Tag: jayachandra

  • ‘ಆವರ್ತ’ ಹಾಡುಗಳ ರಿಲೀಸ್ ಮಾಡಿದ ರಾಷ್ಟ್ರಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧ

    ‘ಆವರ್ತ’ ಹಾಡುಗಳ ರಿಲೀಸ್ ಮಾಡಿದ ರಾಷ್ಟ್ರಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧ

    ನ್ನಡ ಚಿತ್ರರಂಗಕ್ಕೆ “ತುಳಸಿದಳ” ದಂತಹ ಅದ್ಭುತ ಚಿತ್ರವನ್ನು ಕೊಟ್ಟ ವೇಮಗಲ್ ಜಗನ್ನಾಥ್ ರಾವ್ (Vemagal Jagannathrao) ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ “ಆವರ್ತ”. ಇತ್ತೀಚಿಗೆ ಈ ಚಿತ್ರದ ಹಾಡುಗಳನ್ನು ರಾಷ್ಟ್ರಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧ (Tara Anuradha) ಬಿಡುಗಡೆ ಮಾಡಿದರು.  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟ್ರೇಲರ್ ಅನಾವರಣಗೊಳಿಸಿದರು.

    ನನ್ನ ಮೊದಲ ಚಿತ್ರ “ತುಳಸಿದಳ”. ಆ ಚಿತ್ರದಲ್ಲಿ ವೇಮಗಲ್ ಜಗನ್ನಾಥ್ ರಾವ್ ಅವರು ನನ್ನನ್ನು ಗುರುತಿಸಿ ಅವಕಾಶ ನೀಡಿದ್ದರು. ನನ್ನ ಗುರುಗಳು ನಿರ್ದೇಶಿಸಿರುವ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿರುವುದಕ್ಕೆ ಬಹಳ ಖುಷಿಯಾಗಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ತಾರಾ ಅನುರಾಧ ಶುಭ ಕೋರಿದರು. ಭಾ.ಮ.ಹರೀಶ್ ಅವರು ಚಿತ್ರಕ್ಕೆ ಶುಭ ಹಾರೈಸಿದರು. ಇದನ್ನೂ ಓದಿ:‘ಕರ್ನಾಟಕ ರತ್ನ’ದ ಅರ್ಥನೇ ಪುನೀತ್ ರಾಜ್ ಕುಮಾರ್ : ಜ್ಯೂನಿಯರ್ ಎನ್.ಟಿ.ಆರ್

    ಯುವಕನೊಬ್ಬನಿಗೆ ಕಥೆ ಬರೆಯುವ ಹವ್ಯಾಸ. ಕಾಲ್ಪನಿಕ ಕಥೆ ಬರೆಯುವ ಬಯಕೆಯಿಲ್ಲದ ಆತನಿಗೆ ನೈಜಘಟನೆ ಕುರಿತು ಕಥೆ ಬರೆಯುವ ಆಸಕ್ತಿ. ಆ ಸಮಯದಲ್ಲಿ ಆತನಿಗೊಂದು ಮೆಸೇಜ್ ಬರುತ್ತದೆ. ಆತ ಆ ಸ್ಥಳಕ್ಕೆ ಹೋದಾಗ ಏನೆಲ್ಲಾ ಆಗುತ್ತದೆ? ಎಂಬುದು ನಮ್ಮ ಚಿತ್ರದ ಕಥೆ ಎನ್ನುವ ನಿರ್ದೇಶಕ ವೇಮಗಲ್ ಜಗನ್ನಾಥರಾವ್, ನವೆಂಬರ್ 18 ರಂದು ಚಿತ್ರವನ್ನು ತೆರೆಗೆ ತರುವುದಾಗಿ ತಿಳಿಸಿದರು.

    ಕಥೆಗಾರನ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ನಾಯಕ  ಜಯ್ ಚಂದ್ರ (Jayachandra) ಹೇಳಿದರು. ಸಿ.ಓ.ಡಿ ಅಧಿಕಾರಿ ಪಾತ್ರಧಾರಿ ಧನ್ವಿತ್ ಹಾಗೂ ನಾಯಕಿ ನಯನ (Nayana) “ಆವರ್ತ” (Avartha) ಚಿತ್ರದ ಬಗ್ಗೆ ಮಾತನಾಡಿದರು. ಮೂರು ಸಾಹಸ ಸನ್ನಿವೇಶಗಳು ಚೆನ್ನಾಗಿದೆ ಎಂದು ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ತಿಳಿಸಿದರು. ಸಂಗೀತ ನಿರ್ದೇಶಕ ಅತಿಶಯ್ ಜೈನ್ ಹಾಗೂ ಛಾಯಾಗ್ರಾಹಕ ಮಲ್ಲಿಕಾರ್ಜುನ್ ತಮ್ಮ ಕಾರ್ಯದ ಕುರಿತು ಮಾಹಿತಿ ನೀಡಿದರು.

    Live Tv
    [brid partner=56869869 player=32851 video=960834 autoplay=true]

  • ಕಾರು ಪಲ್ಟಿ – ಪ್ರಾಣಾಪಾಯದಿಂದ ಟಿಬಿ ಜಯಚಂದ್ರ ಪಾರು

    ಕಾರು ಪಲ್ಟಿ – ಪ್ರಾಣಾಪಾಯದಿಂದ ಟಿಬಿ ಜಯಚಂದ್ರ ಪಾರು

    ತುಮಕೂರು: ಪ್ರಾಣಾಪಾಯದಿಂದ ಮಾಜಿ ಸಚಿವ, ಕಾಂಗ್ರೆಸ್‌ ನಾಯಕ ಟಿಬಿ ಜಯಚಂದ್ರ ಪಾರಾಗಿದ್ದಾರೆ.

    ಶಿರಾ ಕ್ಷೇತ್ರದ‌ ಕಾಂಗ್ರೆಸ್ ಮಾಜಿ ಶಾಸಕ ಜಯಚಂದ್ರ ರಾತ್ರಿ ಬೆಂಗಳೂರಿಗೆ ಫಾರ್ಚುನರ್ ಕಾರಿನಲ್ಲಿ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಚರಿಸುತ್ತಿದ್ದ ಕಾರು ರಾತ್ರಿ 1 ಗಂಟೆಯ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಇದನ್ನೂ ಓದಿ: ಕೆಜಿಎಫ್-2 ಸಿನಿಮಾ ವೀಕ್ಷಣೆ ವೇಳೆ ಹಾರಿದ ಗುಂಡು- ಯುವಕನ ಹೊಟ್ಟೆಗೆ ಗಾಯ

    ತುಮಕೂರು ತಾಲೂಕಿನ ಸಿಬಿ ಬಳಿ ಕಾರು ಉರುಳಿಬಿದ್ದಿದ್ದು, ಟಿಬಿ ಜಯಚಂದ್ರ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಜಯಚಂದ್ರ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಗನ್ ಮ್ಯಾನ್ ಹಾಗೂ‌‌ ಕಾರು ಚಾಲಕ ಅಪಘಾತದಿಂದ ಪಾರಾಗಿದ್ದಾರೆ.

  • ಮೌಢ್ಯ ನಿಷೇಧ ಕಾಯ್ದೆಗೆ ಕ್ಯಾಬಿನೆಟ್ ಒಪ್ಪಿಗೆ: ಯಾವುದಕ್ಕೆ ನಿಷೇಧ?

    ಮೌಢ್ಯ ನಿಷೇಧ ಕಾಯ್ದೆಗೆ ಕ್ಯಾಬಿನೆಟ್ ಒಪ್ಪಿಗೆ: ಯಾವುದಕ್ಕೆ ನಿಷೇಧ?

