Tag: JDS Candidate

  • ಸಿ.ಟಿ ರವಿ ಸೋಲಿಸಿದ್ದಕ್ಕೆ ಭೋಜೇಗೌಡರಿಗೆ ಹಾಲಿನ ಅಭಿಷೇಕ

    ಸಿ.ಟಿ ರವಿ ಸೋಲಿಸಿದ್ದಕ್ಕೆ ಭೋಜೇಗೌಡರಿಗೆ ಹಾಲಿನ ಅಭಿಷೇಕ

    – ರವಿ ಸೋಲಿಗೆ ಅವರ ನಾಲಿಗೆಯೇ ಕಾರಣ

    ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಯವರನ್ನು ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಿದ್ದಕ್ಕೆ ಭೋಜೇಗೌಡರಿಗೆ ಹಾಲಿನ ಅಭಿಷೇಕ ನಡೆಸಲಾಯಿತು.

    ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಪರಮಾಪ್ತ ಭೋಜೇಗೌಡ, ಜೆಡಿಎಸ್ ಅಭ್ಯರ್ಥಿ ಇದ್ದರೂ ಸಿ.ಟಿ ರವಿ ವಿರುದ್ಧ ಭೋಜೇಗೌಡ (Bhoje Gowda) ಅಖಾಡಕ್ಕಿಳಿದಿದ್ದರು. ಈ ಮೂಲಕ ಸಿ.ಟಿ.ರವಿ ಸೋಲಿನ ಮಾಸ್ಟರ್ ಮೈಂಡ್ ಆಗಿದ್ದಾರೆ. ಹೀಗಾಗಿ ಜೆ.ಡಿ.ಎಸ್ ಕಾರ್ಯಕರ್ತರು ಭೋಜೇಗೌಡರಿಗೆ ಚಿಕ್ಕಮಗಳೂರು ನಗರದ ಹೊಸಮನೆ ಬಡಾವಣೆಯಲ್ಲಿ ಸನ್ಮಾನ ಹಾಗೂ ಅಭಿಷೇಕ ಮಾಡಿದ್ದಾರೆ. ಕಾಂಗ್ರೆಸ್ ಜೊತೆ ಒಳಒಪ್ಪಂದ ಮಾಡಿಕೊಂಡಿದ್ದ ಭೋಜೇಗೌಡ, ಜೆಡಿಎಸ್ ನಿಂದ ಗೆದ್ದು ಕಾಂಗ್ರೆಸ್ಸಿನ ತಮ್ಮಯ್ಯ ಪರ ಮತಯಾಚಿಸಿದ್ದರು. ಇದನ್ನೂ ಓದಿ: ಚಿಕ್ಕಮಗಳೂರಲ್ಲಿ 5 ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಜಯ – ಬಿಜೆಪಿಗೆ ಹೀನಾಯ ಸೋಲು

    ಬಳಿಕ ಸಿ.ಟಿ.ರವಿ ಬುದ್ಧಿವಂತರಿದ್ದಾರೆ ಎಂದು ಹಾಡಿ ಹೊಗಳಿದ ಭೋಜೇಗೌಡ, ಸಿ.ಟಿ.ರವಿ ಬಹಳ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಆಗಿದ್ದರು. ರಾಷ್ಟ್ರಮಟ್ಟದಲ್ಲಿ ಕೆಲಸ ಮಾಡುವ ಯೋಗವೂ ಲಭಿಸಿತ್ತು. ಟೀಕೆಗಳು ತಪ್ಪಲ್ಲ, ಆದರೆ ಅದಕ್ಕೊಂದು ಇತಿಮಿತಿ ಇರುತಿತ್ತು. ರಾಜಕೀಯ ಅಸ್ತ್ರದ ಟೀಕೆ ಸರಿ, ವೈಯಕ್ತಿಕ ಟೀಕೆ ಸರಿಯಲ್ಲ. ಸಿ.ಟಿ ರವಿ ಸದನದ ಒಳಗೆ-ಹೊರಗೆ ಎರಡೂ ಕಡೆ ವೈಯಕ್ತಿಕ ಟೀಕೆ ಮಾಡಿದ್ದಾರೆ. ಟೀಕೆ ಮಾಡುವಾಗ ವ್ಯಕ್ತಿತ್ವ, ರಾಜಕೀಯ ಮುತ್ಸದ್ದಿತನವನ್ನ ಯೋಚನೆ ಮಾಡಬೇಕು ಎಂದರು.

    ಯಾರನ್ನೋ ಮೆಚ್ಚಿಸಲು, ಕ್ಷಣಿಕ ಸುಖಕ್ಕೆ, ಕಾರ್ಯಕರ್ತರ ಮೆಚ್ಚಿಸಲು ವೈಯಕ್ತಿಕ ಟೀಕೆ ಸರಿಯಲ್ಲ. ದೇವೇಗೌಡ (HD Devegowda) ರಿಗೆ ಸಾಬರಾಗಿ ಹುಟ್ಲಿ ಅನ್ನೋದು, ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್ ಅನ್ನೋದು. ಸಿ.ಟಿ.ರವಿ ಯಾರನ್ನ ಬಿಟ್ಡಿದ್ದಾರೆ. ಯಾರನ್ನೂ ಬಿಟ್ಟಿಲ್ಲ. ಟೀಕೆ ಮಾಡುವಾಗಲು ರಾಜಕೀಯ ಸ್ಟ್ಯಾಂಡರ್ಡ್ ನಲ್ಲಿ ಟೀಕೆ ಮಾಡಬೇಕು. ಕುಲದ ಕುತ್ತಿಗೆ ಉದ್ದ ಸರ್… ಅಷ್ಟು ಸುಲಭ ಇಲ್ಲ. ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್. ಕುಲದ ಬಗ್ಗೆ ಮಾತನಾಡುವಾಗ ಜನ ಆತನ ಹಮ್ಮಿನ ಬಗ್ಗೆ ಯೋಚಿಸ್ತಾರೆ ಎಂದು ಹೇಳಿದರು.

