ಬೆಂಗಳೂರು: ಚನ್ನಪಟ್ಟಣದಲ್ಲಿ (Channapatna) ಎದುರಾಳಿಗಳು ಅಷ್ಟೊಂದು ವೀಕ್ ಆಗ್ತಾರೆ ಎಂದು ನಾನು ತಿಳಿದುಕೊಂಡಿರಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K Shivakumar) ವ್ಯಂಗ್ಯವಾಡಿದ್ದಾರೆ.
ಚನ್ನಪಟ್ಟಣದ ಕಾಂಗ್ರೆಸ್ (Congress) ಕಾರ್ಯಕರ್ತರು ಮುಖಂಡರ ಜೊತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ನನ್ನ ಜನರನ್ನು ಭೇಟಿ ಮಾಡಿದ್ದೇನೆ. ನಾನೇ ಅಭ್ಯರ್ಥಿ ಎಂದು ಕೆಲಸ ಮಾಡುವಂತೆ ಹೇಳಿದ್ದೇನೆ. ವಿರೋಧ ಪಕ್ಷಗಳು ರಾತ್ರಿ ಎಲ್ಲಾ ಸಭೆ ನಡೆಸಿದ್ದಾರೆ. ಜೆಡಿಎಸ್ನವರು ಸೀಟು ಬಿಟ್ಟು ಕೊಡುತ್ತಾರೆ ಎಂದು ಯಾರೋ ಫೋನ್ ಮಾಡಿದ್ದರು. ಎದುರಾಳಿಗಳು ಅಷ್ಟೊಂದು ವೀಕ್ ಎಂದು ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.
ಏನೋ ಬಿಟ್ಟು ಕೊಡ್ತಾ ಇದ್ದಾರೆ ಕ್ಷೇತ್ರ ನಾ ಎಂಬ ಮಾಹಿತಿ ಬಂತು. ಫೈಟ್ ಮಾಡ್ತಾರೆ ಎಂದುಕೊಂಡಿದ್ದೆ. ನಾನು ನಮ್ಮ ಕಾರ್ಯಕರ್ತರ ಮುಖಂಡರ ಅಭಿಪ್ರಾಯವನ್ನು ಕೇಳಿದ್ದೇನೆ. ಯಾರೇ ಅಭ್ಯರ್ಥಿಯಾದರು, ಡಿ.ಕೆ ಶಿವಕುಮಾರ್ ಅಭ್ಯರ್ಥಿ ಎಂದು ಕೆಲಸ ಮಾಡಬೇಕು ಎಂದು ಹೇಳಿದ್ದೇವೆ. ನಮ್ಮ ಕಾರ್ಯಕರ್ತರ ಜೊತೆಗೆ ನಾನು ಮಾತನಾಡುತ್ತಿದ್ದೇನೆ. ನಾನು ಕ್ಷೇತ್ರಕ್ಕೆ ಹೋಗಲೇಬೇಕು, ಸೇವೆ ಮಾಡುವ ಸಲುವಾಗಿ ಹೋಗ್ತಿದ್ದೆ ಎಂದಿದ್ದಾರೆ.
ಯುದ್ಧಕ್ಕೂ ಮುನ್ನ ಶಸ್ತ್ರ ತ್ಯಾಗನಾ ಎಂಬ ಪತ್ರಕರ್ತರ ಪ್ರಶ್ನೆಗೆ, ಇದನ್ನು ನೀವು ಅವರನ್ನೇ ಕೇಳಬೇಕು. ಕಾರ್ಯಕರ್ತರು ಎಲ್ಲರ ಜೊತೆಗೂ ಮಾತನಾಡಿದ್ದೇನೆ. ರಾಜಕಾರಣದಲ್ಲಿ ಹಲವು ಸಾಧ್ಯತೆಗಳು ಇರುತ್ತವೆ. ಯಾರು ಬೇಕಾದರೂ ಅಭ್ಯರ್ಥಿ ಆಗಬಹುದು. ಕಾರ್ಯಕರ್ತರನ್ನು ನಿಲ್ಲಿಸಿದರೂ ಕೂಡ ತಯಾರಿರಬೇಕು. ಡಿ.ಕೆ ಸುರೇಶ್ ಅವರ ಹೆಸರು ಕೂಡ ಹೇಳಿದ್ದಾರೆ. ಅವರಿಗೂ ಜವಾಬ್ದಾರಿ ಇದೆ ಎಂದಿದ್ದಾರೆ.
ಯಾರಿಗೂ ನಾವು ಮನವೊಲಿಸುವುದಿಲ್ಲ, ಇಂಥವರು ಅಭ್ಯರ್ಥಿ ಎಂದು ಹೇಳುತ್ತೇವೆ. ಸುರೇಶ್ ಹೇಳಲಿ ನಾನು ಹೇಳಲಿ ಎಲ್ಲರೂ ಒಪ್ಪಿಕೊಳ್ಳುತ್ತಾರೆ. ಸುರೇಶ್ ಅವರು ಚುನಾವಣೆ ನಿಲ್ಲುವ ಮನಸ್ಥಿತಿಯಲ್ಲಿದ್ದಾರಾ ಎಂಬ ಪ್ರಶ್ನೆಗೆ, ಇಲ್ಲ ಅವರದ್ದು ಏನೋ ಲೆಕ್ಕಾಚಾರ ಇರುತ್ತೆ ಎಂದಿದ್ದಾರೆ.
ಮಂಡ್ಯ: ಕಾಂಗ್ರೆಸ್ ಸರ್ಕಾರಕ್ಕೆ ನಾನೇ ಪ್ರಮುಖ ಟಾರ್ಗೆಟ್ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಹೇಳಿದರು.
ಜಿಲ್ಲೆಯ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಮಂಡ್ಯ ಟೂ ಇಂಡಿಯಾ (Mandya To India) ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ತನಿಖೆ ನಡೆಸುತ್ತಿರುವುದು ಯಾವ ಉದ್ದೇಶಕ್ಕೆ? ನನ್ನ ಮೇಲೆ ಮೊನ್ನೆ ಯಾವ ಆಧಾರದ ಮೇಲೆ ಕಂಪ್ಲೇಟ್ ಕೊಟ್ಟಿದ್ದೀರಾ? ಮೊನ್ನೆ ಯಾವುದೋ ಒಂದು ಎನ್ಸಿಆರ್ ಹಾಕಿದ್ದಾರೆ. ಎಫ್ಐಆರ್ ಮಾಡಿಸಲೆಬೇಕೆಂದು ಸಿಎಂ ಮನೆಗೆ ಅಧಿಕಾರಿಗಳನ್ನು ಕರೆಸಿಕೊಂಡಿದ್ದಾರೆ. ಏನೇನೂ ಚರ್ಚೆ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಪ್ರಮುಖ ಟಾರ್ಗೆಟ್ ಎಂದರೆ ನಾನೇ. ಆದರೆ ನಾನು ನ್ಯಾಯಬದ್ಧವಾಗಿ ನ್ಯಾಯಾಲಯಕ್ಕೆ ಬಿಟ್ಟಿದ್ದೇನೆ ಎಂದು ಹೇಳಿದರು.ಇದನ್ನೂ ಓದಿ: ರಚಿನ್ ಅಮೋಘ ಶತಕ, ಇತಿಹಾಸ ನಿರ್ಮಿಸಿದ ಕಿವೀಸ್; ಭಾರತದ ವಿರುದ್ಧ 356 ರನ್ಗಳ ಭರ್ಜರಿ ಮುನ್ನಡೆ
ಕೇಂದ್ರ ಸರ್ಕಾರಕ್ಕೆ ಇಡಿ, ಎಸ್ಐಟಿ ಅಸ್ತ್ರ ಎಂದು ಹೇಳುತ್ತಾರೆ. ಸಿಎಂ ಮತ್ತು ಡಿಕೆಶಿಗೆ ಇನ್ವೇಸ್ಟಿಕೇಶನ್ ಟೀಮ್ಗಳಾಗಿವೆ. ಇವರ ಪ್ರಕಾರ ಎಸ್ಐಟಿ ಎಂದರೆ ಅಸ್ತ್ರಗಳು ಎಂದರ್ಥ. ದೆಹಲಿಯಿಂದ ವಕೀಲರನ್ನು ಕರೆಸಿದ್ದಾರೆ. ಪರ ವಿರೋಧ ವಾದಗಳಾಗಿವೆ. ಅದರ ಆಧಾರದ ಮೇಲೆ ಕೋರ್ಟ್ ಯಾವ ರೀತಿ ತನಿಖೆ ಆಗಬೇಕೆಂದು ಹೇಳಿದ್ದು, ನ್ಯಾಯಯುತ ತನಿಖೆ ಆಗಬೇಕಿದೆ. ಲೋಕಾಯುಕ್ತದಲ್ಲಿ ನಿಮ್ಮ ಅಧಿಕಾರಿಗಳಿಂದ ತನಿಖೆ ಮಾಡಲು ಸಾಧ್ಯನಾ? ನಿಮ್ಮಂತ ನಡವಳಿಕೆ ಇರುವ ಸರ್ಕಾರದಲ್ಲಿ ಸತ್ಯಾಂಶ ಹೊರಬರಲ್ಲ. ಈಗ ಇಡಿ ಬಂದಿದೆ ಮುಂದೆ ಏನು ಆಗುತ್ತದೆ ಎಂಬುವುದನ್ನು ನೋಡೋಣ ಎಂದರು.
