Tag: JJP

  • ಹರಿಯಾಣದಲ್ಲಿ ದಿಢೀರ್‌ ಸರ್ಕಾರ ವಿಸರ್ಜನೆ – ನೂತನ ಸಿಎಂ ನಯಾಬ್ ಸಿಂಗ್ ಯಾರು?

    ಚಂಡೀಗಢ: ಬಿಜೆಪಿ (BJP) ಮತ್ತು ಜೆಜೆಪಿ (JJP) ನಡುವೆ ಸೀಟು ಹಂಚಿಕೆ ಬಿಕ್ಕಟ್ಟು ತಾರಕಕ್ಕೇರಿದ ಹೊತ್ತಲ್ಲಿಯೇ ಹರಿಯಾಣ ಸರ್ಕಾರವೇ (Haryana Government) ಬದಲಾಗಿ ಹೋಗಿದೆ.

    ದಿಢೀರ್ ಬೆಳವಣಿಗೆಯಲ್ಲಿ ಸಿಎಂ ಮನೋಹರ್‌ಲಾಲ್ ಖಟ್ಟರ್ (Manohar Lal Khattar) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಸಂಪುಟ ವಿಸರ್ಜನೆ ಆಗಿದೆ. ಈ ಬೆನ್ನಲ್ಲೇ ಹರಿಯಾಣದ ನೂತನ ಸಿಎಂ ಆಗಿ ಪಕ್ಷದ ರಾಜ್ಯಾಧ್ಯಕ್ಷ ನಯಾಬ್ ಸಿಂಗ್ ಸೈನಿ ಆಯ್ಕೆಯಾಗಿದ್ದಾರೆ.

    ಫಟಾಫಟ್ ಎಂಬಂತೆ ಮಂಗಳವಾರ ಸಂಜೆ ಐದು ಗಂಟೆಗೆ ನೂತನ ಸಿಎಂ ನಯಾಬ್ ಸಿಂಗ್ (Nayab Singh Saini) ಮತ್ತು ಐವರು ಶಾಸಕರು ಮಾಣವಚನ ಕಾರ್ಯಕ್ರಮವೂ ಮುಗಿದುಹೋಗಿದೆ. ಮೂಲಗಳ ಪ್ರಕಾರ ಮನೋಹರ್ ಲಾಲ್ ಖಟ್ಟರ್ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಬಹುದು ಎನ್ನಲಾಗಿದೆ.

    ನಯಾಬ್ ಸಿಂಗ್ ಸೈನಿ ಓಬಿಸಿ ಮುಖಂಡರಾಗಿದ್ದು (OBC Leader) ಲೋಕಸಭೆ ಚುನಾವಣೆ (Lok Sabha Election) ದೃಷ್ಟಿಯಿಂದಲೇ ಬಿಜೆಪಿ ಹೈಕಮಾಂಡ್ (BJP High Command) ಈ ಬದಲಾವಣೆ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದನ್ನೂ ಓದಿ: Citizenship Law: ಸಿಎಎ ಜಾರಿಗೆ ದಳಪತಿ ವಿಜಯ್‌ ವಿರೋಧ

    ಯಾರು ನಯಾಬ್ ಸಿಂಗ್ ಸೈನಿ?
    ಕುರುಕ್ಷೇತ್ರದ ಲೋಕಸಭಾ ಸಂಸದರಾಗಿರುವ ಸೈನಿ ಒಬಿಸಿ ಸಮುದಾಯದ ಪ್ರಭಾವಿ ನಾಯಕರಾಗಿದ್ದು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹರ್ಯಾಣ ಬಿಜೆಪಿ ಮುಖ್ಯಸ್ಥರಾಗಿ ನೇಮಕವಾಗಿದ್ದರು.

    ನಿರ್ಗಮಿತ ಮುಖ್ಯಮಂತ್ರಿ ಎಂಎಲ್ ಖಟ್ಟರ್‌ಗೆ ಆಪ್ತರಾಗಿರುವ ಸೈನಿ 2002ರಲ್ಲಿ ಅಂಬಲದಲ್ಲಿ ಬಿಜೆಪಿ ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ, 2005ರಲ್ಲಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದರು. ನಂತರ ರೈತ ಘಟಕವಾದ ಕಿಸಾನ್ ಮೋರ್ಚಾದ ಕಾರ್ಯದರ್ಶಿ ಸೇರಿದಂತೆ ಪಕ್ಷದ ಹಲವು ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ.

    2014ರ ವಿಧಾನಸಭಾ ಚುನಾವಣೆಯಲ್ಲಿ ನಾರಾಯಣಗಢದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಕುರುಕ್ಷೇತ್ರದಿಂದ ಸ್ಪರ್ಧಿಸಿ ಸುಮಾರು 4 ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್‌ನ ನಿರ್ಮಲ್ ಸಿಂಗ್ ಅವರನ್ನು ಸೋಲಿಸಿದ್ದರು.

  • ಇಲ್ಲಿ ಯಾರು ಜೈಲಿನಲ್ಲಿರುವ ಪುತ್ರ ದುಷ್ಯಂತ್ ಚೌಟಾಲಾ ಇಲ್ಲ: ಶಿವಸೇನೆ

    ಇಲ್ಲಿ ಯಾರು ಜೈಲಿನಲ್ಲಿರುವ ಪುತ್ರ ದುಷ್ಯಂತ್ ಚೌಟಾಲಾ ಇಲ್ಲ: ಶಿವಸೇನೆ

    – ಬಿಜೆಪಿ, ಜೆಜೆಪಿ ಮೈತ್ರಿಯನ್ನ ಟೀಕಿಸಿದ ಶಿವಸೇನೆ

    ಮುಂಬೈ: ಶಿವಸೇನೆಯಲ್ಲಿ ಯಾರು ದುಷ್ಯಂತ್ ಚೌಟಾಲ ಇಲ್ಲ. ಅವರ ತಂದೆ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ನಮ್ಮದು ಧರ್ಮ ಮತ್ತು ಸತ್ಯದ ರಾಜಕೀಯ ಎಂದು ಶಿವಸೇನೆಯ ಹಿರಿಯ ನಾಯಕ ಸಂಜಯ್ ರಾವತ್ ಹರ್ಯಾಣ ಮೈತ್ರಿಯನ್ನ ಟೀಕಿಸಿದ್ದಾರೆ.

    ಬಿಜೆಪಿ, ಎನ್‍ಸಿಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗುತ್ತಿದೆ ಎಂಬ ಲೆಕ್ಕಾಚಾರಗಳು ಮಹಾರಾಷ್ಟ್ರದ ರಾಜಕೀಯ ಅಂಗಳಲ್ಲಿ ಕೇಳಿ ಬರುತ್ತಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಸಂಜತ್ ರಾವತ್, ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಬಂಡಾಯ ಬಂದು ಪಕ್ಷ ರಚನೆ ಮಾಡಿದ್ದಾರೆ. ನನ್ನ ಪ್ರಕಾರ ಶರದ್ ಪವಾರ ಬಿಜೆಪಿ ಜೊತೆ ಹೋಗಲ್ಲ ಎಂದು ಬಿಜೆಪಿ ವಿರುದ್ಧ ಗುಡುಗಿದ್ದಾರೆ.

    ಶಿವಸೇನೆ ಬೇರೆ ವಿಚಾರಗಳು ಮತ್ತು ಸಾಧ್ಯತೆಗಳ ಬಗ್ಗೆ ಚಿಂತನೆ ನಡೆಸಿಲ್ಲ. ಶಿವಸೇನೆ ಮುಂದೆ ಹಲವು ಅವಕಾಶಗಳಿದ್ದು, ಆದ್ರೆ ನಾವು ಅದರತ್ತ ಹೋಗಿ ಪಾಪ ಮಾಡಲ್ಲ. ಶಿವಸೇನೆ ಯಾವಾಗಲೂ ಸತ್ಯದ ರಾಜಕಾರಣ ಮಾಡಿಕೊಂಡು ಬಂದಿದೆ. ನಾವು ಅಧಿಕಾರಕ್ಕಾಗಿ ಹಸಿದು ಕುಳಿತಿಲ್ಲ ಎಂದು ಶಿವಸೇನೆಯ ನಾಯಕ ಉದ್ಧವ್ ಠಾಕ್ರೆ ಸ್ಪಷ್ಟಪಡಿಸಿದ್ದರು.

    ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ ಬಂದು ಐದು ದಿನ ಕಳೆದರೂ ಇದೂವರೆಗೂ ಸರ್ಕಾರ ರಚನೆಯಾಗಿಲ್ಲ. ಬಿಜೆಪಿ ಮತ್ತು ಶಿವಸೇನೆ ಮೈತ್ರಿಗೆ ಸ್ಪಷ್ಟ ಬಹುಮತ ಹೊಂದಿದ್ದರೂ, ಎರಡು ಪಕ್ಷಗಳ ನಡುವೆ ಸಿಎಂ ಪದವಿಗಾಗಿ ಶೀತಲ ಸಮರ ಏರ್ಪಟ್ಟಿದೆ. ಶಿವಸೇನೆಯ 50:50 ಫಾರ್ಮುಲಾ ಬಿಜೆಪಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಅಕ್ಟೋಬರ್ 24ರಂದು ಫಲಿತಾಂಶ ಹರ್ಯಾಣದಲ್ಲಿ ಜೆಜೆಪಿ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚನೆ ಮಾಡಿದೆ. ಮನೋಹರ್ ಲಾಲ್ ಖಟ್ಟರ್ ಎರಡನೇ ಬಾರಿ ಸಿಎಂ ಆದ್ರೆ, ಜೆಜೆಪಿಯ ದುಷ್ಯಂತ್ ಚೌಟಾಲಾ ಡಿಸಿಎಂ ಆಗಿದ್ದಾರೆ.

    2014ರ ಚುನಾವಣೆಯಲ್ಲಿ ಶಿವಸೇನೆ ಮತ್ತು ಬಿಜೆಪಿ ಪ್ರತ್ಯೇಕವಾಗಿ ಸ್ಪರ್ಧೆ ಮಾಡಿದ್ದವು. ಶಿವಸೇನೆ 63 ಮತ್ತು ಬಿಜೆಪಿ 122 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿತ್ತು. ನಂತರ ಎರಡೂ ಪಕ್ಷಗಳು ಚುನಾವಣೋತ್ತರ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಲಾಗಿತ್ತು.

    2019ರಲ್ಲಿ ಬಿಜೆಪಿ ಚುನಾವಣೆ ಪೂರ್ವದಲ್ಲಿಯೇ ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಇತ್ತ ಕಾಂಗ್ರೆಸ್ ಮತ್ತು ಎನ್‍ಸಿಪಿ ಮೈತ್ರಿ ರಚನೆ ಮಾಡಿಕೊಂಡು ಅಖಾಡಕ್ಕೆ ಇಳಿದಿದ್ದವು. ಬಿಜೆಪಿ 105, ಶಿವಸೇನೆ, 56, ಎನ್‍ಸಿಪಿ 54, ಕಾಂಗ್ರೆಸ್ 44 ಮತ್ತು ಇತರರು 29 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ.

    ಚೌಟಾಲಾ ತಂದೆಗೆ ಪೆರೋಲ್:
    ದುಷ್ಯಂತ್ ಚೌಟಾಲಾ ತಂದೆ ಅಜಯ್ ಚೌಟಾಲಾ ಜೂನಿಯರ್ ಬೇಸಿಕ್ ಟ್ರೆಂಡ್ (ಜೆಬಿಟಿ) ಶಿಕ್ಷಕರ ಹುದ್ದೆ ಭರ್ತಿಯಲ್ಲಿ ನಡೆದ ಭ್ರಷ್ಟಾಚಾರದಲ್ಲಿ ತಿಹಾರ್ ಜೈಲು ಸೇರಿದ್ದಾರೆ. ಅಜಯ್ ಚೌಟಾಲಾಗೆ ಸಿಬಿಐ ವಿಶೇಷ ನ್ಯಾಯಾಲಯ 10 ವರ್ಷ ಶಿಕ್ಷೆ ವಿಧಿಸಿ ಜೈಲಿಗೆ ಕಳುಹಿಸಿದೆ. ಸದ್ಯ ಎರಡು ವಾರಗಳ ಪೆರೋಲ್ ಪಡೆದುಕೊಂಡು ಹೊರ ಬಂದಿದ್ದಾರೆ. ತಿಹಾರ್ ಜೈಲಿನಲ್ಲಿರುವ ಅಜಯ್ ಚೌಟಾಲಾರ ಬಳಿ ಮೊಬೈಲ್ ಪತ್ತೆಯಾಗಿತ್ತು. ಅಧಿಕಾರಿಗಳು ಜೂನ್ ನಲ್ಲಿ ಅಜಯ್ ಚೌಟಾಲಾರನ್ನು ಪರಿಶೀಲನೆಗೆ ಒಳಪಡಿಸಿದಾಗ ಮೊಬೈಲ್ ಪತ್ತೆಯಾಗಿತ್ತು. ತಿಹಾರ್ ಜೈಲಿನಲ್ಲಿ ಅಜಯ್ ಚೌಟಾಲಾರಿಗೆ ಫೋನ್ ನೀಡಿದ್ದು ಯಾರು ಎಂಬುದರ ಬಗ್ಗೆ ಚರ್ಚೆಗಳು ಹುಟ್ಟಿಕೊಂಡಿದ್ದವು.

  • ಎರಡನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಖಟ್ಟರ್

    ಎರಡನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಖಟ್ಟರ್

    -ದುಷ್ಯಂತ್ ಚೌಟಾಲಾ ಡಿಸಿಎಂ

    ಚಂಡೀಗಢ: ಬಿಜೆಪಿ ನಾಯಕ ಮನೋಹರ್ ಲಾಲ್ ಖಟ್ಟರ್ ಮತ್ತು ಜನ್‍ನಾಯಕ್ ಜನತಾ ಪಾರ್ಟಿಯ ಮುಖ್ಯಸ್ಥ ದುಷ್ಯಂತ್ ಚೌಟಾಲಾ ಇಂದು ಸಿಎಂ ಮತ್ತು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.

    ಚಂಡೀಗಢನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಖಟ್ಟರ್ ಎರಡನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಇತ್ತ ಮೈತ್ರಿ ಪಕ್ಷ ಜೆಜೆಪಿಯ ನಾಯಕ ದುಷ್ಯಂತ್ ಚೌಟಾಲಾ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಗರ್ವನರ್ ಸತ್ಯದೋವೋ ನರೈನ್ ಆರ್ಯ ಇಬ್ಬರು ನಾಯಕರಿಗೆ ಪ್ರಮಾಣ ವಚನ ಬೋಧಿಸಿದರು.

    ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಬಿಜೆಪಿಯ ಕಾರ್ಯನಿರತ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಜೆಜೆಪಿ ಮುಖಂಡರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ಕಾಂಗ್ರೆಸ್ ನ ಭೂಪೀಂದ್ರ ಹೂಡಾ ಹಾಗೂ ಅಕಾಲಿದಳ ನಾಯಕ ಪ್ರಕಾಶ್ ಸಿಂಗ್ ಬಾದಲ್, ಪಕ್ಷದ ಮುಖಂಡರು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಚುನಾವಣೆಯಲ್ಲಿ ಹರ್ಯಾಣದ ಜನತೆ ಯಾವ ಪಕ್ಷಕ್ಕೂ ಬಹುಮತವನ್ನು ನೀಡಿರಲಿಲ್ಲ. ಹಾಗಾಗಿ ಬಿಜೆಪಿ ತನ್ನ 40 ಶಾಸಕರೊಂದಿಗೆ ಜೆಜೆಪಿಯ 10 ಮತ್ತು ಪಕ್ಷೇತರ 7 ಶಾಸಕರ ಬೆಂಬಲದೊಂದಿಗೆ ಹರ್ಯಾಣದಲ್ಲಿ ಸರ್ಕಾರ ರಚಿಸಿದೆ.

    ಗುರುವಾರ ಪ್ರಕಟವಾದ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶವು ಅಂತಂತ್ರ ಸ್ಥಿತಿಯನ್ನು ತಂದೊಡ್ಡಿತ್ತು. ಒಟ್ಟು 90 ಸ್ಥಾನಗಳ ಪೈಕಿ ಬಿಜೆಪಿ 40, ಕಾಂಗ್ರೆಸ್ 31 ಹಾಗೂ ಜನನಾಯಕ್ ಜನತಾ ಪಕ್ಷ 10 ಸೀಟ್‍ಗಳನ್ನು ಗೆದ್ದಿವೆ. ಪಕ್ಷೇತರರು 7 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಇತರೆ ಪಕ್ಷಗಳು ಎರಡು ಸ್ಥಾನಗಳನ್ನು ಪಡೆದಿವೆ. ಬಿಜೆಪಿ ಸರ್ಕಾರ ರಚಿಸಲು ಕೇವಲ 6 ಸ್ಥಾನಗಳ ಕೊರತೆ ಉಂಟಾಗಿತ್ತು. 31 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಜೆಜೆಪಿ ಹಾಗೂ ಪಕ್ಷೇತರರ ಬೆಂಬಲದಿಂದ ಸರ್ಕಾರ ರಚಿಸಲು ಮುಂದಾಗಿತ್ತು. ಹೀಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳ ಮಧ್ಯೆ ಪೈಪೋಟಿ ಉಂಟಾಗಿತ್ತು.

  • ದುಶ್ಯಂತ್ ಚೌಟಾಲಾ ತಂದೆಗೆ ಪೆರೋಲ್- ತಿಹಾರ್ ಜೈಲಿನಿಂದ ಆಗಮನ

    ದುಶ್ಯಂತ್ ಚೌಟಾಲಾ ತಂದೆಗೆ ಪೆರೋಲ್- ತಿಹಾರ್ ಜೈಲಿನಿಂದ ಆಗಮನ

    ಚಂಡೀಗಢ: ಹರ್ಯಾಣದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿರುವ ಜೆಜೆಪಿ (ಜನ್ ನಾಯಕ್ ಪಾರ್ಟಿ) ಮುಖ್ಯಸ್ಥ ದುಶ್ಯಂತ್ ಚೌಟಾಲಾ ತಂದೆ ಪೆರೋಲ್ ಮೇಲೆ ತಿಹಾರ್ ಜೈಲಿನಿಂದ ಎರಡು ವಾರಗಳ ಕಾಲ ಹೊರ ಬರಲಿದ್ದಾರೆ.

    ದುಶ್ಯಂತ್ ಚೌಟಾಲಾ ತಂದೆ ಅಜಯ್ ಚೌಟಾಲಾ ಜೂನಿಯರ್ ಬೇಸಿಕ್ ಟ್ರೆಂಡ್ (ಜೆಬಿಟಿ) ಶಿಕ್ಷಕರ ಹುದ್ದೆ ಭರ್ತಿಯಲ್ಲಿ ನಡೆದ ಭ್ರಷ್ಟಾಚಾರದಲ್ಲಿ ತಿಹಾರ್ ಜೈಲು ಸೇರಿದ್ದರು. ಇದೇ ಪ್ರಕರಣದಲ್ಲಿ ಹರ್ಯಾಣದ ಮಾಜಿ ಮುಖ್ಯಮಂತ್ರಿ ಮತ್ತು ಇಂಡಿಯನ್ ನ್ಯಾಶನಲ್ ಲೋಕದಳ (ಐಎನ್‍ಎಲ್‍ಡಿ) ಅಧ್ಯಕ್ಷ ಓಂಪ್ರಕಾಶ್ ಚೌಟಾಲಾ ಹಾಗೂ ಅವರ ಪುತ್ರ ಅಜಯ್ ಚೌಟಾಲಾಗೆ ಸಿಬಿಐ ವಿಶೇಷ ನ್ಯಾಯಾಲಯ 10 ವರ್ಷ ಶಿಕ್ಷೆ ವಿಧಿಸಿ ಜೈಲಿಗೆ ಕಳುಹಿಸಿದೆ.

    ತಿಹಾರ್ ಜೈಲಿನಲ್ಲಿರುವ ಅಜಯ್ ಚೌಟಾಲಾರ ಬಳಿ ಮೊಬೈಲ್ ಪತ್ತೆಯಾಗಿತ್ತು. ಅಧಿಕಾರಿಗಳು ಜೂನ್ ನಲ್ಲಿ ಅಜಯ್ ಚೌಟಾಲಾರನ್ನು ಪರಿಶೀಲನೆಗೆ ಒಳಪಡಿಸಿದಾಗ ಮೊಬೈಲ್ ಪತ್ತೆಯಾಗಿತ್ತು. ತಿಹಾರ್ ಜೈಲಿನಲ್ಲಿ ಅಜಯ್ ಚೌಟಾಲಾರಿಗೆ ಫೋನ್ ನೀಡಿದ್ದು ಯಾರು ಎಂಬುದರ ಬಗ್ಗೆ ಚರ್ಚೆಗಳು ಹುಟ್ಟಿಕೊಂಡಿದ್ದವು.

  • ಬಿಜೆಪಿ ಜೊತೆ ಮೈತ್ರಿ – ಜೆಜೆಪಿ ತೊರೆದ ಮಾಜಿ ಯೋಧ

    ಬಿಜೆಪಿ ಜೊತೆ ಮೈತ್ರಿ – ಜೆಜೆಪಿ ತೊರೆದ ಮಾಜಿ ಯೋಧ

    ಚಂಡೀಗಢ: ಹರ್ಯಾಣ ವಿಧಾನ ಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿದ್ದಕ್ಕೆ, ಬಿಜೆಪಿ ಜೊತೆ ಜನನಾಯಕ ಜನತಾ ಪಕ್ಷ (ಜೆಜೆಪಿ) ಮೈತ್ರಿ ಮಾಡಿಕೊಂಡಿದೆ. ಈ ಕಾರಣಕ್ಕೆ ಮಾಜಿ ಯೋಧ ತೇಜ್ ಬಹದ್ದೂರ್ ಇಂದು ಜೆಜೆಪಿ ಪಕ್ಷವನ್ನು ತೊರೆದಿದ್ದಾರೆ.

    ಸೇನೆಯಿಂದ ವಜಾಗೊಂಡಿದ್ದ ತೇಜ್ ಬಹದ್ದೂರ್ ಅವರು, ನಂತರ ರಾಜಕೀಯಕ್ಕೆ ಬಂದಿದ್ದರು. ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಹರ್ಯಾಣದ ಸಿಎಂ ಮನೋಹರ್ ಲಾಲ್ ಖಟ್ಟರ್ ವಿರುದ್ಧ ಜೆಜೆಪಿಯಿಂದ ಸ್ಪರ್ಧಿಸಿ ಭಾರಿ ಅಂತರದಲ್ಲಿ ಸೋಲು ಕಂಡಿದ್ದರು.

    ಆದರೆ ಗುರುವಾರ ಬಂದ ಹರ್ಯಾಣ ಚುನಾವಣಾ ಫಲಿತಾಂಶದಲ್ಲಿ ಮತದಾರ ಪ್ರಭು ಯಾವ ಪಕ್ಷಕ್ಕೂ ಬಹುಮತ ನೀಡಿರಲಿಲ್ಲ. ಹರ್ಯಾಣದಲ್ಲಿ ಈ ಹಿಂದೆ ಆಡಳಿತ ನಡೆಸಿದ್ದ ಬಿಜೆಪಿ 40 ಸ್ಥಾನದಲ್ಲಿ ಗೆದ್ದು ಮುಂಚೂಣಿಯಲ್ಲಿತ್ತು. ಆದ್ದರಿಂದ ಬಹುಮತ ಸಾಧಿಸಲು ಬಿಜೆಪಿಗೆ 6 ಸ್ಥಾನಗಳ ಅವಶ್ಯಕತೆ ಇತ್ತು. ಇದರಿಂದ ಬಿಜೆಪಿಗೆ ಸಿಎಂ ಸ್ಥಾನ ಜೆಜೆಪಿ ಪಕ್ಷದ ನಾಯಕ ದುಷ್ಯಂತ್ ಚೌಟಾಲಗೆ ಡಿಸಿಎಂ ಸ್ಥಾನ ಎಂಬ ಒಪ್ಪಿಗೆ ಮೇರೆಗೆ ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡಿವೆ.

    ಸೇನೆಯಿಂದ ವಜಾಗೊಂಡು ರಾಜಕೀಯಕ್ಕೆ ಬಂದಿದ್ದ ತೇಜ್ ಬಹದ್ದೂರ್ ಆರಂಭದ ದಿನದಿಂದಲೂ ಬಿಜೆಪಿಯನ್ನು ವಿರೋಧಿಸಿಕೊಂಡು ಬಂದಿದ್ದರು. ಆದರೆ ಈಗ ತಮ್ಮ ಪಕ್ಷ ಅಧಿಕಾರದ ಆಸೆಗೆ ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಂಡು ಜನರಿಗೆ ಮೋಸ ಮಾಡಿದೆ ರಾಜ್ಯದ ಜನರು ಇವರನ್ನು ತಿರಸ್ಕಾರ ಮಾಡಬೇಕು ಎಂದು ಹೇಳಿ ಪಕ್ಷದಿಂದ ತೇಜ್ ಬಹದ್ದೂರ್ ಹೊರ ಬಂದಿದ್ದಾರೆ.

    ಸೇನೆಯಲ್ಲಿ ನೀಡುವ ಆಹಾರ ಸರಿಯಿಲ್ಲ ಎಂದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ತೇಜ್ ಬಹದ್ದೂರ್ ಅವರನ್ನು ಸೇನೆ ಸೇವೆಯಿಂದ ವಜಾಮಾಡಿತ್ತು. ನಂತರ ಅವರು ರಾಜಕೀಯಕ್ಕೆ ಬಂದಿದ್ದರು. ವಿಧಾನಸಭೆಯ ಚುನಾವಣೆ ಹಿನ್ನೆಲೆ ಈ ಸೆಪ್ಟಂಬರ್ ನಲ್ಲಿ ದುಷ್ಯಂತ್ ಚೌಟಾಲ ಅವರ ಸಮ್ಮುಖದಲ್ಲಿ ಜೆಜೆಪಿ ಪಕ್ಷ ಸೇರಿದ್ದರು. ಆದರೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ ಎಂದು ಜೆಜೆಪಿ ಪಕ್ಷವನ್ನು ತೊರೆದಿದ್ದಾರೆ.

  • ಹರ್ಯಾಣದಲ್ಲಿ ಮೈತ್ರಿ ಸರ್ಕಾರ- ಬಿಜೆಪಿಗೆ ಸಿಎಂ, ಜೆಜೆಪಿಗೆ ಡಿಸಿಎಂ

    ಹರ್ಯಾಣದಲ್ಲಿ ಮೈತ್ರಿ ಸರ್ಕಾರ- ಬಿಜೆಪಿಗೆ ಸಿಎಂ, ಜೆಜೆಪಿಗೆ ಡಿಸಿಎಂ

    ನವದೆಹಲಿ: ಹರ್ಯಾಣದಲ್ಲಿ ಬಿಜೆಪಿ ಮತ್ತು ಜನನಾಯಕ್ ಜನತಾ ಪಕ್ಷ (ಜೆಜೆಪಿ) ಮೈತ್ರಿ ಮಾಡಿಕೊಂಡಿದೆ.

    ಜನನಾಯಕ್ ಜನತಾ ಪಕ್ಷದ ಮುಖ್ಯಸ್ಥ ದುಶ್ಯಂತ್ ಚೌಟಾಲಾ ಅವರು ಶುಕ್ರವಾರ ರಾತ್ರಿ ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸಕ್ಕೆ ತೆರಳಿದರು. ಈ ವೇಳೆ ಮೈತ್ರಿ ಮಾತುಕತೆ ನಡೆಸಿದ್ದಾರೆ. ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿ ನಿರ್ಧಾರ ಪ್ರಕಟಿಸಿದ್ದಾರೆ. ಮಾತುಕತೆಯ ಪ್ರಕಾರ ಮುಖ್ಯಮಂತ್ರಿ ಸ್ಥಾನ ಬಿಜೆಪಿಗೆ ಸಿಕ್ಕಿದ್ದು, ಉಪ ಮುಖ್ಯಮಂತ್ರಿ ಸ್ಥಾನ ಜೆಜೆಪಿಗೆ ಲಭ್ಯವಾಗಲಿದೆ.

    ಈ ವೇಳೆ ಮಾತನಾಡಿದ ಅಮಿತ್ ಶಾ, ಬಿಜೆಪಿ ಹಾಗೂ ಜೆಜೆಪಿ ಮುಖಂಡರ ಸಭೆಯಲ್ಲಿ ಮೈತ್ರಿ ಬಗ್ಗೆ ಚರ್ಚೆಯಾಗಿದೆ. ಜನಾದೇಶವನ್ನು ಸ್ವೀಕರಿಸಿ ಎರಡೂ ಪಕ್ಷಗಳು ಸರ್ಕಾರ ಸೇರಿ ಸರ್ಕಾರ ರಚಿಸಲಿವೆ. ಈ ಮೂಲಕ ಬಿಜೆಪಿಗೆ ಮುಖ್ಯಮಂತ್ರಿ ಸ್ಥಾನ ಹಾಗೂ ಜೆಜೆಪಿಗೆ ಡಿಸಿಎಂ ಸ್ಥಾನ ಹಂಚಿಕೆಯಾಗಿದೆ. ಎರಡೂ ಪಕ್ಷಗಳು ಸೇರಿ ಹರ್ಯಾಣ ಅಭಿವೃದ್ಧಿಗೆ ಶ್ರಮಿಸಲಿವೆ ಎಂದರು.

    ಬಿಜೆಪಿ ಪಕ್ಷೇತರ ಶಾಸಕರ ಜೊತೆ ಸರ್ಕಾರ ರಚಿಸಲು ಮುಂದಾಗುತ್ತಿದ್ದಂತೆ ದುಶ್ಯಂತ್ ಚೌಟಾಲಾ ಎಚ್ಚೆತ್ತುಕೊಂಡು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ, ನಮ್ಮ ಪ್ರಣಾಳಿಕೆಯಲ್ಲಿ ಜನರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸುವ ಭರವಸೆ ನೀಡುತ್ತಾರೋ ಅವರಿಗೆ ನಾವು ಬೆಂಬಲ ಸೂಚಿಸುತ್ತೇವೆ. ಅದು ಯಾವುದೇ ಪಕ್ಷವಾದರೂ ಸರಿ ಎಂದು ಹೇಳಿದ್ದರು.

    ರಾಜ್ಯದಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಬಂದಿಲ್ಲ. ಹೀಗಾಗಿ ನಮ್ಮ ಪಕ್ಷದ ಕೆಲವರು ಕಾಂಗ್ರೆಸ್‍ಗೆ ಬೆಂಬಲ ನೀಡುವಂತೆ ಸಲಹೆ ನೀಡುತ್ತಿದ್ದಾರೆ. ಕೆಲವರು ಬಿಜೆಪಿಗೆ ಬೆಂಬಲ ನೀಡಿ ಎಂದು ಹೇಳುತ್ತಿದ್ದಾರೆ. ಆದರೆ ಜೆಜೆಪಿಯು ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಿಗೆ ಮುಕ್ತವಾಗಿದೆ. ಯಾರು ನಮ್ಮ ಪ್ರಣಾಳಿಕೆಯ ಬೇಡಿಕೆಗಳಿಗೆ ಒಪ್ಪಿಕೊಳ್ಳುತ್ತಾರೋ ಅವರಿಗೆ ನಾವು ಬೆಂಬಲ ಸೂಚಿಸುತ್ತೇವೆ ಎಂದು ತಿಳಿಸಿದ್ದರು.

    ಹರ್ಯಾಣದ ಸ್ಥಳೀಯ ಯುವ ಸಮುದಾಯಕ್ಕೆ ಶೇ.75ರಷ್ಟು ಉದ್ಯೋಗ ಒದಗಿಸಬೇಕು. ವಯಸ್ಕರ ಪಿಂಚಣಿ ವ್ಯವಸ್ಥೆ ಜಾರಿ ಮಾಡಲು ಒಪ್ಪಿಗೆ ನೀಡಬೇಕು. ಇದಕ್ಕೆ ಒಪ್ಪಿಗೆ ಸೂಚಿಸುವ ಪಕ್ಷಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಸ್ಥಿರ ಸರ್ಕಾರ ಭಯಸುವವರು ನಮ್ಮದೊಂದಿಗೆ ಜೆಜೆಪಿ ಚಿಹ್ನೆ ‘ಕೀ’ ಇಟ್ಟುಕೊಳ್ಳಬೇಕು ಎಂದು ತಿಳಿಸುವ ಮೂಲಕ ಸರ್ಕಾರ ರಚನೆಗೆ ಜೆಜೆಪಿ ಅನಿವಾರ್ಯ ಎಂಬುದನ್ನು ಹೇಳಿದ್ದರು.

    ಗುರುವಾರ ಪ್ರಕಟವಾದ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶವು ಅಂತಂತ್ರ ಸ್ಥಿತಿಯನ್ನು ತಂದೊಡ್ಡಿದೆ. ಒಟ್ಟು 90 ಸ್ಥಾನಗಳ ಪೈಕಿ ಬಿಜೆಪಿ 40, ಕಾಂಗ್ರೆಸ್ 31 ಹಾಗೂ ಜನನಾಯಕ್ ಜನತಾ ಪಕ್ಷ 10 ಸೀಟ್‍ಗಳನ್ನು ಗೆದ್ದಿವೆ. ಪಕ್ಷೇತರರು 7 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಇತರೆ ಪಕ್ಷಗಳು ಎರಡು ಸ್ಥಾನಗಳನ್ನು ಪಡೆದಿವೆ. ಬಿಜೆಪಿ ಸರ್ಕಾರ ರಚಿಸಲು ಕೇವಲ 6 ಸ್ಥಾನಗಳ ಕೊರತೆ ಉಂಟಾಗಿತ್ತು. 31 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಜೆಜೆಪಿ ಹಾಗೂ ಪಕ್ಷೇತರರ ಬೆಂಬಲದಿಂದ ಸರ್ಕಾರ ರಚಿಸಲು ಮುಂದಾಗಿತ್ತು. ಹೀಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳ ಮಧ್ಯೆ ಪೈಪೋಟಿ ಉಂಟಾಗಿತ್ತು.

  • ಹರ್ಯಾಣ ರಾಜಕೀಯ ಹೈ ಡ್ರಾಮಾಕ್ಕೆ ತೆರೆ – ಎಲ್ಲ ಪಕ್ಷೇತರರು ಬಿಜೆಪಿಗೆ ಬೆಂಬಲ

    ಹರ್ಯಾಣ ರಾಜಕೀಯ ಹೈ ಡ್ರಾಮಾಕ್ಕೆ ತೆರೆ – ಎಲ್ಲ ಪಕ್ಷೇತರರು ಬಿಜೆಪಿಗೆ ಬೆಂಬಲ

    ನವದೆಹಲಿ: ಚುನಾವಣಾ ಫಲಿತಾಂಶದ ನಂತರ ಹರ್ಯಾಣ ರಾಜಕೀಯ ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಎಲ್ಲ ಪಕ್ಷೇತರ 7 ಹಾಗೂ ಹರ್ಯಾಣ ಲೋಕಹಿತ ಪಕ್ಷದ ಒಬ್ಬ ಶಾಸಕರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

    ಹರ್ಯಾಣದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಶತಾಯಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ತಂತ್ರ ಹೆಣೆಯುತ್ತಿವೆ. ಒಂದೆಡೆ ಕಾಂಗ್ರೆಸ್ ಜನನಾಯಕ್ ಜನತಾ ಪಕ್ಷ(ಜೆಜೆಪಿ)ದ ನಾಯಕ ದುಶ್ಯಂತ್ ಚೌಟಾಲಾ ಅವರನ್ನು ಸೆಳೆಯಲು ಯತ್ನಿಸುತ್ತಿದೆ. ಬಿಜೆಪಿಯು ಸಹ ಗುರುವಾರ ಚೌಟಾಲಾ ಅವರನ್ನು ಸಂಪರ್ಕಿಸಲು ಯತ್ನಿಸಿತ್ತು. ಆದರೆ ಚೌಟಾಲಾ ಅವರು ಮುಖ್ಯಮಂತ್ರಿ ಹುದ್ದೆ ನೀಡುವವರಿಗೆ ತಮ್ಮ ಬೆಂಬಲ ಎಂದು ಪಟ್ಟು ಹಿಡಿದ್ದಾರೆ.

    ಗುರುವಾರ ಪ್ರಕಟವಾಗಿರುವ ವಿಧಾನಸಭಾ ಚುನಾವಣೆಯ ಫಲಿತಾಂಶ ಅಂತಂತ್ರ ಸ್ಥಿತಿಯನ್ನು ತಂದೊಡ್ಡಿದೆ. ಒಟ್ಟು 90 ಸ್ಥಾನಗಳ ಪೈಕಿ ಬಿಜೆಪಿ 40, ಕಾಂಗ್ರೆಸ್ 31 ಹಾಗೂ ಜನನಾಯಕ್ ಜನತಾ ಪಕ್ಷ 10 ಸೀಟ್‍ಗಳನ್ನು ಗೆದ್ದಿವೆ. ಇನ್ನು ಪಕ್ಷೇತರರು 7 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಇತರೆ ಪಕ್ಷಗಳು ಎರಡು ಸ್ಥಾನಗಳನ್ನು ಪಡೆದಿವೆ. ಬಿಜೆಪಿ ಸರ್ಕಾರ ರಚಿಸಲು ಕೇವಲ 6 ಸ್ಥಾನಗಳ ಕೊರತೆ ಉಂಟಾಗಿದೆ. 31 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಜೆಜೆಪಿ ಹಾಗೂ ಪಕ್ಷೇತರರ ಬೆಂಬಲದಿಂದ ಸರ್ಕಾರ ರಚಿಸಲು ಮುಂದಾಗಿತ್ತು. ಹೀಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳ ಪೈಪೋಟಿ ನಡೆಸುತಿತ್ತು.

    ನಿನ್ನೆ ಚೌಟಾಲಾ ಅವರನ್ನು ಎರಡೂ ರಾಜಕೀಯ ಪಕ್ಷಗಳ ನಾಯಕರು ಸಂಪರ್ಕಿಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ಚೌಟಾಲಾ ಬೇಡಿಕೆ ಇಟ್ಟಿದ್ದಾರೆ. ಅಲ್ಲದೆ ಇಂದು ತಮ್ಮ ನಿರ್ಧಾರ ತಿಳಿಸುವುದಾಗಿ ಗುರುವಾರ ಹೇಳೀದ್ದರು. ಇದೀಗ ಭಾರೀ ಬೆಳವಣಿಗೆ ನಡೆದಿದ್ದು, 8 ಪಕ್ಷೇತರ ಶಾಸಕರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಬಿಜೆಪಿ ಹರ್ಯಾಣದಲ್ಲಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಈ ಮೂಲಕ ಹರ್ಯಾಣ ರಾಜಕೀಯ ದಂಗಲ್‍ಗೆ ತೆರೆ ಬಿದ್ದಿದೆ.

    ಬಿಜೆಪಿ ಸೋಲಿಗೆ ಕಾರಣಗಳೇನು?
    ಬಿಜೆಪಿಯಲ್ಲಿ ಪಕ್ಷ ನಿಷ್ಠರ ಕಡೆಗಣಿಸಿ, ಪಕ್ಷಾಂತರಿಗಳಿಗೆ ಮಣೆ ಹಾಕಲಾಯಿತು. ಇದರಿಂದಾಗಿ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನ ಸ್ಫೋಟಗೊಂಡಿತ್ತು. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ರಾಜ್ಯದಲ್ಲಿ ಮಿತಿಮೀರಿದ ನಿರುದ್ಯೋಗ ಹಾಗೂ ಸ್ಥಳೀಯ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತೋರಿದ್ದರು. ರಾಜ್ಯದಲ್ಲಿ ಜಾಟ್ ಸಮುದಾಯ ಹೆಚ್ಚಿದ್ದರೂ ಬ್ರಾಹ್ಮಣ ಸಮುದಾಯದ ಖಟ್ಟರ್ ಅವರಿಗೆ ಸಿಎಂ ಪಟ್ಟ ನೀಡದ ಪರಿಣಾಮ ಜಾಟ್ ಸಮುದಾಯದವರು ಜೆಜೆಪಿಯನ್ನು ಬೆಂಬಲಿಸಿದ್ದರು. ಬಿಜೆಪಿ ನಾಯಕರು ಪ್ರಚಾರದ ವೇಳೆ ಸಂವಿಧಾನದ 370ನೇ ವಿಧಿ ರದ್ದತಿ, ವೀರ್ ಸಾವರ್ಕರ್ ಅವರಿಗೆ ಭಾರತರತ್ನ ವಿಚಾರ ನೀಡುವ ವಿಚಾರವನ್ನು ಅಸ್ತ್ರವಾಗಿ ಬಳಸಿಕೊಂಡಿತ್ತು. ಅದು ಕೂಡ ಬಿಜೆಪಿಗೆ ಫಲಿಸಲಿಲ್ಲ. ಜೊತೆಗೆ ಅತಿಯಾದ ಆತ್ಮವಿಶ್ವಾಸ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಪ್ರಚಾರ ಫಲಕೊಡಲಿಲ್ಲ.

  • ಹರ್ಯಾಣದಲ್ಲಿ ಅತಂತ್ರ ಇದ್ದರೂ ಬಿಜೆಪಿ ಸರ್ಕಾರ

    ಹರ್ಯಾಣದಲ್ಲಿ ಅತಂತ್ರ ಇದ್ದರೂ ಬಿಜೆಪಿ ಸರ್ಕಾರ

    – ಕಿಂಗ್ ಮೇಕರ್ ಚೌಟಾಲ್‍ಗೆ ಸಖತ್ ಡಿಮಾಂಡ್
    – ಕಾಂಗ್ರೆಸ್‍ಗೆ ಆಕ್ಸಿಜನ್ ಆದ ಸೋನಿಯಾ ಸಾರಥ್ಯ

    ಚಂಡೀಗಢ: ಮಹಾರಾಷ್ಟ್ರದಲ್ಲಿ ಬಹುಮತದೊಂದಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ್ದರೂ, ಹರಿಯಾಣದಲ್ಲಿ ಭಾರೀ ಪ್ರಮಾಣದಲ್ಲಿ ಹಿನ್ನಡೆ ಅನುಭವಿಸಿದೆ. ಎರಡನೇ ಬಾರಿಗೆ ಅಧಿಕಾರಕ್ಕೇರಲು ಸರಳ ಬಹುಮತ ಪಡೆಯದಿದ್ದರೂ ಪಕ್ಷೇತರರೊಂದಿಗೆ ಸರ್ಕಾರ ರಚನೆಗೆ ಕೈ ಹಾಕಿದೆ.

    ಹೊಸ ಪಕ್ಷ ಹುಟ್ಟುಹಾಕಿದ ಜನನಾಯಕ್ ಜನತಾ ಪಾರ್ಟಿಯ ದುಶ್ಯಂತ್ ಚೌಟಾಲಾ ಈಗ ಕಿಂಗ್ ಮೇಕರ್ ಆಗಿದ್ದಾರೆ. ಸಮ್ಮಿಶ್ರ ಸರ್ಕಾರ ರಚನೆಗೆ ಕಾಂಗ್ರೆಸ್ ಕೈ ಹಾಕಿದ್ದರೂ, ಕರ್ನಾಟಕದಂತೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡಲು ಚೌಟಾಲಾ ಬಿಗಿಪಟ್ಟು ಹಿಡಿದಿದ್ದರಿಂದ ಮಾತುಕತೆ ಮುರಿದು ಬಿದ್ದಿದೆ. ದುಶ್ಯಂತ್ ಚೌಟಾಲಾ ಅವರನ್ನು ಬಿಜೆಪಿ ಕೂಡ ಸಂಪರ್ಕಿಸಿದ್ದು, ಪಕ್ಷೇತರರೊಂದಿಗೆ ಸರ್ಕಾರ ರಚನೆಗೆ ಬಿಜೆಪಿ ಹಕ್ಕು ಪ್ರತಿಪಾದಿಸಿದೆ.

    ಹರ್ಯಾಣ ಫಲಿತಾಂಶ: ಹರ್ಯಾಣದ ಒಟ್ಟು 90 ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ಕಾರ ರಚಿಸಲು 46 ಸ್ಥಾನಗಳ ಸರಳ ಬಹುಮತ ಅಗತ್ಯವಿದೆ. ಚುನಾವಣೆಯಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಕೇವಲ 40ಕ್ಕೆ ಸೀಮಿತವಾಗಿದೆ. ಕಾಂಗ್ರೆಸ್ 31 ಸ್ಥಾನಗಳು ಲಭಿಸಿದರೆ, ಜೆಜೆಪಿ 10 ಕ್ಷೇತ್ರದಲ್ಲಿ ಗೆದ್ದು ಕಿಂಗ್ ಮೇಕರ್ ಆಗಿ ಹೊರ ಹೊಮ್ಮಿದೆ. ಐಎನ್‍ಎಲ್‍ಡಿ ಒಂದು ಸ್ಥಾನಕ್ಕೆ ತೃಪ್ತಿ ಪಟ್ಟರೆ, ಇತರೆ 8 ಸ್ಥಾನ ಬಂದಿದೆ.

    ಬಿಜೆಪಿ ಸೋಲಿಗೆ ಕಾರಣಗಳೇನು?
    ಬಿಜೆಪಿಯಲ್ಲಿ ಪಕ್ಷ ನಿಷ್ಠರ ಕಡೆಗಣಿಸಿ, ಪಕ್ಷಾಂತರಿಗಳಿಗೆ ಮಣೆ ಹಾಕಲಾಯಿತು. ಇದರಿಂದಾಗಿ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನ ಸ್ಫೋಟಗೊಂಡಿತ್ತು. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ರಾಜ್ಯದಲ್ಲಿ ಮಿತಿಮೀರಿದ ನಿರುದ್ಯೋಗ ಹಾಗೂ ಸ್ಥಳೀಯ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತೋರಿದ್ದರು. ರಾಜ್ಯದಲ್ಲಿ ಜಾಟ್ ಸಮುದಾಯ ಹೆಚ್ಚಿದ್ದರೂ ಬ್ರಾಹ್ಮಣ ಸಮುದಾಯದ ಖಟ್ಟರ್ ಅವರಿಗೆ ಸಿಎಂ ಪಟ್ಟ ಕೊಟ್ಟಿದ್ದು ಅಸಮಾಧಾನಕ್ಕೆ ಕಾರಣವಾಗಿತ್ತು. ಇದರಿಂದಾಗಿ ಜಾಟ್ ಸಮುದಾಯದ ಮತ ವಿಭಜನೆ ಆಯಿತು. ಬಿಜೆಪಿ ನಾಯಕರು ಪ್ರಚಾರದ ವೇಳೆ ಸಂವಿಧಾನದ 370ನೇ ವಿಧಿ ರದ್ದತಿ, ವೀರ್ ಸಾವರ್ಕರ್ ಅವರಿಗೆ ಭಾರತರತ್ನ ವಿಚಾರ ನೀಡುವ ವಿಚಾರವನ್ನು ಅಸ್ತ್ರವಾಗಿ ಬಳಸಿಕೊಂಡಿತ್ತು. ಅದು ಕೂಡ ಬಿಜೆಪಿಗೆ ಫಲಿಸಲಿಲ್ಲ. ಜೊತೆಗೆ ಅತಿಯಾದ ಆತ್ಮವಿಶ್ವಾಸ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಪ್ರಚಾರ ಫಲಕೊಡಲಿಲ್ಲ.

    ಕಿಂಗ್ ಮೇಕರ್:
    ಕರ್ನಾಟಕದಲ್ಲಿ ಜೆಡಿಎಸ್ ಮುಖಂಡ ಕುಮಾರಸ್ವಾಮಿ ಅವರಂತೆ ಹರ್ಯಾಣದಲ್ಲಿ ಜನನಾಯಕ್ ಜನತಾ ಪಾರ್ಟಿಯ ದುಶ್ಯಂತ್ ಚೌಟಾಲಾ ಕಿಂಗ್ ಮೇಕರ್ ಆಗಿದ್ದಾರೆ. ಕರ್ನಾಟಕದಂತೆ ಹೇಗಾದರೂ ಅಧಿಕಾರಕ್ಕೇರಬೇಕು ಅಂತ ಸೋನಿಯಾ ಗಾಂಧಿ ಅವರು ಚೌಟಾಲಾ ಅವರನ್ನು ಸಂಪರ್ಕಿಸಿದ್ದಾರೆ. ಬೆಳಗ್ಗೆ ಅತಂತ್ರ ಫಲಿತಾಂಶದ ಲಕ್ಷಣ ಅರಿತ ತಕ್ಷಣವೇ ದುಶ್ಯಂತ್ ಅವರನ್ನ ಸಂಪರ್ಕಿಸಿದರು. ಬಳಿಕ ಭೂಪಿಂದರ್ ಸಿಂಗ್ ಹೂಡ ಮೂಲಕ ಕೇವಲ ಅರ್ಧಗಂಟೆಯೊಳಗೆ 7 ಬಾರಿ ಸಂಪರ್ಕಿಸಿ ಡಿಸಿಎಂ ಸ್ಥಾನ ನೀಡುವುದಾಗಿ ಹೇಳಿದರು. ಆದರೆ ದುಶ್ಯಂತ್ ಅವರು ಮಾತ್ರ ಸಿಎಂ ಸ್ಥಾನಕ್ಕೆ ಪಟ್ಟುಹಿಡಿದ್ದಾರೆ. ಇತ್ತ ಬಿಜೆಪಿ ಕೂಡ ದುಶ್ಯಂತ್‍ಗೆ ಡಿಸಿಎಂ ಸ್ಥಾನ ಕೊಡುವುದಾಗಿ ಹೇಳಿದೆ.

    ಅಖಾಲಿದಳದ ಬಾದಲ್‍ಗಳ ಮೂಲಕ ಚೌಟಾಲಾ ಮನವೊಲಿಕೆಗೆ ಅಮಿತ್ ಶಾ ಯತ್ನಿಸಿದ್ದಾರೆ. ಡಿಮಾಂಡ್ ಹೆಚ್ಚಿಸಿದ್ದರ ಲಾಭಕ್ಕೆ ಹವಣಿಸಿದ ಚೌಟಾಲಾ, ವಿಧಾನಸಭೆಯ ಕೀ ನನ್ನಲ್ಲಿದೆ. ತಾನೂ ಯಾವ ಪಕ್ಷದೊಂದಿಗೆ ಮಾತನಾಡಿಲ್ಲ. ನಾಳೆ ಮಾತನಾಡುತ್ತೇನೆ. ಯಾರು ನನಗೆ ಸಿಎಂ ಪಟ್ಟ ಕೊಡುತ್ತಾರೋ ಅವರ ಜೊತೆ ಕೈಜೋಡಿಸುವುದಾಗಿ ದುಶ್ಯಂತ್ ಹೇಳಿದ್ದಾರೆ. ಈ ಎಲ್ಲ ವಿದ್ಯಮಾನಗಳ ನಡುವೆ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಲುವಾಗಿ ರಾಜ್ಯಪಾಲರ ಭೇಟಿಗೆ ಮನೋಹರ್ ಲಾಲ್ ಖಟ್ಟರ್ ಸಮಯ ಕೇಳಿದ್ದಾರೆ.

    ಸೋತ ಪ್ರಮುಖರು, ಸೆಲೆಬ್ರಿಟಿಗಳು:
    ಹರ್ಯಾಣದ ತೋಹಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಸೋಲು ಕಂಡಿದ್ದಾರೆ. ಸೋಲಿನ ಹೊಣೆಹೊತ್ತು ರಾಜೀನಾಮೆ ಕೊಟ್ಟಿದ್ದಾರೆ ಅಂತ ಸುದ್ದಿಯಾಗಿತ್ತು. ಆದರೆ ಇದೆಲ್ಲಾ ವದಂತಿ ಅಂತ ಸುಭಾಷ್ ಬರಾಲಾ ಅಲ್ಲಗಳೆದಿದ್ದಾರೆ. ಕೈಥಾಲ್ ಕ್ಷೇತ್ರದಿಂದ ಚುನಾವಣೆ ಎದುರಿಸಿದ್ದ ಕಾಂಗ್ರೆಸ್‍ನ ರಂದೀಪ್ ಸುರ್ಜೇವಾಲಾ ಸೋತಿದ್ದಾರೆ. ಇತ್ತೀಚೆಗೆ ಬಿಜೆಪಿಗೆ ಸೇರಿದ್ದ ಕುಸ್ತಿಪಟುಗಳಾದ ಬಬಿತಾ ಪೋಗಟ್ ದಾದ್ರಿ ಕ್ಷೇತ್ರದಿಂದ ಹಾಗೂ ಯೋಗೇಶ್ವರ್ ದತ್ ಬರೋದಾ ಕ್ಷೇತ್ರದಿಂದ ಚುನಾವಣೆಗೆ ನಿಂತು ಪರಾಭವಗೊಂಡಿದ್ದಾರೆ. ಬಿಜೆಪಿ ಟಿಕೆಟ್ ನೀಡಿದ್ದ ಟಿಕ್‍ಟಾಕ್ ಸ್ಟಾರ್, ಅದಂಪುರ್ ದ ಅಭ್ಯರ್ಥಿ ಸೋನಾಲಿ ಪೋಗಟ್ ಸೋತಿದ್ದಾರೆ.