Tag: japan

  • ಸಾಮಾನ್ಯ ವ್ಯಕ್ತಿ ಜೊತೆಗೆ ಜಪಾನ್ ಯುವರಾಣಿ ಮದುವೆ-ಪದವಿ, ಗೌರವ ಹಿಂಪಡೆದ ಅರಮನೆ

    ಸಾಮಾನ್ಯ ವ್ಯಕ್ತಿ ಜೊತೆಗೆ ಜಪಾನ್ ಯುವರಾಣಿ ಮದುವೆ-ಪದವಿ, ಗೌರವ ಹಿಂಪಡೆದ ಅರಮನೆ

    ಟೋಕಿಯೋ: ರಾಜಕುಮಾರಿ ಮಾಕೋ ರಾಜಮನೆತನಕ್ಕೆ ಸೇರದ ಕಾಲೇಜು ದಿನಗಳಲ್ಲಿ ಸಹಪಾಠಿಯಾಗಿದ್ದ ಕಿ ಕೊಮೊರೋ ಅವರನ್ನು ಮದುವೆಯಾಗಿದ್ದಾರೆ. ಈ ಮೂಲಕವಾಗಿ ರಾಜ ಮನೆತನಕ್ಕೆ ಸಿಗುವ ಸ್ಥಾನಮಾನ ಕಳೆದುಕೊಂಡಿದ್ದಾರೆ.

    ರಾಜಮನೆತನದಲ್ಲಿ ಜನಿಸಿದ್ದಕ್ಕಾಗಿ ಸಿಗುವ ಎಲ್ಲಾ ಸರ್ಕಾರ ಪದವಿ ಗೌರಗಳನ್ನು ಅಧಿಕೃತವಾಗಿ ಕಳೆದುಕೊಂಡಿದ್ದಾರೆ. ಸಾಮಾನ್ಯ ವ್ಯಕ್ತಿಯನ್ನು ಮದುವೆಯಾಗಿದ್ದರಿಂದ ರಾಜಕುಮಾರಿಯ ಸ್ಥಾನಮಾನಗಳನ್ನು ಅರಮನೆ ಹಿಂಪಡೆದಿದೆ. ಇದನ್ನೂ ಓದಿ:  ಹೊಸ ಪಕ್ಷ ಸ್ಥಾಪನೆ ಖಚಿತಪಡಿಸಿದ ಅಮರೀಂದರ್ ಸಿಂಗ್ – ಬಿಜೆಪಿ ಜೊತೆಗೆ ಹೊಂದಾಣಿಕೆ

    ರಾಜ ಕುಟುಂಬದ ಹೊರಗಿನವರನ್ನು ರಾಜ ಕುಟುಂಬದ ಸ್ತ್ರೀಯರು ಮದುವೆಯಾದರೆ ಅವರಿಗೆ ರಾಜಮನೆತನದಿಂದ ನೀಡುವ ರಾಯಲ್ಟಿಯನ್ನು ಮಾಕೋ ತಿರಸ್ಕರಿಸಿದ್ದಾರೆ. ಜಪಾನ್‍ನ ಚಕ್ರವರ್ತಿ ಅಕಿಹಿಟೊರವರ ಮರಿ ಮೊಮ್ಮಗಳಾದ ಮಾಕೋ ಆಕೆಯ ಕಾಲೇಜಿನ ಸಹಪಾಠಿಯಾಗಿದ್ದ ಕೆಯಿ ಕೊಮುರೊ ಜೊತೆಗೆ ವಿವಾಹವಾಗಿದ್ದಾರೆ. ಸುಮಾರು 153 ಮಿಲಿಯನ್ ಭಾರತದ ಕರೆನ್ಸಿ ಪ್ರಕಾರ 10 ಕೋಟಿ ರೂಪಾಯಿ ಹಣವನ್ನು ಮಾಕೋ ತಿರಸ್ಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:  ಕುಚ್ಚಲಕ್ಕಿ ರೊಟ್ಟಿ ಮಾಡಿದ ರಾಬರ್ಟ್ ನಟಿ ಆಶಾ ಭಟ್

    ರಾಣಿ ಮಾಕೋ ಮದುವೆಗೆ ರಾಷ್ಟ್ರೀಯ ಮಟ್ಟದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಇದಾದ ಬಳಿಕವೂ ರಾಜಕುಮಾರಿ ಮಾತ್ರ ಆಕೆಯ ಸಹಪಾಠಿಯನ್ನು ವಿವಾಹವಾಗುವ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ. ಸಾಮಾನ್ಯ ಹುಡುಗನನ್ನು ಮದುವೆಯಾಗುವ ಮೂಲಕವಾಗಿ ರಾಜಮನೆತನದ ಸ್ಥಾನಮಾನ ಕಳೆದುಕೊಂಡಿದ್ದಾರೆ.

  • ಕ್ವಾಡ್ ಜಾಗತಿಕ ಒಳಿತಿಗಾಗಿ ಸದಾ ಶ್ರಮಿಸುತ್ತದೆ: ಪ್ರಧಾನಿ ಮೋದಿ

    ಕ್ವಾಡ್ ಜಾಗತಿಕ ಒಳಿತಿಗಾಗಿ ಸದಾ ಶ್ರಮಿಸುತ್ತದೆ: ಪ್ರಧಾನಿ ಮೋದಿ

    ವಾಷಿಂಗ್ಟನ್: ಭಾರತ, ಅಮೆರಿಕ, ಆಸ್ಟ್ರೇಲಿಯಾ ಮತ್ತು ಜಪಾನ್ ದೇಶಗಳನ್ನೊಳಗೊಂಡ ಕ್ವಾಡ್ ಜಾಗತಿಕ ಒಳಿತಿಗಾಗಿ ಸದಾ ಶ್ರಮಿಸುತ್ತದೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಅಮೆರಿಕದಲ್ಲಿ ನಡೆದ ಕ್ವಾಡ್ ಸಭೆಯಲ್ಲಿ ಭಾಗವಹಿಸಿದ ನರೇಂದ್ರ ಮೋದಿ ಅವರು, ಕ್ವಾಡ್, ಜಾಗತಿಕ ಒಳಿತಿಗಾಗಿ ಸದಾ ಶ್ರಮವಹಿಸುತ್ತದೆ. ಇದೊಂದು ಶಕ್ತಿಯಾಗಿ ಕಾರ್ಯನಿರ್ವಹಿಸಲಿದ್ದು, ಭಾರತ, ಅಮೆರಿಕ, ಆಸ್ಟ್ರೇಲಿಯಾ ಮತ್ತು ಜಪಾನ್ ಸೇರಿದಂತೆ ನಾಲ್ಕು ದೇಶಗಳ ಸಹಕಾರವು ಇಂಡೋ-ಪೆಸಿಫಿಕ್‍ನಲ್ಲಿ ಶಾಂತಿ ಮತ್ತು ಸಮೃದ್ಧಿಯನ್ನು ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಭಾರತ-ಅಮೆರಿಕ ಸಂಬಂಧ ವೃದ್ಧಿಗೆ ಬೀಜ ಬಿತ್ತಲಾಗಿದೆ: ಪ್ರಧಾನಿ ಮೋದಿ

    ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ದ್ವಿಪಕ್ಷೀಯ ಸಭೆಯಲ್ಲಿ ಪಾಲ್ಗೊಂಡ ಬಳಿಕ ಕ್ವಾಡ್ ಸಭೆಯಲ್ಲಿ ಪಾಲ್ಗೊಂಡ ಮೋದಿ, ಮೊದಲ ಕ್ವಾಡ್ ಸಭೆಯಲ್ಲಿ ಅಮೆರಿಕದ ಅಧ್ಯಕ್ಷರಾದ ಜೋ ಬೈಡೆನ್ ಅವರಿಗೆ ನಾನು ಧನ್ಯವಾದಗಳನ್ನು ಸಮರ್ಪಿಸುತ್ತೇನೆ. 2004ರ ಸುನಾಮಿಯ ನಂತರ ನಾಲ್ಕು ದೇಶಗಳು ಮೊದಲ ಬಾರಿಗೆ ಇಂಡೋ-ಪೆಸಿಫಿಕ್ ಪ್ರದೇಶಕ್ಕೆ ಸಹಾಯ ಮಾಡಲು ಒಂದಾದವು. ಇಂದು ಜಗತ್ತು ಕೋವಿಡ್-19ನಿಂದಾಗಿ ಹೋರಾಡುತ್ತಿರುವಾಗ ಮಾನವೀಯತೆಯ ಹಿತದೃಷ್ಟಿಯಿಂದ ಮತ್ತೊಮ್ಮೆ ಕ್ವಾಡ್ ಸದಸ್ಯರೆಲ್ಲ ಒಟ್ಟು ಸೇರಿದ್ದೇವೆ. ನಮ್ಮ ಕ್ವಾಡ್ ಲಸಿಕೆ ಉಪಕ್ರಮವು ಇಂಡೋ-ಪೆಸಿಫಿಕ್ ಪ್ರದೇಶದ ಜನರಿಗೆ ಸಹಾಯ ಮಾಡುತ್ತದೆ ಎಂದರು.

    ಕ್ವಾಡ್ ಮೂಲಕ ಸಕಾರಾತ್ಮಕ ಚಿಂತನೆ ಮತ್ತು ಪರಸ್ಪರ ಸಹಕಾರಿಯಾಗುವ ಕೆಲಸಗಳನ್ನು ನಿರ್ವಹಿಸಲು ನಿರ್ಧರಿಸಿದ್ದೇವೆ. ಪೂರೈಕೆ ಸರಪಳಿ ಅಥವಾ ಜಾಗತಿಕ ಭದ್ರತೆ, ಹವಾಮಾನ, ಕೋವಿಡ್ ಪ್ರತಿಕ್ರಿಯೆ ಮತ್ತು ತಂತ್ರಜ್ಞಾನಗಳ ಬಗೆಗಿನ ಕ್ವಾಡ್ ಸದಸ್ಯರೊಂದಿಗಿನ ವಿಶೇಷ ಮಾತುಕತೆ ನನಗೆ ತುಂಬಾ ಸಂತೋಷ ನೀಡಿದೆ. ಕ್ವಾಡ್ ಒಂದು ರೀತಿಯಲ್ಲಿ ಜಾಗತಿಕ ಒಳಿತಿಗಾಗಿ ಪರಸ್ಪರ ಸಹಕಾರಿಯಾಗಿ ಕೆಲಸ ಮಾಡುತ್ತದೆ. ಕ್ವಾಡ್‍ನಲ್ಲಿ ನಮ್ಮ ಸಹಕಾರವು ಇಂಡೋ-ಪೆಸಿಫಿಕ್ ಮತ್ತು ಇಡೀ ಜಗತ್ತಿನಲ್ಲಿ ಶಾಂತಿ ಮತ್ತು ಸಮೃದ್ಧಿಯನ್ನು ಹೊಂದಲು ಸಹಕಾರಿಯಾಗುವುದೆಂದು ನಾನು ಬಲವಾಗಿ ನಂಬಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಕಮಲಾ ಹ್ಯಾರಿಸ್‍ಗೆ ಅಪರೂಪದ ಗಿಫ್ಟ್ ನೀಡಿದ ಪ್ರಧಾನಿ ಮೋದಿ

    ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾದ ನಾಯಕರೊಂದಿಗೆ ಕ್ವಾಡ್ ಸಭೆಯಲ್ಲಿ ಭಾಗವಹಿಸಿದ ಮೋದಿ, 5ಜಿ ತಂತ್ರಜ್ಞಾನ, ಹವಾಮಾನ ಬದಲಾವಣೆ, ನಿರ್ಣಾಯಕ ಮೂಲಸೌಕರ್ಯ, ಪೂರೈಕೆ ಸರಪಳಿಗಳು ಮತ್ತು ಪ್ರಾದೇಶಿಕ ಭದ್ರತೆಯಂತಹ ವಿವಿಧ ವಿಷಯಗಳನ್ನು ನಾಯಕರೊಂದಿಗೆ ಹೆಚ್ಚು ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಜೋ ಬೈಡನ್ ಭೇಟಿ ಮಾಡಿದ ಪ್ರಧಾನಿ ಮೋದಿ

  • ಮೂಳೆ ಮುರಿತ – ಆಟ ನಿಲ್ಲಿಸಿದ ವಿಶ್ವದ ವೇಗದ ರೋಲರ್ ಕೋಸ್ಟರ್

    ಮೂಳೆ ಮುರಿತ – ಆಟ ನಿಲ್ಲಿಸಿದ ವಿಶ್ವದ ವೇಗದ ರೋಲರ್ ಕೋಸ್ಟರ್

    ಟೋಕಿಯೋ: ವಿಶ್ವದ ವೇಗದ ರೋಲರ್ ಕೋಸ್ಟರ್ ತನ್ನ ಆಟವನ್ನು ನಿಲ್ಲಿಸಿದೆ. ಪ್ರವಾಸಿಗರ ಮೂಳೆಗಳು ಮುರಿದ ಪ್ರಕರಣ ವರದಿಯಾದ ಹಿನ್ನೆಲೆಯಲ್ಲಿ ಜಪಾನ್ ಪ್ರವಾಸಿ ತಾಣ ರೋಲರ್ ಕೋಸ್ಟರ್ ಸೇವೆಯನ್ನು ನಿಲ್ಲಿಸಿದೆ.

    ಜಪಾನ್‍ನ ಯಮನಶಿಯ ಫುಜಿಯೊಶಿಡಾದ ದೋ-ಡೋಡೊನ್ಪಾ ಥೀಮ್ ಪಾರ್ಕಿನಲ್ಲಿದ್ದ ರೋಲರ್ ಕೋಸ್ಟರ್ 1.8 ಸೆಕೆಂಡಿನಲ್ಲಿ 172 ಕಿ.ಮೀ/ಗಂಟೆ ವೇಗ ಪಡೆದುಕೊಳ್ಳುತ್ತಿದ್ದರಿಂದ ವಿಶ್ವದ ಅತಿ ವೇಗದ ರೋಲರ್ ಕೋಸ್ಟರ್ ಎಂಬ ಪಟ್ಟ ಸಿಕ್ಕಿತ್ತು. ಈ ರೋಲರ್ ಕೋಸ್ಟರ್ ನಲ್ಲಿ ಕುಳಿತುಕೊಳ್ಳಲೆಂದೇ ವಿಶ್ವದಿಂದ ಪ್ರವಾಸಿಗರು ಈ ಥೀಮ್ ಪಾರ್ಕ್ ವೀಕ್ಷಣೆಗೆ ಆಗಮಿಸುತ್ತಿದ್ದರು. ಇದನ್ನೂ ಓದಿ: ನಟ ಕೋಮಲ್ ವಿರುದ್ಧ ಸ್ವೆಟರ್ ಹಗರಣ ಆರೋಪ 

    2001ರಲ್ಲಿ ಈ ಸೇವೆ ಆರಂಭಗೊಂಡಿದ್ದು ಈಗ ಮೂಳೆ ಮುರಿತ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಡಿಸೆಂಬರ್ 2020 ರಿಂದ ಇಲ್ಲಿಯವರೆಗೆ 6 ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ರೋಲರ್ ಕೋಸ್ಟರ್ ಆಟವನ್ನು ಬಂದ್ ಮಾಡಲಾಗಿದೆ. ಇದಕ್ಕೂ ಮೊದಲು 2007ರಲ್ಲಿ ಒಂದು ಪ್ರಕರಣ ವರದಿಯಾಗಿತ್ತು.

