Tag: Jayanagara Police

  • ಪೊಲೀಸ್ ಸೋಗಿನಲ್ಲಿ ಸುಲಿಗೆ – ನಕಲಿ ಪೊಲೀಸ್ ಅರೆಸ್ಟ್

    ಪೊಲೀಸ್ ಸೋಗಿನಲ್ಲಿ ಸುಲಿಗೆ – ನಕಲಿ ಪೊಲೀಸ್ ಅರೆಸ್ಟ್

    – ಇಬ್ಬರಿಂದ ಚಿನ್ನದ ಸರ, ರಿಂಗ್, 10,000 ರೂ. ನಗದು ಡ್ರಾ

    ಬೆಂಗಳೂರು: ಪೊಲೀಸ್ ಎಂದು ಹೇಳಿಕೊಂಡು ರಾಜಧಾನಿಯ ಯುವಕ ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ನಕಲಿ ಪೊಲೀಸ್‌ನನ್ನ ಜಯನಗರ ಪೊಲೀಸರು ಬಂಧಿಸಿದ್ದಾರೆ.

    ಆಸೀಫ್ ಬಂಧಿತ ಆರೋಪಿ. ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಆಸೀಫ್ ಪೊಲೀಸ್ ಎಂದು ಹೇಳಿಕೊಂಡು ಬಂದು ಹಣ ವಸೂಲಿ ಮಾಡುತ್ತಿದ್ದ. ಪಾರ್ಕ್‌ನಲ್ಲಿರುವವರನ್ನು ಟಾರ್ಗೆಟ್ ಮಾಡಿಕೊಂಡು ಹಣ ನೀಡುವಂತೆ ಕಿರುಕುಳ ನೀಡುತ್ತಿದ್ದ. ಇದನ್ನೂ ಓದಿ: ಹನಿಟ್ರ್ಯಾಪ್‌ ಗದ್ದಲ| ಯತ್ನಾಳ್‌ಗೆ ಚೀಟಿ ಕೊಟ್ಟವರು ಸಿಎಂ ಆಪ್ತರಾ? – ಸಿಬಿಐ ತನಿಖೆಯಾಗಲಿ ಎಂದ ಸುರೇಶ್‌ ಗೌಡ

    ಆಸಿಫ್ ಇಬ್ಬರಿಂದ 12 ಗ್ರಾಂನ ಚಿನ್ನದ ಸರ ಹಾಗೂ 5 ಗ್ರಾಂನ ರಿಂಗ್ ಹಾಗೂ 10,000 ರೂ. ಹಣ ಡ್ರಾ ಮಾಡಿಸಿಕೊಂಡು ಎಸ್ಕೇಪ್ ಆಗಿದ್ದ. ಪೋಲಿಸ್ ಎಂದು ಹೇಳಿ ಪಾರ್ಕ್‌ನಲ್ಲಿ ಕೂರುವವರಿಂದ ಸುಲಿಗೆ ಮಾಡುತ್ತಿದ್ದ ಆಸೀಫ್, ಇದೇ ರೀತಿ ಸಾಕಷ್ಟು ಪ್ರಕರಣಗಳಲ್ಲಿ ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಇದೀಗ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಗು ಹಠ ಮಾಡ್ತಿದೆ ಎಂದು ಕೈಗೆ ಬರೆ, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ

  • ಮದ್ಯದಲ್ಲಿ ಮತ್ತು ಬರಿಸುವ ಔಷಧಿ ಬೆರೆಸಿ ಮನೆಯಿಂದ 1.5 ಕೋಟಿ ದೋಚಿದ್ದ ದಂಪತಿ

    ಮದ್ಯದಲ್ಲಿ ಮತ್ತು ಬರಿಸುವ ಔಷಧಿ ಬೆರೆಸಿ ಮನೆಯಿಂದ 1.5 ಕೋಟಿ ದೋಚಿದ್ದ ದಂಪತಿ

    – ಸಂಪಿಗೆ ಥಿಯೇಟರ್ ಮಾಲೀಕನ ಮನೆ ಕಳ್ಳತನ
    – ತನಿಖೆ ವೇಳೆ ಹಲವು ವಿಷಯ ಬಹಿರಂಗ

    ಬೆಂಗಳೂರು: ನೇಪಾಳಿ ದಂಪತಿ ಮದಿರೆಯಲ್ಲಿ ಮತ್ತು ಬರಿಸುವ ಔಷಧಿ ಬೆರೆಸಿ ಸಂಪಿಗೆ ಥಿಯೇಟರ್ (Sampige Theatre) ಮಾಲೀಕನ ಮನೆ ದೋಚಿರುವ ವಿಷಯ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

    ಅ.2ರಂದು ಬೆಂಗಳೂರಿನ (Bengaluru) ಸಂಪಿಗೆ ಥಿಯೇಟರ್ ಮಾಲೀಕ ನಾಗೇಶ್ ಎಂಬುವವರ ಜಯನಗರದ ಮನೆಯಲ್ಲಿ ಕಳ್ಳತನ ನಡೆದಿತ್ತು. ನೇಪಾಳ ಮೂಲದ ಗಣೇಶ್ ಹಾಗೂ ಗೀತಾ ದಂಪತಿ ಎರಡು ವರ್ಷದ ಹಿಂದೆ ನಾಗೇಶ್ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು. ದಂಪತಿ ಮಾಲೀಕನ ಬಳಿ ನಂಬಿಕೆ ಬರುವಂತೆ ವಿಶ್ವಾಸ ಬೆಳೆಸಿಕೊಂಡಿದ್ದರು. ಅ.2ರಂದು ರಾತ್ರಿ ಮಾಲೀಕ ಮದ್ಯಪಾನ ಮಾಡುವ ವೇಳೆ ದಂಪತಿ ಮದ್ಯದಲ್ಲಿ ಬೆಂಜೊಡೈನ್ ಎಂಬ ಪೌಡರ್ ಮಿಕ್ಸ್ ಮಾಡಿದ್ದರು. ನಂತರ ನಾಗೇಶ್ ಪ್ರಜ್ಞೆ ತಪ್ಪಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಇದನ್ನೂ ಓದಿ: ಚೀನಾದಲ್ಲಿ ಕಾರು ಚಾಲಕನ ಹುಚ್ಚಾಟಕ್ಕೆ 35 ಬಲಿ, 43 ಮಂದಿಗೆ ಗಾಯ

    ಜಯನಗರ ಪೊಲೀಸರು (Jayanagara Police) ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಮೂವರನ್ನ ಬಂಧಿಸಿದ್ದಾರೆ. ಇನ್ಸ್ಪೆಕ್ಟರ್ ದೀಪಕ್ ಮತ್ತು ತಂಡ ಆರೋಪಿಗಳನ್ನು ನೇಪಾಳಕ್ಕೆ ತಲುಪುವ ಮೊದಲೇ ವಶಕ್ಕೆ ಪಡೆದಿದ್ದಾರೆ. ಚಿನ್ನಾಭರಣ ದೋಚಲು ಎರಡು ವರ್ಷದಿಂದ ದಂಪತಿ ಕಾದಿದ್ದರು. ಮಾಲೀಕನ ಕುಟುಂಬ ಹೊರಗಡೆ ಹೋಗಿದ್ದು, ವಯಸ್ಸಾದ ನಾಗೇಶ್ ಒಬ್ಬರೇ ಮನೆಯಲ್ಲಿದ್ದರು. ಈ ವೇಳೆ ಮದ್ಯದಲ್ಲಿ ಅಮಲು ಬರುವ ಪದಾರ್ಥ ಬೆರೆಸಿ ಮೂವರನ್ನ ಬೈಕ್‌ನಲ್ಲಿ ಕರೆಸಿಕೊಂಡು ತಮ್ಮ ಕೆಲಸವನ್ನು ನೇಪಾಳಿ ದಂಪತಿ ಮುಗಿಸಿಕೊಂಡಿದ್ದರು. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಧಾರವಾಡದಲ್ಲಿ ಲೋಕಾ ಶಾಕ್- ಕೆಐಎಡಿಬಿ AEE ಮನೆಗೆ ದಾಳಿ

    ಈ ಸಂಬಂಧ ಪ್ರಕಾಶ್ ಶಾಹಿ, ಅಪಿಲ್ ಶಾಹಿ, ಜಗದೀಶ್ ಶಾಹಿ ಎಂಬ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಮನೆಯಲ್ಲಿದ್ದ 1.50 ಕೋಟಿ ರೂ. ಬೆಲೆಬಾಳುವ 2 ಕೆಜಿ ಚಿನ್ನಾಭರಣ, 2 ಲಕ್ಷ ರೂ. ನಗದು ಹೊತ್ತೊಯ್ದಿದ್ದರು. ಸಿಸಿಟಿವಿ ಹಾಗೂ ಮೊಬೈಲ್ ನೆಟ್ವರ್ಕ್ ಆಧರಿಸಿ ಮುಂಬೈನಲ್ಲಿ ಆರೋಪಿಗಳನ್ನು ಬಂಧಿಸಿದ್ದು, ತಲೆ ಮರೆಸಿಕೊಂಡಿರುವ ದಂಪತಿ ಗಣೇಶ್ ಹಾಗೂ ಗೀತಾಳಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಧಾರವಾಡದಲ್ಲಿ ಲೋಕಾ ಶಾಕ್- ಕೆಐಎಡಿಬಿ AEE ಮನೆಗೆ ದಾಳಿ

  • ಕರೆ ಬಂದ ಮೂರೇ ನಿಮಿಷಕ್ಕೆ ಹಣವಿದ್ದ ಬೆಂಜ್ ಕಾರು ಬಳಿಗೆ ಬಂದ್ವಿ: ಮುನೀಶ್ ಮೌದ್ಗಿಲ್

    ಕರೆ ಬಂದ ಮೂರೇ ನಿಮಿಷಕ್ಕೆ ಹಣವಿದ್ದ ಬೆಂಜ್ ಕಾರು ಬಳಿಗೆ ಬಂದ್ವಿ: ಮುನೀಶ್ ಮೌದ್ಗಿಲ್

    – 1.40 ಕೋಟಿ ರೂ. ಹಣ ಪತ್ತೆ

    ಬೆಂಗಳೂರು: ನಮಗೆ ಬಂದ ಕರೆಯ ಆಧಾರದ ಮೇಲೆ ಜಯನಗರದಲ್ಲಿ ಕಾರಿನಲ್ಲಿದ್ದ ಹಣವನ್ನು ವಶಕ್ಕೆ ಪಡೆಯಲಾಗಿದೆ (Cash Seized) ಎಂದು ಚುನಾವಣಾಧಿಕಾರಿ ಮುನೀಶ್ ಮೌದ್ಗಿಲ್ (Munish Moudgil) ಹೇಳಿದ್ದಾರೆ.

    ನಮಗೆ ಬೆಳಗ್ಗೆ ವಾಹನದಲ್ಲಿ ಹಣ ಇರುವ ಬಗ್ಗೆ ಕರೆ ಬಂದಿತ್ತು. ಅದರ ಆಧಾರದ ಮೇಲೆ ನಮ್ಮ ಅಧಿಕಾರಿ ನಿಖಿತ ಅವರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ತಕ್ಷಣ ಅಧಿಕಾರಿಗಳ ಜೊತೆ ನಾನು ಸಹ ಸ್ಥಳಕ್ಕೆ ಬಂದೆ. ಕರೆ ಬಂದ ಮೂರು ನಿಮಿಷಗಳಲ್ಲೇ ಸ್ಥಳಕ್ಕೆ ಭೇಟಿ ಕೊಟ್ಟಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಹೊಸ ಬೆಂಜ್ ಕಾರಿನ ಗ್ಲಾಸ್ ಒಡೆದು ಕಂತೆ ಕಂತೆ ಹಣ ಸೀಜ್ ಮಾಡಿದ ಮಹಿಳಾ ಅಧಿಕಾರಿ

    ನಾವು ಸ್ಥಳಕ್ಕೆ ಭೇಟಿ ನೀಡಿದ ವೇಳೆ ಸ್ಕೂಟರ್‌ನಿಂದ ಫಾರ್ಚೂನರ್ ಕಾರಿಗೆ ಹಣ ಶಿಫ್ಟ್ ಮಾಡುತ್ತಿದ್ದರು. ಕಾರಿನಲ್ಲಿ ಒಟ್ಟು ಐದು ಜನ ಇದ್ದರು. ಈ ವೇಳೆ ನಿಖಿತ ಅವರು ಒಬ್ಬರೇ ತೆರಳಿ, ಚೀಲದಲ್ಲಿರುವುದು ಏನು ಎಂದು ಪ್ರಶ್ನಿಸಿದ್ದಾರೆ. ಬಳಿಕ ದ್ವಿಚಕ್ರ ವಾಹನದಲ್ಲಿದ್ದ ಹಣವನ್ನು ಜಪ್ತಿ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    ಕಾರಿನಲ್ಲಿದ್ದ ಐವರು ನಾಪತ್ತೆಯಾಗಿದ್ದು, ಫಾರ್ಚೂನರ್ ನಂಬರ್‌ನ್ನು ದಾಖಲಿಸಿಕೊಳ್ಳಲಾಗಿದೆ. ಸ್ಥಳದಲ್ಲಿ ಸಿಕ್ಕ ಬೆಂಜ್ ಕಾರು ಗುರುವಾರ ಕೊಂಡುಕೊಳ್ಳಲಾಗಿದೆ. ಈಗ ಹಣದ ಲೆಕ್ಕ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

    ಪತ್ತೆಯಾದ ಬ್ಯಾಗ್‌ಗಳಲ್ಲಿ 1.40 ಕೋಟಿ ರೂ. ಹಣ ಇರುವ ಬಗ್ಗೆ ಪೊಲೀಸ್ ಮೂಲಗಳು `ಪಬ್ಲಿಕ್ ಟಿವಿ’ಗೆ ತಿಳಿಸಿವೆ. ಇದನ್ನೂ ಓದಿ: ಇಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅರ್ಜಿ – ಸೋಮವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

  • ಹೊಸ ಬೆಂಜ್ ಕಾರಿನ ಗ್ಲಾಸ್ ಒಡೆದು ಕಂತೆ ಕಂತೆ ಹಣ ಸೀಜ್ ಮಾಡಿದ ಮಹಿಳಾ ಅಧಿಕಾರಿ

    ಹೊಸ ಬೆಂಜ್ ಕಾರಿನ ಗ್ಲಾಸ್ ಒಡೆದು ಕಂತೆ ಕಂತೆ ಹಣ ಸೀಜ್ ಮಾಡಿದ ಮಹಿಳಾ ಅಧಿಕಾರಿ

    – ಬ್ಯಾಗಲ್ಲಿರೋದು ಮಾವಿನ ಹಣ್ಣು ಎಂದ್ರು; ಪರಿಶೀಲನೆ ವೇಳೆ ಪತ್ತೆಯಾಗಿದ್ದು ಹಣ!

    ಬೆಂಗಳೂರು: ಎರಡು ಕಾರುಗಳಲ್ಲಿದ್ದ ಕಂತೆ ಕಂತೆ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದ ಪ್ರಕರಣ ಜಯನಗರದಲ್ಲಿ (Jayanagar) ನಡೆದಿದೆ. ಅನುಮಾನಾಸ್ಪದ ಕಾರಿನ ಗ್ಲಾಸ್ ಒಡೆದು ಮಹಿಳಾ ಅಧಿಕಾರಿ ಹಣ ಸೀಜ್ (Cash Seized) ಮಾಡಿ ದಿಟ್ಟತನ ಮೆರೆದಿದ್ದಾರೆ.

    ಅಧಿಕಾರಿಗಳು ಬರುತ್ತಿದ್ದಂತೆ ಕಾರಿನಲ್ಲಿದ್ದ ಐವರು, ಚೀಲದಲ್ಲಿರುವುದು ಮಾವಿನ ಹಣ್ಣು ಎಂದಿದ್ದಾರೆ. ಬಳಿಕ ಅಧಿಕಾರಿಗಳು ಪರಿಶೀಲನೆಗೆ ಮುಂದಾದಾಗ ಒಂದು ಕಾರಿನಲ್ಲಿದ್ದ ಐವರು ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ – ಶಂಕಿತರು ಎನ್‍ಐಎ ಕಸ್ಟಡಿಗೆ

    ಬೆಳಗ್ಗೆ 9 ಗಂಟೆಯಿಂದ ಫೋಲೋ, ಬೆಂಜ್ ಮತ್ತು ಫಾರ್ಚೂನರ್ ಕಾರುಗಳು ಬಂದು ನಿಂತಿದ್ದವು. ಫೋಲೋ ಕಾರಿನಿಂದ ಬೈಕ್‍ಗೆ ಹಣ ತುಂಬಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೂಡಲೇ ಫಾರ್ಚೂನರ್ ಕಾರಿನಲ್ಲಿ ಐವರು ಪರಾರಿಯಾಗಿದ್ದಾರೆ. ಸದ್ಯ ಎರಡು ಕಾರು ಮಾತ್ರ ಉಳಿದಿವೆ. ಒಂದು ಬೈಕ್ ಹಾಗೂ ಎರಡು ಕಾರುಗಳಲ್ಲಿ ಮೂರು ಬ್ಯಾಗ್‍ನಲ್ಲಿ ಹಣ ಸಿಕ್ಕಿದೆ ಎಂದು ಎಂಸಿಸಿ ನೋಡಲ್ ಆಫೀಸರ್ ಮನೀಷ್ ಮೌದ್ಗಿಲ್ ಮಾಹಿತಿ ನೀಡಿದ್ದಾರೆ.

    ಅಧಿಕಾರಿಗಳು ಬೆಂಜ್ ಕಾರಿನ ಗ್ಲಾಸ್ ಒಡೆದು ಹಣ ಇರುವ ಬ್ಯಾಗ್‍ನ್ನು ಹೊರಗೆ ತೆಗೆದಿದ್ದು, ಕಾರಿನ ಒಳಗಡೆ ಇದ್ದ ದಾಖಲಾತಿಗಳನ್ನ ವಶಕ್ಕೆ ಪಡೆದಿದ್ದಾರೆ. ಕಾರಿನ ಒಳಗಡೆ ಒಂದು ಮೊಬೈಲ್ ಕೂಡ ಪತ್ತೆಯಾಗಿದೆ. ಇದೀಗ ಎರಡು ಕೌಂಟಿಂಗ್ ಮಷಿನ್‍ಗಳನ್ನು ತರಿಸಿಕೊಂಡು ಅಧಿಕಾರಿಗಳು ಹಣ ಎಣಿಸುವ ಕಾರ್ಯದಲ್ಲಿ ತೊಡಗಿದ್ದಾರೆ.‌

    ಜಯನಗರ ಪೊಲೀಸ್ ಠಾಣೆಗೆ (Jayanagar Police) ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾಗರಾಜ್, ಮತ್ತು ಮಾಜಿ ಕಾರ್ಪೋರೇಟರ್ ನಾಗರಾಜ್ ಭೇಟಿ ನೀಡಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಚುನಾವಣಾ ಪ್ರಚಾರದ ವೇಳೆ ಬೇಕರಿಯಲ್ಲಿ ಗುಲಾಬ್ ಜಾಮೂನು ಖರೀದಿಸಿದ ರಾಹುಲ್ ಗಾಂಧಿ