    ಬೆಂಗಳೂರು: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಮೌಢ್ಯ ನಿಷೇಧ ತಿದ್ದುಪಡಿ ಕಾಯ್ದೆಗೆ ಅಂತೂ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ.ಕೆಂಡ ಹಾಯುವಂತಹ ಆಚರಣೆಗಳು ಬಲವಂತದಿಂದ ನಡೆಯಬಾರದೆಂದು ಸೂಚಿಸಿದೆ.

    ಬೆತ್ತಲೆ ಸೇವೆಗೆ ಸಂಪೂರ್ಣ ನಿಷೇಧ, ದೇವರ ಹೆಸರಿನಲ್ಲಿ ಹಿಂಸೆಗೆ ಆಸ್ಪದವಿಲ್ಲ, ಉರುಳು ಸೇವೆ ನಿಷೇಧ, ಎಂಜಲೆಲೆ ಮೇಲೆ ಉರುಳುವುದು ನಿಷೇಧ, ಮಡೆಸ್ನಾನ ನಿಷೇಧ, ಜ್ಯೋತಿಷ್ಯ, ವಾಸ್ತುಗೆ ಯಾವುದೇ ಅಡ್ಡಿ ಇಲ್ಲ, ದೆವ್ವ ಭೂತ ಬಿಡಿಸುವ ನೆಪದಲ್ಲಿ ಹಿಂಸೆ ಶಿಕ್ಷಾರ್ಹವಾಗಿದೆ. ಜೈನ ಸಮುದಾಯದ ಕೇಶಲೋಚನಕ್ಕೆ ನಿಷೇಧವಿಲ್ಲ ಎಂದು ಸೂಚಿಸಿದೆ.

    ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿಬಿ ಜಯಚಂದ್ರ, ಅಮಾನವೀಯ ಆಚರಣೆಗಳು ಮನುಷ್ಯನನ್ನು ನಗ್ನಗೊಳಿಸುವ ವಾಮಾಚಾರ, ಮಾಟ, ಭಾನಾಮತಿ, ಮಡೆಸ್ನಾನ ಮನುಷ್ಯನಿಗೆ ದೈಹಿಕ, ಮಾನಸಿಕ ಹಿಂಸೆ ನೀಡುವಂತಹ ಆಚರಣೆಗಳಿಗೆ ನಿಷೇಧ ಹೇರಿದೆ. ಪ್ರದಕ್ಷಿಣೆ, ಯಾತ್ರೆ, ಹರಿಕತೆ, ಕೀರ್ತನೆ, ಪ್ರವಚನ, ಭಜನೆ, ಪುರಾತನ ಸಂಪ್ರದಾಯ ಶಿಕ್ಷಣಗಳಿಗೆ ಯಾವುದೇ ತೊಂದರೆ ಇಲ್ಲ. ಪವಾಡಗಳ ಕುರಿತು ಸಂತರು ಪ್ರಚಾರ ಮಾಡುವುದು, ಅದಕ್ಕೆ ಪೂರಕವಾದ ಸಾಹಿತ್ಯ ರಚಿಸಲು ಅಡ್ಡಿ ಇಲ್ಲ ಎಂದು ಹೇಳಿದರು.

    ದೇವಸ್ಥಾನ, ದರ್ಗಾ, ಮಸೀದಿ, ಗುರುದ್ವಾರ, ಚರ್ಚ್‍ಗಳಲ್ಲಿ ನಡೆಯುವ ಆಚರಣೆಗಳಿಗೆ ಯಾವುದೇ ರೀತಿಯ ಅಡಚಣೆ ಇಲ್ಲ. ದೈಹಿಕ ಹಿಂಸೆ ಆಗಬಾರದು ಅಷ್ಟೇ ಎಂದು ಮೌಢ್ಯ ನಿಷೇಧ ಕಾಯ್ದೆ ಹೇಳಿದೆ. ಎಲ್ಲ ಧರ್ಮಗಳ ಸಾಂಪ್ರದಾಯಿಕ ಆಚರಣೆ, ಮೆರವಣಿಗೆಯಂತಹ ಕ್ರಮಗಳಿಗೂ ನಿಷೇಧವಿಲ್ಲ. ಜ್ಯೋತಿಷ್ಯ, ವಾಸ್ತುವಿನಿಂತಹ ವಿಷಯಗಳಲ್ಲಿ ಸಲಹೆ ಪಡೆಯಲು ಯಾವುದೇ ತೊಂದರೆಯಿಲ್ಲ ಎಂದು ವಿವರಿಸಿದರು.

    ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಈ ಮೌಢ್ಯ ನಿಷೇಧ ತಿದ್ದುಪಡಿ ಕಾಯ್ದೆಯನ್ನು ಮಂಡಿಸಲಾಗುವುದು. ಅಲ್ಲಿ ಸುಧೀರ್ಘ ಚರ್ಚೆಯ ನಂತರ ಕೆಲವು ಅಂಶಗಳು ಸೇರಿಕೆಯಾಗಬಹುದು ಕೆಲವು ಅಂಶಗಳನ್ನು ಕೈ ಬಿಡಬಹುದು ಎಂದರು. ಒಟ್ಟಿನಲ್ಲಿ ವಿಧಾನಮಂಡಲ ಅಧಿವೇಶನದಲ್ಲಿ ಇದು ಅಂಗೀಕಾರ ಪಡೆದ ನಂತರದ ದಿನಗಳಲ್ಲಿ ಗೆಜೆಟ್ ಮೂಲಕ ಪ್ರಕಟವಾಗಲಿದೆ. ಆದರೆ ಕಾಲ ಕಾಲಕ್ಕೆ ಇದರಲ್ಲಿ ಬದಲಾವಣೆ ಮಾಡಲು ಅವಕಾಶವಿದೆ ಎಂದು ಅವರು ಹೇಳಿದರು.

    ಕ್ಯಾಬಿನೆಟ್ ನಿರ್ಧಾರಗಳು:
    ರಾಜ್ಯದಲ್ಲಿರುವ ಪಶುಚಿಕಿತ್ಸಾ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ನಿರ್ಧರಿಸಿದ್ದು 2017-18 ರ ಸಾಲಿನಲ್ಲಿ 36.72 ಕೋಟಿ ರೂ. ವೆಚ್ಚದಲ್ಲಿ 306 ಪಶುಚಿಕಿತ್ಸಾ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಅಲ್ಲಿ ಹೆಚ್ಚುವರಿ ಅನುಕೂಲಗಳನ್ನು ಒದಗಿಸಲಾಗುವುದು ಎಂದರು.

    ಕೃಷಿ ಭಾಗ್ಯ ಯೋಜನೆ ಅಡಿ ಕರಾವಳಿ ಜಿಲ್ಲೆಗಳ ಕೆಲವು ಸೀಮಿತ ಪ್ರದೇಶಗಳನ್ನು ಸೇರಿಸಿ ಉಳಿದಂತೆ ರಾಜ್ಯಾದ್ಯಂತ ರೈತರಿಗೆ ತರಕಾರಿ ಬೀಜಗಳ ಕಿಟ್ ಅನ್ನು ಒದಗಿಸಲು ಸರ್ಕಾರ ನಿರ್ಧರಿಸಿದ್ದು ಇದಕ್ಕಾಗಿ ಮೂವತ್ತು ಕೋಟಿ ರೂ ಗಳನ್ನು ಒದಗಿಸಲು ತೀರ್ಮಾನಿಸಿದೆ. ಒಂದು ತರಕಾರಿ ಬೀಜಗಳ ಕಿಟ್ ಅನ್ನು ತಲಾ ಎರಡು ಸಾವಿರ ರೂ ಗಳ ವೆಚ್ಚದಲ್ಲಿ ಒದಗಿಸಲಾಗುವುದು ಎಂದು ತಿಳಿಸಿದರು. ಇದರಿಂದ ರಾಜ್ಯದ ಅತಿ ಸಣ್ಣ ಮತ್ತು ಸಣ್ಣ ರೈತರಿಗೆ ಅನುಕೂಲವಾಗಲಿದ್ದು ಸುಮಾರು 1.47 ಲಕ್ಷ ಎಕರೆ ಪ್ರದೇಶದಲ್ಲಿ ಈ ಕೀಟಗಳ ಸಹಾಯದಿಂದ ತರಕಾರಿ ಬೆಳೆಯಲು ಅನುಕೂಲವಾಗಲಿದೆ ಎಂದು ಹೇಳಿದರು.

    ಆರ್ಥಿಕ ದುರ್ಬಲರಿಗೆ 6000 ಕೋಟಿ ರೂ ವೆಚ್ಚದಲ್ಲಿ ಒಂದು ಲಕ್ಷ ಮನೆಗಳನ್ನು ನಿರ್ಮಿಸಿಲು ಸಂಪುಟ ನಿರ್ಧರಿಸಿದೆ. ಇದಕ್ಕಾಗಿ 468 ಎಕರೆ ಭೂಮಿಯನ್ನು ಗುರುತಿಸಿದ್ದು, ಈ ಯೋಜನೆಯಡಿ ಫಲಾನುಭವಿಗಳು ತಲಾ ಒಂದು ಲಕ್ಷ ರೂ ಪಾವತಿಸಿ ಬೇಕು. ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ನಿರ್ಮಿಸಲಾಗುವ ಮನೆಗಳ ನಿರ್ಮಾಣಕ್ಕೆ ಹುಟ್ಟಿಕೊಂಡಂತಹ ಹೌಸ್ಸಿಂಗ್ ಬೋರ್ಡ್ ಕೊಳಚೆ ನಿರ್ಮೂಲನಾ ಮಂಡಳಿ, ರಾಜೀವ್ ಗಾಂಧಿ ಕಾರ್ಪೊರೇಷನ್ ಸಂಸ್ಥೆಗಳ ವತಿಯಿಂದ ಐನೂರು ಕೋಟಿ ರೂ ಕೇಂದ್ರ ಸರ್ಕಾರದಿಂದ 1300 ಕೋಟಿ ರೂಗಳನ್ನು ಪಡೆಯಲಾಗುವುದು. ರಾಜ್ಯ ಸರ್ಕಾರವೂ ತನ್ನ ಪಾಲು ಹಾಕಲಿದೆ ಎಂದು ವಿವರ ನೀಡಿದರು.

    ಬಿಎಂಟಿಸಿಗೆ ಒಂದೂವರೆ ಸಾವಿರ ಬಸ್ಸುಗಳನ್ನು ಖರೀದಿಸಲು ಸರ್ಕಾರ ನಿರ್ಧರಿಸಿದ್ದು ಉಳಿದಂತೆ ಒಂದೂವರೆ ಸಾವಿರ ಬಸ್ಸುಗಳನ್ನು ಖಾಸಗಿಯವರಿಂದ ಗುತ್ತಿಗೆ ಆಧಾರದ ಮೇಲೆ ಪಡೆಯಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಇದು ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುವ ಕೆಲಸವಲ್ಲವೇ? ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಿಮ್ಮ ಭಾವನೆಗಳನ್ನು ಸಂಪುಟದ ಮುಂದಿಡುತ್ತೇನೆ ಎಂದರಲ್ಲದೇ, ಗುತ್ತಿಗೆ ಆಧಾರದ ಮೇಲೆ ಪಡೆಯುವ ಒಂದೂವರೆ ಸಾವಿರ ಬಸ್ಸುಗಳಿಗೆ ಪ್ರತಿವರ್ಷ ಎಪ್ಪತ್ತೇಳು ಕೋಟಿ ರೂ ಗಳನ್ನು ಪಾವತಿಸಲಾಗಿದೆ ಎಂದರು.