    ಈ ಪ್ರಕರಣದ ಬಳಿಕ ಇತ್ತೀಚಿನ ಪ್ರಕರಣಗಳು ಹೆಚ್ಚು ಗಂಭೀರವಾಗಿದ್ದ ಕಾರಣ ಥೀಮ್ ಪಾರ್ಕ್ ಆಡಳಿತ ಮಂಡಳಿ ಈ ಸೇವೆಯನ್ನು ನಿಲ್ಲಿಸುವ ನಿರ್ಧಾರಕ್ಕೆ ಬಂದಿದ್ದಾರೆ. ರೋಲರ್ ಕೋಸ್ಟರ್ ನಲ್ಲಿ  ಯಾವುದೇ ತಾಂತ್ರಿಕ ದೋಷ ಇಲ್ಲದಿರುವ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ತಟ್ಟೆಯಲ್ಲಿ ಪೌಡರ್ ಹಾಕಿ ಎಟಿಎಂ ಕಾರ್ಡ್‍ನಿಂದ ಉಜ್ಜಿ ಕೊಕೇನ್ ಸೇವಿಸಿದ್ದ ರಾಗಿಣಿ 

    ರೋಲರ್ ಕೋಸ್ಟರ್ ವಿನ್ಯಾಸಗಳಲ್ಲಿ ಪರಿಣತಿ ಹೊಂದಿರುವ ನಿಹಾನ್ ವಿಶ್ವವಿದ್ಯಾನಿಲಯದ ವಾಸ್ತುಶಿಲ್ಪ ಪ್ರಾಧ್ಯಾಪಕರಾದ ನಯೋಯಾ ಮಿಯಾಸಾಟೊ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ರೋಲರ್ ಕೋಸ್ಟರ್ ನಲ್ಲಿ ವೇಗ ಜಾಸ್ತಿ ಇದ್ದು, ಸರಿಯಾಗಿ ಕುಳಿತುಕೊಳ್ಳದ ಕಾರಣ ಮೂಳೆಗಳು ಮುರಿದಿರಬಹುದು. ಹೀಗಾಗಿ ಪಾರ್ಕ್ ಸಿಬ್ಬಂದಿ ವ್ಯಕ್ತಿಗಳು ಸರಿಯಾಗಿ ಕುಳಿತುಕೊಂಡಿದ್ದಾರೋ ಇಲ್ಲವೋ ಎಂಬುದನ್ನು ಪರೀಕ್ಷಿಸಬೇಕು. ಇದು ಸಿಬ್ಬಂದಿಯ ಜವಾಬ್ದಾರಿ ಎಂದು ಹೇಳಿದ್ದಾರೆ.

  • ಜಪಾನ್ ಸಮುದ್ರದಲ್ಲಿ ಎರಡು ತುಂಡಾದ ಹಡಗು – 24 ಕಿ.ಮೀ.ವರೆಗೆ ಹರಡಿದ ತೈಲ

    ಜಪಾನ್ ಸಮುದ್ರದಲ್ಲಿ ಎರಡು ತುಂಡಾದ ಹಡಗು – 24 ಕಿ.ಮೀ.ವರೆಗೆ ಹರಡಿದ ತೈಲ

    ಟೋಕಿಯೋ: ಉತ್ತರ ಜಪಾನಿನ ಬಂದರು ಬಳಿ ಸರಕು ಸಾಗಣೆಯ ಹಡಗು ಇಬ್ಭಾಗವಾಗಿದ್ದು, ಸುಮಾರು 24 ಕಿಲೋ ಮೀಟರ್ ವರೆಗೆ ತೈಲ ವ್ಯಾಪಿಸಿದೆ. ಬುಧವಾರ ಈ ಘಟನೆ ನಡೆದಿದೆ ಎಂದು ಜಪಾನ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಹಡಗಿನಲ್ಲಿದ್ದ ಎಲ್ಲ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಕಿಮ್ಸನ್ ಪೊಲಾರಿಸ್ ಹೆಸರಿನ ಹಡಗು ದಡಕ್ಕೆ ರಭಸವಾಗಿ ತಾಕಿದ್ದರಿಂದ ಹಡಗು ಎರಡು ತುಂಡಾಗಿದೆ. ಬುಧವಾರ ಉತ್ತರ ಜಪಾನಿನ ಹಚಿನೊಹೆ ಬಂದರಿನಲ್ಲಿ ಈ ಅವಘಡ ಸಂಬಂಧಿಸಿದೆ.

    39 ಸಾವಿರ ಟನ್ ತೂಕದ ಕಿಮ್ಸನ್ ಪೊಲಾರಿಸ್, ಕಟ್ಟಿಗೆಯ ತುಂಡುಗಳನ್ನ ತೆಗೆದುಕೊಂಡು ಸಾಗುತ್ತಿತ್ತು. ದಡದ ಬಳಿ ಬಂದಾಗ ಸಮುದ್ರ ಆಳ ಕಡಿಮೆ ಇರುವ ಕಾರಣ, ಮುಂಭಾಗ ದಡಕ್ಕೆ ತಾಕಿದ್ದರಿಂದ ಕ್ರ್ಯಾಕ್ ಉಂಟಾಗಿ ಎರಡು ತುಂಡಾಗಿದೆ.  ಕೂಡಲೇ ಕೋಸ್ಟಲ್ ಸಿಬ್ಬಂದಿ ಮತ್ತೊಂದು ಹಡಗಿನ ಮೂಲಕ ತೆರಳಿ ಎಲ್ಲ ಸಿಬ್ಬಂದಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಯುರೋಪ್‍ನಲ್ಲಿ ಕಂಗನಾ ಹಾಟ್ ಪೋಸ್ – ಅಭಿಮಾನಿಗಳು ಕ್ಲೀನ್ ಬೋಲ್ಡ್

    ಅಧಿಕಾರಿಗಳು ತೈಲ ಸೋರಿಕೆ ತಡೆಯಲು ಪ್ರಯತ್ನಿಸಿದ್ರೂ, ಅಪಾರ ಪ್ರಮಾಣದ ಇಂಧನ ಸಮುದ್ರ ಸೇರಿದೆ. ತೈಲ ಸೋರಿಕೆಯಿಂದ ಜಲಚರ ಜೀವಿ ಮತ್ತು ಪರಿಸರದ ಮೇಲೆ ಯಾವ ರೀತಿಯ ಪರಿಣಾಮ ಬೀರಿದೆ ಎಂಬುದರ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಹಡಗಿನ ಎಲ್ಲ ಸಿಬ್ಬಂದಿ ಚೀನಾ ಮತ್ತು ಫಿಲಿಫೈನ್ಸ್ ಮೂಲದವರು ಎಂದು ವರದಿಯಾಗಿದೆ. ಇದನ್ನೂ ಓದಿ: ನಾಗರಹೊಳೆ ಅಭಯಾರಣ್ಯಕ್ಕೆ ರಾಜೀವ್ ಗಾಂಧಿ ಹೆಸರು ತೆಗೆದು, ಜನರಲ್ ಕಾರ್ಯಪ್ಪ ಹೆಸರಿಡಲಿ: ಅಪ್ಪಚ್ಚು ರಂಜನ್

  • 805 ಕೋಟಿ ರೂ. ಡೀಲ್ – ಉಡುಪಿಯ ರೊಬೊಸಾಫ್ಟ್ ಖರೀದಿಸಿದ  ಜಪಾನ್ ಕಂಪನಿ

    805 ಕೋಟಿ ರೂ. ಡೀಲ್ – ಉಡುಪಿಯ ರೊಬೊಸಾಫ್ಟ್ ಖರೀದಿಸಿದ ಜಪಾನ್ ಕಂಪನಿ

    – ಕರಾವಳಿಯ ಮೊದಲ ಐಟಿ ಕಂಪನಿ
    – 805 ಕೋಟಿ ರೂ.ಗೆ ಖರೀದಿ

    ಬೆಂಗಳೂರು: ಕರಾವಳಿಯ ಮೊದಲ ಐಟಿ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ರೊಬೋಸಾಫ್ಟ್ ಕಂಪನಿಯನ್ನು ಜಪಾನ್ ಕಂಪನಿ ಖರೀದಿಸಿದೆ.

    ರೊಬೊಸಾಫ್ಟ್  ಕಂಪನಿಯ  ಶೇ.100 ಷೇರನ್ನು 805 ಕೋಟಿ ರೂ. ನೀಡಿ ಖರೀದಿಸಲು ಟೆಕ್ನೊ ಪ್ರೊ ಹೋಲ್ಡಿಂಗ್ಸ್ ಒಪ್ಪಂದ ಮಾಡಿಕೊಂಡಿದೆ. ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ರೊಬೊಸಾಫ್ಟ್ ಟೆಕ್ನಾಲಜಿ, ಸದ್ಯ ಇರುವ ಆಡಳಿತ ಮಂಡಳಿಯೇ ಕಂಪನಿಯನ್ನು ಮುನ್ನಡೆಸಿಕೊಂಡು ಹೋಗಲಿದ್ದು, ರವಿತೇಜ ಬೊಮ್ಮಿರೆಡ್ಡಿಪಲ್ಲಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮುಂದುವರಿಯಲಿದ್ದಾರೆ ಎಂದು ತಿಳಿಸಿದೆ.


    ರೊಬೊಸಾಫ್ಟ್ ಇಂಟರ್ನೆಟ್  ಬ್ರ್ಯಾಂಡ್‍ಗಳಿಗೆ ಅಪ್ಲಿಕೇಶನ್, ಮೊಬೈಲ್ ಆಪ್ಸ್, ಗೇಮಿಂಗ್ ಸಾಫ್ಟ್‌ವೇರ್‌ ಗಳನ್ನು  ಅಭಿವೃದ್ಧಿ ಪಡಿಸುತ್ತಿದೆ. ಪ್ರಸ್ತುತ ಈ ಕಂಪನಿಯಲ್ಲಿ ಎಸೆಂಟ್ ಕ್ಯಾಪಿಟಲ್ ಶೇ.37.3, ಕಲಾರಿ ಕ್ಯಾಪಿಟಲ್ ಶೇ.27, ರೊಬೊಸಾಫ್ಟ್ ಶೇ.35.7 ಪಾಲನ್ನು ಹೊಂದಿದೆ. ಮೊದಲ ಹಂತದಲ್ಲಿ ಜಪಾನ್ ಕಂಪನಿ ಶೇ.80 ರಷ್ಟು ಷೇರು ಖರೀದಿಸಿ ಒಂದು ವರ್ಷದ ಬಳಿಕ ಉಳಿದ ಶೇ.20ರಷ್ಟು ಪಾಲನ್ನು ಖರೀದಿ ಮಾಡಲಿದೆ. ಇದನ್ನೂ ಓದಿ: ಸಾಲದಲ್ಲಿ ವಿಐಎಲ್ ಕಂಪನಿ – ಸರ್ಕಾರಕ್ಕೆ ಷೇರು ಮಾರಲು ಮುಂದಾದ ಬಿರ್ಲಾ 

    ಉಡುಪಿಯ ಚಿಟ್ಪಾಡಿಯಲ್ಲಿ 1996ರಲ್ಲಿ ಸ್ಥಾಪನೆಗೊಂಡಿದ್ದ ರೊಬೊಸಾಫ್ಟ್ ಬಳಿಕ ಸಂತೆಕಟ್ಟೆಯ ಬಳಿ ಅತ್ಯಾಧುನಿಕ ವಿನ್ಯಾಸದ ಕಟ್ಟಡಕ್ಕೆ ಸ್ಥಳಾಂತರಗೊಂಡಿತ್ತು.

    ಪ್ರೊಡಕ್ಟ್ ಅಡ್ವೈಸರಿ, ಡಿಸೈನ್, ಅನಾಲಿಟಿಕ್ಸ್ ನಲ್ಲಿ ಪರಿಣಿತಿಯನ್ನು ಕಂಪನಿ ಹೊಂದಿದೆ. ಉಡುಪಿಯಲ್ಲಿ ಕೇಂದ್ರ ಕಚೇರಿಯಿದ್ದು, ಬೆಂಗಳೂರು ಹಾಗೂ ಮುಂಬೈನಲ್ಲಿ ಡೆಲಿವರಿ ಕೇಂದ್ರ ಹಾಗೂ ಅಮೆರಿಕ ಜಪಾನ್ ಸೇರಿದಂತೆ ಹಲವೆಡೆ ಮಾರಾಟ ಕೇಂದ್ರಗಳನ್ನು ಹೊಂದಿದೆ.

    ರೊಬೊಸಾಫ್ಟ್ ಕಂಪನಿಯಲ್ಲಿ 1 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳು ದುಡಿಯುತ್ತಿದ್ದು ಜಪಾನ್ ಕಂಪನಿ ಖರೀದಿಯಿಂದ ಅಮೆರಿಕ, ಯುರೋಪ್, ಜಪಾನಿನಲ್ಲಿ ಕಾರ್ಯವ್ಯಾಪಿ ವಿಸ್ತರಣೆಯಾಗಲಿದೆ.

  • ಟೋಕಿಯೋ ಒಲಿಂಪಿಕ್ಸ್: ಈ ಬಾರಿ ಪದಕಕ್ಕೆ ಕೊರಳೊಡ್ಡುವಂತಿಲ್ಲ ತಾವೇ ಧರಿಸಿಕೊಂಡರಾಯಿತು!

    ಟೋಕಿಯೋ ಒಲಿಂಪಿಕ್ಸ್: ಈ ಬಾರಿ ಪದಕಕ್ಕೆ ಕೊರಳೊಡ್ಡುವಂತಿಲ್ಲ ತಾವೇ ಧರಿಸಿಕೊಂಡರಾಯಿತು!

