Tag: JDS Leaders

  • ಹೇಮಾವತಿ ನೀರಿಗಾಗಿ ಹಾಸನದಲ್ಲಿ ಬೀದಿಗಿಳಿದ ರೈತರು, ಜೆಡಿಎಸ್ ಮುಖಂಡರು

    ಹೇಮಾವತಿ ನೀರಿಗಾಗಿ ಹಾಸನದಲ್ಲಿ ಬೀದಿಗಿಳಿದ ರೈತರು, ಜೆಡಿಎಸ್ ಮುಖಂಡರು

    ಹಾಸನ: ಇಡೀ ದೇಶವೇ ಕೊರೊನಾದಿಂದ ತತ್ತರಿಸುತ್ತಿದ್ದರೆ ಇತ್ತ ಹಾಸನ ಜಿಲ್ಲೆಯ ರೈತರು ನಮಗೇ ಕುಡಿಯಲು ನೀರಿಲ್ಲದ ಸಮಯದಲ್ಲಿ ಹೇಮಾವತಿ ಅಣೆಕಟ್ಟೆಯಿಂದ ತುಮಕೂರಿಗೆ ನೀರು ಬಿಡಲು ರಾಜ್ಯ ಸರ್ಕಾರ ಮುಂದಾಗಿದೆ. ಹಾಗಾಗಿ ನಮಗೂ ನೀರು ಕೊಡಿ ಎಂದು ಜೆಡಿಎಸ್ ಮುಖಂಡರ ನೇತೃತ್ವದಲ್ಲಿ ಬೀದಿಗಿಳಿದು ಹೋರಾಟ ಮಾಡಿದ್ದಾರೆ.

    ಸರ್ಕಾರ ಕುಡಿಯುವ ನೀರಿನ ನೆಪದಲ್ಲಿ ಹೇಮಾವತಿ ಅಣೆಕಟ್ಟೆಯಿಂದ ತುಮಕೂರಿಗೆ ನೀರು ಬಿಡಲು ಹೊರಟಿದೆ. ಆದರೆ ಹಾಸನ ಜಿಲ್ಲೆಯಲ್ಲೂ ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದ್ದು, ಈ ಬಗ್ಗೆ ಮಾತ್ರ ಯೋಚನೆ ಮಾಡುತ್ತಿಲ್ಲ. ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರು ಆಗಿರುವ ಮಾಧುಸ್ವಾಮಿ ತುಮಕೂರಿಗೆ ನೀರು ಬಿಡಲು ಹೊರಟಿದ್ದಾರೆ ಎಂದು ರೈತರು ಆರೋಪ ಮಾಡಿದ್ದಾರೆ.

    ತುಮಕೂರಿಗೆ ನೀರು ಬಿಡುವುದು ಸರ್ಕಾರಕ್ಕೆ ಬಿಟ್ಟ ವಿಚಾರ. ಆದರೆ ಈ ವೇಳೆ ಹಾಸನ ಜಿಲ್ಲೆಯ ಜನರಿಗೂ ನೀರು ಕೊಡಬೇಕು ಎಂದು ಹಾಸನದ ಕಾರ್ಲೆ ಗ್ರಾಮದಲ್ಲಿ ಹೇಮಾವತಿ ಎಡದಂಡೆ ನಾಲೆ ಪಕ್ಕ ನಿಂತು ಆಕ್ರೋಶ ಹೊರಹಾಕಿದ್ದಾರೆ. ಈಗ ಕೊರೊನಾ ಸಮಯ ಮನೆಯಿಂದ ಅನಾವಶ್ಯಕವಾಗಿ ಹೊರ ಬರಬಾರದು. ಆದರೆ ನಮಗೆ ಕೊರೊನಾಗಿಂತ ನೀರೇ ಮುಖ್ಯವಾಗಿದ್ದು, ಹೀಗಾಗಿ ಅನಿವಾರ್ಯವಾಗಿ ಬೀದಿಗಿಳಿಯಬೇಕಾಗಿದೆ ಎಂದು ರೈತರು ಮತ್ತು ಜೆಡಿಎಸ್ ಮುಖಂಡರು ಕಿಡಿಕಾರಿದರು.