    ಸಿ.ಟಿ.ರವಿ ಸೋಲಿಗೆ ಅವರ ನಾಲಿಗೆಯೇ ಕಾರಣ. ದುರಾಡಳಿತ, ದುರಾಂಕಾರ, ನಾಲಿಗೆ ಎಲ್ಲವೂ ಸೇರಿ ಕೂಡಿ ಸೋಲಿಸಿವೆ ಎಂದು ತಿಳಿಸಿದರು. ಇದನ್ನೂ ಓದಿ: ಸೋತಿರೋದಕ್ಕೆ ಕುಂಟು ನೆಪ ಹೇಳೋದು ಸರಿಯಲ್ಲ: ಕೈ ನಾಯಕರಿಗೆ ಸೂರ್ಯ ತಿರುಗೇಟು

  • ರಾಜ್ಯಸಭೆ ಚುನಾವಣೆ- ಜೆಡಿಎಸ್ ಅಭ್ಯರ್ಥಿಯಾಗಿ ಕುಪ್ಪೇಂದ್ರ ರೆಡ್ಡಿ ಫೈನಲ್

    ರಾಜ್ಯಸಭೆ ಚುನಾವಣೆ- ಜೆಡಿಎಸ್ ಅಭ್ಯರ್ಥಿಯಾಗಿ ಕುಪ್ಪೇಂದ್ರ ರೆಡ್ಡಿ ಫೈನಲ್

    ಬೆಂಗಳೂರು: ರಾಜ್ಯಸಭೆ ಚುನಾವಣೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕುಪ್ಪೇಂದ್ರ ರೆಡ್ಡಿ ಅವರ ಹೆಸರು ಫೈನಲ್ ಆಗಿದೆ.

    ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆ ಕೊನೆದಿನ. ಹೀಗಾಗಿ ನಿನ್ನೆ ಬಿಜೆಪಿ, ಕಾಂಗ್ರೆಸ್ ತಮ್ಮ ತಮ್ಮ ಅಭ್ಯರ್ಥಿಗಳ ಹೆಸರನ್ನು ಘೋಷಿಸಿವೆ. ಇದೀಗ ಜೆಡಿಎಸ್‌ ಕೂಡ ತನ್ನ ಅಭ್ಯರ್ಥಿಯನ್ನು ನಿರ್ಧರಿಸಿದೆ. ಕುಪ್ಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಯಲು ನಿರ್ಧರಿಸಲಾಗಿದೆ. ಕುಪ್ಪೇಂದ್ರ ರೆಡ್ಡಿ ಜೆಡಿಎಸ್‍ನಿಂದ ಬಿ ಫಾರಂ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ನಾಮಪತ್ರ ಸಲ್ಲಿಕೆ ಮಾಡುವ ಸಾಧ್ಯತೆಯಿದೆ.

    ಈಗಾಗಲೇ ಕುಪ್ಪೇಂದ್ರ ರೆಡ್ಡಿ ಅವರು ಕಾಂಗ್ರೆಸ್ ನಾಯಕರ ಬೆಂಬಲ ಕೋರಿದ್ದಾರೆ. ಕಾಂಗ್ರೆಸ್ ನಡೆ ಮೇಲೆ ಮುಂದಿನ ತೀರ್ಮಾನ ಮಾಡಲು ನಿರ್ಧಾರ ಕೈಗೊಂಡಿದೆ. ಕಾಂಗ್ರೆಸ್‍ನಿಂದ ಜೈರಾಮ್ ರಮೇಶ್ ಹಾಗೂ 2ನೇ ಅಭ್ಯರ್ಥಿ ಆಗಿ ಮನ್ಸೂರ್ ಖಾನ್‍ಗೆ ಟಿಕೆಟ್ ಸಿಕ್ಕಿದೆ. ಇತ್ತ ಒಂದು ವೇಳೆ ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಿಸಿದ್ರೆ ಕಾಂಗ್ರೆಸ್ ಅಥವಾ ಬಿಜೆಪಿ ಬೆಂಬಲ ಪಡೆಯಬೇಕಾದ ಪರಿಸ್ಥಿತಿ ಇರುತ್ತದೆ. ಇದನ್ನೂ ಓದಿ: ಯುಪಿಯಲ್ಲಿ ಬೀದರ್‌ ಟಿಟಿ ಅಪಘಾತ – ಯುವತಿ ಸಾವು, ಸಾವಿನ ಸಂಖ್ಯೆ 8ಕ್ಕೆ ಏರಿಕೆ

    ಭಾನುವಾರವಷ್ಟೇ ಬಿಜೆಪಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ನಟ ಜಗ್ಗೇಶ್‌, ಕಾಂಗ್ರೆಸ್‌ನಿಂದ ಮಾಜಿ ಸಚಿವ ಜೈರಾಮ್‌ ರಮೇಶ್‌ ಹೆಸರು ಫೈನಲ್‌ ಆಗಿತ್ತು.  ಒಕ್ಕಲಿಗ ಕೋಟಾದಡಿ ಜಗ್ಗೇಶ್‍ಗೆ ಟಿಕೆಟ್ ನೀಡಲಾಗಿದೆ. ಅಲ್ಲದೇ ಹಳೇ ಮೈಸೂರು ಭಾಗದಲ್ಲಿ ಮತ ಸೆಳೆಯಲು ಬಿಜೆಪಿ ಯತ್ನಿಸಿದೆ. ನಿರ್ಮಲಾ ಸೀತಾರಾಮನ್ 2ನೇ ಬಾರಿ ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದಾರೆ. ಇದನ್ನೂ ಓದಿ: ಜಗ್ಗೇಶ್‍ಗೆ ರಾಜ್ಯಸಭಾ ಟಿಕೆಟ್- ರಾಯರ ಕೃಪೆ, ಪವಾಡಕ್ಕೆ ಧನ್ಯ ಅಂದ್ರು ನವರಸ ನಾಯಕ

  • ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್- ಕೊಡಗಿನಲ್ಲಿ ಬಿಜೆಪಿ, ಕಾಂಗ್ರೆಸ್ ಫೈಟ್

    ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್- ಕೊಡಗಿನಲ್ಲಿ ಬಿಜೆಪಿ, ಕಾಂಗ್ರೆಸ್ ಫೈಟ್

    ಮಡಿಕೇರಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‍ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕೊಡಗಿನ ಚುನಾವಣಾ ಕಣ ರಂಗೇರುತ್ತಿರುವಾಗಲೇ ಜೆಡಿಎಸ್ ಅಭ್ಯರ್ಥಿ ಇಸಾಕ್ ಖಾನ್ ನಾಮಪತ್ರ ವಾಪಸ್ ಪಡೆಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಹೀಗಾಗಿ ಕೊಡಗು ಜಿಲ್ಲೆಯಲ್ಲಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ನಡುವೆ ನೇರ ಹಣಾಹಣಿಗೆ ವೇದಿಕೆ ಸಜ್ಜಾಗಿದೆ.

    ಹೌದು, ಇಂದು ಬೆಳಗ್ಗೆವರೆಗೆ ಚುನಾವಣೆ ಎದುರಿಸುತ್ತೇವೆ ಎಂದು ದೃಢವಾದ ನಿರ್ಧಾರದಲ್ಲಿದ್ದ ಜೆಡಿಎಸ್ ಅಭ್ಯರ್ಥಿ ಇಸಾಕ್ ಖಾನ್, ನಾಮಪತ್ರ ವಾಪಸ್ ಪಡೆಯುವಂತೆ ನನ್ನ ಮೇಲೆ ಕಾಂಗ್ರೆಸ್ ಮುಖಂಡರು ಒತ್ತಡ ಹಾಕುತ್ತಿದ್ದಾರೆ. ಜೆಡಿಎಸ್ ಅಲ್ಪಸಂಖ್ಯಾತರನ್ನು ಗುರುತಿಸಿ ಟಿಕೆಟ್ ನೀಡಿತ್ತು. ಆದರೆ ಅಲ್ಪಸಂಖ್ಯಾತರ ವೋಟುಗಳನ್ನು ಹಾಳು ಮಾಡುವುದಕ್ಕಾಗಿಯೇ ಜೆಡಿಎಸ್ ಅಭ್ಯರ್ಥಿ ಹಾಕಿದೆ ಎಂದು ಕಾಂಗ್ರೆಸ್ಸಿನವರು ಆರೋಪಿಸಿ ನಮಗೆ ಮಾನಸಿಕ ಒತ್ತಡ ಹಾಕುತ್ತಿದ್ದಾರೆ ಎಂದು ಇಸಾಕ್ ಖಾನ್ ಹೇಳಿದ್ದರು. ಇದನ್ನೂ ಓದಿ: ಯಡಿಯೂರಪ್ಪ ಫೋನ್ ಮಾಡಿ ಬೆಂಬಲ ಕೇಳಿದ್ದಾರೆ: ಎಚ್‍ಡಿಕೆ

    ಮಧ್ಯಾಹ್ನದ ಹೊತ್ತಿಗೆ, ಜೆಡಿಎಸ್ ಹೈಕಮಾಂಡ್‍ನಿಂದ ಸೂಚನೆ ಬಂದಿದೆ. ಹೆಚ್.ಡಿ.ಕುಮಾರಸ್ವಾಮಿ ಅವರೇ ಕರೆ ಮಾಡಿ ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದರು. ಹೀಗಾಗಿ ಹೈಕಮಾಂಡ್ ಸೂಚನೆಯಂತೆ ನಾಮಪತ್ರ ವಾಪಸ್ ಪಡೆದಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

    ಮತ್ತೊಂದೆಡೆ ಕೊಡಗಿನ ಕುಶಾಲನಗರ ಭಾಗದಲ್ಲಿ ಮತಯಾಚನೆ ಮಾಡುತ್ತಿದ್ದ ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡರನ್ನು ಕೇಳಿದರೆ, ನಾವು ಯಾವುದೇ ಒತ್ತಡ ಹಾಕಿಲ್ಲ. ಅವರು ನಾಮಪತ್ರ ವಾಪಸ್ ಪಡೆಯುತ್ತಿರುವುದು ನಮಗೆ ಗೊತ್ತಿಲ್ಲ. ಜೆಡಿಎಸ್ ಹೈಕಮಾಂಡ್ ಮನಸ್ಸಿನಲ್ಲಿ ಯಾವ ನಿರ್ಧಾರ ಇತ್ತೋ ಗೊತ್ತಿಲ್ಲ. ಬಹುಶಃ ಕೋಮುವಾದಿಗಳಿಗೆ ಅನುಕೂಲ ಆಗಬಾರದೆಂದು ಅವರ ಅಭ್ಯರ್ಥಿಯ ನಾಮಪತ್ರ ವಾಪಸ್ ಪಡೆಸಿರಬಹುದು. ಅವರು ನಾಮಪತ್ರ ವಾಪಸ್ ಪಡೆದಿರುವುದರಿಂದ ನಾವು ಜೆಡಿಎಸ್ ಮುಖಂಡ ಬೆಂಬಲವನ್ನು ಕೋರುತ್ತೇನೆ. ಬೆಂಬಲ ಕೋರುವುದು ನನ್ನ ಜವಾಬ್ದಾರಿ ಬೆಂಬಲ ಕೊಡುವುದು ಬಿಡುವುದು ಜೆಡಿಎಸ್ ನಾಯಕರಿಗೆ ಬಿಟ್ಟಿದ್ದು. ಆದರೆ ಹಲವು ವರ್ಷಗಳಿಂದ ಕೊಡಗಿನಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಇದರಿಂದ ಸ್ವತಃ ಗ್ರಾಮ ಪಂಚಾಯಿತಿ ಸದಸ್ಯರೇ ಈ ಬಾರಿ ಬದಲಾವಣೆ ಆಗಲೇಬೇಕೆಂದು ನೇರವಾಗಿ ನಮ್ಮ ಬಳಿ ಹೇಳುತ್ತಿದ್ದಾರೆ. ಹೀಗಾಗಿ ನಾವು ಗೆಲ್ಲುವ ವಿಶ್ವಾಸದಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯಕ್ಕೆ ಹೆಚ್ಚು ಒತ್ತು ನೀಡುತ್ತದೆ: ಧ್ರುವನಾರಾಯಣ್

    ಒಟ್ಟಿನಲ್ಲಿ ಕೊಡಗಿನ 103 ಗ್ರಾಮ ಪಂಚಾಯಿತಿಗಳಲ್ಲಿ 1,334 ಮತಗಳಿವೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದ್ದು, ಬಿರುಸಿನ ಪ್ರಚಾರ ನಡೆಯುತ್ತಿದೆ. ಆದರೆ ಮತದಾರರು ಯಾರ ಕೈ ಹಿಡಿಯುತ್ತಾರೊ ಕಾದು ನೋಡಬೇಕಿದೆ.

  • ಭದ್ರಾವತಿ ಕ್ಷೇತ್ರಕ್ಕೆ ಶಾರದ ಅಪ್ಪಾಜಿಗೌಡ ಜೆಡಿಎಸ್ ಅಭ್ಯರ್ಥಿ- ಎಚ್‍ಡಿಕೆ ಘೋಷಣೆ

    ಭದ್ರಾವತಿ ಕ್ಷೇತ್ರಕ್ಕೆ ಶಾರದ ಅಪ್ಪಾಜಿಗೌಡ ಜೆಡಿಎಸ್ ಅಭ್ಯರ್ಥಿ- ಎಚ್‍ಡಿಕೆ ಘೋಷಣೆ

    – ಶಾರದರಿಗೆ ಜನರ ಆಶೀರ್ವಾದ ಇರಲಿ ಎಂದ ಎಚ್‍ಡಿಕೆ

    ಶಿವಮೊಗ್ಗ: ಮುಂಬರುವ 2023ರ ವಿಧಾನಸಭೆ ಚುನಾವಣೆಗೆ ಭದ್ರಾವತಿ ಕ್ಷೇತ್ರದಿಂದ ಶಾರದ ಅಪ್ಪಾಜಿಗೌಡ ಅವರು ಜೆಡಿಎಸ್ ಅಭ್ಯರ್ಥಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದರು.

    ಜಿಲ್ಲೆಯ ಭದ್ರಾವತಿ ತಾಲೂಕಿನ ಗೋಣಿಬೀಡಿನಲ್ಲಿ ಮಾಜಿ ಶಾಸಕ ದಿವಗಂತ ಅಪ್ಪಾಜಿಗೌಡರ ಪ್ರತಿಮೆ ಅನಾವರಗೊಳಿಸಿ ಮಾತನಾಡಿದ ಅವರು, ಭದ್ರಾವತಿ ಕ್ಷೇತ್ರದ ಜನರು ಹಾಗೂ ಅಪ್ಪಾಜಿಗೌಡ ಅವರ ಬೆಂಬಲಿಗರ ಧ್ವನಿಗೆ ನಾನು ಬೆಲೆ ಕೊಡುತ್ತೇನೆ. ಈಗಾಗಲೇ ಕ್ಷೇತ್ರದ ಜನರೇ ತಮ್ಮ ಅಭ್ಯರ್ಥಿ ಯಾರೆಂದು ನಿರ್ಧರಿಸಿದ್ದಾರೆ. ಹೀಗಾಗಿ ಕ್ಷೇತ್ರದ ಜನರು, ಕಾರ್ಯಕರ್ತರ ಅಪೇಕ್ಷೆಯಂತೆ ಶಾರದ ಅಪ್ಪಾಜಿಗೌಡರನ್ನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುತ್ತೇವೆ ಎಂದರು. ಇದನ್ನೂ ಓದಿ: ನಿನ್ನೆಯಷ್ಟೇ ಅಮೆರಿಕದಿಂದ ಬೆಂಗಳೂರಿಗೆ ಲ್ಯಾಂಡ್ – ಇಂದು ಬೆಂಕಿಗೆ ಬಲಿ

    ಇದೇ ತಿಂಗಳ 27ರಂದು ಬೆಂಗಳೂರಿನಲ್ಲಿ ಜೆಡಿಎಸ್ ಕಾರ್ಯಾಗಾರ ನಡೆಸಲು ನಿರ್ಧರಿಸಲಾಗಿದೆ. ಮೊದಲ ಹಂತದ 140 ಅಭ್ಯರ್ಥಿಗಳ ಕಾರ್ಯಗಾರ ನಡೆಯಲಿದ್ದು, ಅಂದೇ ಮೊದಲ ಹಂತವಾಗಿ ಮುಂಬರುವ ವಿಧಾನಸಭಾ ಕ್ಷೇತ್ರದ 140 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು. ಅಲ್ಲಿ ಎಲ್ಲ ವಿಚಾರವನ್ನು ಚರ್ಚೆ ಮಾಡುತ್ತೇವೆ ಎಂದರು.

  • ಹಾನಗಲ್ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಜೆಡಿಎಸ್

    ಹಾನಗಲ್ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಜೆಡಿಎಸ್

    ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಿಯಾಜ್ ಶೇಖ್ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ.

    ನಿಯಾಜ್ ಶೇಖ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಪಕ್ಷದ ಬಾವುಟ ನೀಡಿ ನಿಯಾಜ್ ಶೇಖ್ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಯ್ಯದ್ ಅಲ್ತಾಫ್ ಉಪಸ್ಥಿತರಿದ್ದರು. ನಿಯಾಜ್ ಶೇಖ್ ಹಾವೇರಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

    ಕಳೆದ ವಾರ ಅನಾರೋಗ್ಯದ ಹಿನ್ನೆಲೆಯಲ್ಲಿ ಹಾಲಿ ಹಾನಗಲ್ ವಿಧಾನಸಬಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಚಿವ ಸಿ.ಎಂ.ಉದಾಸಿ ಅವರು ನಿಧಾನರಾದ ಹಿನ್ನೆಲೆಯಲ್ಲಿ ತೆರವಾಗಿರುವ ಈ ಕ್ಷೇತ್ರಕ್ಕೆ ಉಪಚುನಾವಣೆ ಸದ್ಯದಲ್ಲೇ ನಡೆಯಲಿದ್ದು, ಜೆಡಿಎಸ್‍ನಿಂದ ನಿಯಾಜ್ ಶೇಖ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಿದೆ.

  • ಮಧ್ಯಾಹ್ನ ಟಿಕೆಟ್ ಘೋಷಣೆ – ಶಿರಾ ಜೆಡಿಎಸ್ ಅಭ್ಯರ್ಥಿಗೆ ಕೊರೊನಾ ಪಾಸಿಟಿವ್

    ಮಧ್ಯಾಹ್ನ ಟಿಕೆಟ್ ಘೋಷಣೆ – ಶಿರಾ ಜೆಡಿಎಸ್ ಅಭ್ಯರ್ಥಿಗೆ ಕೊರೊನಾ ಪಾಸಿಟಿವ್

    ತುಮಕೂರು: ಉಪಚುನಾವಣೆಯಲ್ಲಿ ಶಿರಾ ಜೆಡಿಎಸ್ ಅಭ್ಯರ್ಥಿಯಾಗಿರುವ ಅಮ್ಮಾಜಮ್ಮ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.

    ಇಂದು ಮಧ್ಯಾಹ್ನವೇ ಜೆಡಿಎಸ್ ಪಕ್ಷದ ವರಿಷ್ಠರಾದ ದೇವೇಗೌಡರು, ದಿವಂಗತ ಶಾಸಕ ಸತ್ಯನಾರಾಯಣ ಪತ್ನಿ ಅಮ್ಮಾಜಮ್ಮ ಅವರಿಗೆ ಜೆಡಿಎಸ್ ಪಕ್ಷದಿಂದ ಉಪಚುನಾವಣೆಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಆದರೆ ಅಮ್ಮಾಜಮ್ಮ ಅವರಿಗೆ ಇಂದೇ ಕೊರೊನಾ ಪಾಸಿಟಿವ್ ಬಂದಿದೆ. ಪರಿಣಾಮ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕತ್ಸೆ ಪಡೆಯುತ್ತಿದ್ದಾರೆ.

    ತಾಯಿಗೆ ಕೊರೊನಾ ಬಂದ ವಿಚಾರವಾಗಿ ಮಾತನಾಡಿರುವ ಅಮ್ಮಾಜಮ್ಮ ಪುತ್ರ ಸತ್ಯ ಪ್ರಕಾಶ್, ವಿಧಿ ನಮ್ಮ ಕುಟುಂಬದ ಜೊತೆ ಚೆಲ್ಲಾಟ ಆಡುತಿದೆ. ಎರಡು ತಿಂಗಳ ಹಿಂದೆ ತಂದೆ ತೀರಿಸಿಕೊಂಡರು. ಈಗ ತಾಯಿಗೆ ಕೊರೊನಾ ಬಂದಿದೆ. ಪಕ್ಷದಿಂದ ಟಿಕೆಟ್ ಘೋಷಣೆ ಮಾಡಿರೋದು ಸಂತಸ ತಂದಿದೆ. ನಮ್ಮ ತಾಯಿ ಕೊರೊನಾ ಗೆದ್ದು ಬಂದು ಚುನಾವಣೆನೂ ಗೆಲ್ಲುತ್ತಾರೆ. ಇನ್ನು ಐದು ದಿನದಲ್ಲಿ ಡಿಸ್ಚಾರ್ಜ್ ಆಗಿ ಪ್ರಚಾರಕ್ಕೆ ಬರುತ್ತಾರೆ ಎಂದು ತಿಳಿಸಿದ್ದಾರೆ.

    ಶಿರಾ ಕ್ಷೇತ್ರದ ಜೆಡಿಎಸ್ ಶಾಸಕ ಸತ್ಯನಾರಾಯಣ ಅವರ ನಿಧನದ ಹಿನ್ನೆಲೆ, ನವೆಂಬರ್ 3 ರಂದು ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಟಿ.ಬಿ ಜಯಚಂದ್ರ ಸ್ಪರ್ಧಿಸಲಿದ್ದಾರೆ. ಈಗ ಜೆಡಿಎಸ್ ಪಕ್ಷ ಕೂಡ ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಈ ಮೊದಲು ಸತ್ಯನಾರಾಯಣ ಅವರ ಮಗ ಸತ್ಯ ಪ್ರಕಾಶ್‍ಗೆ ಟಿಕೆಟ್ ನೀಡುತ್ತಾರೆ ಎನ್ನಲಾಗಿತ್ತು. ಆದರೆ ಇಂದು ದೇವೇಗೌಡರು ಸತ್ಯನಾರಾಯಣ್ ಅವರ ಪತ್ನಿ ಅಮ್ಮಾಜಮ್ಮ ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ.

  • ಖಾಲಿ ಸ್ಥಾನಕ್ಕೆ ಜೋತುಬೀಳುವ ಜಾಯಮಾನ ನನ್ನದಲ್ಲ: ನಿಖಿಲ್ ಕುಮಾರಸ್ವಾಮಿ

    ಖಾಲಿ ಸ್ಥಾನಕ್ಕೆ ಜೋತುಬೀಳುವ ಜಾಯಮಾನ ನನ್ನದಲ್ಲ: ನಿಖಿಲ್ ಕುಮಾರಸ್ವಾಮಿ

    ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ನಿಂದ ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡ್ತಾರಾ ಅನ್ನೋ ಚರ್ಚೆ ಕೆಲ ದಿನಗಳಿಂದ ಆರಂಭಗೊಂಡಿತ್ತು. ಈ ಎಲ್ಲ ಊಹಾಪೋಹಗಳಿಗೆ ಸ್ವತಃ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

    ಪತ್ರಿಕಾ ಪ್ರಕಟನೆ: ಇಂತಹ ಕಪೋಲಕಲ್ಪಿತ ಸುದ್ದಿ- ವದಂತಿಗಳನ್ನು ಯಾರು ಹಬ್ಬಿಸುತ್ತಾರೋ? ಯಾಕೆ ಹಬ್ಬಿಸುತ್ತಾರೋ? ಇದರಿಂದ ಕುತ್ಸಿತ ಮನಸುಗಳಿಗೆ ಆಗುವ ಲಾಭ ಏನೆಂಬುದು ನನಗೆ ತಿಳಿಯದಾಗಿದೆ. ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಚುನಾವಣೆ ಮೇಲೆ ಕಣ್ಣಿಟ್ಟಿದ್ದೇನೆ ಎಂಬಂತೆ ವದಂತಿಗಳನ್ನು ಪುಂಖಾನುಪುಂಖವಾಗಿ ಹರಿಯ ಬಿಡಲಾಗುತ್ತಿದೆ.

    ಮಾಜಿ ಸಚಿವರು ಹಾಗೂ ಶಾಸಕರಾಗಿದ್ದ ಬಿ. ಸತ್ಯನಾರಾಯಣ ಅವರು ಅಕಾಲಿಕ ನಿಧನರಾಗಿದ್ದರಿಂದ ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ಅನಿವಾರ್ಯವಾಗಿದೆ. ಹಾಗಂತ ಅಕಾಲಿಕವಾಗಿ ಖಾಲಿಬಿದ್ದ ಕ್ಷೇತ್ರಕ್ಕೆ ಜೋತುಬೀಳುವ ಜಾಯಮಾನ ನನ್ನದಲ್ಲವೇ ಅಲ್ಲ. 2018 ರ ವಿಧಾನಸಭಾ ಚುನಾವಣೆ ವೇಳೆ ಮೂರು ದಿನಗಳ ಕಾಲ ಶಿರಾ ಸೇರಿದಂತೆ ತುಮಕೂರು ಜಿಲ್ಲೆಯಲ್ಲಿ ಪಕ್ಷದ ಪರವಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ನಿಜ.

    ಇನ್ನು ಸತ್ಯ ನಾರಾಯಣ ಅವರ ಪಕ್ಷ ನಿಷ್ಠೆ ಮತ್ತು ಬದ್ಧತೆ ಪ್ರಶ್ನಾತೀತ. ಯಾವುದೇ ಆಮಿಷಗಳಿಗೆ ಬಲಿಯಾಗದೆ ಕೊನೆ ಉಸಿರಿರುವವರೆಗೂ ನಂಬಿದ ಪಕ್ಷವನ್ನು ಹೆಸರಿಗೆ ತಕ್ಕಂತೆ ‘ಸತ್ಯ”ವಾಗಿಸಿ ಕೊಂಡಿದ್ದರು. ಉಪಚುನಾವಣೆಗೆ ಯೋಗ್ಯ, ಸಮರ್ಥ ಅಭ್ಯರ್ಥಿಯನ್ನು ಪಕ್ಷದ ವರಿಷ್ಠರು ಆಯ್ಕೆ ಮಾಡಲಿದ್ದಾರೆ. ಅವರ ಪರವಾಗಿಯೂ ಪಕ್ಷದ ಅಭ್ಯರ್ಥಿ ಪರ ಟೊಂಕಕಟ್ಟಿ ನಿಂತು ಪ್ರಚಾರ ಮಾಡಲಿದ್ದೇನೆ. ಇದರಲ್ಲಿ ಯಾರಿಗೂ ಎಳ್ಳಷ್ಟು ಸಂಶಯ ಬೇಡ. ನಾನು ಶಿರಾ ಉಪಚುನಾವಣೆಯ ಅಭ್ಯರ್ಥಿಯಾಗುವ ಕನಸು ಕಂಡವನಲ್ಲ. ಯಾವುದೇ ಕಾರಣಕ್ಕೂ ನಾನು ಶಿರಾದಲ್ಲಿ ಅಭ್ಯರ್ಥಿ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಸತ್ಯನಾರಾಯಣ ಅವರ ‘ಚಿತೆ” ಆರುವ ಮುನ್ನವೇ ಉಪಚುನಾವಣೆ ಅಖಾಡಕ್ಕೆ ನನ್ನ ಹೆಸರನ್ನು ತೇಲಿ ಬಿಟ್ಟವರ ಬಗ್ಗೆ ಮರುಕವಿದೆ. ಇಂತಹ ಹೀನ ಸಂಸ್ಕೃತಿಯ ರಾಜಕೀಯ ಪರಂಪರೆ ನಮ್ಮದಲ್ಲ. ಶಿರಾ ಉಪಚುನಾವಣೆಗೆ ನನ್ನನ್ನು ಕಣಕ್ಕಿಳಿಸಲು ಒತ್ತಡಗಳಿವೆ ಎಂಬಂತೆ ಹಾಗೂ ರಾಜಕೀಯ ನೆಲೆ ಕಂಡುಕೊಳ್ಳಲು ಈ ಕ್ಷೇತ್ರವನ್ನೇ ‘ಚಿಮ್ಮು ಹಲಗೆ” ಮಾಡಿ ಕೊಳ್ಳುವ ಹವಣಿಕೆಯಲ್ಲಿದ್ದಾರೆ ಎಂಬ ವದಂತಿಗಳನ್ನು ಸಾರಾಸಗಟಾಗಿ ತಳ್ಳಿ ಹಾಕುತ್ತೇನೆ.

    ರಾಜ್ಯ ಜಾತ್ಯಾತೀತ ಯುವ ಜನತಾದಳದ ಅಧ್ಯಕ್ಷನಾಗಿರುವ ನಾನು ಪಕ್ಷಕ್ಕಾಗಿ ದುಡಿಯುವಾಗ ‘ಹುದ್ದೆ”ಯ ಕಿರೀಟವನ್ನು ಬದಿಗಿರಿಸಿ ಪಕ್ಷದ ಸಾಮಾನ್ಯ ಕಾರ್ಯಕರ್ತನಂತೆ ದಣಿವರಿಯದೆ ದುಡಿಯುತ್ತೇನೆ. ಪಕ್ಷದ ನಿಷ್ಠಾವಂತ ಹಿರಿಯ-ಕಿರಿಯರ ನಿಸ್ವಾರ್ಥ ರಾಜಕೀಯ ನಿಷ್ಠೆಯೇ ಇದಕ್ಕೆ ಮೂಲ ಪ್ರೇರಣೆ ಎಂದು ಮಾದಾರಾ ದೂಳಯ್ಯನವರ ಕೆಲ ಸಾಲುಗಳನ್ನು ನಿಖಿಲ್ ಕುಮಾರಸ್ವಾಮಿ ಬರೆದುಕೊಂಡಿದ್ದಾರೆ.

    ಅರಿವುಂಟೆ? ತೊಳಗಿ ಬೆಳಗಿ ಪ್ರಜ್ವಲಿಸಿ ಉರಿವ ಬೆಳಗು
    ಕೆಡುವಲ್ಲಿ ಉಡುಗುತ್ತಿದ್ದೇನೆ ಎಂದು ನುಡಿಯಿತ್ತೆ?
    ಇಂತಿವ ಹಿಡಿವಲ್ಲಿ ಬಿಡುವಲ್ಲಿ ಮಿಕ್ಕಾದವ
    ಒಡಗೂಡುವಲ್ಲಿ ಅಡಿಯೇರಿ ಮತ್ತೆ ಪುನರಪಿ ಅಡಿ ಉಂಟೆ?
    ತೊಟ್ಟು ಬಿಟ್ಟ ಹಣ್ಣಿಂಗೆ ಮತ್ತಾ ಬುಡದಾಸೆಯೇಕೆ? ನಿಶ್ಚಯವೆಂಬುದು ನಷ್ಟವಾದಲ್ಲಿ ಕಾಮಧೂಮ ಧೂಳೇಶ್ವರನೆಂಬ ಲಕ್ಷವೇತಕ್ಕೆ?
    – ಮಾದಾರ ಧೂಳಯ್ಯ

  • ಐಟಿ ದಾಳಿ ನೋಟಿಸ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ

    ಐಟಿ ದಾಳಿ ನೋಟಿಸ್: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ

    ಬೆಂಗಳೂರು: ಯಶವಂತಪುರ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ ಅವರಿಗೆ ಐಟಿ ನೋಟಿಸ್ ಜಾರಿ ಮಾಡಿದ್ದು ಇಂದು ಆದಾಯ ತೆರಿಗೆ ಕಚೇರಿಗೆ ಭೇಟಿ ನೀಡಿ ಮಾಹಿತಿಗಳನ್ನು ನೀಡಿದ್ದಾರೆ.

    ಈ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಜವರಾಯಿಗೌಡ ಅವರು, ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಪರ ಕೆಲಸ ಮಾಡುವಂತೆ ಕಮಲ ಪಡೆಯ ನಾಯಕರು ಆಫರ್ ಕೊಟ್ಡಿದ್ದರು. ನಿಮ್ಮನ್ನ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುತ್ತೇವೆ, ಬೋರ್ಡ್ ಅಧ್ಯಕ್ಷ ಸ್ಥಾನ ಕೊಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ ನಾನು ಪಕ್ಷ ನಿಷ್ಠೆಯಿಂದ ಹೋಗಿಲ್ಲ. ನಾನು ಎರಡು ಬಾರಿ ಸೋತಿರಬಹುದು, ಮತದಾರರನ್ನು ವಂಚಿಸಲ್ಲ ಎಂದು ಹೇಳಿದ್ದಾರೆ.

    ಐಟಿ ಇಲಾಖೆ ನೋಟಿಸ್ ನೀಡಿದ ಹಿನ್ನೆಲೆ ಜವರಾಯಿಗೌಡ ಅವರು ಇಂದು ನಗರದ ಐಟಿ ಕಚೇರಿಗೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ವೈಯಕ್ತಿಕ ವಿಚಾರಕ್ಕೆ ಮಾತ್ರ ನೋಟಿಸ್ ನೀಡಿದ್ದಾರೆ. ಕೆಲ ವರ್ಷಗಳ ಹಿಂದೆ ನೋಟ್ ಬ್ಯಾನ್ ಆದಾಗ ಆಸ್ತಿ ಪಡೆದಿದ್ದೆ. ಅದರ ಹಣಕಾಸಿನ ವ್ಯವಹಾರದ ಬಗ್ಗೆ ಮಾಹಿತಿ ಕೇಳಿದರು. ಇಂದು ಕೊಟ್ಟು ಬಂದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ತಿಳಿಸಿದರು.

    ಅನರ್ಹ ಶಾಸಕ ಎಸ್.ಟಿ.ಸೋಮಶೇಖರ್ ಬ್ಲ್ಯಾಕ್‍ಮೇಲ್ ಮೂಲಕ ಗುತ್ತಿಗೆದಾರರನ್ನು ಬಿಜೆಪಿ ಸೇರಿಸಿಕೊಳ್ಳುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಕಾಂಗ್ರೆಸ್‍ನ ಕೆಲ ಜನರಿಗೆ ಗುತ್ತಿಗೆ ನೀಡಿರುವುದು ಗೊತ್ತಾಗಿದೆ. ಅವರನ್ನು ಮಾತ್ರ ಬ್ಲ್ಯಾಕ್‍ಮೇಲ್ ಮಾಡಲಾಗಿದೆ. ಜೆಡಿಎಸ್ ಬೆಂಬಲಿಗರಿಗೆ ಆಮಿಷ ಒಡ್ಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

    59.30 ಕೋಟಿ ರೂ. ಆಸ್ತಿಯ ಒಡೆಯ:
    ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ ಒಟ್ಟು 59.30 ಕೋಟಿ ರೂ. ಆಸ್ತಿಯ ಒಡೆಯರಾಗಿದ್ದಾರೆ. ಈ ಪೈಕಿ ಜವರಾಯಿಗೌಡರ ಚರಾಸ್ತಿ 15.93 ಕೋಟಿ ರೂ. ಇದ್ದರೆ, ಅವರ ಪತ್ನಿ ಗಾಯತ್ರಿ 8.33 ಕೋಟಿ ರೂ. ಹೊಂದಿದ್ದಾರೆ. ಜವರಾಯಿಗೌಡ ಒಟ್ಟು 44.37 ಕೋಟಿ ರೂ. ಸ್ಥಿರಾಸ್ತಿ ಹಾಗೂ ಪತ್ನಿ 85.56 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ. ಒಟ್ಟು ಸಾಲ 32 ಕೋಟಿ ರೂ. ಹಾಗೂ ಪತ್ನಿ ಹೆಸರಲ್ಲಿ ಒಟ್ಟು 28.18 ಕೋಟಿ ರೂ. ಸಾಲ ಇದೆ ಎಂದು ಅಫಿಡೆವಿಟ್‍ನಲ್ಲಿ ಜವರಾಯಿಗೌಡ ಘೋಷಿಸಿಕೊಂಡಿದ್ದಾರೆ.

    ಹಿಂದಿನ ಚುನಾವಣೆ:
    ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ ಅವರು 2013 ಹಾಗೂ 2018ರ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಿ ಎಸ್.ಟಿಸೋಮಶೇಖರ್ ವಿರುದ್ಧ ಸೋತಿದ್ದರು. 2013ರಲ್ಲಿ ಎಸ್.ಸೋಮಶೇಖರ್ 1,20,380 ಮತ ಪಡೆದಿದ್ದರೆ ಜವರಾಯಿಗೌಡ 91,280 ಮತ ಗಳಿಸಿದ್ದರು. ಈ ಮೂಲಕ 29,100 ಮತಗಳ ಅಂತರದಿಂದ ಸೋತಿದ್ದ ಜವರಾಯಿಗೌಡ ಅವರು 2018 ಚುನಾವಣೆಯಲ್ಲಿ ಪ್ರಭಲ ಸ್ಪರ್ಧೆ ನೀಡಿ 10,711 ಮತಗಳಿಂದ ಪರಾಭವಗೊಂಡಿದ್ದರು. ಈ ವೇಳೆ ಎಸ್.ಟಿ.ಸೋಮಶೇಖರ್ 1,15,273 ಮತ ಪಡೆದಿದ್ದರೆ ಜವರಾಯಿ ಗೌಡ 1,04,562 ಮತವನ್ನು ಪಡೆದಿದ್ದರು.

  • ಕೆ.ಆರ್‌ ಪೇಟೆ ಜೆಡಿಎಸ್‍ನಲ್ಲೂ ಒಳಬೇಗುದಿ- ಪ್ರಚಾರಕ್ಕೆ ಜಿಲ್ಲೆಯ ತೆನೆ ನಾಯಕರು ಗೈರು

    ಕೆ.ಆರ್‌ ಪೇಟೆ ಜೆಡಿಎಸ್‍ನಲ್ಲೂ ಒಳಬೇಗುದಿ- ಪ್ರಚಾರಕ್ಕೆ ಜಿಲ್ಲೆಯ ತೆನೆ ನಾಯಕರು ಗೈರು

    ಮಂಡ್ಯ: ಕೆ.ಆರ್‌ ಪೇಟೆ ಕ್ಷೇತ್ರದ ಉಪಚುನಾವಣೆ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಅದರಲ್ಲೂ ಜೆಡಿಎಸ್ ಪಕ್ಷದ ಮಂಡ್ಯ ಜಿಲ್ಲೆಯ ಶಾಸಕರು, ಮುಖಂಡರನ್ನು ಹೊರತುಪಡಿಸಿ ಕೆ.ಆರ್ ಪೇಟೆ ಹಾಗೂ ಕೆಲ ರಾಜ್ಯದ ನಾಯಕರು ಫುಲ್ ಆಕ್ಟಿವ್ ಆಗಿದ್ದಾರೆ. ಆದರೆ ಜಿಲ್ಲೆ ನಾಯಕರು ಈ ಕಡೆ ತಲೆನೆ ಹಾಕ್ತಿಲ್ಲ.

    ಕೆ.ಆರ್‌ ಪೇಟೆ ಕ್ಷೇತ್ರವನ್ನು ಮತ್ತೆ ತಮ್ಮ ತೆಕ್ಕೆಗೆ ಹಾಕಿಕೊಳ್ಳಬೇಕು ಎಂಬ ಉದ್ದೇಶದಿಂದ ದಳಪತಿಗಳು ಫುಲ್ ಸ್ಟ್ರಾಟರ್ಜಿ ಮಾಡುತ್ತಿದ್ದಾರೆ. ಆದರೆ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಕೆಲ ಮುಖಂಡರು ಪ್ರಚಾರಕ್ಕೆ ಇಲ್ಲಿವರೆಗೂ ಬಂದಿಲ್ಲ. ಸೋಮವಾರ ನಾಮಪತ್ರ ಸಲ್ಲಿಸುವ ಜೆಡಿಎಸ್ ಮೆರವಣಿಗೆ ಮಾಡುವ ವೇಳೆ ಮಾಜಿ ಸಚಿವ ಪುಟ್ಟರಾಜು ಕಾಣಿಸಿಕೊಂಡಿದರು. ಬಳಿಕ ನಾಮಪತ್ರ ಸಲ್ಲಿಸುವ ವೇಳೆ ಪುಟ್ಟರಾಜು ಕಾಣಿಸಿಕೊಂಡಿರಲಿಲ್ಲ.

    ಜಿಲ್ಲೆಯಲ್ಲಿ 6 ಮಂದಿ ಜೆಡಿಎಸ್ ಶಾಸಕರು ಇದರೂ ಪ್ರಚಾರ ಕೆಲಸಕ್ಕೆ ಮಾತ್ರ ಇದುರೆಗೂ ಬಂದಿಲ್ಲ. ಸದ್ಯ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ದೇವರಾಜು ಪರ ಪಕ್ಕದ ಶ್ರವಣಬೆಳಗೊಳ ಕ್ಷೇತ್ರದ ಬಾಲಕೃಷ್ಣ ಹಾಗೂ ಕೆ.ಆರ್‌ ಪೇಟೆ ನಾಯಕರು ಮಾತ್ರ ಪ್ರಚಾರದ ವೇಳೆ ಸಾಥ್ ನೀಡುತ್ತಿದ್ದಾರೆ.

    ಕೆ.ಆರ್‌ ಪೇಟೆ ಉಪಚುನಾವಣೆಗೆ ಜೆಡಿಎಸ್‍ನಿಂದ ಜಿಲ್ಲಾ ಪಂಚಾಯತಿ ಸದಸ್ಯ ಹೆಚ್.ಡಿ ಮಂಜು ಅವರಿಗೆ ಟಿಕೆಟ್ ನೀಡಬೇಕೆಂದು ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ಪುಟ್ಟರಾಜು ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರುಗಳಿಗೆ ಮುಖಂಡರಿಗೆ ಒಲವಿತ್ತು. ಆದರೆ ಜೆಡಿಎಸ್ ವರಿಷ್ಠರಾದ ಹೆಚ್.ಡಿ ದೇವೇಗೌಡ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ದೇವರಾಜು ಅವರಿಗೆ ಟಿಕೆಟ್ ನೀಡಿದರು. ಇದರಿಂದ ಬೇಸರಗೊಂಡ ಹಿನ್ನೆಲೆಯಲ್ಲಿ ಇಲ್ಲಿವರೆಗೂ ಮಂಡ್ಯ ಮುಖಂಡರು ಕೆಆರ್‍ಪೇಟೆಗೆ ಬಂದಿಲ್ಲ ಎನ್ನಲಾಗುತ್ತಿದೆ.

    ಒಂದೆಡೆ ಜಿಲ್ಲೆಯ ನಾಯಕರು ಪ್ರಚಾರದ ವೇಳೆ ಕಾಣಿಸಿಕೊಳ್ಳುತ್ತಿಲ್ಲ, ಇನ್ನೊಂದೆಡೆ ಈ ಡ್ಯಾಮೆಜ್‍ನ್ನು ಕಂಟ್ರೋಲ್ ಮಾಡಲು ಇಂದು ಮಾಜಿ ಸಚಿವ ರೇವಣ್ಣ ಜೆಡಿಎಸ್ ಅಭ್ಯರ್ಥಿ ಪರ ಮತ ಭೇಟೆ ಮಾಡಲು ಅಖಾಡಕ್ಕೆ ಧುಮ್ಮುಕುತ್ತಿದ್ದಾರೆ.