    ಟೋಕಿಯೋ: ವಿಶ್ವದ ಸಾವಿರಾರು ಕ್ರೀಡಾಪಟುಗಳು ಒಂದೆಡೆ ಸೇರುವ ಕ್ರೀಡಾ ಜಾತ್ರೆ ಜಪಾನ್‍ನ ಟೋಕಿಯೋದಲ್ಲಿ ಆರಂಭವಾಗಿದೆ. ಈ ಬಾರಿಯ ಒಲಿಪಿಂಕ್ಸ್ ಹಲವು ವಿಶೇಷತೆಯಿಂದ ಕೂಡಿದ್ದು, ಪ್ರಮುಖವಾಗಿ ಹಿಂದಿದ್ದಂತಹ ವಿಜಯ ವೇದಿಕೆಯ ಸಂಭ್ರಮ ಈ ಬಾರಿ ಸ್ವಲ್ಪ ಕಳೆಗುಂದಲಿದೆ.

    ಈ ಹಿಂದಿನ ಎಲ್ಲಾ ಒಲಿಂಪಿಕ್ಸ್ ನಲ್ಲಿ ಪದಕ ವಿಜೇತ ಕ್ರೀಡಾಪಟುಗಳು ವಿಜಯ ವೇದಿಕೆಗೆ ಏರಿ ಸಂಭ್ರಮ ಪಡುತ್ತಿದ್ದರು. ಆದರೆ ಈ ಬಾರಿ ವಿಜಯ ವೇದಿಕೆಯ ಸಂಭ್ರಮ ಅಷ್ಟು ಸಿಗಲಾರದು. ಪ್ರತಿ ವರ್ಷ ವಿಜೇತರು ವಿಜಯವೇದಿಕೆ ಏರಿ ಪದಕ್ಕಾಗಿ ಕೊರಳೊಡ್ಡುತ್ತಿದ್ದರು. ಅತಿಥಿಗಳು ಪದಕ ಪ್ರಧಾನ ಮಾಡುತ್ತಿದ್ದರು. ಆದರೆ ಈ ಭಾರಿ ವಿಜೇತರೆ ತಮ್ಮ ಕೊರಳಿಗೆ ತಮ್ಮ ಪದಕ ಧರಿಸುವಂತಾಗಿದೆ. ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್-21ನೇ ಕ್ರಮಾಂಕದಲ್ಲಿ ಧ್ವಜ ಹಿಡಿದು ಆಗಮಿಸಿದ ಭಾರತ ತಂಡ

    ಹೌದು ಕೊರೊನಾದಿಂದಾಗಿ ಒಂದು ವರ್ಷಗಳ ಬಳಿಕ ಆರಂಭವಾದ ಟೋಕಿಯೋ ಒಲಿಂಪಿಕ್ಸ್ ಗೆ ಕೊರೊನಾ ಕಾಟ ಕೊಡುತ್ತಿದೆ. ಹಲವು ದೇಶದ ಕ್ರೀಡಾಪಟುಗಳು ಅಂತಿಮ ಕ್ಷಣದಲ್ಲಿ ಕೊರೊನಾದಿಂದಾಗಿ ಹೊರ ಬಿದ್ದಿದ್ದಾರೆ. ಈ ನಡುವೆ ಹೊಸ ನಿಯಮದಂತೆ ಈ ಬಾರಿ ಸಾಮಾಜಿಕ ಅಂತರ ಕಾಯ್ದುಕೊಂಡು ಸುರಕ್ಷಿತವಾಗಿ ಒಲಿಂಪಿಕ್ಸ್ ನಡೆಸಲು ಒಲಿಂಪಿಕ್ಸ್ ಮಂಡಳಿ ನಿರ್ಧರಿಸಿದೆ. ಹಾಗಾಗಿ ಪ್ರತಿವರ್ಷದಂತೆ ಇದ್ದಂತಹ ವಿಜಯ ವೇದಿಕೆಯ ಸಂಭ್ರಮ ಈ ಬಾರಿ ಕಾಣಸಿಗದಾಗಿದೆ.

    ಈ ಹಿಂದೆ ಪದಕ ಗೆದ್ದ ಅಥ್ಲೀಟ್ಸ್‍ಗಳು ಬಂದು ವಿಜಯ ವೇದಿಕೆಗೆ ಏರಿ ಅಲ್ಲಿ ಅತಿಥಿಗಳಿಂದ ಪದಕ ಹಾಕಿಸಿಕೊಂಡು ಕೈ ಕುಲುಕಿ, ಅಪ್ಪಿಕೊಂಡು ಸಂಭ್ರಮಪಡುತ್ತಿದ್ದರು. ಆದರೆ ಈ ಬಾರಿ ಈ ಸಂಭ್ರಮವಿಲ್ಲ. ಪದಕ ಗೆದ್ದವರು ಸಾಮಾಜಿಕ ಅಂತರ ಕಾಯ್ದುಕೊಂಡು ರೂಪಿಸಿರುವ ವಿಜಯ ವೇದಿಕೆಯ ಬಳಿ ತೆರಳಿ ಮುಂದೆ ಇಟ್ಟಿರುವ ಮೂರು ಪದಕಗಳಲ್ಲಿ ತಮಗೆ ಸಿಕ್ಕಿರುವ ಪದಕ ಧರಿಸಿ ನಿಲ್ಲಬೇಕು. ಇದನ್ನು ಹೊರತು ಪಡಿಸಿ ಸಹ ವಿಜೇತರಿಗೂ ಕೂಡ ಕ್ರೀಡಾಪಟುಗಳು ಕೈ ಕುಲುಕಿ ಅಭಿನಂದಿಸುವ ಕ್ರಮವನ್ನು ನಿಷೇಧಿಸಲಾಗಿದೆ. ಹಾಗಾಗಿ ಈ ಬಾರಿ ವಿಜಯ ವೇದಿಕೆ ತನ್ನ ಹಳೆಯ ಖದರ್, ಕಳೆದುಕೊಂಡಂತಾಗಿದೆ.

  • ಟೋಕಿಯೋ ಒಲಿಂಪಿಕ್ಸ್-21ನೇ ಕ್ರಮಾಂಕದಲ್ಲಿ ಧ್ವಜ ಹಿಡಿದು ಆಗಮಿಸಿದ ಭಾರತ ತಂಡ

    ಟೋಕಿಯೋ ಒಲಿಂಪಿಕ್ಸ್-21ನೇ ಕ್ರಮಾಂಕದಲ್ಲಿ ಧ್ವಜ ಹಿಡಿದು ಆಗಮಿಸಿದ ಭಾರತ ತಂಡ

    ಟೋಕಿಯೋ: 2021ರ ಕ್ರೀಡಾ ಜಾತ್ರೆ ಟೋಕಿಯೋ ಒಲಿಂಪಿಕ್ಸ್ ಸರಳವಾಗಿ ಇಂದು ಉದ್ಘಾಟನೆಗೊಂಡಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾರತದ 20 ಮಂದಿ ಅಥ್ಲೀಟ್ಸ್ ಗಳು ಭಾಗವಹಿಸಿದರು. 21ನೇ ಕ್ರಮಾಂಕದಲ್ಲಿ ಭಾರತ ತಂಡ ತ್ರಿವರ್ಣ ಧ್ವಜ ಹಿಡಿದು ಪಥಸಂಚಲನದಲ್ಲಿ ಭಾಗವಹಿಸಿತು.

