Tag: jp park

  • ಕರಿಟೋಪಿ ಮಾತಿನ ಕಲಹ – ಮುನಿರತ್ನ ಬೆಂಬಲಕ್ಕೆ ನಿಂತ ಬಿಜೆಪಿ ನಾಯಕರು, ಡಿಕೆಶಿ ವಿರುದ್ಧ ಕಿಡಿ

    ಕರಿಟೋಪಿ ಮಾತಿನ ಕಲಹ – ಮುನಿರತ್ನ ಬೆಂಬಲಕ್ಕೆ ನಿಂತ ಬಿಜೆಪಿ ನಾಯಕರು, ಡಿಕೆಶಿ ವಿರುದ್ಧ ಕಿಡಿ

    ಬೆಂಗಳೂರು: ಡಿಕೆಶಿ- ಮುನಿರತ್ನ ನಡುವೆ ಮುಗಿಯದ ರಾಜಕೀಯ ಕದನ. ಜೆ.ಪಿ.ಪಾರ್ಕ್‌ನಲ್ಲಿ (JP Park) ನಡೆದ ಕರಿಟೋಪಿ ಕಲಹಕ್ಕೆ ಬಿಜೆಪಿ ನಾಯಕರು ಕೆಂಡಕಾರಿದ್ದಾರೆ. ಡಿಕೆಶಿ ವಿರುದ್ಧ ಮುನಿರತ್ನ (Munirathna) ಆಕ್ರೋಶ ಹೊರಹಾಕಿದ್ರೆ, ಗಲಾಟೆ ಮಾಡಲು ಬಂದಿದ್ದಾರೆ ಎಂದು ಡಿಕೆಶಿ (DK Shivakumar) ಟಾಂಗ್ ಕೊಟ್ಟಿದ್ದಾರೆ.

    ಜೆ.ಪಿ.ಪಾರ್ಕ್‌ನಲ್ಲಿ ನಡೆದ ಕರಿಟೋಪಿ ಕಲಹ ಘಟನೆಗೆ ಡಿಕೆಶಿ ಟಕ್ಕರ್ ಕೊಟ್ಟಿದ್ದಾರೆ. ವೇದಿಕೆಯಲ್ಲಿ ಡಿಕೆಶಿ ಕೈಯಿಂದಲೇ ಮೈಕ್ ಕಿತ್ತುಕೊಂಡು ಆಕ್ರೋಶ ಹೊರಹಾಕಿದ ಮುನಿರತ್ನ ವಿರುದ್ಧ ಡಿಕೆಶಿ ಮಾತನಾಡಿದ್ದಾರೆ. ಸ್ಥಳೀಯ ಎಂಎಲ್‌ಎಗೆ ತಾಳ್ಮೆ ಕಡಿಮೆ. ಈ ಕಾರ್ಯಕ್ರಮ ಹಾಳು ಮಾಡೋಕೆ ಬಂದಿದ್ದಾರೆ. ಇಂಥವರನ್ನ ಗೆಲ್ಲಿಸಿದ್ದೀರಲ್ಲ ನಿಮ್ಮ ತಪ್ಪು. ಮುಂದೆ ಹೀಗೆ ಮಾಡಬೇಡಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಸರ್ಕಾರಿ ಸ್ಥಳಗಳು, ಮುಜರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ ಎಲ್ಲಾ ಚಟುವಟಿಕೆ ಬ್ಯಾನ್‌?

