Tag: Jayamala

  • ಜಯಮಾಲಾ ಪುತ್ರಿಯ ಅದ್ಧೂರಿ ಆರತಕ್ಷತೆ: ಸಿನಿ ತಾರೆಯರ ದಂಡು

    ಜಯಮಾಲಾ ಪುತ್ರಿಯ ಅದ್ಧೂರಿ ಆರತಕ್ಷತೆ: ಸಿನಿ ತಾರೆಯರ ದಂಡು

    ನ್ನಡ ಚಿತ್ರರಂಗದ ಹಿರಿಯ ನಟಿ ಜಯಮಾಲಾ (Jayamala) ಅವರ ಪುತ್ರಿ ಸೌಂದರ್ಯ (Soundarya) ಫೆ.7ರಂದು ಮದುವೆ ಅದ್ಧೂರಿಯಾಗಿ ಜರುಗಿದೆ. ಇಂದು (ಫೆ.8)ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೌಂದರ್ಯ ಹಾಗೂ ರುಷಭ್ ಆರತಕ್ಷತೆ ನಡೆಯುತ್ತಿದ್ದು, ಸ್ಯಾಂಡಲ್‌ವುಡ್ ನಟ, ನಟಿಯರು ಭಾಗಿಯಾಗಿ ಶುಭಕೋರಿದ್ದಾರೆ.

    ಸೌಂದರ್ಯ ಆರತಕ್ಷತೆ ಸಂಭ್ರಮದಲ್ಲಿ ಧ್ರುವ ಸರ್ಜಾ ದಂಪತಿ, ಡಾಲಿ ಧನಂಜಯ, ಗಿರಿಜಾ ಲೋಕೇಶ್, ರಾಧಿಕಾ ಕುಮಾರಸ್ವಾಮಿ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕರು ಭಾಗಿಯಾಗಿ ಶುಭಹಾರೈಸಿದ್ದಾರೆ. ಇದನ್ನೂ ಓದಿ:ಫ್ಯಾನ್ಸ್‌ಗೆ ಗುಡ್ ನ್ಯೂಸ್- ಚೊಚ್ಚಲ ಸಿನಿಮಾ ಘೋಷಿಸಿದ ‘ಬಿಗ್ ಬಾಸ್’ ಖ್ಯಾತಿಯ ಮೋಕ್ಷಿತಾ

    ಇಂದು ನಿನ್ನೆ ಸೌಂದರ್ಯ ಮದುವೆಯಲ್ಲಿ ನಟ ಯಶ್ ಹಾಗೂ ರಾಧಿಕಾ ದಂಪತಿ, ಅಂಜಲಿ, ಭಾರತಿ ವಿಷ್ಣುವರ್ಧನ್, ಅಂಬಿಕಾ, ಶ್ರುತಿ, ಸುಧಾರಾಣಿ, ಮಾಳವಿಕಾ ಸೇರಿದಂತೆ ಅನೇಕರು ಭಾಗಿಯಾಗಿ ಶುಭಕೋರಿದ್ದರು.

  • ಜಯಮಾಲಾ ಮಗಳ ಹಳದಿ ಸಂಭ್ರಮ- ಸ್ಯಾಂಡಲ್‌ವುಡ್ ಸ್ಟಾರ್ಸ್ ಭಾಗಿ

    ಜಯಮಾಲಾ ಮಗಳ ಹಳದಿ ಸಂಭ್ರಮ- ಸ್ಯಾಂಡಲ್‌ವುಡ್ ಸ್ಟಾರ್ಸ್ ಭಾಗಿ

    ಸ್ಯಾಂಡಲ್‌ವುಡ್‌ನಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಒಂದ್ ಕಡೆ ಡಾಲಿ ಹಸೆಮಣೆ ಏರೋಕೆ ರೆಡಿಯಾಗಿದ್ರೆ, ಇನ್ನೊಂದ್ ಕಡೆ ಜಯಮಾಲಾ ಪುತ್ರಿ ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ. ಸೌಂದರ್ಯ ಜಯಮಾಲಾ ಹಳದಿ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ನಟಿಯರು ಮಿಂಚಿದ್ದಾರೆ. ನಟಿಯ ಹಳದಿ ಶಾಸ್ತ್ರ ಸುಂದರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

    ಜಯಮಾಲಾ (Jayamala) ಪುತ್ರಿ ಸೌಂದರ್ಯ (Soundarya) ಅವರ ಫೆ.5ರಂದು ಮೆಹೆಂದಿ ಹಾಗೂ ಹಳದಿ ಶಾಸ್ತ್ರ ನಗರದ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆದಿದೆ. ವಧು ಸೌಂದರ್ಯ ಹಳದಿ ಬಣ್ಣದ ಉಡುಗೆಯಲ್ಲಿ ಕಂಗೊಳಿಸಿದ್ದಾರೆ. ಇದನ್ನೂ ಓದಿ:ಡೇಟಿಂಗ್ ಸುದ್ದಿ ನಡುವೆ ಮಾಜಿ ಪತಿಯ 2ನೇ ಮದುವೆ ಬಗ್ಗೆ ಸಮಂತಾ ಶಾಕಿಂಗ್ ಕಾಮೆಂಟ್

    ಈ ಸಂಭ್ರಮದಲ್ಲಿ ಹಿರಿಯ ನಟಿ ಶ್ರುತಿ, ಮಾಳವಿಕಾ ಅವಿನಾಶ್, ಸುಧಾರಾಣಿ, ಉಮಾಶ್ರೀ, ಪ್ರಮೀಳಾ ಜೋಷಾಯ್, ಗಿರಿಜಾ ಲೋಕೇಶ್, ಹರ್ಷಿಕಾ, ಅನು ಪ್ರಭಾಕರ್, ಪ್ರಿಯಾಂಕಾ ಉಪೇಂದ್ರ, ಭಾರತಿ ವಿಷ್ಣುವರ್ಧನ್, ಹೇಮಾ ಚೌಧರಿ, ಸುಧಾ ನರಸಿಂಹರಾಜು ಮುಂತಾದ ಹಿರಿಯ ನಟಿಯರು ಭಾಗವಹಿಸಿದ್ದಾರೆ. ಎಲ್ಲರೂ ಹಳದಿ ಬಣ್ಣದ ಉಡುಗೆಯಲ್ಲಿ ಮಿಂಚಿದ್ದಾರೆ. ಹಿರಿಯ ನಟಿಯರು ಜಯಮಾಲಾ ಜೊತೆ ಸಖತ್ ಆಗಿ ಡ್ಯಾನ್ಸ್ ಮಾಡಿ ಎಂಜಾಯ್ ಮಾಡಿದ್ದಾರೆ.

    ಇನ್ನೂ ರುಷಬ್ ಕೆ ಎನ್ನುವವರ ಜೊತೆ ಸೌಂದರ್ಯ ಹಸೆಮಣೆ (Wedding) ಏರೋಕೆ ರೆಡಿಯಾಗಿದ್ದಾರೆ. ಆದರೆ ಇವರದ್ದು ಅರೇಂಜ್ ಮ್ಯಾರೇಜ್ ಅಥವಾ ಲವ್ ಮ್ಯಾರೇಜ್ ಎಂಬುದು ರಿವೀಲ್ ಆಗಿಲ್ಲ. ಹುಡುಗನ ವಿವರ ಕೂಡ ರಿವೀಲ್ ಆಗಿಲ್ಲ.

     

    View this post on Instagram

     

    A post shared by Shruthi (@shruthi__krishnaa)

    ಇನ್ನೂ ಸೌಂದರ್ಯ ಜಯಮಾಲಾ ಅವರ ವಿವಾಹ (Wedding) ಫೆ.7 ಹಾಗೂ 8ರಂದು ಜರುಗಲಿದೆ. ಈ ಮದುವೆ ಸಂಭ್ರಮದಲ್ಲಿ ರಾಜಕೀಯ ಗಣ್ಯರಿಗೆ ಹಾಗೂ ಸಿನಿಮಾ ಸ್ಟಾರ್ಸ್ ಆಹ್ವಾನ ನೀಡಲಾಗಿದೆ.

    ಇನ್ನೂ ಸೌಂದರ್ಯ ಜಯಮಾಲಾ ಅವರು ಚಿತ್ರರಂಗದಲ್ಲಿದ್ದ 2 ವರ್ಷಗಳಲ್ಲಿ 4 ಸಿನಿಮಾಗಳನ್ನು ಮಾಡಿದ್ದರು. ತೆಲುಗಿನಲ್ಲಿ ಮಿಸ್ಟರ್ ಪ್ರೇಮಿಕುಡು, ದುನಿಯಾ ವಿಜಯ್ ಜೊತೆ ಸಿಂಹಾದ್ರಿ, ಉಪೇಂದ್ರ ಜೊತೆ ಗಾಢ್ ಫಾದರ್, ಶ್ರೀನಗರ ಕಿಟ್ಟಿ ಜೊತೆ ಪಾರು ವೈಫ್ ಆಫ್ ದೇವದಾಸ್ ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಸದ್ಯ ಅವರು ಬಣ್ಣದ ಬದುಕಿನಿಂದ ಅಂತರ ಕಾಯ್ದುಕೊಂಡಿದ್ದಾರೆ.

  • ತಾಯಿಯನ್ನು ಇಷ್ಟೊಂದು ಪ್ರೀತಿಸುವ ವ್ಯಕ್ತಿಯನ್ನ ನಾನು ನೋಡಿಲ್ಲ: ಜಯಮಾಲ

    ತಾಯಿಯನ್ನು ಇಷ್ಟೊಂದು ಪ್ರೀತಿಸುವ ವ್ಯಕ್ತಿಯನ್ನ ನಾನು ನೋಡಿಲ್ಲ: ಜಯಮಾಲ

    ಟ ಸುದೀಪ್ (Sudeep) ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಅಮ್ಮನ ನಿಧನದಿಂದ ಸುದೀಪ್‌ಗೆ ಆಘಾತವಾಗಿದೆ. ಈ ಹಿನ್ನೆಲೆ ಸುದೀಪ್ ತಾಯಿಯ ಅಂತಿಮ ದರ್ಶನ ಪಡೆಯಲು ಸ್ಯಾಂಡಲ್‌ವುಡ್ ನಟ, ನಟಿಯರು ಮತ್ತು ರಾಜಕೀಯ ಗಣ್ಯರು ನಟನ ಮನೆಗೆ ಆಗಮಿಸುತ್ತಿದ್ದಾರೆ. ಇದೀಗ ಅಂತಿಮ ದರ್ಶನ ಪಡೆದ ಬಳಿಕ ಹಿರಿಯ ನಟಿ ಜಯಮಾಲ (Jayamala) ಮಾತನಾಡಿ, ತಾಯಿಯನ್ನು ಇಷ್ಟೊಂದು ಪ್ರೀತಿಸುವ ವ್ಯಕ್ತಿಯನ್ನು ನಾನೆಲ್ಲೂ ನೋಡಿಲ್ಲ ಎಂದು ಸುದೀಪ್‌ ಕುರಿತು ಹೇಳಿದ್ದಾರೆ.

    ಸರೋಜಮ್ಮ ನನಗೆ 1979ರಿಂದ ಪರಿಚಯ. ನಾನು ಯಾವತ್ತೂ ಅವರಲ್ಲಿ ಅಕ್ಕನನ್ನ ಕಾಣಲಿಲ್ಲ, ತಾಯಿಯನ್ನ ಕಾಣುತ್ತಿದ್ದೆ ಎಂದಿದ್ದಾರೆ.
    ಅವರ ಜೊತೆ ತುಂಬಾ ಒಡನಾಟ ಇತ್ತು. ಅವರೊಂದು ಸಾಮ್ರಾಜ್ಯವನ್ನೇ ಕಟ್ಟಿದ್ದರು. ಅದಕ್ಕೆ ಪಿಲ್ಲರ್ ಆಗಿ ನಿಂತುಕೊಂಡಿದ್ದರು. ಎಲ್ಲರಿಗೂ ಸಮಾಧಾನ ಹೇಳೋರು, ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತಿದ್ದರು. ಇವತ್ತು ಒಂದೊಳ್ಳೆಯ ಹೃದಯ ನಮ್ಮನ್ನು ಬಿಟ್ಟು ಹೋಗಿದೆ ಎಂದು ಜಯಮಾಲಾ ಭಾವುಕರಾಗಿದ್ದಾರೆ.

    ಸುದೀಪ್‌ಗೆ ಅವನ ತಾಯಿಯೇ ಅಸ್ಥಿತ್ವ, ಇದೀಗ ತನ್ನ ಅಸ್ತಿತ್ವವನ್ನೇ ಸುದೀಪ್ ಕಳೆದುಕೊಂಡೆ ಅಂತ ಅವರಿಗೆ ಕಷ್ಟ ಆಗುತ್ತಿದೆ. ತಾಯಿಯನ್ನ ಇಷ್ಟೊಂದು ಪ್ರೀತಿಸುವ ವ್ಯಕ್ತಿಯನ್ನ ನಾನು ಎಲ್ಲೂ ಕಂಡಿಲ್ಲ. ತಾಯಿನ ಕಂಡರೆ ಅಷ್ಟು ಅಗಾಧವಾದ ಪ್ರೀತಿಯಿತ್ತು. ಅವರ 2 ಹೆಣ್ಣುಮಕ್ಕಳಿಗೆ ಧೈರ್ಯ ಕೊಡಲಿ. ಸರೋಜಮ್ಮ ಇಡೀ ಹೆಣ್ಣು ಕುಲಕ್ಕೆ ಮಾದರಿಯಾಗಿದ್ದರು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಜಯಮಾಲ ಮಾತನಾಡಿದ್ದಾರೆ. ಇದನ್ನೂ ಓದಿ:ಕನ್ನಡದಲ್ಲೇ ಪತ್ರ ಬರೆದು ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿದ ಪವನ್ ಕಲ್ಯಾಣ್

    ಅಂದಹಾಗೆ, ನ್ಯುಮೋನಿಯದಿಂದ ಬಳಲುತ್ತಿದ್ದ ಸುದೀಪ್ ತಾಯಿ ಇಂದು (ಅ.20) ಬೆಳಗ್ಗೆ 7:04ಕ್ಕೆ ವಿಧಿವಶರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

  • ಮದುವೆಗೆ ಮುನ್ನ ಹರ್ಷಿಕಾಗೆ ಸಿಕ್ತು ಸಖತ್ ಗಿಫ್ಟ್

    ಮದುವೆಗೆ ಮುನ್ನ ಹರ್ಷಿಕಾಗೆ ಸಿಕ್ತು ಸಖತ್ ಗಿಫ್ಟ್

    ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಒಟ್ಟಾಗಿ ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಸಿಲೆಬ್ರಿಟಿಗಳ ಮನೆಗೆ ಹೋಗಿ ನೀಡುತ್ತಿದ್ದಾರೆ. ಈ ಜೋಡಿಗೆ ಮದುವೆ ಆಮಂತ್ರಣ ಪತ್ರಿಕೆ ಹಂಚುವಾಗಲೇ ವಿಶೇಷ ಉಡುಗೊರೆಯೊಂದು ದೊರೆತಿದೆ. ಹಿರಿಯ ನಟಿ ಜಯಮಾಲ (Jayamala) ಅವರು ಹರ್ಷಿಕಾಗೆ ಚಿನ್ನದ ಓಲೆ ಗಿಫ್ಟ್ (Gift) ನೀಡಿದ್ದಾರೆ. ಭುವನ್–ಹರ್ಷಿಕಾಗೆ ವಿವಾಹಕ್ಕೂ ಮುನ್ನ ಚಿನ್ನದ ಉಡುಗೊರೆ ಕೊಟ್ಟು ಸರ್ ಪ್ರೈಸ್ ನೀಡಿದ್ದಾರೆ ಜಯಮಾಲ. ಜೊತೆಗೆ ತಾವೇ ಕೈಯಾರೆ ಕಿವಿಯೋಲೆ ಹಾಕಿ ಸಂಭ್ರಮಿಸಿದ್ದಾರೆ.

