Tag: JDS meeting

  • ಎಚ್‍ಡಿಡಿ ಎದುರೇ ಜೆಡಿಎಸ್‍ನ ಅಲ್ಪಸಂಖ್ಯಾತ ಮುಖಂಡರ ನಡುವೆ ಜಟಾಪಟಿ

    ಎಚ್‍ಡಿಡಿ ಎದುರೇ ಜೆಡಿಎಸ್‍ನ ಅಲ್ಪಸಂಖ್ಯಾತ ಮುಖಂಡರ ನಡುವೆ ಜಟಾಪಟಿ

    ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಎದುರೇ ಅಲ್ಪಸಂಖ್ಯಾತ ಮುಖಂಡರು ಜಗಳಾಡಿಕೊಂಡ ಪ್ರಸಂಗ ಇಂದು ಜೆಪಿ ಭವನದಲ್ಲಿ ನಡೆದಿದೆ.

    ಎಚ್.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ಜೆಡಿಎಸ್ ಅಲ್ಪಸಂಖ್ಯಾತ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಮಾತನಾಡಿದ ಚಾಮರಾಜಪೇಟೆ ಪರಾಜಿತ ಅಭ್ಯರ್ಥಿ ಅಲ್ತಾಫ್ ಖಾನ್ ಅವರು, ಲೋಕಸಭೆ ಚುನಾವಣೆಯಲ್ಲಿ ನಮ್ಮವರೇ ಕಾಂಗ್ರೆಸ್‍ಗೆ ಮತ ಹಾಕಿಲ್ಲ. ಹೀಗಾಗಿ ಮೈತ್ರಿ ಅಭ್ಯರ್ಥಿ ಸೋತರು. ಚಾಮರಾಜಪೇಟೆ ಕ್ಷೇತ್ರದಲ್ಲಿ ನಮ್ಮವರೇ ಕಾಂಗ್ರೆಸ್ ಪರವಾಗಿ ನಿಂತಿಲ್ಲ ಎಂದು ಗಂಭೀರವಾಗಿ ಆರೋಪಿಸಿದರು.

    ಅಲ್ತಾಫ್ ಖಾನ್ ಅವರ ಮಾತಿಗೆ ತಿರುಗಿಬಿದ್ದ ಕಾರ್ಯಕರ್ತರು, ನೇರವಾಗಿ ಕಿಡಿಕಾರಿದರು. ಅಷ್ಟೇ ಅಲ್ಲದೆ ಭಾಷಣ ನಿಲ್ಲಿಸುವಂತೆ ಕೂಗಿದರು. ತಕ್ಷಣವೇ ವೇದಿಕೆ ಮೇಲಿದ್ದ ನಾಯಕರು ಅಲ್ತಾಫ್ ಅವರಿಗೆ ಕುಳಿತುಕೊಳ್ಳಲು ಸೂಚನೆ ನೀಡಿದರು. ಇತ್ತ ಎಚ್.ಡಿ.ದೇವೇಗೌಡ ಅವರು ಎಲ್ಲವನ್ನೂ ಮೌನವಾಗಿ ಕುಳಿತು ನೋಡಿದರು.

    ಈ ಘಟನೆಯಿಂದಾಗಿ ಮುಜುಗುರಕ್ಕೆ ಒಳಗಾದ ಜೆಡಿಎಸ್ ಮುಖಂಡರು ತಕ್ಷಣವೇ ಮಾಧ್ಯಮದವರನ್ನು ಹೊರಗೆ ಕಳುಹಿಸಿದರು. ವೇದಿಕೆಯ ಮೇಲೆ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್, ಮಾಜಿ ಶಾಸಕ ಮಧು ಬಂಗಾರಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಎಚ್.ಕೋನರೆಡ್ಡಿ ಸೇರಿಂದತೆ ಪ್ರಮುಖರು ಉಪಸ್ಥಿತರಿದ್ದರು.

    ಸಭೆ ಬಳಿಕ ಮಾತನಾಡಿದ ಎಚ್.ಡಿ.ದೇವೇಗೌಡ ಅವರು, ಲೋಕಸಭೆ ಚುನಾವಣೆಯಲ್ಲಿ ಸೋತ ಬಳಿಕ ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಮೈತ್ರಿ ಸರ್ಕಾರಕ್ಕೆ ಧಕ್ಕೆ ಬರದಂತೆ ಪಕ್ಷ ಸಂಘಟನೆ ಮಾಡಲಾಗುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ 37 ಸ್ಥಾನ ಮಾತ್ರ ಬಂತು. ಆದರೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಸಿಎಂಗೆ ಅವಕಾಶ ನೀಡಿದರು. ಕಾಂಗ್ರೆಸ್ ಹಿರಿಯ ನಾಯಕರು ಸಮ್ಮುಖದಲ್ಲಿ ಈ ತೀರ್ಮಾನ ಆಯಿತು. ಹೀಗಾಗಿ ಸರ್ಕಾರ ರಚನೆಗೊಂಡು ಒಂದು ವರ್ಷ ಪೂರೈಸಿದೆ ಎಂದು ಹೇಳಿದರು.

    ಇಬ್ಬರು ರಾಜೀನಾಮೆ ಕೊಟ್ಟರು. ಮತ್ತೆ ಐದಾರು ಶಾಸಕರು ಹೋಗುತ್ತಾರೆ ಅಂತ ಮಾತನಾಡುತ್ತಿದ್ದಾರೆ. ಸಿಎಂ ಅಮೆರಿಕದಲ್ಲಿ ಇದ್ದುಕೊಂಡು ಎಲ್ಲರನ್ನೂ ಸಮಾಧಾನ ಮಾಡುವ ಕೆಲಸ ಮಾಡುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್ ಅವರು ಕೂಡ ಎಲ್ಲವನ್ನೂ ಸರಿಪಡಿಸುತ್ತಿದ್ದಾರೆ ಎಂದು ತಿಳಿಸಿದರು.

    ಎರಡು-ಮೂರು ದಿನಗಳಲ್ಲಿ ಅಲ್ಪಸಂಖ್ಯಾತ ಘಟಕಗಳ ನೇಮಕ ಮಾಡುತ್ತೇವೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮನಸ್ಸಿಗೆ ನೋವಾಗಿರಬಹುದು. ಅವರಲ್ಲಿ ಫೈಟಿಂಗ್ ನೇಚರ್ ಇತ್ತು. ಪ್ರಧಾನಿ ನರೇಂದ್ರ ಮೋದಿ ಅವರಿಗಿಂತ ಹೆಚ್ಚು ಪ್ರಚಾರ ಮಾಡಿದ್ದಾರೆ. ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾದ ಮೇಲೆ ಹಲವಾರು ವಿಷಯಗಳನ್ನು ಎತ್ತಿಕೊಂಡು ಹೋರಾಟ ಮಾಡಿದರು. ಆದರೆ ಜನ ಮೋದಿ ಅವರಿಗೆ ಆಶೀರ್ವಾದ ಮಾಡಿದರು ಎಂದರು.

    ಪಿರಿಯಾಪಟ್ಟಣ ಶಾಸಕರಿಗೆ ಹಣದ ಆಮಿಷ ವಿಚಾರವಾಗಿ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ ಅವರು, ಇಂತಹ ವಿಚಾರದ ಬಗ್ಗೆ ನನಗೆ ಏನು ಕೇಳಬೇಡಿ. ಇಂತಹದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಹೇಳಿದರು.