    ಇದೇ ವೇಳೆ ರಾಜರಾಜೇಶ್ವರಿನಗರದ ಪರಾಜಿತ ಅಭ್ಯರ್ಥಿ ಕುಸುಮಾ ಮಾತನಾಡಿ, ಕಾರ್ಯಕ್ರಮಕ್ಕೆ ಶಾಸಕರು ಗಲಾಟೆ ಮಾಡಲೆಂದೇ ಬಂದಿದ್ದಾರೆ. ಗಲಾಟೆ ಅನ್ನೋದು ಶಾಸಕರಿಗೆ ಅಭ್ಯಾಸ ಆಗಿದೆ. ಅವಮಾನ ಮಾಡೋ ರೀತಿಯಲ್ಲಿ ನಡೆದುಕೊಂಡಿದ್ದಾರೆ ಎಂದು ಕಿಡಿಕಾರಿದರು. ರಾಯಚೂರಿನಲ್ಲಿ ಮಾತನಾಡಿದ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಡಿಕೆಶಿ ಪರ ಬ್ಯಾಟಿಂಗ್ ನಡೆಸಿದ್ದು, ಕರಿಟೋಪಿ ಎಂದು ಕರೆದಿರೋದು ಸಲಿಗೆ ಅಂತಾ ಟಾಂಗ್ ಕೊಟ್ಟರು. ಇದನ್ನೂ ಓದಿ: ಶಾಸಕರಿಗೆ ತಾಳ್ಮೆ ಇಲ್ಲ, ಕಾರ್ಯಕ್ರಮ ಹಾಳು ಮಾಡಲು ಬಂದಿದ್ದಾರೆ: ಮುನಿರತ್ನ ವಿರುದ್ಧ ಡಿಕೆಶಿ ಕಿಡಿ

    ಇದೆಲ್ಲದರ ನಡುವೆ ಡಿಕೆಶಿ ವಿರುದ್ಧ ಆಕ್ರೋಶ ಹೊರಹಾಕಿ, ನನ್ನ ಕರಿ ಟೋಪಿಯನ್ನ ಕಿತ್ತುಕೊಂಡಿದ್ದಾರೆ, ಹಲ್ಲೆ ಮಾಡಿದ್ದಾರೆ. ಚನ್ನಪಟ್ಟಣ, ಕನಕಪುರದಿಂದ ರೌಡಿಶೀಟರ್‌ಗಳನ್ನು ಕರೆಸಿದ್ದಾರೆ ಎಂದು ಮುನಿರತ್ನ ಗಂಭೀರವಾಗಿ ಆರೋಪಿಸಿದರು. ಇದು ಕಾಂಗ್ರೆಸ್ ಫಂಕ್ಷನ್. ಏಯ್ ಟೋಪಿ ಬಾರೋ ಇಲ್ಲಿ ಅಂತಾ ಅವಮಾನ ಮಾಡಿದ್ದಾರೆ. ನಾನು ಇವತ್ತು ಬದುಕಿದ್ದೀನಿ ಅಂದ್ರೆ ಪೊಲೀಸರೇ ಕಾರಣ ಎಂದರು. ಡಿಕೆಶಿ ಹೊರಡುವ ತನಕ ಜೆ.ಪಿ.ಪಾರ್ಕ್‌ನಲ್ಲೇ ಇದ್ದ ಮುನಿರತ್ನ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ರೌಡಿಗಳನ್ನು ಕರೆಸಿ ಹಲ್ಲೆ, ಪೊಲೀಸರಿಂದ ನಾನು ಬದುಕಿದ್ದೇನೆ: ಡಿಕೆಶಿ ವಿರುದ್ಧ ಮುನಿರತ್ನ ಆಕ್ರೋಶ

    ದೇ ವೇಳೆ ಮುನಿರತ್ನ ಬೆಂಬಲಕ್ಕೆ ಬಿಜೆಪಿ ನಾಯಕರು ನಿಂತಿದ್ದು, ಕರಿಟೋಪಿ ಕೂಗಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಡಿಸಿಎಂ ಅಶ್ವತ್ಥನಾರಾಯಣ್ ಡಿಕೆಶಿ ವಿರುದ್ಧ ಕಿಡಿಕಾರಿದ್ದಾರೆ. ಮುಸ್ಲಿಂ ಟೋಪಿಗೆ ಜಾಲರಿ ಟೋಪಿ ಅಂತಾ ಕರೀರಿ ಅಂತಾ ಜೋಷಿ ಟಕ್ಕರ್ ಕೊಟ್ರೆ, ಡಿಕೆಶಿಗೆ ಮದ ಅಂತಾ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಡಿಕೆಶಿ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ – ಆಹ್ವಾನ ನೀಡದ್ದಕ್ಕೆ ಮುನಿರತ್ನ ಆಕ್ರೋಶ

