ಲಕ್ನೋ: ಪ್ರಯಾಗ್ರಾಜ್ನಲ್ಲಿ (Prayagraj) ಪತ್ರಕರ್ತರೊಬ್ಬರ (Journalist) ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಹತ್ಯೆಗೀಡಾದ ವ್ಯಕ್ತಿಯನ್ನು ಲಕ್ಷ್ಮಿ ನಾರಾಯಣ್ ಸಿಂಗ್ ಅಲಿಯಾಸ್ ಪಪ್ಪು (54) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸ್ವರೂಪ್ ರಾಣಿ ನೆಹರು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ವೈದ್ಯರು ಮೃತಪಟ್ಟಿದ್ದಾಗಿ ಖಚಿತಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಕೋಲ್ಕತ್ತಾ ಮೂಲದ ಮಹಿಳೆ ಮೇಲೆ ಗ್ಯಾಂಗ್ ರೇಪ್ – ಆರು ಮಂದಿ ಅರೆಸ್ಟ್
ಕೊಲೆಯಾದ ಪಪ್ಪು ಹೈಕೋರ್ಟ್ ಬಾರ್ ಅಸೋಸಿಯೇಷನ್ನ ಮಾಜಿ ಅಧ್ಯಕ್ಷ ಅಶೋಕ್ ಸಿಂಗ್ ಅವರ ಸೋದರಳಿಯ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಎಡಿಸಿಪಿ) ಪುಷ್ಕರ್ ವರ್ಮಾ ತಿಳಿಸಿದ್ದಾರೆ.
88 ವರ್ಷದ ಕೆ.ಬಿ. ಗಣಪತಿ ಅವರು ತಮ್ಮ ಬದುಕಿನ ಕಡೆಯ ದಿನದವರೆಗೂ ಪತ್ರಿಕಾಲಯದಲ್ಲಿ ಸಕ್ರಿಯರಾಗಿದ್ದರು. ಕೆಬಿ ಗಣಪತಿ ಅವರು ತಮ್ಮ ಒಡೆತನದ ಕನ್ನಡದ ʻಮೈಸೂರು ಮಿತ್ರʼ ಹಾಗೂ ಇಂಗ್ಲೀಷ್ನ ಸ್ಟಾರ್ ಆಫ್ ಮೈಸೂರು (Star of Mysore) ಪತ್ರಿಕೆಗಳ ಮೂಲಕ ಹಳೇ ಮೈಸೂರು ಪ್ರಾಂತ್ಯದಲ್ಲಿ ದೊಡ್ಡ ಓದುಗ ವರ್ಗವನ್ನು ಸೃಷ್ಟಿಸುವಲ್ಲಿ ಯಶಸ್ವಿಯಾದವರು. ಇದರ ಜೊತೆಗೆ ನೂರಾರು ಪತ್ರಕರ್ತರನ್ನ ಈ ನಾಡಿಗೆ ಕೊಡುಗೆ ನೀಡಿದ ಹಿರಿಮೆ ಗಣಪತಿ ಅವರಿಗೆ ಸಲ್ಲುತ್ತದೆ.
ತಮ್ಮ ಅಂಕಣ ಬರಹಗಳ ಮೂಲಕ ಪತ್ರಕರ್ತರ (Journalists) ಸಾಮಾಜಿಕ ಬದ್ಧತೆಯನ್ನ ಸಮಾಜಕ್ಕೆ ತೋರಿಸಿದವರು ಗಣಪತಿ. ಯಶಸ್ವಿ ಪತ್ರಿಕೋದ್ಯಮದ ಮೂಲಕ ಇಡೀ ರಾಜ್ಯದ ಪತ್ರಿಕ ಸಮೂಹ ಮೈಸೂರಿನ ಕಡೆ ನೋಡುವ ಹಾಗೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಸುಮಾರು 50 ವರ್ಷಗಳ ನಿರಂತರ ಪತ್ರಿಕೋದ್ಯಮದಲ್ಲಿ ಮೈಲಿಗಲ್ಲಿನಂತಹ ನೂರಾರು ಸಾಧನೆಗಳನ್ನು ಗಣಪತಿ ಅವರು ಮಾಡಿದ್ದಾರೆ. ಅವರನ್ನು ಕಳೆದುಕೊಳ್ಳುವ ಮೂಲಕ ಪತ್ರಿಕೋದ್ಯಮ ಶೂನ್ಯ ಸೃಷ್ಟಿಸಿಕೊಂಡಿದೆ.
ಕೆಬಿಜೆ ಎಂದು ಖ್ಯಾತಿ ಪಡೆದಿದ್ದ ಕೆಬಿ ಗಣಪತಿ ಅವರು ಮೈಸೂರಿನಲ್ಲಿ ಸಂಜೆಯ ದಿನಪತ್ರಿಕೆ ‘ಸ್ಟಾರ್ ಆಫ್ ಮೈಸೂರು’ ಪತ್ರಿಕೆಯನ್ನು 1978ರಲ್ಲಿ ಆರಂಭಿಸಿದರು. ಇದು ಇಂಗ್ಲಿಷ್ ಪತ್ರಕರ್ತರಾಗುವ ಯುವಕರ ಪಾಲಿಗೆ ಅಕ್ಷರಶಃ ಕಾಲೇಜ್ ಆಗಿತ್ತು. ಇದರ ಜೊತೆಗೆ 1980ರಲ್ಲಿ ‘ಮೈಸೂರು ಮಿತ್ರ’ ದಿನಪತ್ರಿಕೆ ಆರಂಭಿಸಿದರು.
ಕೆಬಿಜೆ ಅವರು ಬರೆಯುತ್ತಿದ್ದ ʻಛೂಮಂತ್ರ, ಅಬ್ರಕಡಬ್ರʼ ಅಂಕಣಗಳು ಪ್ರಸಿದ್ಧವಾಗಿದ್ದವು. ಕೆಬಿಜೆ ಪತ್ರಿಕೋದ್ಯಮಕ್ಕೆ ಬರುವ ಮುನ್ನ ಬೆಂಗಳೂರಿನಲ್ಲಿ ಕಾನೂನು ಪದವಿ ಪಡೆದ ನಂತರ ಮುಂಬೈಗೆ ತೆರಳಿ ಅಲ್ಲಿಯ ಭಾರತೀಯ ವಿದ್ಯಾಭವನದಲ್ಲಿ ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪದವಿ ಗಳಿಸಿದರು. ಮುಂಬೈನಲ್ಲಿ ಪ್ರಿ-ಪ್ರೆಸ್ ಜರ್ನಲ್, ಎಕನಾಮಿಕ್ ಅಂಡ್ ಪೊಲಿಟಿಕಲ್ ವೀಕ್ಲಿ ಹಾಗೂ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು. ಬಳಿಕ ಮೈಸೂರಿಗೆ ಬಂದು ಪತ್ರಿಕೆಗಳನ್ನು ಆರಂಭಿಸಿದ್ದು ಈಗ ಇತಿಹಾಸ.
ಆದರ್ಶವಾದಿ ಕಾದಂಬರಿ, ಅಮೆರಿಕ- ಆ್ಯನ್ ಏರಿಯಾ ಆಫ್ ಲೈಟ್ ಪ್ರವಾಸ ಕಥನ, ದಿ ಕ್ರಾಸ್ ಆ್ಯಂಡ್ ದಿ ಕೂರ್ಗ್ ಇಂಗ್ಲಿಷ್ ಕಾದಂಬರಿ, ಸ್ಟಾರ್ ಆಫ್ ಮೈಸೂರು- ಸ್ಟಾರ್ ಆಫ್ ಎ ಯೂನಿಕ್ ಇವನಿಂಗ್ ಇಂಗ್ಲಿಷ್ ನ್ಯೂಸ್ ಪೇಪರ್, ಸ್ವಾಡ್೯ ಆಫ್ ಶಿವಾಜಿ ಜೀವನಚರಿತ್ರೆ ಇವರು ಬರೆದ ಕೃತಿಗಳಾಗಿವೆ.
ನನ್ನೂರಿನ ಹಿರಿಯ ಪತ್ರಕರ್ತ ಮಿತ್ರರಾದ ಕೆ.ಬಿ.ಗಣಪತಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಗಣಪತಿಯವರ ಅಗಲಿಕೆಯಿಂದ ನಾಡಿನ ಪತ್ರಿಕಾರಂಗ ಬಡವಾಗಿದೆ.
ಸುಮಾರು ಐದು ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಅವಿರತ ದುಡಿದ ಗಣಪತಿ ಅವರು ವಸ್ತುನಿಷ್ಠ ಹಾಗೂ ವೃತ್ತಿಪರ ಬರಹಗಳಿಗೆ ಹೆಸರುವಾಸಿ. “ಸ್ಟಾರ್ ಆಫ್ ಮೈಸೂರು” ಪತ್ರಿಕೆಯ ಮೂಲಕ ಸಾಂಸ್ಕೃತಿಕ… pic.twitter.com/BKA6U3MorY
ಗಣ್ಯರಿಂದ ಸಂತಾಪ
ಹಿರಿಯ ಪತ್ರಕರ್ತ ಗಣಪತಿ ಅವರ ನಿಧನಕ್ಕೆ ಮುಖ್ಯಮಂತ್ರಿಗಳು ಸೇರಿದಂತೆ ಸಂತಾಪ ಸೂಚಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಫೋಟೋ ಜೊತೆಗೆ ಚುಟುಕು ಸಂದೇಶ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ.
ಸಿಎಂ ಸಂತಾಪ: ನನ್ನೂರಿನ ಹಿರಿಯ ಪತ್ರಕರ್ತ ಮಿತ್ರರಾದ ಕೆ.ಬಿ.ಗಣಪತಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಗಣಪತಿಯವರ ಅಗಲಿಕೆಯಿಂದ ನಾಡಿನ ಪತ್ರಿಕಾರಂಗ ಬಡವಾಗಿದೆ. ಸುಮಾರು ಐದು ದಶಕಗಳ ಕಾಲ ಪತ್ರಿಕೋದ್ಯಮದಲ್ಲಿ ಅವಿರತ ದುಡಿದ ಗಣಪತಿ ಅವರು ವಸ್ತುನಿಷ್ಠ ಹಾಗೂ ವೃತ್ತಿಪರ ಬರಹಗಳಿಗೆ ಹೆಸರುವಾಸಿ. “ಸ್ಟಾರ್ ಆಫ್ ಮೈಸೂರು” ಪತ್ರಿಕೆಯ ಮೂಲಕ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಪಾರ ಓದುಗ ಬಳಗ ಸೃಷ್ಟಿಸಿದ ಗಣಪತಿಯವರು “ಮೈಸೂರು ಮಿತ್ರ” ದಿನಪತ್ರಿಕೆಯ ಸ್ಥಾಪಕ ಸಂಪಾದಕರಾಗಿ ಕೂಡ ಸೇವೆ ಸಲ್ಲಿಸಿದ್ದರು. ಪತ್ರಿಕೋದ್ಯಮದಲ್ಲಿ ಅವರು ಮೂಡಿಸಿರುವ ಹೆಜ್ಜೆಗುರುತುಗಳು ಯುವ ಪತ್ರಕರ್ತರಿಗೆ ಸ್ಪೂರ್ತಿ ಮತ್ತು ಮಾದರಿಯಾಗಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ.
ಮೈಸೂರು ಮಿತ್ರ, ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕ ಸಂಪಾದಕರು ಹಾಗೂ ಹಿರಿಯರೂ ಆಗಿದ್ದ ಶ್ರೀ ಕೆ.ಬಿ ಗಣಪತಿ ಅವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ.
ಮಧ್ಯಮ ಲೋಕದಲ್ಲಿ ಅಪಾರ ಸೇವೆ ಸಲ್ಲಿಸಿದ್ದ ಅವರು, ತಮ್ಮ ಗರಡಿಯಲ್ಲಿ ಅನೇಕ ಶ್ರೇಷ್ಠ ಪತ್ರಕರ್ತರನ್ನು ರೂಪಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಸಂತಾಪ: ಮೈಸೂರು ಮಿತ್ರ, ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕ ಸಂಪಾದಕರು ಹಾಗೂ ಹಿರಿಯರೂ ಆಗಿದ್ದ ಶ್ರೀ ಕೆ.ಬಿ ಗಣಪತಿ ಅವರು ನಿಧನರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಮಧ್ಯಮ ಲೋಕದಲ್ಲಿ ಅಪಾರ ಸೇವೆ ಸಲ್ಲಿಸಿದ್ದ ಅವರು, ತಮ್ಮ ಗರಡಿಯಲ್ಲಿ ಅನೇಕ ಶ್ರೇಷ್ಠ ಪತ್ರಕರ್ತರನ್ನು ರೂಪಿಸಿದ್ದಾರೆ. ಅವರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ. ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ಕರುಣಿಸಲೆಂದು ಪ್ರಾರ್ಥಿಸುವೆ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.
ವಾಷಿಂಗ್ಟನ್: ಅಮೆರಿಕ (America) ಸೇನೆ ಇತ್ತೀಚಿಗೆ ಯೆಮೆನ್ (Yemen) ದೇಶದ ಮೇಲೆ ಭೀಕರ ದಾಳಿಗಳನ್ನು ನಡೆಸಿತ್ತು. ಆದರೆ ಈ ದಾಳಿಯ ಮೊದಲೇ, ಇದಕ್ಕೆ ಸಂಬಂಧಿಸಿದ ಯೋಜನೆಯ ರಹಸ್ಯ ಲೀಕ್ ಆಗಿತ್ತು ಎನ್ನುವ ವಿಚಾರ ಸಂಚಲನ ಮೂಡಿಸಿದೆ.
ಉಪಾಧ್ಯಕ್ಷ ಜೆಡಿ ವಾನ್ಸ್, ರಕ್ಷಣಾ ಮಂತ್ರಿ ಪೀಟ್ ಹೆಗ್ಸತ್ ಸೇರಿ ಪ್ರಮುಖ ಗಣ್ಯರು ಇರುವ ಸಿಗ್ನಲ್ ಆಪ್ ಗ್ರೂಪ್ ಚಾಟ್ನಲ್ಲಿ ಪತ್ರಕರ್ತರೊಬ್ಬರು ಇದ್ದರು. ಹೀಗಾಗಿ ದಾಳಿಗೆ ಸಂಬಂಧಿಸಿದ ವಿಷಯಗಳು ಆ ಪತ್ರಕರ್ತನಿಗೆ ಮೊದಲೇ ಗೊತ್ತಿತ್ತು ಎಂಬುದನ್ನು ಶ್ವೇತಭವನ ಒಪ್ಪಿಕೊಂಡಿದೆ. ಇದನ್ನೂ ಓದಿ: ಶಿಸ್ತು ಉಲ್ಲಂಘನೆ – ಬಿಜೆಪಿಯ ಐದು ನಾಯಕರಿಗೆ ನೋಟಿಸ್
ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಆಕಸ್ಮಿಕವಾಗಿ ಅಮೆರಿಕದ ಪ್ರಮುಖ ರಾಜಕೀಯ ಪತ್ರಕರ್ತ ಜೆಫ್ರಿ ಗೋಲ್ಡ್ಫೀಲ್ಡ್ರನ್ನ ಸಿಗ್ನಲ್ ಆಪ್ ಗ್ರೂಪ್ಚಾಟ್ಗೆ ಸೇರಿಸಿದ್ದರು ಎನ್ನಲಾಗಿದೆ. ಇದನ್ನು ಗಂಭೀರ ಸ್ವರೂಪದ ಭದ್ರತಾ ವೈಫಲ್ಯ ಎನ್ನಲಾಗುತ್ತಿದೆ. ಇದನ್ನೂ ಓದಿ: ರಾಜ್ಯದ ಹಲವೆಡೆ ಭಾರೀ ಮಳೆ | ಮರ ಬಿದ್ದು ಕಳಸ – ಮೂಡಿಗೆರೆ ಮಾರ್ಗ ಬಂದ್
ತುಮಕೂರು: ‘ಪಬ್ಲಿಕ್ ಟಿವಿ’ಯ (PUBLiC TV) ಮೈಸೂರು ಜಿಲ್ಲಾ ವರದಿಗಾರ ಕೆ.ಪಿ ನಾಗರಾಜ್ (KP Nagaraj) ಅವರು ರಾಜ್ಯಮಟ್ಟದ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.
ವಿದ್ಯುನ್ಮಾನ ವಿಭಾಗದಲ್ಲಿ ಅತ್ಯುತ್ತಮ ಸಾಮಾಜಿಕ ಹಾಗೂ ಮಾನವೀಯ ವರದಿಗಾಗಿ ರಾಜ್ಯ ಮಟ್ಟದ ಪ್ರಶಸ್ತಿ ಪಡೆದಿದ್ದಾರೆ. ತುಮಕೂರಿನಲ್ಲಿ (Tumakuru) ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ 39ನೇ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಜೊತೆಗೆ ಪಬ್ಲಿಕ್ ಟಿವಿ ತುಮಕೂರು ಜಿಲ್ಲಾ ಪ್ರತಿನಿಧಿ ಮಂಜುನಾಥ ತಾಳಮಕ್ಕಿ ರಾಜ್ಯ ಸಮ್ಮೇಳದ ಖಜಾಂಚಿಯಾಗಿ, ಪ್ರಚಾರ ಸಮಿತಿ, ಸ್ವಾಗತಸಮಿತಿ ಪ್ರಮುಖರಾಗಿ ಅತ್ಯುತ್ತಮ ಕಾರ್ಯನಿರ್ವಹಣೆ ಮಾಡಿದ್ದಕ್ಕೆ ರಾಜ್ಯ ಸಮ್ಮೇಳನದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಇದನ್ನೂ ಓದಿ: Kodagu | ಹುಲಿ ದಾಳಿಗೆ ಎರಡು ಹಸುಗಳು ಬಲಿ
ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಜೆಡಿಎಲ್ಪಿ ನಾಯಕ ಸುರೇಶ್ ಬಾಬು ಹಾಜರಿದ್ದರು. ಇದನ್ನೂ ಓದಿ: ರಾಜ್ಯಕ್ಕೆ ಕಡಿಮೆ ದರದಲ್ಲಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ಧ – ಜೋಶಿ
ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಅಫಘಾತಕ್ಕೀಡಾಗಿ (Car Accident) ಯುವ ಪತ್ರಕರ್ತ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗುಡಿಬಂಡೆ ತಾಲೂಕಿನ ಮಾಚಹಳ್ಳಿ ಬಳಿ ನಡೆದಿದೆ.
ಮೂಲತಃ ಗುಡಿಬಂಡೆ ನಿವಾಸಿ ಭರತ್ (32) ಮೃತ ದುರ್ದೈವಿ. ಬೆಂಗಳೂರಿನ ಹೊಸದಿಗಂತ ಪತ್ರಿಕೆಯಲ್ಲಿ ವಿಶೇಷ ವರದಿಗಾರರಾಗಿ ಭರತ್ ಕೆಲಸ ಮಾಡುತ್ತಿದ್ದರು. ಬೆಂಗಳೂರಿನಲ್ಲೇ (Bengaluru) ವಾಸವಿದ್ದ ಭರತ್, ವಾರಾಂತ್ಯದ ಹಿನ್ನೆಲೆ ಸ್ವಗ್ರಾಮ ಗುಡಿಬಂಡೆಗೆ ಆಗಮಿಸಿದ್ದರು. ತಡರಾತ್ರಿ ಬಾಗೇಪಲ್ಲಿಗೆ ತೆರಳುವಾಗ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಹಿಂದೂ ಅನ್ನೋದು ಅವಮಾನಕರ ಶಬ್ದ – ಚಿಂತಕ ಕೆ.ಎಸ್ ಭಗವಾನ್ ಮತ್ತೆ ವಿವಾದಾತ್ಮಕ ಹೇಳಿಕೆ
ಮಾಚಹಳ್ಳಿ ಕೆರೆಯ ಏರಿಯ ಮೇಲೆ ಇದ್ದ ದೇವರ ಕಲ್ಲಿನ ಗುಡಿಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ದೇವರ ಗುಡಿಯ ಮೇಲಿನ ಚಪ್ಪಡಿ ಕಲ್ಲು ಕಾರಿನೊಳಗೆ ತೂರಿದೆ. ಪರಿಣಾಮ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಭರತ್ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ – ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಮಳೆ ಅಲರ್ಟ್
ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಭರತ್ 9 ತಿಂಗಳ ಮಗಳ ನಾಮಕರಣ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದರು. ಆದ್ರೆ ದುರದೃಷ್ಟವಶಾತ್ ಭರತ್ ಸಾವನ್ನಪ್ಪಿದ್ದು ಮೃತನ ಆಗಲಿಕೆಗೆ ಪತ್ರಕರ್ತ ಮಿತ್ರರು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ಗೋಹತ್ಯೆ ಮಾಡಲು, ಗೋಮಾಂಸ ತಿನ್ನಲು ಅವಕಾಶ ಕೊಡ್ಬೇಕಾ – ಅಶ್ವಥ್ ನಾರಾಯಣ ಪ್ರಶ್ನೆ
ಮಂಗಳೂರು: ಕರಾವಳಿಯ ಖ್ಯಾತ ಪತ್ರಕರ್ತ ಮನೋಹರ್ ಪ್ರಸಾದ್ (64) ನಿಧನರಾಗಿದ್ದಾರೆ.
ಉದಯವಾಣಿ ಪತ್ರಿಕೆಯಲ್ಲಿ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದ ಮನೋಹರ್ ಪ್ರಸಾದ್, ಬಳಿಕ ಮುಖ್ಯ ವರದಿಗಾರರಾಗಿ, ಬ್ಯುರೋ ಚೀಫ್ ಜೊತೆಗೆ ಸಹಾಯಕ ಸಂಪಾಕರಾಗಿಯೂ ಕಾರ್ಯ ನಿರ್ವಹಿಸುವ ಮೂಲಕ ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ಲಂಡನ್: ಜಮ್ಮು ಮತ್ತು ಕಾಶ್ಮೀರದ (Jammu and Kashmir) ವಿಚಾರದಲ್ಲಿ ಆಗಾಗ್ಗೆ ಮೂಗು ತೂರಿಸುವ ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಪಾಕ್ ಮೂಲದ ಹೋರಾಟಗಾರ್ತಿ ಮಲಾಲಾ ಯೂಸುಫ್ಝಾಗೆ ಜಮ್ಮು ಮತ್ತು ಕಾಶ್ಮೀರದ ಸಾಮಾಜಿಕ ಕಾರ್ಯಕರ್ತೆ, ಪತ್ರಕರ್ತೆ ಯಾನಾ ಮೀರ್ (Yana Mir) ಬ್ರಿಟನ್ ಸಂಸತ್ನಲ್ಲಿ ತಿರುಗೇಟು ನೀಡಿದ್ದಾರೆ.
ನಾನು ಮಲಾಲಾ (Malala Yousafzai) ರೀತಿ ಅಲ್ಲ, ಭಾರತದ ಭಾಗವಾಗಿರುವ ನನ್ನ ತಾಯ್ನಾಡು ಕಾಶ್ಮೀರದಲ್ಲಿ ಸುರಕ್ಷಿತ ಮತ್ತು ಸ್ವತಂತ್ರವಾಗಿದ್ದೇನೆ. ನಾನು ನನ್ನ ದೇಶವನ್ನು ತೊರೆಯಲ್ಲ. ಅಲ್ಲಿ ಶಾಂತಿ ನೆಲೆಸಿದೆ, ಮಾನವಹಕ್ಕುಗಳ ರಕ್ಷಣೆ ಆಗ್ತಿದೆ ಎಂದು ಯಾನಾ ಮೀರ್ ಭಾರತವನ್ನು ಹಾಡಿಹೊಗಳಿದ್ದಾರೆ. ಇದನ್ನೂ ಓದಿ: ಕ್ರೀಡಾಂಗಣದಲ್ಲಿ ಸಾರ್ವಜನಿಕವಾಗಿ ಇಬ್ಬರ ತಲೆಗೆ 15 ಬಾರಿ ಗುಂಡಿಟ್ಟು ಮರಣದಂಡನೆ
ಜಾಗತಿಕವಾಗಿ ಯಾರೇ ಆಗಲಿ ನನ್ನ ದೇಶದ ಬಗ್ಗೆ ಕೆಟ್ಟದಾಗಿ ಮಾತಾಡಿದ್ರೆ ಸಹಿಸಲ್ಲ. ಸೋಶಿಯಲ್ ಮೀಡಿಯಾದಲ್ಲಿಯೂ ನನ್ನ ಮಾತೃಭೂಮಿ ಬಗ್ಗೆ ಕೆಟ್ಟದಾಗಿ ಮಾತಾಡೋದನ್ನು ಸಹಿಸಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ. ಯಾನಾ ಮೀರ್ ಅವರು ಬ್ರಿಟನ್ ಸಂಸತ್ನಲ್ಲಿ ಮಾತನಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ಕೋಟಿ ಕೋಟಿ ಭಾರತೀಯರು ಯಾನ ಮೀರ್ ಮಾತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಾಶ್ಮೀರಕ್ಕೆ ಭೇಟಿ ಕೊಡದೇ ಸೋಶಿಯಲ್ ಮೀಡಿಯಾಗಳಲ್ಲಿ ಟೀಕೆ ಮಾಡುವವರನ್ನು ನಾನು ವಿರೋಧಿಸುತ್ತೇನೆ. ಧರ್ಮದ ಆಧಾರದಲ್ಲಿ ಭಾರತೀಯರನ್ನು ಧ್ರುವೀಕರಿಸುವುದನ್ನ ಮೊದಲು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕಿಮ್ ಜಾಂಗ್ ಉನ್ಗೆ ವಿಶೇಷ ಕಾರು ಗಿಫ್ಟ್ ಕೊಟ್ಟ ರಷ್ಯಾ ಅಧ್ಯಕ್ಷ!
ನವದೆಹಲಿ: ಚೀನಾ (China) ಜೊತೆಗೆ ಆರ್ಥಿಕ ಸಂಬಂಧ ಹೊಂದಿರುವ ಆರೋಪದ ಮೇಲೆ ನ್ಯೂಸ್ಕ್ಲಿಕ್ (NewsClick) ಆನ್ಲೈನ್ ಪೋರ್ಟಲ್ಗೆ (Online Portal) ಸಂಬಂಧಿಸಿದ ಪತ್ರಕರ್ತರು (Journalist) ಮತ್ತು ಉದ್ಯೋಗಿಗಳ ಮನೆಗಳ ಮೇಲೆ ಮಂಗಳವಾರ ಬೆಳಗ್ಗೆ ದೆಹಲಿ ಪೊಲೀಸರ ವಿಶೇಷ ತಂಡ ದಾಳಿ (Raid) ನಡೆಸಿದೆ. 100ಕ್ಕೂ ಹೆಚ್ಚು ಸ್ಥಳಗಳಲ್ಲಿ 500ಕ್ಕೂ ಹೆಚ್ಚು ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಅಕ್ಟೋಬರ್ 2 ರಂದು ದೆಹಲಿ ಪೊಲೀಸ್ (Delhi Police) ವಿಶೇಷ ಕೋಶದ ಹಿರಿಯ ಅಧಿಕಾರಿಗಳ ಸಭೆ ನಡೆದಿದ್ದು, ಪ್ರಕರಣವನ್ನು ಮುಂದಕ್ಕೆ ಕೊಂಡೊಯ್ಯುವ ಬಗ್ಗೆ ನಿರ್ಧರಿಸಿತ್ತು. ಅಂತಯೇ ದೆಹಲಿ, ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್ ಮತ್ತು ಮುಂಬೈನ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಯಿತು. ಇದನ್ನೂ ಓದಿ: ಬಾಲ್ಯ ವಿವಾಹದ ವಿರುದ್ಧ ಸಮರ – ಮತ್ತೆ 800ಕ್ಕೂ ಅಧಿಕ ಮಂದಿಯ ಬಂಧನ
ಮೂಲಗಳ ಪ್ರಕಾರ ದಾಳಿಗೆ ಒಳಗಾದವರ ಹೆಸರುಗಳನ್ನು ಎ, ಬಿ, ಸಿ ಎಂದು ವರ್ಗಗಳಾಗಿ ವಿಂಗಡಿಸಲಾಗಿತ್ತು. ಎ ವರ್ಗಕ್ಕೆ ಸೇರಿದವರನ್ನು ಬಂಧಿಸಲಾಗಿದೆ. ಬಿ ಮತ್ತು ಸಿ ನ್ಯೂಸ್ ಪೋರ್ಟಲ್ನ ಪತ್ರಕರ್ತರ ಲ್ಯಾಪ್ಟಾಪ್ ಮತ್ತು ಮೊಬೈಲ್ ಫೋನ್ಗಳಿಂದ ಡೇಟಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನ್ಯೂಸ್ಕ್ಲಿಕ್ನ ಸಂಸ್ಥಾಪಕ ಮತ್ತು ಪ್ರಧಾನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರನ್ನು ವಿಚಾರಣೆಗಾಗಿ ದೆಹಲಿ ಪೊಲೀಸ್ ವಿಶೇಷ ಸೆಲ್ ಕಚೇರಿಗೆ ಕರೆತರಲಾಯಿತು. ಇದನ್ನೂ ಓದಿ: ಇರುವುದೊಂದೇ ಸನಾತನ ಧರ್ಮ, ಉಳಿದೆಲ್ಲವೂ ಪಂಥಗಳು: ಯೋಗಿ
ಆಗಸ್ಟ್ 17ರಂದು ಕಟ್ಟುನಿಟ್ಟಾದ ಭಯೋತ್ಪಾದನಾ-ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಾದ ಪ್ರಕರಣವನ್ನು ಆಧರಿಸಿ ದೆಹಲಿಯ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ದೆಹಲಿ ಮತ್ತು ನೋಯ್ಡಾ ಮತ್ತು ಗಾಜಿಯಾಬಾದ್ನ ನೆರೆಯ ಪ್ರದೇಶಗಳಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್ ದಾಳಿ ನಡೆಸಿತು. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಆದರೆ ಕೆಲವು ಪತ್ರಕರ್ತರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಿಹಾರ ಜಾತಿ ಸಮೀಕ್ಷೆ ವರದಿ ಬಿಡುಗಡೆ; ಜಾತಿ ಹೆಸರಲ್ಲಿ ದೇಶ ವಿಭಜಿಸುವ ಪ್ರಯತ್ನವೆಂದು ಮೋದಿ ವಾಗ್ದಾಳಿ
ಮೂರು ವರ್ಷಗಳ ಅವಧಿಯಲ್ಲಿ ಚೀನಾದೊಂದಿಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ನ್ಯೂಸ್ ಪೋರ್ಟಲ್ 38.05 ಕೋಟಿ ರೂ.ಗಳನ್ನು ಪಡೆದಿದೆ ಎಂದು ಇಡಿ ಈ ಹಿಂದೆ ಆರೋಪಿಸಿತ್ತು. ಹೀಗೆ ಸ್ವೀಕರಿಸಿದ ಹಣವನ್ನು ಗೌತಮ್ ನವ್ಲಾಖಾ ಮತ್ತು ಹಕ್ಕುಗಳ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರ ಸಹಚರರು ಸೇರಿದಂತೆ ಹಲವಾರು ವಿವಾದಾತ್ಮಕ ಪತ್ರಕರ್ತರಿಗೆ ಹಂಚಲಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಭಯೋತ್ಪಾದಕರಿಗೆ ಕಾಂಗ್ರೆಸ್ ಮುಕ್ತ ಅವಕಾಶ ಕೊಟ್ಟಿದೆ; ಉದಯಪುರ ಟೈಲರ್ ಹತ್ಯೆ ಖಂಡಿಸಿದ ಮೋದಿ
ಬೀಜಿಂಗ್: ಚೀನಾದ (China) ವಿದೇಶಾಂಗ ಸಚಿವ (Foreign Minister) ಕ್ವಿನ್ ಗ್ಯಾಂಗ್ (Quin Gang) ಕಳೆದ ಮೂರು ವಾರಗಳಿಂದ ಎಲ್ಲಿಯೂ ಕಾಣಿಸಿಕೊಳ್ಳದ ಹಿನ್ನೆಲೆ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತವೆ.
ಕ್ವಿನ್ ಗ್ಯಾಂಗ್ ಸತತ ಮೂರು ವಾರಗಳಿಂದ ಎಲ್ಲಿಯೂ ಕಾಣಿಸಿಕೊಳ್ಳದ ಹಿನ್ನೆಲೆ ಅವರ ಸ್ಥಾನವನ್ನು ದೇಶದ ಉನ್ನತ ರಾಜತಾಂತ್ರಿಕ ಮತ್ತು ಮುಖ್ಯಸ್ಥರಾಗಿರುವ ವಾಂಗ್ ಯೀ (Wang Yi) ಅವರು ತೆಗೆದುಕೊಂಡಿದ್ದಾರೆ. ಅಲ್ಲದೇ ಕ್ವಿನ್ ಅವರ ಅನುಪಸ್ಥಿತಿಯಲ್ಲಿ ಚೀನಾದ ಅಂತರಾಷ್ಟ್ರೀಯ ಸಂಬಂಧಗಳನ್ನು ಮುನ್ನಡೆಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಸಂಬಂಧಿಸಿದ 105 ಪ್ರಾಚೀನ ವಸ್ತುಗಳನ್ನು ವಾಪಸ್ ನೀಡಿದ ಅಮೆರಿಕ
ಕ್ವಿನ್ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಅವರು ಕಣ್ಮರೆಯಾಗಿದ್ದಾರೆ ಎಂದು ಚೀನಾ ಅಧಿಕೃತವಾಗಿ ಹೇಳಿದೆ. ಆದರೆ ಅವರು ಚಿಕಿತ್ಸೆ ಪಡೆಯುತ್ತಿರುವ ಅಥವಾ ಆಸ್ಪತ್ರೆಯಲ್ಲಿರುವ ಯಾವುದೇ ಫೋಟೋಗಳು ಹೊರಬಾರದ ಕಾರಣ ನಾಪತ್ತೆಯಾಗಿದ್ದರೆ ಎಂಬ ವದಂತಿಗಳು ಎಲ್ಲೆಡೆ ಕೇಳಿಬರುತ್ತಿವೆ. ಇದನ್ನೂ ಓದಿ: ಪುಟಿನ್ ಕನಸಿನ ಯುರೋಪಿನ ಉದ್ದದ ಸೇತುವೆಗೆ ಮತ್ತೆ ಹಾನಿ; ರಷ್ಯಾ-ಕ್ರಿಮಿಯಾ ಸಂಪರ್ಕ ಕಡಿತ
ವದಂತಿಗಳ ಪ್ರಕಾರ ಕ್ವಿನ್ ಅವರು ಹಾಂಗ್ಕಾಂಗ್ ಮೂಲದ ಫೀನಿಕ್ಸ್ ಟವಿಯೊಂದಿಗೆ ಸಂಯೋಜಿತವಾಗಿರುವ ಫೂ ಕ್ಸಿಯಾಟಿನ್ ಎಂಬ ಟವಿ ಶೋ ಹೋಸ್ಟ್ನೊಂದಿಗೆ ಸಂಬಂಧ ಹೊಂದಿದ್ದರು. ಅಲ್ಲದೇ ಅವರು ಮದುವೆಗು ಮುನ್ನವೇ ಫೂ ಕ್ಸಿಯಾಟಿನ್ ಅವರೊಂದಿಗೆ ಮಗುವನ್ನು ಹೊಂದಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಅಮೆಜಾನ್ ಕಾಡಲ್ಲಿ 40 ದಿನಗಳ ಬಳಿಕ ಪತ್ತೆಯಾಗಿ ಆಸ್ಪತ್ರೆ ಸೇರಿದ್ದ ಮಕ್ಕಳು ಡಿಸ್ಚಾರ್ಜ್
ಚೀನಾ ಅಧ್ಯಕ್ಷ ಕ್ಸಿ ಅವರ ವಿಶ್ವಾಸಾರ್ಹ ಮಿತ್ರ ಮತ್ತು ಸಂವಾದಕರಾಗಿದ್ದ ಕ್ವಿನ್ (57) ಅವರನ್ನು ಕಳೆದ ವರ್ಷ ಡಿಸೆಂಬರ್ನಲ್ಲಿ ವಿದೇಶಾಂಗ ಸಚಿವರನ್ನಾಗಿ ನೇಮಿಸಿದ್ದರು. ಅವರು ದೇಶದ ಅತ್ಯಂತ ಕಿರಿಯ ಅಧಿಕಾರಿಗಳಲ್ಲಿ ಒಬ್ಬರು. ಇದನ್ನೂ ಓದಿ: ನೇಪಾಳದ ಆಸ್ಪತ್ರೆ-ಶಾಲೆಗಳಿಗೆ ಅಂಬುಲೆನ್ಸ್, ಶಾಲಾ ವಾಹನ ಗಿಫ್ಟ್ ಕೊಟ್ಟ ಭಾರತ
ಒಂದು ವೇಳೆ ಅವರು ಅನಾರೋಗ್ಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವುದೇ ಆದರೇ ಮತ್ತೆ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆಯೇ ಅಥವಾ ವದಂತಿಗಳ ಊಹಾಪೋಹಗಳು ನಿಜವಾಗುತ್ತಾ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: ರೂಪಾಯಿ, ದಿರ್ಹಾಮ್ ವ್ಯವಹಾರಕ್ಕೆ ಭಾರತ, ಯುಎಇ ಒಪ್ಪಿಗೆ
ಬಾಲಿವುಡ್ (Bollywood) ಬ್ಯಾಡ್ ಬಾಯ್ ಸಲ್ಮಾನ್ ಖಾನ್ (Salman Khan) ಮದುವೆ ಮೇಲೆಯೇ ಎಲ್ಲರದ್ದೂ ಕಣ್ಣು. ವಯಸ್ಸು ಐವತ್ತಾದರೂ ಇನ್ನೂ ಮದುವೆ (Marriage) ಬಗ್ಗೆ ಪ್ರಶ್ನೆ ಮಾಡುವುದನ್ನು ಮತ್ತು ಪ್ರಪೋಸ್ ಮಾಡುವುದನ್ನು ಬಿಟ್ಟಿಲ್ಲ. ಸಲ್ಲು ಎದುರಾದಾಗೊಮ್ಮೆ ಮದುವೆ ವಿಚಾರ ಪ್ರಸ್ತಾಪವಾಗುತ್ತದೆ. ಯಾರು ಅತೀ ಹೆಚ್ಚು ಬಾರಿ ಸಲ್ಲುವನ್ನು ‘ಮದುವೆ ಯಾವಾಗ?’ ಎಂದು ಕೇಳುತ್ತಿದ್ದರೋ, ಅವರೇ ಇಂದು ಮದುವೆ ಆಗುತ್ತೀಯಾ? ಎಂದು ಕೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಇತ್ತೀಚೆಗಷ್ಟೇ ಸಿನಿಮಾವೊಂದರ ಪ್ರಚಾರದಲ್ಲಿ ಭಾಗಿಯಾಗಿದ್ದ ಸಲ್ಮಾನ್ ಖಾನ್ ಅವರನ್ನು ಹಾಲಿವುಡ್ ಪತ್ರಕರ್ತೆಯೊಬ್ಬರು (Journalist) ನೇರವಾಗಿ ಮದುವೆ ವಿಷಯ ಪ್ರಸ್ತಾಪ ಮಾಡಿದ್ದಾರೆ. ‘ನಾನು ಹಾಲಿವುಡ್ (Hollywood) ನಿಂದ ಬಂದಿದ್ದೇನೆ. ನಿಮ್ಮನ್ನು ನೋಡಿದ ತಕ್ಷಣ ಫಿದಾ ಆದೆ. ನನ್ನನ್ನು ಮದುವೆ ಆಗುತ್ತೀರಾ? ಎಂದು ಕೇಳಿದ್ದಾರೆ. ಇದನ್ನೂ ಓದಿ:ಮಗಳ ವಯಸ್ಸಿನ ಫಾತಿಮಾ ಜೊತೆ ಮತ್ತೆ ಮದುವೆಗೆ ಸಜ್ಜಾದ ಆಮೀರ್ ಖಾನ್
ಪತ್ರಕರ್ತೆಯ ಮಾತಿಗೆ ನಗುತ್ತಲೇ ಉತ್ತರಿಸಿರುವ ಸಲ್ಮಾನ್ ಖಾನ್, ‘ನೀವು ಶಾರುಖ್ ಖಾನ್ (Shahrukh Khan) ಬಗ್ಗೆ ಹೇಳ್ತಾ ಇದ್ದೀರಿ. ಕನ್ಫ್ಯೂಸ್ ಮಾಡಿಕೊಂಡಿದ್ದೀರಿ’ ಎಂದು ಉತ್ತರಿಸುತ್ತಾರೆ. ‘ಇಲ್ಲ ನಾನು ನಿಮ್ಮನ್ನೇ ಕೇಳ್ತಾ ಇರೋದು. ಸಖತ್ ಹ್ಯಾಂಡ್ ಸಮ್ ಆಗಿದ್ದೀರಿ. ನೀವು ಒಪ್ಪಿದರೆ ನಾನು ಮದುವೆ ಆಗಲು ತಯಾರು’ ಎಂದು ಮತ್ತೆ ಪತ್ರಕರ್ತೆ ಮರು ಪ್ರಶ್ನೆ ಮಾಡುತ್ತಾರೆ.
ಪತ್ರಕರ್ತೆಯ ಮಾತಿಗೆ ಮತ್ತೆ ಉತ್ತರಿಸುವ ಸಲ್ಮಾನ್, ‘ನೀವು ಇಪ್ಪತ್ತು ವರ್ಷಗಳ ಹಿಂದೆ ಬಂದು ಕೇಳಿದ್ದರೆ ಒಪ್ಪಬಹುದಿತ್ತು. ನನಗೀಗ ಮದುವೆ ಕಾಲ ಮುಗಿದಿದೆ. ತಡವಾಗಿದೆ’ ಎಂದು ಮತ್ತೆ ತಮಾಷೆ ಮಾಡುತ್ತಲೇ ಉತ್ತರಿಸುತ್ತಾರೆ. ಒಂದು ರೀತಿಯಲ್ಲಿ ಇಬ್ಬರ ಮಾತು ಪ್ರತಿಮಾತುಗಳು ಸಖತ್ ತಮಾಷೆಯನ್ನು ನೀಡಿವೆ.