  • ಕೆ.ಆರ್‌ ಪೇಟೆ ಜೆಡಿಎಸ್‍ನಲ್ಲೂ ಒಳಬೇಗುದಿ- ಪ್ರಚಾರಕ್ಕೆ ಜಿಲ್ಲೆಯ ತೆನೆ ನಾಯಕರು ಗೈರು

    ಕೆ.ಆರ್‌ ಪೇಟೆ ಜೆಡಿಎಸ್‍ನಲ್ಲೂ ಒಳಬೇಗುದಿ- ಪ್ರಚಾರಕ್ಕೆ ಜಿಲ್ಲೆಯ ತೆನೆ ನಾಯಕರು ಗೈರು

    ಮಂಡ್ಯ: ಕೆ.ಆರ್‌ ಪೇಟೆ ಕ್ಷೇತ್ರದ ಉಪಚುನಾವಣೆ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಅದರಲ್ಲೂ ಜೆಡಿಎಸ್ ಪಕ್ಷದ ಮಂಡ್ಯ ಜಿಲ್ಲೆಯ ಶಾಸಕರು, ಮುಖಂಡರನ್ನು ಹೊರತುಪಡಿಸಿ ಕೆ.ಆರ್ ಪೇಟೆ ಹಾಗೂ ಕೆಲ ರಾಜ್ಯದ ನಾಯಕರು ಫುಲ್ ಆಕ್ಟಿವ್ ಆಗಿದ್ದಾರೆ. ಆದರೆ ಜಿಲ್ಲೆ ನಾಯಕರು ಈ ಕಡೆ ತಲೆನೆ ಹಾಕ್ತಿಲ್ಲ.

    ಕೆ.ಆರ್‌ ಪೇಟೆ ಕ್ಷೇತ್ರವನ್ನು ಮತ್ತೆ ತಮ್ಮ ತೆಕ್ಕೆಗೆ ಹಾಕಿಕೊಳ್ಳಬೇಕು ಎಂಬ ಉದ್ದೇಶದಿಂದ ದಳಪತಿಗಳು ಫುಲ್ ಸ್ಟ್ರಾಟರ್ಜಿ ಮಾಡುತ್ತಿದ್ದಾರೆ. ಆದರೆ ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಕೆಲ ಮುಖಂಡರು ಪ್ರಚಾರಕ್ಕೆ ಇಲ್ಲಿವರೆಗೂ ಬಂದಿಲ್ಲ. ಸೋಮವಾರ ನಾಮಪತ್ರ ಸಲ್ಲಿಸುವ ಜೆಡಿಎಸ್ ಮೆರವಣಿಗೆ ಮಾಡುವ ವೇಳೆ ಮಾಜಿ ಸಚಿವ ಪುಟ್ಟರಾಜು ಕಾಣಿಸಿಕೊಂಡಿದರು. ಬಳಿಕ ನಾಮಪತ್ರ ಸಲ್ಲಿಸುವ ವೇಳೆ ಪುಟ್ಟರಾಜು ಕಾಣಿಸಿಕೊಂಡಿರಲಿಲ್ಲ.

    ಜಿಲ್ಲೆಯಲ್ಲಿ 6 ಮಂದಿ ಜೆಡಿಎಸ್ ಶಾಸಕರು ಇದರೂ ಪ್ರಚಾರ ಕೆಲಸಕ್ಕೆ ಮಾತ್ರ ಇದುರೆಗೂ ಬಂದಿಲ್ಲ. ಸದ್ಯ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ದೇವರಾಜು ಪರ ಪಕ್ಕದ ಶ್ರವಣಬೆಳಗೊಳ ಕ್ಷೇತ್ರದ ಬಾಲಕೃಷ್ಣ ಹಾಗೂ ಕೆ.ಆರ್‌ ಪೇಟೆ ನಾಯಕರು ಮಾತ್ರ ಪ್ರಚಾರದ ವೇಳೆ ಸಾಥ್ ನೀಡುತ್ತಿದ್ದಾರೆ.

    ಕೆ.ಆರ್‌ ಪೇಟೆ ಉಪಚುನಾವಣೆಗೆ ಜೆಡಿಎಸ್‍ನಿಂದ ಜಿಲ್ಲಾ ಪಂಚಾಯತಿ ಸದಸ್ಯ ಹೆಚ್.ಡಿ ಮಂಜು ಅವರಿಗೆ ಟಿಕೆಟ್ ನೀಡಬೇಕೆಂದು ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ಪುಟ್ಟರಾಜು ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರುಗಳಿಗೆ ಮುಖಂಡರಿಗೆ ಒಲವಿತ್ತು. ಆದರೆ ಜೆಡಿಎಸ್ ವರಿಷ್ಠರಾದ ಹೆಚ್.ಡಿ ದೇವೇಗೌಡ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ದೇವರಾಜು ಅವರಿಗೆ ಟಿಕೆಟ್ ನೀಡಿದರು. ಇದರಿಂದ ಬೇಸರಗೊಂಡ ಹಿನ್ನೆಲೆಯಲ್ಲಿ ಇಲ್ಲಿವರೆಗೂ ಮಂಡ್ಯ ಮುಖಂಡರು ಕೆಆರ್‍ಪೇಟೆಗೆ ಬಂದಿಲ್ಲ ಎನ್ನಲಾಗುತ್ತಿದೆ.