    ಹಲವು ವರ್ಷಗಳಿಂದ ಸ್ನೇಹಿತರಾಗಿದ್ದ ನಟ ಭುವನ್ (Bhuvan) ಹಾಗೂ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ. ಸಹವಾಜವಾಗಿಯೇ ಅಭಿಮಾನಿಗಳಿಗೆ ಸಂಭ್ರಮ ತಂದಿದೆ. ಈಗಾಗಲೇ ಬ್ಯಾಚುಲರ್ ಪಾರ್ಟಿ ಮುಗಿಸಿಕೊಂಡು ಬಂದಿರುವ ಈ ಜೋಡಿ, ಇದೀಗ ತಮ್ಮ ಮದುವೆಗೆ ಗಣ್ಯರನ್ನು ಆಹ್ವಾನಿಸುತ್ತಿದೆ.

    ಆಗಸ್ಟ್ 24ರಂದು ವಿರಾಜಪೇಟೆಯಲ್ಲಿ (Virajpet) ಅದ್ದೂರಿಯಾಗಿ ವಿವಾಹ ಮಹೋತ್ಸವ ನಡೆಯಲಿದ್ದು, ಸಾಕಷ್ಟು ಸಿದ್ದತೆಗಳನ್ನು ಮಾಡಲಾಗುತ್ತಿದೆ. ಕೊಡವ (Kodava) ಶೈಲಿಯಲ್ಲಿ ಭುವನ್ ಹಾಗೂ ಹರ್ಷಿಕಾ ಮದುವೆಯಾಗುತ್ತಿದ್ದು (Marriage), ಅದಕ್ಕಾಗಿ ವಿರಾಜಪೇಟೆಯ ‘ಅಮ್ಮತಿ ಕೊಡವ ಸಮಾಜ’ ಸಿಂಗಾರಗೊಳ್ಳಲಿದೆ. ಇದನ್ನೂ ಓದಿ:ವೀರ ಮದಕರಿಯಲ್ಲಿ ಕಿಚ್ಚನ ಮಗಳಾಗಿ ನಟಿಸಿದ್ದ ಹುಡುಗಿ ಈಗ ಹೀರೋಯಿನ್

    ಈಗಾಗಲೇ ಸಿನಿಮಾ ಹಾಗೂ ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ ನೀಡಿರುವ ಜೋಡಿ,  ಸಿಎಂ ಸಿದ್ದರಾಮಯ್ಯ,  ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕೀಯ ಗಣ್ಯರನ್ನು ಮದುವೆಗೆ ಈ ಜೋಡಿ ಆಹ್ವಾನಿಸಿದೆ.

     

    ಸಿನಿಮಾ ತಾರೆಯರಾದ ಶಿವರಾಜ್ ಕುಮಾರ್, ರವಿಚಂದ್ರನ್, ಗಣೇಶ್ , ದೊಡ್ಡಣ್ಣ, ಶ್ರೀನಾಥ್  ಜಯಮಾಲ, ಸುಧಾರಾಣಿ, ತಾರಾ, ಮಾಲಾಶ್ರೀ, ಅನುಪ್ರಭಾಕರ್,  ಅಮೂಲ್ಯ, ದಿಗಂತ್, ಅಶ್ವಿನಿ ಪುನೀತ್ ರಾಜ್ ಕುಮಾರ್ , ರಾಘವೇಂದ್ರ ರಾಜ್ ಕುಮಾರ್, ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ, ದುನಿಯಾ ವಿಜಯ್ ಸೇರಿದಂತೆ ಅನೇಕ ಗಣ್ಯರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದ್ದಾರೆ ಭುವನ್ ಮತ್ತು ಹರ್ಷಿಕಾ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿದೇಶಗಳಿಗಿಂತ ನಮ್ಮೂರೇ ಸಾಕು: ಸೌಂದರ್ಯ ಜಯಮಾಲಾ

    ವಿದೇಶಗಳಿಗಿಂತ ನಮ್ಮೂರೇ ಸಾಕು: ಸೌಂದರ್ಯ ಜಯಮಾಲಾ

    ಬೆಂಗಳೂರು: ವಿದೇಶಕ್ಕೆ ಹೋಗಿ ಬಂದವರೆಂದರೆ ಪ್ರತಿಷ್ಟೆಯ ಪ್ರಶ್ನೆಯಾಗಿತ್ತು. ಆದರೆ ಇದೀಗ ವಿದೇಶಕ್ಕೆ ಹೋಗಿ ಬಂದವರೆಂದರೆ ದೂರ ಉಳಿಯುವ ಪರಿಸ್ಥಿತಿ ಎದುರಾಗಿದೆ. ಎಲ್ಲಾ ಕೊರೊನಾ ಮಾಯೆ. ವಿದೇಶದಲ್ಲಿ ಸಿಲುಕಿದವರ ಸ್ಥಿತಿ ಹೇಗಿತ್ತು, ಯಾವ ರೀತಿಯ ತೊಂದರೆ ಅನುಭವಿಸಿದರು ಎಂದು ಅವರ ಬಾಯಿಂದಾನೇ ಕೇಳಿದರೆ ಗೊತ್ತಾಗುತ್ತದೆ. ವಿದೇಶದಲ್ಲಿ ಪಟ್ಟ ಕಷ್ಟ, ಪಡಿಪಾಟಲು ಹೇಳತೀರದು. ಆ ಸಂದರ್ಭವನ್ನು ಇದೀಗ ಹಿರಿಯ ನಟಿ ಹಾಗೂ ವಿಧಾನ ಪರಿಷತ್ ಸದಸ್ಯೆ ಜಯಮಾಲಾ ಪುತ್ರಿ ಸೌಂದರ್ಯ ಜಯಮಾಲಾ ಅವರು ವಿವರಿಸಿದ್ದಾರೆ.

    ಕೊರೊನಾ ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ ನೂರಾರು ಜನ ಭಾರತೀಯರು ವಿವಿಧ ದೇಶಗಳಲ್ಲಿ ಸಿಲುಕಿದ್ದಾರೆ. ಇವರನ್ನು ತವರಿಗೆ ಕರೆತರಲು ಸರ್ಕಾರ ಸಹ ಸಾಹಸಪಡುತ್ತಿದ್ದು, ಒಂದೇ ಭಾರತ್ ಮಿಷನ್ ಮೂಲಕ ಏರ್‍ಲಿಫ್ಟ್ ಮಾಡಲಾಗುತ್ತಿದೆ. ಆದರೂ ವಿದೇಶಗಳಲ್ಲಿ ಸಿಲುಕಿದವರ ಸ್ಥಿತಿ ಹೇಳತೀರದಾಗಿದೆ. ಇಂಗ್ಲೆಂಡ್‍ನಲ್ಲಿ ಸಿಲುಕಿದ್ದ ಜಯಮಾಲಾ ಪುತ್ರಿ ಸೌಂದರ್ಯ ಜಯಮಾಲಾ ಅವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

    ಕಳೆದೆರಡು ತಿಂಗಳು ಅನುಭವಿಸಿದ ಯಾತನೆ ನೆನಸಿಕೊಂಡರೆ ಮತ್ತೆ ಯಾವತ್ತೂ ಬೇರೆ ದೇಶಕ್ಕೆ ಹೋಗಬಾರದು. ವಿದೇಶಗಳಿಗಿಂತ ನಮ್ಮೂರೇ ಸಾಕು ಎಂದೆನಿಸಿದೆ ಎಂದು ಸೌಂದರ್ಯ ಜಯಮಾಲಾ ನಿಟ್ಟುಸಿರು ಬಿಟ್ಟಿದ್ದಾರೆ.

    ಇಂಗ್ಲೆಂಡ್‍ನ ವೇಲ್ಸ್ ನ ‘ಸ್ವಾನ್‍ಸೀ ವಿವಿ’ ಯಲ್ಲಿ ಅಂತಿಮ ವರ್ಷದ ಬಿಎಸ್‍ಸಿ(ಬಾಟನಿ) ಆನರ್ಸ್ ವ್ಯಾಸಂಗ ಮಾಡುತ್ತಿದ್ದೆ. ಫ್ರೆಂಡ್ ಜೊತೆ ಅಲ್ಲಿಯೇ ಅಪಾರ್ಟ್‍ಮೆಂಟ್‍ವೊಂದರಲ್ಲಿ ಬಾಡಿಗೆಗೆ ನೆಲೆಸಿದ್ದೆವು.

