Tag: jote joteyali

  • ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಇನ್ಮುಂದೆ ಅನಿರುದ್ಧ ಫೋಟೋನೂ ಇರಲ್ಲ

    ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಇನ್ಮುಂದೆ ಅನಿರುದ್ಧ ಫೋಟೋನೂ ಇರಲ್ಲ

    ಕೊನೆಗೂ ಅನಿರುದ್ಧ (Aniruddha) ಅವರನ್ನು ಜೊತೆ ಜೊತೆಯಲಿ ಧಾರಾವಾಹಿಯಿಂದ (Serial) ಸಂಪೂರ್ಣವಾಗಿ ಹೊರ ಹಾಕಿದಂತಾಗಿದೆ. ಈವರೆಗೂ ಟೈಟಲ್ ಕಾರ್ಡ್ ನಲ್ಲಿ ಮತ್ತು ಕಥಾಭಾಗದಲ್ಲೂ ಅನಿರುದ್ಧ ಅವರು ಬೇರೆ ಬೇರೆ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಇದೀಗ ಸಂಪೂರ್ಣವಾಗಿ ಧಾರಾವಾಹಿಯಿಂದ ಅವರನ್ನು ಹೊರ ಹಾಕಲಾಗಿದೆ. ಈಗ ಜೊತೆ ಜೊತೆಯಲಿ (Jote Joteyali) ಧಾರಾವಾಹಿಯ ಟೈಟಲ್ ಕಾರ್ಡ್ ಬದಲಾಗಿದೆ. ಆದರೆ, ಕಥೆಯಲ್ಲಿ ಅವರು ಉಳಿದುಕೊಳ್ಳುವ ಸಾಧ್ಯತೆ ಇತ್ತು. ಅದನ್ನೂ ಇಲ್ಲದಂತೆ ಮಾಡಿದೆ ಟೀಮ್.

    ಕಥೆಯ ಪ್ರಕಾರ ಹರೀಶ್ ರಾಜ್ ನಿರ್ವಹಿಸುತ್ತಿದ್ದ ಪಾತ್ರ ಸತ್ತಿದೆ. ಅನು (Anu) ಪ್ರಕಾರ ಅನಿರುದ್ಧ ನಟಿಸುತ್ತಿದ್ದ ಆರ್ಯವರ್ಧನ್ ಪಾತ್ರ ಸತ್ತಿದೆ. ಹಾಗಾಗಿ ಮನೆಯಲ್ಲಿ ಆರ್ಯವರ್ಧನ್ ಫೋಟೋಗೆ ಪೂಜೆ ಮತ್ತು ಹಾರ ಹಾಕಿದ್ದ ಸನ್ನಿವೇಶವೊಂದು ಇತ್ತು. ಆರ್ಯವರ್ಧನ್ (Aryavardhan) ಸತ್ತಿದ್ದಾನೆ ಅಂದರೆ, ಅನು ಮನೆಯಲ್ಲಿ ಅವನ ಫೋಟೋ ಇರದೇ ಇದ್ದರೆ ಹೇಗೆ? ಒಂದು ವೇಳೆ ಫೋಟೋವಿದ್ದರೆ ನೋಡುಗರಿಗೆ ಕನ್ಫೂಷನ್, ಈ ಕಡೆ ಅನಿರುದ್ಧ ಅವರ ಫೋಟೋ. ಆದರೆ, ಪಾತ್ರ ಮಾಡುತ್ತಿರುವುದು ಸದ್ಯ ಹರೀಶ್ ರಾಜ್. ಈ ಗೊಂದಲವೇ ಬೇಡವೆಂದು ಬೇರೆ ಉಪಾಯ ಮಾಡಿದೆ ಟೀಮ್. ಇದನ್ನೂ ಓದಿ:‘ಬಿಗ್ ಬಾಸ್’ ಮನೆಗೆ ಬ್ರಹ್ಮಾಂಡ ಗುರೂಜಿ ಹೋದರೆ ಮಜವಾಗಿರತ್ತೆ ಅಂತಿದ್ದಾರೆ ನೆಟ್ಟಿಗರು

    ಆರ್ಯವರ್ಧನ್ ಸತ್ತಿದ್ದಾನೆ ಎಂದೇ ಈವರೆಗೂ ಕಥಾ ನಾಯಕಿ ಅನು ಅಂದುಕೊಂಡಿದ್ದಾಳೆ. ಹಾಗಾಗಿಯೇ ಆರ್ಯವರ್ಧನ್ ಫೋಟೋವನ್ನು ಅವರ ಮನೆಯಲ್ಲಿ ಹಾಕಿ, ಅದಕ್ಕೆ ಹೂವಿನ ಹಾರವನ್ನೂ ಹಾಕಲಾಗಿತ್ತು. ಅದನ್ನು ನೋಡಿದ ಅನು, ಆರ್ಯವರ್ಧನ್ ಫೋಟೋಗೆ ಹಾರ ಹಾಕುವುದನ್ನು ನೋಡಲು ನನಗೆ ಇಷ್ಟವಿಲ್ಲ ಎನ್ನುವ ಡೈಲಾಗ್ ಹೇಳಿಸುವ ಮೂಲಕ ಆರ್ಯವರ್ಧನ್ ಫೋಟೋವನ್ನೂ ತೆಗಿಸಿ ಹಾಕಿದ್ದಾಳೆ. ಅಲ್ಲಿಗೆ ಅನಿರುದ್ಧ ಸಂಪೂರ್ಣವಾಗಿ ಧಾರಾವಾಹಿಯಿಂದ ಹೊರ ನಡೆದಂತಾಗಿದೆ.

    ಇದೀಗ ಹೊಸ ಆರ್ಯವರ್ಧನ್ ಆಗಿ ಹರೀಶ್ ರಾಜ್ (Harish Raj) ಪ್ರವೇಶ ಮಾಡಿದ್ದಾರೆ. ಇವರೇ ಆರ್ಯವರ್ಧನ್ ಎಂದು ಒಪ್ಪಿಸುವ ಜವಾಬ್ದಾರಿ ಇನ್ಮುಂದೆ ಟೀಮ್ ನದ್ದು. ಅದಕ್ಕೆ ಯಾವ ರೀತಿಯ ಕಥೆಯನ್ನು ಹೊಸೆಯುತ್ತಾರೆ ಕಾದು ನೋಡಬೇಕು. ಏನೇ ಆಗಲಿ, ಈವರೆಗೂ ಅನಿರುದ್ಧ ಅವರೇ ಆರ್ಯವರ್ಧನ್ ಆಗಿಯೇ ಇದ್ದರು. ಇದೀಗ ಎಲ್ಲವೂ ಬದಲಾಗಿದೆ. ಕಥೆ ಮತ್ತು ಪಾತ್ರ ಕೂಡ ಬದಲಾವಣೆಗೆ ತೆರೆದುಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

  • ‘ಜೊತೆ ಜೊತೆಯಲಿ’ ಸೀರಿಯಲ್ ಆರ್ಯವರ್ಧನ್ ಗೆ ಭೀಕರ ಕಾರು ಅಪಘಾತ: ಅನಿರುದ್ಧ ನಟಿಸುತ್ತಿದ್ದ ಪಾತ್ರ ಖತಂ?

    ‘ಜೊತೆ ಜೊತೆಯಲಿ’ ಸೀರಿಯಲ್ ಆರ್ಯವರ್ಧನ್ ಗೆ ಭೀಕರ ಕಾರು ಅಪಘಾತ: ಅನಿರುದ್ಧ ನಟಿಸುತ್ತಿದ್ದ ಪಾತ್ರ ಖತಂ?

    ಜೀ ಕನ್ನಡ ವಾಹಿನಿಯು ಜೊತೆ ಜೊತೆಯಲಿ ಧಾರಾವಾಹಿಯ ಪ್ರೊಮೋವೊಂದನ್ನು ರಿಲೀಸ್ ಮಾಡಿದ್ದು, ಧಾರಾವಾಹಿಯ ಕಥೆಗೆ ಮೇಜರ್ ತಿರುವು ನೀಡಲಾಗಿದೆ. ಈವರೆಗೂ ಆರ್ಯವರ್ಧನ್ ಪಾತ್ರವನ್ನು ಕಥೆಯಲ್ಲಿ ಇಟ್ಟುಕೊಳ್ಳಲಾಗುವುದು ಎಂದಿದ್ದ ನಿರ್ಮಾಪಕರು ಆ ಪಾತ್ರವನ್ನು ಸಾಯಿಸಲು ಪ್ಲ್ಯಾನ್ ಮಾಡಿದ್ದಾರೆ ಎನ್ನುವ ಅನುಮಾನ, ಆ ಪ್ರೋಮೋ ನೋಡಿದ ಮೇಲೆ ವ್ಯಕ್ತವಾಗಿದೆ. ಆರ್ಯವರ್ಧನ್ ಸ್ಪೀಡ್ ಆಗಿ ಕಾರು ಓಡಿಸಿಕೊಂಡು ಹೋಗುತ್ತಿದ್ದು, ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿ ಹೊಡೆಯುತ್ತಾ ಸಾಗಿದೆ.

    ಈಗಾಗಲೇ ಆರ್ಯವರ್ಧನ್ ಅವರ ಸಹೋದರನ ಪಾತ್ರಕ್ಕೆ ನಟ ಹರೀಶ್ ರಾಜ್ ಆಯ್ಕೆಯಾಗಿದ್ದಾರೆ. ಅವರ ನಟನೆಯ ದೃಶ್ಯಗಳು ಕೂಡ ಪ್ರಸಾರವಾಗುತ್ತಿವೆ. ಆರ್ಯವರ್ಧನ್ ನನ್ನು ಕೊಲ್ಲುವ ಮೂಲಕ, ಆತನ ಸಾಮ್ರಾಜ್ಯಕ್ಕೆ ಹರೀಶ್ ರಾಜ್ ಪಾತ್ರ ಅಧಿಪತಿ ಆಗತ್ತಾ ಎನ್ನುವ ಅನುಮಾನ ಕೂಡ ಮೂಡುತ್ತಿದೆ. ಅಥವಾ ಹರೀಶ್ ರಾಜ್ ಪಾತ್ರವೇ ಆರ್ಯವರ್ಧನ್ ನ ಸಾಯಿಸ್ತಾ ಎನ್ನುವ ಪ್ರಶ್ನೆ ಮೂಡುವಂತೆಯೂ ಪ್ರೊಮೋದಲ್ಲಿ ತೋರಿಸಲಾಗಿದೆ. ಇದನ್ನೂ ಓದಿ: ಜಶ್ವಂತ್‍ನಿಂದ ನಂದಿನಿ ಅಂತರ ಕಾಯ್ದುಕೊಳ್ಳುತ್ತಿರುವುದ್ಯಾಕೆ..?

    ಸಾಮಾನ್ಯವಾಗಿ ಧಾರಾವಾಹಿಗಳಲ್ಲಿ ಪಾತ್ರಧಾರಿಗಳನ್ನು ಬದಲಾಯಿಸಲು ಒಂದು ತಂತ್ರವನ್ನು ಉಪಯೋಗಿಸಲಾಗುತ್ತದೆ. ಆಕ್ಸಿಡೆಂಟ್ ಮಾಡಿಸಿ, ಪ್ಲಾಸ್ಟಿಕ್ ಸರ್ಜರಿ ಮೂಲಕ ಹೊಸ ಕಲಾವಿದನನ್ನು ಪರಿಚಯ ಮಾಡಿಸಲಾಗುತ್ತದೆ. ಅದೇ ಹಳೆ ತಂತ್ರವನ್ನು ಜೊತೆ ಜೊತೆಯಲಿ ಧಾರಾವಾಹಿ ತಂಡ ಮಾಡುತ್ತಾ ಎನ್ನುವುದು ಹಲವರ ಪ್ರಶ್ನೆಯಾಗಿದೆ. ಮುಂದಿನ ದಿನಗಳಲ್ಲಿ ಇದು ಕೂಡ ಗೊತ್ತಾಗಲಿದೆ. ಅಥವಾ ಪರ್ಮನೆಂಟ್ ಆಗಿ ಪಾತ್ರವನ್ನೇ ಮುಗಿಸುತ್ತಾರಾ ಅದು ಕೂಡ ಸಾಧ್ಯತೆ ಇದೆ.

    ಇಂದು ರಿಲೀಸ್ ಆಗಿರುವ ಪ್ರೊಮೋ ನೋಡಿದರೆ ಇಂತಹ ಹತ್ತು ಹಲವು ಪ್ರಶ್ನೆಗಳು ಮೂಡುತ್ತಿದ್ದು, ಸ್ವತಃ ಧಾರಾವಾಹಿ ತಂಡವೇ ಕಥೆಯಲ್ಲಿ ರೋಚಕ ತಿರುವು ಎಂದು ಹೇಳಿಕೊಂಡಿದ್ದರಿಂದ ಅಂತಹ ತಿರುವು ಏನು? ಯಾವ ತಂತ್ರವನ್ನು ಹೆಣೆದು ಆರ್ಯವರ್ಧನ್ ಪಾತ್ರವನ್ನು ಉಳಿಸಿಕೊಳ್ಳುತ್ತಾರಾ? ಅಥವಾ ಮನೆಗೆ ಕಳುಹಿಸುತ್ತಾರೆ ಎನ್ನುವುದು ಸದ್ಯಕ್ಕಿರುವ ಸಸ್ಪೆನ್ಸ್.

    Live Tv
    [brid partner=56869869 player=32851 video=960834 autoplay=true]

  • ಅನಿರುದ್ಧಗೆ ಮತ್ತೆ ಅವಕಾಶ ಕೊಡಿ, ವಾಹಿನಿ ಮುಂದೆ ಅಭಿಮಾನಿಗಳು ಪ್ರತಿಭಟನೆ

    ಅನಿರುದ್ಧಗೆ ಮತ್ತೆ ಅವಕಾಶ ಕೊಡಿ, ವಾಹಿನಿ ಮುಂದೆ ಅಭಿಮಾನಿಗಳು ಪ್ರತಿಭಟನೆ

    ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಟಿಸಲು ಅನಿರುದ್ಧ ಅವರಿಗೆ ಮತ್ತೆ ಅವಕಾಶ ನೀಡಬೇಕು ಎಂದು ಅನಿರುದ್ಧ ಅಭಿಮಾನಿಗಳು ಜೀ ಕನ್ನಡ ವಾಹಿನಿಯ ಮುಂದೆ ಪ್ರತಿಭಟನೆ ನಡೆಸಿದರು. ಏಕಾಏಕಿ ಒಬ್ಬ ನಟನಿಗೆ ಹೀಗೆ ಮಾಡುವುದು ಸರಿಯಲ್ಲ. ನಿರ್ಮಾಪಕರ ಮತ್ತು  ಅನಿರುದ್ಧ ನಡುವಿನ ಸಮರಕ್ಕೆ, ವಾಹಿನಿಯು ಮಧ್ಯಸ್ತಿಕೆ ವಹಿಸಿ ಸರಿ ಮಾಡಬೇಕು ಎಂದು ಅಭಿಮಾನಿಗಳು ಮನವಿ ಮಾಡಿದರು. ಆರ್ಯವರ್ಧನ್ ಪಾತ್ರಕ್ಕೆ ಇನ್ನೂ ಯಾರೂ ಆಯ್ಕೆ ಆಗದೇ ಇರುವ ಕಾರಣಕ್ಕಾಗಿ ಮತ್ತೆ ಅನಿರುದ್ಧ ಅವರನ್ನೇ ವಾಪಸ್ಸು ಕರೆಯಿಸಿಕೊಳ್ಳಿ ಎಂಬ ಬೇಡಿಕೆ ಇಟ್ಟರು.

    ಜೊತೆ ಜೊತೆಯಲಿ ಧಾರಾವಾಹಿಯ ನಿರ್ಮಾಪಕರಿಗೂ ಮತ್ತು ಅನಿರುದ್ಧ ಅವರಿಗೂ ವೈಮನಸ್ಸಿನ ಕಾರಣದಿಂದಾಗಿ ಅನಿರುದ್ಧ ಅವರನ್ನೂ ಸೀರಿಯಲ್ ನಿಂದ ಕೈ ಬಿಡಲಾಗಿದೆ. ಅನಿರುದ್ಧ ನಿರ್ವಹಿಸುತ್ತಿದ್ದ ಆರ್ಯವರ್ಧನ್ ಪಾತ್ರವನ್ನು ಕಥೆಯಲ್ಲೇ ಹಾಗೆಯೇ ಜೀವಂತವಾಗಿಟ್ಟು, ಹೊಸ ಪಾತ್ರಗಳ ಮೂಲಕ ಕಥೆಯನ್ನು ಹೇಳಲಾಗುತ್ತಿದೆ. ಹೊಸ ಪಾತ್ರ ಬಂದರೂ, ಆರ್ಯವರ್ಧನ್ ಪಾತ್ರವೂ ಕಥೆಯಲ್ಲಿದೆ. ಹಾಗಾಗಿ ಮತ್ತೆ ಅನಿರುದ್ಧ ಧಾರಾವಾಹಿ ತಂಡ ಸೇರಿಕೊಳ್ಳಲಿ ಎನ್ನುವುದು ಅಭಿಮಾನಿಗಳ ಆಸೆ. ಇದನ್ನೂ ಓದಿ: ‘ಶ್ಯಾನುಭೋಗರ ಮಗಳಾ’ದ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ

    ಅನಿರುದ್ಧ ಅವರನ್ನು ಕೇವಲ ಸೀರಿಯಲ್ ನಿಂದ ಮಾತ್ರ ಕೈ ಬಿಟ್ಟಿಲ್ಲ. ಮತ್ತೆ ಅವರೊಂದಿಗೆ ಯಾರೂ ಕೆಲಸ ಮಾಡದಂತೆ, ಟೆಲಿವಿಷನ್ ಅಸೋಷಿಯೇಷನ್ ನಿರ್ಮಾಪಕರ ಸಂಘವು ನಿರ್ಣಯ ತಗೆದುಕೊಂಡಿದೆ. ಒಂದು ರೀತಿಯಲ್ಲಿ ಅದು ಬ್ಯಾನ್ ಎನ್ನಲಾಗುತ್ತಿದೆ. ಹೀಗಾಗಿ ಮತ್ತೆ ಅನಿರುದ್ಧ ಅವರನ್ನು ಸೀರಿಯಲ್ ತಂಡದಲ್ಲಿ ಸೇರಿಸಿಕೊಳ್ಳುವುದು ಕಷ್ಟ ಎನ್ನಲಾಗುತ್ತಿದೆ. ಮತ್ತೆ ಪಾತ್ರ ಮಾಡಲು ಅನಿರುದ್ಧ ಅವರಿಗೆ ಆಸೆ ಇದ್ದರೂ, ನಿರ್ಮಾಪಕರು ಮಾತ್ರ ಮನಸ್ಸು ಬದಲಾಯಿಸುತ್ತಿಲ್ಲ.

    ಧಾರಾವಾಹಿ ಲೋಕದ ಬಹುತೇಕ ನಿರ್ಮಾಪಕರು ಸೇರಿ, ಮಾಧ್ಯಮಗೋಷ್ಠಿಯಲ್ಲೇ ಅನಿರುದ್ಧ ಅವರ ಜೊತೆ ತಾವ್ಯಾರೂ ಕೆಲಸ ಮಾಡುವುದಿಲ್ಲ ಎಂದು ಘೋಷಿಸಿದ್ದಾರೆ. ಜೀ ಕನ್ನಡ ವಾಹಿನಿಯ ಪ್ರತಿನಿಧಿಯೇ ಮಾಧ್ಯಮ ಗೋಷ್ಠಿಯಲ್ಲಿ ಪಾಲ್ಗೊಂಡು ತಾವು ನಿರ್ಮಾಪಕರ ನಿರ್ಧಾರವನ್ನು ಗೌರವಿಸುತ್ತೇವೆ ಎಂದು ಹೇಳಿದ್ದಾರೆ. ಹಾಗಾಗಿ ಏನೇ ಹೋರಾಟ ನಡೆದರೂ, ಅನಿರುದ್ಧ ಅವರಿಗೆ ಮತ್ತೆ ಆ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳಲು ಎಲ್ಲ ಬಾಗಿಲುಗಳು ಮುಚ್ಚಿವೆ.

    Live Tv
    [brid partner=56869869 player=32851 video=960834 autoplay=true]

