Tag: Jayamritunjaya Sri

  • ಜಿಲ್ಲೆಗೊಂದು ಮಠ ಮಾಡಲಿ ಮೂರನೇ ಪಂಚಮಸಾಲಿ ಪೀಠಕ್ಕೆ ನಮ್ಮ ಬೆಂಬಲ: ವಚನಾನಂದ ಸ್ವಾಮೀಜಿ

    ಜಿಲ್ಲೆಗೊಂದು ಮಠ ಮಾಡಲಿ ಮೂರನೇ ಪಂಚಮಸಾಲಿ ಪೀಠಕ್ಕೆ ನಮ್ಮ ಬೆಂಬಲ: ವಚನಾನಂದ ಸ್ವಾಮೀಜಿ

    ದಾವಣಗೆರೆ: ಮೂರನೇ ಪೀಠದ ನಿರ್ಮಾಣಕ್ಕೆ ನಿಮ್ಮ ಸಹಕಾರ ಬೇಕು ಎಂದು ಕೇಳಿದ್ದರು. ನಾವು ಸಹಕಾರ ಕೊಡುತ್ತೇವೆ. ನಮ್ಮ ಸಮಾಜಕ್ಕೆ ಪ್ರತಿ ಜಿಲ್ಲೆಗೆ ಪೀಠಗಳ ಭಯವಿಲ್ಲ. ಪೀಠಗಳು ಹೆಚ್ಚಾದರೆ ನಮ್ಮ ಪೀಠಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗುತ್ತದೆ ಎನ್ನುವ ಭೀತಿ ಇಲ್ಲ ಎಂದು ಪರೋಕ್ಷವಾಗಿ ಕೂಡಲಸಂಗಮ ಜಯಮೃತ್ಯುಂಜಯ ಶ್ರೀ ವಿರುದ್ಧ ಹರಿಹರ ಪಂಚಮಸಾಲಿ ಪೀಠದ ಶ್ವಾಸಗುರು ವಚನಾನಂದ ಸ್ವಾಮೀಜಿ ಕಿಡಿಕಾರಿದರು.

    ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಪಂಚಮಸಾಲಿ ಪೀಠದಲ್ಲಿ ಮಾತನಾಡಿದ ಅವರು, ಹರಿಹರದ ಪಂಚಮಸಾಲಿ ಪೀಠ 20 ವರ್ಷಗಳಿಂದ ಸಂಘಟನೆ ಮಾಡಿಕೊಂಡು ಬಂದಿದೆ. ವೀರಶೈವ ಪಂಚಮಸಾಲಿ ಒಕ್ಕೂಟ ಈಗಾಗಲೇ ಇದೆ. ಪಂಚಮಸಾಲಿ ಸಮಾಜದವರು ಮತಾಂತರ ಆಗುತ್ತಿದ್ದಾರೆ. ಧಾರ್ಮಿಕವಾಗಿ ಸಂಘಟನೆಯಾಗಬೇಕು ಎಂದು ಸಂಘಟನೆ ಮಾಡಿಕೊಂಡಿದ್ದಾರೆ. ಮೂರನೇ ಪೀಠದ ಗೊಂದಲಗಳ ಬಗ್ಗೆ ಕೆಲವರು ಮಾತನಾಡುತ್ತಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ:  ಸತ್ಯೇಂದ್ರ ಜೈನ್‍ರನ್ನು ಬಂಧಿಸಲು ಇಡಿ ಯೋಜನೆ ರೂಪಿಸುತ್ತಿದೆ: ಕೇಜ್ರಿವಾಲ್

    ಮೂರನೇ ಪೀಠದ ಒಕ್ಕೂಟದ ಅಧ್ಯಕ್ಷರು ಕೂಡ ನಮ್ಮ ಪೀಠಕ್ಕೆ ಬಂದಿದ್ದರು. ಅವರೆಲ್ಲರೂ ಹೇಳಿದ್ದು, ಪಂಚಮಸಾಲಿ ಸಮಾಜದ ಮೂಲ ಪೀಠ ಎಂದರೆ ಅದು ಹರಿಹರದ ಪಂಚಮಸಾಲಿ ಪೀಠ ಎಂದು. ಮೂರನೇ ಪೀಠದ ನಿರ್ಮಾಣಕ್ಕೆ ನಿಮ್ಮ ಸಹಕಾರ ಬೇಕು ಎಂದು ಕೇಳಿದ್ದರು. ನಾವು ಸಹಕಾರ ಕೊಡುತ್ತೇವೆ ಎಂದು ವಿವರಿಸಿದರು.

    ಪೀಠಗಳು ಹೆಚ್ಚಾದರೆ ನಮ್ಮ ಸಮಾಜ ಹೆಚ್ಚು ಸಂಘಟನೆಯಾಗುತ್ತದೆ. ಅಯಾ ಭಾಗದಲ್ಲಿ ನಮ್ಮ ಸ್ವಾಮಿಗಳು ಇದ್ದರೆ ಜನರು ಸಂಘಟಕರಾಗುತ್ತಾರೆ. ಅವರು ಕೇಳಿದ್ದಕ್ಕೆ ನಮ್ಮ ಸಂಪೂರ್ಣ ಬೆಂಬಲವನ್ನು ನೀಡಿದ್ದೇವೆ. ಅಲ್ಲದೆ ಮುರುಗೇಶ್ ನಿರಾಣಿ ಅವರನ್ನು ಪೀಠಕ್ಕಾಗಿ ಉಪಯೋಗಿಸಿಕೊಂಡಿದ್ದಾರೆ ಎಂದು ಶ್ರೀ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

    ಮುರುಗೇಶ್ ನಿರಾಣಿ ಅವರು ತಮ್ಮ ಸ್ವಾರ್ಥಕ್ಕಾಗಿ ಪೀಠಗಳನ್ನು ಬಳಸಿಲ್ಲ. ನಮ್ಮ ಸಮಾಜದ ನಾಲ್ಕು ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದ್ದಾರೆ. ಸುಖಾಸುಮ್ಮನೆ ನಿರಾಣಿ ಅವರ ಮೇಲೆ ಆರೋಪ ಸರಿಯಲ್ಲ ಎಂದು ನಿರಾಣಿ ಪರ ಬ್ಯಾಟಿಂಗ್ ಬೀಸಿದರು. ಇದನ್ನೂ ಓದಿ: ಖಾಸಗಿ ಬಸ್ ಮಾಲೀಕ ನಾಪತ್ತೆ- ಸೇತುವೆ ಬಳಿ ಕಾರು, ಫೋನ್ ಪತ್ತೆ

    ಪಾದಯಾತ್ರೆ ಹೋರಾಟ ಮಾಡಿದ್ದೀವಿ ಅಂತ ಪದೇ ಪದೇ ನಾವು ಹೇಳಿಲ್ಲ. ಸಮಾಜಕ್ಕೋಸ್ಕರ ಹೋರಾಟ ಮಾಡುವುದು ಅವರ ಕರ್ತವ್ಯ. ಆದರೆ ಅದನ್ನೇ ಹೇಳಿಕೊಳ್ಳುತ್ತಾ ಹೋಗುವುದಲ್ಲ. ನಾವು ಈಗಾಗಲೇ ಮೀಸಲಾತಿ ಬಗ್ಗೆ ನ್ಯಾಯಬದ್ಧವಾಗಿ ಹೋರಾಟ ಮಾಡುತ್ತಿದ್ದೇವೆ ಎಂದ ಆಕ್ರೋಶ ವ್ಯಕ್ತಪಡಿಸಿದರು.

  • ನಾಗನಿಗೆ ಹಾಲು ಎರೆಯುವ ಬದಲು ಮಕ್ಕಳಿಗೆ ಹಾಲು ನೀಡಿ : ಜಯಮೃತ್ಯುಂಜಯ ಶ್ರೀ

    ನಾಗನಿಗೆ ಹಾಲು ಎರೆಯುವ ಬದಲು ಮಕ್ಕಳಿಗೆ ಹಾಲು ನೀಡಿ : ಜಯಮೃತ್ಯುಂಜಯ ಶ್ರೀ

    ದಾವಣಗೆರೆ: ಶ್ರಾವಣ ಮಾಸದಲ್ಲಿ ಬರುವ ನಾಗರ ಪಂಚಮಿಯಲ್ಲಿ ಕಲ್ಲಿನ ನಾಗನಿಗೆ ಹಾಲು ಎರೆಯುವ ಬದಲು ಮಕ್ಕಳಿಗೆ ಹಾಲು ನೀಡಿ ಎಂದು ದಾವಣಗೆರೆಯಲ್ಲಿ ಕೂಡಲ ಸಂಗಮದ ಜಯಮೃತ್ಯುಂಜಯ ಶ್ರೀಗಳು ಮನವಿ ಮಾಡಿಕೊಂಡಿದ್ದಾರೆ.

    ದಾವಣಗೆರೆಯ ಕೊಂಡಜ್ಜಿ ರಸ್ತೆಯಲ್ಲಿರುವ ಬಿಜಿಎಂ ಶಾಲೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ನಡೆದ 22 ವರ್ಷದ ಕಲ್ಲುನಾಗರಕ್ಕೆ ಹಾಕುವ ಹಾಲು ಮಕ್ಕಳ ಪಾಲು ಎಂಬ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿ ಅವರು, ದೇಶಾದ್ಯಂತ ಎರಡು ಮೂರು ದಿನಗಳಲ್ಲಿ ನಾಗರ ಪಂಚಮಿ ಆಚರಣೆ ಮಾಡಲಾಗುತ್ತದೆ. ಈ ಸಮಯದಲ್ಲಿ ಲಕ್ಷಾಂತರ ಲೀಟರ್‍ ನಷ್ಟು ಹಾಲನ್ನು ನಾಗರ ಮೂರ್ತಿಗಳಿಗೆ ಹುತ್ತಗಳಿಗೆ ಎರೆದು ಪೋಲು ಮಾಡುತ್ತಿದ್ದಾರೆ. ಅದನ್ನು ಮಕ್ಕಳಿಗೆ ನೀಡಿದರೆ ಸದೃಢವಾದಂತಹ ದೇಶವನ್ನು ಕಟ್ಟಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಹಾಲು ಹುತ್ತಕ್ಕೆ ಹಾಕುವುದರಿಂದ ಹಾವುಗಳು ಸಹ ಸಾವನ್ನಪ್ಪುವ ಘಟನೆಗಳು ನಡೆದಿದೆ. ಅದ್ದರಿಂದ ಕೇವಲ ಪೂಜೆ ಯನ್ನು ಸಲ್ಲಿಸಿ, ಹಾಲನ್ನು ಮಕ್ಕಳಿಗೆ ವಿತರಣೆ ಮಾಡುವುದರ ಮೂಲಕ ಹಬ್ಬವನ್ನು ಆಚರಣೆ ಮಾಡಿ ಎಂದು ಕರೆ ನೀಡಿದರು. ಶಾಲೆಯ ಮಕ್ಕಳಿಗೆ ಹಾಲು ಹಾಗೂ ಬನ್ ವಿತರಣೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಹಾಲನ್ನು ವ್ಯಯ ಮಾಡಿ ಹಬ್ಬವನ್ನು ಆಚರಿಸುವ ಬದಲಾಗಿ ಮಕ್ಕಳಿಗೆ ಉಣಬಡಿಸುವ ಮೂಲಕ ಹಬ್ಬ ಆಚರಣೆ ಮಾಡಬೇಕು. ಅಲ್ಲದೇ ರಾಜ್ಯ ಸರ್ಕಾರ ಇದನ್ನು ಶಿಕ್ಷಣ ಇಲಾಖೆ ವತಿಯಿಂದ ಹಾಲು ಕುಡಿಯುವ ಹಬ್ಬವನ್ನಾಗಿ ಆಚರಣೆ ಮಾಡಬೇಕು. ಇದರಿಂದ ಎಲ್ಲಾ ಜಾತಿಯ, ಸಮುದಾಯದ ಮಕ್ಕಳು ಹಾಲು ಕುಡಿಯುವುದರಿಂದ ಭಾವೈಕ್ಯತೆ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.