Tag: jeep

  • ಮಹಾರಾಷ್ಟ್ರದ ಬಾಂದ್ರಾ ಕಣಿವೆ ಬಳಿ ಮೈಸೂರು ಅಶ್ವಾರೋಹಿ ಪಡೆಯ ಪೊಲೀಸರ ಜೀಪು ಪಲ್ಟಿ

    ಮಹಾರಾಷ್ಟ್ರದ ಬಾಂದ್ರಾ ಕಣಿವೆ ಬಳಿ ಮೈಸೂರು ಅಶ್ವಾರೋಹಿ ಪಡೆಯ ಪೊಲೀಸರ ಜೀಪು ಪಲ್ಟಿ

    ಮೈಸೂರು: ಅಶ್ವಾರೋಹಿ ಪಡೆಯ ಪೊಲೀಸರ ಜೀಪು ಪಲ್ಟಿಯಾದ ಘಟನೆ ಮಹಾರಾಷ್ಟ್ರದ ಬಾಂದ್ರಾ ಕಣಿವೆ ಬಳಿ ನಡೆದಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ರಾಷ್ಟ್ರೀಯ ಅಶ್ವಾರೋಹಿ ಕ್ರೀಡಾ ಕೂಟದಲ್ಲಿ ಮೈಸೂರಿನ ಅಶ್ವಾರೋಹಿ ಅಧಿಕಾರಿಗಳು ಭಾಗಿಯಾಗಿದ್ದರು. ಬಿಹಾರದಲ್ಲಿ ಆಯೋಜಿಸಿದ್ದ ಕ್ರೀಡಾಕೂಟ ಮುಗಿಸಿ ಮೈಸೂರಿಗೆ ಬರುವ ವೇಳೆ ಈ ಅಪಘಾತ ನಡೆದಿದೆ. ತಿರುವಿನಲ್ಲಿ ನಿಯಂತ್ರಣಕ್ಕೆ ಸಿಗದೆ ಜೀಪು ಪಲ್ಟಿಯಾಗಿದೆ.

    ಜೀಪಿನಲ್ಲಿದ್ದ ಮೌಟೆಂಡ್ ಎಸಿಪಿ ಸೇರಿದಂತೆ ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಮಾರು ಅರ್ಧ ಗಂಟೆ ಕಾಲ ಜೀಪಿನಿಂದ ಹೊರಬರಲಾಗದೆ ನರಳಾಡಿದ್ದು, ಕಾರಿನ ಗಾಜು ಒಡೆದು ಮೌಟೆಂಡ್ ಪೊಲೀಸರು ಹೊರಬಂದಿದ್ದಾರೆ. ಘಟನೆಯಲ್ಲಿ ನಾಲ್ವರಿಗೂ ಸಣ್ಣಪುಟ್ಟ ಪ್ರಮಾಣದ ಗಾಯಗಳಾಗಿವೆ.

     

    ಸ್ಥಳೀಯ ಪೊಲೀಸರ ಸಹಾಯದಿಂದ ಜೀಪು ಮೇಲಕ್ಕೆತ್ತಲಾಗಿದೆ.

     

  • ಅಂದು ರೈತರ ಮೇಲೆ ಜೀಪ್ ಹತ್ತಿಸಿದ್ರು, ಇಂದು ಬಂಧಿಸಿ ಹಿಗ್ಗಾಮುಗ್ಗಾ ಥಳಿಸಿದ ಅರಣ್ಯ ಇಲಾಖೆ ಅಧಿಕಾರಿಗಳು!

    ಅಂದು ರೈತರ ಮೇಲೆ ಜೀಪ್ ಹತ್ತಿಸಿದ್ರು, ಇಂದು ಬಂಧಿಸಿ ಹಿಗ್ಗಾಮುಗ್ಗಾ ಥಳಿಸಿದ ಅರಣ್ಯ ಇಲಾಖೆ ಅಧಿಕಾರಿಗಳು!

    ಚಿಕ್ಕಮಗಳೂರು: ಅಂದು ರೈತರ ಮೇಲೆ ಜೀಪ್ ಹತ್ತಿಸೋಕೆ ಹೋಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ಇಂದು ಮತ್ತೆ ತಮ್ಮ ರಾಕ್ಷಸ ಪ್ರವೃತ್ತಿ ಮೆರೆದಿದ್ದಾರೆ.

    ಚಿಕ್ಕಮಗಳೂರಿನ ತರಿಕೆರೆ ತಾಲೂಕಿನ ಎಂಸಿ.ಹಳ್ಳಿಯ ಸರ್ವೆ ನಂಬರ್ 4ರಲ್ಲಿ 438 ಎಕರೆ ಜಾಗಕ್ಕೆ ನಾಲ್ಕು ದಶಕಗಳಿಂದ ಅರಣ್ಯ ಇಲಾಖೆ ಹಾಗೂ ಸ್ಥಳೀಯರ ನಡುವೆ ಹಗ್ಗಜಗ್ಗಾಟ ನಡೆಯುತ್ತಲೇ ಇದೆ. ಇದನ್ನೂ ಓದಿ: ಹೊಲಕ್ಕೆ ನುಗ್ಗಿ ಅರಣ್ಯಾಧಿಕಾರಿಗಳ ಆಟಾಟೋಪ – ರೈತ ಮಹಿಳೆಯರ ಮೇಲೆ ಜೀಪ್ ಹತ್ತಿಸಲು ಯತ್ನ

    ಈಗ ಮತ್ತೆ ಈ ಅರಣ್ಯಾಧಿಕಾರಿಗಳು ರಾತ್ರೋರಾತ್ರಿ ರೈತರ ತೆಂಗಿನ ಮರಗಳನ್ನು ಕಡಿದು ಹಾಕಿ, ಅವರನ್ನ ಬಂಧಿಸಿ ಮನಸ್ಸೋ ಇಚ್ಛೆ ಮೈಮೇಲೆ ಬಾಸುಂಡೆ ಬರೋ ರೀತಿ ಥಳಿಸಿದ್ದಾರೆ. ಅರಣ್ಯ ಇಲಾಖೆ ಕಂದಾಯ ಭೂಮಿಗೆ ಬೇಲಿ ಹಾಕೋಕೆ ರೈತರ ಮೇಲೆ ದರ್ಪ ತೋರ್ತಿದ್ದಾರೆ. ಇದ್ರಿಂದ ರೋಸಿ ಹೋಗಿರೋ ರೈತರು, ಕೂಡಲೇ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಮಧ್ಯ ಪ್ರವೇಶಸಿ ಈ ಜಾಗ ಯಾರದ್ದೆಂದು ಸ್ಪಷ್ಟಪಡಿಸಲಿ, ಇಲ್ಲವಾದ್ರೆ ನಮಗೆ ಇಚ್ಛಾಮರಣಕ್ಕೆ ಅನುಮತಿ ನೀಡಿಲಿ ಎಂದು ಆಗ್ರಹಿಸಿದ್ದಾರೆ.

    ಸದ್ಯ ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿವೆ.

  • ಕಾರು, ಜೀಪ್ ಕದಿಯುತ್ತಿದ್ದ ಕಳ್ಳನನ್ನು ಮರಕ್ಕೆ ಕಟ್ಟಿ ಬಿತ್ತು ಸಖತ್ ಗೂಸಾ

    ಕಾರು, ಜೀಪ್ ಕದಿಯುತ್ತಿದ್ದ ಕಳ್ಳನನ್ನು ಮರಕ್ಕೆ ಕಟ್ಟಿ ಬಿತ್ತು ಸಖತ್ ಗೂಸಾ

    ವಿಜಯಪುರ: ಹಲವಾರು ದಿನಗಳಿಂದ ಟ್ಯಾಕ್ಸಿ ಸ್ಟ್ಯಾಂಡ್ ನಲ್ಲಿ ಕಳ್ಳತನ ಮಾಡುತ್ತಿದ್ದ ಯುವಕನನ್ನು ಹಿಡಿದು ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ.

    ಮುದ್ದೇಬಿಹಾಳ ಪಟ್ಟಣದ ಟ್ಯಾಕ್ಸಿ ಸ್ಟ್ಯಾಂಡ್ ನಲ್ಲಿ ಸಿಕಂದರ್ ನಾಯ್ಕೋಡಿ ಎಂಬ ಯುವಕ ನಿಲ್ದಾಣದಲ್ಲಿ ನಿಲ್ಲುತ್ತಿದ್ದ ಕಾರು, ಜೀಪ್ ಸೇರಿದಂತೆ ಇತರೆ ವಾಹನಗಳಲ್ಲಿನ ಸಾಮಗ್ರಿಗಳನ್ನು ಕದಿಯುತ್ತಿದ್ದ.

    ಹೀಗಾಗಿ ರವಿವಾರ ಅದೇ ರೀತಿ ಕದಿಯಲು ಬಂದಾಗ ರೆಡ್ ಹ್ಯಾಂಡ್ ಆಗಿ ಸಿಕಂದರ್ ಸ್ಥಳೀಯರಿಗೆ ಸಿಕ್ಕಿದ್ದಾನೆ. ಆಗ ಸ್ಥಳೀಯರು ಮರಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಮುದ್ದೇಬಿಹಾಳ ಪೊಲೀಸರಿಗೆ ಒಪ್ಪಿಸಿದ್ದಾರೆ.

  • ಟ್ರಕ್, ಜೀಪ್ ಡಿಕ್ಕಿ- ಒಂದೇ ಕುಟುಂಬದ 10 ಮಂದಿ ಸಾವು

    ಟ್ರಕ್, ಜೀಪ್ ಡಿಕ್ಕಿ- ಒಂದೇ ಕುಟುಂಬದ 10 ಮಂದಿ ಸಾವು

    ಅಹಮದಾಬಾದ್: ಟ್ರಕ್ ಹಾಗೂ ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ 10 ಮಂದಿ ಸಾವನ್ನಪ್ಪಿರುವ ಘಟನೆ ಅಹಮದಾಬಾದ್‍ನಲ್ಲಿ ನಡೆದಿದೆ.

    ಇಂದು ಬೆಳಗ್ಗೆ 6 ಗಂಟೆ ವೇಳೆಯಲ್ಲಿ ಅಹಮದಾಬಾದ್‍ನ ಧಂಡುಕಾ- ಬರ್ವಾಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಜೀಪ್ ಟ್ರಕ್‍ಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಡ್ರೈವರ್ ಕೂಡ ಸಾವನ್ನಪ್ಪಿದ್ದು, ಆತ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

    ಗಂಟೆಗೆ 70 ಕಿ.ಮೀ ವೇಗದಲ್ಲಿ ಹೋಗುತ್ತಿದ್ದ ಜೀಪ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್‍ಗೆ ಡಿಕ್ಕಿಯಾಗಿದೆ. ಜೀಪ್ ಚಾಲಕ ಬ್ರೇಕ್ ಹಾಕಿದನಾದ್ರೂ ಎರಡೂ ವಾಹನಗಳು ವೇಗವಾಗಿ ಬರುತ್ತಿದ್ದರಿಂದ ಅಪಘಾತ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್‍ವಿ ಅಸರಿ ಹೇಳಿದ್ದಾರೆ.

    ಮೃತರನ್ನು ಕಿರಣ್ ಕಮಲೇಶ್ ಶಾ(45), ಅವರ ಪುತ್ರಿ ಜಿನಾಲಿ(20), ಮಗ ನೆಮಿಲ್(17), ಶಶಿಕಾಂತ್(56) ರೀಟಾ(52), ಧಾರಾ(25) ಹಿತೇಶ್ ಶಾ(52) ವಿಭಾ(48), ನಂದೀಪ್(22) ಹಾಗೂ ವಡೋದರಾದ ಮತ್ತೋರ್ವ ಸಂಬಂಧಿಕರು ಎಂದು ಗುರುತಿಸಲಾಗಿದೆ.

    ಆಸ್ಪತ್ರೆ ವೈದ್ಯರು ಮೃತರ ಸಂಬಂಧಿಕರೊಬ್ಬರನ್ನು ಸಂಪರ್ಕಿಸಿ ಅಪಘಾತದ ಬಗ್ಗೆ ಮಾಹಿತಿ ನೀಡಿದ್ದಾರೆ.

  • ಮಾನವ ಗುರಾಣಿ ಕೇಸ್: ಯುವಕನಿಗೆ ಮಾನವ ಹಕ್ಕುಗಳ ಆಯೋಗದಿಂದ 10 ಲಕ್ಷ ರೂ. ಪರಿಹಾರ

    ಮಾನವ ಗುರಾಣಿ ಕೇಸ್: ಯುವಕನಿಗೆ ಮಾನವ ಹಕ್ಕುಗಳ ಆಯೋಗದಿಂದ 10 ಲಕ್ಷ ರೂ. ಪರಿಹಾರ

    ಶ್ರೀನಗರ: ಸೇನೆಯ ಜೀಪಿನಲ್ಲಿ ಮಾನವ ಗುರಾಣಿಯಾಗಿ ಬಳಕೆಯಾಗಿದ್ದ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

    ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಆಯೋಗ ಸಂತ್ರಸ್ತ ಯುವಕ ಫಾರೂಖ್ ಅಹ್ಮದ್ ದಾರ್‍ಗೆ ಮುಂದಿನ 6 ವಾರದ ಒಳಗಡೆ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

    ಈ ಪ್ರಕರಣದ ನಡೆದ ಬಳಿಕ ಭಾರತೀಯ ಸೇನೆ ಮಾನವ ಗುರಾಣಿಯಾಗಿ ಯುವಕನನ್ನು ಬಳಸಿದ್ದಕ್ಕೆ, ಲೀತುಲ್ ಗೊಗೋಯ್ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿತ್ತು. ಈ ಸುದ್ದಿ ಚರ್ಚೆಯಾಗುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾಗರಿಕರ ಜೀವ ರಕ್ಷಿಸಲು ನಾನು ಈ ಕೆಲಸ ಮಾಡಬೇಕಾಯಿತು ಎಂದು ಹೇಳಿದ್ದರು.

    ಏನಿದು ಪ್ರಕರಣ?
    ಬದ್ಗಾಂ ಜಿಲ್ಲೆಯ ಉಟಿಗಾಮ್ ಗ್ರಾಮದಲ್ಲಿ ಏಪ್ರಿಲ್ 19ರಂದು ಶ್ರೀನಗರ ಲೋಕಸಭೆಯ ಉಪಚುನಾವಣೆ ನಡೆಯುತಿತ್ತು. ಈ ಚುನಾವಣೆಯನ್ನು ಕಾಶ್ಮೀರ ಪ್ರತ್ಯೇಕವಾದಿಗಳು ವಿರೋಧಿಸಿದ್ದರು. ಚುನಾವಣೆಗೆ ನಿಯೋಜನೆಗೊಂಡಿದ್ದ ಸೇನಾ ಸಿಬ್ಬಂದಿಯನ್ನು ಪ್ರತಿಭಟನಾಕಾರರು ಸುತ್ತುವರೆದು ದಾಳಿ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಎಲ್ಲರನ್ನು ರಕ್ಷಿಸಲು ಲೀತುಲ್ ಗೊಗೋಯ್ ಅವರು ಫಾರೂಖ್ ಅಹ್ಮದ್ ದಾರ್‍ನನ್ನು ಸೇನಾ ಜೀಪಿಗೆ ಕಟ್ಟಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.

    ಈ ಕುರಿತು ಸೇನೆ ತನಿಖೆಗೆ ಆದೇಶಿಸಿತ್ತು. ಯುವಕನನ್ನು ಜೀಪ್ ಗೆ ಕಟ್ಟಿ ಮೆರವಣಿಗೆ ಮಾಡಿದ್ದ ಸೇನಾ ಲೀತುಲ್   ಅವರ ವಿರುದ್ಧ ಪೊಲೀಸರು ಎಫ್‍ಐಆರ್ ಸಹ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೇನಾ ಕೋರ್ಟ್ ಕ್ಲೀನ್ ಚಿಟ್ ನೀಡಿ ಲೀತುಲ್ ಗೊಗೋಯ್ ಅವರನ್ನು ಶ್ಲಾಘಿಸಿತ್ತು.

    ಕಲ್ಲು ತೂರಾಟಗಾರರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಮಕ್ಕಳು, ಮಹಿಳೆಯರೂ ಇದ್ದರು. ನಾನು ಧ್ವನಿವರ್ಧಕದಲ್ಲಿ ಎಚ್ಚರಿಕೆ ಕೊಟ್ಟಿದ್ದರೂ ಪ್ರತಿಭಟನೆಕಾರರು ಮಣಿಯಲಿಲ್ಲ. ಹೀಗಾಗಿ ಅಲ್ಲಿದ್ದ ಚುನಾವಣಾ ಅಧಿಕಾರಿಗಳನ್ನು, ಜನರನ್ನು, ಪೊಲೀಸರನ್ನು ರಕ್ಷಿಸಲು ನಾನು ಆತನನ್ನು ಸೇನಾ ಜೀಪಿಗೆ ಕಟ್ಟಿದ್ದೆ. ಒಂದು ವೇಳೆ ನಾನು ಗೋಲಿಬಾರ್ ನಡೆಸಲು ಆದೇಶಿಸಿದ್ದರೆ 12ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದರು ಎಂದು ಲೀತುಲ್ ಅವರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದರು.

    https://www.youtube.com/watch?v=IoFRCMH6Z4E

     