  • ‘ಜೊತೆ ಜೊತೆಯಲಿ’ ಧಾರಾವಾಹಿ: ಆರ್ಯವರ್ಧನ್ ಅಲ್ಲ, ಅವನ ಸಹೋದರನ ಪಾತ್ರದಲ್ಲಿ ಹರೀಶ್ ರಾಜ್

    ‘ಜೊತೆ ಜೊತೆಯಲಿ’ ಧಾರಾವಾಹಿ: ಆರ್ಯವರ್ಧನ್ ಅಲ್ಲ, ಅವನ ಸಹೋದರನ ಪಾತ್ರದಲ್ಲಿ ಹರೀಶ್ ರಾಜ್

    ಜೊತೆ ಜೊತೆಯಲಿ ಧಾರಾವಾಹಿಗೆ ನಟ ಹರೀಶ್ ರಾಜ್ ಎಂಟ್ರಿ ಕೊಟ್ಟಿದ್ದಾರೆ. ಎರಡು ದಿನಗಳಿಂದ ಹರೀಶ್ ರಾಜ್ ದೃಶ್ಯಗಳು ಪ್ರಸಾರವಾಗುತ್ತಿವೆ. ಹರೀಶ್ ರಾಜ್ ಈ ಧಾರಾವಾಹಿಯಲ್ಲಿ ಅನಿರುದ್ಧ ಬಿಟ್ಟು ಹೋಗಿದ್ದ ಆರ್ಯವರ್ಧನ್ ಪಾತ್ರವನ್ನು ನಿರ್ವಹಿಸುತ್ತಾರೆ ಎನ್ನಲಾಗಿತ್ತು. ಆದರೆ, ಆರ್ಯವರ್ಧನ್ ತಮ್ಮನಾಗಿ ಹರೀಶ್ ರಾಜ್ ಧಾರಾವಾಹಿಗೆ ಪ್ರವೇಶ ಮಾಡಿದ್ದಾರೆ. ಅದೂ ವಿಶ್ವಾಸ್ ದೇಸಾಯಿ ಪಾತ್ರದಲ್ಲಿ ಎನ್ನುವುದು ವಿಶೇಷ.

    ಪ್ರಿಯದರ್ಶಿನಿಗೆ ಇಬ್ಬರು ಮಕ್ಕಳು. ಒಬ್ಬ ಆರ್ಯವರ್ಧನ್, ಮತ್ತೊಬ್ಬ ವಿಶ್ವಾಸ್ ದೇಸಾಯಿ. ವಿದೇಶದಲ್ಲಿ ಬ್ಯುಸಿನೆಟ್ ಮಾಡುತ್ತಿದ್ದ ವಿಶ್ವಾಸ ಇದೀಗ ಸ್ವದೇಶಕ್ಕೆ ಬಂದಿದ್ದಾನೆ. ಅದೂ 700 ಕೋಟಿ ಲಾಸ್ ಮಾಡಿಕೊಂಡು. ಈ ಲಾಸ್ ಕಟ್ಟಿಕೊಡಲು ಏನು ಮಾಡಬೇಕು ಎನ್ನುವ ಒದ್ದಾಟ ಅವನದ್ದು. ಕಿರಿ ಮಗನ ಸಂಕಟ ನೋಡಲಾಗಿದೆ. ಆರ್ಯವರ್ಧನ್ ಸಹಾಯ ಕೇಳುವುದಾಗಿ ಪ್ರಿಯದರ್ಶಿನಿ ಹೇಳಿದ್ದಾರೆ. ಇದರ ಮಧ್ಯೆ ಧಾರಾವಾಹಿ ತಂಡ ಮತ್ತೊಂದು ಟ್ವಿಸ್ಟ್ ಕೊಟ್ಟಿದೆ. ಅದು ಜೋಗತಿ ಮೂಲಕ. ಇದನ್ನೂ ಓದಿ: ನೂಡಲ್ಸ್ ಬಿಡಿಸು ಅಂದ್ರೆ ಮೂಲಂಗಿ ಬಿಡಿಸ್ತಾಳೆ – ಸೋನು ಪೇಂಟಿಂಗ್‌ಗೆ ರಾಕೇಶ್ ಫುಲ್ ಶಾಕ್..!

    ಮನೆಗೆ ಬರುವ ಜೋಗತಿ, ‘ನಿಮ್ಮಿಬ್ಬರ ಮಕ್ಕಳಲ್ಲಿ ಒಬ್ಬರಿಗೆ ಕಂಟಕ ಎದುರಾಗಲಿದೆ’ ಎಂದು ಪ್ರಿಯದರ್ಶಿನಿಗೆ ಹೇಳಿದ್ದಾಳೆ. ಜೋಗತಿ ಹೇಳಿದಂತೆ ಆಗುವುದರಿಂದ ಪ್ರಿಯದರ್ಶಿನಿಗೆ ಆತಂಕ ಶುರುವಾಗಿದೆ. ಯಾವ ಮಗನಿಗೆ ಏನು ಆಗಲಿದೆ ಎನ್ನುವುದು ಆಕೆಯ ಸಂಕಟ. ಇಂತಹ ಕುತೂಹಲದೊಂದಿಗೆ ಹರೀಶ್ ರಾಜ್ ಪಾತ್ರ ಆಗಮನವಾಗಿದೆ. ಆರ್ಯವರ್ಧನಿಗೆ ಸಂಕಟ ತಂದು ಮನೆಯಿಂದ ಕಳುಹಿಸುತ್ತಾರಾ? ಅಥವಾ ಆ ಪಾತ್ರಕ್ಕೆ ಬೇರೆಯವರನ್ನು ಆಯ್ಕೆ ಮಾಡಿಕೊಳ್ಳುತ್ತಾರಾ ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

  • ಅನಿರುದ್ದಗೆ ಸವಾಲು ಹಾಕಿದ ಜೊತೆ ಜೊತೆಯಲಿ ಸೀರಿಯಲ್ ಟೀಮ್

    ಅನಿರುದ್ದಗೆ ಸವಾಲು ಹಾಕಿದ ಜೊತೆ ಜೊತೆಯಲಿ ಸೀರಿಯಲ್ ಟೀಮ್

    ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ ಅವರನ್ನು ಹೊರ ಹಾಕಿದ ನಂತರ, ಆರ್ಯವರ್ಧನ್ ಪಾತ್ರವನ್ನು ಯಾರು ಮಾಡಲಿದ್ದಾರೆ? ಅನಿರುದ್ಧ ಇಲ್ಲದೇ ಸೀರಿಯಲ್ ಮುಂದುವರೆಯುತ್ತಾ? ಅವರಿಲ್ಲದೇ ಧಾರಾವಾಹಿಯನ್ನು ಜನ ನೋಡುತ್ತಾರೆ ಹೀಗೆ ಹತ್ತಾರು ಪ್ರಶ್ನೆಗಳು ಎದ್ದಿದ್ದವು. ಅನಿರುದ್ಧ ಇಲ್ಲದೇ ನಾವು ಧಾರಾವಾಹಿ ನೋಡುವುದಿಲ್ಲ ಎಂದು ಕೆಲವರು ಸೋಷಿಯಲ್ ಮೀಡಿಯಾದಲ್ಲೂ ಬರೆದುಕೊಂಡಿದ್ದಾರೆ. ಆದರೂ, ಅನಿರುದ್ಧ ಅವರಿಗೆ ಸವಾಲು ಹಾಕುವಂತಹ ಕೆಲಸ ನಡೆದಿದೆ.

    ಸೀರಿಯಲ್ ಗೆ ಅನಿರುದ್ಧ ಅವರಿಗಿಂತ ಕಂಟೆಂಟ್ ಮುಖ್ಯ ಎಂದು ಈ ಹಿಂದೆಯೇ ನಿರ್ಮಾಪಕ ಆರೂರು ಜಗದೀಶ್ ಹೇಳಿಕೆ ನೀಡಿದ್ದರು. ಕಥೆಯೇ ಧಾರಾವಾಹಿಯ ಹೀರೋ ಎಂದು ಮಾಧ್ಯಮಗಳ ಮುಂದೆಯೇ ಮಾತನಾಡಿದ್ದರು. ಈಗ ಆಡಿದಂತೆಯೇ ಮಾಡಿ ತೋರಿಸಿದ್ದಾರೆ. ಅನಿರುದ್ಧ ಅವರನ್ನು ಕೈ ಬಿಟ್ಟು ಧಾರಾವಾಹಿಯನ್ನು ಮುಂದುವರೆಸಿದ್ದಾರೆ. ಕೇವಲ ಅನಿರುದ್ಧ ಅವರನ್ನು ಮಾತ್ರವಲ್ಲ, ಆರ್ಯವರ್ಧನ್ ಪಾತ್ರವಿಲ್ಲದೇ ಧಾರಾವಾಹಿ ನಡೆಸುತ್ತೇವೆ ಎನ್ನುವ ಸೂಚನೆಯನ್ನೂ ಕೊಟ್ಟಿದ್ದಾರೆ. ಇದನ್ನೂ ಓದಿ:ದುಬಾರಿ ಸಂಭಾವನೆ ಕೇಳಿ, ಅವಕಾಶ ಕಳೆದುಕೊಂಡ `ವಜ್ರಕಾಯ’ ನಟಿ ನಭಾ ನಟೇಶ್

    ಆರ್ಯವರ್ಧನ್ ಪಾತ್ರಕ್ಕಾಗಿ ಹಲವು ಕಲಾವಿದರನ್ನು ಹುಡುಕಿದ್ದರು. ಕೊನೆಯ ಕ್ಷಣದಲ್ಲಿ ಆ ಪಾತ್ರವನ್ನು ಬಿಟ್ಟು, ಹೊಸದೊಂದು ಪಾತ್ರವನ್ನು ಸೃಷ್ಟಿ ಮಾಡಿದೆ ಧಾರಾವಾಹಿ ತಂಡ. ಆ ಹೊಸ ಪಾತ್ರವನ್ನು ಹರೀಶ್ ರಾಜ್ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಕಥೆಗೆ ಬೇರೊಂದು ತಿರುವು ದೊರೆತಿದೆ. ಈ ಹೊಸ ಕಥೆಯನ್ನು ನೋಡುಗ ಹೇಗೆ ತಗೆದುಕೊಳ್ಳುತ್ತಾನೆ ಎನ್ನುವುದೇ ಸದ್ಯಕ್ಕಿರುವ ಕುತೂಹಲ.

    Live Tv
    [brid partner=56869869 player=32851 video=960834 autoplay=true]

  • ‘ಜೊತೆ ಜೊತೆಯಲಿ’ ಸೀರಿಯಲ್ ಗೆ ನಟ ಹರೀಶ್ ರಾಜ್ ಅಧಿಕೃತ ಎಂಟ್ರಿ: ಪ್ರೊಮೋ ರಿಲೀಸ್

    ‘ಜೊತೆ ಜೊತೆಯಲಿ’ ಸೀರಿಯಲ್ ಗೆ ನಟ ಹರೀಶ್ ರಾಜ್ ಅಧಿಕೃತ ಎಂಟ್ರಿ: ಪ್ರೊಮೋ ರಿಲೀಸ್

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿರುವ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಟ ಹರೀಶ್ ರಾಜ್ ನಟಿಸಲಿದ್ದಾರೆ ಎನ್ನುವ ಸುದ್ದಿಯನ್ನು ಈ ಹಿಂದೆಯೇ ಪಬ್ಲಿಕ್ ಟಿವಿ ಡಿಜಿಟಲ್ ಬಹಿರಂಗ ಪಡಿಸಿತ್ತು. ಈ ಸೀರಿಯಲ್ ನಲ್ಲಿ ಅವರು ಆರ್ಯವರ್ಧನ್ ಪಾತ್ರದ ಬದಲು ಬೇರೆ, ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ಎಕ್ಸ್ ಕ್ಲೂಸಿವ್ ಸುದ್ದಿ ಮಾಡಿತ್ತು. ಅದೀಗ ನಿಜವಾಗಿದೆ. ಹರೀಶ್ ರಾಜ್ ಜೊತೆ ಜೊತೆಯಲಿ ಟೀಮ್ ಸೇರಿಕೊಂಡಿದ್ದು, ಅವರು ನಟಿಸಿರುವ ಪ್ರೊಮೋ ಕೂಡ ವಾಹಿನಿ ರಿಲೀಸ್ ಮಾಡಿದೆ.

    ಹರೀಶ್ ರಾಜ್ ಹೊಸ ಬಗೆಯ ಪಾತ್ರ ಮಾಡಿದ್ದು, ನೂರಾರು ಕೋಟಿ ಒಡೆಯನಾಗಿ ಅವರು ಕಾಣಿಸಿಕೊಂಡಿದ್ದಾರೆ. ಅಲ್ಲದೇ, ಆರ್ಯವರ್ಧನ್ ಪಾತ್ರವೂ ಇನ್ನೂ ಧಾರಾವಾಹಿಯಲ್ಲಿದೆ. ಆ ಪಾತ್ರಕ್ಕೂ ಹರೀಶ್ ರಾಜ್ ಇರುವ ಪಾತ್ರಕ್ಕೂ ಕೊಂಡಿ ಬೆಳೆಸಿ ಕಥೆ ಮಾಡಿದ್ದಾರೆ ಧಾರಾವಾಹಿ ತಂಡ. ಹಾಗಾಗಿ ಆರ್ಯವರ್ಧನ್ ಪಾತ್ರ ಇಲ್ಲದೇ, ಈ ಪಾತ್ರದ ಮೂಲಕ ಹೊಸ ಕಥೆ ಹೇಳುವ ತಂತ್ರವನ್ನು ಸೀರಿಯಲ್ ತಂಡ ಮಾಡಿದಂತಿದೆ. ಇದನ್ನೂ ಓದಿ:ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ‘ಗಂಡುಮಗ’ ಎಂದು ಹಾಡಿ ಹೊಗಳಿದ ಜಗ್ಗೇಶ್

    ಆರ್ಯವರ್ಧನ್ ಪಾತ್ರದಲ್ಲೇ ಅನಿರುದ್ಧ ಕಾಣಿಸಿಕೊಂಡಿರುವುದರಿಂದ ಹರೀಶ್ ರಾಜ್ ಅವರು ಆರ್ಯವರ್ಧನ್ ಪಾತ್ರದ ಬದಲು ಬೇರೊಂದು ಪಾತ್ರ ಮಾಡಿದ್ದಾರೆ ಎನ್ನುವುದು ಸ್ಪಷ್ಟ. ಆದರೆ, ಆರ್ಯವರ್ಧನ್ ಪಾತ್ರವನ್ನು ಕಥೆಯಲ್ಲಿ ಹೇಗೆ ತಗೆದುಕೊಂಡು ಹೋಗುತ್ತಾರೆ ಎನ್ನುವುದೇ ಸದ್ಯಕ್ಕಿರುವ ಕುತೂಹಲ. ಸದ್ಯ ಜೀ ವಾಹಿನಿಯು ಹರೀಶ್ ರಾಜ್ ಅವರ ಪ್ರೊಮೋ ರಿಲೀಸ್ ಮಾಡಿದ್ದು, ಅನಿರುದ್ಧ ಅಭಿಮಾನಿಗಳು, ಮತ್ತೆ ತಮ್ಮ ನಟಿ ಈ ಸೀರಿಯಲ್ ನಲ್ಲಿ ನಟಿಸಲಿ ಎಂದು ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಹೊರಬಿದ್ದ ನಂತರ ಅನಿರುದ್ಧ ಟೆಂಪಲ್ ರನ್

    ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಹೊರಬಿದ್ದ ನಂತರ ಅನಿರುದ್ಧ ಟೆಂಪಲ್ ರನ್

    ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ ಅವರನ್ನು ಹೊರ ಹಾಕಿದ ನಂತರ ಅವರು ನೋವಿನಲ್ಲಿರುವುದನ್ನು ನಾನಾ ರೀತಿಯಲ್ಲಿ ತೋರಿಸಿಕೊಳ್ಳುತ್ತಿದ್ದಾರೆ. ದಿನವೂ ಅಭಿಮಾನಿಗಳಿಗೆ ಸೋಷಿಯಲ್ ಮೀಡಿಯಾ ಮೂಲಕ ಗುಡ್ ಮಾರ್ನಿಂಗ್ ಹೇಳುವಾಗ ಜೊತೆ ಜೊತೆಯಲಿ ಧಾರಾವಾಹಿಯ ಫೋಟೋಗಳನ್ನೇ ಬಳಸುತ್ತಿದ್ದಾರೆ. ಅಷ್ಟರ ಮಟ್ಟಿಗೆ ಆ ಧಾರಾವಾಹಿಯನ್ನು ಅವರು ಮಿಸ್ ಮಾಡಿಕೊಳ್ಳುತ್ತಿದ್ದಾರೆ.

    ಇದೀಗ ಅನಿರುದ್ಧ ಅವರು ಹಲವು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದು, ಆಯಾ ದೇವಸ್ಥಾನಗಳ ಫೋಟೋಗಳನ್ನೂ ಅವರು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದಾರೆ. ಹಣೆಗೆ ಭಂಡಾರ ಹಚ್ಚಿದ್ದು ನೋಡಿದರೆ ಅವರು ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಸಾಯಿಬಾಬಾ ಫೋಟೋ ಮುಂದಿರ ಫೋಟೋವನ್ನೂ ಅವರು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ನಾನು ಅಂಬರೀಶ್ ಅಣ್ಣನ ಅಭಿಮಾನಿ, ಅವರ ಮಗನಿಗೆ ಸಿನಿಮಾ ಮಾಡುತ್ತಿರುವುದು ಹೆಮ್ಮೆ : ನಿರ್ದೇಶಕ ಮಹೇಶ್ ಕುಮಾರ್

    ಜೊತೆ ಜೊತೆಯಲಿ ಧಾರಾವಾಹಿಯಿಂದ ಅನಿರುದ್ಧ ಹೊರ ಬಂದ ನಂತರ ಸೀರಿಯಲ್ ನಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಳ್ಳುತ್ತಿದ್ದು, ಅವೆಲ್ಲವನ್ನೂ ಸಸ್ಪೆನ್ಸ್ ಆಗಿಯೇ ಇಡುತ್ತಿದೆ ತಂಡ. ಅನಿರುದ್ಧ ನಿರ್ವಹಿಸುತ್ತಿದ್ದ ಆರ್ಯವರ್ಧನ್ ಪಾತ್ರದ ಬದಲು ಹೊಸದೊಂದು ಪಾತ್ರ ತರಲಾಗುತ್ತಿದೆ ಎಂದು ಹೇಳಲಾಗುತ್ತಿದ್ದು, ಆ ಪಾತ್ರವನ್ನು ಹರೀಶ್ ರಾಜ್ ಮಾಡಲಿದ್ದಾರಂತೆ. ಆದರೆ, ಆರ್ಯವರ್ಧನ್ ಪಾತ್ರವನ್ನು ಸದ್ಯಕ್ಕೆ ಯಾರೂ ಮಾಡುವುದಿಲ್ಲ ಎನ್ನಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಆರ್ಯವರ್ಧನ್ ಪಾತ್ರವನ್ನು ಮತ್ತೆ ಅನಿರುದ್ಧ ಮಾಡ್ತಾರಾ? ಕುತೂಹಲ ಮೂಡಿಸಿದೆ ‘ಜೊತೆ ಜೊತೆಯಲಿ’ ಟೀಮ್ ನಡೆ

    ಆರ್ಯವರ್ಧನ್ ಪಾತ್ರವನ್ನು ಮತ್ತೆ ಅನಿರುದ್ಧ ಮಾಡ್ತಾರಾ? ಕುತೂಹಲ ಮೂಡಿಸಿದೆ ‘ಜೊತೆ ಜೊತೆಯಲಿ’ ಟೀಮ್ ನಡೆ

    ಜೊತೆ ಜೊತೆಯಲಿ ಟೀಮ್ ನಿಂದ ಹೊಸ ಹೊಸ ಸುದ್ದಿಗಳು ಬರುತ್ತಿವೆ. ಅನಿರುದ್ಧ ಅವರನ್ನು ಧಾರಾವಾಹಿಯಿಂದ ಕೈ ಬಿಟ್ಟಿದ್ದರಿಂದ, ಇವರು ನಿರ್ವಹಿಸುತ್ತಿದ್ದ ಆರ್ಯವರ್ಧನ್ ಪಾತ್ರಕ್ಕೆ ಬೇರೆ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಲಾಯಿತು. ನಿರ್ದೇಶಕ ಅನೂಪ್ ಭಂಡಾರಿ, ನಟರಾದ ಸುನೀಲ್ ಪುರಾಣಿಕ್ ಮತ್ತು ಹರೀಶ್ ರಾಜ್ ಅವರನ್ನು ಪಾತ್ರ ನಿರ್ವಹಿಸಲು ಕೇಳಲಾಯಿತು. ಕೊನೆಗೆ ಹರೀಶ್ ರಾಜ್ ಪಕ್ಕಾ ಆಯ್ಕೆ ಎನ್ನುವ ಸುದ್ದಿಯೂ ಬಂತು. ಆದರೆ, ಇವೆಲ್ಲವೂ ಮತ್ತೆ ಉಲ್ಟಾ ಹೊಡೆಯುತ್ತಿವೆ.

    ಧಾರಾವಾಹಿ ಲೋಕದಲ್ಲಿ ಹರಿದಾಡುತ್ತಿರುವ ಸುದ್ದಿಯ ಪ್ರಕಾರ, ಸದ್ಯಕ್ಕೆ ಆರ್ಯವರ್ಧನ್ ಪಾತ್ರಕ್ಕೆ ಯಾರನ್ನೂ ಆಯ್ಕೆ ಮಾಡಿಕೊಳ್ಳುವದಿಲ್ಲವಂತೆ. ಹರೀಶ್ ರಾಜ್ ಅವರು ಜೊತೆ ಜೊತೆಯಲಿ ಸೀರಿಯಲ್ ನಲ್ಲಿ ನಟಿಸುತ್ತಿದ್ದರೂ, ಅವರ ಪಾತ್ರ ಬೇರೆಯದ್ದೇ ಆಗಿರಲಿದೆಯಂತೆ. ಆರ್ಯವರ್ಧನ್ ಪಾತ್ರ ಮನೆಬಿಟ್ಟು ಹೋಗಲಿದೆ ಎಂದು ಹೇಳಲಾಗುತ್ತಿದೆ. ಆರ್ಯವರ್ಧನ್ ಪಾತ್ರಕ್ಕೆ ಯಾರನ್ನೂ ಆಯ್ಕೆ ಮಾಡಿಕೊಂಡಿಲ್ಲ ಅಂತಾರೆ, ಮನೆ ಬಿಟ್ಟು ಹೋದ ಆರ್ಯವರ್ಧನ್ ಮುಂದಿನ ದಿನಗಳಲ್ಲಿ ಮತ್ತೆ ವಾಪಸ್ಸು ಮನೆಗೆ ಬಂದರೆ, ಆ ಪಾತ್ರವನ್ನು ಅನಿರುದ್ಧ ಅವರೇ ಮಾಡಲಿದ್ದಾರೆ ಎನ್ನುವ ಅನುಮಾನ ಎಲ್ಲರದ್ದು.

    ಆದರೆ, ಇಷ್ಟೊಂದು ರಾದ್ಧಾಂತ ಮಾಡಿಕೊಂಡು, ಒಬ್ಬರಿಗೊಬ್ಬರ ಮೇಲೆ ಕೆಸರಾಟವಾಡಿ ಮತ್ತೆ  ಅನಿರುದ್ಧ ಮತ್ತು ನಿರ್ಮಾಪಕ ಆರೂರು ಜಗದೀಶ್ ಒಟ್ಟಿಗೆ ಕೆಲಸ ಮಾಡುತ್ತಾರಾ ಎನ್ನುವ ಪ್ರಶ್ನೆ ಎಲ್ಲರದ್ದು. ಮಾಧ್ಯಮಗಳ ಮುಂದೆ ಆರೋಪ ಪ್ರತ್ಯಾರೋಪ ಮಾಡಿದ ನಂತರ, ವಾಹಿನಿಯ ಪ್ರತಿನಿಧಿಯೇ ಅನಿರುದ್ಧ ಅವರು ಧಾರಾವಾಹಿಯಲ್ಲಿ ಇರುವುದಿಲ್ಲ ಎಂದು ಘೋಷಿದ ಮೇಲೆ ಮತ್ತೆ ಒಂದಾಗಿ ಕೆಲಸ ಮಾಡುವುದು ಅನುಮಾನ ಎನ್ನುವ ಮಾತೂ ಕೇಳಿ ಬರುತ್ತಿದೆ. ಇದನ್ನೂ ಓದಿ:ಅವಳು ನನ್ನನ್ನ ಯೂಸ್ ಮಾಡೋಕೆ ಟಿಶ್ಯೂ ಪೇಪರ್ ಅಲ್ಲ ಎನ್ನುವ ಮಾತಿಗೆ ಗಳಗಳನೆ ಅತ್ತ ಸಾನ್ಯ

    ಏನೇ  ಇರಲಿ, ಮತ್ತೆ ಅನಿರುದ್ಧ ಅವರು ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಟಿಸಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆ. ಹಾಗಾಗಿ ವಾಹಿನಿಯ ಮುಖ್ಯಸ್ಥರನ್ನೂ ಸೇರಿಸಿ, ಧಾರಾವಾಹಿಯ ತಂಡಕ್ಕೆ ಒತ್ತಡ ಹಾಕುವಂತಹ ಕೆಲಸಗಳು ತೆರೆಮರೆಯಲ್ಲಿ ನಡೆಯುತ್ತಿದೆ. ಇಬ್ಬರೂ ರಾಜಿಯಾಗಿ ಮತ್ತೆ ಅನಿರುದ್ಧ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳಲಿ ಎನ್ನುವುದು ಹಲವು ಜನರ ಆಸೆ. ಮುಂದಿನ ದಿನಗಳಲ್ಲಿ ಏನಾಗತ್ತೋ ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

  • ಆರ್ಯವರ್ಧನ್ ಪಾತ್ರವನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದಾರೆ ನಟ ಅನಿರುದ್ಧ

    ಆರ್ಯವರ್ಧನ್ ಪಾತ್ರವನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದಾರೆ ನಟ ಅನಿರುದ್ಧ

    ಜೊತೆ ಜೊತೆಯಲಿ ಸೀರಿಯಲ್ ನಿಂದ ಅನಿರುದ್ಧ ಅವರನ್ನು ಕೈ ಬಿಟ್ಟ ನಂತರ, ಅವರು ಆರ್ಯವರ್ಧನ್ ಪಾತ್ರವನ್ನು ತುಂಬಾನೇ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಈ ಧಾರಾವಾಹಿಯು ಅವರ ವೃತ್ತಿ ಬದುಕಿಗೆ ಬಹುದೊಡ್ಡ ತಿರುವು ನೀಡಿತ್ತು. ಮತ್ತು ಅಪಾರ ಪ್ರಮಾಣದಲ್ಲಿ ಅಭಿಮಾನಿಗಳನ್ನೂ ಸೃಷ್ಟಿ ಮಾಡಿತ್ತು. ಕನ್ನಡ ಕಿರುತೆರೆ ಲೋಕದಲ್ಲಿ ಅತ್ಯಂತ ಜನಪ್ರಿಯ ಧಾರಾವಾಹಿ ಇದಾಗಿದ್ದರಿಂದ, ಸಹಜವಾಗಿಯೇ ಅನಿರುದ್ಧ ಅವರು ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದರು. ಏಕಾಏಕಿ ಎಲ್ಲವೂ ಕೈ ಬಿಟ್ಟು ಹೋಗಿವೆ.

    ಸಾಕಷ್ಟು ಜನಪ್ರಿಯತೆ, ಕೈತುಂಬಾ ದುಡ್ಡು, ಯಶಸ್ಸು ಎಲ್ಲವೂ ಒಟ್ಟಿಗೆ ಹೊರಟು ಹೋದಾಗ ನೊಂದುಕೊಳ್ಳುವುದು ಸಹಜ. ಸದ್ಯ ಅನಿರುದ್ಧ ಅವರು ನೊಂದುಕೊಂಡಿದ್ದಾರೆ. ಹಾಗಾಗಿಯೇ ಧಾರಾವಾಹಿ ತಂಡದ ಜೊತೆ ಕೂತು ಮಾತನಾಡಿ ಸಮಸ್ಯೆ ಬಗೆ ಹರಿಸಿಕೊಳ್ಳಲು ಮುಂದಾದರು. ಆದರೆ, ಅದು ಯಶಸ್ಸು ಕಾಣಲಿಲ್ಲ. ಇದೀಗ ನೊಂದುಕೊಳ್ಳುವುದಷ್ಟೇ ಅವರ ಮುಂದೆ ಉಳಿದಿದೆ. ಹಾಗಾಗಿ ಧಾರಾವಾಹಿ ನೆನಪುಗಳನ್ನು ಅವರು ದಿನವೂ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ:‘ಜೊತೆ ಜೊತೆಯಲಿ’ ಅನಿರುದ್ಧ ಗಲಾಟೆ ಧಾರವಾಡಕ್ಕೆ ಶಿಫ್ಟ್: ಪ್ರಕರಣ ತಿಳಿಗೊಳಿಸಲು ಸ್ನೇಹಿತರ ಮನವಿ

    ಆರ್ಯವರ್ಧನ್ ಪಾತ್ರದ ಫೋಟೋಗಳನ್ನು ಅವರು ತಮ್ಮೆಲ್ಲ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ದಿನಕ್ಕೊಂದು ಫೋಟೋವನ್ನು ಅವರು ಫೇಸ್ ಬುಕ್, ಟ್ವಿಟರ್, ವಾಟ್ಸಪ್, ಇನ್ಸಸ್ಟಾದಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಆ ಪಾತ್ರವನ್ನು ತಾವೆಷ್ಟು ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎನ್ನುವುದನ್ನು ತೋರಿಸುತ್ತಿದ್ದಾರೆ. ಏನೇ ಆಗಲಿ ಅನಿರುದ್ಧ ಅವರೇ ಈ ಪಾತ್ರದಲ್ಲಿ ಮುಂದುವರೆಯಬೇಕು ಅನ್ನುವುದು ಅಭಿಮಾನಿಗಳ ಆಸೆ ಆಗಿತ್ತು. ಕೊನೆಗೂ ಅದೇ ಈಡೇರಲಿಲ್ಲ.