    ನಿರಾಶ್ರಿತಳಾಗಿ ಉಳಿದುಕೊಂಡಿದ್ದೆ

    ಇತ್ತೀಚೆಗೆ ಕೊರೊನಾದಿಂದಾಗಿ ಇಂಗ್ಲೆಂಡ್‍ನಲ್ಲಿ ಏಕಾಏಕಿ ಲಾಕ್‍ಡೌನ್ ಹೇರಲಾಗಿತ್ತು. ಇದರಿಂದಾಗಿ ಎರಡು ತಿಂಗಳುಗಳ ಕಾಲ ಎಲ್ಲೂ ಹೊರಹೋಗದಂತೆ ಬಂಧಿಯಾದ್ದೆವು, ತುಂಬಾ ಭಯವಾಗಿತ್ತು. ಅಲ್ಲದೆ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದಂತೆ, ವಿದೇಶಿ ವಿದ್ಯಾರ್ಥಿಗಳು ಹೊರ ಹೋಗದಂತೆ ನಿರ್ಬಂಧ ಹೇರಲಾಯಿತು. ಇದರ ಬೆನ್ನಲ್ಲೇ ನಮ್ಮ ವಿವಿಯ ಇಬ್ಬರು ಪ್ರೊಫೆಸರ್‍ಗಳು ಹಾಗೂ ಒಬ್ಬ ವಿದ್ಯಾರ್ಥಿ ಕೂಡ ಮೃತಪಟ್ಟರು. ಇನ್ನೂ ಭಯದ ವಾತಾವರಣ ನಿರ್ಮಾಣವಾಯಿತು. ಅಲ್ಲದೆ ಇಡೀ ವಿವಿಯನ್ನು ಸೀಲ್‍ಡೌನ್ ಮಾಡಲಾಯಿತು. ಹೀಗಾಗಿ ಮಾರ್ಚ್ 22ರಂದು ದುಬೈ ಮೂಲಕ ಬೆಂಗಳೂರಿಗೆ ಬರುವ ಪ್ಲ್ಯಾನ್ ಮಾಡಿಕೊಂಡಿದ್ದೆ. ಆದರೆ ಅಲ್ಲಿಯೂ ಪ್ರಯಾಣ ನಿರ್ಬಂಧಿಸಲಾಯಿತು. ಇದರಿಂದ ಮತ್ತೆ ಲಂಡನ್‍ಗೆ ಬರಬೇಕಾದ ಪರಿಸ್ಥಿತಿ ಎದುರಾಯಿತು. ಭಾರತಕ್ಕೆ ಹಿಂದಿರುಗುವ ಹಿನ್ನೆಲೆ ಬಾಡಿಗೆ ಮನೆ ಸಹ ಖಾಲಿ ಮಾಡಿದ್ದೆವು. ಹೀಗಾಗಿ ಲಂಡನ್ ವಿಮಾನ ನಿಲ್ದಾಣದಲ್ಲೇ ನಿರಾಶ್ರಿತಳಾಗಿ ಉಳಿಯುವಂತಾಯಿತು ಎಂದು ವಿದೇಶದಲ್ಲಿ ಪಟ್ಟ ಕಷ್ಟವನ್ನು ನೆನಪು ಮಾಡಿಕೊಂಡಿದ್ದಾರೆ.

    ವಿಮಾನ ನಿಲ್ದಾಣದಲ್ಲಿ ಹೆಚ್ಚು ದಿನ ಇರಲು ಸಾಧ್ಯವಾಗದ ಕಾರಣ, ಕುವೈತ್‍ನ ಸ್ನೇಹಿತೆಯ ಸಹಾಯದಿಂದ ಮತ್ತೆ ಬಾಡಿಗೆ ಮನೆ ಮಾಲೀಕರಿಗೆ ವಿಷಯ ಮುಟ್ಟಿಸಿದೆ. ನಂತರ ಮನೆಗೆ ತೆರಳಿದೆ. ಆದರೆ ಅದಾಗಲೇ ವಿದ್ಯುತ್, ನೀರು, ಇಂಟರ್‍ನೆಟ್, ಫೋನ್ ಸೇರಿದಂತೆ ಎಲ್ಲ ರೀತಿಯ ಸಂಪರ್ಕ ಕಡಿತಗೊಳಿಸಲಾಗಿತ್ತು. ಇರುವುದರಲ್ಲೇ ನೆಮ್ಮದಿ ಕಂಡುಕೊಂಡ ನನಗೆ, ಸ್ನೇಹಿತೆ ಸಹಾಯ ಮಾಡಿದಳು. ಹೀಗೆ ಭಯದಲ್ಲೇ ದಿನದೂಡುತ್ತಿರುವಾಗ ಕೇಂದ್ರ ಸರ್ಕಾರದಿಂದ ಏರ್‍ಲಿಫ್ಟ್ ಸುದ್ದಿ ಬಂತು. ಈ ಹಿಂದೆ ಕೂಡ ಇದೇ ರೀತಿಯ ಸುದ್ದಿಗಳು ಹರಿದಾಡಿದ್ದರಿಂದ ನಾನು ಮತ್ತೆ ಸುಳ್ಳು ಸುದ್ದಿ ಎಂದುಕೊಂಡಿದ್ದೆ. ಆದರೆ ಏರ್ ಇಂಡಿಯಾ ವಿಮಾನ ಸಂಸ್ಥೆಯಿಂದ ಕರೆ ಬಂದಾಗ ಹೋದ ಜೀವ ಬಂದಂತಾಯಿತು. ಅಲ್ಲದೆ ಲಂಡನ್‍ನಿಂದ ಬೆಂಗಳೂರಿಗೆ ಹೊರಟ ಮೊದಲ ವಿಮಾನದಲ್ಲೇ ನನಗೆ ಟಿಕೆಟ್ ಸಹ ಲಭಿಸಿತ್ತು. ಹೀಗಾಗಿ ಖುಷಿ ಇಮ್ಮಡಿಯಾಯಿತು. ನಂತರ ವಿಮಾನ ಏರಿ ಹೇಗೋ ಬೆಂಗಳೂರಿಗೆ ಬಂದಿಳಿದೆ. ಸದ್ಯ ಬೆಂಗಳೂರಿನ ಹೋಟೆಲ್‍ವೊಂದರಲ್ಲಿ ಕ್ವಾರಂಟೈನ್‍ನಲ್ಲಿದ್ದೇನೆ ಎಂದು ಹೇಳಿದ್ದಾರೆ.

  • ಮಾಧ್ಯಮಗಳು ಸರ್ಕಾರದ ಬಗ್ಗೆ ತಲೆ ಕೆಡಿಸ್ಕೋಬೇಡಿ: ಆರ್.ವಿ ದೇಶಪಾಂಡೆ

    ಮಾಧ್ಯಮಗಳು ಸರ್ಕಾರದ ಬಗ್ಗೆ ತಲೆ ಕೆಡಿಸ್ಕೋಬೇಡಿ: ಆರ್.ವಿ ದೇಶಪಾಂಡೆ

    -ಹೆಣ್ಮಕ್ಕಳ ಮೇಲೆ ಸ್ವಲ್ಪ ಕಾಳಜಿ ಮಾಡ್ರೀ

    ಉಡುಪಿ: ಮಾಧ್ಯಮಗಳು ಸರ್ಕಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಸರ್ಕಾರ ಐದು ವರ್ಷ ಸುಭದ್ರವಾಗಿದೆ ಎಂದು ಕಂದಾಯ ಸಚಿವ ಆರ್.ವಿ ದೇಶಪಾಂಡೆ ಹೇಳಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಡೆಲ್ಲಿಗೆ ಹೋಗಿರುವುದರ ಬಗ್ಗೆ ಕೇಳಿದಾಗ, ಅವರು ಡೆಲ್ಲಿಗೆ ಹೋಗಬಾರದಾ.!? ರಾಹುಲ್ ಗಾಂಧಿಯವರನ್ನು ಭೇಟಿ ಮಾಡಬಾರದಾ ಎಂದು ವಾಪಾಸ್ ಮಾಧ್ಯಮಗಳನ್ನು ಪ್ರಶ್ನೆ ಮಾಡಿದ್ದಾರೆ.