  • ಗೌಡ್ರ ಪಾರ್ಟಿಗೆ ಜನ್ರು ಮೂರು ನಾಮ ಹಚ್ಚಿದ್ರು: ವೈಎಸ್‍ವಿ ದತ್ತಾ

    ಗೌಡ್ರ ಪಾರ್ಟಿಗೆ ಜನ್ರು ಮೂರು ನಾಮ ಹಚ್ಚಿದ್ರು: ವೈಎಸ್‍ವಿ ದತ್ತಾ

    – ಎಚ್‍ಡಿಡಿ ರಾಜಕೀಯ ಚದುರಂಗದಾಟ ಯಾರಿಗೂ ಗೊತ್ತಾಗಲ್ಲ
    – ಪಕ್ಷ ಸಂಘಟನೆಯ ಮೂರು ತಂತ್ರ ತಿಳಿಸಿದ ದತ್ತಾ

    ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪಕ್ಷಕ್ಕೆ ಜನರು ಮೂರು ನಾಮ ಹಚ್ಚಿದರು ಎಂದು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈಎಸ್‍ವಿ ದತ್ತಾ, ಲೋಕಸಭಾ ಫಲಿತಾಂಶ ನೆನೆದು ಕಿಡಿಕಾರಿದ್ದಾರೆ.

    ನಗರದ ಅರಮನೆ ಮೈದಾನದ ಶಿಷಾ ಮಹಲ್‍ನಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರವಿದ್ದರೂ ಸಿಎಂ ಜನರ ಸೇವೆ ಮಾಡುತ್ತಿದ್ದಾರೆ. ಅವರು ಸೋಲುತ ಗೆಲ್ಲುವ ತಂತ್ರ ಅನುಸರಿಸುತ್ತಿದ್ದಾರೆ. ಈ ಮೂಲಕ ರೈತರ ಸಾಲಮನ್ನಾ ಸೇರಿದಂತೆ ಅನೇಕ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಮೈತ್ರಿ ಪಕ್ಷದ ನಾಯಕರ ವಿಶ್ವಾಸ ಪಡೆಯುತ್ತಿದ್ದಾರೆ ಎಂದು ಹೇಳಿದರು.

    ವಿಪಕ್ಷ ನಾಯಕರು ಗ್ರಾಮ ವಾಸ್ತವ್ಯದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಗ್ರಾಮ ವಾಸ್ತವ್ಯ, ಜನತಾ ದರ್ಶನ ಎಂಬ ವಿಶಿಷ್ಟ ಕಾರ್ಯಕ್ರಮ ಪ್ರಾರಂಭ ಮಾಡಿದ್ದು ನಮ್ಮ ಪಕ್ಷ. ಈ ಬಗ್ಗೆ ನಮಗೆ ಹೆಮ್ಮೆ ಇದೆ. ಇದಕ್ಕೂ ಕೆಲವರು ಕೊಂಕು ಆಡುತ್ತಿದ್ದಾರೆ. ಮುಸ್ಲಿಂಮರಿಗೆ ಮೀಸಲಾತಿ ಕೊಟ್ಟವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು. ಅಹಿಂದ ಎನ್ನುವ ಕಲ್ಪನೆ ತಂದಿದ್ದು ಅವರೇ. ಆದರೆ ಯಾರ್ ಯಾರೋ ಅಹಿಂದಾ ಅಹಿಂದ ಅಂತ ಮಾತನಾಡುತ್ತಿದ್ದಾರೆ ಎನ್ನುವ ಮೂಲಕ ಪರೋಕ್ಷವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ದೇವೇಗೌಡರ ಕ್ಯಾರಂಬೋರ್ಡ್ ಆಟ ವಿರೋಧ ಪಕ್ಷದವರಿಗೆ ಗೊತ್ತೇ ಆಗದ ರೀತಿ ಇರುತ್ತದೆ. ಅವರು ಯಾವತ್ತೂ ಸೋತು ಮನೆಯಲ್ಲಿ ಕುಳಿತುಕೊಂಡಿಲ್ಲ. ಪಕ್ಷ ಸೋತರೂ ಕಾರ್ಯಕರ್ತರನ್ನು ಜೊತೆ ಜೊತೆಗೆ ಕರೆದುಕೊಂಡು ಹೋಗುತ್ತಾರೆ. ಜೆಡಿಎಸ್ ಮುಗಿದೇ ಹೋಯಿತು ಎನ್ನುವ ಸಮಯದಲ್ಲೂ ಇಬ್ಬರು ಶಾಸಕರನ್ನು ಇಟ್ಟುಕೊಂಡು ಪಕ್ಷ ಕಟ್ಟಿದರು. ಎಲ್ಲಿ ಕಳೆದುಕೊಳ್ಳುತ್ತೇವೋ ಅಲ್ಲಿಯೇ ಪಡೆಯಬೇಕು ಎನ್ನುವುದು ದೇವೇಗೌಡರ ಹಠ ಎಂದು ವೈಎಸ್‍ವಿ ದತ್ತಾ ತಿಳಿಸಿದರು.

    ನಿಮ್ಮ ಪಕ್ಷಕ್ಕೆ ಸೇರುತ್ತೇವೆ ಎಂದು ಬಿಜೆಪಿಯ ಅನೇಕ ಪದಾಧಿಕಾರಿಗಳು ನಿತ್ಯವೂ ಕರೆ ಮಾಡುತ್ತಿದ್ದಾರೆ. ಪ್ರಾದೇಶಿಕ ಪಕ್ಷ ಪ್ರಬಲವಾಗಿ ಬೆಳೆಯಬೇಕು. ನಾಡಿನ ವಿಚಾರದ ಬಗ್ಗೆ ಹೋರಾಟ ಮಾಡುವುದಕ್ಕೆ ಪ್ರಾದೇಶಿಕ ಪಕ್ಷದಿಂದ ಮಾತ್ರ ಸಾಧ್ಯ ಎನ್ನುವುದು ಅವರ ವಿಚಾರವಾಗಿದೆ. ಹೀಗಾಗಿ ಬಿಜೆಪಿ ಬಿಟ್ಟು ಜೆಡಿಎಸ್‍ಗೆ ಬರುತ್ತೇವೆ ಎನ್ನುತ್ತಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

    ಮೂರು ತಂತ್ರದಲ್ಲಿ ಪಕ್ಷ ಸಂಘಟನೆ ಮಾಡಬೇಕು ಎಂದು ವೈಎಸ್‍ವಿ ದತ್ತಾ ಅವರು ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಅವುಗಳಲ್ಲಿ ಮೊದಲನೇಯ ತಂತ್ರ ಭಾವ ಸ್ಪರ್ಶಿ. ಸಾಮಾಜಿಕ ಜಾಲತಾಣವನ್ನು ಮತ್ತಷ್ಟು ಬಲ ಪಡಿಸಿ ಪಕ್ಷ ಸಂಘಟನೆ ಮಾಡುವುದು. ತಲಸ್ಪರ್ಶಿ ತಂತ್ರ: ಪಕ್ಷದ ಚರಿತ್ರೆ, ಸರ್ಕಾರದ ಇತಿಹಾಸ, ಸಾಧನೆ ಬಗ್ಗೆ ಜನರಿಗೆ ತಲುಪಿಸಿ ಪಕ್ಷ ಸಂಘಟನೆ ಮಾಡುವುದು. ಬಹು ಸ್ಪರ್ಶಿ ತಂತ್ರ: ಪಕ್ಷ ಸಂಘಟನೆಗೆ ಪಾದಯಾತ್ರೆ ಮಾಡುವುದು ಎಂದು ತಿಳಿಸಿದರು.

    ಸಭೆಯ ನೇತೃತ್ವವನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ವಹಿಸಿಕೊಂಡಿದ್ದರು. ಶಾಸಕ ಗೋಪಾಲಯ್ಯ, ಪರಿಷತ್ ಸದಸ್ಯ ಶರವಣ ಸೇರಿದಂತೆ ಹಲವು ಮಾಜಿ ಶಾಸಕರು ಸಭೆಯಲ್ಲಿ ಉಪಸ್ಥಿತರಿದ್ದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಜೆಡಿಎಸ್ ಆಲದ ಮರವಲ್ಲ, ಗರಿಕೆ ಹುಲ್ಲು: ವೈ.ಎಸ್.ವಿ ದತ್ತಾ

    ಜೆಡಿಎಸ್ ಆಲದ ಮರವಲ್ಲ, ಗರಿಕೆ ಹುಲ್ಲು: ವೈ.ಎಸ್.ವಿ ದತ್ತಾ

    ಬೆಂಗಳೂರು: ಜೆಡಿಎಸ್ ಪಕ್ಷ ಆಲದ ಮರವಲ್ಲ, ಗರಿಕೆ ಹುಲ್ಲು. ಗರಿಕೆ ಹುಲ್ಲನ್ನು ಬುಡ ಸಮೇತ ಕಿತ್ತು ಹಾಕಲು ಸಾಧ್ಯವಿಲ್ಲ ಎಂದು ಜೆಪಿ ಭವನದ ಜೆಡಿಎಸ್ ಕಚೇರಿಯಲ್ಲಿ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಹೇಳಿದ್ದಾರೆ.

    ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಜೆಪಿ ಭವನದ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಸದ್ಯಸ್ಯರ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಮಾಜಿ ಶಾಸಕ ವೈ.ಎಸ್.ವಿ ದತ್ತಾ, ಜೆಡಿಎಸ್ ಪಕ್ಷ ಆಲದ ಮರವಲ್ಲ ಗರಿಕೆ ಹುಲ್ಲು. ನಮ್ಮ ಪಕ್ಷ ಗಟ್ಟಿಯಾಗಿದೆ. ಗರಿಕೆ ಹುಲ್ಲನ್ನು ಯಾರು ಬುಡದಿಂದ ಕೀಳಲು ಸಾಧ್ಯವಿಲ್ಲ, ಹಾಗೆಯೇ ಜೆಡಿಎಸ್ ಪಕ್ಷವನ್ನು ಉರಿಳಿಸಲು ಸಾಧ್ಯವಾಗಲ್ಲ ಎಂದರು. ಮೈತ್ರಿ ಸರ್ಕಾರ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿದೆ. ಮುಂದಿನ ಲೋಕಸಭೆ ಚುನಾವಣೆಗೆ ಎಲ್ಲರೂ ಸಜ್ಜಾಗಬೇಕು. ಮುಂದಿನ ದಿನಗಳಲ್ಲಿ ಸ್ವ ಸಾಮಥ್ರ್ಯದಿಂದ ಪಕ್ಷ ಅಧಿಕಾರಕ್ಕೆ ಬರುವಂತೆ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಹೇಳಿದರು.

    ಜನತಾದಳ ಪಕ್ಷಕ್ಕೆ 40 ವರ್ಷಗಳ ಇತಿಹಾಸ ಇದೆ ಅಂತ ಇನ್ನು ಮುಂದೆ ಕಾರ್ಯಕರ್ತರು ಹೇಳಿಕೊಳ್ಳಬೇಕು. ದೇಶಕ್ಕೆ ಪ್ರಧಾನಿ, ರಾಜ್ಯಕ್ಕೆ ಮುಖ್ಯಮಂತ್ರಿ ಕೊಟ್ಟ ಪಕ್ಷ ಅಂತ ಹೆಮ್ಮೆಯಿಂದ ಹೇಳಿಕೊಳ್ಳಬೇಕು. ನಮ್ಮ ಪಕ್ಷಕ್ಕೆ ಬೇರೆ ಪಕ್ಷಗಳಿಗಿಂತ ಹೆಚ್ಚು ವಿಶೇಷತೆಯಿದೆ. ಕಾಂಗ್ರೆಸೇತರ ಪಕ್ಷ ಸ್ಥಾಪನೆಗೆ ಹುಟ್ಟಿದ್ದು ಜೆಡಿಎಸ್. ಜೈಲಿನಲ್ಲಿ ಹುಟ್ಟಿದ ಪಕ್ಷ, ಕೃಷ್ಣನಂತೆ ಹುಟ್ಟಿದ ಪಕ್ಷ ಇದು ಎಂದ ಪಕ್ಷದ ಇತಿಹಾಸವನ್ನು ನೆನಪು ಮಾಡಿಕೊಂಡರು.