    ಜಪಾನ್‍ನ ಟೋಕಿಯೋದಲ್ಲಿ 2020ರಲ್ಲಿ ನಡೆಯ ಬೇಕಾಗಿದ್ದ ಒಲಿಂಪಿಕ್ಸ್ ಕ್ರೀಡಾಕೂಟ ಕೊರೊನಾದಿಂದಾಗಿ ಒಂದು ವರ್ಷದ ಬಳಿಕ ಇಂದು ಅಧಿಕೃತವಾಗಿ ಉದ್ಘಾಟನೆಗೊಂಡು ಆರಂಭಗೊಂಡಿದೆ. ಉದ್ಘಾಟನ ಸಮಾರಂಭದ ಪಥಸಂಚಲನದಲ್ಲಿ ಭಾರತ 20 ಮಂದಿ ಕ್ರೀಡಾ ಪಟುಗಳು ಭಾಗವಹಿಸಿದ್ದರು. ಹಾಕಿ ತಂಡದ ನಾಯಕ ಮನ್‍ಪ್ರೀತ್ ಸಿಂಗ್ ಮತ್ತು ಬಾಕ್ಸರ್ ಮೇರಿ ಕೋಮ್ ಭಾರತ ತ್ರಿವರ್ಣ ಧ್ವಜ ಹಿಡಿದು ಜಪಾನ್‍ನ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಹೆಜ್ಜೆ ಇಟ್ಟರು. ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್ ಪದಕಕ್ಕೆ ಮುತ್ತಿಕ್ಕಲು ಸಜ್ಜಾದ ಭಾರತೀಯ ಕ್ರೀಡಾಪಟುಗಳು

    ಜಪಾನಿನ ವರ್ಣಮಾಲೆಯ ಅಕ್ಷರದ ಕ್ರಮದಂತೆ ರಾಷ್ಟ್ರಗಳ ಪಥಸಂಚಲನ ನಡೆಯಿತು. ಈ ಪ್ರಕಾರ ಭಾರತಕ್ಕೆ ವರ್ಣಮಾಲೆಯ 21 ಅಕ್ಷರವಾಗಿ ಗಮನ ಸೆಳೆಯಿತು. ಈ ಬಾರಿ ಕೊರೊನಾದಿಂದಾಗಿ ಸರಳವಾಗಿ ಆರಂಭಕಂಡ ಒಲಿಂಪಿಕ್ಸ್ ನಲ್ಲಿ ಕೆಲ ಸಣ್ಣ ಪುಟ್ಟ ಕಾರ್ಯಕ್ರಮಗಳು ನಡೆಯಿತು. ಒಲಿಂಪಿಕ್ಸ್ ರಿಂಗ್‍ನಲ್ಲಿ ನೃತ್ಯ, ಲೈಟಿಂಗ್ ಕಲರವ ಸೆರಿದಂತೆ ಕೆಲ ಅಚ್ಚುಕಟ್ಟಾದ ಕಾರ್ಯಕ್ರಮಗಳು ನೋಡುಗರ ಗಮನಸೆಳೆಯಿತು.

  • ಟೋಕಿಯೋ ಒಲಿಂಪಿಕ್ಸ್ ಪದಕಕ್ಕೆ ಮುತ್ತಿಕ್ಕಲು ಸಜ್ಜಾದ ಭಾರತೀಯ ಕ್ರೀಡಾಪಟುಗಳು

    ಟೋಕಿಯೋ ಒಲಿಂಪಿಕ್ಸ್ ಪದಕಕ್ಕೆ ಮುತ್ತಿಕ್ಕಲು ಸಜ್ಜಾದ ಭಾರತೀಯ ಕ್ರೀಡಾಪಟುಗಳು

    ಟೋಕಿಯೋ: 2021ರ ಟೋಕಿಯೋ ಒಲಿಂಪಿಕ್ಸ್‍ಗೆ ಕ್ಷಣಗಣನೆ ಆರಂಭವಾಗಿದೆ. ಇನ್ನೂ ಕೇವಲ ಕೆಲವೇ ಗಂಟೆಗಳು ಮಾತ್ರ ಭಾಗಿ ಉಳಿದುಕೊಂಡಿರುವಂತೆ, ಭಾರತ ಹಲವು ಕ್ರೀಡಾಪಟುಗಳು ಪದಕ ಬೇಟೆಯಾಡುವ ತವಕದಲ್ಲಿದ್ದಾರೆ.

    2020ರಲ್ಲಿ ನಡೆಯಬೇಕಿದ್ದ ಟೋಕಿಯೋ ಒಲಿಂಪಿಕ್ಸ್ ಕೊರೊನಾದಿಂದಾಗಿ ಒಂದು ವರ್ಷ ಮುಂದೂಡಲ್ಪಟ್ಟಿತ್ತು. ಈ ವರ್ಷ ಜುಲೈ 23ರಿಂದ ಆಗಸ್ಟ್ 8 ರವರೆಗೆ ಜಪಾನ್‍ನ ಟೋಕಿಯೋದಲ್ಲಿ ನಡೆಯುತ್ತಿದೆ.

    ಈಗಾಗಲೇ ಭಾರತದ 120 ಕ್ರೀಡಾಪಟುಗಳು ಟೋಕಿಯೋ ತಲುಪಿದ್ದಾರೆ. 120 ಕ್ರೀಡಾಪಟುಗಳ ಪೈಕಿ 5 ಮಂದಿ ಕನ್ನಡಿಗರು ಸೇರಿದ್ದಾರೆ. ಈ ಮೂಲಕ ಭಾರತ ಒಲಿಂಪಿಕ್ಸ್ ಇತಿಹಾಸದಲ್ಲಿ ಈ ಬಾರಿ ಅತೀ ಹೆಚ್ಚಿನ ಕ್ರೀಡಾಪಟುಗಳನ್ನು ಕಳುಹಿಸಿದೆ. ಈ ಬಾರಿ 68 ಪುರುಷ ಸ್ಪರ್ಧಿಗಳು ಮತ್ತು 52 ಮಹಿಳಾ ಸ್ಪರ್ಧಿಗಳು ವಿವಿಧ ಕ್ರೀಡೆಯಲ್ಲಿ ಭಾಗವಹಿಸಲಿದ್ದಾರೆ. ಇದಲ್ಲದೆ ಈ ಬಾರಿ ವಿಶೇಷವೆಂಬಂತೆ ಯುವ ಪಡೆ ಟೋಕಿಯೋಗೆ ತೆರಳಿದೆ. 120 ಕ್ರೀಡಾಪಟುಗಳ ಪೈಕಿ 10ಕ್ಕೂ ಹೆಚ್ಚು ಕ್ರೀಡಾಪಟುಗಳು 20 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, ಭಾರತ ಭವಿಷ್ಯದ ಕ್ರೀಡಾಪಟುಗಳಾಗಿ ಗುರುತಿಸಿಕೊಂಡಿದ್ದಾರೆ. ಕೊರೊನಾದಿಂದಾಗಿ ಬಹಳ ವಿಭಿನ್ನವಾಗಿ ಈ ಬಾರಿಯ ಒಲಿಂಪಿಕ್ಸ್ ಆಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಇಂಗ್ಲೆಂಡ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯದ ಬರೆ

    ಈಗಾಗಲೇ ಭಾರತದ ಸ್ಟಾರ್ ಆಟಗಾರರನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಈ ಕ್ರೀಡಾಪಟುಗಳಿಂದ ಪದಕ ನಿರೀಕ್ಷೆಗಳನ್ನು ಕ್ರೀಡಾ ತಜ್ಞರು ವ್ಯಕ್ತಪಡಿಸಿದ್ದಾರೆ. ಈ ವರ್ಷ ಎಲ್ಲ ಕ್ರೀಡಾಪಟುಗಳಿಗೆ ಅಭ್ಯಾಸಕ್ಕಾಗಿ ಸಾಕಷ್ಟು ಸಮಯವಕಾಶ ಸಿಕ್ಕಿರುವುದರಿಂದಾಗಿ ಪದಕ ಮುಡಿಗೇರಿಸಿಕೊಳ್ಳುವ ಅವಕಾಶವಿದೆ.

