Tag: jds MLA

  • ದಸರಾ ವೇದಿಕೆಯಲ್ಲಿ ಜೆಡಿಎಸ್ ಶಾಸಕರನ್ನ ಕೈ ಹಿಡಿದು ಕರೆದೊಯ್ದ ಬಿಎಸ್‍ವೈ

    ದಸರಾ ವೇದಿಕೆಯಲ್ಲಿ ಜೆಡಿಎಸ್ ಶಾಸಕರನ್ನ ಕೈ ಹಿಡಿದು ಕರೆದೊಯ್ದ ಬಿಎಸ್‍ವೈ

    ಮೈಸೂರು: ದಸರಾ ವೇದಿಕೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಜೆಡಿಎಸ್ ಶಾಸಕರನ್ನ ಕೈ ಹಿಡಿದು ಕರೆದೊಯ್ದರು. ಮುಖ್ಯಮಂತ್ರಿಗಳ ಈ ನಡೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

    ಯುವ ದಸರಾ ಕಾರ್ಯಕ್ರಮದ ಬಳಿಕ ಸಿಎಂ ಯಡಿಯೂರಪ್ಪ ಅವರು ವೇದಿಕೆಯಿಂದ ಕೆಳಗೆ ಇಳಿಯುತ್ತಿದ್ದರು. ಈ ವೇಳೆ ಪಿರಿಯಾಪಟ್ಟಣ ಜೆಡಿಎಸ್ ಶಾಸಕ ಕೆ.ಮಹದೇವ್ ಅವರ ಕೈ ಹಿಡಿದು ಮುಂದೆ ಸಾಗಿಸಿದರು. ವೇದಿಕೆಯಿಂದ ಕೆಳಗೆ ಇಳಿಯುವಾಗಲೂ ಸಿಎಂ ಶಾಸಕರ ಹೆಗಲ ಮೇಲೆ ಕೈ ಹಾಕಿಯೇ ಹೆಜ್ಜೆ ಹಾಕಿದರು.

    ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸ್ಥಳೀಯ ಬಿಜೆಪಿ ನಾಯಕರು ಇದ್ದರು. ಅವರನ್ನೆಲ್ಲ ಬಿಟ್ಟು ಸಿಎಂ ಯಡಿಯೂರಪ್ಪ ಅವರು ಶಾಸಕ ಕೆ.ಮಹದೇವ್ ಅವರ ಕೈ ಹಿಡಿದು, ಹೆಗಲ ಮೇಲೆ ಕೈ ಹಾಕಿ ವೇದಿಕೆಯಿಂದ ನಿರ್ಗಮಿಸಿದ್ದು ಕುತೂಹಲ ಮೂಡಿಸಿದೆ.

    ಈ ಹಿಂದೆ ಶಾಸಕ ಮಹದೇವ್ ಅವರು ಜೆಡಿಎಸ್ ತೊರೆಯಲು ಮುಂದಾಗಿದ್ದು, ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಊಹಾಪೋಹಗಳನ್ನು ತಳ್ಳಿಹಾಕಿದ್ದ ಶಾಸಕರು, ನಾನು ಜೆಡಿಎಸ್ ಪಕ್ಷ ಬಿಟ್ಟು ಹೋಗುವ ಮಾತೇ ಇಲ್ಲ ಎಂದು ಹೇಳಿದ್ದರು. ಆದರೆ ಈಗ ಅವರನ್ನು ಪಕ್ಷಕ್ಕೆ ಸೆಳೆಯಲು ಸಿಎಂ ಯಡಿಯೂರಪ್ಪ ಪ್ಲ್ಯಾನ್ ರೂಪಿಸಿದ್ರಾ ಎಂಬ ಮಾತುಗಳು ಕೇಳಿ ಬರುತ್ತಿವೆ.