ಸೈಟ್ ಕೊಟ್ಟಿದ್ದು ಯಾಕೆ?
ಇಡಿ ಅಧಿಕಾರಿಗಳು ಮುಡಾ ಕಚೇರಿ (MUDA Office) ಹಾಗೂ ತಹಸೀಲ್ದಾರ್ ಕಚೇರಿ ಮೇಲೆ ದಾಳಿ ನಡೆಸಿರುವ ಕುರಿತು ಮಾತನಾಡಿದ ಅವರು, ಮುಡಾ ಹಗರಣ (MUDA Scam) ಅತ್ಯಂತ ಕೆಟ್ಟ ರೀತಿಯಲ್ಲಿ ಆಗಿದೆ. ಸರ್ಕಾರದ ಭೂಮಿಯನ್ನು ಕಬಳಿಸಿದ್ದಾರೆ ಆದಕಾರಣ ಸೈಟ್ನ್ನು ವಾಪಸ್ಸು ಕೊಟ್ಟಿರಬಹುದು. ಕಾನೂನು ಬದ್ಧವಾಗಿ ಸೈಟ್ ಪಡೆದಿದ್ದರೆ ಯಾಕೆ ವಾಪಸ್ಸು ಕೊಟ್ಟಿದ್ದೀರಾ? ಸೈಟ್ ಹಂಚಿಕೆಯಲ್ಲಿ ತಪ್ಪು ಮಾಡಿದ್ದೀರಿ ಅದಕ್ಕೆ ವಾಪಸ್ ಕೊಟ್ಟಿದ್ದೀರಿ. ನಿಮ್ಮ ಲೋಕಾಯುಕ್ತ ಅಧಿಕಾರಿಗಳಿಂದ ಸರಿಯಾಗಿ ತನಿಖೆ ಆಗಿಲ್ಲ ಎಂದು ಕಿಡಿಕಾರಿದರು.ಇದನ್ನೂ ಓದಿ:ಮುಡಾ ಕೇಸ್ನಲ್ಲಿ ಹಣಕಾಸು ವಹಿವಾಟು ನಡೆದಿಲ್ಲ, ಹಣಕಾಸಿನ ವಿಚಾರ ಎಲ್ಲೂ ತನಿಖೆಯಾಗಿಲ್ಲ: ಡಿ.ಕೆ.ಸುರೇಶ್
ಬೆಂಗಳೂರು (Bengaluru) ನಗರದಲ್ಲಿ ತಮ್ಮ ಹಣದ ದಾಹಕ್ಕೆ ಕೆಂಪೇಗೌಡರು ಕಟ್ಟಿದ ಕೆರೆಗಳನ್ನು ನುಂಗಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಮಳೆ ಅವಾಂತರ ಆಗುತ್ತಿದೆ. ನಿಮ್ಮ ಭೂ, ಹಣದ ದಾಹದಿಂದ ಬೆಂಗಳೂರು ಹೀಗೆ ಆಗಿದೆ. ನಾನು ಕೇಂದ್ರ ಸಚಿವನಾಗಿದ್ದೇನೆ ಎಂದು ಮಳೆ ಬಂದು ಮುಳುಗುತ್ತಿಲ್ಲ. ಕೆರೆಗಳು, ರಾಜಕಾಲುವೆಗಳನ್ನು ಯಾಕೆ ಉಳಿಸಿಲ್ಲ. ಬಡಾವಣೆ ಹೆಸರಿನಲ್ಲಿ ಕೆರೆ, ಕಾಲುವೆಗಳನ್ನು ಮುಚ್ಚಿದ್ದಾರೆ. ಪುಟ್ಟೇನಹಳ್ಳಿ, ಬಿಳೇಕೆಳ್ಳನಹಳ್ಳಿ ಕೆರೆಗಳನ್ನು ಮುಚ್ಚಿ ಡಾಲರ್ಸ್ ಕಾಲೋನಿ ಎಂದು ಮಾಡಿದರು. ನನ್ನ ಬಗ್ಗೆ ಮಾತನಾಡುವವರು ಇದರ ಬಗ್ಗೆ ಸ್ವಲ್ಪ ತಿಳಿದುಕೊಳ್ಳಬೇಕು ಎಂದರು.
ಕುಮಾರಸ್ವಾಮಿ ಬಗ್ಗೆ ಮಾತನಾಡಲು ಯಾವ ನೈತಿಕತೆ ಇವರಿಗೆ ಇಲ್ಲ. ಮಳೆ ಬಂದರೆ ಇವರು ಅರ್ಧ ಗಂಟೆಯಲ್ಲಿ ಮೋಟಾರು ಹಾಕಿ ನೀರು ಖಾಲಿ ಮಾಡುತ್ತಾರಾ? ನಾನು ಜವಾಹರಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಯೋಜನೆಗಾಗಿ (JNUM) 110 ಹಳ್ಳಿಗಳನ್ನು ಬೆಂಗಳೂರಿಗೆ ಸೇರಿಸಿದ್ದೇನೆ. ಅದರಲ್ಲಿ ಡಿಸಿಎಂ 50 ಲಕ್ಷ ಜನರಿಗೆ ನೀರು ಕೊಡುತ್ತೇವೆ ಎಂದು ಹೇಳಿದ್ದಾರೆ. ಅಲ್ಲಿ 50 ಲಕ್ಷ ಜನ ಇರಲು ಸಾಧ್ಯಾನಾ? ಒಂದು ವೇಳೆ ಇದ್ದರೆ ಬೆಂಗಳೂರು ಜನಸಂಖ್ಯೆ ಎಷ್ಟು? ಸುಳ್ಳು ಹೇಳಲು ಒಂದು ಇತಿಮಿತಿ ಬೇಡವಾ? ಇದೊಂದು ನಗೆಯ ಪಾಟಲು ಎಂದು ವ್ಯಂಗ್ಯವಾಡಿದರು.
ಕೆರೆ ಎಷ್ಟು ಭರ್ತಿಯಾಗಿದೆ?
ಕೆಆರ್ಎಸ್ ಡ್ಯಾಂ 2 ಬಾರಿ ಬರ್ತಿಯಾಗಿದೆ. ಮಂಡ್ಯ ಜಿಲ್ಲೆಯ ಕೆಆರ್ಎಸ್ ಡ್ಯಾಂ (KRS Dam) ವ್ಯಾಪ್ತಿಯಲ್ಲಿ 900 ಕೆರೆಗಳು ಇವೆ. ಎಷ್ಟು ಕೆರೆಗಳನ್ನು ಈ ಸರ್ಕಾರ ತುಂಬಿಸಿದೆ? ಎಲ್ಲಾ ನೀರನ್ನು ತಮಿಳುನಾಡಿಗೆ (Tamilnadu) ಬಿಟ್ಟಿದ್ದಾರೆ. ನನಗೆ ಮೇಕೆದಾಟಿಗೆ ಪ್ರಧಾನಿಗಳ ಹತ್ತಿರ ಅನುಮತಿ ಕೊಡಿಸಿ ಎಂದು ಹೇಳುತ್ತಿರಾ? ತಮಿಳುನಾಡಿನವರು ನಿಮ್ಮ ಸ್ನೇಹಿತರು ಅವರ ಹತ್ತಿರ ಮಾತಾಡಿ ಒಪ್ಪಿಸಿ. ಬಳಿಕ ಕರೆದುಕೊಂಡು ಬನ್ನಿ ಐದು ನಿಮಿಷದಲ್ಲಿ ಸಹಿ ಹಾಕಿಸಿಕೊಡ್ತೀನಿ ಎಂದು ತಿರುಗೇಟು ನೀಡಿದರು.ಇದನ್ನೂ ಓದಿ: ಹುಟ್ಟುಹಬ್ಬದ ಆಚರಣೆಗೆ ಬ್ರೇಕ್ ಹಾಕಿದ ವಸಿಷ್ಠ ಸಿಂಹ
ರಾಮನಗರ: ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ಬೇಡ, ಇನ್ನೂ ಮೂರು ವರ್ಷ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ಮಾಜಿ ಸಚಿವ ಸಾ.ರಾ ಮಹೇಶ್ (SR Mahesh) ಹೇಳಿಕೆ ನೀಡಿದ್ದಾರೆ.
ಬಿಡದಿಯ (Bidadi) ಹೆಚ್ಡಿಕೆ (HD Kumaraswamy) ತೋಟದ ಮನೆಯಲ್ಲಿ ನಡೆದ ಜೆಡಿಎಸ್ (JDS) ಸಭೆಯಲ್ಲಿ ಭಾಗಿಯಾಗಿದ್ದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಚನ್ನಪಟ್ಟಣ (Channapatna) ಹೆಚ್ಡಿ ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದ ಕ್ಷೇತ್ರವಾಗಿದೆ. ಈಗ ಎನ್ಡಿಎ ಅಭ್ಯರ್ಥಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು. ಇವತ್ತು ಪೂರ್ವಭಾವಿಯಾಗಿ ಚರ್ಚೆ ಮಾಡಿದ್ದೇವೆ. ಅಭ್ಯರ್ಥಿ ಆಯ್ಕೆ ಬಗ್ಗೆ ಎರಡೂ ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನ ಮಾಡುತ್ತಾರೆ. ಮೂರು ಕ್ಷೇತ್ರಗಳಲ್ಲಿ ಎನ್ಡಿಎ ಅಭ್ಯರ್ಥಿಗಳು ಗೆಲ್ಲಬೇಕು ಅಷ್ಟೇ. ಕಾಂಗ್ರೆಸ್ ಸರ್ಕಾರ ಸಾಕಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದರಿಂದ ಜನ ಬೇಸತ್ತಿದ್ದಾರೆ. ಹಾಗಾಗಿ ಈ ಮೂರು ಕ್ಷೇತ್ರ ಗೆಲ್ಲುವ ವಿಶ್ವಾಸ ಇದೆ ಎಂದು ಹೇಳಿದರು. ಇದನ್ನೂ ಓದಿ: ಧಾರವಾಡ| ಮಳೆ ಅವಾಂತರ- ಕೊಚ್ಚಿ ಹೋಯ್ತು ನಿರ್ಮಾಣ ಹಂತದಲ್ಲಿದ್ದ ರಸ್ತೆ
ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಒತ್ತಡ ಹೆಚ್ಚಳದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಸಾಕಷ್ಟು ಜನ ನನಗೂ ಕರೆ ಮಾಡಿ ಈ ಬಗ್ಗೆ ಮಾತನಾಡಿದ್ದಾರೆ. ಕಾರ್ಯಕರ್ತರ ಒತ್ತಡ ಇದ್ದರೂ ಅದನ್ನು ತೀರ್ಮಾನ ಮಾಡೋದು ನಿಖಿಲ್. ನಿಖಿಲ್ ಕುಮಾರಸ್ವಾಮಿ ಕೂಡ ಈ ಬಗ್ಗೆ ನನ್ನ ಜೊತೆ ಅನೇಕ ಬಾರಿ ಮಾತನಾಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ಬೇಡ, ಸಂಘಟನೆ ಮಾಡಬೇಕು ಎಂದಿದ್ದಾರೆ. ಕುಮಾರಸ್ವಾಮಿ ಕೂಡ ದೆಹಲಿಯಲ್ಲಿ ಇರುತ್ತಾರೆ. ಇರೋ ಮೂರೂವರೆ ವರ್ಷದಲ್ಲಿ ನಿಖಿಲ್ ಪಕ್ಷ ಸಂಘಟನೆ ಮಾಡಬೇಕು. ಹಾಗಾಗಿ ವೈಯಕ್ತಿಕವಾಗಿ ಚುನಾವಣೆಗೆ ಆಸಕ್ತಿ ಇಲ್ಲ ಎಂದಿದ್ದಾರೆ. ಈ ಬಗ್ಗೆ ನಿಖಿಲ್ ಅನೇಕ ಬಾರಿ ಚರ್ಚೆ ಮಾಡಿದ್ದಾರೆ. ಮೈತ್ರಿ ಪಕ್ಷ ಏನು ತೀರ್ಮಾನ ಮಾಡುತ್ತೋ ನೋಡೊಣ ಎಂದು ತಿಳಿಸಿದರು. ಇದನ್ನೂ ಓದಿ: Lokmanya Tilak Express | ಇಂಜಿನ್ ಸೇರಿ ಹಳಿತಪ್ಪಿದ 8 ಬೋಗಿಗಳು
ಬೆಂಗಳೂರು: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ನೀಡಿರುವ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ(CM Siddaramaiah) ವಿರುದ್ಧ ಜೆಡಿಎಸ್ (JDS) ವಾಗ್ದಾಳಿ ನಡೆಸಿದೆ. ಎಕ್ಸ್ನಲ್ಲಿ ಸಿಎಂ ವಿರುದ್ಧ ಕಿಡಿಕಾರಿರುವ ಜೆಡಿಎಸ್ ಇಡಿ ಕುಣಿಕೆ ಬಿಗಿಗೊಳ್ಳುತ್ತಿರುವುದರಿಂದ ರಾಜೀನಾಮೆ ನೀಡಿದ್ದಾರೆ ಎಂದು ಸಿಎಂ ವಿರುದ್ಧ ಕಿಡಿಕಾರಿದೆ.ಇದನ್ನೂ ಓದಿ:ರಿಷಬ್ ಶೆಟ್ಟಿ ಜೊತೆಗಿನ ಫೋಟೋ ಹಂಚಿಕೊಂಡ ಮಾಲಿವುಡ್ ನಟ ಜಯಸೂರ್ಯ
ಜೆಡಿಎಸ್ ಟ್ವೀಟ್ ಏನು?