  • ಯಾತ್ರಾಸ್ಥಳ ಕೊಡಚಾದ್ರಿಯಲ್ಲಿ ಆಕ್ಸಲ್ ಕಟ್ಟಾಗಿ ಜೀಪ್ ಪಲ್ಟಿ- ಮಹಿಳೆಯ ದುರ್ಮರಣ

    ಯಾತ್ರಾಸ್ಥಳ ಕೊಡಚಾದ್ರಿಯಲ್ಲಿ ಆಕ್ಸಲ್ ಕಟ್ಟಾಗಿ ಜೀಪ್ ಪಲ್ಟಿ- ಮಹಿಳೆಯ ದುರ್ಮರಣ

    ಶಿವಮೊಗ್ಗ: ಪುರಾಣ ಪ್ರಸಿದ್ಧ ಯಾತ್ರ ಸ್ಥಳ ಕೊಡಚಾದ್ರಿಗೆ ಹೋಗುವಾಗ ಜೀಪ್ ಪಲ್ಟಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.

    ಮೃತ ಮಹಿಳೆಯನ್ನು ಕೇರಳ ತ್ರಿಶ್ಯೂರ್ ಮೂಲದ 38 ವರ್ಷದ ಸರಿತಾ ಎಂದು ಗುರುತಿಸಲಾಗಿದೆ. ಜೀಪಿನಲ್ಲಿ ಇದ್ದ ಇನ್ನಿತರರಿಗೆ ಗಾಯಗಳಾಗಿದ್ದು, ಅವರನ್ನು ಕುಂದಾಪುರ ಆಸ್ಪತ್ರೆಗೆ ಸೇರಿಸಲಾಗಿದೆ

    ಕೇರಳದಿಂದ ಬಂದಿದ್ದ ಎಂಟು ಜನ ಯಾತ್ರಿಕರು ಇದ್ದ ಈ ಜೀಪ್ ಕೊಡಚಾದ್ರಿಯ ದುರ್ಗಮ ಮಾರ್ಗದಲ್ಲಿ ಹತ್ತುವಾಗ ಆಕ್ಸಲ್ ಕಟ್ಟಾಗಿದೆ. ಇದರಿಂದಾಗಿ ಜೀಪ್ ನಿಯಂತ್ರಣ ತಪ್ಪಿದಾಗ ಮುಂದಿನ ಸೀಟಿನಲ್ಲಿ ಕೂತಿದ್ದ ಮಹಿಳೆ ಕೆಳಗೆ ಉರುಳಿ, ಅವರ ಮೇಲೆ ಜೀಪು ಪಲ್ಟಿಯಾಗಿ ಬಿದ್ದಿದೆ.

    ಕೊಲ್ಲೂರಿಗೆ ಬಂದು ಮೂಕಾಂಬಿಕೆ ದರ್ಶನ ಪಡೆದು ಅಲ್ಲಿಂದ ಹೊಸನಗರ ತಾಲೂಕಿನಲ್ಲಿರುವ ಕೊಡಚಾದ್ರಿಯ ತುದಿಯಲ್ಲಿ ಇರುವ ಸರ್ವಜ್ಞ ಪೀಠಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸುವುದು ವಾಡಿಕೆ.

    ಈ ಮಾರ್ಗ ಅತ್ಯಂತ ದುರ್ಗಮವಾಗಿದ್ದು, ಜೀಪು ಸೇರಿ ಯಾವುದೇ ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲ. ಆದರೆ, ಅರಣ್ಯ ಇಲಾಖೆ ಜೀಪ್ ಮಾಲೀಕರಿಂದ ಹಣ ಕಟ್ಟಿಸಿಕೊಂಡು ಸಂಚಾರಕ್ಕೆ ಅವಕಾಶ ಮಾಡಿಕೊಡುತ್ತಿದೆ. ಹಲವು ಬಾರಿ ಈ ರೀತಿಯ ಅವಘಡಗಳು ನಡೆದಿದ್ದರೂ, ಪ್ರಾಣಾಪಾಯ ಸಂಭವಿಸಿರಲಿಲ್ಲ. ಈಗ ಜೀಪ್ ಚಾಲಕರ ಹಣದಾಸೆ ಹಾಗೂ ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಯಾತ್ರೆಗೆ ಬಂದಿದ್ದ ಮಹಿಳೆ ಜೀವ ಬಲಿ ಪಡೆದಿದೆ.

    ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಘಟನೆ ನಡೆದಿದೆ.