  • ಬಿಎಸ್‍ವೈ ಭೇಟಿಯಾಗಿ ಶುಭ ಕೋರಿದ ಜೆಡಿಎಸ್ ಶಾಸಕ ಲಿಂಗೇಶ್

    ಬಿಎಸ್‍ವೈ ಭೇಟಿಯಾಗಿ ಶುಭ ಕೋರಿದ ಜೆಡಿಎಸ್ ಶಾಸಕ ಲಿಂಗೇಶ್

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಹಾಸನ ಜಿಲ್ಲೆ ಬೇಲೂರು ಕ್ಷೇತ್ರದ ಜೆಡಿಎಸ್ ಶಾಸಕ ಕೆ.ಎಸ್.ಲಿಂಗೇಶ್ ಭೇಟಿಯಾಗಿ ಶುಭ ಕೋರಿದ್ದಾರೆ.

    ಪ್ರತಿಷ್ಠಿತ ಪುಷ್ಪಗಿರಿ ಸೋಮಶೇಖರ ಸ್ವಾಮೀಜಿ ನೇತೃತ್ವದಲ್ಲಿ ಶಾಸಕರು ಸಿಎಂ ನಿವಾಸಕ್ಕೆ ಆಗಮಿಸಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿಯು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಕೆ.ಎಸ್.ಲಿಂಗೇಶ್ ಅವರು ಬಿಜೆಪಿ ಸೇರುತ್ತಾರಾ ಎಂಬ ಪ್ರಶ್ನೆ ಎದ್ದಿದೆ.

    ಈ ಹಿಂದೆ ಆಪರೇಷನ್ ಕಮಲದಲ್ಲಿ ಶಾಸಕ ಲಿಂಗೇಶ್ ಸಿಲುಕಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದೀಗ ಸೋಮಶೇಖರ ಸ್ವಾಮೀಜಿ ಜೊತೆಗೆ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿರುವುದು ಇದಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ.

    ಬಿ.ಎಸ್.ಯಡಿಯೂರಪ್ಪ ಅವರು ಆಪರೇಷನ್ ಕಮಲ ಮುಂದುವರಿಸಿದರಾ? ಶಾಸಕ ಲಿಂಗೇಶ್ ಅವರು ಇದಕ್ಕೆ ಒಳಗಾಗಿದ್ದಾರಾ ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.

  • ಔಷಧಿ ಮಳಿಗೆಯಲ್ಲಿ ಬೋರ್ಡ್ ರಾಜಕೀಯ- ಫೋಟೋ ಇಲ್ಲವೆಂದು ಕಿತ್ತಾಟ

    ಔಷಧಿ ಮಳಿಗೆಯಲ್ಲಿ ಬೋರ್ಡ್ ರಾಜಕೀಯ- ಫೋಟೋ ಇಲ್ಲವೆಂದು ಕಿತ್ತಾಟ

    ಬೆಂಗಳೂರು: ನಗರದಲ್ಲಿ ಬೋರ್ಡ್ ರಾಜಕಾರಣಕ್ಕೆ ಅಂತ್ಯ ಸಿಕ್ಕಿಲ್ಲ. ಬಡವರ ಔಷಧಿ ಮಳಿಗೆಯಲ್ಲಿ ನನ್ನ ಫೋಟೋ ಇಲ್ಲ ಎಂದು ಕಿತ್ತಾಟ ಶುರುವಾಗಿದೆ. ರಾಜಕಾರಣಿಗಳ ಜಗಳ ಜನ ವಿರೋಧಕ್ಕೆ ಗುರಿಯಾಗಿದೆ.