ನಾನು ತಪ್ಪೇ ಮಾಡಿಲ್ಲ, ವೈಟ್ನರ್ ಹಾಕಿದ್ದು ನಾನಲ್ಲ, ನಾನು ಕ್ಲೀನ್ ಅಂಡ್ ಕ್ಲಿಯರ್. ಅದು ನಾನಲ್ಲ. ನಾನಲ್ಲ, ಆ ಸೈಟುಗಳಿಗೂ ನನಗೂ ಸಂಬಂಧವೇ ಇಲ್ಲ ಎನ್ನುತ್ತಿದ್ದ ಸೈಟ್ ಸಿದ್ದಪ್ಪನವರೇ. ಮೂಡಾಮರಿ ಈಗ ರಾಜೀನಾಮೆ ಕೊಟ್ಟಿದ್ದು ಯಾಕೆ? ರಾಜೀನಾಮೆ ಕೊಡಿ ಎಂದು ನೀವೇ ಹೇಳಿದಿರೋ ಅಥವಾ ಮರಿಯೇ ಸ್ವಇಚ್ಛೆಯಿಂದ ರಾಜೀನಾಮೆ ಕೊಟ್ಟಿತೋ? ನೇಷನ್ ವಾಂಟ್ಸ್ ಟು ನೋ ಎಂದು ಪ್ರಶ್ನೆ ಮಾಡಿದೆ. ಇಡಿ ಕುಣಿಕೆ ಬಿಗಿದುಕೊಳ್ಳುತ್ತಿದೆ ಇದರ ಪರಿಣಾಮಗಳು ಇಲ್ಲಿವೆ ಎಂದು ಸಿಎಂ ವಿರುದ್ಧ ಕಿಡಿಕಾರಿದೆ.
ನಾನು ತಪ್ಪೇ ಮಾಡಿಲ್ಲ, ವೈಟ್ನರ್ ಹಾಕಿದ್ದು ನಾನಲ್ಲ, ನಾನು ಕ್ಲೀನ್ ಅಂಡ್ ಕ್ಲಿಯರ್.. ಅದು ನಾನಲ್ಲ.. ನಾನಲ್ಲ.., ಆ ಸೈಟುಗಳಿಗೂ ನನಗೂ ಸಂಬಂಧವೇ ಇಲ್ಲ ಎನ್ನುತ್ತಿದ್ದ ಸೈಟ್ ಸಿದ್ದಪ್ಪನವರೇ.. ಮೂಡಾಮರಿ ಈಗ ರಾಜೀನಾಮೆ ಕೊಟ್ಟಿದ್ದು ಯಾಕೆ ?
ರಾಜೀನಾಮೆ ಕೊಡಿ ಎಂದು ನೀವೇ ಹೇಳಿದಿರೋ ಅಥವಾ ಮರಿಯೇ ಸ್ವಇಚ್ಛೆಯಿಂದ ರಾಜೀನಾಮೆ ಕೊಟ್ಟಿತೋ ? Nation… pic.twitter.com/8oQSaOQKIf
ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಮುಳುಗುತ್ತಿದೆ ಎಂದು ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಜೆಡಿಎಸ್ (JDS) ವಾಗ್ದಾಳಿ ನಡೆಸಿದೆ.ಇದನ್ನೂ ಓದಿ: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ
ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಇಡೀ ಬೆಂಗಳೂರು ಅವ್ಯವಸ್ಥೆ ಆಗಿದೆ ಎಂದು ಎಕ್ಸ್ (X) ಖಾತೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪೋಸ್ಟ್ ಹಾಕಿದೆ. ಸರ್ಕಾರದ ವಿರುದ್ಧ ಕಿಡಿಕಾರಿರುವ ಜೆಡಿಎಸ್ ಬ್ರ್ಯಾಂಡ್ ಬೆಂಗಳೂರು ಮುಳುಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದೆ.
ಮಾನ್ಯ @H_D_Devegowda ಅವರು ದೂರದೃಷ್ಟಿಯಿಂದ ಬೆಂಗಳೂರು ನಗರಕ್ಕೆ ಮಾಹಿತಿ ತಂತ್ರಜ್ಞಾನದ ಅಡಿಪಾಯ ಹಾಕಿದರು.
ಆ ನಂತರ ಬಂದ @INCKarnataka ಸರಕಾರ ದೇವೇಗೌಡರ ದಿಸೆಯಿಂದ ಚಿನ್ನದ ಬೆಲೆ ಬಂದ ಭೂಮಿಯನ್ನು ಕೊಳ್ಳೆ ಹೊಡೆಯಲು ರಿಯಲ್ ಎಸ್ಟೇಟ್ ದಂಧೆಗೆ ನಾಂದಿ ಹಾಡಿತು.
ಆ ರಿಯಲ್ ಎಸ್ಟೇಟ್ ದಂಧೆಯ ರಕ್ಕಸ ರೂಪವೇ ಡೂಪ್ಲಿಕೇಟ್ ಸಿಎಂ ಬ್ರ್ಯಾಂಡ್…
Honorable Shri @H_D_Devegowda avaru laid the foundation for Bengaluru’s IT boom with great foresight. However,
the subsequent Congress government turned that vision into a real estate debacle, exploiting the land. The monstrous form of this real estate scam is now drowning Brand…
ಟ್ವೀಟ್ನಲ್ಲಿ ಏನಿದೆ?
ಮಾನ್ಯ ಹೆಚ್ಡಿ ದೇವೇಗೌಡ (HD Devegowda) ಅವರು ದೂರದೃಷ್ಟಿಯಿಂದ ಬೆಂಗಳೂರು ನಗರಕ್ಕೆ ಮಾಹಿತಿ ತಂತ್ರಜ್ಞಾನದ ಅಡಿಪಾಯ ಹಾಕಿದರು. ಆ ನಂತರ ಬಂದ ಕಾಂಗ್ರೆಸ್ ಸರ್ಕಾರ ದೇವೇಗೌಡರ ದಿಸೆಯಿಂದ ಚಿನ್ನದ ಬೆಲೆ ಬಂದ ಭೂಮಿಯನ್ನು ಕೊಳ್ಳೆ ಹೊಡೆಯಲು ರಿಯಲ್ ಎಸ್ಟೇಟ್ ದಂಧೆಗೆ ನಾಂದಿ ಹಾಡಿತು. ಆ ರಿಯಲ್ ಎಸ್ಟೇಟ್ ದಂಧೆಯ ರಕ್ಕಸ ರೂಪವೇ ಡೂಪ್ಲಿಕೇಟ್ ಸಿಎಂ ಬ್ರ್ಯಾಂಡ್ ಬೆಂಗಳೂರು!! ಬ್ರ್ಯಾಂಡ್ ಬೆಂಗಳೂರು ಮುಳುಗುತ್ತಿದೆ! ಡೂಪ್ಲಿಕೇಟ್ ಸಿಎಂ ಫೋಟೋಶೂಟ್ನಲ್ಲಿ ಬ್ಯುಸಿಯಾಗಿದ್ದಾರೆ!! ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!! ಎಂದು ಜೆಡಿಎಸ್ ಲೇವಡಿ ಮಾಡಿದೆ.ಇದನ್ನೂ ಓದಿ: ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮಕೈಗೊಳ್ಳದ ಹರಿಯಾಣ, ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಛೀಮಾರಿ
ಹಾಸನ: ಕೆಲವೇ ದಿನಗಳಲ್ಲಿ ಕೆಲವು ರಾಜಕೀಯ ಮುಖಂಡರು ಲೈನ್ನಲ್ಲಿ ನಿಲ್ಲುವ ಕಾಲ ಬರುತ್ತದೆ ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಮಾಜಿ ಸಚಿವ ಎಚ್.ಡಿ.ರೇವಣ್ಣ (HD Revanna) ಕಿಡಿಕಾರಿದ್ದಾರೆ.
ಹೊಳೆನರಸೀಪುರ (Holenarasipura) ತಾಲ್ಲೂಕಿನ ಬಿದರಕ್ಕ ಕೊಳಲು ಗೋಪಾಲಕೃಷ್ಣ ದೇಗುಲಕ್ಕೆ ಭೇಟಿ ನೀಡಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪೂಜೆ ಸಲ್ಲಿಸಿದರು. ದೇವೇಗೌಡರು, ಚನ್ನಮ್ಮ ದೇವೇಗೌಡರು, ಸಹೋದರ ಹೆಚ್ಡಿ.ಕೆ, ಅನಿತಾ ಕುಮಾರಸ್ವಾಮಿ, ನಿಖಿಲ್, ರೇವತಿ ಹೆಸರಲ್ಲಿ ರೇವಣ್ಣ ಅರ್ಚನೆ ಮಾಡಿಸಿದರು. ಬಳಿಕ ಮೊಮ್ಮಗ ಅವ್ಯಾನ್ ಹೆಸರಿನಲ್ಲಿ ಹೆಚ್ಡಿಕೆ ಅರ್ಚನೆ ಮಾಡಿಸಿದರು.ಇದನ್ನೂ ಓದಿ:ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ದೆಹಲಿ ಸಿಎಂ ಅತಿಶಿ
ಬಳಿಕ ಮಾತನಾಡಿದ ರೇವಣ್ಣ, ಪೊಲೀಸ್ ಅಧಿಕಾರಿಗಳನ್ನು ಇಟ್ಟುಕೊಂಡು ನನ್ನನ್ನು ಹೆದರಿಸಬೇಕು ಎಂದುಕೊಂಡಿದ್ದರೆ ಅದನ್ನು ಕನಸು ಎಂದು ತಿಳಿದುಕೊಳ್ಳಬೇಕಾಗುತ್ತದೆ. ಮುಂದೆ ಒಂದಲ್ಲ ಒಂದು ದಿನ ರಿವರ್ಸ್ ಹೊಡೆಯುವ ಕಾಲ ಬರುತ್ತದೆ. ಇವತ್ತು ಯರ್ಯಾರು ಏನೇನು ಮಾಡಿದ್ದಾರೆ? ನಮ್ಮ ತಂದೆ-ತಾಯಿ ಕಣ್ಣೀರು ಹಾಕುವಂತೆ ಮಾಡಿದವರು ಅನುಭವಿಸುತ್ತಾರೆ. ಕೆಲವೇ ದಿನಗಳಲ್ಲಿ ಕೆಲವು ರಾಜಕೀಯ ಮುಖಂಡರು ಲೈನ್ನಲ್ಲಿ ನಿಲ್ಲುವ ಕಾಲ ಬರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೆಚ್ಡಿ ಕುಮಾರಸ್ವಾಮಿ ಕೇಸ್ ಮತ್ತೇ ಓಪನ್ ಮಾಡಿಸಿದರ ಕುರಿತು ಮಾತನಾಡಿದ ಅವರು, ಕುಮಾರಣ್ಣರ ವಿರುದ್ಧ ಹತ್ತು ವರ್ಷದ ಕೇಸ್ ಇವತ್ತು ಮತ್ತೆ ಓಪನ್ ಮಾಡಿಸಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಅದನ್ನು ಕ್ಲೋಸ್ ಮಾಡಿಸಬಹುದಿತ್ತು. ಆ ಪಾಪದ ಕೆಲಸವನ್ನು ಅವರು ಮಾಡಲಿಲ್ಲ. ಕುಮಾರಣ್ಣ ನಲವತ್ತು ಜನ ಇಂಜಿನಿಯರ್ಗಳಿಗೆ ಪ್ರಮೋಷನ್ ಕೊಟ್ಟಿದ್ದಾರೆ. ಈ ರಾಜ್ಯಕ್ಕೆ ಅವರ ಕೊಡುಗೆ ತುಂಬಾ ಇದೆ. ಯಾರಾದರೂ ಒಬ್ಬರು ಇಂಜಿನಿಯರ್ ಕುಮಾರಣ್ಣ, ರೇವಣ್ಣ ಐದು ರೂಪಾಯಿ ತಗೊಂಡಿದ್ದಾರೆ ಎಂದು ಹೇಳಿದರೆ ನಾನು ರಾಜಕೀಯ ಬಿಟ್ಟು ಹೋಗುತ್ತೇವೆ ಎಂದು ಹೇಳಿದರು.
ಇವತ್ತು ಸರ್ಕಾರ ಯಾವ ಮಟ್ಟಕ್ಕಿದೆ? ಬಿಜೆಪಿ ಸರ್ಕಾರನಾ ನಲವತ್ತು ಪರ್ಸೆಂಟ್ ಅನ್ನೋರು ಈ ಜಿಲ್ಲೆಯೊಳಗೆ ಲೋಕೋಪಯೋಗಿ ಇಲಾಖೆಯಲ್ಲಿ 400 ಕೋಟಿ ರೂ. ಬಿಲ್ ಬಾಕಿ ಇದೆ. ಬಿಲ್ ತಗೊಬೇಕಾದರೆ 40% ದುಡ್ಡು ಬಾಕಿ ಇದೆ. ಈ ಸರ್ಕಾರಕ್ಕೆ ನಾಚಿಕೆಯಾಗಬೇಕು, ಮಾನ, ಮರ್ಯಾದೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.
ನಾನು ನಾಲ್ಕೈದು ತಿಂಗಳು ಸುಮ್ಮನಿದ್ದೆ. ಇನ್ನೊಂದು ಎರಡು ಮೂರು ತಿಂಗಳು ಹೋಗಲಿ. ವಿಧಾನಸಭೆ ಇರಲಿ, ಸಾರ್ವಜನಿಕವಾಗಿ ಈ ಸರ್ಕಾರದಲ್ಲಿ ಏನೇನು ನಡೆಯುತ್ತದೆ ಎನ್ನುವುದನ್ನು ಎಳೆಎಳೆಯಾಗಿ ಬಿಡಿಸುವ ಕಾಲ ಬರುತ್ತದೆ. ಚುನಾವಣೆ ಸಂದರ್ಭದಲ್ಲಿ ಎರಡು ಸಾವಿರ ರೂ. ಕೊಡ್ತಿವಿ ಅಂದ್ದಿದ್ದರು. ಬಸ್ ಫ್ರೀ ಅಂದ್ದಿದ್ದರು. ಇವತ್ತು ಈ ಜಿಲ್ಲೆಯಲ್ಲಿರುವಷ್ಟು ಎಣ್ಣೆ ಅಂಗಡಿ ಈ ರಾಜ್ಯದಲ್ಲಿ ಎಲ್ಲೂ ಇಲ್ಲ ಎಂದು ಹೇಳಿದರು.ಇದನ್ನೂ ಓದಿ: ದರ್ಶನ್, ಪವಿತ್ರಾಗೆ ಜೈಲೇಗತಿ – ಜಾಮೀನು ಅರ್ಜಿ ವಜಾ
ಶಾಸಕ ಬಾಲಕೃಷ್ಣ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ನಾನು ಸಿಎಂ ಆಗಿದ್ದಾಗ ವೆಸ್ಟೆಂಡ್ ಹೊಟೇಲ್ನಲ್ಲಿ ಇದ್ದಿದ್ದು ನಿಜ. ಇದೇ ಬಾಲಕೃಷ್ಣ ಬಗ್ಗೆ ಸಿದ್ದರಾಮಯ್ಯ (CM Siddaramaiah) ಹಾಗೂ ಮಹಾದೇವಪ್ಪ ಆರು ನೂರು ಕೋಟಿ ಹಣ ರೂ. ಕಾಮಗಾರಿ ಮಾಡದೇ ಬಿಲ್ ಮಾಡಿಕೊಂಡಿದ್ದಾರೆ ಎಂದು ವಿಧಾನ ಸಭೆಯಲ್ಲಿ ಆರೋಪ ಮಾಡಿದ್ದರು. ಅಂತವರನ್ನೆ ಸಿಎಂ ಜೊತೆಗಿಟ್ಟು ಕೊಂಡಿದ್ದಾರೆ. ಇವರು ನಾನು ಸಿಎಂ ಆಗಿದ್ದಾಗಲೂ ನನ್ನ ಜೊತೆಗೆ ಇದ್ದಾರೆ. ಆಗ ಚೂರಿ ಹಾಕಿ ಬಿಟ್ಟು ಹೋಗಿದ್ದರು. ತೆವಲು ತೀರಿಸಿಕೊಳ್ಳಲು ಹೇಳಿಕೆ ಕೊಟ್ಟರೆ ನಾನು ಉತ್ತರ ಕೊಡಬೇಕಾ? ಚನ್ನಪಟ್ಟಣದಲ್ಲಿ ನಾನೇ ಅಭ್ಯರ್ಥಿ. ಏನೇ ಆಗಲಿ ಎನ್ಡಿಎ ಅಭ್ಯರ್ಥಿ ನಾನೇ ಎಂದು ಕಿಡಿಕಾರಿದ್ದಾರೆ.
ತಮ್ಮ ವಿರುದ್ಧದ ಪ್ರಕರಣ ಕುರಿತು ಮಾತಾನಾಡಿ, ನ್ಯಾಯಾಲಯದಲ್ಲಿ ಫೈಟ್ ಮಾಡೋಣ ಅದರ ಬಗ್ಗೆ ಈಗ ಚರ್ಚೆ ಬೇಡ. ದೂರು ಕೊಟ್ಟಿದ್ದಾರೆ ಅದರ ಹಿಂದೆ ಯಾರಿದ್ದಾರೆ ಎಂದು ಗೊತ್ತಿದೆ. ನನ್ನ ಕೇಸ್ 2012 ರಿಂದ ಎಸ್ಐಟಿಯಲ್ಲಿ ನಡೆಯುತ್ತಿದೆ. ಹತ್ತು ವರ್ಷ ಆದರೂ ಅದನ್ನು ಯಾಕೆ ಇನ್ನೂ ಜೀವಂತವಾಗಿ ಇಟ್ಟುಕೊಂಡಿದ್ದೀರಿ. ನಾನು ಸಂವಿಧಾನ ಬದ್ಧ ರಾಜ್ಯಪಾಲರ ವಿಷಯಕ್ಕೆ ಸಂಭಂಧಿಸಿದಂತೆ ಮಾತಾಡಿದ್ದೆ. ನನ್ನ ಮೇಲೆ ಕೇಸ್ ಹಾಕಿದ್ದಾರೆ. ಇದಕ್ಕೆಲ್ಲ ಕೋರ್ಟ್ನಲ್ಲಿ ಉತ್ತರ ಕೊಡುವೆ ಎಂದು ಪ್ರತಿಕ್ರಿಯಿಸಿದ್ದಾರೆ.
ಹುಬ್ಬಳ್ಳಿ ಪ್ರಕರಣದ ಕೇಸ್ ಹಿಂಪಡೆಯುವ ಸರ್ಕಾರದ ನಿರ್ಧಾರ ವಿಚಾರವಾಗಿ ಮಾತನಾಡಿ, ಹುಬ್ಬಳ್ಳಿಯಲ್ಲಿ ನಡೆದ ಹಿಂದಿನ ಹಲವು ಪ್ರಕರಣದ ಕೇಸ್ಗಳನ್ನು ಹಿಂಪಡೆಯುವ ಕುರಿತು ಚರ್ಚೆ ನಡೆಯುತ್ತಿದೆ. ಕೇಸ್ಗಳನ್ನು ವಾಪಸ್ ಪಡೆಯಬೇಕಾದರೆ ಅದರ ಆಳ ಏನಿದೆ ಎಂದು ನೋಡಬೇಕು. ಇದರಿಂದ ಗಲಭೆಕೋರರು ಬಚಾವ್ ಆಗಬಹುದು. ಗಲಭೆಕೋರರಿಗೆ ಸರ್ಕಾರದ ಕಡೆಯಿಂದಲೇ ರಕ್ಷಣೆ ನೀಡಲಾಗುತ್ತಿದೆ. ದ್ವೇಷದ ರಾಜಕಾರಣ ಒಂದು ಕಡೆ ಹಾಗೂ ಸಮಾಜ ಉತ್ತಮ ರೀತಿಯಲ್ಲಿ ನಡೆದುಕೊಂಡು ಹೋಗಲು ಕಾಂಗ್ರೆಸ್ಗೆ ಇಷ್ಟ ಇಲ್ಲ ಎಂದು ಆರೋಪಿಸಿದರು.
ಸರ್ಕಾರ ಜಾಹೀರಾತು ವಿಚಾರವಾಗಿ ಮಾತನಾಡಿ, ಸರ್ಕಾರ ಜಾಹೀರಾತಿಗಾಗಿ 17 ಕೋಟಿ ರೂ. ಹಣ ವ್ಯಯ ಮಾಡಿದೆ. ಅದರಲ್ಲಿ ಒಂದು ಪಂಚಾಯತಿಯಲ್ಲಿ ಮಾಡೆಲ್ ಮಾಡಬಹುದಿತ್ತು. ಜಾಹೀರಾತು ಹೆಸರಲ್ಲಿ ರಾಜ್ಯದ ತೆರಿಗೆ ಹಣ ಲೂಟಿ ಹೊಡೆಯಲಾಗುತ್ತಿದೆ ಎಂದರು.ಇದನ್ನೂ ಓದಿ: ಚನ್ನಪಟ್ಟಣ ಚುನಾವಣೆಗೆ ನನ್ನ ಕುಟುಂಬದವರಲ್ಲ, ನಾನೇ ಅಭ್ಯರ್ಥಿ – ಡಿಕೆಶಿ
ಮೈಸೂರು: ಚನ್ನಪಟ್ಟಣ ಚುನಾವಣೆಗೆ (Channapattana Election) ನನ್ನ ಕುಟುಂಬದವರಲ್ಲ, ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಖಡಕ್ಕಾಗಿ ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಾವು ವೇದಿಕೆಯನ್ನು ಸೆಟ್ ಮಾಡಿಕೊಳ್ಳುತ್ತಿದ್ದೇವೆ. ಎಂಪಿ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಹಿನ್ನಡೆ ಆಗಿತ್ತು. ಎಂಎಲ್ಎ ಚುನಾವಣೆಯಲ್ಲಿಯೂ ಹೆಚ್ಚು ಹಿನ್ನಡೆಯಾಗಿತ್ತು. ಈಗ ನಮ್ಮ ಬೇಸ್ ಸ್ಟ್ರಾಂಗ್ ಮಾಡ್ತಾ ಇದ್ದೀವಿ. ನಮ್ಮ ಕೆಲಸಕ್ಕೆ ಜನರು ಕೈ ಹಿಡಿಯುತ್ತಾರೆ ಎಂಬ ವಿಶ್ವಾಸ ಇದೆ ಎಂದರು.ಇದನ್ನೂ ಓದಿ: ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ – ಸಿದ್ದಿಕಿಗೆ ಹತ್ಯೆಗೆ ಸರ್ಕಾರವೇ ಹೊಣೆ: ರಾಗಾ ಸಿಡಿಮಿಡಿ
ನಿಖಿಲ್ (Nikhil Kumaraswamy) ಚುನಾವಣೆ ಸ್ಪರ್ಧೆಗೆ ಒತ್ತಾಯದ ವಿಚಾರವಾಗಿ ಮಾತನಾಡಿ, ಅವರ ಪಕ್ಷದಲ್ಲಿ ಯಾರೂ ಬೇಕಾದರೂ ನಿಲ್ಲಲಿ. ಅದು ಅವರ ಪಕ್ಷಕ್ಕೆ ಬಿಟ್ಟಿದ್ದು, ಅದರ ಬಗ್ಗೆ ನಾನು ಮಾತಾಡಲ್ಲ. ಚನ್ನಪಟ್ಟಣದಲ್ಲಿ ವ್ಯಕ್ತಿ ಮೇಲೆ ಚುನಾವಣೆ ನಡೆಯಲ್ಲ. ಪಕ್ಷದ ಸಿದ್ಧಾಂತದ ಮೇಲೆ ಚುನಾವಣೆ ಮಾಡಲು ಹೊರಟಿದ್ದೇನೆ. ಅವರು ಅಭ್ಯರ್ಥಿಯನ್ನು ಜೆಡಿಎಸ್ ಆದರೂ ಮಾಡಿಕೊಳ್ಳಲಿ, ಬಿಜೆಪಿ ಆದರೂ ಮಾಡಿಕೊಳ್ಳಲಿ. ನಮ್ಮ ಮನೆಯನ್ನು ನಾವು ರಿಪೇರಿ ಮಾಡಿಕೊಂಡರೆ ಸಾಕು ಎಂದು ಹೇಳಿದರು.
ಸಿಎಂ ಸಿದ್ದರಾಮಯ್ಯ (CM Siddaramaiah) ರಾಜೀನಾಮೆಗೆ ಬಿಜೆಪಿ ಹೇಳಿಕೆ ವಿಚಾರವಾಗಿ ಮಾತನಾಡಿ, ಬಿಜೆಪಿಯವರು ಅದಕ್ಕೆ ಕಾಯುತ್ತಾರೆ. ಇನ್ನು 10 ವರ್ಷ ಅವರೇ ಇರುತ್ತಾರೆ. ಬಿಜೆಪಿಯವರು 10 ವರ್ಷ ಅದೇ ಕೂಗು ಕೂಗುತ್ತಾರೆ. ಅದೇ ಮಾತನಾಡುತ್ತಾರೆ. 10 ವರ್ಷ ಯಾರೂ ಸಿಎಂ ಆಗಿರುತ್ತಾರೆ ಎಂಬ ಬಿಜೆಪಿಯವರ ಪ್ರಶ್ನೆಗೆ ಖಡಕ್ಕಾಗಿ ಉತ್ತರಿಸಿದ್ದಾರೆ.
ಬಾಬಾ ಸಿದ್ದಿಕಿ ಗುಂಡೇಟು ವಿಚಾರವಾಗಿ ಮಾತನಾಡಿ, ಸಿದ್ದಿಕಿ ಬಾಬಾ (Baba Siddique) ನನಗೂ ಆತ್ಮೀಯರು. ನಮ್ಮ ಪಕ್ಷದಲ್ಲಿ ಇದ್ದವರು, ಮಂತ್ರಿ ಸಹ ಆಗಿದ್ದರು. ಈ ಘಟನೆಯಿಂದ ಮುಂಬೈನಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಗೊತ್ತಾಗುತ್ತದೆ. ಮುಂದೆ ಚುನಾವಣೆ ಟೈಂ ಸಹ ಇದೆ ಆದ್ದರಿಂದ ಶಾಂತಿ ಕಾಪಾಡಬೇಕಾಗಿದೆ. ಈ ಘಟನೆ ಖಂಡನೀಯ ಕೃತ್ಯ ಎಸಗಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.ಇದನ್ನೂ ಓದಿ: ಮಾಜಿ ಸಚಿವ ಸಿದ್ದಿಕಿ ಹತ್ಯೆ – ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಶಿಲ್ಪಾಶೆಟ್ಟಿ, ಆಸ್ಪತ್ರೆಗೆ ಬಾಲಿವುಡ್ ತಾರಾ ದಂಡೇ ದೌಡು
ಬೆಂಗಳೂರು: ಚನ್ನಪಟ್ಟಣದಲ್ಲಿ (Channapatna) ಈ ಬಾರಿಯೂ ಜನರು ಜೆಡಿಎಸ್ (JDS) ಕೈ ಹಿಡಿಯುತ್ತಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಿಶ್ವಾಸ ವ್ಯಕ್ತಪಡಿಸಿದರು.
ಬಿಡದಿ ತೋಟದ ಮನೆಯಲ್ಲಿ ಚನ್ನಪಟ್ಟಣ ಮುಖಂಡರು, ನಾಯಕರ ಸಭೆ ಬಳಿಕ ಮಾತನಾಡಿದ ಅವರು, ಒಂದು ವಾರದಿಂದ ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ 5 ಜಿಲ್ಲಾ ಪಂಚಾಯಿತಿ, ಟೌನ್ನಲ್ಲಿ ಸಭೆ ಮಾಡಿದ್ದಾರೆ. ಅನೇಕ ವರ್ಷಗಳಿಂದ ಚನ್ನಪಟ್ಟಣದಲ್ಲಿ ಜನರು ನಮ್ಮ ಪರ ನಿಂತಿದ್ದಾರೆ. ಕಾರ್ಯಕರ್ತರು ಪಕ್ಷದ ಪರ ದುಡಿಮೆ ಮಾಡಿದ್ದಾರೆ. ಈ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಇನ್ನೊಂದು ವಾರದಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್: ಹೆಚ್ಡಿಕೆ
ಇವತ್ತು ಬಿಡದಿ ಮನೆಯಲ್ಲಿ ಕುಮಾರಸ್ವಾಮಿ ಅವರು ಮನಸು ಬಿಚ್ಚಿ ಮಾತಾಡಿದ್ದಾರೆ. ವಾಸ್ತವ ಅಂಶ ಕಾರ್ಯಕರ್ತರ ಮುಂದೆ ಇಟ್ಟಿದ್ದಾರೆ. ಹಿಂದಿನಿಂದಲೂ ಕಾರ್ಯಕರ್ತರು ಚುನಾವಣೆ ಮಾಡಿಕೊಂಡು ಬರ್ತಿದ್ದಾರೆ. ಅವರ ಮನಸಿನ ಭಾವನೆ ಕ್ರೋಡೀಕರಿಸೋ ಕೆಲಸ ಮಾಡಿದ್ದೇವೆ. ಸಭೆ ಯಶಸ್ವಿಯಾಗಿ ಆಗಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ನ 80 ಸಾವಿರ ಮತಗಳು ಇವೆ. ನಮಗೆ ಗೆಲ್ಲಲು, ಹೋರಾಟ ಮಾಡಲು 20-25 ಸಾವಿರ ಮತ ಮಾತ್ರಬೇಕು ಒಳ್ಳೆ ಲೀಡ್ ಕಾಣೋಕೆ. NDA ಅಭ್ಯರ್ಥಿ ಗೆಲ್ಲಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರ ಅಭಿಪ್ರಾಯ ಪಡೆಯೋ ಕೆಲಸ ಆಗಿದೆ ಎಂದರು.
ತಾವೇ ಅಭ್ಯರ್ಥಿ ಆಗೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾರೇ ಅಭ್ಯರ್ಥಿ ಆದರೂ 80 ಸಾವಿರ ಮತ ಪಕ್ಷದ ಚಿಹ್ನೆ ಅಡಿಯಿದೆ. ದೇವೇಗೌಡರ ಅನೇಕ ಕೆಲಸಗಳು, ದೂರದೃಷ್ಟಿ ಇಟ್ಟುಕೊಂಡು ಇಗಲೂರು ಬ್ಯಾರೇಜ್ ಕಟ್ಟಿದ್ದಾರೆ. ಈ ಎಲ್ಲಾ ಕೆಲಸಗಳು ಈ ಭಾಗದ ರೈತರು, ಜನರ ಮನಸಿನಲ್ಲಿ ಇವೆ. ಕುಮಾರಸ್ವಾಮಿ ಅವರು ಚನ್ನಪಟ್ಟಣಕ್ಕೆ 1,500 ಕೋಟಿ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿದ್ದಾರೆ. ಸಾಮಾನ್ಯ ಕಾರ್ಯಕರ್ತ ನಿಂತರೂ ನೂರಕ್ಕೆ ನೂರು ಜೆಡಿಎಸ್ಗೆ ಜನ ಆಶೀರ್ವಾದ ಮಾಡ್ತಾರೆ. ನಿಖಿಲ್ ಕುಮಾರಸ್ವಾಮಿ ನಿಲ್ಲಬೇಕು ಅಂತಾ ಏನಿಲ್ಲ. ನಾನೊಬ್ಬ ಕಾರ್ಯಕರ್ತನಾಗಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಮನಸಿನಲ್ಲಿ ಏನಾದ್ರು ನೋವುಗಳು ಇದ್ದರೆ ಅವುಗಳನ್ನು ಸರಿ ಮಾಡೋ ಕೆಲಸ ಪ್ರಾಮಾಣಿಕವಾಗಿ ಮಾಡ್ತೀನಿ ಎಂದು ತಿಳಿಸಿದರು. ಇದನ್ನೂ ಓದಿ: ದುಷ್ಟ ಶಕ್ತಿ ಯಾರಾದರೂ ರಾಜ್ಯದಲ್ಲಿ ಇದ್ದಾರೆ ಅಂದರೆ ಅದು ಸಿದ್ದರಾಮಯ್ಯ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಇನ್ನೊಂದು ವಾರದಲ್ಲಿ ಚನ್ನಪಟ್ಟಣ (Channapatna) ಅಭ್ಯರ್ಥಿಯನ್ನು ಫೈನಲ್ ಮಾಡುತ್ತೇವೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಸ್ಪಷ್ಟಪಡಿಸಿದ್ದಾರೆ.
ಬಿಡದಿ ತೋಟದ ಮನೆಯಲ್ಲಿ ಚನ್ನಪಟ್ಟಣ ಭಾಗದ ಮುಖಂಡರು, ಕಾರ್ಯಕರ್ತರ ಸಭೆ ಬಳಿಕ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಎರಡು ಬಾರಿ ಜೆಡಿಎಸ್ (JDS) ಗೆದ್ದಿದೆ. ಈ ಹಿನ್ನಲೆಯಲ್ಲಿ ದೆಹಲಿ ಮತ್ತು ರಾಜ್ಯ ಬಿಜೆಪಿ ನಾಯಕರ ಜೊತೆ ಮಾತನಾಡಿ ಜೆಡಿಎಸ್ಗೆ ಟಿಕೆಟ್ ಬಿಟ್ಟು ಕೊಡಲು ಮನವಿ ಮಾಡಿದ್ದಾರೆ. ಬಿಜೆಪಿ ನಾಯಕರ ಸಹಮತದೊಂದಿಗೆ ಅವರ ಅಭಿಪ್ರಾಯ ಪಡೆದು ತೀರ್ಮಾನ ಮಾಡೋಣ ಎಂದು ಹೇಳಿದ್ದೇನೆ. ಎಲ್ಲರು ಒಟ್ಟಾಗಿ ಕೆಲಸ ಮಾಡಿ ಎಂದು ಸೂಚನೆ ನೀಡಿದ್ದೇನೆ ಎಂದರು. ಇದನ್ನೂ ಓದಿ: ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅಭ್ಯರ್ಥಿ ಆಗಬೇಕು ಎಂಬ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿಖಿಲ್ ಕುಮಾರಸ್ವಾಮಿ ನಿಲ್ಲಬೇಕು ಎಂದು 95% ನಾಯಕರು, ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ನಾವು ಈಗ ಇರುವ ಸನ್ನಿವೇಶ ನೋಡಬೇಕು. ಏನೇನು ಬೆಳವಣಿಗೆಗಳು ಇವೆ ಎಂದು ನೋಡಬೇಕು. ನಿಖಿಲ್ ಮಂಡ್ಯದಲ್ಲಿ ನಿಲ್ಲಿಸಿದಾಗ ಎಲ್ಲಾ ಪಕ್ಷಗಳು ಒಂದಾಗಿ ಸೋಲಿಸಿದರು. ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲಾ ಒಂದಾಗಿದ್ದರು. ಅವೆಲ್ಲಾ ನೋಡಿದ್ದೇವೆ. ಚನ್ನಪಟ್ಟಣದಲ್ಲಿ ನನಗೆ ಎನ್ಡಿಎ ಅಭ್ಯರ್ಥಿ ಗೆಲ್ಲಲೇಬೇಕು. ನಿಖಿಲ್ ಅಥವಾ ಬೇರೆ ಅವರು ಅಭ್ಯರ್ಥಿ ಅನ್ನೋದಕ್ಕಿಂತ ಹೆಚ್ಚಾಗಿ ಎನ್ಡಿಎ ಅಭ್ಯರ್ಥಿ ಗೆಲುವು ಕಾಣಬೇಕು. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರು, ಕಾರ್ಯಕರ್ತರು ಎಲ್ಲರು ಸೇರಿ ಎರಡು ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಪಡೆದು ಅಭ್ಯರ್ಥಿ ಅಂತಿಮ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕಾರವಾರ| ಸಮುದ್ರದಲ್ಲಿ ಮುಳುಗುತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಪದೇ ಪದೇ ಚನ್ನಪಟ್ಟಣಕ್ಕೆ ಡಿಕೆ ಶಿವಕುಮಾರ್ (DK Shivakumar) ಪ್ರವಾಸ ಮಾಡುತ್ತಿದ್ದರೂ ಏನು ಆಗಲ್ಲ. ಡಿಕೆ ಶಿವಕುಮಾರ್ ಎಷ್ಟು ಬಾರಿ ಚನ್ನಪಟ್ಟಣಕ್ಕೆ ಭೇಟಿ ಮಾಡಿದರೂ ಅವರಿಗೇನು ಇಲ್ಲಿ ಫಲ ಸಿಗಲ್ಲ. ಇನ್ನೊಂದು ವಾರದಲ್ಲಿ ಚನ್ನಪಟ್ಟಣ ಟಿಕೆಟ್ ಫೈನಲ್ ಆಗುತ್ತದೆ. ಚುನಾವಣೆ ದಿನಾಂಕ 4-5 ದಿನಗಳಲ್ಲಿ ಯಾವಾಗ ಬೇಕಾದರೂ ಘೋಷಣೆ ಆಗಬಹುದು. ಕೂಡಲೇ ಬಿಜೆಪಿ ಹೈಕಮಾಂಡ್, ರಾಜ್ಯ ನಾಯಕರ ಜೊತೆ ಚರ್ಚೆ ಮಾಡಿ ಅಭ್ಯರ್ಥಿ ಫೈನಲ್ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಸಹರಾ ಮರುಭೂಮಿಯಲ್ಲಿ ಭಾರೀ ಮಳೆ – 50 ವರ್ಷದ ನಂತರ ಕೆರೆಗಳು ಭರ್ತಿ