    ಒಂದೆಡೆ ಜಿಲ್ಲೆಯ ನಾಯಕರು ಪ್ರಚಾರದ ವೇಳೆ ಕಾಣಿಸಿಕೊಳ್ಳುತ್ತಿಲ್ಲ, ಇನ್ನೊಂದೆಡೆ ಈ ಡ್ಯಾಮೆಜ್‍ನ್ನು ಕಂಟ್ರೋಲ್ ಮಾಡಲು ಇಂದು ಮಾಜಿ ಸಚಿವ ರೇವಣ್ಣ ಜೆಡಿಎಸ್ ಅಭ್ಯರ್ಥಿ ಪರ ಮತ ಭೇಟೆ ಮಾಡಲು ಅಖಾಡಕ್ಕೆ ಧುಮ್ಮುಕುತ್ತಿದ್ದಾರೆ.

  • ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಧು ಬಂಗಾರಪ್ಪಗೆ ಭಾರೀ ಆಘಾತ!

    ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಧು ಬಂಗಾರಪ್ಪಗೆ ಭಾರೀ ಆಘಾತ!

    ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಜೆಡಿಎಸ್ ಅಧ್ಯಕ್ಷ ಮದನ್ ಹಾಗೂ 200ಕ್ಕೂ ಹೆಚ್ಚು ಪದಾಧಿಕಾರಿಗಳು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಿ ಬಿಜೆಪಿಗೆ ಸೇರಲು ಮುಂದಾಗಿದ್ದು, ಇದರಿಂದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪಗೆ ಭಾರೀ ಆಘಾತ ನೀಡಿದ್ದಾರೆ.

    ಈಗಾಗಲೇ ಸಾಮೂಹಿಕ ರಾಜೀನಾಮೆ ನೀಡಿದ್ದ ಮದನ್ ಹಾಗೂ ಇನ್ನಿತರ ಪದಾಧಿಕಾರಿಗಳು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವವನ್ನು ಮದನ್ ಅವರು ಸ್ವೀಕರಿಸಿದ್ದು, ಬುಧವಾರದಂದು 200ಕ್ಕೂ ಹೆಚ್ಚು ಪದಾಧಿಕಾರಿಗಳ ಸಹಿತ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ವಾರ ತೀರ್ಥಹಳ್ಳಿ ಜೆಡಿಎಸ್ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಿದ್ದರು.

    ತಾಲೂಕು ಘಟಕದ 30ಕ್ಕೂ ಹೆಚ್ಚು ಪದಾಧಿಕಾರಿಗಳಿಂದ ಪಕ್ಷದ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಾಗಿದೆ. ಕ್ಷೇತ್ರದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥ ಗೌಡರ ವರ್ತನೆಯಿಂದ ಬೇಸತ್ತ ನಾಯಕರು ಈ ನಿರ್ಧಾರ ಕೈಗೊಂಡಿದ್ದಾರೆ. ಮದನ್ ಅವರು ಶಾಂತವೇರಿ ಗೋಪಾಲಗೌಡರ ಮೊಮ್ಮಗನಾಗಿದ್ದು, ತಾಲೂಕಿನಲ್ಲಿ ಜೆಡಿಎಸ್ ಅಸ್ಥಿತ್ವಕ್ಕೆ ಮುಖ್ಯ ಕಾರಣರಾಗಿದ್ದ ಯುವ ನಾಯಕ ಎಂದು ಹೆಸರು ಪಡೆದವರು. ಅಷ್ಟೇ ಅಲ್ಲದೆ, 2013ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಆಗಿ ಮದನ್ ಅವರು ಸ್ಪರ್ಧಿಸಿದ್ದರು.

    ಲೋಕಸಭಾ ಚುನಾವಣೆ ಮುಂದಿರುವಾಗಲೇ ಜೆಡಿಎಸ್ ನಾಯಕರು ಈ ನಿರ್ಧಾರ ತೆಗೆದುಕೊಂಡಿರುವುದಕ್ಕೆ ಕ್ಷೇತ್ರದಲ್ಲಿ ಪಕ್ಷಕ್ಕೆ ಬಾರಿ ಪಟ್ಟು ಬೀಳಲಿದೆ. ಚುನಾವಣೆಗೆ ಬೆಂಬಲಿಸಬೇಕಾದ ನಾಯಕರೇ ಪಕ್ಷ ಬಿಟ್ಟು ವಿರೋಧ ಪಕ್ಷ ಸೇರುತ್ತಿರುವುದು ಜೆಡಿಎಸ್ ಪಾಳಯಕ್ಕೆ ತಲೆನೋವಾಗಿ ಪರಿಣಮಿಸಿದೆ.

  • ಪುಟಗೋಸಿ ನಿಗಮ ಮಂಡಳಿಗಾಗಿ ಕಾರ್ಯಕರ್ತರಿಂದ ಹೋರಾಟ ಮಾಡಿಸಿದ್ರಿ: ಸುಧಾಕರ್‌ಗೆ ಜೆಡಿಎಸ್ ಟಾಂಗ್

    ಪುಟಗೋಸಿ ನಿಗಮ ಮಂಡಳಿಗಾಗಿ ಕಾರ್ಯಕರ್ತರಿಂದ ಹೋರಾಟ ಮಾಡಿಸಿದ್ರಿ: ಸುಧಾಕರ್‌ಗೆ ಜೆಡಿಎಸ್ ಟಾಂಗ್

    ಚಿಕ್ಕಬಳ್ಳಾಪುರ: ಪುಟಗೋಸಿ ನಿಗಮ ಮಂಡಳಿಗಾಗಿ ನಿಮ್ಮ ಕಾರ್ಯಕರ್ತರಿಂದ ಹೋರಾಟ ಮಾಡಿಸಿದ್ರಿ ಎಂದು ಜಿಲ್ಲೆಯ ಜೆಡಿಎಸ್ ಮುಖಂಡರು ಶಾಸಕ ಡಾ ಕೆ.ಸುಧಾಕರ್ ವಿರುದ್ಧ ಹರಿಹಾಯ್ದಿದ್ದಾರೆ.

    ರಾಜ್ಯ ಮಾಲಿನ್ಯ ನಿಯಂತ್ರಣ (ಪಿಸಿಬಿ) ಮಂಡಳಿ ಅಧ್ಯಕ್ಷ ಸ್ಥಾನ ತಪ್ಪಿದ್ದರಿಂದ ಸಿಎಂ ಕುಮಾರಸ್ವಾಮಿ ವಿರುದ್ಧ ಶಾಸಕ ಸುಧಾಕರ್ ಟೀಕೆ ಮಾಡಿದ್ದರು. ಹೀಗಾಗಿ ಶಾಸಕರ ಮೇಲೆ ಜೆಡಿಎಸ್ ಮುಖಂಡರು ಕೆಂಡಾಮಂಡಲರಾಗಿದ್ದಾರೆ. ಇದನ್ನು ಓದಿ: ಸುಮಲತಾ ಪರ ಬ್ಯಾಟ್ ಮಾಡಿ ಸಿಎಂಗೆ ಶಾಸಕ ಸುಧಾಕರ್ ಟಾಂಗ್!

    ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೆಡಿಎಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯತಿ ಸದಸ್ಯ ರಾಜಾಕಾಂತ್, ಪುಟಗೋಸಿ ನಿಗಮಮಂಡಳಿಗಾ ನೀವು ಇಷ್ಟೆಲ್ಲಾ ಮಾಡಿದ್ದು..? ಸಿಎಂ ಕುಮಾರಸ್ವಾಮಿ, ಪಕ್ಷದ ವರಿಷ್ಠ ದೇವೇಗೌಡ ಅವರ ವಿರುದ್ಧ ಹಗುರವಾಗಿ ಮಾತನಾಡಿದ್ರೇ ಹೋರಾಟ ಮಾಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು. ಇದನ್ನು ಓದಿ: ಹೈಕಮಾಂಡಿಗೆ ಎಚ್ಚರಿಕೆ ನೀಡಿ ಜೆಡಿಎಸ್ ವಿರುದ್ಧ ಸುಧಾಕರ್ ಕೆಂಡಾಮಂಡಲ

    ಜಿಲ್ಲಾ ಪಂಚಾಯತಿ ಸದಸ್ಯ ಮುನೇಗೌಡ ಮಾತನಾಡಿ, ಶಾಸಕ ಸುಧಾಕರ್ ನೋಡಿ ಯಾರು ವೋಟ್ ಹಾಕ್ತಾರೆ..? ಅವರ ವರ್ತನೆಯಿಂದ ಕ್ಷೇತ್ರದ ಜನ ಬೇಸತ್ತಿದ್ದಾರೆ. ಶಾಸಕರು ಮುಂಬೈ, ದೆಹಲಿ ಎಂದು ಹೇಳುತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಿಂದೆ ಓಡಿ ಹೋಗುತ್ತಾರೆ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಮಂತ್ರಿಗಿರಿ ಬೇಕು ಅಂತ ಕಾರ್ಯಕರ್ತರಿಂದ ಹೋರಾಟ, ಕಲ್ಲು ತೂರಾಟ ಮಾಡಿಸಿದರು. ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡದಿದ್ದರೆ ಸಾಮೂಹಿಕ ರಾಜೀನಾಮೆ ಕೊಡುತ್ತೇವೆಂದು ಕಾಂಗ್ರೆಸ್ ನಾಯಕರ ಮೇಲೆ ಒತ್ತಡ ಹೇರಿದ್ದರು ಎಂದು ಶಾಸಕರಿಗೆ ತಿರುಗೇಟು ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಜಿ ಶಾಸಕ ಎಚ್.ಎಸ್ ಪ್ರಕಾಶ್ ಅಂತಿಮ ದರ್ಶನ ಪಡೆದ ಸಿಎಂ ಕುಮಾರಸ್ವಾಮಿ

    ಮಾಜಿ ಶಾಸಕ ಎಚ್.ಎಸ್ ಪ್ರಕಾಶ್ ಅಂತಿಮ ದರ್ಶನ ಪಡೆದ ಸಿಎಂ ಕುಮಾರಸ್ವಾಮಿ

    ಹಾಸನ: ಮಂಗಳವಾರದಂದು ನಿಧನರಾದ ಮಾಜಿ ಶಾಸಕ ಎಚ್.ಎಸ್ ಪ್ರಕಾಶ್ ಅವರ ಪ್ರಾರ್ಥಿವ ಶರೀರದ ಅಂತಿಮ ದರ್ಶನವನ್ನು ಸಿಎಂ ಕುಮಾರಸ್ವಾಮಿ ಅವರು ಪಡೆದಿದ್ದಾರೆ.

    ಬೆಳಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹಾಸನಕ್ಕೆ ಆಗಮಿಸಿದ ಸಿಎಂ, ಅಗಲಿದ ಹಿರಿಯ ನಾಯಕನಿಗೆ ಕೊನೆಯ ನಮನ ಸಲ್ಲಿಸಿದ್ದಾರೆ. ಈ ವೇಳೆ ಸಿಎಂ ಅವರೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಸಚಿವ ಹೆಚ್.ಡಿ.ರೇವಣ್ಣ ಭಾಗಿಯಾಗಿದ್ದರು.

    ಎಚ್.ಎಸ್ ಪ್ರಕಾಶ್ ಅವರು ಒಟ್ಟು 6 ಬಾರಿ ಹಾಸನ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿದ್ದರು. ಅದರಲ್ಲಿ 4 ಬಾರಿ ಗೆಲುವನ್ನು ಸಾಧಿಸಿದ್ದರು. ಮೊದಲ ಬಾರಿಗೆ 1994ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ 2004 ರಿಂದ 2018 ರ ವರೆಗೆ ಚುನಾವಣೆಯಲ್ಲಿ ಮೂರು ಬಾರಿ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದ್ದರು. ಸೌಮ್ಯ ಸ್ವಭಾವದ ರಾಜಕಾರಣಿಯಾಗಿದ್ದ ಪ್ರಕಾಶ್, ಜನತಾ ದಳ ಪರಿವಾರದ ನಾಯಕರಾದ ದೇವೇಗೌಡರು, ಸಿದ್ದರಾಮಯ್ಯ ಅವರೊಂದಿಗೆ ಆತ್ಮೀಯ ಒಡನಾಟ ಇಟ್ಟುಕೊಂಡಿದ್ದರು. ಈಗ ಎಚ್.ಎಸ್ ಪ್ರಕಾಶ್ ಅವರ ನಿಧನದಿಂದ ಜೆಡಿಎಸ್ ಪಕ್ಷ ಓರ್ವ ಉತ್ತಮ ರಾಜಕಾರಣಿಯನ್ನು ಕಳೆದುಕೊಂಡಿದೆ.

    ಮಾಜಿ ಶಾಸಕ ಎಚ್.ಎಸ್ ಪ್ರಕಾಶ್ ಅವರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನದ ನಂತರ, ಶಾಂತಿ ಗ್ರಾಮ ಹೋಬಳಿ ಕೆ. ಆಲದಹಳ್ಳಿಯ ಅವರ ಜಮೀನಿನಲ್ಲಿ ನೆರವೇರಲಿದೆ. ಇದಕ್ಕೂ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv