾರ ಒದಗಿಸಲು ನಿರ್ದೇಶನ ನೀಡಿದರು.

    ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದು ಮುಖ್ಯಮಂತ್ರಿಗಳ ನಿರ್ದೇಶನದಂತೆ ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಂಡರು. 12 ಗಂಟೆಗಳ ನಂತರ ಸಿಎಂ ಕುಮಾರಸ್ವಾಮಿ ಮಾತನಾಡಿದ್ರು. ನಗರದಲ್ಲಿದ್ದಾಗ ಶನಿವಾರದಂದು ಜನರ ಸಮಸ್ಯೆ ವಿಚಾರಿಸುತ್ತೇನೆ. ಇವತ್ತು ಅನೇಕ ಸಮಸ್ಯೆ ಕುಂದು ಕೊರತೆ ಹೇಳಿಕೊಂಡಿದ್ದಾರೆ. ಸ್ಥಳದಲ್ಲೇ ಶೇಕಡಾ 50-60 ರಷ್ಟು ಸಮಸ್ಯೆ ನಿವಾರಿಸಿದ್ದೇನೆ. ಈ ಸಮಸ್ಯೆಗಳು ಮತ್ತೆ ಬಂದ್ರೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿಎಂ ಜನತಾ ದರ್ಶನ ಸಿಬ್ಬಂದಿ ನಾಪತ್ತೆ: ಭೇಟಿಗಾಗಿ ಪರದಾಡುತ್ತಿರುವ ಅಂಗವಿಕಲರು!

    ಸಿಎಂ ಜನತಾ ದರ್ಶನ ಸಿಬ್ಬಂದಿ ನಾಪತ್ತೆ: ಭೇಟಿಗಾಗಿ ಪರದಾಡುತ್ತಿರುವ ಅಂಗವಿಕಲರು!

    ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿಯವರ ಜನತಾ ದರ್ಶನದ ಸರಿಯಾದ ಮಾಹಿತಿ ಸಿಗದೆ ಇಬ್ಬರು ಅಂಗವಿಕಲರು ಪರದಾಡುತ್ತಿರುವ ಘಟನೆ ಸಿಎಂ ನಿವಾಸದ ಬಳಿ ನಡೆದಿದೆ.

    ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮಂಜುನಾಥ್ ಎಂಬ ಎರಡು ಕಾಲುಗಳಿಲ್ಲದ ಅಂಗವಿಕಲ ಸಿಎಂರ ಜನತಾ ದರ್ಶನಕ್ಕೆ ಬಂದಿದ್ದಾರೆ. ಮುಖ್ಯಮಂತ್ರಿಯವರ ಜೆಪಿ ನಗರದ ನಿವಾಸಕ್ಕೆ ಬಂದಾಗ ಪೊಲೀಸರು ಗೃಹ ಕಚೇರಿ ಕೃಷ್ಣಾಕ್ಕೆ ತೆರಳುವಂತೆ ಹೇಳಿದ್ದಾರೆ.

    ಜನತಾ ದರ್ಶನದ ಮಾಹಿತಿ ನೀಡುವ ಯಾವೊಬ್ಬ ಅಧಿಕಾರಿಯೂ ಸ್ಥಳದಲ್ಲಿ ಇಲ್ಲ. ಅಂಗವಿಕಲರ ವಾಹನಕ್ಕೆ ಮನವಿ ಸಲ್ಲಿಸಲು ಬಂದ್ದಿದ್ದು, ರಾತ್ರಿಯಿಡಿ ಪ್ರಯಾಣ ಮಾಡಿ ಮೆಜೆಸ್ಟಿಕ್‍ನಿಂದ ಜೆಪಿ ನಗರದ ಸಿಎಂ ನಿವಾಸಕ್ಕೆ 350 ರೂ. ಆಟೋ ಚಾರ್ಜ್ ನೀಡಿ ಬಂದಿದ್ದೇನೆ. ಆದರೆ ಇಲ್ಲಿ ಸಿಎಂ ಕುಮಾರಸ್ವಾಮಿ ಆಗಲಿ ಅಥವಾ ಜನತಾ ದರ್ಶನದ ಸಿಬ್ಬಂದಿಯಾಗಲಿ ಇಲ್ಲ. ಈಗ ಪೊಲೀಸರು ಗೃಹ ಕಚೇರಿ ಕೃಷ್ಣಾಕ್ಕೆ ಹೋಗುವಂತೆ ಹೇಳುತ್ತಿದ್ದಾರೆ. ಆದರೆ ಆಟೋಕ್ಕೆ ಹೋಗಲು ನನ್ನ ಬಳಿ ಹಣವಿಲ್ಲ. ಅಂಗವಿಕಲನಾದ ನಾನು ಎರಡು ಬಸ್ ಬದಲಿಸಿ ಹೋಗುವ ಪರಿಸ್ಥಿತಿ ಎದುರಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.

    ಅಲ್ಲದೇ ಎರಡು ದಿನಗಳಿಂದ ಮತ್ತೊಬ್ಬ ಅಂಗವಿಕಲರು ಸಿಎಂ ದರ್ಶನ ಪಡೆಯಲು ಅಲೆದಾಡುತ್ತಿದ್ದಾರೆ. ಯಾವುದೇ ಅಧಿಕಾರಿಗಳು ಸರಿಯಾದ ಮಾಹಿತಿ ನೀಡುತ್ತಿಲ್ಲ. ಪೊಲೀಸರು ಗೃಹ ಕಚೇರಿ ಕೃಷ್ಣಾಕ್ಕೆ ಹೋಗಲು ಹೇಳುತ್ತಿದ್ದಾರೆ. ನನಗೆ ಗೃಹ ಕಚೇರಿ ಎಲ್ಲಿದೆ ಎಂಬುದು ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

    ಸಿಎಂ ಜನತಾ ದರ್ಶನದ ಸಿಬ್ಬಂದಿಯು ನಾಪತ್ತೆಯಾಗಿದ್ದು, ಸರಿಯಾದ ಮಾಹಿತಿ ಸಿಗದೆ ಮುಖ್ಯಮಂತ್ರಿ ಕುಮಾರಸ್ವಾಮಿಯವರ ನಿವಾಸ ಮತ್ತು ಗೃಹ ಕಚೇರಿ ಕೃಷ್ಣಾಕ್ಕೆ ಸಾರ್ವಜನಿಕರು ಅಲೆದಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.