    ಒಟ್ನಲ್ಲಿ ರಾಜರಾಜೇಶ್ವರಿನಗರ ಕ್ಷೇತ್ರದ ಪೊಲಿಟಿಕಲ್ ವಾರ್‌ಗೆ ಸಾರ್ವಜನಿಕ ಸಭೆ ವೇದಿಕೆಯಾಗಿದ್ದು, ವಿಪರ್ಯಾಸವೇ ಆಗಿದ್ದು, ಕರೆದು ಕೆಣಕಿದ್ರಾ ಡಿಕೆಶಿ? ಆರ್‌ಆರ್‌ನಗರ ವಾರ್ ಎಲೆಕ್ಷನ್‌ಗಷ್ಟೇ ಸೀಮಿತವಾಗದೇ ಆಗಾಗ್ಗೆ ಬೆಂಕಿ ಹೊತ್ತಿಕೊಳ್ಳುವ ರಾಜಕಾರಣ ಏಕೆ ಎಂಬುದಕ್ಕೆ ಕಾಲವೇ ಉತ್ತರ ನೀಡಬೇಕಿದೆ. ಇದನ್ನೂ ಓದಿ: ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್‌ ಬಂದ್ರೆ 100% ಆರ್‌ಎಸ್‌ಎಸ್‌ ಬ್ಯಾನ್‌: ಎಂ. ಲಕ್ಷ್ಮಣ್‌

  • ರೌಡಿಗಳನ್ನು ಕರೆಸಿ ಹಲ್ಲೆ, ಪೊಲೀಸರಿಂದ ನಾನು ಬದುಕಿದ್ದೇನೆ: ಡಿಕೆಶಿ ವಿರುದ್ಧ ಮುನಿರತ್ನ ಆಕ್ರೋಶ

    ರೌಡಿಗಳನ್ನು ಕರೆಸಿ ಹಲ್ಲೆ, ಪೊಲೀಸರಿಂದ ನಾನು ಬದುಕಿದ್ದೇನೆ: ಡಿಕೆಶಿ ವಿರುದ್ಧ ಮುನಿರತ್ನ ಆಕ್ರೋಶ

    ಬೆಂಗಳೂರು: ಚನ್ನಪಟ್ಟಣ ಕನಕಪುರದಿಂದ ರೌಡಿಗಳನ್ನು ಕರೆಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ನಾನು ಇವತ್ತು ಬದುಕಿದ್ದೇನೆ ಅಂದರೆ ಪೊಲೀಸರೇ ಕಾರಣ ಎಂದು ಹೇಳಿ ಡಿಸಿಎಂ ಡಿಕೆಶಿವಕುಮಾರ್‌ (DK Shivakumar) ವಿರುದ್ಧ ಆರ್‌ಆರ್‌ ನಗರದ ಬಿಜೆಪಿ ಶಾಸಕ ಮುನಿರತ್ನ (Munirathna) ಆಕ್ರೋಶ ಹೊರಹಾಕಿದ್ದಾರೆ.

