ಚಿಕ್ಕೋಡಿ: ಉಚ್ಚಾಟನೆಯ ವಿಷಯ ತಿಳಿಯುತ್ತಿದ್ದಂತೆ ಕೂಡಲಸಂಗಮ ಪೀಠದ (Panchamasali Jagadguru Peeta) ಜಯಮೃತ್ಯುಂಜಯ ಶ್ರೀಗಳು (Jaya Mruthyunjaya Swamiji) ಬೇಸರ ವ್ಯಕ್ತಪಡಿಸಿದರು.
ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ ಅಳಗವಾಡಿ ಗ್ರಾಮದ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಸ್ವಾಮೀಜಿ ಉಚ್ಚಾಟನೆ ವಿಷಯ ತಿಳಿಯುತ್ತಿದ್ದಂತೆ ಶ್ರೀಗಳ ಧ್ವನಿಯಲ್ಲಿ ಹತಾಶೆ ಭಾವ ಮೂಡಿತ್ತು. ಬದಲಾವಣೆ ಬಯಸಿದಂತಹ ವ್ಯಕ್ತಿಗಳಿಗೆ ತೊಂದರೆ ಕೊಡುವುದು ಸಹಜ. ಅದು ಯಾರನ್ನೂ ಬಿಟ್ಟಿಲ್ಲ. ಬಸವಣ್ಣನವರನ್ನು ಬಿಟ್ಟಿಲ್ಲ, ಅಂಬೇಡ್ಕರ್ರವರನ್ನು ಸಹ ಬಿಟ್ಟಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಬಸವಜಯಮೃತ್ಯುಂಜಯ ಶ್ರೀ ಉಚ್ಚಾಟನೆ
ಕಳೆದ ಕೆಲ ದಿನಗಳಿಂದ ಸ್ವಾಮೀಜಿ ಮತ್ತು ಕಾಶಪ್ಪನವರ ನಡುವೆ ನಡೆಯುತ್ತಿದ್ದ ವಿವಾದ ಇದೀಗ ಉಚ್ಚಾಟನೆ ಹಂತಕ್ಕೆ ಬಂದುನಿಂತಿದೆ. ಕೂಡಲಸಂಗಮ (Kudala Sangama) ಪಂಚಮಸಾಲಿ ಟ್ರಸ್ಟ್ನ ಕಾರ್ಯಕಾರಣಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಟ್ರಸ್ಟ್ ಕಾರ್ಯದರ್ಶಿ ನೀಲಕಂಠ ಅಸೂಟಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಶ್ರೀಗಳ ಬಗ್ಗೆ ಸಾಕಷ್ಟು ದೂರುಗಳು ಇವೆ. ಟ್ರಸ್ಟ್ನ ಮಾತು ಕೇಳಲ್ಲ, ಅವರ ವಿರುದ್ಧ ದೊಡ್ಡ ಕಡತವೇ ಇದೆ. ಅದಕ್ಕೆ ಪೀಠದಿಂದ ಉಚ್ಛಾಟಿಸಲು ನಿರ್ಣಯ ತೆಗೆದುಕೊಳ್ಳಲಾಗಿದೆ. ಅವರ ವಿರುದ್ಧ ದೂರಗಳ ಪಟ್ಟಿ ಬಹಳ ಇದೆ. ಅದನ್ನು ಇಲ್ಲಿ ಬಹಿರಂಗ ಪಡೆಸಲು ಆಗಲ್ಲ. ಸ್ವಾಮೀಜಿ ತಮಗೆ ಸ್ವಂತ ಆಸ್ತಿ ಮಾಡಿಕೊಳ್ಳಬಾರದು ಅಂತ ನಮ್ಮ ಬೈಲಾದಲ್ಲಿ ಇದೆ. ಆದ್ರೆ, ಸ್ವಾಮೀಜಿ ಸ್ವಂತಕ್ಕೆ ಆಸ್ತಿ ಮಾಡಿದ್ದಾರೆ ಎಂದು ದೂರಿದರು.
ಮುಂದುವರಿದು.. ಸಮಾಜ ಸಂಘಟನೆ ಬದಲಿಗೆ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಹಣಕಾಸು ವಿಚಾರದಲ್ಲಿ ಹತ್ತಾರು ದೂರುಗಳು ಇವೆ. ಈ ಬಗ್ಗೆ ಸ್ವಾಮೀಜಿಗೆ ಹಿಂದೆ 2014ರಲ್ಲೇ ನೋಟಿಸ್ ಕೊಟ್ಟಿದ್ದೇವು. ಇವತ್ತು ಕೂಡಲಸಂಗಮದಲ್ಲಿ ನಡೆದ ಟ್ರಸ್ಟಿಗಳ ಸಭೆಯಲ್ಲಿ ಸ್ವಾಮೀಜಿಯನ್ನ ಪೀಠದಿಂದ ಉಚ್ಛಾಟಿಸಲು 30 ಜನ ಟ್ರಸ್ಟಿಗಳ ಪೈಕಿ ಬಹುಮತದ ಟ್ರಸ್ಟಿಗಳು ಒಪ್ಪಿಗೆ ನೀಡಿದರು ತಿಳಿಸಿದರು.
ಹುಬ್ಬಳ್ಳಿ: ಶಾಸಕ ಯತ್ನಾಳ್ (Basangouda Patil Yatnal) ಪರ ನಿಂತ ಜಯಮೃತ್ಯುಜಂಯ ಸ್ವಾಮೀಜಿಯವರ (Jaya Mruthyunjaya Swamiji) ಮಠದ ಟ್ರಸ್ಟ್ನಲ್ಲಿ ಬಿರುಕು ಉಂಟಾಗಿದೆ. ಪೀಠದಿಂದಲೇ ಕೆಳಗಿಳಿಸುವ ಎಚ್ಚರಿಕೆಯನ್ನು ಟ್ರಸ್ಟ್ ನೀಡಿದೆ. ಇದರಿಂದ ಸ್ವಾಮೀಜಿ ಪೀಠ ಕಳೆದುಕೊಳ್ಳುತ್ತಾರಾ? ಇಲ್ಲವೇ ಟ್ರಸ್ಟ್ ಎಚ್ಚರಿಕೆಗೆ ಸೆಡ್ಡು ಹೊಡೆದು ನಿಲ್ಲುತ್ತಾರಾ? ಅಥವಾ ಟ್ರಸ್ಟ್ನ ಕ್ಷಮೆ ಕೇಳಿ ಪೀಠ ಉಳಿಸಿಕೊಳ್ಳುತ್ತಾರಾ? ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ.
ಬಿಜೆಪಿಯಿಂದ (BJP) ಉಚ್ಚಾಟನೆಗೊಂಡರೂ ಬಾಯಿಗೆ ಬೀಗ ಹಾಕದ ಯತ್ನಾಳ್ ನಿತ್ಯ ಬಿಎಸ್ವೈ (B.S Yediyurappa) ಕುಟುಂಬವನ್ನು ಬೈಯುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ವಿಜಯದಶಮಿ ಬಳಿಕ ಹೊಸ ಪಕ್ಷ ಕಟ್ಟುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಒಂದು ಕಡೆ ಬಿಜೆಪಿ ಅವರನ್ನು ಕೈ ಬಿಟ್ಟಿದೆ. ಮತ್ತೊಂದು ಕಡೆ ಇಷ್ಟು ದಿನ ಜೊತೆಗಿದ್ದ ರಾಜಕೀಯ ಸ್ನೇಹಿತರು, ಕಾರ್ಯಕರ್ತರು ಸಹ ಯತ್ನಾಳ್ ಅವರಿಂದ ಅಂತರ ಕಾಯ್ದುಕೊಂಡಿದ್ದಾರೆ. ಇಂತಹ ಸಮಯದಲ್ಲಿ ಅವರ ಜೊತೆಗೆ ಕೈ ಜೋಡಿಸಿರುವ ಪಂಚಮಸಾಲಿ ಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳ ವಿರುದ್ಧ ಅಪಸ್ವರ ಎದ್ದಿದೆ. ಇದನ್ನೂ ಓದಿ: ತಹವ್ವೂರ್ ರಾಣಾ ಹಸ್ತಾಂತರವು ಮುಂಬೈ ದಾಳಿ ಸಂತ್ರಸ್ತರಿಗೆ ನ್ಯಾಯ ಒದಗಿಸುವಲ್ಲಿ ದೊಡ್ಡ ಹೆಜ್ಜೆ : ಜೈಶಂಕರ್
ಉಚ್ಚಾಟನೆ ದಿನದಂದಲೂ ಶ್ರೀಗಳು ಯತ್ನಾಳ್ ಪರ ಬೆಂಬಲಕ್ಕೆ ನಿಂತಿದ್ದರು. ಪಂಚಮಸಾಲಿಗಳ ಬೆಂಬಲ ಬಿಜೆಪಿಗೆ ಬೇಕು ಅಂದರೆ ಯತ್ನಾಳ್ ಉಚ್ಚಾಟನೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದರು. ಇದೇ ಈಗ ಶ್ರೀಗಳ ಸ್ಥಾನಕ್ಕೆಯೇ ಕುತ್ತು ತಂದಿದೆ.
ಇಷ್ಟು ದಿನ ಪಂಚಮಸಾಲಿಗಳ 2ಎ ಮೀಸಲಾತಿ ಹೋರಾಟದಲ್ಲಿ ನಿರತರಾಗಿದ್ದ ಶ್ರೀಗಳು ಯತ್ನಾಳ್ ಪರ ಹೋರಾಟಕ್ಕಿಳಿದಿರುವುದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಕೆಂಗಣ್ಣಿಗೆ ಗುರಿಯಾಗಿದೆ. ಯಾಕೆಂದರೆ ಈ ಹಿಂದೆ ಅವರು ಟ್ರಸ್ಟ್ ವಿರುದ್ಧ ಗಂಭೀರವಾದ ಆರೋಪಗಳನ್ನು ಮಾಡಿದ್ದರು. ಟ್ರಸ್ಟ್ ರಾಷ್ಟ್ರೀಯ ಅಧ್ಯಕ್ಷ ಪ್ರಭಣ್ಣ ಪೀಠದ ಆಸ್ತಿ ಕಬಳಿಸಿದ್ದಾರೆ. ಇವರೆಲ್ಲ ಬಿಎಸ್ವೈ ಚೇಲಾಗಳು ಅಂತೆಲ್ಲ ಪಂಚಮಸಾಲಿ ಟ್ರಸ್ಟ್ ಪದಾಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದರು. ಇದು ಟ್ರಸ್ಟ್ ಅಸಮಾಧಾನಕ್ಕೆ ಕಾರಣವಾಗಿದೆ.
ಯತ್ನಾಳ್ ಉಚ್ಚಾಟನೆ ಬಿಜೆಪಿ ಪಕ್ಷದ ವಿಚಾರ, ಶ್ರೀಗಳು ಸಮಾಜದ ಪರವಾಗಿರಬೇಕೆ ಹೊರತು, ವ್ಯಕ್ತಿ ಪರವಾಗಿ ಅಲ್ಲ. ಇಲ್ಲದಿದ್ದರೆ ಪೀಠದಿಂದ ಕೇಳಗಿಳಿಸಬೇಕಾಗುತ್ತದೆ ಎಂದು ಟ್ರಸ್ಟ್ನ ಧರ್ಮದರ್ಶಿ ಮೋಹನ ಲಿಂಬಿಕಾಯಿ ಎಚ್ಚರಿಸಿದ್ದಾರೆ. ಒಟ್ಟಿನಲ್ಲಿ ಬಿಜೆಪಿಯಲ್ಲಿನ ಅಸಮಾಧಾನ ಪಂಚಮಸಾಲಿ ಸಮಾಜದಲ್ಲಿ ಬಿರುಗಾಳಿ ಎಬ್ಬಿಸಿದೆ. ಇದು ಮತ್ಯಾವ ತಿರುವು ಪಡೆದುಕೊಳ್ಳಲಿದೆಯೋ ಕಾದು ನೋಡಬೇಕಿದೆ. ಇದನ್ನೂ ಓದಿ: ಪಶ್ಚಿಮ ಬಂಗಾಳ| ಹಿಂಸಾಚಾರಕ್ಕೆ ತಿರುಗಿದ ವಕ್ಫ್ ಪ್ರತಿಭಟನೆ – ವಾಹನಗಳಿಗೆ ಬೆಂಕಿ, ರೈಲುಗಳ ಮೇಲೆ ಕಲ್ಲು
ಬೆಳಗಾವಿ: ಏಪ್ರಿಲ್ 10ರ ಒಳಗೆ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರಿಗೆ ನೀಡಿದ ಉಚ್ಚಾಟನೆ ಆದೇಶವನ್ನು ಬಿಜೆಪಿ (BJP) ವಾಪಸ್ ಪಡೆಯಬೇಕು ಎಂದು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ (Jaya Mruthyunjaya Swamiji) ಡೆಡ್ಲೈನ್ ನೀಡಿದ್ದಾರೆ.
ಈ ಸಭೆಗೆ ಎಲ್ಲಾ ಹಿಂದೂ ಪರ ಕಾರ್ಯಕರ್ತರು, ಸಮಾಜದ ಮುಖಂಡರು ಬರಬೇಕು. ಸಮಾಜದ ಶಾಸಕರು, ಸಂಸದರು ಕೂಡ ಸತ್ಯಾಂಶ ಹೇಳುವ ಕೆಲಸ ಮಾಡಬೇಕು. ಬೊಮ್ಮಾಯಿ, ಬೆಲ್ಲದ್, ರಮೇಶ್ ಜಾರಕಿಹೊಳಿ ಅವರು ನೈತಿಕ ಬೆಂಬಲ ನೀಡಿದ್ದಾರೆ. ಸಮಾಜದ ಶಾಸಕರು ಒತ್ತಡ ಹಾಕದಿದ್ದರೆ ನಿಮ್ಮ ಮೇಲೆ ಸಮಾಜ ಬೇಸರವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಯತ್ನಾಳ್ ಕೊಟ್ಟಿದ್ದ ಉತ್ತರ ಪತ್ರ ಬಹಿರಂಗ – ಯಡಿಯೂರಪ್ಪ, ವಿಜಯೇಂದ್ರ ಮೇಲೆ ಚಾರ್ಜ್ಶೀಟ್
ಅನೇಕರು ಸಮಾಜದ ಹೆಸರು ಹೇಳಿ ಅಧಿಕಾರ ಬಂದ ಮೇಲೆ ಕೈಕೊಟ್ಟರು. ಯತ್ನಾಳ್ ಅವರು ಮೀಸಲಾತಿ ಹೋರಾಟ ಕೈ ಬಿಡಲಿಲ್ಲ. ಹೀಗಾಗಿ ಅವರ ಬೆನ್ನಿಗೆ ಸಮಾಜ ನಿಲ್ಲಬೇಕಿದೆ. ವರಿಷ್ಠರು ನಮ್ಮನ್ನ ಮಾತುಕತೆ ಕರೆದರೆ ನಾವು ಹೋಗಲು ಸಿದ್ದರಿದ್ದೇವೆ ಎಂದು ತಿಳಿಸಿದರು.
ಬಾಗಲಕೋಟೆ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟದಲ್ಲಿ (Panchamasali Lingayats’ Quota Demand) ಈಗ ಬಿರುಕು ಮೂಡಿದೆ. ಪಂಚಮಸಾಲಿ ಪೀಠದ ಶ್ರೀ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ (Jaya Mruthyunjaya Swamiji) ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಿರುದ್ಧ ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ (Vijayanand Kashappanavar) ಕಿಡಿಕಾರಿದ್ದಲ್ಲದೇ ಪ್ರತ್ಯೇಕ ಹೋರಾಟಕ್ಕೆ ತಯಾರಿ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಶ್ರೀ ಪಂಚಮಸಾಲಿ ಜಗದ್ಗುರು ಮಹಾಪೀಠದ ಸಭಾಭವನದಲ್ಲಿ ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯಕಾರಿಣಿ ಸಭೆ ಬಳಿಕ ಮಾತನಾಡಿದ ಅವರು, ಇಲ್ಲಿಯವರೆಗೆ ಹಿಂದುಳಿದ ಆಯೋಗದ ಸಂಪೂರ್ಣ ವರದಿ ಬಂದಿಲ್ಲ. ಸಂಪೂರ್ಣ ವರದಿ ಬಂದ ಬಳಿಕ 2ಎ ಮೀಸಲಾತಿ ಕುರಿತು ಸಭೆ ನಡೆಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddarmaiah) ನೀಡಿದರೂ ಕೂಡ ಸ್ವಾಮೀಜಿ ಬಿಜೆಪಿ ಪಕ್ಷದ ಬ್ಯಾನರ್ ಅಡಿಯಲ್ಲಿ ಹೋರಾಟ ನಡೆಸಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿ ಸಿಸೇರಿಯನ್ ದುರಂತ: ಮೃತ ಮಹಿಳೆಯರ ಸಂಖ್ಯೆ ನಾಲ್ಕಕ್ಕೆ ಏರಿಕೆ
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುವ ಅಧಿವೇಶನದ ವೇಳೆ ಡಿ.10 ರಂದು ಟ್ರ್ಯಾಕ್ಟರ್ ಮೂಲಕ ಮುತ್ತಿಗೆ ಹಾಕಲು ಸ್ವಾಮೀಜಿ ಹಾಗೂ ಯತ್ನಾಳ್ ಅವರು ತಯಾರಿ ನಡೆಸಿದ್ದಾರೆ. ರಾಷ್ಟ್ರೀಯ ಅಧ್ಯಕ್ಷನಾದ ನನ್ನ ಹಾಗೂ ಸಮಾಜದ ಹಿರಿಯರ ಗಮನಕ್ಕೆ ತಂದಿಲ್ಲ. ತಾವೇ ಬಿಜೆಪಿ ಪಕ್ಷದ ಬ್ಯಾನರ್ ಅಡಿಯಲ್ಲಿ ಸಭೆ ಮಾಡುತ್ತಿದ್ದಾರೆ. ಹೀಗಾಗಿ ಸ್ವಾಮೀಜಿಯವರ ನಡೆಯನ್ನು ಖಂಡಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ನಮ್ಮ ಹೋರಾಟ ವಕ್ಫ್ ವಿರುದ್ಧ, ಯಾವುದೇ ಕುಟುಂಬದ ವಿರುದ್ಧವಲ್ಲ: ಯತ್ನಾಳ್
2ಎ ಮೀಸಲಾತಿ ಹೋರಾಟ ಪಕ್ಷಾತೀತವಾಗಿ ಇರಬೇಕು. ಆದರೆ ಇವರ ಹೋರಾಟ ಒಂದು ಪಕ್ಷಕ್ಕೆ ಮಾತ್ರ ಸೀಮಿತವಾಗಿದೆ. ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಪಂಚಮಸಾಲಿ ಸಮಾಜ ನನ್ನ ಬೆನ್ನ ಹಿಂದಿದೆ ಎಂದು ಹೇಳುತ್ತಿದ್ದಾರೆ. ತಾಕತ್ತು ದಮ್ಮು ಇದ್ದರೆ ಸಮಾಜದ ಹೆಸರನ್ನು ಬಳಸದೇ ವೈಯಕ್ತಿಕ ವರ್ಚಸ್ಸಿನ ಮೇಲೆ ಹೋರಾಟ ಮಾಡಲಿ ಎಂದು ಸವಾಲ್ ಎಸೆದರು.
ಈ ಹಿಂದೆ ಯತ್ನಾಳ್ ಅವರು ನಮ್ಮ ದಿಕ್ಕು ತಪ್ಪಿಸಿ ಬೆಂಗಳೂರಿನವರೆಗೆ ಪ್ರಜ್ಞಾರಹಿತವಾಗಿ ಪಾದಯಾತ್ರೆ ಮಾಡಿದರು. ಬೆಂಗಳೂರಿನಲ್ಲಿ ಶೀಘ್ರದಲ್ಲಿಯೇ ಪಕ್ಷಾತೀತವಾಗಿ ಪಂಚಮಸಾಲಿ ಸಮಾಜದ ಮುಖಂಡರ ಸಭೆ ಕರೆದು 2ಎ ಮೀಸಲಾತಿ ಹೋರಾಟ ಮುಂದುವರೆಸುತ್ತೇವೆ. ಆದರೆ ಈ ಸಭೆಗೆ ಸ್ವಾಮೀಜಿ ಹಾಗೂ ಯತ್ನಾಳ್ ಅವರನ್ನು ಆಹ್ವಾನಿಸುವುದಿಲ್ಲ. ಮಾಜಿ ಸಚಿವ ಮುರಗೇಶ್ ನಿರಾಣಿ ಅವರಿಗೆ ಆಹ್ವಾನವಿರುತ್ತದೆ ಎಂದು ಹೇಳಿದರು.
ಕೊಪ್ಪಳ: ಸಿಎಂ ಬೇರೆ ಸಮುದಾಯಗಳಿಗೆ ಸ್ಪಂದನೆ ನೀಡುತ್ತಿದ್ದಾರೆ, ಆದರೆ ನಮ್ಮ ಸಮುದಾಯಕ್ಕೆ ಸ್ಪಂದನೆ ಇಲ್ಲ ಎಂದು ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ (Jaya Mruthyunjaya Swamiji) ಹೇಳಿದ್ದಾರೆ.
ಕೊಪ್ಪಳದಲ್ಲಿ (Koppal) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಪಂಚಮಸಾಲಿ ಹೋರಾಟಕ್ಕೆ ಸರ್ಕಾರ ಯಾವುದೇ ಸ್ಪಂದನೆ ನೀಡಿಲ್ಲ. ಸಿಎಂ ಅವರು ಬೇರೆ ಸಮುದಾಯಗಳಿಗೆ ಸ್ಪಂದನೆ ನೀಡಿದ್ದಾರೆ. ಆದರೆ ನಮ್ಮ ಸಮುದಾಯಕ್ಕೆ ಸ್ಪಂದನೆ ಇಲ್ಲ. ಹೀಗಾಗಿ ಬೆಳಗಾವಿ (Belagavi) ಅಧಿವೇಶನದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನ ಮಾಡಲಾಗಿದೆ. 5 ಸಾವಿರ ಟ್ರ್ಯಾಕ್ಟರ್ಗಳ ಮೂಲಕ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: Chitradurga| ರೈತರ ತಂಟೆಗೆ ಬಂದ್ರೆ ಸುಮ್ಮನೆ ಕೂರಲ್ಲ – ವಕ್ಫ್ ವಿರುದ್ಧ ಭಾರತೀಯ ಕಿಸಾನ್ ಸಂಘ ಪ್ರತಿಭಟನೆ
ಸರ್ಕಾರ ನಮ್ಮ ಸಮುದಾಯದಿಂದಲೇ ಅಧಿಕಾರಕ್ಕೆ ಬಂದಿದೆ. ಈಗಾಗಲೇ ನಾವು ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿದ್ದೇವೆ. ನಮ್ಮ ಸಮುದಾಯದ ಶಾಸಕರು ಇದುವರೆಗೂ ಯಾವುದೇ ರೀತಿಯ ಧ್ವನಿ ಎತ್ತಿಲ್ಲ. ಈಗ ನಡೆಯುವ ಅಧಿವೇಶನದಲ್ಲಿ ಧ್ವನಿ ಎತ್ತಿ, ಇಲ್ಲವಾದರೆ ನಮ್ಮ ಹೋರಾಟಕ್ಕೆ ಬೆಂಬಲ ನೀಡಿ. ಬೆಳಗಾವಿಯಲ್ಲಿ ಹೋರಾಟಕ್ಕೆ ಮುತ್ತಿಗೆ ಹಾಕಲು ರೂಪ ರೇಷಗಳನ್ನು ಹಾಕಲಾಗುತ್ತಿದೆ. ಎಲ್ಲ ಪಂಚಮಸಾಲಿ ಸಮುದಾಯದವರು ಬಂದು ಭಾಗವಹಿಸಬೇಕು. ಇದರಲ್ಲಿ ಜನರು ಯಾವುದೇ ರೀತಿ ಉದ್ರೇಕಗೊಂಡರೆ ಅದಕ್ಕೆ ಸರ್ಕಾರವೇ ನೇರ ಹೊಣೆಯಾಗಿರುತ್ತದೆ. ಈಗ ಯಾವುದೇ ರೀತಿ ಉಪವಾಸ ಸತ್ಯಾಗ್ರಹ ಇಲ್ಲ ಹೀಗಾಗಿ ಉಗ್ರಹೋರಾಟ ಮಾಡಲಾಗುತ್ತಿದೆ ಎಂದರು.
ಈಗಾಗಲೇ ನಾವು ವಕೀಲರ ಮೂಲಕ ಹೋರಾಟ ಆರಂಭ ಮಾಡಲಾಗುತ್ತಿದೆ. ಬಿಜೆಪಿ ಸರ್ಕಾರದಲ್ಲಿ ನಮ್ಮ ಶಾಸಕರು ಸಚಿವರು ಮಾತನಾಡುತ್ತಿದ್ದರು. ಆದರೆ ಈಗಿರುವ ಶಾಸಕರು ಸಮುದಾಯದ ಪರವಾಗಿ ಮಾತನಾಡುತ್ತಿಲ್ಲ. ಮೊದಲೆಲ್ಲ ಸಿಎಂ ನಮ್ಮ ಕೈಗೆ ಸಿಗುತ್ತಿದ್ದರು. ಕರೆದಾಗ ಬರುತ್ತಿದ್ದರು. ಆದರೆ ಈಗ ಆ ಪರಿಸ್ಥಿತಿ ಇಲ್ಲ. ಸಿಎಂ ಅವರು ನಮ್ಮ ಮನವಿಗೆ ಸ್ಪಂದನೆ ನೀಡುತ್ತಿಲ್ಲ. ರೈತರ ಜಮೀನಲ್ಲಿ ವಕ್ಫ್ ಹೆಸರು ಸೇರಿದ ವಿಚಾರವಾಗಿ, ವಕ್ಫ್ ವಿರುದ್ಧ ಹೋರಾಟಕ್ಕೆ ನಾನು ದುಮುಕಿದ್ದೇನೆ. ಈಗಾಗಲೇ ಹಲವು ಮನವಿಗಳನ್ನು ಕೊಟ್ಟಿದ್ದೀವಿ. ಸಿಎಂ ಅವರು ವಕ್ಫ್ ವಾಪಸ್ ತೆಗೆದುಕೊಂಡಿದ್ದಾರೆ. ಆದರೆ ಪಹಣಿಯಲ್ಲ ಹೆಸರು ತೆಗೆದಿಲ್ಲ. ವಿಜಯಪುರದಲ್ಲಿ ಮಾತ್ರ ಬಂದ್ ಆಗಿದೆ ಬೇರೆ ಕಡೆ ಆಗುತ್ತಿದೆ ಎಂದು ಹೇಳಿದರು.
ಶಿಗ್ಗಾಂವಿ ಉಪಚುನಾವಣೆಯಲ್ಲಿ ಭರತ್ ಬೊಮ್ಮಾಯಿ ಸೋಲಿನ ವಿಚಾರವಾಗಿ ಅದರಲ್ಲಿ ಸಮುದಾಯದ ವಿಚಾರ ತರುವುದು ತಪ್ಪು. ಉಪಚುನಾವಣೆ ಸ್ಥಳೀಯ ವಿಚಾರವಾಗಿ ನಡೆಯುತ್ತದೆ. ನಾವು ಯಾವುದೇ ರೀತಿಯ ಸಂದೇಶ ಕೊಡುವುದಿಲ್ಲ. 80 ಸಾವಿರ ಮತ ಬಂದಿದೆ ಅಂದಾಗ ನಮ್ಮ ಸಮುದಾಯದವರು ಮತ ಹಾಕಿದ್ದಾರೆ ಎಂದು ಅರ್ಥ ಎಂದು ತಿಳಿಸಿದರು.ಇದನ್ನೂ ಓದಿ: ತುಮಕೂರು| ಗುರಾಯಿಸುತ್ತೀಯಾ ಎಂದು ಯುವಕನಿಗೆ ಹಿಗ್ಗಾಮುಗ್ಗಾ ಥಳಿತ
ಬೆಳಗಾವಿ: ಪಂಚಮಸಾಲಿ (Panchamasali Community) ಮೀಸಲಾತಿ (Reservation) ಹೋರಾಟದ ಫಲವಾಗಿ ಪ್ರವರ್ಗ 3Bಯಲ್ಲಿದ್ದ ಮೀಸಲಾತಿಯನ್ನು ಸರ್ಕಾರ 2Dಗೆ ಸೇರಿಸಿ ಮೀಸಲಾತಿ ನೀಡಿದೆ. ಆ ಬಳಿಕ ಈ ಬಗ್ಗೆ ಮೀಸಲಾತಿ ಸಿಕ್ಕಿದೆ ಎಂದು ಹಿಗ್ಗುವುದು ಬೇಡ, ಸಿಕ್ಕಿಲ್ಲ ಎಂದು ಕುಗ್ಗುವುದು ಬೇಡ ಎಂದು ಕೂಡಲಸಂಗಮ ಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ (Jaya Mruthyunjaya Swamiji) ಪ್ರತಿಕ್ರಿಯಿಸಿದ್ದಾರೆ.
ಪ್ರವರ್ಗ 3Bಯಲ್ಲಿರುವ ಪಂಚಮಸಾಲಿ ಸಮುದಾಯ ಶೇ.5 ಮೀಸಲಾತಿ ಇದೆ. ಪ್ರವರ್ಗ 2Aಗೆ ಸೇರ್ಪಡೆ ಆದರೆ ಶೇ.15 ಮೀಸಲಾತಿ ಅನುಕೂಲ ಸಿಗುತ್ತಿತ್ತು. ಹಾಗಾಗಿ ಸರ್ಕಾರದ ಮುಂದೆ ಮೀಸಲಾತಿಗೆ ಬೇಡಿಕೆ ಇಡಲಾಗಿತ್ತು. ಇದೀಗ 2D ಮೀಸಲಾತಿ ಪಂಚಮಸಾಲಿ ಸಮುದಾಯಕ್ಕೆ ಸಿಕ್ಕಿದೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಸಚಿವ ಸಂಪುಟದ ನಿರ್ಣಯ ನಮ್ಮ ಕೈಸೇರಿಲ್ಲ. ಸರ್ಕಾರ ಹೊಸ ವರ್ಗಗಳನ್ನು ಮಾಡಿರುವ ಬಗ್ಗೆ ಮತ್ತು ನಾವು ಕೇಳಿರುವ ಮೀಸಲಾತಿ ಪ್ರಮಾಣ ನಮಗೆ ಕೊಡಲಾಗಿದೆಯೇ ಎಂಬುದನ್ನು ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಪಂಚಮಸಾಲಿ ಸಮಾಜಕ್ಕೆ 2d ಮೀಸಲಾತಿ – ಸಂಪುಟ ಸಭೆಯಲ್ಲಿ ನಿರ್ಧಾರ
ನಾವು ಕೇಳಿರುವಂತೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಿಗುವ ಮೀಸಲಾತಿ ಬಗ್ಗೆ ಚರ್ಚೆ ಮಾಡುತ್ತೇವೆ. ಸರ್ಕಾರ ಸಿ ಮತ್ತು ಡಿ ವರ್ಗಕ್ಕೆ ಮೀಸಲಾತಿ ನೀಡಿದೆ. ಇದರ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಉತ್ತರಿಸುತ್ತೇನೆ. ನಿರ್ಣಯದ ಪ್ರತಿಯಲ್ಲಿ ಪಂಚಮಸಾಲಿ ಹೆಸರೇ ಉಲ್ಲೇಖಿಸಿಲ್ಲ. ಈ ಬಗ್ಗೆ ಸರಿಯಾಗಿ ತಿಳಿದುಕೊಳ್ಳುತ್ತೇವೆ. ನಮ್ಮ ಸಮುದಾಯಕ್ಕೆ ನ್ಯಾಯ ಕೊಟ್ಟು ಉಳಿದ ಸಮುದಾಯಕ್ಕೂ ಕೊಡಲಿ ನಮ್ಮ ವಿರೋಧವಿಲ್ಲ. ಸರ್ಕಾರದ ತೀರ್ಮಾನಕ್ಕೆ ನಾವು ಬದ್ಧ. 2Dಯಲ್ಲಿ ಪಂಚಮಸಾಲಿ ಮೀಸಲಾತಿ ಎಷ್ಟಿದೆ ಎಂದು ವಿಮರ್ಶೆ ಮಾಡುತ್ತೇವೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ನಮ್ಮ ಮೀಸಲಾತಿ ಎಷ್ಟಿದೆ? ಎಷ್ಟು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂಬುದನ್ನು ನೋಡಬೇಕಾಗಿದೆ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಕಳಸಾ ಬಂಡೂರಿ ಯೋಜನೆಗೆ ಗ್ರೀನ್ ಸಿಗ್ನಲ್ – ಡಿಪಿಆರ್ ಚುನಾವಣೆಗೆ ಮಾತ್ರ ಮೀಸಲಾಗಬಾರದು: ರೈತರ ಆಗ್ರಹ
Live Tv
[brid partner=56869869 player=32851 video=960834 autoplay=true]
ಶಿವಮೊಗ್ಗ: ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸಬೇಕೆಂದು ಆಗ್ರಹಿಸಿ, ಶಿವಮೊಗ್ಗ ಜಿಲ್ಲೆಯಿಂದ ಹೋರಾಟ ಆರಂಭಿಸಲಾಗುವುದು ಎಂದು ಕೂಡಲ ಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯವನ್ನು 2ಎ ಮೀಸಲಾತಿಗೆ ಸೇರಿಸಿ ಎಂದು ಜೂನ್ 22 ರಂದು ಸಿಎಂ ಬೊಮ್ಮಾಯಿ ಅವರ ಮನೆ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದಾಗ ಶಾಸಕ ಯತ್ನಾಳ್ ಮತ್ತು ಸಚಿವ ಸಿ.ಸಿ ಪಾಟೀಲ್ ಸಿಎಂ ಎದುರು ಸಂಧಾನ ನಡೆಸಿ ಸಮಯಾವಕಾಶ ಕೇಳಿದ್ದರು. ಅದರಂತೆ ಆ.22 ರಂದು ಸರ್ಕಾರಕ್ಕೆ ನೀಡಿದ ಗಡುವು ಮುಕ್ತಾಯಗೊಳ್ಳಲಿದೆ, ಅಲ್ಲಿಯವರೆಗೆ ಸುಮ್ಮನೆ ಕೂರೋದು ಬೇಡವೆಂದು ಜ್ಞಾಪಕ ಪತ್ರ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನ- ಎಲ್ಲರ ಮನೆ ಮೇಲೆ ತಿರಂಗಾ ಹಾರಿಸುವಂತೆ ಸಿಎಂ ಮನವಿ
ಆ.24ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಿಂದ ವಿನೋಬಾನಗರದಲ್ಲಿರುವ ಬಿ.ಎಸ್.ಯಡಿಯೂರಪ್ಪ ಅವರ ಮನೆಯವರೆಗೆ ಎಚ್ಚರಿಕೆಯ ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿದೆ. ಅಂದು ಬಿಎಸ್ವೈ ಮನೆಗೆ ತೆರಳಿ ಜ್ಞಾಪನಾಪತ್ರ ನೀಡಲಾಗುವುದು. ಒಂದು ವೇಳೆ ಬಿಎಸ್ವೈ ಊರಲ್ಲಿ ಇಲ್ಲವೆಂದರೆ ಸಂಸದ ರಾಘವೇಂದ್ರ ಅವರಿಗೆ ನೀಡುತ್ತೇವೆ. ಅವರೂ ಇಲ್ಲವೆಂದರೆ ಜಿಲ್ಲಾಧಿಕಾರಿಗಳಿಗೆ ನೀಡಲಿದ್ದೇವೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಇದನ್ನೂ ಓದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣ – ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಳಿನಿ
ಜ್ಞಾಪಕ ಪತ್ರ ಮೆರವಣಿಗೆಯ ಭಾಗವಾಗಿ ಪ್ರತಿ ತಾಲೂಕಿನಲ್ಲಿ ಪ್ರತಿಜ್ಞಾ ಪಂಚಾಯಿತಿ ನಡೆಸಲಾಗುತ್ತಿದೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸಲಿದೆ. ನಮಗೆ ಮೀಸಲಾತಿ ದೊರೆಯುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಚಿಕ್ಕೋಡಿ: ಪಂಚಮಸಾಲಿ ಪೀಠಗಳ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ನಾವು ಗಡುವು ಕೊಡುವ ಸ್ವಾಮೀಜಿ ಅಲ್ಲ, ಮೀಸಲಾತಿ ಕೊಡಿಸುವ ಸ್ವಾಮೀಜಿ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಕೂಡಲ ಸಂಗಮ ಜಯಮೃತ್ಯುಂಜಯ ಸ್ವಾಮೀಜಿಯವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜದಲ್ಲಿ ಪೀಠಗಳು ಹೆಚ್ಚಾದರೆ, ಮಠ-ಸ್ವಾಮೀಜಿಗಳು ಹೆಚ್ಚಾದರೆ ಯಾವುದೇ ತೊಂದರೆ ಇಲ್ಲ. ನಮ್ಮಲ್ಲಿ ಯಾರ ನಡುವೆಯೂ ಭಿನ್ನಾಭಿಪ್ರಾಯ ಇಲ್ಲ, ಪಂಚಮಸಾಲಿ ಸಮಾಜ ಜಾಗೃತವಾಗಿದೆ ಎಂದರು. ಇದನ್ನೂ ಓದಿ: ಉಕ್ರೇನ್ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು
ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಬೇಡಿಕೆಗೆ ಯಾವುದೇ ಹಿನ್ನಡೆಯಾಗಿಲ್ಲ. ಈ ಹಿಂದೆ 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮಾಜದ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಗಡುವು ನೀಡಿದ್ದರು. ನಾವು ಗಡುವು ಕೊಡುವ ಸ್ವಾಮೀಜಿ ಅಲ್ಲ, ಮೀಸಲಾತಿ ಕೊಡಿಸುವ ಸ್ವಾಮೀಜಿ ಎಂದು ಕೂಡಲ ಸಂಗಮ ಜಯಮೃತ್ಯುಂಜಯ ಸ್ವಾಮೀಜಿಯವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಈ ಮೂಲಕ ಇಬ್ಬರು ಪಂಚಮಸಾಲಿ ಸ್ವಾಮೀಜಿಗಳ ನಡುವಿನ ಶೀತಲ ಸಮರ ಮುದುವರಿದಿದೆ. ಇದನ್ನೂ ಓದಿ: ದೇವರ ದರ್ಶನಕ್ಕೆಂದು ಹೋದವರು ದರ್ಶನ ಪಡೆಯುವ ಮೊದಲೇ ಪ್ರಾಣ ಬಿಟ್ರು
ಬೆಂಗಳೂರು: ಪಂಚಮಸಾಲಿ ಸಮುದಾಯದಲ್ಲಿ ಮತ್ತೆ ಒಡಕುಂಟಾಗಿದೆ. ಮೊನ್ನೆ ಮೊನ್ನೆಯಷ್ಟೇ ಪಂಚಮಸಾಲಿ ಮೂರನೇ ಪೀಠದ ಸ್ಥಾಪನೆಯನ್ನು ಬೆಂಬಲಿಸಿದ್ದ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಾಗ್ದಾಳಿ ನಡೆಸಿದ್ದಾರೆ.
ನಿರಾಣಿಯವರು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ನೀವು ಎಂಎಲ್ಎ ಆಗಬೇಕಾ, ಸಿಎಂ ಆಗಬೇಕಾ, ಜಿಲ್ಲೆಗೊಂದು, ತಾಲೂಕಿಗೊಂದು, ಗ್ರಾಮ ಪಂಚಾಯತ್ಗೊಂದು ಪೀಠ ಮಾಡಿಕೊಳ್ಳಿ. ಆದ್ರೆ ನಿಮ್ಮ ಸ್ವಾರ್ಥಕ್ಕೆ ಸಮಾಜವನ್ನು ಬಳಸಿಕೊಳ್ಳಬೇಡಿ ಅಂತ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಯಾವ ಪೀಠ ಆದ್ರೂ ಮಾಡಿಕೊಳ್ಳಲಿ. ನಮ್ಮದೇನು ಅಭ್ಯಂತರ ಇಲ್ಲ. ನಾವು ಮೂರನೇ ಪೀಠಕ್ಕೆ ಹೆದರಲ್ಲ ಎಂದು ಸ್ವಾಮೀಜಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಕೊರೊನಾ ಇಳಿಕೆ 17,266 ಕೇಸ್ – ಒಟ್ಟು 42,470 ಪಾಸಿಟಿವ್, 26 ಸಾವು
ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಕೂಡ ನಿರಾಣಿ ವಿರುದ್ಧ ಸಿಟ್ಟಾಗಿದ್ದಾರೆ. ಸಿಎಂ ಆಗ್ಲಿಕ್ಕೆ ನಿರಾಣಿ ಪ್ರಯತ್ನ ಮಾಡ್ತಿದ್ದಾರೆ. ಆದ್ರೆ ಅವರ ಸಚಿವ ಸ್ಥಾನವೇ ಉಳಿಯಲ್ಲ. ಇನ್ನೆಲ್ಲಿ ಸಿಎಂ ಆಗ್ತಾರೆ ಎಂದು ವ್ಯಂಗ್ಯ ಮಾಡಿದ್ದಾರೆ. ಇದಕ್ಕೆ ನಿರಾಣಿ ಸಹ ತಿರುಗೇಟು ನೀಡಿದ್ದಾರೆ. ಪಂಚಮಸಾಲಿ ಸಮುದಾಯ ದೊಡ್ಡದಿದೆ. ಮೂರನೇ ಪೀಠ ಆದರೆ ತಪ್ಪೇನು ಅಂತಾ ಕೇಳಿದ್ದಾರೆ. ಮೂರನೇ ಪೀಠದ ಅವಶ್ಯಕತೆಯನ್ನು ನಿರ್ಧರಿಸೋದು ಸಮಾಜದ ಜನ. ನಾನಲ್ಲ, ಸ್ವಾಮೀಜಿಗಳು ಆಪಾದನೆ ಬಿಟ್ಟು ಅವರೇ ಮುಂದೆ ನಿಂತು ಪೀಠ ರಚನೆಯ ಜವಾಬ್ದಾರಿ ತಗೆದುಕೊಳ್ಳಬೇಕು. ನಾನು ಯಾವತ್ತಾದ್ರೂ ಸಿಎಂ ಆಗ್ತೀನಿ ಅಂತ ಹೇಳಿದ್ದೀನಾ? ಸ್ವಾಮೀಜಿಗಳಿಗೆ ತಪ್ಪು ಕಲ್ಪನೆ ಉಂಟಾಗಿದ್ದು, ಸಮಯ ನಿಗದಿ ಮಾಡಿದ್ರೆ ನಾನೇ ಅವರನ್ನು ಭೇಟಿ ಆಗಿ ಮಾತನಾಡುತ್ತೇನೆ ಎಂದಿದ್ದಾರೆ. ಮೊದ್ಲು ಜನ್ರಿಗೆ ಆದಾಯ ಬರುವಂತೆ ಮಾಡಿ, ಆಮೇಲೆ ದರ ಏರಿಕೆ ಮಾಡಿ: ಡಿಕೆಶಿ