    ಸಿದ್ದರಾಮಯ್ಯನವರು ರಾಹುಲ್ ಗಾಂಧಿಯನ್ನು ಭೇಟಿಯಾದರೆ ಆಶ್ಚರ್ಯ ಯಾಕೆ? ಯಾರ ವಿರುದ್ಧ ಯಾರು ದೂರು ಕೊಡುತ್ತಾರೆ? ಮಾಧ್ಯಮಗಳು ಏನೇನೋ ಮಾತನಾಡೋದಕ್ಕೆ ಹೋಗಬೇಡಿ. ನೀವು ಏಕೆ ತಲೆ ಕೆಡಿಸ್ಕೋತೀರಿ? ಎಂದು ಮಾಧ್ಯಮ ಮಂದಿಗೆ ಪ್ರಶ್ನೆ ಕೇಳಿದರು. ಮುಖ್ಯಮಂತ್ರಿಗಳ ನಾಯಕತ್ವದಲ್ಲಿ ಸರ್ಕಾರ ಸುಭದ್ರವಾಗಿದೆ. ಮಾಧ್ಯಮಗಳು ಸರ್ಕಾರಕ್ಕೆ ಸಹಕರಿಸಿ ನಮ್ಮ ತಪ್ಪಿದರೆ ಅದನ್ನು ಎತ್ತಿ ತೋರಿಸಿ ಎಂದು ಆರ್.ವಿ ಡಿ ಹೇಳಿದರು.

    ಜಯಮಾಲಾ ಬಗ್ಗೆ ಕಾಳಜಿ ಮಾಡ್ರೀ..!
    ಉಡುಪಿಯಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ ಅವರೇ ಗೈರಾಗಿದ್ದರು. ಉಸ್ತುವಾರಿ ಸಚಿವರ ಅನುಪಸ್ಥಿತಿಯಲ್ಲಿಯೇ ಪ್ರವಾಹ ನಿರ್ವಹಣಾ ಸಭೆ ನಡೆಯಿತು. ಕಂದಾಯ ಸಚಿವರೇ ಜಿಲ್ಲೆಗೆ ಬಂದರೂ ಉಡುಪಿ ಉಸ್ತುವಾರಿ ಸಚಿವರು ಮಾತ್ರ ಗೈರಾಗಿದ್ದರು. ಆದರೆ ಜಯಮಾಲಾ ಗೈರನ್ನು ಸಚಿವ ದೇಶಪಾಂಡೆ ಸಮರ್ಥಿಸಿಕೊಂಡರು. ಜಯಮಾಲಾ ಅವರು ಬೆಂಗಳೂರಿನಲ್ಲಿ 30 ಜಿಲ್ಲಾಧಿಕಾರಿಗಳ ಸಭೆ ಕರೆದಿದ್ದಾರೆ, ಹೀಗಾಗಿ ಗೈರಾಗಿದ್ದಾರೆ, ಹೆಣ್ಣು ಮಕ್ಕಳ ಮೇಲೆ ಸ್ವಲ್ಪ ಕಾಳಜಿ ಮಾಡ್ರೀ ಎಂದು ನಗುತ್ತಲೇ ನುಣುಚಿಕೊಂಡರು.

    ಡಿಕೆಶಿ ಕೆಪಿಸಿಸಿ ಸಾರಥಿ..!
    ಸಚಿವ ಡಿಕೆ ಶಿವಕುಮಾರ್ ಕಾಂಗ್ರೆಸ್‍ನ ಮುಂದಿನ ಸಾರಥಿ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಡಿ.ಕೆ.ಶಿ ಯಾವಾಗ ಪಕ್ಷದ ಅಧ್ಯಕ್ಷರಾಗುತ್ತಾರೆ ನನಗೆ ಗೊತ್ತಿಲ್ಲ. ಅಧ್ಯಕ್ಷರ ನೇಮಕ ಪಕ್ಷಕ್ಕೆ ಬಿಟ್ಟದ್ದು ಎಂದರು. ಪಕ್ಷ ಮಾಡುವ ತೀರ್ಮಾನಕ್ಕೆ ನಾವು ಬದ್ಧರಿದ್ದೇವೆ ಎಂದು ಹೇಳಿದರು.

  • ಕಣ್ಮರೆಯಾದ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ: ಸಚಿವೆ ಜಯಮಾಲಾ ಘೋಷಣೆ

    ಕಣ್ಮರೆಯಾದ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ: ಸಚಿವೆ ಜಯಮಾಲಾ ಘೋಷಣೆ

    ಉಡುಪಿ: ಉಡುಪಿಯ ಸುವರ್ಣ ತ್ರಿಭುಜ ಬೋಟ್‍ನಲ್ಲಿ ಮೀನುಗಾರಿಕೆಗೆ ತೆರಳಿ ಕಣ್ಮರೆಯಾಗಿರುವ ಏಳು ಜನ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಸಮ್ಮಿಶ್ರ ಸರ್ಕಾರ ತೀರ್ಮಾನಿಸಿದೆ.

    ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಉಡುಪಿಯಿಂದ ಸುವರ್ಣ ತ್ರಿಭುಜ ಬೋಟ್‍ನಲ್ಲಿ ಮೀನುಗಾರಿಕೆಗೆ ತೆರಳಿದ್ದ ಏಳು ಮೀನುಗಾರರು ಕಣ್ಮರೆಯಾಗಿದ್ದಾರೆ. ಮೀನುಗಾರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಧನ ನೀಡುವ ಆದೇಶವಾಗಿದೆ. ಮೀನುಗಾರ ಸಂಕಷ್ಟ ಪರಿಹಾರ ನಿಧಿ, ಸಿಎಂ ಪರಿಹಾರ ನಿಧಿಯಿಂದ ಹಣ ನೀಡಲಾಗುವುದು. ಸಮುದ್ರದಲ್ಲಿ ಕಣ್ಮರೆಯಾದವರು ಶೀಘ್ರ ಪತ್ತೆಯಾಗಲಿ ಎಂಬುದು ನಮ್ಮ ಆಶಯ ಎಂದು ಹೇಳಿದರು.

    ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. ದೊಡ್ಡ ಮೊತ್ತದ ಪರಿಹಾರಕ್ಕಾಗಿ ಕೇಂದ್ರವನ್ನು ಒತ್ತಾಯಿಸುತ್ತೇವೆ ಎಂದು ಭರವಸೆ ನೀಡಿದರು.

    ಉಡುಪಿ ಭಾಗಶಃ ಬರಪೀಡಿತ ಜಿಲ್ಲೆ. ಇಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. 126 ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯಿದೆ. ಎಲ್ಲಾ ಕಡೆ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದ್ದೇವೆ. ಬಜೆ ಡ್ಯಾಂ ನೀರು ಸಂಪೂರ್ಣ ಇಂಗಿ ಹೋಗಿದೆ. ಡ್ಯಾಂನ ಹೂಳೆತ್ತುವ, ಬಂಡೆ ಒಡೆಯುವ ಪ್ರಕ್ರಿಯೆ ಮಾಡುತ್ತೇವೆ ಎಂದು ಹೇಳಿದರು.

    ಬರ ನಿರ್ವಹಣೆಯ ಹಣಕಾಸಿಗೆ ತೊಂದರೆ ಇಲ್ಲ. 33 ಕೋಟಿ ರೂ. ಖಾತೆಯಲ್ಲಿದೆ. ಸಮುದ್ರಕ್ಕೆ ಹರಿಯುವ ನೀರನ್ನು ರಿಚಾರ್ಜ್ ಮಾಡಬೇಕಾಗಿದೆ. ಮಳೆನೀರು ಕೊಯ್ಲು ಯೋಜನೆ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಮಾಡಿ ಚರ್ಚೆ ಮಾಡಲಾಗುತ್ತದೆ. ಜಿಲ್ಲೆಯ 400 ಮದಗಗಳ ಹೂಳೆತ್ತುತ್ತೇವೆ. ನಗರ ಪ್ರದೇಶದ ಜನರಿಗೆ ಕುಡಿಯುವ ತೊಂದರೆ ಆಗುವುದಿಲ್ಲ. ನದಿಗೆ ಹಾಕಿರುವ ಎಲ್ಲಾ ಪಂಪ್ ಸೆಟ್ ಕಡಿತ ಮಾಡುತ್ತೇವೆ ಎಂದರು.

  • ಪಬ್ಲಿಕ್ ಟಿವಿ ರಹಸ್ಯ ಕಾರ್ಯಾಚರಣೆಗೆ ಸಚಿವೆ ಜಯಮಾಲಾ ಮೆಚ್ಚುಗೆ

    ಪಬ್ಲಿಕ್ ಟಿವಿ ರಹಸ್ಯ ಕಾರ್ಯಾಚರಣೆಗೆ ಸಚಿವೆ ಜಯಮಾಲಾ ಮೆಚ್ಚುಗೆ

    ಬೆಂಗಳೂರು: ರಾಜ್ಯದಲ್ಲಿ ಹೆಣ್ಣು ಮಕ್ಕಳ ಬೃಹತ್ ಮಾರಾಟ ಜಾಲದ ಬಗ್ಗೆ ಪಬ್ಲಿಕ್ ಟಿವಿ ನಡೆಸಿದ ರಹಸ್ಯ ಕಾರ್ಯಚರಣೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜಯಮಾಲಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸುದ್ದಿಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಸುದ್ದಿಯನ್ನು ಬಿತ್ತರಿಸಿದ ಪಬ್ಲಿಕ್ ಟಿವಿಗೆ ಧನ್ಯವಾದಗಳು. ನಾನು ಪಬ್ಲಿಕ್ ಟಿವಿಯನ್ನು ಗೌರವಿಸುತ್ತೇನೆ. ಹೆಣ್ಣು ಮಕ್ಕಳನ್ನು ರಕ್ಷಿಸುವ ಒಳ್ಳೆಯ ಕೆಲಸ ಮಾಡಿದ್ದೀರಿ. ನಿಮ್ಮಲ್ಲಿರುವ ಮಾಹಿತಿಯನ್ನು ನಮಗೆ ಕೊಡಿ. ನಾನು ಕೂಡಲೇ ಈ ವಿಚಾರವನ್ನು ಕಮಿಷನರ್, ಗೃಹ ಸಚಿವರ ಗಮನಕ್ಕೆ ತರುತ್ತೇನೆ. ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿ ಅತ್ಯಂತ ಪ್ರಿಯಾವಾದ ಚಾನೆಲ್ ಎಂದು ಪಬ್ಲಿಕ್ ಟಿವಿ ನಡೆಸಿದ ರಹಸ್ಯ ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಬೆಂಗಳೂರಿನಿಂದ ದುಬೈಗೆ ಹೆಣ್ಣು ಮಕ್ಕಳ ಮಾರಾಟವಾಗುತ್ತಿದೆ. ಲಕ್ಷ ಲಕ್ಷ ಸಂಬಳ, ಫಾರಿನ್ ಆಸೆ ತೋರಿಸಿ ಅಂದ ಚೆಂದದ ಹುಡುಗಿಯರನ್ನು ದುಬೈಗೆ ಕಳುಹಿಸಲಾಗುತ್ತಿದೆ. ಈ ಬೃಹತ್ ಹೆಣ್ಣುಮಕ್ಕಳ ಸಾಗಾಟ ಜಾಲವನ್ನು ಪಬ್ಲಿಕ್ ಟಿವಿ ರಹಸ್ಯ ಕಾರ್ಯಾಚರಣೆಯ ಮೂಲಕ ಪತ್ತೆ ಹಚ್ಚಿತ್ತು. ಇದೇ ವಿಚಾರವಾಗಿ ಡೆಡ್ಲಿ ಗ್ಯಾಂಗ್ ನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಸೀರಿಯಲ್ ನಟಿಯೊಬ್ಬರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದರು. ನನ್ನನ್ನು ಉದ್ಯೋಗಕ್ಕಾಗಿ ಫಾರಿನ್ ಗೆ ಕರೆದುಕೊಂಡು ಹೋಗುವ ಬಗ್ಗೆ ಭೇಟಿ ಮಾಡುವುದಕ್ಕೆ ಹೇಳಿದ್ದಾರೆ. ಬೆಂಗಳೂರಿನ ನವರಂಗ್ ಬಳಿ ಬರುವುದಕ್ಕೆ ಹೇಳಿದ್ದಾರೆ. ನನಗೆ ಯಾಕೋ ಇದು ಫೇಕ್ ಎಂದು ಎನ್ನಿಸುತ್ತಿದೆ. ಹೀಗಾಗಿ ನೀವು ನಮ್ಮ ಜೊತೆ ಬನ್ನಿ ಸಾರ್ ಎಂದು ಅವರು ಪಬ್ಲಿಕ್ ಟಿವಿ ಬಳಿ ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಅಂದ-ಚಂದದ ಹೆಣ್ಮಕ್ಕಳೇ ಟಾರ್ಗೆಟ್ – ಬೆಂಗ್ಳೂರಿನಿಂದ ದುಬೈಗೆ ಸಪ್ಲೈ

    ಕೂಡಲೇ ಪಬ್ಲಿಕ್ ಟಿವಿ ತಂಡ, ನಟಿಯನ್ನು ನವರಂಗ್ ಸಿಗ್ನಲ್ ಬಳಿ ಭೇಟಿ ಮಾಡಿ, ಯಾವ ಕಾರಣಕ್ಕೆ ದುಬೈಗೆ ಕರೆದುಕೊಂಡು ಹೋಗುತ್ತಾರೆ. ಅಲ್ಲಿ ಕೆಲಸವೇನು? ಸಂಬಳವೆಷ್ಟು.? ಅವರು ಹೇಗೆ ಪರಿಚಯ ಎಂದು ವಿಚಾರಿಸಿದೆ. ಅಷ್ಟರೊಳಗೆ ಕಿರುತೆರೆ ನಟಿಗೆ ಫಾರಿನ್ ಆಸೆ ತೋರಿಸಿದ ಖದೀಮರು ಕಾಲ್ ಮಾಡಿ, ಸ್ಥಳ ಬದಲಾವಣೆ ಮಾಡಿದ್ದೇವೆ. ರಾಜಾಜಿನಗರದ ರಾಮಮಂದಿರ ಗ್ರೌಂಡ್ ಕಡೆ ಬರೋದಕ್ಕೆ ಹೇಳಿದ್ದಾರೆ. ನಂತರ ಮತ್ತೆ ಕಾಲ್ ಮಾಡಿ, ರಾಜಾಜಿನಗರ ಮೆಟ್ರೋ ಸ್ಟೇಷನ್ ಕಡೆ ಬರೋದಕ್ಕೆ ಹೇಳಿದ್ದರು. ಈ ಬಗ್ಗೆ ನಮ್ಮ ತಂಡ, ಸುಬ್ರಹ್ಮಣ್ಯ ನಗರ ಪೊಲೀಸರಿಗೆ ಮಾಹಿತಿ ನೀಡಿ ಹುಡುಗಿಯನ್ನು ಪಿಕ್ ಮಾಡೋಕೆ ರಾಜಾಜಿನಗರದ ಮೆಟ್ರೋ ಸ್ಟೇಷನ್ ಗೆ ಬರುವಾಗ ಲಾಕ್ ಮಾಡೋದಕ್ಕೆ ಪ್ಲಾನ್ ಮಾಡಿಕೊಂಡಿತ್ತು.

    https://www.youtube.com/watch?v=KR-okhIp_PM

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಭಾರತ ರತ್ನ ನೀಡಿ ಪ್ರಣಬ್ ಮುಖರ್ಜಿಯನ್ನು ಹೈಜಾಕ್ ಮಾಡಕ್ಕಾಗಲ್ಲ: ಜಯಮಾಲಾ

    ಭಾರತ ರತ್ನ ನೀಡಿ ಪ್ರಣಬ್ ಮುಖರ್ಜಿಯನ್ನು ಹೈಜಾಕ್ ಮಾಡಕ್ಕಾಗಲ್ಲ: ಜಯಮಾಲಾ

    ಉಡುಪಿ: ನಡೆದಾಡುವ ದೇವರಿಗೆ ನೆಪ ಮಾತ್ರಕ್ಕೆ ಭಾರತ ರತ್ನ ಸಿಗಬೇಕು ಅಷ್ಟೆ ಯಾಕೆಂದರೆ ಶ್ರೀಗಳು ಭಾರತ ರತ್ನ ಪ್ರಶಸ್ತಿಗಿಂತಲೂ ಮೀರಿ ಬೆಳೆದವರು. ಹಾಗೆಯೇ ಪ್ರಣಬ್ ಮುಖರ್ಜಿಗೆ ಭಾರತ ರತ್ನ ನೀಡಿ ಅವರನ್ನು ಬಿಜೆಪಿ ಹೈಜಾಕ್ ಮಾಡಕ್ಕಾಗಲ್ಲ ಅಂತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಬಿಜೆಪಿ ಟಾಂಗ್ ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ವರ್ಷವಾದರೂ ಶ್ರೀಗಳಿಗೆ ಪ್ರಶಸ್ತಿ ಬರಲಿ ಅಂತ ಆಶಿಸುತ್ತೇನೆ. ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಬರಬೇಕು ಅನ್ನೋದು ನಮ್ಮ ಆಶಯವಾಗಿತ್ತು, ಬಂದಿದ್ದರೆ ತುಂಬಾ ಸಂತೋಷ ಆಗ್ತಿತ್ತು ಎಂದು ಬೇಸರ ವ್ಯಕ್ತಪಡಿಸಿದರು. ಬಳಿಕ ಪ್ರಣಬ್ ಮುಖರ್ಜಿ ಅವರಿಗೆ ಭಾರತ ರತ್ನ ನೀಡಿದ್ದರಲ್ಲಿ ಯಾವುದೇ ರಾಜಕೀಯ ಇಲ್ಲ. ಪ್ರಶಸ್ತಿ ಕೊಟ್ಟು ಪ್ರಣಬ್ ಮುಖರ್ಜಿಯನ್ನು ಹೈಜಾಕ್ ಮಾಡಕಾಗಲ್ಲ. ಕಾಂಗ್ರೆಸ್ ನಾಯಕರನ್ನು ಯಾವ ಬಿಜೆಪಿಯವರಿಗೂ ಏನೂ ಮಾಡಕಾಗಲ್ಲ. ಪ್ರಣಬ್ ಮುಖರ್ಜಿ ಭಾರತ ರತ್ನಕ್ಕೆ ಅರ್ಹರು, ಅವರಿಗೆ ಪ್ರಶಸ್ತಿ ನೀಡಿರುವುದರಿಂದ ಖುಷಿಯಾಗಿದೆ ಎಂದು ಹೇಳಿದರು.

    ಕರ್ನಾಟಕದ ಸಾಲುಮರದ ತಿಮ್ಮಕ್ಕ, ನೃತ್ಯ ನಿರ್ದೇಶಕ ಪ್ರಭುದೇವಗೆ ಪದ್ಮ ಪ್ರಶಸ್ತಿ ಬಂದಿದೆ. ಕಲಾವಿದರಿಗೆ ಭಾಷೆಯ ಗಡಿಯಿಲ್ಲ, ಚಿತ್ರರಂಗ ಬೆಳೆಸಿದವರು ಪ್ರಭುದೇವ ಕುಟುಂಬದವರು ಹೀಗಾಗಿ ಅವರಿಗೆ ಪ್ರಶಸ್ತಿ ಬಂದದ್ದು ಖುಷಿಯಾಗಿದೆ ಎಂದು ಪ್ರತಿಕ್ರಿಯಿಸಿದರು.

    ಕಾಂಗ್ರೆಸ್ ಶಾಸಕರ ಹೊಡೆದಾಟದ ವಿಚಾರವಾಗಿ ಪ್ರತಿಕ್ರಿಯಿಸಿ, ಶಾಸಕ ಗಣೇಶ್ ಸಿಕ್ಕೇ ಸಿಗ್ತಾರೆ. ಅಧಿಕಾರಿಗಳು ಅವರನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಈ ಗಲಾಟೆ ನಡೆದ ವೇಳೆ ನಾನು ರೆಸಾರ್ಟಿನಲ್ಲಿ ಇರ್ಲಿಲ್ಲ. ಈ ಬಗ್ಗೆ ನನ್ನನ್ನು ಏನೂ ಹೆಚ್ಚು ಕೇಳ್ಬೇಡಿ. ಮಾಧ್ಯಮದವರಿಗೆ ಯಾಕೆ ಆತುರ? ಸಿಕ್ತಾರೆ ಬಿಡಿ ಎಂದು ಹೇಳಿ ಜಯಮಾಲಾ ನುಣುಚಿಕೊಂಡರು.

    ರಾಜಕಾರಣಿಗಳ ಕಾಟಾಚಾರದ ಬರಪ್ರವಾಸ ವಿಚಾರದ ಪ್ರಶ್ನೆಗೆ ಉತ್ತರಿಸಿದ ಅವರು, ಯಡಿಯೂರಪ್ಪ ಬರ ಪ್ರವಾಸ ವಿಚಾರ ನನಗಿಂತ ಚೆನ್ನಾಗಿ ನಿಮಗೇ ಗೊತ್ತಿದೆ. ಕೃಷ್ಣೆಬೈರೇಗೌಡರ ಬರ ಪ್ರವಾಸ ಸರಿಯಾಗಿಯೆ ಮಾಡಿದ್ದಾರೆ. ಬರ ಪ್ರವಾಸಕ್ಕೆ ಹೋದಾಗ ಅರಣ್ಯ ನೋಡ್ಕೋಂಡು ಬಂದಿರ್ತಾರೆ. ಬರ ಪರಿಹಾರ ಕೆಲಸ ಮಾಡೋಕೆ ವಿಪಕ್ಷ ಏನೂ ಹೇಳ್ಬೇಕಾಗಿಲ್ಲ. ಎಲ್ಲಾ ನಮ್ಮ ಸರ್ಕಾರವೇ ಮಾಡುತ್ತೆ, ನಮಗೆ ಜವಾಬ್ದಾರಿ ಇದೆ ಎಂದು ಕಿಡಿಕಾರಿದರು.

    ಅಷ್ಟೇ ಅಲ್ಲದೆ ಬರ ಪ್ರವಾಸ ಮಾಡದೆ ಮಗನ ಸಿನಿಮಾವನ್ನು ನಾಲ್ಕಾರು ಬಾರಿ ನೋಡಿದ ಸಿಎಂ ನಡೆಯನ್ನೂ ಜಯಮಾಲಾ ಸಮರ್ಥಿಸಿದರು. ನಿಖಿಲ್ ಕುಮಾರಸ್ವಾಮಿ ಕಷ್ಟಪಟ್ಟು ಸಿನೆಮಾ ಮಾಡಿದ್ದಾರೆ. ಸಿನಿಮಾ ನೋಡೋಕೂ ಲೆಕ್ಕಾಚಾರ ಹಾಕ್ಬೇಡಿ. ಅಪ್ಪನಿಗೆ ಮಕ್ಕಳ ಬೆಳವಣಿಗೆ ಬೇಡ್ವ? ಬರ ಅಂತ ಹೇಳಿ ಊಟ ಮಾಡದೆ ಇರೋದಕ್ಕಾಗುತ್ತಾ ಅಂತ ಪ್ರಶ್ನೆ ಮಾಡಿ ಸಿಎಂ ಕುಮಾರಸ್ವಾಮಿಯವರ ಪರವಹಿಸಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಷ್ಟ್ರೀಯ ಹೆದ್ದಾರಿ 4 ಗಂಟೆ ಬಂದ್- ಉಡುಪಿಯಲ್ಲಿ ಬೀದಿಗಿಳಿದ ಕಡಲ ಮಕ್ಕಳು

    ರಾಷ್ಟ್ರೀಯ ಹೆದ್ದಾರಿ 4 ಗಂಟೆ ಬಂದ್- ಉಡುಪಿಯಲ್ಲಿ ಬೀದಿಗಿಳಿದ ಕಡಲ ಮಕ್ಕಳು

    ಉಡುಪಿ: ಮಲ್ಪೆಯಿಂದ ಹೊರಟ ಮೀನುಗಾರಿಕಾ ಬೋಟ್ ನಾಪತ್ತೆಯಾಗಿ 25 ದಿನಗಳೇ ಕಳೆದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಹುಡುಕಾಟ ನಡೆಸಿದರೂ ರಿಸಲ್ಟ್ ಬಂದಿಲ್ಲ. ಹೀಗಾಗಿ ಕಾದು-ಕಾದು ಸುಸ್ತಾದ ಕರಾವಳಿ ಮೂರು ಜಿಲ್ಲೆಯ ಸುಮಾರು 50 ಸಾವಿರ ಮೀನುಗಾರರು ರಾಷ್ಟ್ರೀಯ ಹೆದ್ದಾರಿಯನ್ನು ನಾಲ್ಕು ಗಂಟೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.

    ಕರಾವಳಿ ಜಿಲ್ಲೆ ಉಡುಪಿಯ ಇತಿಹಾಸದಲ್ಲೇ ಮೊದಲ ಬಾರಿಗೆ ಮೀನುಗಾರರು ಇಷ್ಟು ಸಂಖ್ಯೆಯಲ್ಲಿ ಬೀದಿಗಿಳಿದಿದ್ದರು. ಡಿಸೆಂಬರ್ 13ರಂದು ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ ಸುವರ್ಣ ತ್ರಿಭುಜ ಬೋಟ್ ಇನ್ನೂ ಪತ್ತೆಯಾಗಿಲ್ಲ. ಬೋಟ್ ನಲ್ಲಿದ್ದ 7 ಮೀನುಗಾರರ ಸುಳಿವೂ ಇಲ್ಲ. ನೌಕಾಸೇನೆ- ವಾಯುಸೇನೆ- ಪೊಲೀಸರು- ಕೋಸ್ಟ್ ಗಾರ್ಡ್ , ಮೀನುಗಾರರು ಎಷ್ಟು ಹುಡುಕಾಟ ನಡೆಸಿದರೂ ಪತ್ತೆ ಕಾರ್ಯ ಆಗಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಮೀನುಗಾರರು ಬೃಹತ್ ಜನಜಾಥಾ ಮಾಡಿದರು. ಸುಮಾರು 50 ಸಾವಿರ ಮೀನುಗಾರರು ಬೀದಿಗಿಳಿದು ಅಸಮಾಧಾನ ವ್ಯಕ್ತಗೊಳಿಸಿದರು. ಮಲ್ಪೆಯಿಂದ ಉಡುಪಿಯ ಅಂಬಲ್ಪಾಡಿಯವರೆಗೆ ಸುಮಾರು 8 ಕಿಲೋಮೀಟರ್ ಪಾದಯಾತ್ರೆ ಮಾಡಿ ಎರಡು ಹೈವೇಗಳನ್ನು ತಡೆದರು. ಇದನ್ನೂ ಓದಿ: ಕಸುಬಿಗಾಗಿ ಕಡಲಿಗಿಳಿದವರು 17 ದಿನದಿಂದ ಕಣ್ಮರೆ- ಇದು ಮಿಸ್ಸಿಂಗ್ ಸೆವೆನ್ ಮಿಸ್ಟರಿ

    ಆಳಸಮುದ್ರ ಮೀನುಗಾರ ಸಂಘದ ಅಧ್ಯಕ್ಷ ಸತೀಶ್ ಕುಂದರ್ ಮಾತನಾಡಿ, ನಮ್ಮ ನೋವನ್ನು ಇಂದು ವ್ಯಕ್ತ ಮಾಡಿದ್ದೇವೆ. ಸರ್ಕಾರ ಬಗ್ಗದಿದ್ದರೆ ಆಲ್ ಇಂಡಿಯಾ ಫಿಶರ್ ಮೆನ್ ಅಸೋಸಿಯೇಶನ್ ಸಂಪರ್ಕಿಸುವುದಾಗಿ ಎಚ್ಚರಿಕೆ ನೀಡಿದರು.

    ಪ್ರತಿಭಟನೆ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ ಬಂದರು ಸಂಪೂರ್ಣ ಸ್ತಬ್ಧವಾಗಿತ್ತು. ಉಡುಪಿಯ ಸುಮಾರು 2 ಸಾವಿರ ಆಳಸಮುದ್ರದ ಬೋಟುಗಳು ಲಂಗರು ಹಾಕಿದ್ದವು. ನಾಡದೋಣಿಗಳು ಕಡಲಿಗಿಳಿಯಲಿಲ್ಲ. ಮಲ್ಪೆ ವ್ಯಾಪ್ತಿಯ ಎಲ್ಲಾ ಅಂಗಡಿಗಳು ಇಂದು ಬಾಗಿಲು ತೆಗೆಯಲೇ ಇಲ್ಲ. ಮೀನುಗಾರರ ಪಾದಯಾತ್ರೆಗೆ ಮಲ್ಪೆ- ತೀರ್ಥಹಳ್ಳಿ ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವೇ ಇರಲಿಲ್ಲ. ಜನಪ್ರತಿನಿಧಿಗಳ ಬಗ್ಗೆ ಆಕ್ರೋಶ ಇದ್ದರೂ ಉಡುಪಿ-ದಕ್ಷಿಣ ಕನ್ನಡದ ಬಿಜೆಪಿ ಶಾಸಕರು, ಮಾಜಿ ಸಚಿವರು, ಸಂಸದೆ ಶೋಭಾ ಕರಂದ್ಲಾಜೆ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಇದನ್ನೂ ಓದಿ: ಕಡಲ ಮಕ್ಕಳಲ್ಲಿ ಭಯಬೇಡ, 7 ಮೀನುಗಾರರು ಜೀವಂತ ಬರುತ್ತಾರೆ: ಸಚಿವೆ ಜಯಮಾಲಾ

    ಪ್ರತಿಭಟನೆಯ ಕೊನೆಗೆ ಆಗಮಿಸಿ ಮನವಿ ಸ್ವೀಕರಿಸಿದ ಉಸ್ತುವಾರಿ ಸಚಿವೆ ಜಯಮಾಲಾ ಅವರ ಮಾತಿಗೆ ಮೀನುಗಾರರು ಆಕ್ರೋಶಗೊಂಡರು. ರೈತರಿಗಿಂತ ಹೆಚ್ಚು ಪರಿಹಾರ ಮೊಗವೀರರಿಗೆ ಸಿದ್ದರಾಮಯ್ಯ ಸರ್ಕಾರ ಕೊಟ್ಟಿದೆ ಎಂದಾಗ ಆಕ್ಷೇಪ ವ್ಯಕ್ತಪಡಿಸಿದರು. ಪರಿಹಾರ ಬೇಡ, ಏಳು ಮೀನುಗಾರರನ್ನು ಹುಡುಕಿಕೊಡಿ ಎಂದು ಒತ್ತಡ ಹಾಕಿದರು.

    ಸುಮಾರು ನಾಲ್ಕು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ತಡೆ ಮಾಡಿದ್ದರಿಂದ ಪೊಲೀಸರು ಡೈವರ್ಶನ್ ಗೆ ಹರಸಾಹಸಪಟ್ಟರು. ಕೆಎಸ್‍ಆರ್ ಪಿ, ಡಿಎಆರ್, ಕ್ಷಿಪ್ರ ಕಾರ್ಯಾಚರಣಾ ತುಕಡಿ, ಡ್ರೋನ್ ಕ್ಯಾಮೆರಾ ಬಳಸಿ ಪರಿಸ್ಥಿತಿ ಕೈಮೀರದಂತೆ ಎಚ್ಚರ ವಹಿಸಿರುವದಾಗಿ ಎಸ್ ಪಿ ಲಕ್ಷ್ಮಣ ನಿಂಬರ್ಗಿ ಹೇಳಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಮತ್ತಷ್ಟು ಶ್ರಮವಹಿಸಿ ಕಣ್ಮರೆಯಾದವರ ಹುಡುಕಾಟ ನಡೆಸದಿದ್ದರೆ ರಾಷ್ಟ್ರಮಟ್ಟದಲ್ಲಿ ಹೋರಾಟ ಮಾಡುವುದಾಗಿ ಮೀನುಗಾರರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ನಾಪತ್ತೆಯಾದ ಮೀನುಗಾರರ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿಲ್ಲ- ಶೋಭಾ ಕರಂದ್ಲಾಜೆ ಗಂಭೀರ ಆರೋಪ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv