Tag: jayalalitha

  • ಶೋಕಸಾಗರದಲ್ಲಿ ಮುಳುಗಿದ ತಮಿಳುನಾಡು- ಹೃದಯಾಘಾತದಿಂದ ಮೂವರ ದುರ್ಮರಣ

    ಶೋಕಸಾಗರದಲ್ಲಿ ಮುಳುಗಿದ ತಮಿಳುನಾಡು- ಹೃದಯಾಘಾತದಿಂದ ಮೂವರ ದುರ್ಮರಣ

    ಚೆನ್ನೈ: ಕಳೆದ ವರ್ಷ ಜಯಲಲಿತಾರನ್ನ, ಈಗ ಕರುಣಾನಿಧಿಯನ್ನು ಕಳೆದುಕೊಂಡಿರುವ ತಮಿಳುನಾಡು ಜನ ಶೋಕಸಾಗರದಲ್ಲಿ ಮುಳುಗಿದ್ದಾರೆ. ಅಯ್ಯ.. ಅಯ್ಯ ಎಂದು ಕಣ್ಣೀರಿಟ್ಟು ಗೋಳಾಡುತ್ತಿದ್ದಾರೆ.

    ನೆಚ್ಚಿನ ನಾಯಕನ ಸಾವಿನ ಸುದ್ದಿ ಕೇಳಿ ಮೂವರು ಹೃದಯಾಘಾತದಿಂದ ಮೃತಪಟ್ಟಿದಾರೆ. ಇನ್ನು ಅಗಲಿದ ನಾಯಕನ ಗೌರವಾರ್ಥ ಏಳು ದಿನ ಶೋಕಾಚರಣೆ ಆಚರಿಸಲು ಸರಕಾರ ಆದೇಶಿಸಿದೆ. ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಿ ಗೌರವ ಸೂಚಿಸಲಾಗಿದೆ. ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲೂ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಿ ಗೌರವ ಸೂಚಿಸಲಾಗುತ್ತದೆ.

    ಕರ್ನಾಟದಲ್ಲೂ ಇಂದು ಶೋಕಾಚರಣೆ ಘೋಷಣೆ ಮಾಡಲಾಗಿದೆ. ಸಂಜೆ ಹೊತ್ತಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದ್ದು, ಪ್ರಧಾನಿ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಕುಮಾರಸ್ವಾಮಿ, ಸೇರಿದಂತೆ ವಿವಿಧ ರಾಜ್ಯದ ಮುಖ್ಯಮಂತ್ರಿಗಳು, ಸೇರಿದಂತೆ ಗಣ್ಯಾತಿ ಗಣ್ಯರ ಭಾಗವಹಿಸಲಿದ್ದಾರೆ. ಪತ್ನಿಯರಿಬ್ಬರು, ನಾಲ್ವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿರುವ ಮುತ್ತುವೇಲು ನಿಧನಕ್ಕೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಕರುಣಾನಿಧಿ ಆಸ್ಪತ್ರೆಗೆ ದಾಖಲಾಗಿದ್ದ ವಿಷಯ ತಿಳಿದು 21 ಮಂದಿ ದುರ್ಮರಣ!

     ಘಟನೆ ವಿವರ:
    ತಮಿಳುನಾಡಿನ ಮಾಜಿ ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂ. ಕಲೈನರ್ ಕರುಣಾನಿಧಿ(94) ಅವರು ಉಸಿರಾಟದ ತೊಂದರೆ, ಜ್ವರ ಹಾಗೂ ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಜುಲೈ 22ರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 22ರ ಬಳಿಕ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ ಆರೋಗ್ಯದಲ್ಲಿ ಮತ್ತೇ ಏರಿಳಿತ ಕಂಡು ಬಂದ ಹಿನ್ನೆಲೆಯಲ್ಲಿ ಕರುಣಾನಿಧಿ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾವೇರಿ ಆಸ್ಪತ್ರೆ ವೈದ್ಯರು ಸೋಮವಾರವೇ 24 ಗಂಟೆಗಳ ಕಾಲ ಯಾವ ಭರವಸೆಗಳನ್ನು ನೀಡೋದಕ್ಕೆ ಸಾಧ್ಯವಿಲ್ಲ. ಕ್ಷಣ ಕ್ಷಣಕ್ಕೂ ಕರುಣಾನಿಧಿ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಸ್ಪಷ್ಟಪಡಿಸಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ವಿಧಿವಶರಾದ್ರು. ಇದನ್ನೂ ಓದಿ: ರಾಜಾಜಿಹಾಲ್‍ನಲ್ಲಿ ಕರುಣಾನಿಧಿ ಪಾರ್ಥಿವ ಶರೀರ-ಸಾವಿರಾರು ಜನರಿಂದ ಅಂತಿಮ ದರ್ಶನ

    ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ರಾತ್ರಿ 9.30ರ ಸುಮಾರಿಗೆ ಕಾವೇರಿ ಆಸ್ಪತ್ರೆಯಿಂದ ಗೋಪಾಲಪುರಂ ನಿವಾಸಕ್ಕೆ ಕೊಂಡೊಯ್ದು ಅಂತಿಮ ದರ್ಶನಕ್ಕಿಡಲಾಗಿತ್ತು. ಈ ವೇಳೆ ನಟ ರಜಿನಿಕಾಂತ್, ಪಶ್ಚಿಮಗಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆದರು. ಬಳಿಕ ಮಧ್ಯರಾತ್ರಿ 1.30 ರ ಸುಮಾರಿಗೆ ಸಿಐಟಿ ಕಾಲೋನಿಯಲ್ಲಿರುವ ಪುತ್ರಿ ಕನಿಮೋಳಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯ್ತು. ನಸುಕಿನ ಜಾವ 5.30ರ ನಂತರ ರಾಜಾಜಿ ಹಾಲ್‍ನಲ್ಲಿ ಸಾರ್ವಜನಿಕ ದರ್ಶನಕ್ಕಿಡಲಾಗಿದ್ದು, ಸಾಗರೋಪಾದಿಯಲ್ಲಿ ಜನ ಹರಿದು ಬರ್ತಿದ್ದಾರೆ.

    ಐದು ಬಾರಿ ಮುಖ್ಯಮಂತ್ರಿ:
    ಕರುಣಾನಿಧಿ ಅವರು 1924 ಜೂನ್ 3ರಂದು ಮದ್ರಾಸ್ ನ ನಾಗಪಟ್ಟಿನಂ ಜಿಲ್ಲೆಯ ಥಿರುಕ್ಕುವಲೈ ನಲ್ಲಿ ಜನಿಸಿದ್ದರು. ತಮಿಳುನಾಡಿನ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ತಮಿಳುನಾಡಿನ ರಾಜಕೀಯ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ನ ಅಧ್ಯಕ್ಷರಾಗಿದ್ದರು. 1969 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಮತ್ತೆ 2006 ಮೇ 13 ರಂದು ಐದನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.

  • ಜಯಲಲಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಡಿಯೋ ರಿಲೀಸ್

    ಜಯಲಲಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಡಿಯೋ ರಿಲೀಸ್

    ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ, ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ರೆಕಾರ್ಡ್ ಮಾಡಲಾಗಿರೋ ವಿಡಿಯೋವನ್ನ ಬಿಡುಗಡೆ ಮಾಡಲಾಗಿದೆ.

    ಶಶಿಕಲಾ ನಟರಾಜನ್ ಬಣ ಈ ವಿಡಿಯೋವನ್ನ ರಿಲೀಸ್ ಮಾಡಿದ್ದು, ಆಸ್ಪತ್ರೆಯ ಬೆಡ್ ಮೇಲೆ ಜಯಲಲಿತಾ ಆಹಾರ ಸೇವನೆ ಮಾಡುತ್ತಿರೋ 20 ಸೆಕೆಂಡ್‍ಗಳ ವಿಡಿಯೋ ಇದಾಗಿದೆ. ವಿಡಿಯೋದಲ್ಲಿ ಜಯಲಲಿತಾ ಜ್ಯೂಸ್ ಕುಡಿಯುತ್ತಾ ಟಿವಿ ನೋಡುತ್ತಿರೋದನ್ನ ಕಾಣಬಹುದು. ಗುರುವಾರ ಆರ್‍ಕೆ ನಗರ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಈ ಹೊತ್ತಲ್ಲೇ ಶಶಿಕಲಾ ಬಣ ಆಸ್ಪತ್ರೆ ವಿಡಿಯೋವನ್ನ ಬಿಡುಗಡೆ ಮಾಡಿದೆ. ಜಯಲಲಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಫೋಟೋ ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದರೂ ಯಾವುದೇ ಫೋಟೋ ರಿಲೀಸ್ ಆಗಿರಲಿಲ್ಲ.

    ಜಯಲಲಿತಾ ಕೊನೆಯ ದಿನಗಳಲ್ಲಿ ಹೇಗಿದ್ದರು ಎಂಬುದಕ್ಕೆ ಸಾಕ್ಷಿಯಾಗಿ ನಮ್ಮಲ್ಲಿ ಕೆಲವು ವಿಡಿಯೋಗಳಿದ್ದು, ಅವುಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಶಶಿಕಲಾ ಸೋದರ ಸಂಬಂಧಿ ಜಯನಾಥ್ ದಿವಾಕರನ್ ಈ ಹಿಂದೆ ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದರು. ಪನ್ನಿರ್ ಸೆಲ್ವಂ ಅವರ ಗುಂಪಿನ ಟೀಕೆಗಳಿಗೆ ಉತ್ತರ ಎಂಬಂತೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು.

    ಜಯಲಲಿತಾ ಸಾವು ನಿಗೂಢವಾಗಿದ್ದು, ಈ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಪನ್ನೀರ್ ಸೆಲ್ವಂ ಬಣ ಒತ್ತಾಯಿಸಿತ್ತು. ಅಲ್ಲದೆ ಜಯಲಲಿತಾ ಅವರನ್ನ ಕೊಲೆ ಮಾಡಲಾಗಿದೆ ಎಂದು ಕೂಡ ಆರೋಪಿಸಲಾಗಿತ್ತು. ಇದನ್ನು ತಮ್ಮ ಫೇಸ್ ಬುಕ್ ಹೇಳಿಕೆಯಲ್ಲಿ ಉಲ್ಲೇಖಿಸಿದ್ದ ದಿವಾಕರನ್, ”ಜಯಲಲಿತಾ ಹಾಗೂ ಶಶಿಕಲಾ ನಡುವಿನ ಅನ್ಯೋನ್ಯತೆ ಎಷ್ಟಿತ್ತು ಎಂಬುದು ನನಗೆ ಗೊತ್ತು. ಅದಕ್ಕೆ ಸಾಕ್ಷಿಯಾಗಿ ಜಯಲಲಿತಾ ಅವರ ಕೊನೆಯ ದಿನಗಳಲ್ಲಿ ಅವರ ಹಾಗೂ ಶಶಿಕಲಾ ನಡುವಿನ ಬಾಂಧವ್ಯವನ್ನು ಬಿಂಬಿಸುವ ವೀಡಿಯೋಗಳು ನನ್ನಲ್ಲಿವೆ. ಜಯಲಲಿತಾ ತಮ್ಮ ಕೊನೆಯ ದಿನಗಳನ್ನು ಕಳೆದ ಚೆನ್ನೈನ ಅಪೊಲೋ ಆಸ್ಪತ್ರೆಯಲ್ಲಿ ಅವುಗಳನ್ನು ಚಿತ್ರೀಕರಿಸಲಾಗಿದೆ. ನಾನು ಆ ವಿಡಿಯೋಗಳನ್ನು ಫೇಸ್ ಬುಕ್ ನಲ್ಲಿ ಹಾಕಿದರೆ ಹೇಗಿರುತ್ತೆ? ಜಯಲಲಿತಾ ಅವರದ್ದು ಸಹಜ ಸಾವಲ್ಲ ಎಂದು ದನಿಯೆತ್ತಿದ್ದ ಪನ್ನೀರ್ ಸೆಲ್ವಂ ಬಣದ ಪಿಎಚ್ ಪಾಂಡಿಯನ್ ಹಾಗೂ ಮನೋಜ್ ಕೆ. ಪಾಂಡಿಯನ್ ಅವರ ಪರಿಸ್ಥಿತಿ ಹೇಗಿರುತ್ತೆ?” ಎಂದು ದಿವಾಕರನ್ ಹೇಳಿಕೊಂಡಿದ್ದರು.

    https://www.youtube.com/watch?v=gZTeqiaWTh4&feature=youtu.be

  • ನಾನು ಜಯಲಲಿತಾ ಮಗಳು, ಡಿಎನ್‍ಎ ಟೆಸ್ಟ್ ಆಗ್ಲಿ ಎಂದು ಅಮೃತಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ನಾನು ಜಯಲಲಿತಾ ಮಗಳು, ಡಿಎನ್‍ಎ ಟೆಸ್ಟ್ ಆಗ್ಲಿ ಎಂದು ಅಮೃತಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬೆಂಗಳೂರು: ತಾನು ಜಯಲಲಿತಾ ಮಗಳು, ಇದನ್ನ ಸಾಬೀತುಪಡಿಸಲು ಡಿಎನ್‍ಎ ಪರೀಕ್ಷೆ ಆಗಲಿ ಎಂದು ಬೆಂಗಳೂರಿನ ಅಮೃತಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ತಾನೇ ಜಯಲಲಿತಾ ಉತ್ತರಾಧಿಕಾರಿ ಎಂದು ಅರ್ಜಿ ಹಾಕಿದ್ದ ಅಮೃತಾ, ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದ್ದರು. ಡಿಎನ್‍ಎ ಪರೀಕ್ಷೆಗೂ ಸಿದ್ಧ ಎಂದಿದ್ದರು. ಆದ್ರೆ ಜಯಾ ಸತ್ತು ಸುಮಾರು ಒಂದು ವರ್ಷ ಕಳೆದ ನಂತರ ಬಂದ ಹಿನ್ನೆಲೆಯಲ್ಲಿ ಅಮೃತಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.

    ನಿಜಕ್ಕೂ ವಿಚಾರಣೆ ಆಗಲೇಬೇಕು ಎನ್ನುವುದಾದರೆ ಹೈಕೋರ್ಟಿಗೆ ಹೋಗಿ. ಮೊದಲು ಕರ್ನಾಟಕ ಹೈಕೋರ್ಟ್ ವಿಚಾರಣೆ ಮಾಡಲಿ ಅಂತ ಅಮೃತಾ ಪರ ವಕೀಲರಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

    ಈ ಹಿಂದೆಯೇ ಅಮೃತಾ ತಾನು ಜಯಲಲಿತಾ ಅವರು ಮಗಳು ಎಂದು ಹೇಳಿ ರಾಷ್ಟ್ರಪತಿಯಿಂದ ಹಿಡಿದು ಸುಪ್ರೀಂ ಕೋರ್ಟ್, ಪ್ರಧಾನಿ, ಮಾನವ ಹಕ್ಕುಗಳ ಆಯೋಗ ಹೀಗೆ ನಾನಾ ಕಡೆ ಮನವಿ ಪತ್ರ ಸಲ್ಲಿಸಿದ್ದರು.

    ಜನ್ಮ ರಹಸ್ಯ: ಸಂಧ್ಯಾ ಮತ್ತು ಜಯರಾಂ ದಂಪತಿಗೆ ಜಯಲಲಿತಾ ಸೇರಿ ಒಟ್ಟು ಮೂವರು ಮಕ್ಕಳು. ಅವರೇ ಜಯಕುಮಾರ್, ಜಯಲಲಿತಾ ಅಲಿಯಾಸ್ ಕೋಮಲವಲ್ಲಿ ಹಾಗು ಶೈಲಜಾ. ಇದೇ ಶೈಲಜಾ ಅವರ ಮಗಳಾಗಿ ಅಮೃತಾ ಬೆಳೆದಿದ್ದರು.

    ನನ್ನಪ್ಪ ಶೋಭನ್ ಬಾಬು: ಅಮೃತ ತನ್ನ ತಂದೆ ತೆಲಗು ನಟ ಶೋಭನ್ ಬಾಬು ಎಂಬ ಸತ್ಯವನ್ನು ಹೊರಹಾಕಿದ್ದರು. ಜಯಲಲಿತಾ ಅವರು ತೀರ ಸಂಕಷ್ಟದಲ್ಲಿದ್ದಾಗ ಶೋಭನ್ ಬಾಬು ಸಾಂತ್ವನ ಹೇಳಲು ಬಂದಿದ್ದರು. ಮುಂದೆ ಸಾಂತ್ವನ, ಗೆಳತನಕ್ಕೆ ತಿರುಗುತ್ತದೆ. ಗೆಳತನ ಪ್ರೀತಿ-ಪ್ರೇಮಕ್ಕೆ ಬದಲಾಗಿದೆ. ಆ ಇಬ್ಬರ ಪ್ರೀತಿಯ ಕುಡಿಯಾಗಿ ಹುಟ್ಟಿದವಳು ನಾನು ಎನ್ನುವುದು ಅಮೃತಾ ಅವರ ವಾದವಾಗಿದೆ.

    ಶೋಭನ್ ಬಾಬು ಅವರ ಮೊದಲ ಪತ್ನಿಯಿಂದಾಗಿ ಜಯಲಲಿತಾರ ಮದುವೆಗೆ ತೀವ್ರ ಅಡ್ಡಿಯುಂಟಾಗಿತ್ತು. ನಾನಾ ಕಾರಣಗಳಿಂದ ಕೊನೆ ಕ್ಷಣದಲ್ಲಿ ಇಬ್ಬರ ಮದುವೆ ಮುರಿದು ಬಿದ್ದಿತ್ತು. ಆ ಹೊತ್ತಿಗೆ ಜಯಲಲಿತಾರ ಗರ್ಭದಲ್ಲಿ ಅಮೃತ ಇದ್ದರು. ಕೊನೆಗೆ ಚೆನ್ನೈನ ಮೈಲಾಪುರದಲ್ಲಿ ಅಮೃತಾರ ಜನನವಾಯ್ತು ಎಂದು ಹೇಳಿದ್ದಾರೆ.

    ಆ ಇಬ್ಬರೇ ಸಾಕ್ಷಿ: ಜಯಲಲಿತಾರ ಸಂಬಂಧಿ ರಜಿನಿ ರವೀಂದ್ರನಾಥ್ ಮತ್ತು ಎಲ್.ಎಸ್.ಲಲಿತಾರನ್ನು ಕರೆಸಿಕೊಂಡಿದ್ದರು. ಆ ಇಬ್ಬರು ನನ್ನ ಜನನದ ಕಾರ್ಯವನ್ನು ನೋಡಿಕೊಂಡಿದ್ದಾರೆ. ಅವತ್ತು ಎಲ್ಲರೂ ಸೇರಿ ದೇವರ ಮುಂದೆ ಪ್ರಮಾಣ ಮಾಡಿದ್ದ ಕಾರಣಕ್ಕೆ ಗುಟ್ಟು ರಟ್ಟಾಗಿಲ್ಲ. ನಾನು ಹತ್ತಾರು ಬಾರಿ ಜಯಾಲಲಿತಾರ ಪೋಯಸ್ ಗಾರ್ಡನ್ ಭೇಟಿ ಕೊಟ್ಟಿದ್ದೇನೆ. ಅಮ್ಮ ನನ್ನನ್ನು ತುಂಬಾ ಅಕ್ಕರೆಯಿಂದ ನೋಡಿಕೊಂಡ್ರು. ಬೇಕಿದ್ದಕ್ಕಿಂತ ಹೆಚ್ಚಾಗಿ ನನ್ನ ಜೋಪಾನ ಮಾಡಿದ್ದಾರೆ. ನನ್ನ ಹೆಸರಿನಲ್ಲಿ ಜಯಲಿಲಿತಾ ಚಿನ್ನ ಮತ್ತು ಡೈಮಂಡ್ ಆಭರಣಗಳನ್ನು ಖರೀದಿ ಮಾಡಿದ್ದಾರೆ. ಹಲವು ಕಡೆ ಆಸ್ತಿಗಳನ್ನು ನನಗೆ ಖರೀದಿ ಮಾಡಿರೋ ಬಗ್ಗೆ ಹತ್ತಾರು ಬಾರಿ ಹೇಳಿದ್ದಾರೆ ಎಂದು ಅಮೃತಾ ಹೇಳಿದ್ದಾರೆ.

    https://www.youtube.com/watch?v=n_5kQ-hV6eY

    https://www.youtube.com/watch?v=hg7er083YCg

  • ನಾನೇ ಜಯಲಲಿತಾ ಮಗಳು, ಬೇಕಿದ್ರೆ ಡಿಎನ್‍ಎ ಟೆಸ್ಟ್ ಆಗ್ಲಿ- ಸುಪ್ರೀಂ ಮೆಟ್ಟಿಲೇರಿದ ಬೆಂಗ್ಳೂರಿನ ಅಮೃತ

    ನಾನೇ ಜಯಲಲಿತಾ ಮಗಳು, ಬೇಕಿದ್ರೆ ಡಿಎನ್‍ಎ ಟೆಸ್ಟ್ ಆಗ್ಲಿ- ಸುಪ್ರೀಂ ಮೆಟ್ಟಿಲೇರಿದ ಬೆಂಗ್ಳೂರಿನ ಅಮೃತ

    ಬೆಂಗಳೂರು: ನಾನು ಜಯಲಲಿತಾ ಅವರ ಮಗಳು. ಇದ್ರಲ್ಲಿ ಡೌಟೇ ಬೇಡ. ಬೇಕಿದ್ರೆ ಡಿಎನ್‍ಎ ಟೆಸ್ಟ್ ಆಗಿ ಹೋಗ್ಲಿ. ನಾನು ಎಲ್ಲದಕ್ಕೂ ರೆಡಿ ಅಂತ ಬೆಂಗಳೂರು ಮೂಲದ ಅಮೃತ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

    ಜಯಲಲಿತಾ ಅವರ ಸೋದರ ಸಂಬಂಧಿ ಮನೆಯಲ್ಲಿ ಬೆಳೆದಿದ್ದ 37 ವರ್ಷದ ಅಮೃತ ಇದೇ 22ರಂದು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. 1980ರಲ್ಲಿ ಜಯಲಲಿತಾ ಅವರಿಗೆ ನಾನು ಜನಿಸಿದ್ದೇನೆ. ಈ ಬಗ್ಗೆ ದಾಖಲೆಗಳಿವೆ. ಆಗಿನ ಸನ್ನಿವೇಶಗಳನ್ನು ಎದುರಿಸಲಾಗದೇ ಜಯಲಲಿತಾ ನನ್ನನ್ನು ಗೌಪ್ಯವಾಗಿ ಬೆಳೆಸಿದ್ರು ಎಂದು ಸುಪ್ರೀಂಕೋರ್ಟ್‍ಗೆ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಅಮೃತ ಉಲ್ಲೇಖ ಮಾಡಿದ್ದಾರೆ.

    ಈ ಹಿಂದೆಯೇ ಅಮೃತಾ ತಾನು ಜಯಲಲಿತಾ ಅವರು ಮಗಳು ಎಂದು ಹೇಳಿ ರಾಷ್ಟ್ರಪತಿಯಿಂದ ಹಿಡಿದು ಸುಪ್ರೀಂ ಕೋರ್ಟ್, ಪ್ರಧಾನಿ, ಮಾನವ ಹಕ್ಕುಗಳ ಆಯೋಗ ಹೀಗೆ ನಾನಾ ಕಡೆ ಮನವಿ ಪತ್ರ ಸಲ್ಲಿಸಿದ್ದರು.

    ಜನ್ಮ ರಹಸ್ಯ: ಸಂಧ್ಯಾ ಮತ್ತು ಜಯರಾಂ ದಂಪತಿಗೆ ಜಯಲಲಿತಾ ಸೇರಿ ಒಟ್ಟು ಮೂವರು ಮಕ್ಕಳು. ಅವರೇ ಜಯಕುಮಾರ್, ಜಯಲಲಿತಾ ಅಲಿಯಾಸ್ ಕೋಮಲವಲ್ಲಿ ಹಾಗು ಶೈಲಜಾ. ಇದೇ ಶೈಲಜಾ ಅವರ ಮಗಳಾಗಿ ಅಮೃತಾ ಬೆಳೆದಿದ್ದರು.

    ನನ್ನಪ್ಪ ಶೋಭನ್ ಬಾಬು: ಅಮೃತ ತನ್ನ ತಂದೆ ತೆಲಗು ನಟ ಶೋಭನ್ ಬಾಬು ಎಂಬ ಸತ್ಯವನ್ನು ಹೊರಹಾಕಿದ್ದರು. ಜಯಲಲಿತಾ ಅವರು ತೀರ ಸಂಕಷ್ಟದಲ್ಲಿದ್ದಾಗ ಶೋಭನ್ ಬಾಬು ಸಾಂತ್ವನ ಹೇಳಲು ಬಂದಿದ್ದರು. ಮುಂದೆ ಸಾಂತ್ವನ, ಗೆಳತನಕ್ಕೆ ತಿರುಗುತ್ತದೆ. ಗೆಳತನ ಪ್ರೀತಿ-ಪ್ರೇಮಕ್ಕೆ ಬದಲಾಗಿದೆ. ಆ ಇಬ್ಬರ ಪ್ರೀತಿಯ ಕುಡಿಯಾಗಿ ಹುಟ್ಟಿದವಳು ನಾನು ಎನ್ನುವುದು ಅಮೃತಾ ಅವರ ವಾದವಾಗಿದೆ.

    ಶೋಭನ್ ಬಾಬು ಅವರ ಮೊದಲ ಪತ್ನಿಯಿಂದಾಗಿ ಜಯಲಲಿತಾರ ಮದುವೆಗೆ ತೀವ್ರ ಅಡ್ಡಿಯುಂಟಾಗಿತ್ತು. ನಾನಾ ಕಾರಣಗಳಿಂದ ಕೊನೆ ಕ್ಷಣದಲ್ಲಿ ಇಬ್ಬರ ಮದುವೆ ಮುರಿದು ಬಿದ್ದಿತ್ತು. ಆ ಹೊತ್ತಿಗೆ ಜಯಲಲಿತಾರ ಗರ್ಭದಲ್ಲಿ ಅಮೃತ ಇದ್ದರು. ಕೊನೆಗೆ ಚೆನ್ನೈನ ಮೈಲಾಪುರದಲ್ಲಿ ಅಮೃತಾರ ಜನನವಾಯ್ತು ಎಂದು ಹೇಳಿದ್ದಾರೆ.

    ಆ ಇಬ್ಬರೇ ಸಾಕ್ಷಿ: ಜಯಲಲಿತಾರ ಸಂಬಂಧಿ ರಜಿನಿ ರವೀಂದ್ರನಾಥ್ ಮತ್ತು ಎಲ್.ಎಸ್.ಲಲಿತಾರನ್ನು ಕರೆಸಿಕೊಂಡಿದ್ದರು. ಆ ಇಬ್ಬರು ನನ್ನ ಜನನದ ಕಾರ್ಯವನ್ನು ನೋಡಿಕೊಂಡಿದ್ದಾರೆ. ಅವತ್ತು ಎಲ್ಲರೂ ಸೇರಿ ದೇವರ ಮುಂದೆ ಪ್ರಮಾಣ ಮಾಡಿದ್ದ ಕಾರಣಕ್ಕೆ ಗುಟ್ಟು ರಟ್ಟಾಗಿಲ್ಲ. ನಾನು ಹತ್ತಾರು ಬಾರಿ ಜಯಾಲಲಿತಾರ ಪೋಯಸ್ ಗಾರ್ಡನ್ ಭೇಟಿ ಕೊಟ್ಟಿದ್ದೇನೆ. ಅಮ್ಮ ನನ್ನನ್ನು ತುಂಬಾ ಅಕ್ಕರೆಯಿಂದ ನೋಡಿಕೊಂಡ್ರು. ಬೇಕಿದ್ದಕ್ಕಿಂತ ಹೆಚ್ಚಾಗಿ ನನ್ನ ಜೋಪಾನ ಮಾಡಿದ್ದಾರೆ. ನನ್ನ ಹೆಸರಿನಲ್ಲಿ ಜಯಲಿಲಿತಾ ಚಿನ್ನ ಮತ್ತು ಡೈಮಂಡ್ ಆಭರಣಗಳನ್ನು ಖರೀದಿ ಮಾಡಿದ್ದಾರೆ. ಹಲವು ಕಡೆ ಆಸ್ತಿಗಳನ್ನು ನನಗೆ ಖರೀದಿ ಮಾಡಿರೋ ಬಗ್ಗೆ ಹತ್ತಾರು ಬಾರಿ ಹೇಳಿದ್ದಾರೆ ಎಂದು ಅಮೃತಾ ಹೇಳಿದ್ದಾರೆ.

    https://www.youtube.com/watch?v=n_5kQ-hV6eY

    https://www.youtube.com/watch?v=hg7er083YCg

     

  • ಹೋಳಾಗಿದ್ದ ಎಐಎಡಿಎಂಕೆ ವಿಲೀನ: ಪ್ರಕಟಣೆಯಷ್ಟೇ ಬಾಕಿ

    ಹೋಳಾಗಿದ್ದ ಎಐಎಡಿಎಂಕೆ ವಿಲೀನ: ಪ್ರಕಟಣೆಯಷ್ಟೇ ಬಾಕಿ

    ಚೆನ್ನೈ: ಜಯಲಲಿತಾ ಸಾವಿನ ನಂತರ ಎರಡು ಬಣಗಳಾಗಿ ಹೋಳಾಗಿದ್ದ ಎಐಎಡಿಎಂಕೆ ಪಕ್ಷದ ವಿಲೀನವಾಗುತ್ತಿದ್ದು ಬಹಿರಂಗ ಪ್ರಕಟಣೆಯಷ್ಟೇ ಬಾಕಿ. ಪನ್ನೀರ್ ಸೆಲ್ವಂ ಷರತ್ತಿನ ಪ್ರಕಾರ ಜಯಾ ಅವರ ಸಾವಿನ ಕುರಿತು ಪಳನಿಸ್ವಾಮಿ ಸರಕಾರ ನ್ಯಾಯಾಂಗ ತನಿಖೆಗೆ ಸಮಿತಿ ರಚಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

    ಯಾವುದೇ ಕ್ಷಣದಲ್ಲೂ ಭಿನ್ನ ಬಣಗಳ ವಿಲೀನ ಘೋಷಣೆಯಾಗುವ ಸಾಧ್ಯತೆ ಇದೆ. ಹೊಸ ವಿಲೀನ ಒಪ್ಪಂದದಂತೆ ಪಳನಿಸ್ವಾಮಿ ಸರಕಾರದಲ್ಲಿ ಪನ್ನೀರ್‍ಸೆಲ್ವಂಗೆ ಉಪ ಮುಖ್ಯಮಂತ್ರಿ ಪಟ್ಟ ಸಿಗಲಿದೆ ಎನ್ನಲಾಗಿದೆ.

    ಈ ನಡುವೆ ಜಯಾ ನಿವಾಸ ಪೋಯೆಸ್ ಗಾರ್ಡನ್ ಅನ್ನು ಸ್ಮಾರಕವಾಗಿ ಪರಿವರ್ತಿಸಲು ಜಯಲಲಿತಾರ ಸೋದರ ಸೊಸೆ ದೀಪಾ ಜಯಕುಮಾರ್ ವಿರೋಧಿಸಿದ್ದಾರೆ. ಜಯಲಲಿತಾ ನಿವಾಸದ ಮೇಲೆ ನಮಗೂ ಹಕ್ಕಿದೆ, ಮುಖ್ಯಮಂತ್ರಿ ಪಳನಿಸ್ವಾಮಿ ಘೋಷಣೆ ಹಿಂದೆ ದುರುದ್ದೇಶ ಅಡಗಿದೆ ಎಂದು ಗುಡುಗಿದ್ದಾರೆ. ಈ ಎಲ್ಲಾ ವಿಷಯವನ್ನೂ ಪರಪ್ಪನ ಅಗ್ರಹಾರ ಜೈಲಲ್ಲಿರೋ ಶಶಿಕಲಾಗೆ ದಿನಕರನ್ ವರದಿ ಒಪ್ಪಿಸಿದ್ದಾರೆ.

    ಜಯಲಲಿತಾ ಸಾವಿನ ಪ್ರಕರಣದ ಬಗ್ಗೆ ತನಿಖೆಯಾಗಬೇಕು. ಪೋಯೆಸ್ ಗಾರ್ಡನ್ ಅನ್ನು ಸ್ಮಾರಕವನ್ನಾಗಿ ಮಾಡಬೇಕೆಂದು ಪನ್ನೀರ್ ಸೆಲ್ವಂ ಬಣ ಷರತ್ತು ವಿಧಿಸಿತ್ತು. ಈ ಷರತ್ತಿಗೆ ಪಳನಿಸ್ವಾಮಿ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಪನ್ನೀರ್‍ಸೆಲ್ವ ಬಣ ವಿಲೀನಕ್ಕೆ ಒಪ್ಪಿಗೆ ನೀಡಿದೆ.

  • ಜಯಲಲಿತಾ ನಿಧನರಾಗಿದ್ದು ಹೇಗೆ? ಅಪೋಲೋ ಆಸ್ಪತ್ರೆ ಆರ್‍ಟಿಐ ಪ್ರಶ್ನೆಗೆ ಉತ್ತರಿಸಿದ್ದು ಹೀಗೆ

    ಜಯಲಲಿತಾ ನಿಧನರಾಗಿದ್ದು ಹೇಗೆ? ಅಪೋಲೋ ಆಸ್ಪತ್ರೆ ಆರ್‍ಟಿಐ ಪ್ರಶ್ನೆಗೆ ಉತ್ತರಿಸಿದ್ದು ಹೀಗೆ

    ಬೆಂಗಳೂರು: ಕಳೆದ ವರ್ಷ ಡಿಸೆಂಬರ್ 5ರಂದು ಮೃತಪಟ್ಟ ತಮಿಳುನಾಡು ಸಿಎಂ ಜಯಲಲಿತಾ ಸಾವಿನ ಅಸಲಿ ಕಾರಣ ಈಗ ಬಯಲಾಗಿದೆ. ಬೆಂಗಳೂರಿನ ಆರ್‍ಟಿಐ ಕಾರ್ಯಕರ್ತ ನರಸಿಂಹಮೂರ್ತಿ ಆರ್‍ಟಿಐನಲ್ಲಿ ಕೇಳಿದ ಪ್ರಶ್ನೆಗೆ ಉತ್ತರ ಸಿಕ್ಕಿದೆ.

    ರೋಗಿಯ ಮಾಹಿತಿಯನ್ನು ಬಹಿರಂಗ ಪಡಿಸಿಬಾರದು ಎನ್ನುವ ಕಾಯ್ದೆ ಇದ್ರೂ ನಾನಾ ಊಹಾಪೋಹಗಳಿಗೆ  ತೆರೆ ಎಳೆಯೋದಕ್ಕೆ ಈ ಮಾಹಿತಿ ನೀಡಲಾಗಿದೆ. ಆದರೆ, ಜಯಲಲಿತಾ ಚಿಕಿತ್ಸೆ ವೆಚ್ಚವನ್ನು ತಮಿಳುನಾಡು ಸರ್ಕಾರ ಇನ್ನೂ ಪಾವತಿಸಿಲ್ಲ ಎಂದು ಅಪೋಲೋ ಆಸ್ಪತ್ರೆ ಹೇಳಿದೆ.

    ಆರ್‍ಟಿಐ ಅಡಿ ಸಿಕ್ಕಿದ ಮಾಹಿತಿ ಏನು?
    ಸೆಪ್ಟೆಂಬರ್ 22,2016 ರಂದು ಜಯಲಲಿತಾ ಅಸ್ವಸ್ಥರಾಗಿರುವ ಸುದ್ದಿ ಆಸ್ಪತ್ರೆಗೆ ಸಿಕ್ಕಿತು. ಆಂಬುಲೆನ್ಸ್‍ನಲ್ಲಿ ಕರೆದುಕೊಂಡು ಬರುವಾಗ ಉಸಿರಾಟದ ತೀವ್ರ ತೊಂದರೆ, ಸುಸ್ತಿನಿಂದ ಬಳಲುತ್ತಿದ್ದರು. ಡಿ ಹೈಡ್ರೇಷನ್, ಹೈಪರ್ ಟೆನ್ಶನ್, ಆಸ್ತಮಾ, ಬ್ರಾಂಕೈಟಿಸ್ ಸಹ ಇತ್ತು ಎಂದು ಉತ್ತರಿಸಿದೆ.

    ಕೆಲ ರಾಜಕೀಯ ನಾಯಕರು ಆರೋಪಿಸುವಂತೆ ಜಯಲಲಿತಾಗೆ ಟ್ರೌಮಾ ಸಮಸ್ಯೆ ಇರಲಿಲ್ಲ. ಜಯಲಲಿತಾರನ್ನು ಉಳಿಸಲು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಬಂದಿತ್ತು. ಲಂಡನ್‍ನ ರಿಚರ್ಡ್ ಬೆಲ್ಲೆ ಸೇರಿದಂತೆ ಸಾಕಷ್ಟು ನುರಿತ ವೈದ್ಯರು ಪ್ರಯತ್ನ ಪಟ್ಟಿದ್ದರು. ತಮಿಳುನಾಡು ಸರ್ಕಾರದ ವಿನಂತಿಯಂತೆ ಏಮ್ಸ್ ವೈದ್ಯರು ಬಂದಿದ್ದರು ಎಂದು ತಿಳಿಸಿದೆ.

    ಜಯಲಿಲಿತಾ ಆಸ್ಪತ್ರೆಗೆ ದಾಖಲಾಗೋದಕ್ಕೆ ಮುಂಚಿತವಾಗಿ ತಪ್ಪು ಔಷಧಿ ನೀಡಲಾಗಿದೆ. ಅವರನ್ನುಮಹಡಿಯಿಂದ ತಳ್ಳಲಾಗಿದೆ ಅಂತೆಲ್ಲ ಆರೋಪ ಮಾಡಲಾಗಿತ್ತು. ಆದ್ರೆ ನಾವು ಪರೀಕ್ಷಿಸಿದಾಗ ಇಂತಹ ಯಾವುದು ಕಂಡು ಬಂದಿಲ್ಲ. ಆದ್ರೆ ಡಯಾಬಿಟಿಸ್ ಕಂಟ್ರೋಲ್, ಹೈಪರ್ ಟೆನ್ಶನ್‍ಗೆ ಮಾತ್ರೆ ಸೇವಿಸ್ತಿರೋದು ಗೊತ್ತಾಗಿತ್ತು. ಸ್ವಲ್ಪ ಕಾಲ ಚೇತರಿಸಿಕೊಂಡಿದ್ರು. ಕಾವೇರಿ ವಿಚಾರವಾಗಿ ಆಸ್ಪತ್ರೆಯಲ್ಲಿ ಸಭೆಯನ್ನೂ ನಡೆಸಿದ್ದರು. ಬಾಯಿಯ ಮೂಲಕವೇ ಆಹಾರ ಸೇವಿಸುತ್ತಿದ್ದರು. ಡಿಸೆಂಬರ್ ನಾಲ್ಕರಂದು ಹೃದಯಾಘಾತವಾಯ್ತು, ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಆಸ್ಪತ್ರೆ ಉತ್ತರಿಸಿದೆ.

     

    https://www.youtube.com/watch?v=vAGKYVyq8Fc

    https://www.youtube.com/watch?v=orsK3JdRHTA

  • ರಜನೀಕಾಂತ್ ರಾಜಕೀಯ ಎಂಟ್ರಿ ಪಕ್ಕಾ: ಮತ್ತೆ ಈ ಪ್ರಶ್ನೆ ಈಗ ಉದ್ಭವವಾಗಿದ್ದು ಏಕೆ?

    ರಜನೀಕಾಂತ್ ರಾಜಕೀಯ ಎಂಟ್ರಿ ಪಕ್ಕಾ: ಮತ್ತೆ ಈ ಪ್ರಶ್ನೆ ಈಗ ಉದ್ಭವವಾಗಿದ್ದು ಏಕೆ?

    ಚೆನ್ನೈ: ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬರುತ್ತಾರಾ? ಜಯಲಲಿತಾ ನಿಧನವಾದ ಬಳಿಕ ಎದ್ದ ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಆದರೆ ಸೂಪರ್ ಸ್ಟಾರ್ ಅವರ ಆಪ್ತರ ಮತ್ತು ಜ್ಯೋತಿಷಿಗಳ ಪ್ರಕಾರ ರಜನೀಕಾಂತ್ ರಾಜಕೀಯಕ್ಕೆ ಬರುವುದು ಪಕ್ಕಾ ಅಂತೆ.

    ರಾಜಕೀಯಕ್ಕೆ ಸೇರುವ ಬಗ್ಗೆ ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಅಭಿಮಾನಿಗಳ ಹೊತೆ ಮಾತನಾಡಿದ ರಜನೀಕಾಂತ್ ಅವರ ಸ್ಪಷ್ಟೀಕರಣದ ಹೊರತಾಗಿಯೂ, ಸೂಪರ್ ಸ್ಟಾರ್ ಶೀಘ್ರದಲ್ಲೇ ರಾಜಕೀಯಕ್ಕೆ ಧುಮುಕುವುದು ಖಚಿತ ಎಂದು ಕೇರಳದ ಖ್ಯಾತ ಜ್ಯೋತಿಷಿ ಶೆಲ್ವಿಯವರು ಭವಿಷ್ಯ ನುಡಿದಿದ್ದಾರೆ.

    ಸದ್ಯದಲ್ಲಿ ರಜನೀಕಾಂತ್ ಶನಿ ದಶಾದ ಮೂಲಕ ಹಾದು ಹೋಗುತ್ತಿದೆ. ಹಾಗಾಗಿ ರಾಜಕೀಯ ಪ್ರವೇಶದ ಬಗ್ಗೆ ಅಧಿಕೃತ ಹೇಳಿಕೆ ನೀಡಿಲ್ಲ, ಆದ್ರೆ ಮುಂಬರುವ ವರ್ಷಗಳಲ್ಲಿ ರಾಜಕಾರಣ ಪ್ರವೇಶಕ್ಕಾಗಿ ರಜನಿಯವರು ಚೆನ್ನಾಗಿ ಪ್ರಯತ್ನ ನಡೆಸಿದ್ದಾರೆ. ರಜನಿಕಾಂತ್ ಜಾತಕದಲ್ಲಿ ಶನಿದೆಸೆ ನಡೆಯುತ್ತಿದ್ರೂ ರಾಜಕಳೆ ಇದೆ ಎಂದು ಶೆಲ್ವಿ ಭವಿಷ್ಯ ಹೇಳಿದ್ದಾರೆ.

    ಇತ್ತ ತಮಿಳುನಾಡು ರಾಜಕಾರಣಕ್ಕೆ ಸೂಪರ್‍ಸ್ಟಾರ್ ರಜನೀಕಾಂತ್ ಬಂದೇ ಬರ್ತಾರೆ ಅಂತಾ ಮೂಲಗಳು ತಿಳಿಸಿವೆ. ಯಾಕಂದ್ರೆ ತಮಿಳುನಾಡು ರಾಜಕೀಯದಲ್ಲಿ ಬಿಕ್ಕಟ್ಟು ಏರ್ಪಟ್ಟ ಸಮಯದಲ್ಲೇ ರಜನಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ. ರಾಜಕಾರಣಕ್ಕೆ ಬರುವ ಮುನ್ನ ಅಭಿಮಾನಿಗಳ ಆಶೋತ್ತರವನ್ನ ಹತ್ತಿರದಿಂದ ಅರಿಯಲು ಈ ಸಂವಾದ ಮಾಡ್ತಿದ್ದಾರೆ ಅಂತಾ ಹೇಳ್ತಿದ್ದಾರೆ ರಾಜಕೀಯ ಪಂಡಿತರು.

    ರಜನಿ ಆಪ್ತ ಗೆಳೆಯ ರಾಜ್‍ಬಹದ್ದೂರ್ ಕೂಡ ರಜನಿ ರಾಜಕೀಯಕ್ಕೆ ಬರ್ತಾರೆ ಅಂತಾ ಹೇಳಿದ್ದಾರೆ. ಆದ್ರೆ ಇದುವರೆಗೂ ರಜನಿ ಈ ಬಗ್ಗೆ ಸ್ಪಷ್ಟ ಹೇಳಿಕೆ ನೀಡಿಲ್ಲ.

    ಇತ್ತೀಚೆಗಷ್ಟೇ ರಾಜಕೀಯ ಎಂಟ್ರಿ ಕೊಡೋ ಬಗ್ಗೆ ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ್ದ ರಜನಿ, ಭವಿಷ್ಯದಲ್ಲಿ ದೇವರು ಬಯಸಿದ್ರೆ ರಾಜಕೀಯಕ್ಕೆ ಕಾಲಿಡುವ ಇಂಗಿತವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದರು. ಸದ್ಯಕ್ಕೆ ದೇವರು ನಟನಾಗಲು ಸೂಚಿಸಿದ್ದಾರೆ. ಮುಂದೇನಾಗುತ್ತದೆ ಎನ್ನುವುದು ಗೊತ್ತಿಲ್ಲ ಎಂದ ಅವರು ರಾಜಕೀಯ ಪಕ್ಷಗಳಿಗೆ ಸೇರ್ಪಡೆ ವದಂತಿಗಳನ್ನ ಅಲ್ಲಗೆಳೆದು, ಪಕ್ಷಗಳು ತಮ್ಮ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಆರೋಪಿಸಿದ್ದರು. ಅಷ್ಟೇ ಅಲ್ಲದೇ ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

    1996ರಲ್ಲಿ ತಮಿಳುನಾಡಿನಲ್ಲಿ ಜಯಲಲಿತಾ ವಿರುದ್ಧ ಪ್ರಚಾರ ನಡೆಸಿದ್ದನ್ನು ರಾಜಕೀಯ ಅಪಘಾತಕ್ಕೆ ಹೋಲಿಸಿದ ಅವರು, 21 ವರ್ಷಗಳ ಹಿಂದೆ ನಾನು ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿದ್ದು ನನ್ನ ದೊಡ್ಡ ತಪ್ಪು ನಿರ್ಧಾರ. ಈ ಘಟನೆಯಿಂದ ರಾಜಕೀಯ ಪಕ್ಷಗಳನ್ನು ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡವು. ಆದರೆ ಈಗ ರಾಜಕೀಯಕ್ಕೆ ಸೇರುವುದಿಲ್ಲ ಎಂದು ಸ್ಪಷ್ಟನೆ ನೀಡುತ್ತೇನೆ ಎಂದು ಅಭಿಮಾನಿಗಳಿಗೆ ತಿಳಿಸಿದ್ದರು.

    ರಾಜಕೀಯಕ್ಕೆ ಸೇರುವ ಉದ್ದೇಶದಿಂದಲೇ ಬರೋಬ್ಬರಿ 9 ವರ್ಷಗಳ ಬಳಿಕ ರಜನಿಕಾಂತ್ ಅಭಿಮಾನಿಗಳ ಜೊತೆ ಸಂವಾದ ನಡೆಸಿದ್ದಾರೆ ಎನ್ನುವ ಮಾತುಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹೀಗಾಗಿ ರಜನೀಕಾಂತ್ ರಾಜಕೀಯಕ್ಕೆ ಬರುತ್ತಾರಾ ಇಲ್ಲವೋ ಎನ್ನುವ ಪ್ರಶ್ನೆಗೆ ಮುಂದಿನ ಕೆಲ ದಿನಗಳಲ್ಲಿ ಸ್ಪಷ್ಟ ಉತ್ತರ ಸಿಗುವ ಸಾಧ್ಯತೆ ಇದೆ.

  • ನನಗೆ ಕೊಟ್ಟ ಶಿಕ್ಷೆಯನ್ನ ಮರುಪರಿಶೀಲಿಸಿ – ಜೈಲಿನಲ್ಲಿದ್ದುಕೊಂಡೇ ಶಶಿಕಲಾ ಸುಪ್ರೀಂಗೆ ಅರ್ಜಿ

    ನನಗೆ ಕೊಟ್ಟ ಶಿಕ್ಷೆಯನ್ನ ಮರುಪರಿಶೀಲಿಸಿ – ಜೈಲಿನಲ್ಲಿದ್ದುಕೊಂಡೇ ಶಶಿಕಲಾ ಸುಪ್ರೀಂಗೆ ಅರ್ಜಿ

    ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಹೊಸ ಆಟ ಶುರು ಮಾಡಿದ್ದಾರೆ.

    ನನಗೆ ಕೊಟ್ಟ ಶಿಕ್ಷೆಯನ್ನ ಮರುಪರಿಶೀಲಿಸಿ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣದಲ್ಲಿ ಜಯಲಲಿತಾ ಪ್ರಮುಖ ಆರೋಪಿಯಾಗಿದ್ದು, ಅವರ ಅನುಪಸ್ಥಿತಿಯಲ್ಲಿ ನಾವು ಶಿಕ್ಷೆ ಅನುಭವಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಶಿಕ್ಷೆಯ ಪ್ರಮಾಣ ಕಡಿಮೆ ಮಾಡುವಂತೆ ಮನವಿ ಮಾಡಿದ್ದಾರೆ. ನ್ಯಾಯಮೂರ್ತಿ ಪಿಸಿ ಘೋಷ್ ಹಾಗೂ ಅಮಿತಾವ್ ರಾಯ್ ದ್ವಿಸದಸ್ಯ ಪೀಠ ನೀಡಿದ್ದ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ಇವರ ಜೊತೆ ಮತ್ತಿಬ್ಬರು ಆರೋಪಿಗಳಾದ ಸುಧಾಕರನ್ ಹಾಗೂ ಇಳವರಸಿ ಕೂಡ ಅರ್ಜಿ ಹಾಕಿದ್ದಾರೆ.

    ಫೆಬ್ರವರಿ 14 ರಂದು ಕರ್ನಾಟಕ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ್ದ ಸುಪ್ರೀಂಕೋರ್ಟ್, ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿತ್ತು. ಶಶಿಕಲಾ ನಟರಾಜನ್, ಸುಧಾಕರನ್ ಹಾಗೂ ಇಳವರಸಿಯನ್ನು ದೋಷಿಗಳು ಎಂದು ತೀರ್ಪು ನೀಡಿ, 4 ವರ್ಷ ಜೈಲು, 10 ಕೋಟಿ ರೂ. ದಂಡ ವಿಧಿಸಿತ್ತು.

  • ಜಯಾ ಕ್ಷೇತ್ರದಲ್ಲಿ ಹಣದ ಹೊಳೆ – ಅಕ್ರಮ ಬಯಲು ಬೆನ್ನಲ್ಲೇ ಉಪ ಚುನಾವಣೆ ರದ್ದು

    ಜಯಾ ಕ್ಷೇತ್ರದಲ್ಲಿ ಹಣದ ಹೊಳೆ – ಅಕ್ರಮ ಬಯಲು ಬೆನ್ನಲ್ಲೇ ಉಪ ಚುನಾವಣೆ ರದ್ದು

    ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ನಿಧನ ಬಳಿಕ ತೆರವಾಗಿದ್ದ ಆರ್ ಕೆ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬುಧವಾರ ನಡೆಯಬೇಕಿದ್ದು, ಆದ್ರೆ ಕೇಂದ್ರ ಚುನಾವಣಾ ಆಯೋಗ ಇದನ್ನು ರದ್ದುಗೊಳಿಸಿದೆ.

    ಯಾಕಂದ್ರೆ ಈ ಕ್ಷೇತ್ರದಲ್ಲಿ ಉಪ ಚುನಾವಣೆಗಾಗಿ ಹಣದ ಹೊಳೆಯೇ ಹರಿದಿತ್ತು. ಈ ಸಂಬಂಧ ಮಹತ್ವದ ದಾಖಲೆಗಳು ಸಿಕ್ಕ ಹಿನ್ನೆಲೆಯಲ್ಲಿ ಚುನಾವಣೆಯನ್ನು ರದ್ದುಗೊಳಿಸಲಾಗಿದೆ.

    ಶುಕ್ರವಾರವಷ್ಟೇ ಆದಾಯ ತೆರಿಗೆ ಇಲಾಖೆ ಅಣ್ಣಾ ಡಿಎಂಕೆ ಸರ್ಕಾರದ ಆರೋಗ್ಯ ಸಚಿವ ವಿಜಯ್ ಭಾಸ್ಕರ್ ನಿವಾಸ ಮತ್ತು ಕಚೇರಿಗಳಲ್ಲಿ ಶೋಧ ಕೈಗೊಂಡಿತ್ತು. ಈ ವೇಳೆ ಪಕ್ಷದ ಪರವಾಗಿ ಒಬ್ಬೊಬ್ಬ ಮತದಾರನಿಗೆ ತಲಾ 4 ಸಾವಿರ ರೂಪಾಯಿ ಹಂಚಿರುವ ಬಗ್ಗೆ ಸ್ಫೋಟಕ ಮಾಹಿತಿ ಲಭ್ಯವಾಗಿತ್ತು.

    ಬರೋಬ್ಬರೀ 89 ಕೋಟಿ ರೂಪಾಯಿಯಷ್ಟು ಹಣವನ್ನು ಚೆಲ್ಲಿದ್ದಾರೆ ಅನ್ನೋದ್ರ ಬಗ್ಗೆ ದಾಖಲೆಗಳು ಲಭ್ಯವಾಗಿದ್ದವು. ಸಚಿವರ ಆಪ್ತರ ಬಳಿಯಿಂದ 5 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಎಲ್ಲಾ ಮಾಹಿತಿಗಳನ್ನು ಪರಿಶೀಲಿಸಿದ ಆಯೋಗ ಉಪ ಚುನಾವಣೆ ರದ್ದು ಮಾಡುವ ನಿರ್ಧಾರ ಕೈಗೊಂಡಿದೆ. ಈ ನಡುವೆ ವಿಚಾರಣೆಗೆ ಹಾಜರಾಗಿ ಖುದ್ದು ವಿವರಣೆ ನೀಡುವಂತೆ ಆದಾಯ ತೆರಿಗೆ ಇಲಾಖೆ ಸಚಿವ ವಿಜಯ್ ಭಾಸ್ಕರ್‍ಗೆ ಸಮನ್ಸ್ ಜಾರಿ ಮಾಡಿದೆ.

    ಕ್ಷೇತ್ರದಲ್ಲಿ ವಿವಿಧ ಪಕ್ಷಗಳಿಂದ ಒಟ್ಟು 62 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.