    ಮತ್ತಿಕೆರೆ ಜೆಪಿ ಪಾರ್ಕ್‌ನಲ್ಲಿ (JP Park) ಡಿಕೆಶಿ ಭಾಗವಹಿಸಿದ್ದ ಬೆಂಗಳೂರು ನಡಿಗೆ ಕಾರ್ಯಕ್ರಮದಿಂದ ಹೊರಬಂದು ಮಾತನಾಡಿದ ಅವರು, ರೌಡಿಶೀಟರ್‌ಗಳನ್ನು ಕಾರ್ಯಕ್ರಮಕ್ಕೆ ಕರೆಸಿಕೊಂಡಿದ್ದಾರೆ. ಅವರ ತಮ್ಮ ಸೋತಾಗಿನಿಂದ ನಾನು ಟಾರ್ಗೆಟ್‌ ಆಗಿದ್ದೇನೆ. ರೌಡಿಶೀಟರ್‌ಗಳನ್ನು ಕರೆಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಿದರು.

    ನನಗೆ ಆಹ್ವಾನ ಬಂದಿಲ್ಲ ಎಂದು ಮೂರು ದಿನ ಹಿಂದೆ ನಾನು ಸುದ್ದಿಗೋಷ್ಠಿ ಮಾಡಿ ಹೇಳಿದ್ದೇನೆ. ಸುದ್ದಿಗೋಷ್ಠಿ ಬಳಿಕವಾದರೂ ಸಂಸದರಿಗೆ, ಶಾಸಕರಿಗೆ ಆಹ್ವಾನ ಮಾಡಬೇಕಿತ್ತು. ಆಹ್ವಾನ ನೀಡದ್ದಕ್ಕೆ ನಾನು ಪ್ರಶ್ನೆ ಮಾಡಿದ್ದೇನೆ. ಸರ್ಕಾರಿ ಕಾರ್ಯಕ್ರಮ ಆಗಿರುವ ಕಾರಣ ಶಿಷ್ಟಾಚಾರದ ಪ್ರಕಾರ ಸ್ಥಳೀಯ ಶಾಸಕ, ಸಂಸದರ ಫೋಟೋ ಹಾಕಬೇಕು. ಆದರೆ ಎಲ್ಲಿಯೂ ಫೋಟೋ ಹಾಕಿಲ್ಲ. ಇದು ಕಾಂಗ್ರೆಸ್‌ ಕಾರ್ಯಕ್ರಮವೇ ಅಥವಾ ಸರ್ಕಾರಿ ಕಾರ್ಯಕ್ರಮವೇ? ಇದನ್ನು ಪ್ರಶ್ನೆ ಮಾಡಿದರೆ ನನ್ನ ಮೇಲೆ ಹಲ್ಲೆ ಮಾಡುತ್ತಾರೆ ಎಂದರು. ಇದನ್ನೂ ಓದಿ:  ಡಿಕೆಶಿ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮಾ – ಆಹ್ವಾನ ನೀಡದ್ದಕ್ಕೆ ಮುನಿರತ್ನ ಆಕ್ರೋಶ

    ನನ್ನ ಮೇಲೆ ಮತ್ತಷ್ಟು ಕೇಸ್ ಹಾಕಲಿಕ್ಕೆ ತಯಾರಿ ಮಾಡುತ್ತಿದ್ದಾರೆ. ರೇಪ್ ಕೇಸ್ ಆಯ್ತು ದಲಿತನಿಂದನೆ ಆಯ್ತು ಈಗ ಪೋಕ್ಸೋ ಕೇಸ್‌ ಹಾಕಲಿಕ್ಕೆ ರೆಡಿ ಮಾಡುತ್ತಿದ್ದಾರೆ. ನನ್ನ ರಾಜೀನಾಮೆ ಕೊಡಿಸುವುದು ಅವರ ಉದ್ದೇಶ. ಬೆಳಗ್ಗೆಯಿಂದ ಅವರ ಪಕ್ಕ ಇರುವವರನ್ನು ಶಾಸಕರನ್ನಾಗಿ ಮಾಡಲು ಅವರು ಬಹಳ ಪ್ರಯತ್ನ ನಡೆಸುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೆ ರಾಜೀನಾಮೆ ನೀಡುವುದಿಲ್ಲ. ನಾನು ಸತ್ತರೂ ಇಲ್ಲೇ ಸಾಯುತ್ತೇನೆ. ರಾಜೀನಾಮೆ ನೀಡುವ ಮಾತೇ ಇಲ್ಲ ಎಂದು ಸಿಟ್ಟು ಹೊರಹಾಕಿದರು.