    Live Tv
    [brid partner=56869869 player=32851 video=960834 autoplay=true]

  • ‘ಜೊತೆ ಜೊತೆಯಲಿ’ ಅನಿರುದ್ಧ ಗಲಾಟೆ ಧಾರವಾಡಕ್ಕೆ ಶಿಫ್ಟ್: ಪ್ರಕರಣ ತಿಳಿಗೊಳಿಸಲು ಸ್ನೇಹಿತರ ಮನವಿ

    ‘ಜೊತೆ ಜೊತೆಯಲಿ’ ಅನಿರುದ್ಧ ಗಲಾಟೆ ಧಾರವಾಡಕ್ಕೆ ಶಿಫ್ಟ್: ಪ್ರಕರಣ ತಿಳಿಗೊಳಿಸಲು ಸ್ನೇಹಿತರ ಮನವಿ

    ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಅನಿರುದ್ಧ ಅವರೇ ಮುಂದುವರೆಯಬೇಕು ಎನ್ನುವ ಒತ್ತಡ ಈವರೆಗೂ ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ವ್ಯಕ್ತವಾಗಿತ್ತು. ಇದೀಗ ಅನಿರುದ್ದ ಅವರ ಅಭಿಮಾನಿಗಳು ಮತ್ತು ಸ್ನೇಹಿತರು ಮಾಧ್ಯಮ ಗೋಷ್ಠಿ ಮಾಡುವ ಮೂಲಕ ವಾಹಿನಿಗೆ ಮತ್ತು ನಿರ್ಮಾಪಕರ ಮೇಲೆ ಒತ್ತಡ ತರುತ್ತಿದ್ದಾರೆ.

    ನಿನ್ನೆಯಷ್ಟೇ ಬೆಂಗಳೂರಿನ ಪ್ರಸ್ ಕ್ಲಬ್ ನಲ್ಲಿ ಅನಿರುದ್ಧ ಅವರ ಮಹಿಳಾ ಅಭಿಮಾನಿಗಳು ಮಾಧ್ಯಮಗೋಷ್ಠಿ ಮಾಡಿ, ಅನಿರುದ್ದ ಅವರಿಗೆ ಬೆಂಬಲ ಸೂಚಿಸಿದ್ದರು. ಏಕಾಏಕಿ ಹೀಗೆ ಬ್ಯಾನ್ ಮಾಡುವುದನ್ನು ಸಹಿಸಲ್ಲ ಎಂದು ಹೇಳಿಕೊಂಡಿದ್ದರು. ಅವರ ಜನಪ್ರಿಯತೆಯನ್ನು ಬಳಸಿಕೊಂಡು, ಸೀರಿಯಲ್ ನಿರ್ಮಾಪಕರು ಅನಿರುದ್ಧ ಅವರನ್ನು ದೂರ ಮಾಡಿದ್ದಾರೆ ಎಂದೂ ಆರೋಪಿಸಿದ್ದರು. ಇದೀಗ ಧಾರವಾಡದ ಗೆಳೆಯರು ಕೂಡ ಇಂಥದ್ದೊಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಸಿನಿಮಾ ಆಗಲಿದೆ ಸೋನು ಶ್ರೀನಿವಾಸ್ ಗೌಡ ಲೈಫ್ ಸ್ಟೋರಿ: ಯಾರಾಗಲಿದ್ದಾರೆ ಹೀರೋಯಿನ್?

    ಅನಿರುದ್ಧ ಮೂಲತಃ ಧಾರವಾಡದವರು. ಅಲ್ಲಿಯೇ ಎಜ್ಯುಕೇಷನ್ ಕೂಡ ಮುಗಿಸಿದ್ದು. ಧಾರವಾಡದ ರಂಗಭೂಮಿಯಿಂದ ಸಿನಿಮಾ ಪ್ರಪಂಚಕ್ಕೆ ಕಾಲಿಟ್ಟವರು. ಹಾಗಾಗಿ ಧಾರವಾಡದ ಗೆಳೆಯರು ಇಂದು ಒಟ್ಟಾಗಿ ಅನಿರುದ್ಧ ಪರ ಬ್ಯಾಟ್ ಬೀಸಿದ್ದಾರೆ. ನಲವತ್ತು ವರ್ಷಗಳಿಂದ ಸ್ನೇಹಿತರಾಗಿದ್ದವರು, ಯಾವತ್ತೂ ಅವರು ದುರಹಂಕಾರ ತೋರಿಸಿಲ್ಲ. ಹಾಗಾಗಿ ಅನಿರುದ್ಧ ಅವರನ್ನು ವಾಪಸ್ಸು ಧಾರಾವಾಹಿಗೆ ಸೇರಿಸಿಕೊಳ್ಳಿ ಎಂದು ಹೇಳಿದ್ದಾರೆ.

    ಅನಿರುದ್ಧ ಅವರನ್ನು ಸೀರಿಯಲ್ ನಿಂದ ಕೈಬಿಟ್ಟ ವಿಚಾರ ಮತ್ತು ಬ್ಯಾನ್ ಮಾಡಿರುವ ವಿಷಯ ನಮ್ಮ ಎಲ್ಲ ಗೆಳೆಯರಿಗೆ ಬೇಸರವಾಗಿದೆ. ದೊಡ್ಡವರು ಯಾರಾದ್ರು ಈ‌ ವಿಷಯವನ್ನು ಅಲ್ಲೇ‌ ಮುಗಿಸಬೇಕಿತ್ತು. ಅನಿರುದ್ಧ ಅಷ್ಟು ದೊಡ್ಡ ಮಟ್ಟದಲ್ಲಿ ಬೆಳೆದ್ರು ಸಿಂಪಲ್‌ ಆಗಿಯೇ ಇದ್ದಾರೆ. ಹುಬ್ಬಳ್ಳಿ ಧಾರವಾಡ ಪಾಲಿಕೆಯ ರಾಯಭಾರಿ ಆಗಿಯೂ ಅವರು ಧಾರವಾಡಕ್ಕೆ ಬಂದಿದ್ದರು. ಅಂತಹ ವ್ಯಕ್ತಿಗೆ ಅವಮಾನ ಮಾಡಬೇಡಿ ಎಂದು ಗೆಳೆಯರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]