Tag: JDS worker

  • ನಿಖಿಲ್‌ ಸೋಲಿನಿಂದ ಬೇಸರ – ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ!

    ನಿಖಿಲ್‌ ಸೋಲಿನಿಂದ ಬೇಸರ – ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ!

    – ಕಾರ್ಯಕರ್ತರು, ಅಭಿಮಾನಿಗಳಿಗೆ ಧೈರ್ಯ ಹೇಳಿದ ನಿಖಿಲ್‌

    ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಸೋಲಿನಿಂದ ಕುಂದಿದ ಅಭಿಮಾನಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

    ಚನ್ನಪಟ್ಟಣದ (Channapatna) ಶ್ರೀರಾಂಪುರ ಗ್ರಾಮದ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ನಿಖಿಲ್‌ ಅಭಿಮಾನಿ (Nikhil fan). ಕಳೆದ 15 ವರ್ಷಗಳಿಂದ ಜೆಡಿಎಸ್‌ ಕಾರ್ಯಕರ್ತನಾಗಿರುವ ಮಂಜುನಾಥ್‌, ನಿಖಿಲ್‌ ಅಪ್ಪಟ ಅಭಿಮಾನಿಯಾಗಿದ್ದರು, ಹೀಗಾಗಿ ನಿಖಿಲ್‌ ಸೋಲಿನಿಂದ ಬೇಸರಗೊಂಡು, ವಿಷ ಸೇವಿಸಿದ್ದರು. ಬಳಿಕ ಅವರನ್ನ ಮಂಡ್ಯದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇದನ್ನೂ ಓದಿ: ನಿನ್ನ ನೋಡ್ಬೇಕು ಬಾ ಅಂತ ಕರೆಸಿ ಪ್ರಿಯತಮೆಯಿಂದ್ಲೇ ಪ್ರಿಯಕರನ ಕಿಡ್ನ್ಯಾಪ್‌, 5 ಲಕ್ಷ ಸುಲಿಗೆ!

    ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ ಮಂಜುನಾಥ್ ಮನೆಗೆ ಇಂದು ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ, ಆರೋಗ್ಯ ವಿಚಾರಿಸಲಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಒಂದೇ ದಿನ 64 ಕೋಟಿ ಮತ ಎಣಿಕೆ – ಮಸ್ಕ್‌ ರಿಯಾಕ್ಷನ್‌ ಏನು?

    ಕಾರ್ಯಕರ್ತರಿಗೆ ಧೈರ್ಯ ಹೇಳಿದ ನಿಖಿಲ್‌:
    ಈ ಕುರಿತು ಪ್ರತಿಕ್ರಿಯೆ ನೀಡಿರುವ ನಿಖಿಲ್‌, ಬೆಳಗ್ಗೆ 7 ಗಂಟೆ ಸುಮಾರಿಗೆ ಮಂಜುನಾಥ್ ವಿಚಾರ ಗೊತ್ತಾಯ್ತು. ಚುನಾವಣಾ ಏರುಪೇರು ಇದ್ದೇ ಇರುತ್ತೆ. ಆದರೆ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಇಂಥ ಸಂದಿಗ್ಧ ಪರಿಸ್ಥಿತಿಗೆ ನಿಮ್ಮ ಕುಟುಂಬವನ್ನ ದೂಡಬೇಡಿ. ಸೋಲು ಗೆಲುವು ಇದ್ದಿದ್ದೇ, ದಯವಿಟ್ಟು ಇಂತಹ ಕೆಲಸಗಳಿಗೆ ಮುಂದಾಗಬೇಡಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಉತ್ತರ ಪ್ರದೇಶ | ಜಾಮಾ ಮಸೀದಿ ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ

  • ಸಿನಿಮೀಯ ಸ್ಟೈಲ್‌ನಲ್ಲಿ ದೇವಸ್ಥಾನದಲ್ಲಿ ಜೆಡಿಎಸ್‌ ಮುಖಂಡನ ಹತ್ಯೆಗೆ ಯತ್ನ – ಕೊಲೆಗೆ ಸ್ನೇಹಿತನಿಂದಲೇ ಸ್ಕೆಚ್‌

    ಸಿನಿಮೀಯ ಸ್ಟೈಲ್‌ನಲ್ಲಿ ದೇವಸ್ಥಾನದಲ್ಲಿ ಜೆಡಿಎಸ್‌ ಮುಖಂಡನ ಹತ್ಯೆಗೆ ಯತ್ನ – ಕೊಲೆಗೆ ಸ್ನೇಹಿತನಿಂದಲೇ ಸ್ಕೆಚ್‌

    ಮಂಡ್ಯ: ಮದ್ದೂರಿನ (Maddur) ಹೊಳೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಜೆಡಿಎಸ್‌ ಮುಖಂಡನೊಬ್ಬನ ಮೇಲೆ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ.

    ಮದ್ದೂರಿನ ಜೆಡಿಎಸ್‌ (JDS) ಮುಖಂಡ ಹಾಗೂ ಮಾಜಿ ರೌಡಿಶೀಟರ್ ಅಪ್ಪುಗೌಡ ಹಲ್ಲೆಗೊಳಗಾದವ. ಅಪ್ಪುಗೌಡ ಪ್ರತಿನಿತ್ಯ ತಮ್ಮ ಮನೆಯನ್ನು ಬಿಟ್ಟರೆ ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಬಂದು ಕರ್ಪೂರ ಹಚ್ಚಿ ಕೈ ಮುಗಿದು ಬೇರೆ ಕೆಲಸಕ್ಕೆ ಹೋಗ್ತಾ ಇದ್ದ. ಅದೇ ರೀತಿ ಇಂದು ಅಪ್ಪುಗೌಡ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಹೋಗಿ ಕೈ ಮುಗಿಯುವ ವೇಳೆ ಆರು ಮಂದಿಯ ಗುಂಪು ಈತನ ಮೇಲೆ ಅಟ್ಯಾಕ್ ಮಾಡಿದೆ. ಮೂವರು ನೇರವಾಗಿ ಅಪ್ಪುಗೌಡನ ಮೇಲೆ ದಾಳಿ ನಡೆಸಲು ಮುಂದಾದರೆ, ಇನ್ನೂ ಮೂವರು ಅಪ್ಪುಗೌಡ ಎಸ್ಕೇಪ್ ಆಗದ ರೀತಿ ನೋಡಿಕೊಳ್ಳುತ್ತಾ ಇರುತ್ತಾರೆ. ಇದನ್ನೂ ಓದಿ: ಕಾಲಮಿತಿಯೊಳಗೆ ಜನನ-ಮರಣ ಪ್ರಮಾಣ ಪತ್ರ ವಿತರಿಸಿ – ಡಿಸಿ ಖಡಕ್‌ ಸೂಚನೆ

    ಅಪ್ಪುಗೌಡನ ಬಳಿ ಈ ಹಂತಕರು ಚಾಕು ಹಿಡಿದು ಬರುತ್ತಿದ್ದ ಹಾಗೆ ಅಲ್ಲಿಯೇ ಇದ್ದ ಇತರ ಭಕ್ತರು ಹಾಗೂ ಅರ್ಚಕರು ಕಿರುಚಿಕೊಳ್ಳುತ್ತಾರೆ. ಬಳಿಕ ಅಲರ್ಟ್ ಆದ ಅಪ್ಪುಗೌಡ ಹಂತಕರಿಂದ ತಪ್ಪಿಸಿಕೊಳ್ಳಲು ಪ್ರಯತ್ನ ಪಡುತ್ತಾನೆ. ಆದರೆ ಇಬ್ಬರು ಹಂತಕರು ತಮ್ಮ ಕೈಯಲ್ಲಿ ಇದ್ದ ಮಾರಾಕಾಸ್ತ್ರದಿಂದ ಅಪ್ಪುಗೌಡನ ಭುಜ ಹಾಗೂ ಬೆನ್ನಿನ ಭಾಗಕ್ಕೆ ಸ್ವಲ್ಪ ಪ್ರಮಾಣದಲ್ಲಿ ಹಲ್ಲೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಸ್ಥಳೀಯರು ಮುಂದೆ ಬಾರದಂತೆ ಹಂತಕರು ಲಾಂಗ್ ಹಿಡಿದು ಜನರನ್ನು ಎದುರಿಸಿದ್ದಾರೆ. ಈ ವೇಳೆ ದೇವಸ್ಥಾನಕ್ಕೆ ಆಂಜನೇಯಸ್ವಾಮಿ ದರ್ಶನಕ್ಕೆ ಎಂದು ಮಫ್ತಿಯಲ್ಲಿ ಬಂದ ಪೊಲೀಸ್ ಪೇದೆ ಕುಮಾರಸ್ವಾಮಿ ಹಂತಕರ ಕಡೆಗೆ ಹೂವಿನ ಗಿಡದ ಫಾಟ್ ಎಸೆದು ಅಪ್ಪುಗೌಡನನ್ನು ರಕ್ಷಣೆ ಮಾಡುತ್ತಾರೆ. ಇದಾದ ನಂತರ ಸ್ಥಳೀಯರು ಎಲ್ಲರೂ ಹಂತಕರ ಕಡೆಗೆ ಸುತ್ತುವರೆಯಲು ಮುಂದಾಗುತ್ತಿದ್ದಂತೆ ಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ.