    ಸೈಕಲ್ ಬಳಕೆಗೆ ಉತ್ತೇಜನ ನೀಡುವ ಸಲುವಾಗಿ ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಯೋಜನೆ ಯಶಸ್ವಿಯಾಗಿರುವುದರಿಂದ ಬೆಂಗಳೂರಿನಲ್ಲೂ ಈ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ 80.18 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ಹೇಳಿದರು. ಬಿಬಿಎಂಪಿ ವ್ಯಾಪ್ತಿಗೆ ಹೊಸತಾಗಿ 110 ಗ್ರಾಮಗಳು ಸೇರಿರುವುದರಿಂದ ಕುಡಿಯುವ ನೀರಿನ ಐದನೇ ಹಂತದ ಯೋಜನೆಯನ್ನು 5,550 ಕೋಟಿ ರೂ. ವೆಚ್ಚದಲ್ಲಿ ಜಾರಿಗೊಳಿಸಲಾಗುವುದು ಎಂದು ವಿವರಿಸಿದರು. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗುವಂತೆ ಯುವ ಚೈತನ್ಯ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಲಾಗಿದ್ದು ಇದಕ್ಕಾಗಿ 20 ಕೋಟಿ ರೂ. ಅನುದಾನ ಒದಗಿಸಲು ತೀರ್ಮಾನಿಸಲಾಗಿದೆ ಎಂದು ಜಯಚಂದ್ರ ಅವರು ವಿವರವಾಗಿ ತಿಳಿಸಿದರು.

    ಎಂಬಿ ಪಾಟೀಲ್ ಹೇಳಿಕೆ:
    ಕೃಷ್ಣ ಮೇಲ್ದಂಡೆ ಯೋಜನೆ ಹಂತಕ್ಕೆ 17 ಸಾವಿರ ಕೋಟಿ ರೂಪಾಯಿ ಹಿಂದಿನ ಸರ್ಕಾ ನಿಗದಿ ಪಡಿಸಿತ್ತು. ಆದರೆ ಹೊಸ ಭೂಸ್ವಾಧೀನ ಕಾಯ್ದೆ ಅಂತೆ 51.148 ಕೋಟಿ ಪರಿಷ್ಕೃತ ಅಂದಾಜು ಮೊತ್ತಕ್ಕೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. 6.19 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಇದ್ರಿಂದ ನೀರಾವರಿ ವ್ಯವಸ್ಥೆ ಕಲ್ಪಿಸಲಾಗುವುದು. ಹೊಸ ಕಾಯ್ದೆಯ ನಿಯಮದಂತೆ ಭೂಸ್ವಾದೀನ ರೈತರಿಗೆ ನಾಲ್ಕು ಪಟ್ಟು ಹಣ ಸಿಗಲಿದೆ. ಉತ್ತರ ಕರ್ನಾಟಕದ ನೀರಾವರಿ ದೃಷ್ಟಿಯಿಂದ ಈ ಮಹತ್ವದ ನಿರ್ಧಾರ ತೆಗೆದು ಕೊಳ್ಳಲಾಗಿದೆ ಎಂದು ಎಂಬಿ ಪಾಟೀಲ್ ಹೇಳಿಕೆ ನೀಡಿದರು.

    ಕಾವೇರಿ ವಿಚಾರವಾಗಿ ಮಾತನಾಡಿದ ಎಂಬಿ ಪಾಟೀಲ್ ನಿರ್ವಹಣ ಮಂಡಳಿಗೆ ರಾಜ್ಯದ ವಿರೋಧವಿದೆ. ಅದಕ್ಕೆ ಸೂಕ್ತ ದಾಖಲೆಗಳೊಂದಿಗೆ ಸ್ಪಷ್ಟವಾದ ವರದಿಯನ್ನು ಸುಪ್ರೀಂಗೆ ಸಲ್ಲಿಕೆ ಮಾಡುತ್ತೇವೆ ಎಂದು ತಿಳಿಸಿದರು.

  • ಐಟಿ, ಇಡಿ ದಾಳಿಗೊಳಗಾದ ಸಿಎಂ ಆಪ್ತರಿಗಿಲ್ಲ ರಿ-ಪೋಸ್ಟಿಂಗ್ ಭಾಗ್ಯ!

    ಐಟಿ, ಇಡಿ ದಾಳಿಗೊಳಗಾದ ಸಿಎಂ ಆಪ್ತರಿಗಿಲ್ಲ ರಿ-ಪೋಸ್ಟಿಂಗ್ ಭಾಗ್ಯ!

    ಬೆಂಗಳೂರು: ಐಟಿ ದಾಳಿ, ಇಡಿ ಶಾಕ್‍ನಿಂದ ನಲುಗಿ ಹೋಗಿದ್ದ ಸಿಎಂ ಆಪ್ತರಿಗೆ ಈಗ ಮತ್ತೆ ರೀ-ಪೋಸ್ಟಿಂಗ್ ಇಲ್ಲವಾಗಿದೆ. ದಾಳಿ ಮುಗಿದು ವರ್ಷವಾದ್ರೂ ಮತ್ತೆ ನೌಕರಿ ಕೊಡೋಕೆ ಯಾರು ಸಿದ್ಧರಿಲ್ಲ.

    ರಾಜ್ಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಯೋಜನಾಧಿಕಾರಿ ಜಯಚಂದ್ರ ಹಾಗು ಕಾವೇರಿ ನಿಗಮದ ಮುಖ್ಯಸ್ಥರಾಗಿದ್ದ ಚಿಕ್ಕರಾಯಪ್ಪ ಇಬ್ಬರು ಅಧಿಕಾರಿಗಳು ನೋಟು ಬ್ಯಾನ್ ವೇಳೆ ಐಟಿ ಮತ್ತು ಇಡಿ ರೇಡ್ ಗೆ ತುತ್ತಾಗಿದ್ದರು. ಜೈಲಿಗೆ ಹೋಗಿ, ಮತ್ತೆ ಹೊರಗಡೆ ಬಂದು ಐದಾರು ತಿಂಗಳು ಕಳೆದರು ಮತ್ತೆ ನೌಕರಿ ಭಾಗ್ಯ ಸಿಗುತ್ತಿಲ್ಲ.

    ಈ ಇಬ್ಬರು ಅಧಿಕಾರಿಗಳನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬಹುದೇ ಅಂತ ಡಿಪಿಎಆರ್ ಇಲಾಖೆ, ಐಟಿ, ಇಡಿಗೆ ಪತ್ರ ಬರೆದಿದೆ. ಆದರೆ ಐಟಿ ಮತ್ತು ಆದಾಯ ತೆರಿಗೆ ಇಲಾಖೆಯಿಂದ ಈ ಬಗ್ಗೆ ಯಾವುದೇ ಉತ್ತರ ಸಿಕ್ಕಿಲ್ಲ. ಇದನ್ನೆಲ್ಲಾ ಗಮನಿಸ್ತಿರೋ ಡಿಪಿಎಆರ್ ಇಲಾಖೆ, ಸಿಎಂ ಕಚೇರಿಗೆ ಫೈಲ್ ಕಳುಹಿಸಿದೆ. ಇತ್ತ ಇಬ್ಬರು ಆರೋಪಿಗಳಿಗೆ ಮತ್ತೆ ನೌಕರಿ ಭಾಗ್ಯ ಕೊಟ್ಟರೆ ಮುಜುಗರ ಅನುಭವಿಸಬೇಕಾಗುತ್ತದೆ ಅಂತ ಸಿಎಂ ಕಚೇರಿಯ ಮೂಲಗಳು ತಿಳಿಸಿವೆ.

  • ಕೊನೆಗೂ ಭ್ರಷ್ಟ ಜಯಚಂದ್ರ ವಿರುದ್ಧ ಲೋಕಾ ತನಿಖೆಗೆ ಸರ್ಕಾರದ ಅನುಮತಿ

    ಬೆಂಗಳೂರು: ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದ್ರು ಅನ್ನೋದು ಇದಕ್ಕೆ ಇರಬೇಕು. ಲೋಕಾಯುಕ್ತ ರೇಡ್, ಸಿಬಿಐ ದಾಳಿ, ಇಡಿ ತನಿಖೆ, ಐಟಿಯವರ ಹುಡುಕಾಟ ಇವೆಲ್ಲಾ ಮುಗಿದ ಮೇಲೆ ರಾಜ್ಯ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯನವರಿಗೆ ಜ್ಞಾನೋದಯವಾಗಿದೆ.

    ತಾನು ಗಳಿಸ ಬೇಕಿದ್ದ ಆದಾಯಕ್ಕಿಂತ ಶೇ.102 ಜಾಸ್ತಿ ಇದೆ ಅಂತ ಲೋಕಾಯುಕ್ತ ಪೊಲೀಸರು ತಿಳಿಸಿದ್ರು ರಾಜ್ಯ ಸರ್ಕಾರ ಅನುಮತಿ ಕೊಟ್ಟಿರಲಿಲ್ಲ. ಆದ್ರೆ ಎಲ್ಲಾ ಅವಮಾನ, ಮುಜುಗರಗಳನ್ನು ಅನುಭವಿಸಿದ ಮೇಲೆ ಕೊನೆಗೂ ರಾಜ್ಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಜಯಚಂದ್ರ ವಿರುದ್ಧ ತನಿಖೆ ನಡೆಸಲು ಸರ್ಕಾರ ಸಮ್ಮತಿ ಸೂಚಿಸಿದೆ.

    ಜಯಚಂದ್ರ 2009ರಲ್ಲಿ ಹೇಮಾವತಿ ನಾಲೆ ಯೋಜನೆಯ ಮುಖ್ಯ ಎಂಜಿನಿಯರ್ ಆಗಿದ್ದರು. ಆ ವೇಳೆ ಅಂದಿನ ಲೋಕಾಯುಕ್ತ ಎಡಿಜಿಪಿ ರೂಪ್‍ಕುಮಾರ್ ದತ್ತ ಅವರ ನೇತೃತ್ವದ ತಂಡ ದಾಳಿ ನಡೆಸಿ ಇವರ ಆದಾಯದ ಮೂಲಗಳನ್ನು ಕಲೆಹಾಕಿತ್ತು. ಆದಾಯಕ್ಕಿಂತ ಜಾಸ್ತಿ ಆಸ್ತಿ ಸಂಪಾದನೆ ಮಾಡಿದ್ದಾರೆ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಂತ 2012 ರಲ್ಲಿ ಪತ್ರಬರೆದ್ರು ಸರ್ಕಾರ ಅನುಮತಿ ನೀಡದೆ ಸುಮ್ಮನೇ ಕೂತಿತ್ತು.

    ಈ ವಿಚಾರದಲ್ಲಿ ಬಿಜೆಪಿ ಮುಖ್ಯಮಂತ್ರಿಗಳು ನಿದ್ದೆ ಮಾಡಿದ್ರೇ ಹೊರತು ಅನುಮತಿ ನೀಡಿರಲಿಲ್ಲ. ಅದರಲ್ಲೂ ಭಾಸ್ಕರ್‍ರಾವ್ ಲೋಕಾಯುಕ್ತರಾಗಿ ಬಂದ ಮೇಲೆ ಈ ವಿಚಾರದಲ್ಲಿ ಪತ್ರ ವ್ಯವಹಾರವೇ ನಿಂತು ಹೋಗಿತ್ತಂತೆ. ಕೊನೆಗೆ ಎಲ್ಲಾ ಮುಜುಗರ ಅನುಭವಿಸಿದ ಸಿದ್ದು ಸರ್ಕಾರ ಈಗ ಅನುಮತಿ ನೀಡಿದೆ.