    ಬೆಂಗಳೂರಿನ ದಾಸರಹಳ್ಳಿಯಲ್ಲಿ ಬೋರ್ಡ್, ಫೋಟೋ ರಾಜಕೀಯ ಜೋರಾಗಿದೆ. ಕೇಂದ್ರ ಸಚಿವ ಸದಾನಂದಗೌಡ, ಮಾಜಿ ಶಾಸಕ ಮುನಿರಾಜು ಫೋಟೋ ಇದೆ. ನನ್ನ ಫೋಟೋ ಇಲ್ಲ ಎಂದು ಸ್ಥಳೀಯ ಶಾಸಕರೊಬ್ಬರು ಬೋರ್ಡನ್ನೇ ಕಿತ್ತು ಹಾಕಿಸಿದ್ರಂತೆ.

    ದಾಸರಹಳ್ಳಿ ಪ್ರಧಾನ ಮಂತ್ರಿ ಜನೌಷಧಿ ಮಳಿಗೆಯಲ್ಲಿ ತಮ್ಮ ಫೋಟೋ, ಹೆಸರು ಹಾಕಿಸಿಲ್ಲ ಎಂದು ಬಿಬಿಎಂಪಿ ಪ್ರಹರಿ ವಾಹನ ಬಳಸಿ ಸ್ಥಳೀಯ ಜೆಡಿಎಸ್ ಶಾಸಕ ಮಂಜುನಾಥ್ ಬೋರ್ಡ್ ಕಿತ್ತು ಹಾಕಿಸಿದ್ದಾರೆ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ.

    ಎರಡು ದಿನಗಳ ಹಿಂದೆಯಷ್ಟೇ ಕೇಂದ್ರ ಸಚಿವ ಸದಾನಂದ ಗೌಡ ಈ ಔಷಧಾಲಯ ಉದ್ಘಾಟಿಸಿದ್ದು, ಈ ವೇಳೆ ಸ್ಥಳೀಯ ಜೆಡಿಎಸ್ ಶಾಸಕ ಮಂಜುನಾಥ್ ಅವರನ್ನು ಈ ಕಾರ್ಯಕ್ರಮಕ್ಕೆ ಕರೆದಿಲ್ಲ. ಜೊತೆಗೆ ಮಾಜಿ ಶಾಸಕರ ಫೋಟೋ ಹಾಕಿರೋದಕ್ಕೆ ಹೀಗೆ 10 ಸಾವಿರ ಬೆಲೆ ಬಾಳುವ ಎರಡು ಬೋರ್ಡ್ ಕಿತ್ತು ಹಾಕಿಸಿದ್ದಾರೆ ಎಂದು ವ್ಯಾಪಾರಿ ಶಿವಪ್ರಸಾದ್ ಆರೋಪಿಸಿದ್ದಾರೆ.

    ಬೋರ್ಡ್, ಫ್ಲೆಕ್ಸ್ ನಿಷೇಧವಿದೆ ಪಾಲಿಕೆ ಮೇಲಾಧಿಕಾರಿ ಹೇಳಿದ್ರು ರಿಮೂವ್ ಮಾಡ್ತಾ ಇದ್ದೇವೆ ಎಂದು ಪ್ರಹರಿ ಸಿಬ್ಬಂದಿ ಹೇಳ್ತಾರೆ.

    ಬಡವರ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಫೋಟೋ ಹಾಕಲು ಅನುಮತಿ ಇದೆ. ಆದರೆ ಉಳಿದ ರಾಜಕಾರಣಿಗಳು ನಮ್ಮ ಫೋಟೋ ಇಲ್ಲ ಎಂದು ಚಿಂತೆ ಮಾಡಿಯೇ ಘಟನೆ ನಡೆದಿದ್ದರೆ ಇದು ವಿಪರ್ಯಾಸವೇ ಸರಿ.

  • ಬಿಜೆಪಿ ಒಬ್ಬ ಶಾಸಕನನ್ನ ಸೆಳೆದ್ರೆ, ಕೌಂಟರ್ ಕೊಡೋದಕ್ಕೆ ನಾವ್ ರೆಡಿ: ಸಾ.ರಾ.ಮಹೇಶ್

    ಬಿಜೆಪಿ ಒಬ್ಬ ಶಾಸಕನನ್ನ ಸೆಳೆದ್ರೆ, ಕೌಂಟರ್ ಕೊಡೋದಕ್ಕೆ ನಾವ್ ರೆಡಿ: ಸಾ.ರಾ.ಮಹೇಶ್

    -ನಾನು 20 ವರ್ಷ ಬಿಜೆಪಿಯಲ್ಲಿದ್ದವನು, ನನಗೆ ಬಹಳಷ್ಟು ಶಾಸಕರು ಆತ್ಮೀಯರು

    ಮೈಸೂರು: ಬಿಜೆಪಿ ನಮ್ಮ ಓರ್ವ ಶಾಸಕರನ್ನು ಸೆಳೆದ್ರೆ, ಕೌಂಟರ್ ಕೊಡೋದಕ್ಕೆ ನಾವು ರೆಡಿಯಾಗಿದ್ದೇವೆ ಎಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಹಾಗೂ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹೇಳಿದ್ದಾರೆ.

    ಸಮ್ಮಿಶ್ರ ಸರ್ಕಾರ ರಚನೆಯಾಗಿ ಕುಮಾರಸ್ವಾಮಿ ಅವರು ಅಭಿವೃದ್ಧಿಪರವಾದ ಆಡಳಿತನ್ನು ರಾಜ್ಯದ ಜನತೆಗೆ ನೀಡುತ್ತಿದ್ದಾರೆ. ಆದ್ರೆ ಸರ್ಕಾರ ಉರುಳಿಸಲು ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಜನರಲ್ಲಿ ಗೊಂದಲ ಹುಟ್ಟಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಬಿಜೆಪಿಯ 10 ಶಾಸಕರು ನನ್ನ ಸಂಪರ್ಕದಲ್ಲಿರೋ ವಿಷಯ ಜೆಡಿಎಸ್ ವರಿಷ್ಠರಿಗೆ ಗೊತ್ತಿದೆ. ನಾನು ಸಹ 20 ವರ್ಷ ಬಿಜೆಪಿಯಲ್ಲಿ ಇದ್ದವನು. ಹಲವು ಶಾಸಕರು ನನಗೆ ಆತ್ಮೀಯರು ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

    ಇದೂವರೆಗೆ ನಮ್ಮ ಯಾವ ಶಾಸಕರನ್ನು ಬಿಜೆಪಿ ಸಂಪರ್ಕಿಸಿಲ್ಲ. ಒಂದು ವೇಳೆ ಸಂಪರ್ಕಿಸಿದರೂ ನಮ್ಮ ಯಾವ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗುವುದಿಲ್ಲ. ನಮ್ಮದು ಪ್ರಾದೇಶಿಕ ಪಕ್ಷವೇ ಆಗಿರಬಹುದು. ಆದ್ರೆ ನಾವು ಸುಮ್ಮನೆ ಕುಳಿತಿಲ್ಲ. ಬಿಜೆಪಿ ನಮ್ಮ ಒಬ್ಬ ಶಾಸಕನನ್ನು ಸೆಳೆದ್ರೆ, ಕೌಂಟರ್ ಕೊಡೋದಕ್ಕೆ ಸಿದ್ಧವಾಗಿದ್ದೇವೆ. ಅಲ್ಲಿ ಪ್ರಾದೇಶಿಕ ಪಕ್ಷ ಮತ್ತು ನಾಯಕರು ಶಕ್ತಿ ಏನು ಎಂಬುವುದನ್ನು ತೋರಿಸುತ್ತೇವೆ ಎಂದು ಗುಡುಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪಂಚಮಿಯನ್ನ ಸಂಪ್ರದಾಯಬದ್ಧವಾಗೇ ಮದ್ವೆಯಾಗಿದ್ದಾರೆ- ಇಕ್ಬಾಲ್ ಅನ್ಸಾರಿ ತಾಯಿ

    ಪಂಚಮಿಯನ್ನ ಸಂಪ್ರದಾಯಬದ್ಧವಾಗೇ ಮದ್ವೆಯಾಗಿದ್ದಾರೆ- ಇಕ್ಬಾಲ್ ಅನ್ಸಾರಿ ತಾಯಿ

    ಕೊಪ್ಪಳ: ಇದು ಅಣ್ಣತಮ್ಮಂದಿರ ಜಗಳ. ಅವನು ಎರಡು ಮದುವೆನೂ ಆಗ್ತಾನೆ, ನಾಲ್ಕೂ ಆಗ್ತಾನೆ. ಯಾರು ಕೇಳ್ತಾರೆ? ಅವನು ಸಂಪಾದನೆ ಮಾಡಿ ಹೆಂಡತಿ- ಮಕ್ಕಳನ್ನ ಸಾಕ್ತಾನೆ. ಹೀಗಾಗಿ ಆ ಹುಡ್ಗಿಯನ್ನು ಮದ್ವೆ ಆಗಿರೋದು ತಪ್ಪೇನಿಲ್ಲ. ಪಂಚಮಿಯನ್ನು ಅನ್ಸಾರಿ ಸಂಪ್ರದಾಯಸ್ಥವಾಗಿ ಮದ್ವೆಯಾಗಿದ್ದಾರೆ ಅಂತಾ ಗಂಗಾವತಿ ಜೆಡಿಎಸ್ ಶಾಸಕ ಇಕ್ಬಾಲ್ ಅನ್ಸಾರಿ ತಾಯಿ ಅಹಮದಿ ಬೇಗಂ ಮಗನ ಪರವಾಗಿ ಹೇಳಿಕೆ ನೀಡಿದ್ದಾರೆ.

    ಶಾಸಕ ಇಕ್ಬಾಲ್ ಅನ್ಸಾರಿ ನಟಿ ಪಂಚಮಿಯೊಂದಿಗಿನ 2ನೇ ಸಂಬಂಧದ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಎರಡೂ ಕುಟುಂಬ ಒಪ್ಪಿಗೆ ಸೂಚಿಸಿ ಮದ್ವೆ ಮಾಡ್ಕೊಂಡಿದ್ದಾರೆ. ಪಂಚಮಿ ಒಪ್ಪಿಗೆಯಂತೆಯೇ ಮದ್ವೆ ಮಾಡಿಕೊಂಡು ಜೀವನ ನಡೆಸ್ತಾ ಇದ್ದಾರೆ. ತಾವು ಸಂಪಾದನೆ ಮಾಡಿದ ಆಸ್ತಿಯನ್ನು ಕೊಟ್ಟಿದ್ದಾರೆ. ಪಿತ್ರಾರ್ಜಿತ ಆಸ್ತಿಯನ್ನು ಕೊಟ್ಟಿಲ್ಲ ಅಂತಾ ಹೇಳಿದ್ದಾರೆ.

    ಅನ್ಸಾರಿಯವರನ್ನು ರಾಜಕೀಯವಾಗಿ ತುಳಿಯಲು ಯತ್ನ ಮಾಡ್ತಿದ್ದಾರೆ. ಬೇರೆ ಬೇರೆ ಚಟುವಟಿಕೆಗೆ ಬಿದ್ದು ಆಸ್ತಿ ಹಾಳು ಮಾಡಿಕೊಂಡು ಬಳಿಕ ಈಗ ಹಣ ಕೇಳ್ತಿದ್ದಾರೆ. ನ್ಯಾಯಾಲಯದ ಮುಂದೆ ಹೋಗಿ ಪದೇ ಪದೇ ಗಲಾಟೆ ಮಾಡ್ತಾರೆ. ತಂದೆಯವರು ಜೀವಂತವಾಗಿದ್ದಾಗ ಸಮಾನವಾಗಿ ಹಂಚಿಕೆ ಮಾಡಿದ್ರು. ಆದ್ರೂ ಕೂಡ ಅನ್ಸಾರಿ ಅವರಿಗೆಲ್ಲ ಹಣವನ್ನು ನೀಡಿ ಆಸ್ತಿ ಮಾಡಿಕೊಟ್ಟಿದ್ರು. ಸಹೋದರರು ದಾರಿ ತಪ್ಪಿ ತಮ್ಮ ಆಸ್ತಿಯನ್ನು ಕಳೆದುಕೊಂಡು ಆರೋಪ ಮಾಡ್ತಾ ಇದ್ದಾರೆ. ಆದ್ರೂ ಅನ್ಸಾರಿ ತಿಂಗಳಿಗೆ 75 ಸಾವಿರ ಜೀವನಾಂಶ ಕೊಡ್ತಾ ಇದ್ರು. ತಮ್ಮಂದಿರ ಕುಟುಂಬಕ್ಕೆ ಅನ್ಯಾಯ ಆಗದೇ ಇರಲಿ ಅಂತ ಹಣ ಕೊಡ್ತಿದ್ದಾರೆ. ರಾಜಕೀಯ ಪ್ರೇರಿತವಾಗಿ ಈ ಆರೋಪ ಮಾಡ್ತಿದ್ದಾರೆ ಅಂತಾ ಹೇಳಿದ್ರು.

    https://www.youtube.com/watch?v=OKRdXeGYwnk

    ಜೆಡಿಎಸ್ ಶಾಸಕ ಇಕ್ಬಾಲ್ ಅನ್ಸಾರಿ ಮನೆಯಲ್ಲಿದ್ದುಕೊಂಡೇ ಮಾಧ್ಯಮದ ಮುಂದೆ ಬರಲ್ಲ. ನನ್ನ ಪರವಾಗಿ ತನ್ನ ತಾಯಿ ಹೇಳಿಕೆ ನೀಡುತ್ತಾರೆ ಅಂತಾ ಮನೆಯ ಕೋಣೆಯಲ್ಲಿಯೇ ಕುಳಿತು ತಾಯಿಯನ್ನು ಮಾಧ್ಯಮಗಳಿಗೆ ಹೇಳಿಕೆ ಕೊಡಲು ಕಳುಹಿಸಿದ್ದಾರೆ ಎನ್ನಲಾಗಿದೆ.

    ಎರಡನೇ ಮದುವೆ ಬಯಲಾಗಿದ್ದು ಹೇಗೆ?: ಶಾಸಕ ಇಕ್ಬಾಲ್ ಅನ್ಸಾರಿ ಮೊದಲ ಹೆಂಡತಿಗೆ ಗೊತ್ತಿಲ್ಲದಂತೆ ನಟಿ ಜೊತೆ ಸಂಸಾರ ನಡೆಸಿದ್ದು, ಅಣ್ಣ-ತಮ್ಮಂದಿರ ಆಸ್ತಿ ಜಗಳದಲ್ಲಿ ಶಾಸಕರ ಎರಡನೇ ಮದುವೆ ಬಯಲಾಗಿದೆ. ಇಕ್ಬಾಲ್ ಅನ್ಸಾರಿಗೆ ಇಡೀ ಜಿಲ್ಲೆಯಾದ್ಯಂತ 30ಕ್ಕೂ ಹೆಚ್ಚು ಬಾರ್‍ಗಳು ಹಾಗೂ ವೈನ್ ಶಾಪ್‍ಗಳಿವೆ. ಆಸ್ತಿಯನ್ನ ಸಹೋದರರಿಗೆ ಹಂಚದೆ ಇಬ್ಬರು ಹೆಂಡತಿಯ ಹೆಸರಿಗೆ ರಿಜಿಸ್ಟ್ರೇಷನ್ ಮಾಡಿದಾಗ 2ನೇ ಸಂಬಂಧ ಬಯಲಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಶಾಸಕ ಇಕ್ಬಾಲ್ ಅನ್ಸಾರಿ ವಿರುದ್ಧ ಇಬ್ಬರು ಸಹೋದರರು ಸಿಟ್ಟಿಗೆದ್ದಿದ್ದಾರೆ.

    ಮೊನ್ನೆ ಮೊನ್ನೆಯಷ್ಟೇ ಇಕ್ಬಾಲ್ ಅನ್ಸಾರಿಯವರ ಬಾರ್‍ಗಳಲ್ಲಿ ಡಬಲ್ ರೇಟ್ ತೆಗೆದುಕೊಳ್ತಾರೆ. ಎಂಆರ್‍ಪಿಗಿಂತ ಡಬಲ್ ವಸೂಲಿ ಮಾಡ್ತಾರೆ ಅಂತ ಪಬ್ಲಿಕ್ ಟಿವಿ ಸುದ್ದಿ ಬಿತ್ತರಿಸಿತ್ತು. ಆ ಸಮಯದಲ್ಲಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತು ಪತ್ನಿ ತಬಸುಮಾ ಅವರ ಒಡೆತನದ ಬಾರ್‍ಗಳ ಪಟ್ಟಿ ಮಾಡ್ತಿದ್ದಾಗಲೇ ಪಂಚಮಿಗೂ ಬಾರ್ ಲೈಸೆನ್ಸ್ ವರ್ಗಾಯಿಸಿರೋದು ಬೆಳಕಿಗೆ ಬಂತು. ಇದರ ಜಾಡು ಹಿಡಿದಾಗ ಶಾಸಕ ಇಕ್ಬಾಲ್ ಅನ್ಸಾರಿ ಅವರ ಅಸಲಿ ಬಣ್ಣ ಬಯಲಾಗಿದೆ. 2016 ಅಂದ್ರೆ ಕಳೆದ ವರ್ಷ ಜೂನ್ 27ರಂದು ಶ್ರೀಮತಿ ಪಂಚಮಿ, ದಿವಂಗತ ತಂದೆ ಗುರುಸ್ವಾಮಿ ಅನ್ನೋರಿಗೆ ಬಾರ್ ಮಾಲಿಕತ್ವವನ್ನ ಕೊಟ್ಟಿರೋ ದಾಖಲೆ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    https://www.youtube.com/watch?v=GVuQKk9L0VA

    2013ರ ಚುನಾವಣಾ ಪ್ರಚಾರದಲ್ಲೇ ಅನ್ಸಾರಿ ಬಣ್ಣ ಬಯಲಾಗಿ ಈಗ ಮೊದಲ ಪತ್ನಿ ಸಿಟ್ಟಿಗೆದ್ದಿದ್ದಾರೆ. ನಟಿ ಪಂಚಮಿ ಶಾಸಕ ಇಕ್ಬಾಲ್ ಅನ್ಸಾರಿ ಪರವಾಗಿ ಚುನಾವಣೆ ಪ್ರಚಾರದಲ್ಲಿ ತೊಡಗಿದ್ರು. ಗಂಡನ ಎರಡನೇ ಸಂಬಂಧದ ಬಗ್ಗೆ ಗೊತ್ತಾಗಿ ನಟಿಗೆ ಅನ್ಸಾರಿ ಪತ್ನಿ ತಬಸುಮಾ ಮನೆಯಲ್ಲೇ ಥಳಿಸಿದ್ರು ಎನ್ನಲಾಗಿದೆ. ಮೊದಲ ಹೆಂಡತಿ ಹಲ್ಲೆ ಬಳಿಕ 2ನೇ ಹೆಂಡತಿ ಪಂಚಮಿಗೆ ಇಕ್ಬಾಲ್ ಅನ್ಸಾರಿ ಬಾರ್ ಬರೆದುಕೊಟ್ಟಿದ್ದಾರೆ.