Tag: Jayasudha

  • 3ನೇ ಮದುವೆಯ ಬಗ್ಗೆ ಸ್ಪಷ್ಟನೆ ನೀಡಿದ ಖ್ಯಾತ ನಟಿ ಜಯಸುಧಾ

    3ನೇ ಮದುವೆಯ ಬಗ್ಗೆ ಸ್ಪಷ್ಟನೆ ನೀಡಿದ ಖ್ಯಾತ ನಟಿ ಜಯಸುಧಾ

    ಮ್ಮ 64ನೇ ವಯಸ್ಸಿನಲ್ಲಿ ನಟಿ ಜಯಸುಧಾ 3ನೇ ಮದುವೆ ಆಗಿದ್ದಾರೆ ಎನ್ನುವ ಸುದ್ದಿ ಎರಡು ದಿನಗಳಿಂದ ತಮಿಳು ಚಿತ್ರೋದ್ಯಮದಲ್ಲಿ ಗಿರಿಕಿ ಹೊಡೆಯುತ್ತಿತ್ತು. ಮಾಧ್ಯಮಗಳಲ್ಲೂ ಸಾಕಷ್ಟು ಸದ್ದು ಮಾಡಿತ್ತು. ಆದರೂ, ಜಯಸುಧಾ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ತಮಿಳು ಚಿತ್ರೋದ್ಯಮ ದಾಟಿಕೊಂಡು ಬೇರೆ ಬೇರೆ ರಾಜ್ಯಗಳಲ್ಲೂ ಈ ಸುದ್ದಿ ಹರಡುತ್ತಿದ್ದಂತೆಯೇ ಈ ಕುರಿತು ಅವರು ಸ್ಪಷ್ಟನೆಯೊಂದನ್ನು ನೀಡಿದ್ದಾರೆ. ತಾವು 3ನೇ ಮದುವೆ ಆಗಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

    ನಟಿ ಜಯಸುಧಾ ಜೊತೆ ವ್ಯಕ್ತಿಯೊಬ್ಬರ ಫೋಟೋ ಕೂಡ ಹರಿದಾಡುತ್ತಿತ್ತು. ಆತ ಉದ್ಯಮಿ, ಅವರನ್ನೇ ನಟಿ ಮದುವೆ ಆಗಿದ್ದಾರೆ ಎಂದು ಹೇಳಲಾಗಿತ್ತು. ಈ ಎಲ್ಲ ಗಾಸಿಪ್ ಗಳಿಗೂ ನಟಿ ತೆರೆ ಎಳೆದಿದ್ದಾರೆ. ತಮ್ಮೊಂದಿಗೆ ಓಡಾಡುತ್ತಿರುವ ವ್ಯಕ್ತಿಯ ಹೆಸರು ಫಿಲಿಪ್ ರೂಲ್ಸ್. ಅವರು ನಟಿ ಜೀವನ ಚರಿತ್ರೆಯನ್ನು ಶೂಟ್ ಮಾಡಲು ಅಮೆರಿಕಾದಿಂದ ಬಂದಿದ್ದಾರಂತೆ. ಹಾಗಾಗಿ ನಟಿ ಜೊತೆ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗಿ ಆಗುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಈ ಹಿಂದೆ ನಿರ್ಮಾಪಕ ವಡ್ಡೆ ರಮೇಶ್ ಜೊತೆ ಜಯಸುಧಾ ಮದುವೆ ಆಗಿದ್ದರು. ಹೊಂದಾಣಿಕೆಯ ಕೊರತೆಯಿಂದಾಗಿ ಈ ಜೋಡಿ ಬೇರ್ಪಟ್ಟಿತ್ತು. ಇದು ತಮಿಳು ಚಿತ್ರೋದ್ಯಮದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ರಮೇಶ್ ಅವರಿಂದ ವಿಚ್ಚೇದನೆ ಪಡೆದುಕೊಂಡ ನಂತರ ಬಾಲಿವುಡ್ ನಟ ಜಿತೇಂದ್ರ ಕಪೂರ್ ಸಹೋದರ ಸಂಬಂಧಿ ನಿತಿನ್ ಕಪೂರ್ ಜೊತೆ ಸಪ್ತಪದಿ ತುಳಿದಿದ್ದರು. ನಿತಿನ್ ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಂಡು ಜಯಸುಧಾ ಅವರನ್ನು ಒಂಟಿಯಾಗಿ ಬಿಟ್ಟು ಹೋದರು.

    ಇಷ್ಟಪಟ್ಟು ಮದುವೆ ಆಗಿದ್ದ ನಿತಿನ್ ಸಾವಿನ ನಂತರ ಜಯಸುಧಾ ತಮ್ಮ ಮಕ್ಕಳೊಟ್ಟಿಗೆ ಜೀವನ ಸಾಗಿಸುತ್ತಿದ್ದರು. ಈ ಹೊತ್ತಲ್ಲಿ ಉದ್ಯಮಿಯೊಬ್ಬರ ಜೊತೆ ಜಯಸುಧಾ ಮದುವೆ ಆಗಿದ್ದಾರೆ ಎನ್ನುವ ಸುದ್ದಿ ದಟ್ಟವಾಗಿತ್ತು. ಹಲವು ಕಾರ್ಯಕ್ರಮಗಳಲ್ಲಿ ಅವರು ಆ ಉದ್ಯಮಿಯೊಂದಿಗೆ ಭಾಗಿಯಾಗಿದ್ದು ಅನುಮಾನಕ್ಕೆ ಕಾರಣವಾಗಿತ್ತು. ಇತ್ತೀಚೆಗಷ್ಟೇ ನಡೆದ ಆಲಿ ಮಗಳ ಮದುವೆ ಮತ್ತು ವಾರೀಸು ಸಿನಿಮಾದ ಈವೆಂಟ್ ಗೂ ಕೂಡ ಆ ಉದ್ಯಮಿಯನ್ನು ಜಯಸುಧಾ ಕರೆತಂದಿದ್ದರು. ಈಗ ಎಲ್ಲ ಅನುಮಾನಕ್ಕೂ ಜಯಸುಧಾ ಸ್ಪಷ್ಟನೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಉದ್ಯಮಿಯೊಬ್ಬರನ್ನು 64ನೇ ವಯಸ್ಸಿನಲ್ಲಿ 3ನೇ ಮದುವೆಯಾದ ನಟಿ ಜಯಸುಧಾ

    ಉದ್ಯಮಿಯೊಬ್ಬರನ್ನು 64ನೇ ವಯಸ್ಸಿನಲ್ಲಿ 3ನೇ ಮದುವೆಯಾದ ನಟಿ ಜಯಸುಧಾ

    ಹುಭಾಷಾ ನಟಿ ಜಯಸುಧಾ ತಮ್ಮ 64ನೇ ವಯಸ್ಸಿನಲ್ಲಿ ಮತ್ತೊಂದು ಮದುವೆ ಆಗಿರುವ ಸುದ್ದಿ ತಮಿಳು ಚಿತ್ರೋದ್ಯಮದಲ್ಲಿ ಹರಿದಾಡುತ್ತಿದೆ. ಈಗಾಗಲೇ ಎರಡು ಮದುವೆ ಆಗಿದ್ದ ಅವರು, ಎರಡರಿಂದಲೂ ವಿಚ್ಚೇದನೆ ಪಡೆದಿದ್ದರು. ಇದೀಗ ಮೂರನೇ ಮದುವೆ ಕೂಡ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಉದ್ಯಮಿಯೊಂದಿಗೆ ಹೊಸ ಬದುಕಿಗೆ ಕಾಲಿಟ್ಟಿದ್ದಾರಂತೆ.

    ಈ ಹಿಂದೆ ನಿರ್ಮಾಪಕ ವಡ್ಡೆ ರಮೇಶ್ ಜೊತೆ ಜಯಸುಧಾ ಮದುವೆ ಆಗಿದ್ದರು. ಹೊಂದಾಣಿಕೆಯ ಕೊರತೆಯಿಂದಾಗಿ ಈ ಜೋಡಿ ಬೇರ್ಪಟ್ಟಿತ್ತು. ಇದು ತಮಿಳು ಚಿತ್ರೋದ್ಯಮದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ರಮೇಶ್ ಅವರಿಂದ ವಿಚ್ಚೇದನೆ ಪಡೆದುಕೊಂಡ ನಂತರ ಬಾಲಿವುಡ್ ನಟ ಜಿತೇಂದ್ರ ಕಪೂರ್ ಸಹೋದರ ಸಂಬಂಧಿ ನಿತಿನ್ ಕಪೂರ್ ಜೊತೆ ಸಪ್ತಪದಿ ತುಳಿದಿದ್ದರು. ನಿತಿನ್ ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಂಡು ಜಯಸುಧಾ ಅವರನ್ನು ಒಂಟಿಯಾಗಿ ಬಿಟ್ಟು ಹೋದರು. ಇದನ್ನೂ ಓದಿಹನಿಮೂನ್ ಬಗ್ಗೆ ಕೇಳಿದ್ದಕ್ಕೆ ನಾಚಿ ನೀರಾದ ಹರಿಪ್ರಿಯಾ- ವಸಿಷ್ಠ

    ಇಷ್ಟಪಟ್ಟು ಮದುವೆ ಆಗಿದ್ದ ನಿತಿನ್ ಸಾವಿನ ನಂತರ ಜಯಸುಧಾ ತಮ್ಮ ಮಕ್ಕಳೊಟ್ಟಿಗೆ ಜೀವನ ಸಾಗಿಸುತ್ತಿದ್ದರು. ಈ ಹೊತ್ತಲ್ಲಿ ಉದ್ಯಮಿಯೊಬ್ಬರ ಜೊತೆ ಜಯಸುಧಾ ಮದುವೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಲವು ಕಾರ್ಯಕ್ರಮಗಳಲ್ಲಿ ಅವರು ಆ ಉದ್ಯಮಿಯೊಂದಿಗೆ ಭಾಗಿಯಾಗಿದ್ದು ಅನುಮಾನಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ನಡೆದ ಆಲಿ ಮಗಳ ಮದುವೆ ಮತ್ತು ವಾರೀಸು ಸಿನಿಮಾದ ಈವೆಂಟ್ ಗೂ ಕೂಡ ಆ ಉದ್ಯಮಿಯನ್ನು ಜಯಸುಧಾ ಕರೆತಂದಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಂಗನಾ ರಣಾವತ್ ಗೆ ಪದ್ಮಶ್ರೀ ಪ್ರಶಸ್ತಿ : ಹಿರಿಯ ನಟಿ ಜಯಸುಧಾ ಅಸಮಾಧಾನ

    ಕಂಗನಾ ರಣಾವತ್ ಗೆ ಪದ್ಮಶ್ರೀ ಪ್ರಶಸ್ತಿ : ಹಿರಿಯ ನಟಿ ಜಯಸುಧಾ ಅಸಮಾಧಾನ

    ಪ್ರಶಸ್ತಿಗಳ ವಿಷಯದಲ್ಲಿ ಕೇಂದ್ರ ಸರಕಾರವು ತಾರತಮ್ಯ ಮಾಡುತ್ತಿದೆ ಎಂದು ದಕ್ಷಿಣದ ಖ್ಯಾತ ಹಿರಿಯ ನಟಿ ಜಯಸುಧಾ ಗಂಭೀರ ಆರೋಪ ಮಾಡಿದ್ದಾರೆ. ನೇರವಾಗಿ ಅವರು ಕಂಗನಾ ರಣಾವತ್ ಅವರ ಹೆಸರನ್ನೇ ಪ್ರಸ್ತಾಪಿಸಿ, ‘ಕಂಗನಾ ಹತ್ತು ಸಿನಿಮಾಗಳಲ್ಲೂ ನಟಿಸಿಲ್ಲ. ಅವರ ಯಾವ ಸಾಧನೆಯನ್ನು ಪರಿಗಣಿಸಿ ಪದ್ಮಶ್ರೀ ಪ್ರಶಸ್ತಿ ನೀಡಿದ್ದಾರೆ. ನೂರಾರು ಚಿತ್ರಗಳಲ್ಲಿ ನಟಿಸಿರುವ ದಕ್ಷಿಣದ ಕಲಾವಿದರಿಗೆ ಯಾಕೆ ಪದ್ಮಶ್ರೀ’ ಇಲ್ಲವೆಂದು ಹೇಳಿದ್ದಾರೆ.

    ಬಾಲಕೃಷ್ಣ ಅವರು ನಡೆಸಿಕೊಡುವ ‘ಅನ್ ಸ್ಟಾಪಬಲ್ ಸೀಸನ್ 2’ನಲ್ಲಿ ಮಾತನಾಡಿದ ಜಯಸುಧಾ ದಕ್ಷಿಣದವರಿಗೆ ಮತ್ತು ಉತ್ತರದವರಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಕೇಂದ್ರ ಸರಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ‘ಐದತ್ತು ಸಿನಿಮಾಗಳನ್ನ ಮಾಡಿರುವವರಿಗೇ ಪದ್ಮ ಪ್ರಶಸ್ತಿಗಳು ದೊರೆಯುತ್ತವೆ ಅಂತಾದರೆ, ನಾವು ಲೆಕ್ಕಕ್ಕೆ ಇಲ್ಲ ಅವರಿಗೆ’ ಎಂದು ಕೇಂದ್ರ ಸರಕಾರವನ್ನು ತರಾಟೆಗೆ ತಗೆದುಕೊಂಡಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಫಿನಾಲೆಗೆ 6 ಸ್ಪರ್ಧಿಗಳ ಎಂಟ್ರಿ: ಕಾದಿದೆ ಮತ್ತೊಂದು ಶಾಕ್

    ಮಹಿಳಾ ನಿರ್ದೇಶಕಿಯರ ಪರವಾಗಿಯೂ ಮಾತನಾಡಿರುವ ಅವರು, ‘ವಿಜಯ ನಿರ್ಮಲಾ ಗಿನ್ನಿಸ್ ದಾಖಲೆ ಬರೆದ ನಿರ್ದೇಶಕಿ. ಈವರೆಗೂ ಅವರಿಗೆ ಸಿಗಬೇಕಾದ ಗೌರವ ಸಿಕ್ಕಿಲ್ಲ. ಹಾಗಾದರೆ ನಾವು ಏನು ಅಂದುಕೊಳ್ಳಬೇಕು?’ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಈ ತಾರತಮ್ಯದ ವಿರುದ್ಧ ಧ್ವನಿ ಎತ್ತಲೇಬೇಕು. ಇಲ್ಲವಾದರೆ, ಇದು ಆಗುತ್ತಲೇ ಇರುತ್ತದೆ ಎಂದು ಟಾಕ್ ಶೋ ನಲ್ಲಿ ನೇರವಾಗಿಯೇ ಮಾತನಾಡಿದ್ದಾರೆ ಜಯಸುಧಾ.

    Live Tv
    [brid partner=56869869 player=32851 video=960834 autoplay=true]