    ನಮಗೆ ಸಮ್ಮಿಶ್ರ ಸರ್ಕಾರದ ಅನುಭವ ಹೊಸತಲ್ಲ. ಧರ್ಮಸಿಂಗ್, ಯಡಿಯೂರಪ್ಪ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ಮಾಡಿದ ಅನುಭವ ಇದೆ. ಯಡಿಯೂರಪ್ಪ ಜೊತೆ ಮಾಡಿದ ಸಮ್ಮಿಶ್ರ ಸರ್ಕಾರ ಅತ್ಯಂತ ಕೆಟ್ಟ ಅನುಭವ ನೀಡಿದೆ. ಕೋಮುವಾದಿ, ಸಂವಿಧಾನ ವಿರೋಧಿ, ಸರ್ವಾಧಿಕಾರಿ ಹೊಂದಿದ ಸರ್ಕಾರವನ್ನ ಕೆಡವಲು ಈಗ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ರಾಷ್ಟ್ರೀಯ ತುರ್ತು, ರಾಷ್ಟ್ರೀಯ ಅನಿವಾರ್ಯದ ದೃಷ್ಟಿಯಿಂದ ಇಂದು ಜಾತ್ಯಾತೀತ ಪಕ್ಷಗಳು ಒಟ್ಟಾಗಿ ಸೇರಲು ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

    ಕೇವಲ 30-40 ಶಾಸಕರಿಗೆ ಇದು ಸೀಮಿತ ಆಗಬಾರದು. ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ಕೊಡುತ್ತಾ ಪಕ್ಷ ಕಟ್ಟುವ ಕೆಲಸ ಮಾಡಬೇಕು. ಪಕ್ಷದ ಕಾರ್ಯಕರ್ತರಿಗೆ ಪಕ್ಷದ ವರಿಷ್ಠರು ಸ್ಥಾನಮಾನ ನೀಡಬೇಕು. ಈ ನಿಟ್ಟಿನಲ್ಲಿ ವರಿಷ್ಠರು ಚಿಂತನೆ ಮಾಡಿ ಅಧಿಕಾರ ಹಂಚಿಕೆ ಮಾಡಿದರೆ ಒಳ್ಳೆಯದು. ಕಾರ್ಯಕರ್ತರು ಗೊಂದಲಕ್ಕೆ ಈಡಾಗದೆ ಪಕ್ಷದ ಅಭಿವೃದ್ಧಿಗೆ ಕೆಲಸ ಮಾಡಬೇಕು. ಫ್ಲೆಕ್ಸ್ ಹುಚ್ಚಿನಿಂದ ಕಾರ್ಯಕರ್ತರು ಹೊರಗೆ ಬರಬೇಕು. ಹಿಂದಿನ ನಾಯಕರು ಹೋರಾಟದಿಂದ ಹುಟ್ಟುತ್ತಿದ್ದರು, ಈಗಿನ ನಾಯಕರು ಫ್ಲೆಕ್ಸ್ ನಲ್ಲಿ ಹುಟ್ಟುವ ಸ್ಥಿತಿ ನಿರ್ಮಾಣವಾಗಿದೆ. ಇದನ್ನ ಕಾರ್ಯಕರ್ತರು ಬಿಟ್ಟು ಪಕ್ಷದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ವೈ.ಎಸ್.ವಿ ದತ್ತಾ ಕರೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv