Tag: Jaya Mruthyunjaya Swamiji

  • ಪಂಚಮಸಾಲಿಗಳಿಗೆ ಮೀಸಲಾತಿ ನೀಡೋದಾಗಿ ಸಿಎಂ ಭರವಸೆ ನೀಡಿದ್ದಾರೆ: ಜಯಮೃತ್ಯುಂಜಯ ಸ್ವಾಮೀಜಿ

    ಪಂಚಮಸಾಲಿಗಳಿಗೆ ಮೀಸಲಾತಿ ನೀಡೋದಾಗಿ ಸಿಎಂ ಭರವಸೆ ನೀಡಿದ್ದಾರೆ: ಜಯಮೃತ್ಯುಂಜಯ ಸ್ವಾಮೀಜಿ

    ಧಾರವಾಡ: ಸಿಎಂ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿಗಳಿಗೆ ಮೀಸಲಾತಿ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಅವರ ಮೇಲೆ ಸಂಪೂರ್ಣ ಭರವಸೆ ಇದೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿಗಳ ಮೀಸಲಾತಿಯ ಪಾದಯಾತ್ರೆ ಹೋರಾಟಕ್ಕೆ ಒಂದು ವರ್ಷ ತುಂಬುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ನಮ್ಮ ತಾಳ್ಮೆಯನ್ನು ಪರೀಕ್ಷಿಸಬಾರದು. ಯಡಿಯೂರಪ್ಪನವರ ಸಂದರ್ಭದಲ್ಲಿ ನಾವು ತಾಳ್ಮೆ ಏರಿಳಿತ ಆಗಿದ್ದನ್ನು ಕಂಡಿದ್ದೇವೆ. ಆದರೆ ಸಿಎಂ ಬೊಮ್ಮಾಯಿ ಅವರು ಇಂದಿನವರೆಗೆ ಯಾರೂ ಸ್ಪಂದಿಸದಷ್ಟು ಅವರು ಸ್ಪಂದಿಸಿದ್ದಾರೆ. ಅವರ ಮೇಲೆ ಸಂಪೂರ್ಣ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಬೊಮ್ಮಾಯಿ ಅವರು ನಮ್ಮ ಹೋರಾಟ ಸಮಿತಿಯ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯತ್ನಾಳ, ಸಚಿವ ಸಿ.ಸಿ. ಪಾಟೀಲ್ ಹಾಗೂ ವಿಜಯಾನಂದ ಕಾಶಪ್ಪನವರನ್ನು ಕರೆದು ಮಾತನಾಡಿಸಿದ್ದಾರೆ. ಬೆಳಗಾವಿ ಹೋರಾಟದ ವೇಳೆ ಸಿಎಂ ಅವರೇ ನಮ್ಮ ಸ್ಥಳಕ್ಕೆ ಬಂದು ಇನ್ನಷ್ಟು ಸಮಯಾವಕಾಶ ಕೇಳಿದ್ದರು. ಪದೇ ಪದೇ ಚುನಾವಣೆ ಬಂದಿದ್ದರಿಂದ ಸಭೆ ಮಾಡಲು ಆಗಿಲ್ಲ ಎಂದು ಹೇಳಿದ್ದರು. ಹೀಗಾಗಿ ಅವರಿಗೆ ಸಮಯ ಕೊಡಲಾಗಿತ್ತು ಎಂದರು.

    ನಾವು ಪಾದಯಾತ್ರೆ ಮಾಡಿ ಒಂದು ವರ್ಷ ತುಂಬಲಿದೆ. ಕೇವಲ ಉತ್ತರ ಕರ್ನಾಟಕಕ್ಕೆ ಮಾತ್ರ ಸಿಮೀತವಾಗಿದ್ದ ಪಂಚಮಸಾಲಿ ಸಮಾಜದ ಪಾದಯಾತ್ರೆಯಿಂದಾಗಿ ಮಲೆನಾಡು ಹಾಗೂ ದಕ್ಷಿಣ ಭಾಗದವರೆಗೂ ವಿಸ್ತರಣೆಗೊಂಡಿದೆ. ಹೀಗಾಗಿ ಕೂಡಲ ಸಂಗಮದಲ್ಲಿ ಜನವರಿ 14ರಂದು ಪಂಚಮಸಾಲಿ ಹೋರಾಟದ ವರ್ಷಾಚರಣೆ ಕಾರ್ಯಕ್ರಮ ನಡೆಸಲಿದ್ದೇವೆ. ಸಿಎಂ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಅಲ್ಲಿ ಕೂಡಾ ನಾವು ಮನವಿ ಕೊಡುತ್ತೇವೆ. ಸಿಎಂ ನಮಗೆ ಆ ದಿನ ಎಳ್ಳು, ಬೆಲ್ಲ ಕೊಡಬಹುದು. ಅದೇ ದಿನ ಮೀಸಲಾತಿ ಘೋಷಣೆ ಮಾಡಿದರೆ ಆಶ್ಚರ್ಯ ಪಡೆಬೇಕಾಗಿಲ್ಲ. ಅವರು ಯುಗಾದಿ ಒಳಗಾದರೂ ಸಿಹಿ ಸುದ್ದಿ ಕೊಡುತ್ತಾರೆ ಎಂಬ ಭರವಸೆ ಇದೆ ಎಂದು ಹೇಳಿದರು. ಇದನ್ನೂ ಓದಿ: ತರಕಾರಿ, ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಅಧಿಕಾರಿಗಳು!

    ಯಡಿಯೂರಪ್ಪ ನಮ್ಮವರು ಎಂದು ನಂಬಿದ್ದೆವು, ಅವರನ್ನು 10 ವರ್ಷ ನಂಬಿದರೂ ಸಹ ಅವರು ಅವಕಾಶ ಪಡೆದುಕೊಳ್ಳಲಾಗಲಿಲ್ಲ. ಶೇ. 90ರಷ್ಟು ನಮ್ಮ ಸಮಾಜ ಯಡಿಯೂರಪ್ಪ ಅವರನ್ನ ಬೆಂಬಲಿಸಿತ್ತು. ಬಿಜೆಪಿ ಸರ್ಕಾರ ಯಾವತ್ತೂ ಈ ಸಮಾಜದ ಕೈಬಿಡಲ್ಲ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು. ಇದನ್ನೂ ಓದಿ: ಜಾರ್ಖಂಡ್‍ ಭೀಕರ ರಸ್ತೆ ಅಪಘಾತ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

    ಸಿಎಂ ಶಿಗ್ಗಾವಿಯಲ್ಲಿ ಮೂರು ಬಾರಿ ಗೆಲ್ಲಲು ಯಥೆಚ್ಚ ಬೆಂಬಲ ಕೊಟ್ಟಿದ್ದು ಪಂಚಮಸಾಲಿ ಸಮಾಜವಾಗಿದೆ. ಹೀಗಾಗಿ ಸಿಎಂ ಅನ್ಯಾಯ ಮಾಡಲ್ಲ ಎಂಬ ನಂಬಿಕೆ ಇದೆ. ಯತ್ನಾಳ ಅವರು ಒಂದು ವರ್ಷದಿಂದ ಏನೇನು ಹೇಳಿದ್ದಾರೆ ಅದೆಲ್ಲವೂ ಸತ್ಯ ಆಗಿದೆ. ಯತ್ನಾಳ್ ಅವರೇ ಸಿಎಂ ಆದರೂ ಆಗಬಹುದು. ಏನೇ ಬದಲಾವಣೆ ಆದರೂ ನಮ್ಮ ಸಮಾಜಕ್ಕೆ ಬೊಮ್ಮಾಯಿ ಅವರೇ ನ್ಯಾಯ ಕೊಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಸಿಹಿ ಸುದ್ದಿ ಕೊಟ್ಟರೆ ಸಿಎಂಗೆ ಕಲ್ಲುಸಕ್ಕರೆ ತುಲಾಭಾರ: ಜಯಮೃತ್ಯುಂಜಯ ಸ್ವಾಮೀಜಿ

    ಸಿಹಿ ಸುದ್ದಿ ಕೊಟ್ಟರೆ ಸಿಎಂಗೆ ಕಲ್ಲುಸಕ್ಕರೆ ತುಲಾಭಾರ: ಜಯಮೃತ್ಯುಂಜಯ ಸ್ವಾಮೀಜಿ

    ಬೆಳಗಾವಿ: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಸರ್ಕಾರಕ್ಕೆ ಕೊಟ್ಟಿದ್ದ ಗಡುವು ಮುಗಿದಿದೆ ಎಂದು ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಕ್ಯಾಬಿನೆಟ್ ಸಭೆ ಕರೆದು ತೀರ್ಮಾನ ಕೈಗೊಳ್ಳಬೇಕು. ಆಯೋಗದ ವರದಿ ಪಡೆದು ನಮ್ಮ ಸಮುದಾಯಕ್ಕೆ 2ಎ ಮೀಸಲಾತಿ ನೀಡುವುದೊಂದೇ ಬಾಕಿ. ಈ ವಿಚಾರವಾಗಿ ನಿನ್ನೆ ಬೆಂಗಳೂರಿನಲ್ಲಿ ನಡೆದ ಅಧಿವೇಶನದಲ್ಲಿ ಸಮಾಜದ ಮುಖಂಡ ಬಸನಗೌಡ ಪಾಟೀಲ ಯತ್ನಾಳ ಸೇರಿದಂತೆ ಹಲವರು ಧ್ವನಿ ಎತ್ತಿದ್ದು, 2ಎ ಮೀಸಲಾತಿ ಹೋರಾಟಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವ ವಿಶ್ವಾಸವಿದೆ ಎಂದರು. ಇದನ್ನೂ ಓದಿ: ಜಿಲ್ಲಾಧಿಕಾರಿ ಕಚೇರಿ ಹೆಸರಿನಲ್ಲಿ ನಕಲಿ ನೇಮಕಾತಿ ಆದೇಶ ಪತ್ರ

    ನಿನ್ನೆ ಈ ವಿಚಾರವಾಗಿ ಇಂದು ಬೆಳಗ್ಗೆ ಸಿಎಂ ಉತ್ತರ ಕೋಡುತ್ತಾರೆ ಎಂದು ಹೇಳಿದ್ದರು. ಇಂದು ಸಿಎಂ ಉತ್ತರ ಕೊಟ್ಟರು. ಏನು ತೀರ್ಮಾನ ತೆಗೆದುಕೊಂಡಿದ್ದಾರೆ ನಮಗೆ ಗೊತ್ತಿಲ್ಲ. ಶಾಸಕ ಬಸನಗೌಡ ಪಾಟೀಲ್ ಬೆಳಗಾವಿಗೆ ಬರುತ್ತಾರೆ. ಯತ್ನಾಳ್‍ಗೆ ಸಿಎಂ ಯಾವ ಭರವಸೆ ನೀಡಿದ್ದಾರೆ ಗೊತ್ತಿಲ್ಲ. ಇಂದು ಸಮಾವೇಶದಲ್ಲಿ ಯತ್ನಾಳ್ ಅವರು ಭಾಗಿಯಾಗುವ ಸಾಧ್ಯತೆ ಇದೆ. ಸಮಾವೇಶದಲ್ಲಿ ಈ ವಿಚಾರವಾಗಿ ಚರ್ಚೆ ಮಾಡುತ್ತೇವೆ. ನಂತರ ಹೋರಾಟದ ಮುಂದಿನ ರೂಪರೇಷೆ ಬಗ್ಗೆ ಚರ್ಚೆ ಮಾಡಲಾಗುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು: ಆನಂದ್ ಸ್ವರೂಪ್ ಶುಕ್ಲಾ

    ಸರ್ಕಾರ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳುವ ಭರವಸೆ ನಮಗಿದೆ. ಮೀಸಲಾತಿ ವಿಚಾರವಾಗಿ ಸರ್ಕಾರ ಬೇಗ ಸಿಹಿ ಸುದ್ದಿ ಕೊಡಬೇಕು. ಸಿಹಿ ಸುದ್ದಿ ಕೊಟ್ಟರೆ ಸಿಎಂಗೆ ಕಲ್ಲುಸಕ್ಕರೆ ತುಲಾಭಾರ ಮಾಡಲಾಗುತ್ತೆ, ಇಲ್ಲಾವಾದರೆ ಮತ್ತೆ ಹೋರಾಟ ಮುಂದುವರಿಸಲಾಗುತ್ತೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

  • ಪಂಚಮಸಾಲಿ ಸಭೆಯಲ್ಲಿ ಹೈ ಡ್ರಾಮಾ- ವಿಧಾನಸೌಧಕ್ಕೆ ಮುತ್ತಿಗೆ ವಿಚಾರಕ್ಕೆ ಕಾಂಗ್ರೆಸ್, ಬಿಜೆಪಿ ನಾಯಕರ ನಡುವೆ ವಾಕ್ಸಮರ

    ಪಂಚಮಸಾಲಿ ಸಭೆಯಲ್ಲಿ ಹೈ ಡ್ರಾಮಾ- ವಿಧಾನಸೌಧಕ್ಕೆ ಮುತ್ತಿಗೆ ವಿಚಾರಕ್ಕೆ ಕಾಂಗ್ರೆಸ್, ಬಿಜೆಪಿ ನಾಯಕರ ನಡುವೆ ವಾಕ್ಸಮರ

    ತುಮಕೂರು: ಪಂಚಮಸಾಲಿಗೆ 2ಎ ಮೀಸಲಾತಿ ಕುರಿತು ಸ್ವಾಮೀಜಿಗಳು ಪಾದಯಾತ್ರೆ ನಡೆಸುತ್ತಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಸಹ ನಿರ್ಧರಿಸಲಾಗಿತ್ತು. ಈ ಸಂಬಂಧ ಪಂಚಮಸಾಲಿಯ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಇಂದು ತುಮಕೂರಿನಲ್ಲಿ ಸಭೆ ನಡೆಸಿ ಜಯಮೃತ್ಯುಂಜಯ ಸ್ವಾಮೀಜಿಗಳನ್ನು ಮನವೊಲಿಸಲು ಸಚಿವ ಮುರುಗೇಶ್ ನಿರಾಣಿ ತೆರಳಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದನ್ನು ಕೈ ಬಿಟ್ಟು ಕೇವಲ ಸಮಾವೇಶ ನಡೆಸಿ ಪಾದಯಾತ್ರೆ ಮುಗಿಸಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ವಿಜಯಾನಂದ ಕಾಶಪ್ಪನವರ್ ವಿರೋಧ ವ್ಯಕ್ತಪಡಿಸಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಿಯೇ ಸಿದ್ಧ ಎಂದು ಹೇಳಿದ್ದಾರೆ. ಹೀಗಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ.

    ಸಚಿವ ನಿರಾಣಿ ಮನವೊಲಿಕೆ ಬಳಿಕ ವಿಧಾನಸೌಧ ಮುತ್ತಿಗೆಯನ್ನು ಕೈ ಬಿಡುವುದಾಗಿ ಸಭೆಯಲ್ಲಿ ಒಪ್ಪಿಕೊಳ್ಳಲಾಗಿದೆ. ಈ ಮೂಲಕ ಸಚಿವ ಮುರುಗೇಶ್ ನಿರಾಣಿ ಕೊನೆಗೆ ಮೇಲುಗೈ ಸಾಧಿಸಿದಂತಾಗಿದೆ. ಈ ಘಟನೆ ನಡೆಯುತ್ತಿದ್ದಂತೆ ವಿಜಯಾನಂದ ಕಾಶಪ್ಪನವರ್ ಸಭೆಯಿಂದ ಹೊರ ಬರಲು ಮುಂದಾಗಿದ್ದಾರೆ. ಮುಖಂಡರು ಮತ್ತೆ ಸಭೆಯೊಳಗೆ ಕರೆದೊಯ್ದಿದ್ದಾರೆ.

    ಈ ಮೂಲಕ ಒಂದೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕೊನೆಗೆ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನ ಸೌಧ ಮುತ್ತಿಗೆ ಕೈ ಬಿಡಲಾಗಿದೆ. ಫೆ.21 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಸಭೆಯ ನಿರ್ಣಯ ಪ್ರಕಟಿಸಿದ್ದಾರೆ.

    ಈ ಮೂಲಕ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಸ್ವಾಮೀಜಿಗಳ ಹೋರಾಟವನ್ನು ತಣ್ಣಗೆ ಮಾಡುವಲ್ಲಿ ಸಚಿವ ಮುರುಗೇಶ್ ನಿರಾಣಿ ಯಶಸ್ವಿಯಾಗಿದ್ದು, ಬೆಂಗಳೂರಿಗೆ ಆಗಮಿಸಲಿರುವ ಪಾದಯಾತ್ರೆಯನ್ನು ಕೇವಲ ಸಮಾವೇಶಕ್ಕೆ ಸೀಮಿತ ಮಾಡುವಂತೆ ಮಾಡಿದ್ದಾರೆ.

  • ಯತ್ನಾಳ್‍ಗೆ ಸಚಿವ ಸ್ಥಾನ ನೀಡ್ಲೇಬೇಕು- ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ

    ಯತ್ನಾಳ್‍ಗೆ ಸಚಿವ ಸ್ಥಾನ ನೀಡ್ಲೇಬೇಕು- ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ

    ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇವಲ ಪಂಚಮಸಾಲಿ ಸಮಾಜದ ಮುಖಂಡರಲ್ಲ. ಅವರು ಉತ್ತರ ಕರ್ನಾಟಕ ಜನರ ಪರವಾಗಿ ನಿಂತವರು. ಅವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ವಿಜಯಪುರದಲ್ಲಿ ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ್ದಾರೆ.

    15 ಜನ ಪಂಚಮಸಾಲಿ ಸಮುದಾಯದವರಲ್ಲಿ 15 ಜನ ಆಯ್ಕೆಯಾಗಿದ್ದಾರೆ. ಇದರಲ್ಲಿ ಮೂವರಿಗಾದರೂ ಸಚಿವ ಸ್ಥಾನ ನೀಡಲೇಬೇಕು. ಯತ್ನಾಳ್ ಹಿರಿಯ ನಾಯಕ ಜೊತೆಗೆ ಯಡಿಯೂರಪ್ಪನವರ ಕಷ್ಟ ಕಾಲದಲ್ಲಿ ಬೆನ್ನೆಲುಬಾಗಿ ನಿಂತವರು. ಅವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು.

    ಉಭಯ ಜಿಲ್ಲೆಗಳ ಪರವಾಗಿ ನಿರಾಣಿ ಹಾಗೂ ಯತ್ನಾಳ್ ಅವರಿಗೆ ಸಚಿವ ಸ್ಥಾನ ನೀಡಲೇಬೇಕು. ಅದರ ಜೊತೆ ಸಾಧ್ಯವಾದರೆ ಸಿದ್ದು ಸವದಿಗೂ ಸಚಿವ ಸ್ಥಾನ ಕೊಡಬೇಕು ಎಂದು ಸ್ವಾಮೀಜಿ ಆಗ್ರಹಿಸಿದರು. ಒಂದು ವೇಳೆ ಸಚಿವ ಸ್ಥಾನ ಸಿಗದೇ ಹೋದರೆ ಸಮುದಾಯದ ಮುಖಂಡರೊಂದಿಗೆ ಡಿ. 29ರಂದು ಚರ್ಚಿಸಿ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದು ಬಿಜೆಪಿ ಸರ್ಕಾರಕ್ಕೆ ಸ್ವಾಮೀಜಿ ಎಚ್ಚರಿಕೆ ನೀಡಿದರು.

    ವೀರ ರಾಣಿ ಕಿತ್ತೂರು ಚೆನ್ನಮ್ಮ ಜಯಂತಿಗೆ 70 ಲಕ್ಷ ರೂ. ಸರ್ಕಾರ ಪ್ರತಿ ವರ್ಷ ಪರಿಹಾರ ಕೊಡುತ್ತಿತ್ತು. ಆದರೆ ಈ ಬಾರಿ ಸರ್ಕಾರ ಸರಳವಾಗಿ ಚೆನ್ನಮ್ಮ ಜಯಂತಿಯನ್ನು ಆಚರಿಸುವ ಮೂಲಕ ಸಂಪೂರ್ಣ ಅನುದಾನವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಪ್ರವಾಹ ಹಾಗೂ ಬರಗಾಲದ ಹಿನ್ನೆಲೆಯಲ್ಲಿ ಅನುದಾನವನ್ನು ಬಳಸಿಕೊಳ್ಳಬೇಕು ಎಂದರು. ಇದೇ ಡಿ. 29ರಂದು ವಿಜಯಪುರದಲ್ಲಿ ವೀರ ರಾಣಿ ಕಿತ್ತೂರು ಚೆನ್ನಮ್ಮ ಜಯಂತಿಯನ್ನು ಆಚರಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಸ್ವಾಮೀಜಿ ತಿಳಿಸಿದರು.

    ಪೌರತ್ವ ಕಾಯ್ದೆ ವಿಚಾರವಾಗಿ ಪ್ರತಿಕ್ರಿಯೆ ನೀಡಲ್ಲ. ಯಾವುದೇ ವಿಚಾರವಾದರೂ ಕುಳಿತು ಚರ್ಚೆ ಮಾಡಬೇಕು. ಕೆಲ ಧರ್ಮಗಳು ಅದರ ಪರ ಹಾಗೂ ವಿರೋಧವಾಗಿ ಮಾತನಾಡುತ್ತಿದ್ದಾರೆ ಇದು ಸರಿಯಲ್ಲ ಎಂದು ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.