    ಅಪ್ಪುಗೌಡನ ಕೊಲೆಯ ಯತ್ನ ವಿಫಲವಾಗುತ್ತಿದ್ದಂತೆ ಆರು ಮಂದಿ ಹಂತಕರು ಟಾಟಾಸುಮೋದಲ್ಲಿ ಪರಾರಿಯಾಗಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಪೇದೆ ಕುಮಾರಸ್ವಾಮಿ ತಮ್ಮ ಬೈಕ್‌ನಲ್ಲಿ ಹಂತಕರನ್ನು ಹಿಂಬಾಲಿಸಿದ್ದಾರೆ. ದಾರಿ ಮಧ್ಯದಲ್ಲೇ ಕುಮಾರಸ್ವಾಮಿ ಕಂಟ್ರೋಲ್ ರೂಂಗೆ ಈ ಬಗ್ಗೆ ಮಾಹಿತಿಯನ್ನು ಸಹ ನೀಡಿದ್ದಾರೆ. ಹಂತಕರು ಹಲಗೂರು ಬಳಿ ಹೋಗ್ತಾ ಇದ್ದಂತೆ ಹಲಗೂರು ಪೊಲೀಸರು ಸ್ಥಳೀಯರ ಸಹಾಯದಿಂದ ಕೊಲೆಗೆ ಯತ್ನಿಸಿದ ಆರು ಮಂದಿಯನ್ನು ಬಂಧಿಸಿದ್ದಾರೆ. ಬಳಿಕ ಬಂಧಿತರನ್ನು ವಿಚಾರಣೆ ಮಾಡಿದಾಗ ಈ ಕೃತ್ಯದ ಕರ್ತೃ ಅಪ್ಪುಗೌಡನ ಸ್ನೇಹಿತ ಮಧು ಎಂದು ತಿಳಿದು ಬಂದಿದೆ. ಬಳಿಕ ಮಧು ಎಂಬಾತನನ್ನು ಮದ್ದೂರು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ಪರ ಬ್ಯಾಟ್ ಬೀಸಿದ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ

    ಬಂಧಿತ ಆರೋಪಿ ಮಧು ಹಾಗೂ ಹಲ್ಲೆಗೆ ಒಳಗಾಗಿರುವ ಅಪ್ಪುಗೌಡ ಇಬ್ಬರು ಸಹ ಈ ಹಿಂದೆ ಒಳ್ಳೆಯ ಸ್ನೇಹಿತರಾಗಿದ್ದರು. ಇಬ್ಬರು ರಿಯಲ್ ಎಸ್ಟೇಟ್ ಸೇರಿದಂತೆ ಇತರೆ ವ್ಯವಹಾರವನ್ನು ಒಟ್ಟಿಗೆ ಮಾಡುತ್ತಿದ್ದರು‌. ಆದರೆ ಕಳೆದ ಆರು ತಿಂಗಳ ಹಿಂದೆ ಇವರಿಬ್ಬರ ಮಧ್ಯೆ ವ್ಯವಹಾರದಲ್ಲಿ ವೈಮನಸ್ಸು ಬಂದಿದೆ. ಇದೇ ಕಾರಣಕ್ಕೆ ಮಧು, ಅಪ್ಪುಗೌಡನನ್ನು ಕೊಲೆ ಮಾಡಬೇಕೆಂದು ಸ್ಕೆಚ್‌ ಹಾಕಿದ್ದ. ಕೊನೆಗೆ ಬೆಂಗಳೂರಿನ ಮಾಜಿ ಮೇಯರ್ ವಾಸು ಹತ್ಯೆ ಕೇಸ್‌ನಲ್ಲಿ ಜೈಲು ಸೇರಿರುವ ಜಗದೀಶ್‌ಗೆ ಈ ಡೀಲ್‌ ನೀಡಿದ್ದಾನೆ. ಜಗದೀಶ್ ಜೈಲಿನಲ್ಲಿ ಇದ್ದುಕೊಂಡು ತನ್ನ ಶಿಷ್ಯಂದಿರಾದ ಮನು, ಮನೋಜ್, ಅಜಯ್, ಪಾಪಣ್ಣಿ, ನಿಶ್ಚಿತ್ ಹಾಗೂ ಅನಿಲ್‌ಗೆ ಅಪ್ಪುಗೌಡನನ್ನು ಕೊಲೆ ಮಾಡುವ ಜವಾಬ್ದಾರಿಯನ್ನು ನೀಡಿದ್ದಾನೆ. ಅದರಂತೆ ಇಂದು ಕೊಲೆಯ ಯತ್ನ ನಡೆಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೈದ್ಯರ ಮುಷ್ಕರ ಎಫೆಕ್ಟ್- ಜೆಡಿಎಸ್ ಕಾರ್ಯಕರ್ತ ಸಾವು

    ವೈದ್ಯರ ಮುಷ್ಕರ ಎಫೆಕ್ಟ್- ಜೆಡಿಎಸ್ ಕಾರ್ಯಕರ್ತ ಸಾವು

    ಬಾಗಲಕೋಟೆ: ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಚಿಕಿತ್ಸೆ ಸಿಗದೆ ಓರ್ವ ಜೆಡಿಎಸ್ ಕಾರ್ಯಕರ್ತ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.

    ಬಾದಾಮಿ ತಾಲೂಕು ಕೆರೂರು ಪಟ್ಟಣ ನಿವಾಸಿ ದಾವಲಸಾಬ್ ಕೊಣ್ಣೂರ (55) ಮೃತ ಜೆಡಿಎಸ್ ಕಾರ್ಯಕರ್ತ. ದಾವಲಸಾಬ್ ಜ್ವರ, ಅಸ್ತಮಾದಿಂದ ಬಳಲುತ್ತಿದ್ದರು. ಇಂದು ತೀವ್ರವಾಗಿ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಲ್ಲಿ ವೈದ್ಯರು ಇರಲಿಲ್ಲ. ಹೀಗಾಗಿ ಮತ್ತೊಂದು ಆಸ್ಪತ್ರೆಗೆ ಸಾಗಿಸಿದರೂ ಅದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ದಾವಲ್‍ಸಾಬ್ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಜಿಲ್ಲಾಸ್ಪತ್ರೆ ತಲುಪುವ ಮಾರ್ಗದಲ್ಲೇ ಅವರು ಸಾವನ್ನಪ್ಪಿದ್ದಾರೆ.

    ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡು, ಚಿಕಿತ್ಸೆ ನೀಡಿದ್ದರೆ ದಾವಲಸಾಬ್ ಬದುಕುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದಿರುವೇ ಅವರ ಸಾವಿಗೆ ಕಾರಣ ಎಂದು ಸಂಬಂಧಿಕರ ಆರೋಪಿಸಿದ್ದಾರೆ.

    ಪಶ್ಚಿಮ ಬಂಗಾಳದಲ್ಲಿ ಮೃತ ರೋಗಿಯೊಬ್ಬರ ಸಂಬಂಧಿಕರು ಇತ್ತೀಚೆಗೆ ಇಬ್ಬರು ಕಿರಿಯ ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆ ಪಶ್ಚಿಮ ಬಂಗಾಳದಲ್ಲಿ ವೈದ್ಯರ ದೊಡ್ಡ ಮಟ್ಟದ ಚಳುವಳಿಗೆ ಕಾರಣವಾಯಿತು. ಆದರೆ ಪ್ರತಿಭಟನೆಯನ್ನು ನಿಲ್ಲಿಸುವಂತೆ ಮಮತಾ ಬ್ಯಾನರ್ಜಿ ವೈದ್ಯರಿಗೆ ಎಚ್ಚರಿಕೆ ನೀಡಿದ್ದರು.

    ಮಮತಾ ಬ್ಯಾನರ್ಜಿ ಅವರ ಹೇಳಿಕೆಯಿಂದ ಅಸಮಾಧಾನ ಹೊರಹಾಕಿದ ವೈದ್ಯರು, ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದರು. ಈ ಪ್ರತಿಭಟನೆಯನ್ನು ಬೆಂಬಲಿಸಿ ಕರ್ನಾಟಕದಲ್ಲಿಯೂ ಪ್ರತಿಭಟನೆ ನಡೆಸಲಾಗುತ್ತಿದೆ.