Tag: japan

  • ನಾಳೆಯಿಂದ ಜಪಾನ್ ನಲ್ಲಿ ಕೆಜಿಎಫ್ ಸಿನಿಮಾ : 174 ಶೋಗಳು ನಿಗದಿ

    ನಾಳೆಯಿಂದ ಜಪಾನ್ ನಲ್ಲಿ ಕೆಜಿಎಫ್ ಸಿನಿಮಾ : 174 ಶೋಗಳು ನಿಗದಿ

    ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ (KGF) ಸರಣಿ ಸಿನಿಮಾಗಳು ರಿಲೀಸ್ ಆಗಿ ಹಲವು ವರ್ಷಗಳೇ ಕಳೆದಿವೆ. ಆದರೂ, ಅದರ ಕ್ರೇಜ್ ಇನ್ನೂ ನಿಂತಿಲ್ಲ. ಕೆಜಿಎಫ್ 1 ಮತ್ತು ಕೆಜಿಎಫ್ 2 ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಸಾಕಷ್ಟು ಕಮಾಯಿ ಮಾಡಿದವು. ಇದೀಗ ಈ ಎರಡೂ ಚಿತ್ರಗಳು ಜಪಾನ್ (Japan) ಭಾಷೆಗೆ ಡಬ್ ಆಗಿ ರಿಲೀಸ್ ಆಗುತ್ತಿವೆ.

    ಕೆಜಿಎಫ್ 1 ಮತ್ತು ಕೆಜಿಎಫ್ 2 ಎರಡೂ ಸಿನಿಮಾಗಳನ್ನು ಈಗಾಗಲೇ ಜಪಾನ್ ಭಾಷೆಗೆ ಡಬ್ ಮಾಡಿದ್ದು, ಏಕಕಾಲಕ್ಕೆ ಎರಡೂ ಚಿತ್ರಗಳು ಜುಲೈ 14ರಂದು ಬಿಡುಗಡೆ (Release) ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಜಪಾನ್ ನಲ್ಲಿ ಏಕಕಾಲಕ್ಕೆ ಸರಣಿ ಚಿತ್ರಗಳು ಬಿಡುಗಡೆ ಆಗುತ್ತಿರುವುದು ವಿಶೇಷ. ಈಗಾಗಲೇ ಈ ಕುರಿತು ಜಪಾನ್ ನಲ್ಲಿ ಪ್ರಚಾರ ಕಾರ್ಯ ಕೂಡ ಶುರು ಮಾಡಲಾಗಿದೆ. ಕೆಜಿಎಫ್ 1 ಸಿನಿಮಾ 91 ಶೋಗಳು ಹಾಗೂ ಕೆಜಿಎಫ್ 2 ಸಿನಿಮಾದ 85 ಶೋಗಳು ಮುಂಗಡವಾಗಿ ಈಗಾಗಲೇ ಬುಕ್ ಆಗಿವೆ.

    ಕೆಜಿಎಫ್ ಚಿತ್ರಗಳ ಮೂಲಕ ಪ್ಯಾನ್ ಇಂಡಿಯಾ ನೋಡುಗರನ್ನು ತಲುಪಿದ್ದರು ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ನಟ ಯಶ್ (Yash). ಕೆಜಿಎಫ್ 1 ಮಾಡಿದ ಮೋಡಿಯೇ ಕೆಜಿಎಫ್ 2 ಚಿತ್ರಕ್ಕೆ ಸಾಕಷ್ಟು ಪ್ಲಸ್ ಪಾಯಿಂಟ್ ಆಯಿತು. ಮೊದಲ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ತಂದುಕೊಟ್ಟ ಹಣದ ಎರಡರಷ್ಟು ಪಾರ್ಟ್ 2 ಮಾಡಿತು. ಹೀಗಾಗಿ ಎರಡೂ ಚಿತ್ರಗಳ ಮೂಲಕ ಕೇವಲ ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಕನ್ನಡ ಚಿತ್ರಗಳಿಗೆ ಬೇಡಿಕೆ ಬಂತು. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ನಟಿ, ಡೆಲಿವರಿ ಆಗ್ತಿದ್ದಂತೆ ಶೂಟಿಂಗ್ ಹಾಜರಾದ ಮಮತಾ

    ಆರ್.ಆರ್.ಆರ್ ಸಿನಿಮಾದ ನಂತರ ದಕ್ಷಿಣದ ಮತ್ತೊಂದು ಸಿನಿಮಾ ಜಪಾನ್ ಭಾಷೆಯಲ್ಲಿ ರಿಲೀಸ್ ಆಗುತ್ತಿರುವುದು ಗುರುತಿಸಬೇಕಾದ ಸಂಗತಿ. ಜುಲೈ 14 ರಂದು ರಿಲೀಸ್ ಆಗುತ್ತಿರುವ ಚಿತ್ರಕ್ಕಾಗಿ ಯಶ್ ಜಪಾನ್ ಭಾಷೆಯಲ್ಲೇ ವಿಡಿಯೋವೊಂದನ್ನು ಮಾಡಿ, ಸಿನಿಮಾ ನೋಡುವಂತೆ ಅಲ್ಲಿನ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

     

    ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಆರ್.ಆರ್.ಆರ್ ಸಿನಿಮಾ ಕೂಡ ಈ ಹಿಂದೆ ಜಪಾನ್ ಭಾಷೆಯಲ್ಲಿ ರಿಲೀಸ್ ಆಗಿತ್ತು. ನೂರು ಕೋಟಿಗೂ ಅಧಿಕ ಹಣವನ್ನು ಬಾಕ್ಸ್ ಆಫೀಸಿನಲ್ಲಿ ಲೂಟಿ ಮಾಡಿತ್ತು. ಆ ಸಿನಿಮಾ ಗೆಲುವು ಕಂಡ ಬೆನ್ನಲ್ಲೇ ಕೆಜಿಎಫ್ ಸಿನಿಮಾವನ್ನೂ ಜಪಾನ್ ಭಾಷೆಯಲ್ಲಿ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಇದೀಗ ನಾಳೆ ಸಿನಿಮಾ ರಿಲೀಸ್ ಆಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭೂಕಂಪ, ಸುನಾಮಿ ಸಂಭವಿಸಿದರೂ ಜಪಾನ್‌ನಲ್ಲಿ ಜಾಸ್ತಿ ಹಾನಿಯಾಗಲ್ಲ ಯಾಕೆ? ದೇಶ ಹೇಗೆ ಎದುರಿಸುತ್ತೆ?

    ಭೂಕಂಪ, ಸುನಾಮಿ ಸಂಭವಿಸಿದರೂ ಜಪಾನ್‌ನಲ್ಲಿ ಜಾಸ್ತಿ ಹಾನಿಯಾಗಲ್ಲ ಯಾಕೆ? ದೇಶ ಹೇಗೆ ಎದುರಿಸುತ್ತೆ?

    ತಿಹಾಸದ ಪುಟ ತೆರೆದು ನೋಡಿದರೆ ಜಪಾನ್‌ನಲ್ಲಿ (Japan) ಅದೆಷ್ಟೋ ಬಾರಿ ಭೀಕರ ಭೂಕಂಪ (Earthquake) ಹಾಗೂ ಸುನಾಮಿಗಳು (Tsunami) ಉಂಟಾಗಿವೆ. ಇಂತಹ ಪ್ರಾಕೃತಿಕ ವಿಕೋಪಗಳಿಂದ ಬಚಾವಾಗೋದು ಯಾರೊಬ್ಬರ ಕೈಯಲ್ಲೂ ಸಾಧ್ಯವಾಗದ ಮಾತು. ಜಪಾನ್‌ಗೆ ಇವೆಲ್ಲವನ್ನೂ ಎದುರಿಸೋದು ಬಿಟ್ಟರೆ ಬೇರೆ ದಾರಿಯೂ ಇಲ್ಲ. ಭೀಕರ ಭೂಕಂಪ ಹಾಗೂ ಸುನಾಮಿಯನ್ನು ಪ್ರತ್ಯಕ್ಷವಾಗಿ ನೋಡಿ, ಅನುಭವಿಸಿರೋ ಜಪಾನ್ ಇವೆಲ್ಲವನ್ನು ಹೇಗೆ ಎದುರಿಸುತ್ತೆ, ಯಾವೆಲ್ಲಾ ಕ್ರಮಗಳನ್ನು ದೇಶ ತೆಗೆದುಕೊಳ್ಳುತ್ತದೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ.

    ಕಳೆದ ಸಾವಿರ ವರ್ಷಗಳಲ್ಲಿ ಜಪಾನ್‌ನಲ್ಲಿ ನೂರಕ್ಕು ಹೆಚ್ಚು ಬಾರಿ ಸುನಾಮಿ ರುದ್ರತಾಂಡವವಾಡಿದೆ. ಇದಕ್ಕೆ ಸಿಲುಕಿ ಲಕ್ಷಾಂತರ ಜನರು ಬಲಿಯಾಗಿದ್ದಾರೆ. ವರ್ಷಗಳು ಕಳೆದಂತೆ ಜಪಾನ್‌ನಲ್ಲಿ ಸುನಾಮಿಯ ಅಪಾಯ ಹೆಚ್ಚುತ್ತಲೇ ಇದೆ. ಕಳೆದ ಒಂದೇ ವರ್ಷದಲ್ಲಿ ಜಪಾನ್‌ನಲ್ಲಿ 300ಕ್ಕೂ ಹೆಚ್ಚು ಭೂಕಂಪಗಳು ಸಂಭವಿಸಿವೆ.

    ಅರ್ಥ್‌ಕ್ವೇಕ್ ಪ್ರೂಫ್ ಕಟ್ಟಡ:
    ಜಪಾನ್‌ನಲ್ಲಿ ಭೂಕಂಪ ಎನ್ನೋದು ಎಷ್ಟು ಸಾಮಾನ್ಯ ಎನಿಸಿಬಿಟ್ಟಿದೆಯೆಂದರೆ ಇಲ್ಲಿನ ಪ್ರತಿ ದೈತ್ಯ ಕಟ್ಟಡಗಳನ್ನು ಕೆಲ ಮಾನದಂಡಗಳ ಅನುಗುಣವಾಗಿ ‘ಅರ್ಥ್‌ಕ್ವೇಕ್ ಪ್ರೂಫ್’ ಆಗಿ ಕಟ್ಟುವುದು ಕಡ್ಡಾಯ ಮಾಡಲಾಗಿದೆ. ಈ ಮೂಲಕ ಯಾವುದೇ ಗಳಿಗೆಯಲ್ಲಿ ಭೂಕಂಪವಾದರೂ ಆ ಕಟ್ಟಡಗಳು ಬೀಳದಂತೆ ತಡೆಯಲು ಸಾಧ್ಯವಾಗುತ್ತಿದೆ.

    2011ರ ಭೀಕರ ಸುನಾಮಿ:
    ಇತ್ತೀಚಿನ ಭೂಕಂಪದ ನಿದರ್ಶನಗಳನ್ನು ನೋಡೋದಾದ್ರೆ 2011ರಲ್ಲಿ ನಡೆದ ಸುನಾಮಿ ಅತ್ಯಂತ ಭೀಕರವಾಗಿತ್ತು. 2011ರ ಮಾರ್ಚ್ 11 ರಂದು ಓಶಿಕಾ ಪರ್ಯಾಯ ದ್ವೀಪದಿಂದ ಸಮುದ್ರದ 72 ಕಿ.ಮೀ ದೂರದಲ್ಲಿ ಬರೋಬ್ಬರಿ 9.1 ತೀವ್ರತೆಯ ಭೂಕಂಪ ಉಂಟಾಗಿತ್ತು. ಇದು 6 ನಿಮಿಷಗಳ ವರೆಗೆ ಮುಂದುವರಿದು ಭೀಕರ ಸುನಾಮಿಯನ್ನು ಹುಟ್ಟಿಸಿತು. ಇದು ಇಲ್ಲಿವರೆಗೆ ದಾಖಲಿಸಲಾದ ವಿಶ್ವದ 4ನೇ ಅತ್ಯಂತ ದೊಡ್ಡ ಭೂಕಂಪವೂ ಎನಿಸಿಕೊಂಡಿತ್ತು. ಇದರ ಅಲೆಯೇ ಬರೋಬ್ಬರಿ 180 ಅಡಿಗಳಷ್ಟು ಎತ್ತರವಾಗಿತ್ತು ಮಾತ್ರವಲ್ಲದೇ ಜಪಾನ್ ಭೂಪ್ರದೇಶದ 10 ಕಿ.ಮೀ ದೂರದವರೆಗೂ ತಲುಪಿತ್ತು.

    ಕೊನೆ ಗಳಿಗೆಯಲ್ಲಿ ಜನತೆಗೆ ಎಚ್ಚರಿಕೆ:
    ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ ಇಲ್ಲಿಯವರೆಗೆ ಭೂಕಂಪ ಯಾವಾಗ, ಎಲ್ಲಿ, ಎಷ್ಟು ತೀವ್ರವಾಗಿ ಸಂಭವಿಸಬಹುದು ಎಂಬುದನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. 2011ರಲ್ಲಿ ನಡೆದ ಭಯಾನಕ ಭೂಕಂಪದ ವೇಳೆ ಜಪಾನ್ ಕರಾವಳಿ ಭಾಗ ಸಂಡೈನ ನಿವಾಸಿಗಳಿಗೆ ಕೇವಲ 8 ನಿಮಿಷಗಳ ಮೊದಲು ಈ ಬಗ್ಗೆ ಎಚ್ಚರಿಕೆಯನ್ನು ನೀಡಲಾಗಿತ್ತು. ಸಾವಿರಾರು ಜನರಿಗೆ ಇದರಿಂದ ತಪ್ಪಿಸಿಕೊಂಡು ಓಡಿ ಹೋಗಲು ಅವಕಾಶವೂ ಸಿಕ್ಕಿರಲಿಲ್ಲ. ಈ ಮಾರಣಾಂತಿಕ ಸುನಾಮಿಯಿಂದಾಗಿ 18 ಸಾವಿರಕ್ಕೂ ಅಧಿಕ ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದರು. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದರು.

    ಜಪಾನ್‌ನಲ್ಲಿ ಹೆಚ್ಚು ಭೂಕಂಪ ಯಾಕೆ?
    ಇಷ್ಟಕ್ಕೂ ಜಪಾನ್‌ನಲ್ಲಿ ಸಂಭವಿಸೋ ಭೂಕಂಪಕ್ಕೆ ಮುಖ್ಯ ಕಾರಣ ಅದಿರುವ ಸ್ಥಳ. ಪೆಸಿಫಿಕ್ ಸಾಗರದ ಸುತ್ತಲಿರುವ ಪ್ರದೇಶದಲ್ಲಿ ಭೂಮಿಯಲ್ಲಿಯೇ ಅತಿ ಹೆಚ್ಚು ಭೂಕಂಪ, ಜ್ವಾಲಾಮುಖಿ ಸ್ಫೋಟ ಹಾಗೂ ಸುನಾಮಿ ಉಂಟಾಗೋ ಸ್ಥಳವಾಗಿದೆ. ಭೂಗೋಳದಲ್ಲಿ ನೋಡಹೋದರೆ ಈ ಪ್ರದೇಶ ಉಂಗುರಾಕಾರದಲ್ಲಿ ಕಂಡುಬರುತ್ತದೆ. ಹೀಗಾಗಿ ಈ ಪ್ರದೇಶಕ್ಕೆ ‘ರಿಂಗ್ ಆಫ್ ಫೈರ್’ ಎಂದು ಕರೆಯಲಾಗುತ್ತದೆ. ಇಂತಹ ಪ್ರದೇಶದ ಬಳಿಯಲ್ಲಿಯೇ ಜಪಾನ್ ಇರುವುದರಿಂದ ಅಲ್ಲಿ ಅತಿ ಹೆಚ್ಚು ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತದೆ. ಇದನ್ನೂ ಓದಿ: 6 ಮಂದಿ ಪ್ರಯಾಣಿಕರಿದ್ದ ಹೆಲಿಕಾಪ್ಟರ್ ನೇಪಾಳದಲ್ಲಿ ನಾಪತ್ತೆ


    ಸಮುದ್ರ ಗೋಡೆಗಳು:
    ಜಪಾನ್ ತನ್ನ ಹೈರಿಸ್ಕ್ ಏರಿಯಾಗಳನ್ನು ಸುನಾಮಿಯಿಂದ ರಕ್ಷಿಸಿಕೊಳ್ಳಲು ಹೆಚ್ಚಿನ ಕರಾವಳಿ ಭಾಗಗಳಲ್ಲಿ ಸಮುದ್ರ ಗೋಡೆಗಳನ್ನು (Sea Wall) ನಿರ್ಮಿಸಿದೆ. ಇದು ಇತ್ತೀಚಿನ ರಕ್ಷಣಾ ವಿಧಾನವಾಗಿರದೇ ಹಲವು ವರ್ಷಗಳಿಂದಲೇ ಜಪಾನ್ ಕರಾವಳಿ ತೀರದ ಭಾಗವೆನಿಸಿಕೊಂಡಿದೆ. ನೂರಾರು ವರ್ಷಗಳ ಹಿಂದೆ ಜಪಾನ್‌ನ ಸಣ್ಣ ಹಳ್ಳಿಯೊಂದರಲ್ಲಿ 2.4 ಕಿ.ಮೀ ಉದ್ದದ ಹಾಗೂ 10 ಮೀಟರ್ ಎತ್ತರದ ಗೋಡೆಯನ್ನು ಕರಾವಳಿಯುದ್ದಕ್ಕು ನಿರ್ಮಿಸಲಾಯಿತು. ಇದು ಸಮುದ್ರದ ಭಾರೀ ಅಲೆಗಳನ್ನು ತಡೆದು ನಿವಾಸಿಗಳನ್ನು ರಕ್ಷಿಸಿತು. ಇದಾದ ಬಳಿಕ ಜಪಾನ್‌ನ ಇತರ ಕರಾವಳಿ ಪ್ರದೇಶಗಳಲ್ಲೂ ಇದೇ ರೀತಿಯ ದೈತ್ಯ ಗೋಡೆಗಳನ್ನು ನಿರ್ಮಿಸಲಾಯಿತು. ಆದರೆ 2011ರಲ್ಲಿ ಸಂಭವಿಸಿದ ಸುನಾಮಿ ಈ ಗೋಡೆಗಳನ್ನೂ ಮೀರಿ ಅತ್ಯಂತ ಎತ್ತರದಿಂದ ಅಪ್ಪಳಿಸಿದ್ದರಿಂದ ಆಸ್ತಿ-ಪಾಸ್ತಿ ನಾಶ ಹಾಗೂ ಸಾವು-ನೋವುಗಳಿಗೆ ಕಾರಣವಾಯಿತು. ಹಲವೆಡೆ 10 ಮೀಟರ್ ಎತ್ತರದ ಈ ಗೋಡೆಗಳೂ ನಾಶವಾದವು. 2011ರ ಬಳಿಕ ಅಲ್ಲಿನ ಸರ್ಕಾರ ಪೂರ್ವ ಕರಾವಳಿ ಭಾಗದಲ್ಲಿ 400 ಕಿ.ಮೀ ಉದ್ದದ ಹಾಗೂ 15 ಮೀ. ಎತ್ತರದ ಮತ್ತಷ್ಟು ಸದೃಢ ಗೋಡೆಯನ್ನು ನಿರ್ಮಿಸಲು ನಿರ್ಧರಿಸಿತು.

    ‘ಸೀ ವಾಲ್’ ವಿನ್ಯಾಸ ಬದಲಾವಣೆ:
    ಭಯಾನಕ ಘಟನೆಯ ನಂತರ ಹಲವು ಸಂಶೋಧನೆಗಳಿಂದ ನೇರವಾದ ಗೋಡೆಗಳನ್ನು ನಿರ್ಮಿಸುವುದರಿಂದ ಅಲೆಗಳು ರಭಸವಾಗಿ ಅದಕ್ಕೆ ಡಿಕ್ಕಿ ಹೊಡೆಯುತ್ತವೆ ಹಾಗೂ ಹೆಚ್ಚಿನ ಒತ್ತಡ ಹಾಕುವುದರ ಮೂಲಕ ಅಲೆಗಳು ಮತ್ತಷ್ಟು ಎತ್ತರಕ್ಕೆ ಸಾಗಿ ಗೋಡೆಗಳನ್ನು ದಾಟುತ್ತವೆ ಎಂಬುದು ತಿಳಿದುಬಂತು. ಈ ಸಂಶೊಧನೆಯ ಬಳಿಕ ಸಮುದ್ರ ಗೋಡೆಗಳನ್ನು ಇದೀಗ ನೇರವಾಗಿ ನಿರ್ಮಿಸೋ ಬದಲು ಡೊಂಕಾದ ವಿನ್ಯಾಸದಲ್ಲಿ ನಿರ್ಮಿಸಲಾಗುತ್ತಿದೆ. ಇದು ಅಲೆಗಳು ಗೋಡೆಗೆ ಅಪ್ಪಳಿಸಿದಾಗ ಇದರ ಡೊಂಕಾದ ವಿನ್ಯಾಸ ನೀರನ್ನು ಯೂಟರ್ನ್ ಹೊಡೆಯುವಂತೆ ಮಾಡುತ್ತದೆ. ಹೀಗೆ ಯೂಟರ್ನ್ ಹೊಡೆದ ಒಂದು ಅಲೆ ಹಿಂದಿನಿಂದ ಬರುವ ಮತ್ತೊಂದು ಅಲೆಯ ಬಲವನ್ನು ಕುಗ್ಗಿಸುತ್ತದೆ. ಇನ್ನೂ ಹಲವು ಕರಾವಳಿ ಭಾಗಗಳಲ್ಲಿ ಈ ದೈತ್ಯ ಗೋಡೆಗಳನ್ನು ನಿರ್ಮಿಸುವ ಬದಲು ಬ್ರೇಕ್ ವಾಟರ್‌ಗಳೆಂಬ ಇತರ ವಿಧಾನಗಳನ್ನೂ ಅನುಸರಿಸಲಾಗುತ್ತಿದೆ. ಇದನ್ನೂ ಓದಿ: ರಾಂಗ್‌ ರೂಟ್‌ನಲ್ಲಿ ಬಂದ ಶಾಲಾ ಬಸ್‌ನಿಂದ ಕಾರಿಗೆ ಡಿಕ್ಕಿ – ಕಾರಿನಲ್ಲಿದ್ದ ಒಂದೇ ಕುಟುಂಬದ 6 ಮಂದಿ ಸಾವು

    ಇಂತದ ದೈತ್ಯ ಗೋಡೆಗಳಿದ್ದರೂ ಜಪಾನ್‌ನಲ್ಲಿ ಸುನಾಮಿಯ ಭೀತಿ ಎಂದೂ ಕಡಿಮೆಯಾಗಿಲ್ಲ. ಇನ್ನಷ್ಟು ಭೀಕರ ಸುನಾಮಿಗಳು ಮುಂದೆ ಹುಟ್ಟಿಕೊಂಡರೆ ಈ ಗೋಡೆಗಳೂ ಅವನ್ನು ಮೆಟ್ಟಿಸಲು ಸಾಧ್ಯವಾಗುವುದಿಲ್ಲ ಎಂಬ ಯೋಚನೆಯನ್ನು ದೇಶ ಈಗಾಗಲೇ ಮಾಡಿದೆ. ಒಂದು ವೇಳೆ ಅಂತಹ ಅನಾಹುತವಾದರೆ ಅದನ್ನು ತಡೆಯಲು ಮತ್ತೊಂದು ಉಪಾಯವನ್ನೂ ದೇಶ ಮಾಡಿದೆ. ಹಲವು ಹಾಟ್‌ಸ್ಪಾಟ್ ಪ್ರದೇಶಗಳಲ್ಲಿ ದಟ್ಟವಾದ ಕಾಡುಗಳನ್ನು ನಿರ್ಮಿಸಲಾಗಿದೆ. ಒಂದು ವೇಳೆ ದೈತ್ಯ ಗೋಡೆಗಳನ್ನು ಮೀರಿ ಸುನಾಮಿ ಅಪ್ಪಳಿಸಿದರೆ ಈ ಕಾಡುಗಳು ಆ ಅಲೆಗಳನ್ನು ತಕ್ಕಮಟ್ಟಿಗೆ ನಿಯಂತ್ರಿಸಲು ಸಾಧ್ಯವಾಗುತ್ತದೆ. ಮಾತ್ರವಲ್ಲದೇ ಅಲೆಗಳು ವಾಪಸ್ ಸಮುದ್ರ ಸೇರುವ ಸಂದರ್ಭ ತನ್ನೊಂದಿಗೆ ವಸ್ತುಗಳನ್ನು ಹೊತ್ತೊಯ್ಯುವುದನ್ನು ಇದು ತಡೆಯಲು ಸಹಾಯ ಮಾಡುತ್ತದೆ.

    ತನ್ನನ್ನು ತಾನು ಪ್ರಾಕೃತಿಕ ವಿಕೋಪಗಳಿಂದ ರಕ್ಷಿಸಿಕೊಳ್ಳಲು ಜಪಾನ್ ಎಲ್ಲಿಲ್ಲದ ಪ್ರಯತ್ನಗಳನ್ನು ಮಾಡುತ್ತಲೇ ಇದೆ. ಜಾಗತಿಕ ತಾಪಮಾನದಿಂದಾಗಿ ದಿನಕಳೆದಂತೆ ಸಮುದ್ರಮಟ್ಟ ಎತ್ತರಕ್ಕೇರುತ್ತಲೇ ಇದೆ. ಭೂಕಂಪಗಳು ಅಲ್ಲಿ ಸಾಮಾನ್ಯ ಎನಿಸಿಬಿಟ್ಟಿದೆ. ಭೀಕರ ಸುನಾಮಿಯಿಂದ ರಕ್ಷಿಸಿಕೊಳ್ಳಲು ಈ ಸೀ ವಾಲ್‌ಗಳು ಶಾಶ್ವತ ಪರಿಹಾರ ಅಲ್ಲ ಎಂಬುದು ತಿಳಿದಿದ್ದರೂ ಜಪಾನ್ ಕೋಟಿಗಟ್ಟಲೆ ಹಣ ಖರ್ಚು ಮಾಡಿ ಈ ವ್ಯವಸ್ಥೆಗಳನ್ನು ಮಾಡಿದೆ. ಇದರಿಂದ ಕನಿಷ್ಟಪಕ್ಷ ಜನತೆ ಅಲ್ಲಿಂದ ತಪ್ಪಿಸಿಕೊಂಡು ಸುರಕ್ಷಿತ ಪ್ರದೇಶಗಳಿಗೆ ತೆರಳಲು ಸ್ವಲ್ಪ ಸಮಯವಾದರೂ ಸಿಗುತ್ತದೆ ಎಂಬುದು ಅಲ್ಲಿನ ಅಭಿಪ್ರಾಯ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಪಾನ್ ನಲ್ಲಿ ಕೆಜಿಎಫ್ : ಜಪಾನ್ ಭಾಷೆಯಲ್ಲೇ ಚಿತ್ರ ನೋಡಿ ಎಂದ ಯಶ್

    ಜಪಾನ್ ನಲ್ಲಿ ಕೆಜಿಎಫ್ : ಜಪಾನ್ ಭಾಷೆಯಲ್ಲೇ ಚಿತ್ರ ನೋಡಿ ಎಂದ ಯಶ್

    ರ್.ಆರ್.ಆರ್ ಸಿನಿಮಾದ ನಂತರ ದಕ್ಷಿಣದ ಮತ್ತೊಂದು ಸಿನಿಮಾ ಜಪಾನ್ ಭಾಷೆಯಲ್ಲಿ ರಿಲೀಸ್ ಆಗುತ್ತಿದೆ. ಯಶ್ (Yash) ಮತ್ತು ಪ್ರಶಾಂತ್ ನೀಲ್ (Prashant Neel) ಕಾಂಬಿನೇಷನ್ ನ ‘ಕೆಜಿಎಫ್ 1’ (KGF) ಹಾಗೂ ‘ಕೆಜಿಎಫ್ 2’ ಚಿತ್ರವು ಜಪಾನ್ (Japan) ಭಾಷೆಗೆ ಡಬ್ ಆಗಿದ್ದು, ಶೀಘ್ರದಲ್ಲೇ ಸಿನಿಮಾ ರಿಲೀಸ್ ಆಗಲಿದೆಯಂತೆ. ಅದಕ್ಕಾಗಿಯೇ ಯಶ್ ಜಪಾನ್ ಭಾಷೆಯಲ್ಲೇ ವಿಡಿಯೋವೊಂದನ್ನು ಮಾಡಿ, ಸಿನಿಮಾ ನೋಡುವಂತೆ ಅಲ್ಲಿನ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

    ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಆರ್.ಆರ್.ಆರ್ ಸಿನಿಮಾ ಕೂಡ ಈ ಹಿಂದೆ ಜಪಾನ್ ಭಾಷೆಯಲ್ಲಿ ರಿಲೀಸ್ ಆಗಿತ್ತು. ನೂರು ಕೋಟಿಗೂ ಅಧಿಕ ಹಣವನ್ನು ಬಾಕ್ಸ್ ಆಫೀಸಿನಲ್ಲಿ ಲೂಟಿ ಮಾಡಿತ್ತು. ಆ ಸಿನಿಮಾ ಗೆಲುವು ಕಂಡ ಬೆನ್ನಲ್ಲೇ ಕೆಜಿಎಫ್ ಸಿನಿಮಾವನ್ನೂ ಜಪಾನ್ ಭಾಷೆಯಲ್ಲಿ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿತ್ತು. ಇದೀಗ ಸಿನಿಮಾ ರಿಲೀಸ್ ಮಾಡಲು ಹೊರಟಿದೆ.

    ಇದೇ ಜುಲೈ 14 ರಂದು ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾ ಕೂಡ ಜಪಾನ್ ಭಾಷೆಯಲ್ಲಿ ಡಬ್ ಆಗಿ ರಿಲೀಸ್ ಆಗುತ್ತಿದೆ. ಪಠಾಣ್ ಸಿನಿಮಾ ಕೂಡ ಈ ವರ್ಷ ಹಿಟ್ ಆದ ಬಾಲಿವುಡ್ ಸಿನಿಮಾಗಳಲ್ಲಿ ಮೊದಲ ಸ್ಥಾನದಲ್ಲಿದೆ. ಜಪಾನ್ ನಲ್ಲಿ ಶಾರುಖ್ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಹಾಗಾಗಿ ಶಾರುಖ್ ಖಾನ್ ಸಿನಿಮಾಗಳು ಜಪಾನ್ ಭಾಷೆಯಲ್ಲಿ ರಿಲೀಸ್ ಆಗುತ್ತಲೇ ಇರುತ್ತವೆ. ಇದನ್ನೂ ಓದಿ:‘ಟೋಬಿ’ ಶೆಟ್ಟರ ಕೆನ್ನೆಗೆ ಮುತ್ತಿಟ್ಟ ಚೈತ್ರಾ- ರಾಜ್ ಬಿ ಶೆಟ್ಟಿ ಸ್ಪಷನೆ

    ಜಪಾನ್ ಭಾಷೆಯಲ್ಲಿ ರಿಲೀಸ್ ಆಗುತ್ತಿರುವ ಮೊದಲ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಕೆಜಿಎಫ್.  ಈ ಹಿಂದೆ ಕೆಜಿಎಫ್ ಸಿನಿಮಾ 50ನೇ ದಿನದತ್ತ ದಾಪುಗಾಲಿಡುತ್ತಿರುವ ಸಂದರ್ಭದಲ್ಲಿ, ಜಪಾನ್‍ನ ಟೋಕಿಯೋದ ಚಿತ್ರಮಂದಿರವೊಂದರಲ್ಲಿ ಚಿತ್ರದ ಪ್ರದರ್ಶನ  ನಡೆದಿತ್ತು. ಜಪಾನ್‍ನಲ್ಲೂ ಅಪಾರ ಕನ್ನಡ ಅಭಿಮಾನಿಗಳು ಇದ್ದು, ಅವರು ಕೆಜಿಎಫ್ ಸಿನಿಮಾ ವೀಕ್ಷಿಸಿದ್ದರು.

    ಈ ವೇಳೆ ಅಲ್ಲಿನ ಕನ್ನಡಾಭಿಮಾನಿಗಳು ಯಶ್ ಜೊತೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಸಿನಿಮಾ ಚೆನ್ನಾಗಿದೆ, ಕನ್ನಡ ಭಾಷೆಯಲ್ಲಿ ನೋಡುತ್ತಿದ್ದೇವೆ ಎಂದು ಹೇಳಿ ಯಶ್ ಅವರಿಗೆ ಶುಭಾಶಯ ತಿಳಿಸಿದ್ದರು. ಅಲ್ಲದೇ ಇದೇ ವೇಳೆ ಅಭಿಮಾನಿಗಳು ಸಿನಿಮಾದ ಒಂದು ಡೈಲಾಗ್ ಹೇಳಿ ಎಂದು ಮನವಿ ಮಾಡಿಕೊಂಡಿದ್ದರು.

     

    ಅಭಿಮಾನಿಗಳ ಒತ್ತಾಯದ ಮೇರೆಗೆ ಯಶ್ ಫೋನ್ ಮೂಲಕವೇ ಡೈಲಾಗ್ ಹೇಳಿದ್ದಾರೆ. ಯಶ್ ಡೈಲಾಗ್ ಹೇಳಿದ ಬಳಿಕ ಚಿತ್ರಮಂದಿರದಲ್ಲಿದ್ದ ಅಭಿಮಾನಿಯೊಬ್ಬರು, ಯಶ್ ನನ್ನ ರಕ್ತಾನೂ ಕೆಂಪಗೇ ಇದೆಯಲ್ಲಾ ಎಂದು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಛತ್ತೀಸ್‌ಗಢದ ಮಾವಿನ ಮೇಳದಲ್ಲಿ ವಿಶ್ವದ ದುಬಾರಿ ಮಾವಿನ ಪ್ರದರ್ಶನ- ಕೆ.ಜಿಗೆ 2.70 ಲಕ್ಷ ರೂ.

    ಛತ್ತೀಸ್‌ಗಢದ ಮಾವಿನ ಮೇಳದಲ್ಲಿ ವಿಶ್ವದ ದುಬಾರಿ ಮಾವಿನ ಪ್ರದರ್ಶನ- ಕೆ.ಜಿಗೆ 2.70 ಲಕ್ಷ ರೂ.

    – ಮಿಯಾಝಾಕಿಯ ವಿಶೇಷತೆಯೇನು?

    ರಾಯ್ಪುರ: ವಿಶ್ವದಲ್ಲೇ ಅತ್ಯಂತ ದುಬಾರಿಯಾಗಿರುವ ಮಾವು ಎಂದರೆ ಅದು ಜಪಾನಿನ (Japan) ಮಿಯಾಝಾಕಿ (Miyazaki) ಮಾವಿನ ಹಣ್ಣು. ವಿದೇಶಿ ಮಾರುಕಟ್ಟೆಯಲ್ಲಿ ಸುಮಾರು 1.82 ಲಕ್ಷ ಮೌಲ್ಯವನ್ನು ಹೊಂದಿರುವ ಈ ದುಬಾರಿ ಮಾವನ್ನು ಛತ್ತೀಸ್‌ಗಢದ (Chattisgarh) ರಾಯ್ಪುರದಲ್ಲಿ (Raipur) ನಡೆದ ಮಾವಿನ ಮೇಳದಲ್ಲಿ ಪ್ರದರ್ಶನಕ್ಕೆ ಇರಿಸಲಾಗಿದೆ.

    ಜಪಾನ್ ಮೂಲದ ಮಿಯಾಝಾಕಿ ಮಾವು ವಿಶ್ವದಲ್ಲೇ ಅತ್ಯಂತ ದುಬಾರಿ ಮಾವು ಎಂಬ ಖ್ಯಾತಿಯನ್ನು ಹೊಂದಿದೆ. ಜೂನ್ 17ರಿಂದ 19ರ ವರೆಗೆ ಛತ್ತೀಸ್‌ಗಢದ ರಾಯ್ಪುರದಲ್ಲಿ ಮಾವಿನ ಮೇಳವನ್ನು (Mango Festival) ಆಯೋಜಿಸಲಾಗಿತ್ತು. ಈ ಮಾವಿನ ಮೇಳದಲ್ಲಿ ದುಬಾರಿ ಮಾವು ಮಿಯಾಝಾಕಿಯನ್ನು ಪ್ರದರ್ಶನಕ್ಕೆ ಇರಿಸಲಾಗಿತ್ತು. ಈ ಮಾವು ಕೆ.ಜಿಗೆ ಸುಮಾರು 2.70 ಲಕ್ಷ ರೂ. ಮೌಲ್ಯವನ್ನು ಹೊಂದಿದೆ ಎಂದು ಕಾರ್ಯಕ್ರಮದ ಸಂಘಟಕರು ತಿಳಿಸಿದ್ದಾರೆ. ಇದನ್ನೂ ಓದಿ: RAW ಸಂಸ್ಥೆಯ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ರವಿ ಸಿನ್ಹಾ ನೇಮಕ

    ಕೋಲ್ ಇಂಡಿಯಾದ (Coal India) ನಿವೃತ್ತ ಮ್ಯಾನೇಜರ್ ಆರ್‌ಪಿ ಗುಪ್ತ ಈ ದುಬಾರಿ ಮಾವನ್ನು ಮಾವಿನ ಮೇಳದಲ್ಲಿ ಪ್ರದರ್ಶನಕ್ಕೆ ಇಟ್ಟಿದ್ದು, ಈ ಮಾವನ್ನು ಅತ್ಯಂತ ಕಾಳಜಿಯಿಂದ ಬೆಳೆಸಬೇಕಾಗುತ್ತದೆ. ಈ ಮಾವನ್ನು ಕಾರ್ಪೊರೇಟ್‌ನ ಕೊಡುಗೆಯಾಗಿ ವ್ಯಾಪಾರ ಮಾಡಲಾಗುತ್ತಿದ್ದು, ಈ ಮಾವಿನ ಬೆಲೆ ಸಾಮಾನ್ಯ ಮಾವಿನ ಹಣ್ಣುಗಳಿಂತ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಏರ್‌ಬಸ್‌ ಜೊತೆ ಬರೋಬ್ಬರಿ 500 ವಿಮಾನ ಖರೀದಿಗೆ ಡೀಲ್‌ – ವಿಶ್ವದಾಖಲೆ ಬರೆದ ಇಂಡಿಗೋ

    ಸೂರ್ಯನ ಬೆಳಕು ಬಿದ್ದ ಮಾವಿನ ಭಾಗವು ಒಂದು ರೀತಿಯ ರುಚಿಯನ್ನು ನೀಡಿದರೆ ಮತ್ತೊಂದು ಭಾಗ ವಿಭಿನ್ನ ರುಚಿಯನ್ನು ನೀಡುತ್ತದೆ. ಇದು ಈ ಮಾವಿನ ವಿಶೇಷತೆಯಾಗಿದ್ದು, ಪ್ರದರ್ಶನದಲ್ಲಿ ಇರಿಸಲಾದ ಮಾವು 639 ಗ್ರಾಂ. ತೂಕವನ್ನು ಹೊಂದಿದೆ ಎಂದು ಆರ್‌ಪಿ ಗುಪ್ತ ತಿಳಿಸಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತದ ಬಳಿಕ ಎಚ್ಚೆತ್ತ ರೈಲ್ವೆ ಇಲಾಖೆ- ಟ್ರ್ಯಾಕ್‌ಗಳ ಡೀಪ್ ಸ್ಕ್ರೀನಿಂಗ್‌ಗೆ ನಿರ್ಧಾರ

  • ಮಹಿಳೆಯರ ಜೂನಿಯರ್ ಏಷ್ಯಾ ಕಪ್ – ಚೊಚ್ಚಲ ಟ್ರೋಫಿ ಗೆದ್ದ ಭಾರತ

    ಮಹಿಳೆಯರ ಜೂನಿಯರ್ ಏಷ್ಯಾ ಕಪ್ – ಚೊಚ್ಚಲ ಟ್ರೋಫಿ ಗೆದ್ದ ಭಾರತ

    ಟೋಕಿಯೊ: ಜಪಾನಿನ ಕಾಕಾಮಿಗಾರಾದಲ್ಲಿ ನಡೆದ ಮಹಿಳೆಯರ ಜೂನಿಯರ್ ಏಷ್ಯಾ ಕಪ್ ಹಾಕಿ (Womens Junior Asia Cup 2023 Hockey) ಟೂರ್ನಿಯ ಫೈನಲ್‌ನಲ್ಲಿ ದಕ್ಷಿಣ ಕೊರಿಯಾ ತಂಡವನ್ನ 2-1 ಗೋಲುಗಳ ಅಂತರದಲ್ಲಿ ಮಣಿಸುವ ಮೂಲಕ ಭಾರತ ತಂಡ (Indian Hockey Team) ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

    ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ಅನು (21) ಮತ್ತು ನೀಲಂ (40) ಅವರು ಭಾರತ ತಂಡದ ಪರ ಗೋಲುಗಳನ್ನು ದಾಖಲಿಸಿದರೆ, 4 ಬಾರಿಯ ಚಾಂಪಿಯನ್ ಆಗಿದ್ದ ದಕ್ಷಿಣ ಕೊರಿಯಾ (South Korea) ಪರ ಏಕೈಕ ಗೋಲನ್ನು ಸಿಯೊಯಾನ್ ಪಾರ್ಕ್ (24) ದಾಖಲಿಸಿದರು. ಇದಕ್ಕೂ ಮುನ್ನ ಶನಿವಾರ ಸೆಮಿಫೈನಲ್‌ನಲ್ಲಿ ಜಪಾನ್ ತಂಡವನ್ನು 1-0 ಯಿಂದ ಸೋಲಿಸಿ ಫೈನಲ್ ಪ್ರವೇಶಿಸಿದ್ದ ಭಾರತ ತಂಡ ವರ್ಷಾಂತ್ಯಕ್ಕೆ ನಡೆಯುವ ಜೂನಿಯರ್ ಮಹಿಳಾ ವಿಶ್ವಕಪ್‌ಗೂ (Womens Hockey World Cup 2023) ಅರ್ಹತೆ ಪಡೆದುಕೊಂಡಿತು.

    2012ರಲ್ಲಿ ಫೈನಲ್‌ಗೆ ತಲುಪಿದ್ದೇ ಭಾರತ ತಂಡದ ಇದುವರೆಗಿನ ಶ್ರೇಷ್ಠ ಸಾಧನೆಯಾಗಿತ್ತು. ಅಂದು ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ ಟೂರ್ನಿಯ ಫೈನಲ್ ಮ್ಯಾಚ್‌ನಲ್ಲಿ ಚೀನಾ ತಂಡದ ವಿರುದ್ಧ 2-5 ಗೋಲುಗಳಿಂದ ಸೋಲನುಭವಿಸಿತ್ತು. ಇದನ್ನೂ ಓದಿ: WTC: ಭಾರತಕ್ಕೆ ಹೀನಾಯ ಸೋಲು – 209 ರನ್‌ಗಳ ಭರ್ಜರಿ ಜಯ, ಆಸೀಸ್‌ಗೆ ಚೊಚ್ಚಲ ಟ್ರೋಫಿ

    ಏಷ್ಯಾಕಪ್ ಫೈನಲ್ ಮ್ಯಾಚ್‌ನ 22ನೇ ನಿಮಿಷದಲ್ಲಿ ಅನು ಪೆನಾಲ್ಟಿ ಕಾರ್ನರ್‌ನಲ್ಲಿ ಭಾರತದ ಪರ ಮೊದಲ ಗೋಲು ದಾಖಲಿಸುವ ಮೂಲಕ ಆರಂಭಿಕ ಮುನ್ನಡೆ ತಂದುಕೊಟ್ಟರು. ಅದಾದ ಮೂರೇ ನಿಮಿಷದಕ್ಕೆ ಎದುರಾಳಿ ತಂಡದ ಸಿಯೊಯಾನ್ ಪಾರ್ಕ್ ಸಹ ಮೊದಲ ಗೋಲು ಸಿಡಿಸಿ ಸಮಬಲ ಸಾಧಿಸಿದ್ದರು. ವಿರಾಮದ ನಂತರ 41ನೇ ನಿಮಿಷಕ್ಕೆ ದೊರೆತ ಪೆನಾಲ್ಟಿ ಕಾರ್ನರ್ ಅವಕಾಶದಲ್ಲಿ ಬಿರುಸಿನ ಹೊಡೆತ ಬಾರಿಸಿದ ನೀಲಂ ಮತ್ತೊಂದು ಗೋಲ್ ಬಾರಿಸುವ ಮೂಲಕ ಭಾರತಕ್ಕೆ ಮತ್ತೊಮ್ಮೆ ಮುನ್ನಡೆ ತಂದುಕೊಟ್ಟರು. ಎದುರಾಳಿ ತಂಡದ ಆಟಗಾರರು ಮತ್ತೊಮ್ಮೆ ಗೋಲ್ ಬಾರಿಸಲು ಸಾಕಷ್ಟು ಪ್ರಯತ್ನ ನಡೆಸಿದರೂ ಅವರನ್ನು ನಿಯಂತ್ರಿಸುವಲ್ಲಿ ಭಾರತ ತಂಡ ಯಶಸ್ವಿಯಾಯಿತು. ಇದರಿಂದ ಭಾರತ 2-1 ಅಂತರದಲ್ಲಿ ದಕ್ಷಿಣ ಕೊರಿಯಾ ವಿರುದ್ಧ ಜಯ ಸಾಧಿಸಿತು. ಇದನ್ನೂ ಓದಿ: WTC Final: ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರವೀಂದ್ರ ಜಡೇಜಾ

    ಭಾರತದ ಕೀರ್ತಿಪತಾಕೆ ಹಾರಿಸಿದ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, 2023ರ ಮಹಿಳಾ ಹಾಕಿ ಜೂನಿಯರ್ ಏಷ್ಯಾ ಕಪ್ ಗೆದ್ದ ನಮ್ಮ ಯುವ ಚಾಂಪಿಯನ್‌ಗಳಿಗೆ ಅಭಿನಂದನೆಗಳು. ಭಾರತ ತಂಡವು ಅಪಾರ ಪರಿಶ್ರಮ, ಪ್ರತಿಭೆ ಹಾಗೂ ಸಾಂಘಿಕತೆಯನ್ನು ಪ್ರದರ್ಶಿಸಿದೆ. ಯುವ ಚಾಂಪಿಯನ್‌ಗಳು ನಮ್ಮ ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು ಎಂದು ಅಭಿನಂದನೆ ಸಲ್ಲಿಸಿದ್ದಾರೆ.

  • ಜಪಾನ್ ಭಾಷೆಗೆ ಡಬ್ ಆಗಿ ರಿಲೀಸ್ ಆಗಲಿದೆ ಕೆಜಿಎಫ್ ಸಿನಿಮಾ

    ಜಪಾನ್ ಭಾಷೆಗೆ ಡಬ್ ಆಗಿ ರಿಲೀಸ್ ಆಗಲಿದೆ ಕೆಜಿಎಫ್ ಸಿನಿಮಾ

    ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ (KGF) ಸರಣಿ ಸಿನಿಮಾಗಳು ರಿಲೀಸ್ ಆಗಿ ಹಲವು ವರ್ಷಗಳೇ ಕಳೆದಿವೆ. ಆದರೂ, ಅದರ ಕ್ರೇಜ್ ಇನ್ನೂ ನಿಂತಿಲ್ಲ. ಕೆಜಿಎಫ್ 1 ಮತ್ತು ಕೆಜಿಎಫ್ 2 ಎರಡೂ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಸಾಕಷ್ಟು ಕಮಾಯಿ ಮಾಡಿದವು. ಇದೀಗ ಈ ಎರಡೂ ಚಿತ್ರಗಳು ಜಪಾನ್ (Japan) ಭಾಷೆಗೆ ಡಬ್ ಆಗಿ ರಿಲೀಸ್ ಆಗಲಿವೆ ಎನ್ನುವ ಮಾಹಿತಿ ಸಿಕ್ಕಿದೆ.

    ಕೆಜಿಎಫ್ 1 ಮತ್ತು ಕೆಜಿಎಫ್ 2 ಎರಡೂ ಸಿನಿಮಾಗಳನ್ನು ಈಗಾಗಲೇ ಜಪಾನ್ ಭಾಷೆಗೆ ಡಬ್ ಮಾಡಿದ್ದು, ಏಕಕಾಲಕ್ಕೆ ಎರಡೂ ಚಿತ್ರಗಳು ಜುಲೈ 14ರಂದು ಬಿಡುಗಡೆ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಜಪಾನ್ ನಲ್ಲಿ ಏಕಕಾಲಕ್ಕೆ ಸರಣಿ ಚಿತ್ರಗಳು ಬಿಡುಗಡೆ ಆಗುತ್ತಿರುವುದು ವಿಶೇಷ. ಈಗಾಗಲೇ ಈ ಕುರಿತು ಜಪಾನ್ ನಲ್ಲಿ ಪ್ರಚಾರ ಕಾರ್ಯ ಕೂಡ ಶುರು ಮಾಡಲಾಗಿದೆಯಂತೆ. ಇದನ್ನೂ ಓದಿ: ಅಂಬಿ ಪುತ್ರನ ಅದ್ದೂರಿ ಕಲ್ಯಾಣ- ಮದುವೆಯ ಕಲರ್‌ಫುಲ್ ಫೋಟೋಸ್

    ಕೆಜಿಎಫ್ ಚಿತ್ರಗಳ ಮೂಲಕ ಪ್ಯಾನ್ ಇಂಡಿಯಾ ನೋಡುಗರನ್ನು ತಲುಪಿದ್ದರು ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ನಟ ಯಶ್ (Yash). ಕೆಜಿಎಫ್ 1 ಮಾಡಿದ ಮೋಡಿಯೇ ಕೆಜಿಎಫ್ 2 ಚಿತ್ರಕ್ಕೆ ಸಾಕಷ್ಟು ಪ್ಲಸ್ ಪಾಯಿಂಟ್ ಆಯಿತು. ಮೊದಲ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ತಂದುಕೊಟ್ಟ ಹಣದ ಎರಡರಷ್ಟು ಪಾರ್ಟ್ 2 ಮಾಡಿತು. ಹೀಗಾಗಿ ಎರಡೂ ಚಿತ್ರಗಳ ಮೂಲಕ ಕೇವಲ ದೇಶದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಕನ್ನಡ ಚಿತ್ರಗಳಿಗೆ ಬೇಡಿಕೆ ಬಂತು.

    ಕೆಜಿಎಫ್ ನಂತರ ಪ್ರಶಾಂತ್ ನೀಲ್ (Prashant Neel) ಸಲಾರ್ ಸಿನಿಮಾದಲ್ಲಿ ತೊಡಗಿಕೊಂಡಿದ್ದರೆ, ಯಶ್ ಇನ್ನೂ ಯಾವುದೇ ಸಿನಿಮಾ ಘೋಷಣೆ ಮಾಡಿಲ್ಲ. ಹಾಗಂತ ಸುಮ್ಮನೆಯೂ ಕೂತಿಲ್ಲ. ಮತ್ತೆ ಅಚ್ಚರಿ ಮೂಡಿಸುವಂತಹ ಸಿನಿಮಾ ಮಾಡುವ ತಯಾರಿಯನ್ನು ಅವರು ಮಾಡಿಕೊಳ್ಳುತ್ತಿದ್ದಾರೆ. ಹೊಸ ಸಿನಿಮಾದ ಮಾಹಿತಿಯನ್ನು ಕೇಳಲು ಅವರ ಅಭಿಮಾನಿಗಳೂ ಕೂಡ ತುದಿಗಾಲಲ್ಲಿ ನಿಂತಿದ್ದಾರೆ.

  • ರಷ್ಯಾ ಯುದ್ಧ ಆರಂಭಿಸಿದ ಬಳಿಕ ಇದೇ ಮೊದಲ ಬಾರಿಗೆ ಉಕ್ರೇನ್‌ ಅಧ್ಯಕ್ಷ ಭೇಟಿಯಾದ ಮೋದಿ

    ರಷ್ಯಾ ಯುದ್ಧ ಆರಂಭಿಸಿದ ಬಳಿಕ ಇದೇ ಮೊದಲ ಬಾರಿಗೆ ಉಕ್ರೇನ್‌ ಅಧ್ಯಕ್ಷ ಭೇಟಿಯಾದ ಮೋದಿ

    ಟೋಕಿಯೊ: ಉಕ್ರೇನ್‌ (Ukrain) ಮೇಲೆ ರಷ್ಯಾ (Russia) ಯುದ್ಧ ಆರಂಭಿಸಿದ ನಂತರ ಇದೇ ಮೊದಲ ಬಾರಿಗೆ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ (Volodymyr Zelensky) ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

    ಜಪಾನಿನ (Japan) ಹಿರೋಷಿಮಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯ (G7 summit) ನೇಪಥ್ಯದಲ್ಲಿ ಪ್ರಧಾನಿ ಮೋದಿ ಹಾಗೂ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರನ್ನು ಇಂದು ಭೇಟಿಯಾದರು. ಕಳೆದ ವರ್ಷ ಫೆಬ್ರುವರಿಯಲ್ಲಿ ಉಕ್ರೇನ್ ಮೇಲೆ ರಷ್ಯಾದ ಆಕ್ರಮಣ ಪ್ರಾರಂಭವಾದ ನಂತರ ಉಭಯ ನಾಯಕರ ನಡುವಿನ ಮೊದಲ ವೈಯಕ್ತಿಕ ಭೇಟಿ ಇದಾಗಿದೆ. ಇದನ್ನೂ ಓದಿ: ಒಬಾಮಾ ಸೇರಿದಂತೆ 500 ಅಮೆರಿಕನ್ನರಿಗೆ ನಿರ್ಬಂಧ ಹೇರಿದ ರಷ್ಯಾ

    ಉಕ್ರೇನ್‌ನಲ್ಲಿನ ಯುದ್ಧವು ಇಡೀ ಜಗತ್ತಿಗೆ ದೊಡ್ಡ ಸಮಸ್ಯೆಯಾಗಿದೆ. ಇದು ಪ್ರಪಂಚದ ಮೇಲೆ ಹಲವಾರು ರೀತಿಯಲ್ಲಿ ಪರಿಣಾಮ ಬೀರಿದೆ. ಆದರೆ ನಾನು ಇದನ್ನು ರಾಜಕೀಯ ಅಥವಾ ಆರ್ಥಿಕ ಸಮಸ್ಯೆ ಎಂದು ಪರಿಗಣಿಸುವುದಿಲ್ಲ. ಇದು ನನಗೆ ಮಾನವೀಯತೆ ಮತ್ತು ಮಾನವೀಯ ಮೌಲ್ಯಗಳ ಸಮಸ್ಯೆಯಾಗಿದೆ. ಯುದ್ಧದ ನೋವು ನಮಗೆಲ್ಲರಿಗೂ ಚೆನ್ನಾಗಿ ತಿಳಿದಿದೆ. ಕಳೆದ ವರ್ಷ ನಮ್ಮ ಮಕ್ಕಳು ಉಕ್ರೇನ್‌ನಿಂದ ಹಿಂದಿರುಗಿದಾಗ ಮತ್ತು ಅಲ್ಲಿನ ಪರಿಸ್ಥಿತಿಗಳನ್ನು ವಿವರಿಸಿದಾಗ, ನಿಮ್ಮ ನಾಗರಿಕರ ವೇದನೆಯನ್ನು ನಾನು ಚೆನ್ನಾಗಿ ಅರ್ಥಮಾಡಿಕೊಳ್ಳಬಲ್ಲೆ. ಈ ಪರಿಸ್ಥಿತಿಯನ್ನು ಪರಿಹರಿಸಲು ಭಾರತ ಮತ್ತು ನಾನು ವೈಯಕ್ತಿಕವಾಗಿ ನಮ್ಮ ಸಾಮರ್ಥ್ಯದಲ್ಲಿ ಏನು ಬೇಕಾದರೂ ಮಾಡುತ್ತೇವೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಮೋದಿ ಅವರು ಝೆಲೆನ್ಸ್ಕಿಗೆ ತಿಳಿಸಿದ್ದಾರೆ.

    ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕೂಡ ಪಾಲ್ಗೊಂಡಿದ್ದ ಸಭೆಯ ಛಾಯಾಚಿತ್ರಗಳನ್ನು ಪ್ರಧಾನಿ ಕಾರ್ಯಾಲಯ ಹಂಚಿಕೊಂಡಿದೆ. ಮೂರು ರಾಷ್ಟ್ರಗಳ ಪ್ರವಾಸದ ಭಾಗವಾಗಿ ಜಿ7 ಶೃಂಗಸಭೆಯಲ್ಲಿ ಮೂರು ಸೆಷನ್‌ಗಳಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಜಪಾನ್‌ಗೆ ಭೇಟಿ ನೀಡಿದ್ದಾರೆ. ಉಕ್ರೇನ್‌ ಅಧ್ಯಕ್ಷರು ಸಹ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ: ಭಾರತ ಪಾಕ್‌ನೊಂದಿಗೆ ಸಾಮಾನ್ಯ ಬಾಂಧವ್ಯ ಬಯಸುತ್ತದೆ, ಆದರೆ… – ಮೋದಿ ಹೇಳಿದ್ದೇನು?

  • ಭಾರತ ಪಾಕ್‌ನೊಂದಿಗೆ ಸಾಮಾನ್ಯ ಬಾಂಧವ್ಯ ಬಯಸುತ್ತದೆ, ಆದರೆ… – ಮೋದಿ ಹೇಳಿದ್ದೇನು?

    ಭಾರತ ಪಾಕ್‌ನೊಂದಿಗೆ ಸಾಮಾನ್ಯ ಬಾಂಧವ್ಯ ಬಯಸುತ್ತದೆ, ಆದರೆ… – ಮೋದಿ ಹೇಳಿದ್ದೇನು?

    – ಹಿರೋಶಿಮಾ ನಗರದಲ್ಲಿ ಭಾರತೀಯರನ್ನ ಭೇಟಿಯಾದ ನಮೋ

    ಟೋಕಿಯೋ: ಅಣುಬಾಂಬ್ ಸ್ಫೋಟಗೊಂಡ ಜಪಾನ್ ದೇಶದ ಹಿರೋಶಿಮಾ (Hiroshima) ನಗರದಲ್ಲಿ ನಡೆಯುತ್ತಿರುವ G7 ಶೃಂಗಸಭೆಯಲ್ಲಿ (G7 Summit) ಪ್ರಧಾನಿ ಮೋದಿ (PM Nrendra Modi) ಪಾಲ್ಗೊಂಡಿದ್ದಾರೆ.

    ಶುಕ್ರವಾರದಿಂದ ಪ್ರಧಾನಿ ಮೋದಿಯವರ 6 ದಿನಗಳ ವಿದೇಶ ಪ್ರವಾಸ ಇವತ್ತಿಂದ ಶುರುವಾಗಿದೆ. ಹಿರೋಶಿಮಾದಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಈ ಶೃಂಗಸಭೆಯಲ್ಲಿ ಭಾರತ ವಿಶೇಷ ಆಹ್ವಾನಿತ ದೇಶವಾಗಿದೆ. ಪ್ರಧಾನಿ ಮೋದಿ 6 ದಿನಗಳ ಈ ಪ್ರವಾಸದಲ್ಲಿ ಹಿರೋಶಿಮಾದಲ್ಲಿ ಜಗತ್ತಿಗೆ ಶಾಂತಿ ಸಂದೇಶ ಸಾರಿದ ಮಹಾತ್ಮಾ ಗಾಂಧಿ ವಿಗ್ರಹವನ್ನು ಅನಾವರಣ ಮಾಡಲಿದ್ದಾರೆ. ಇದೇ ವೇಳೆ ಅಲ್ಲಿನ ಭಾರತೀಯರನ್ನೂ ಭೇಟಿಯಾಗಿದ್ದಾರೆ.

    ಸಭೆಗೆ ಹಾಜರಾಗುವುದಕ್ಕೂ ಮುನ್ನ `ನಿಕ್ಕಿ ಏಷ್ಯಾ’ಗೆ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ, ಭಾರತ ಮತ್ತು ಪಾಕಿಸ್ತಾನ, ಭಾರತ ಮತ್ತು ಚೀನಾ ಸಂಬಂಧದ ಕುರಿತು ಮಾತನಾಡಿದ್ದಾರೆ. ಇದನ್ನೂ ಓದಿ: 2,000 ರೂ. ಮುಖಬೆಲೆಯ ನೋಟ್ ಬ್ಯಾನ್ – ಕೇಂದ್ರ ಬಿಜೆಪಿ ವಿರುದ್ಧ ನಿಯೋಜಿತ ಸಿಎಂ ಸಿದ್ದರಾಮಯ್ಯ ಕಿಡಿ

    ಭಾರತವು ಪಾಕಿಸ್ತಾನದೊಂದಿಗೆ ಸಾಮಾನ್ಯ ಬಾಂಧವ್ಯ ಹೊಂದಲು ಬಯಸುತ್ತದೆ. ಆದ್ರೆ ಭಯೋತ್ಪಾದನೆ, ಹಗೆತನ ಮುಕ್ತ ವಾತಾವರಣ ಸೃಷ್ಟಿಸುವುದು ಅವರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಪಾಕಿಸ್ತಾನ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

    ಗಡಿಯಾಚೆಗಿನ ಭಯೋತ್ಪಾದನೆಗೆ ಪಾಕಿಸ್ತಾನದ ಬೆಂಬಲದ ಬಗ್ಗೆ ಭಾರತ ಪದೇ ಪದೇ ತನ್ನ ಕಳವಳ ವ್ಯಕ್ತಪಡಿಸಿದೆ. ಭಯೋತ್ಪಾದನೆ ಕುರಿತ ಮಾತುಕತೆಗೆ ಎಂದಿಗೂ ಭಾರತ ಪಾಕಿಸ್ತಾನದೊಂದಿಗೆ ಹೋಗುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಈ ತಿಂಗಳ ಆರಂಭದಲ್ಲಿಯೂ ಪಾಕ್ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಗೋವಾದಲ್ಲಿ ನಡೆದ ಎಸ್‌ಸಿಒ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಿದ್ದರು. ಆದ್ರೆ ಅವರೊಂದಿಗೆ ಯಾವುದೇ ದ್ವಿಪಕ್ಷೀಯ ಮಾತುಕತೆ ಸಹ ನಡೆದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಮಹಿಳೆಯರಿಗೆ ಬಳಸಿದ ಕಾಂಡೋಮ್, ಲೈಂಗಿಕ ಸಂದೇಶದ ಲೆಟರ್ ಪೋಸ್ಟ್ – ಯಾರು ಕಳಿಸಿದ್ದಾರೆ ಅನ್ನೋದೆ ಸಸ್ಪೆನ್ಸ್

    ಚೀನಾ ಸಂಬಂಧದ ಕುರಿತು ಮಾತನಾಡುತ್ತಾ, ಭಾರತವು ತನ್ನ ಸಾರ್ವಭೌಮತೆ ಮತ್ತು ಘನತೆಯನ್ನು ರಕ್ಷಿಸಲು ಸಂಪೂರ್ಣವಾಗಿ ಸಿದ್ಧ ಮತ್ತು ಬದ್ಧವಾಗಿದೆ. ಚೀನಾ ಸೇನೆಯ ಕ್ರಮಗಳ ನಂತರ 2020ರ ಬೇಸಿಗೆಯಲ್ಲಿ ಪೂರ್ವ ಲಡಾಖ್‌ನಲ್ಲಿ ಚೀನಾದೊಂದಿಗೆ ಬಿಕ್ಕಟ್ಟು ಭುಗಿಲೆದ್ದಿತು. ಆನಂತರ ನಡೆದ ಮಾತುಕತೆಗಳ ಬಳಿಕ ಕೆಲವು ಪ್ರದೇಶಗಳಿಂದ ಬೇರ್ಪಟ್ಟಿತು. ಈಗ ಸೇನೆಯ ಮಧ್ಯೆ ಘರ್ಷಣೆಗಳು ಆಗಾಗ್ಗೆ ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

  • ಆಸ್ಟ್ರೇಲಿಯಾದಲ್ಲಿ ನಿಗದಿಪಡಿಸಲಾಗಿದ್ದ ಕ್ವಾಡ್ ಶೃಂಗಸಭೆ ರದ್ದು

    ಆಸ್ಟ್ರೇಲಿಯಾದಲ್ಲಿ ನಿಗದಿಪಡಿಸಲಾಗಿದ್ದ ಕ್ವಾಡ್ ಶೃಂಗಸಭೆ ರದ್ದು

    ಕ್ಯಾನ್‌ಬೆರಾ: ಮುಂದಿನ ವಾರ ಸಿಡ್ನಿಯಲ್ಲಿ (Sydney) ನಡೆಯಬೇಕಿದ್ದ ಕ್ವಾಡ್ ಶೃಂಗಭೆಯನ್ನು (Quad Summit) ಆಸ್ಟ್ರೇಲಿಯಾ (Australia) ಬುಧವಾರ ರದ್ದುಗೊಳಿಸಿದೆ.