    ಭಾರತ ಸ್ಟಾರ್ ಅಥ್ಲೀಟ್‍ಗಳ ಪೈಕಿ ಪಿ.ವಿ ಸಿಂಧು ಬ್ಯಾಡ್ಮಿಂಟನ್, ಮೇರಿ ಕೋಮ್ ಬಾಕ್ಸಿಂಗ್, ಅಮಿತ್ ಫಂಗಲ್ ಬಾಕ್ಸಿಂಗ್, ಸಾಕ್ಷಿ ಮಲಿಕ್ ಕುಸ್ತಿ, ವಿನೇಶ್ ಪೊಗಾಟ್ ಕುಸ್ತಿ, ಭಜರಂಗ್ ಪೊನಿಯಾ ಕುಸ್ತಿ, ಮನು ಭಾಕರ್ ಶೂಟಿಂಗ್, ದೀಪಿಕಾ ಕುಮಾರಿ ಆರ್ಚರಿ, ಮೀರಾಬಾಯಿ ಚಾನು ವೇಟ್‍ಲಿಪ್ಟಿಂಗ್‍ನಲ್ಲಿ ಸ್ಪರ್ಧಿಸುತ್ತಿದ್ದು ಇವರೆಲ್ಲರ ಮೇಲೆ ಪದಕದ ನಿರೀಕ್ಷೆ ಇದೆ. ಇವರೊಂದಿಗೆ ಇನ್ನಿತರ ಯುವ ಕ್ರೀಡಾಪಟುಗಳು ಪದಕವನ್ನು ಮುಡಿಗೇರಿಸಿಕೊಳ್ಳಲಿ ಎಂಬುದು ನಮ್ಮೆಲ್ಲರ ಆಶಯ. ಆಲ್ ದಿ ಬೇಸ್ಟ್ ಇಂಡಿಯಾ.

  • ಹುಬ್ಬಳ್ಳಿಯಲ್ಲಿ ಅತ್ಯಾಧುನಿಕ ಟ್ರಕ್ ಟರ್ಮಿನಲ್ ನಿರ್ಮಾಣ: ಡಿ.ಎಸ್ ವೀರಯ್ಯ

    ಹುಬ್ಬಳ್ಳಿಯಲ್ಲಿ ಅತ್ಯಾಧುನಿಕ ಟ್ರಕ್ ಟರ್ಮಿನಲ್ ನಿರ್ಮಾಣ: ಡಿ.ಎಸ್ ವೀರಯ್ಯ

    ನವದೆಹಲಿ: ರಾಜ್ಯದಲ್ಲಿ ಶೀಘ್ರ ಮೂರು ಅತ್ಯಾಧುನಿಕ ಟ್ರಕ್ ಟರ್ಮಿನಲ್‍ಗಳನ್ನು ನಿರ್ಮಿಸಲಾಗುವುದು ಎಂದು ದೇವರಾಜ್ ಅರಸ್ ಟ್ರಕ್ ಟರ್ಮಿನಲ್ಸ್ ಅಧ್ಯಕ್ಷ ಡಿ.ಎಸ್ ವೀರಯ್ಯ ಹೇಳಿದ್ದಾರೆ.

    ನವದೆಹಲಿಯಲ್ಲಿ ಮಾತನಾಡಿದ ಡಿ.ಎಸ್ ವೀರಯ್ಯ ಅವರು, ರಾಜ್ಯದಲ್ಲಿ ಈಗಾಗಲೇ ನಾಲ್ಕು ಕಡೆ ಟ್ರಕ್ ಟರ್ಮಿನಲ್‍ಗಳನ್ನು ನಿರ್ಮಾಣ ಮಾಡಲಾಗಿದ್ದು ಅವು ಕಾರ್ಯ ನಿರ್ವಹಿಸುತ್ತಿದೆ. ಈಗ ಹೊಸಪೇಟೆ, ಹುಬ್ಬಳ್ಳಿ, ದಾಂಡೇಲಿಯಲ್ಲಿ ಹೊಸ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದರು.

    ಸದ್ಯ ನಿರ್ಮಾಣವಾಗಿರುವ ಟ್ರಕ್ ಟರ್ಮಿನಲ್‍ಗಳಲ್ಲಿ ಅತ್ಯಾಧುನಿಕ ವ್ಯವಸ್ಥೆಗಳಿಲ್ಲದ ಕಾರಣ ಚಾಲಕರಿಗೆ ತೊಂದರೆಗಳಾಗುತ್ತಿದೆ. ಹೀಗಾಗಿ ಜಪಾನ್ ಮಾಡೆಲ್ ಟ್ರಕ್ ಟರ್ಮಿನಲ್ ಮಾಡುವ ಉದ್ದೇಶವನ್ನು ಹೊಂದಲಾಗಿದೆ. ಇದಕ್ಕಾಗಿ ಜಪಾನ್ ಹೋಗಿ ಅಧ್ಯಯನ ಮಾಡಿಕೊಂಡು ಬರಲಾಗಿದ್ದು ಅದೇ ಮಾದರಿಯಲ್ಲಿ ಟರ್ಮಿನಲ್ ನಿರ್ಮಾಣ ಮಾಡಲಾಗುವುದು. ಜಪಾನ್ ಮಾದರಿಯ ಅತ್ಯಾಧುನಿಕ ಟರ್ಮಿನಲ್‍ನಲ್ಲಿ ಪೆಟ್ರೋಲ್ ಬಂಕ್, ಸಿನಿಮಾ ಹಾಲ್, ಡಾರ್ಮೆಟ್ರಿ, ಗ್ಯಾರೇಜ್, ವಿಶ್ರಾಂತಿ ಗೃಹ, ಜಿಮ್, ಪಾರ್ಕ್, ಹೋಟೆಲ್ ಸೇರಿ ಹಲವು ಉತ್ತಮ ವ್ಯವಸ್ಥೆ ಮಾಡಲಾಗುವುದು. ಇದರಿಂದ ಚಾಲಕರಿಗೆ ಹಲವು ವ್ಯವಸ್ಥೆ ಒಂದೇ ಕಡೆ ಸಿಗಲಿದೆ ಟ್ರಕ್ ಟರ್ಮಿನಲ್ ಬಗ್ಗೆ ಸರ್ಕಾರ ಹೆಚ್ಚು ಆಸಕ್ತಿವಹಿಸಿಲ್ಲ, ಟರ್ಮಿನಲ್‍ಗಳ ನಿರ್ಮಾಣದಿಂದ ಟ್ರಕ್ ನಿಲುಗಡೆ ಉತ್ತಮ ಸ್ಥಳಾವಕಾಶ ಸಿಗಲಿದೆ. ಇದರಿಂದ ರಸ್ತೆ ಅಪಘಾತ ತಪ್ಪಲಿದೆ. ಅನಗತ್ಯ ಟ್ರಾಫಿಕ್ ಜಾಮ್ ಮತ್ತು ವಾಯು ಮಾಲಿನ್ಯ ಕೂಡಾ ಕಡಿಮೆ ಆಗಲಿದೆ ಎಂದು ಮಾಹಿತಿ ನೀಡಿದರು.ಇದನ್ನೂ ಓದಿ: ಮೇಕೆದಾಟು ಯೋಜನೆಗೆ ಅಡ್ಡಿಪಡಿಸಲು ತಮಿಳುನಾಡು ಸರ್ಕಾರದಿಂದ ಹೊಸ ತಂತ್ರ

    ಈ ಎಲ್ಲ ಅಂಶಗಳನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದು 500 ಕೋಟಿ ಅನುದಾನ ಕೇಳಲಾಗಿತ್ತು, ಆದರೆ ಸರ್ಕಾರ 100 ಕೋಟಿ  ಅನುದಾನ ನೀಡಿದೆ. ಒಂದು ಟರ್ಮಿನಲ್ ನಿರ್ಮಾಣಕ್ಕೆ 40 ಕೋಟಿ ವೆಚ್ಚವಾಗಲಿದ್ದು, ಭೂಮಿ ಖರೀದಿಗೆ ಪ್ರತ್ಯೇಕ ಹಣದ ಅವಶ್ಯಕತೆ ಇದೆ. ಆರ್ಥಿಕ ಸಂಕಷ್ಟದ ನಡುವೆಯೂ ರಾಜ್ಯದ್ಯಾಂತ ಹೆಚ್ಚು ಅತ್ಯಾಧುನಿಕ ಟ್ರಕ್ ಟರ್ಮಿನಲ್ ನಿರ್ಮಿಸಲು ಚಿಂತಿಸಲಾಗಿದೆ ಎಂದು ವೀರಯ್ಯ ಹೇಳಿದರು.

  • ‘ಟ್ವಿಟ್ಟರ್ ಕಿಲ್ಲರ್’ಗೆ ಮರಣ ದಂಡನೆ – 9 ಜನರನ್ನ ಕೊಂದು ತುಂಡು ತುಂಡಾಗಿ ಕತ್ತರಿಸಿದ್ದ

    ‘ಟ್ವಿಟ್ಟರ್ ಕಿಲ್ಲರ್’ಗೆ ಮರಣ ದಂಡನೆ – 9 ಜನರನ್ನ ಕೊಂದು ತುಂಡು ತುಂಡಾಗಿ ಕತ್ತರಿಸಿದ್ದ

    – ಮನೆಯಲ್ಲಿದ್ದ ಕೋಲ್ಡ್ ಸ್ಟೋರೇಜ್‍ನಲ್ಲಿ ಹೆಣಗಳ ಸಂಗ್ರಹಣೆ
    – ಸಹಾಯಕ್ಕೆ ಬಂದವರನ್ನ ರೇಪ್‍ಗೈದು ಕೊಲ್ಲುತ್ತಿದ್ದ ಹಂತಕ

    ಟೋಕಿಯೋ: 2017ರಲ್ಲಿ ಸದ್ದು ಮಾಡಿದ್ದ ಟ್ವಿಟ್ಟರ್ ಕಿಲ್ಲರ್ ಗೆ ಟೋಕಿಯೋದ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ತಕಾಹಿರೋ ಶಿರೈಸಿ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲ್ಲ ಎಂದು ಸಹ ಹೇಳಿದ್ದಾನೆ. 2017ರಲ್ಲಿ ಇಡೀ ಜಪಾನ್ ದೇಶವನ್ನೇ ತಕಾಹಿರೋ ಬೆಚ್ಚಿ ಬೀಳುವಂತೆ ಮಾಡಿದ್ದನು.

    ಅಪರಾಧಿ ತಕಾಹಿರೋ ಟೋಕಿಯೋ ನಗರದ ಝಾಮಾ ಅಪಾರ್ಟ್‍ಮೆಂಟ್ ನಲ್ಲಿ ವಾಸವಾಗಿದ್ದನು. ಈತನ ಮನೆಯಲ್ಲಿರುವ ಕೋಲ್ಡ್ ಸ್ಟೋರೇಜ್ ನಲ್ಲಿ 8 ಯುವತಿಯರು, ಓರ್ವ ಯುವಕನ ಶವ ಪೊಲೀಸರು ವಶಕ್ಕೆ ಪಡೆದುಕೊಂಡು ಬಂಧಿಸಿದ್ದರು. ಇದೀಗ ಟೋಕಿ ಯೋ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಎಲ್ಲ ಕೊಲೆಗಳ ಆಯ ಉದ್ದೇಶಪೂರ್ವಕ ಮಾಡಿದ್ದಾನೆ ಎಂದು ತೀರ್ಪಿನಲ್ಲಿ ಹೇಳಿದೆ.

    ಟ್ವಿಟ್ಟರ್ ಕಿಲ್ಲರ್ ಹೆಸರು ಬಂದಿದ್ದೇಗೆ?: ತಕಾಹಿರೋ ಟ್ವಿಟ್ಟರ್ ನಲ್ಲಿ ಮಹಿಳೆಯರ ಜೊತೆ ಸ್ನೇಹ ಸಂಪಾದಿಸುತ್ತಿದ್ದನು. ನಂತರ ತನ್ನ ಖಾತೆಯಲ್ಲಿ ಆತ್ಮಹತ್ಯೆಗೆ ಸಂಬಂಧಿಸಿದ ಮೆಸೇಜ್, ಫೋಟೋ ಹಾಕಿಕೊಳ್ಳುತ್ತಿದ್ದನು. ಟ್ವಿಟ್ಟರ್ ನಲ್ಲಿ ಮೆಸೇಜ್ ಮಾಡುತ್ತಿದ್ದ ಯುವತಿಯರ ಬಳಿ ಸಹಾಯ ಕೇಳುತ್ತಿದ್ದನು. ಸಹಾಯಕ್ಕೆ ಬಂದ ಯುವತಿಯರನ್ನ ಅತ್ಯಾಚಾರ ಎಸಗಿ, ನಂತರ ಮೃತದೇಹವನ್ನ ತುಂಡು ತುಂಡಾಗಿ ಕತ್ತರಿಸಿ ಕೋಲ್ಡ್ ಸ್ಟೋರೇಜ್ ನಲ್ಲಿ ಇರಿಸುತ್ತಿದ್ದನು. ಓರ್ವ ಯುವತಿಯ ಗೆಳೆಯನನ್ನ ಸೇರಿದಂತೆ 9 ಜನರನ್ನ ತಕಾಹಿರೋ ಕೊಲೆ ಮಾಡಿದ್ದಾನೆ. ಹಾಗಾಗಿ ಈತನಿಗೆ ಟ್ವಿಟ್ಟರ್ ಕಿಲ್ಲರ್ ಎಂದೇ ಕರೆಯಾಲಾಗುತ್ತಿದೆ.

    ಪ್ರಕರಣದ ಆರಂಭದಲ್ಲಿ ತಕಾಹಿರೋ ಪರ ವಾದ ಮಂಡಿಸಿದ್ದ ವಕೀಲರು, ಆತ ಯಾರನ್ನೂ ಕೊಂದಿಲ್ಲ. ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗ್ತಿದ್ದವರಿಗೆ ತಕಾಹಿರೋ ಸಹಾಯ ಮಾಡುತ್ತಿದ್ದನು ಎಂದಿದ್ರು. ಆದ್ರೆ ನ್ಯಾಯಾಲಯ ಜಗತ್ತಿನಲ್ಲಿ ಯಾರಿಗೂ ಯಾರ ಜೀವ ತೆಗೆದುಕೊಳ್ಳುವ ಹಕ್ಕಿಲ್ಲ. ಈತ ಕೊಲೆ ಮಾಡಿದ 9 ಜನರ ಸಾವಿಗೆ ತಕಾಹಿರೋ ಕಾರಣ ಎಂದು ಹೇಳಿ ಶಿಕ್ಷೆ ಪ್ರಕಟಿಸಿದೆ.