    ಸ್ವದೇಶದ ಆರ್ಥಿಕ ಸಮಸ್ಯೆಯ ಹಿನ್ನೆಲೆ ಅಮೆರಿಕದ (America) ಅಧ್ಯಕ್ಷ ಜೋ ಬೈಡನ್ (Joe Biden) ಆಸ್ಟ್ರೇಲಿಯಾ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿದ್ದ ಶೃಂಗಸಭೆಯನ್ನು ರದ್ದುಗೊಳಿಸಲಾಗಿದೆ.

    ಅಮೆರಿಕದಲ್ಲಿ ಸಾಲದ ಮಿತಿಯನ್ನು ತೆರವುಗೊಳಿಸುವ ಕುರಿತು ನಡೆಯುತ್ತಿರುವ ಚರ್ಚೆಯ ಹಿನ್ನೆಲೆ ಬೈಡನ್ ಆಸ್ಟ್ರೇಲಿಯಾ ಹಾಗೂ ಪಪುವಾ ನ್ಯೂಗಿನಿಯಾ ಭೇಟಿಗಳನ್ನು ರದ್ದುಗೊಳಿಸಿದ್ದಾರೆ. ಆದರೂ ಈ ವಾರಾಂತ್ಯ ಅವರು ಜಿ7 ಶೃಂಗಸಭೆಯಲ್ಲಿ (G7 Summit) ಪಾಲ್ಗೊಳ್ಳುವ ನಿರೀಕ್ಷೆಯಿದೆ.

    ಕ್ವಾಡ್ ಶೃಂಗಸಭೆಯ ರದ್ದು ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್, ಮುಂದಿನ ವಾರ ಸಿಡ್ನಿಯಲ್ಲಿ ಕ್ವಾಡ್ ನಾಯಕರ ಸಭೆ ನಡೆಯುವುದಿಲ್ಲ. ಬದಲಿಗೆ ನಾವು ಜಪಾನ್‌ನಲ್ಲಿ (Japan) ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಕ್ವಾಡ್ ನಾಯಕರೊಂದಿಗೆ ಆ ಚರ್ಚೆಯನ್ನು ನಡೆಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಹಿಂದೂ ಮಹಾಸಾಗರದಲ್ಲಿ ಚೀನಾದ ದೋಣಿ ಮುಳುಗಡೆ – 39 ಜನ ನಾಪತ್ತೆ

    ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಹೆಚ್ಚುತ್ತಿದ್ದ ಚೀನಾದ ಪ್ರಭಾವದ ಹಿನ್ನೆಲೆ 2017ರಲ್ಲಿ ಅಮೆರಿಕ, ಭಾರತ, ಜಪಾನ್ ಹಾಗೂ ಆಸ್ಟ್ರೇಲಿಯಾ ಕ್ವಾಡ್ ಒಕ್ಕೂಟವನ್ನು ರಚಿಸಲಾಯಿತು. ಭಾರತ ಹಾಗೂ ಆಸ್ಟ್ರೇಲಿಯಾ 7 ದೇಶಗಳ ಜಿ7 ನ ಸದಸ್ಯತ್ವ ಹೊಂದಿಲ್ಲ. ಆದರೂ ಮೇ 19 ರಿಂದ ಮೇ 21 ರವರೆಗೆ ಜಪಾನ್‌ನ ಹಿರೋಶಿಮಾದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಭಾಗವಹಿಸಲು ಇವೆರಡು ದೇಶಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ: ಅಮೆರಿಕಕ್ಕೆ ಹಾರಲಿದ್ದಾರೆ ರಾಹುಲ್ – 10 ದಿನ ಪ್ರವಾಸ

  • ಜಪಾನ್ ಅಭಿಮಾನಿಗಳಿಂದ ಡಾ.ರಾಜ್ ಹುಟ್ಟು ಹಬ್ಬ ಆಚರಣೆ

    ಜಪಾನ್ ಅಭಿಮಾನಿಗಳಿಂದ ಡಾ.ರಾಜ್ ಹುಟ್ಟು ಹಬ್ಬ ಆಚರಣೆ

    ಇಂದು ಡಾ.ರಾಜ್ ಕುಮಾರ್ (Dr. Rajkumar) ಅವರ 94ನೇ ಜನ್ಮದಿನ. ಕೇವಲ ದೇಶಾದ್ಯಂತ ಮಾತ್ರವಲ್ಲ, ವಿದೇಶಗಳಲ್ಲೂ ಅವರ ಅಭಿಮಾನಿಗಳು ಹುಟ್ಟುಹಬ್ಬವನ್ನು (Birthday) ಆಚರಿಸುತ್ತಿದ್ದಾರೆ. ಜಪಾನ್ ನಲ್ಲಿ ಅಣ್ಣಾವ್ರ ಅಭಿಮಾನಿಗಳು ರಾಜ್ ಕುಮಾರ್ ಫೋಟೋ ಮುಂದೆ ಕೇಕ್ ಕಟ್ ಮಾಡುವ ಮೂಲಕ ಹುಟ್ಟು ಹಬ್ಬ ಆಚರಿಸಿದ್ದಾರೆ. ಕನ್ನಡಿಗರ ಜೊತೆ ಸೇರಿಕೊಂಡ ಜಪಾನಿಯರು (Japan) ಸಂಭ್ರಮದಿಂದ ಡಾ.ರಾಜ್ ಅವರನ್ನು ಸ್ಮರಿಸಿದ್ದಾರೆ.

    ನಾಡಿನಾದ್ಯಂತ ಅಭಿಮಾನಿಗಳು ವಿಭಿನ್ನ ರೀತಿಯಲ್ಲಿ ಡಾ.ರಾಜ್ ಕುಮಾರ್ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದಾರೆ. ನೆಚ್ಚಿನ ನಟನ ಹೆಸರಿನಲ್ಲಿ ರಕ್ತದಾನ, ಅನ್ನದಾನ ಹಾಗೂ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಸಹಾಯ ಮಾಡುವ ಮೂಲಕ ಆಚರಿಸುತ್ತಿದ್ದಾರೆ. ನಿನ್ನೆಯಷ್ಟೇ ಅಣ್ಣಾವ್ರ ಮೊಮ್ಮಗನ ಹುಟ್ಟುಹಬ್ಬವನ್ನು ಆಚರಿಸಿದ್ದ ಅಭಿಮಾನಿಗಳು ಇಂದು ಮೇರುನಟನಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ. ಇದನ್ನೂ ಓದಿ:ಮೊದಲ ಮಗುವಿನ ನಿರೀಕ್ಷೆಯಲ್ಲಿ ಕನ್ನಡದ ನಟಿ ವಿದಿಶಾ ಶ್ರೀವಾಸ್ತವ

    ಕೆಲ ಅಭಿಮಾನಿಗಳು ಇದ್ದೂರಿನಲ್ಲೇ ಹುಟ್ಟು ಹಬ್ಬ ಆಚರಿಸುತ್ತಿದ್ದರೆ, ಇನ್ನೂ ಹಲವರು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ (Kantheerava Studio) ಡಾ.ರಾಜ್ ಕುಮಾರ್ ಸ್ಮಾರಕಕ್ಕೆ ಬಂದು ಪೂಜೆ ಸಲ್ಲಿಸುತ್ತಿದ್ದಾರೆ. ಬೆಳಗ್ಗೆಯಿಂದಲೇ ಸ್ಮಾರಕಕ್ಕೆ ಅಭಿಮಾನಿಗಳು ದಂಡು ಹರಿದು ಬಂದಿದೆ. ಸ್ಮಾರಕದ ಮುಂದೆಯೇ ಅನ್ನಸಂತರ್ಪಣೆ, ಕೇಕ್ ಕತ್ತರಿಸುವುದು ಹಾಗೂ ರಕ್ತದಾನ, ನೇತ್ರದಾನ ಶಿಬಿರಗಳನ್ನು ಆಯೋಜನೆ ಮಾಡಲಾಗಿದೆ.

    ಡಾ.ರಾಜ್ ಕುಟುಂಬದ ಸದಸ್ಯರು ಕೂಡ ಆಗಮಿಸಿ ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಪಕ್ಕದಲ್ಲೇ ಇರುವ ಪಾರ್ವತಮ್ಮ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಸಮಾಧಿಗಳಿಗೂ ಪೂಜೆ ಸಲ್ಲಿಸಿದ್ದಾರೆ. ಅಣ್ಣಾವ್ರ ಅಭಿಮಾನಿಗಳ ಜೊತೆ ಕುಟುಂಬದ ಸದಸ್ಯರು ಕೆಲಹೊತ್ತು ಇದ್ದರು.