     

    ಇವತ್ತು ಆರ್‌ಎಸ್‌ಎಸ್‌ (RSS) ಸ್ಥಾಪನೆಯಾಗಿ ನೂರು ವರ್ಷ ಆಗಿದ್ದಕ್ಕೆ ನಾನು ಪಥಸಂಚಲನದಲ್ಲಿ ಭಾಗಿಯಾಗಿ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದೆ. ಈ ಕ್ಷೇತ್ರದ ಪ್ರಜೆಯಾಗಿ ಜನರ ಮಧ್ಯೆ ಕುಳಿತಿದ್ದರೆ, ಏಯ್‌ ಕರಿ ಟೋಪಿ ಎಂಎಲ್‌ಎ ಇಲ್ಲಿ ಬಾರಪ್ಪ ಎಂದು ಕರೆದು ಆರ್‌ಎಸ್‌ಎಸ್‌ ಬಟ್ಟೆಗೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ಹಾಕಿದರು.

    ಇತಂಹ ರಾಜಕೀಯ ವ್ಯಕ್ತಿ ಮತ್ತೆ ಬರುವುದು ಬೇಡ ಎಂದು ದೇವರಲ್ಲಿ ಬೇಡಕೋಬೇಕು. ಎಷ್ಟೋ ಜನರ ಮನೆಗಳನ್ನು ಇವರು ಹಾಳು ಮಾಡಿದ್ದಾರೆ ಎಂದು ಡಿಕೆಶಿ ವಿರುದ್ಧ ಆರೋಪ ಮಾಡಿದರು.

    ಮಾಧ್ಯಮಗಳ ಜೊತೆ ಮಾತನಾಡಿದ ಬಳಿಕ ಮುನಿರತ್ನ ಅವರು ಜೆಪಿ ಪಾರ್ಕ್ ಮುಂದೆ ಧರಣಿ ಕುಳಿತು ಪ್ರತಿಭಟನೆ ನಡೆಸಿದರು.

  • ಬೆಂಗಳೂರಿನ ಜೆಪಿ ಪಾರ್ಕ್‍ನಲ್ಲಿ ಮಹಾಶಿವರಾತ್ರಿ ಸಂಭ್ರಮ

    ಬೆಂಗಳೂರಿನ ಜೆಪಿ ಪಾರ್ಕ್‍ನಲ್ಲಿ ಮಹಾಶಿವರಾತ್ರಿ ಸಂಭ್ರಮ

    ಬೆಂಗಳೂರು: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಜೆಪಿ ಪಾರ್ಕ್‍ನಲ್ಲಿ (Mahashivratri Celebration In JP Park Bengaluru) ಪ್ರತಿವರ್ಷದಂತೆ ಈ ವರ್ಷವೂ ಅದ್ಧೂರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

    ಸ್ಟಾರ್ ನಟರು, ಕಾಮಿಡಿ ಕಿಲಾಡಿಯ ಕಲಾವಿದರು, ಗಾಯಕರು, ನೃತ್ಯಗಾರರಿಂದ ಇಡೀ ರಾತ್ರಿ ಕಾರ್ಯಕ್ರಮ ನಡೆಯುತ್ತಿದೆ. ರ್ಯಾಪರ್ ಚಂದನ್ ಶೆಟ್ಟಿ ಗಾಯನ ನೆರೆದಿದ್ದವರನ್ನ ಹುಚ್ಚೆದ್ದು ಕುಣಿಯುವಂತೆ ಮಾಡಿತು. ಅದ್ಧೂರಿ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಡಾ. ಮಂಜುನಾಥ್, ಶಾಸಕ ಮುನಿರತ್ನ, ಆರ್.ಅಶೋಕ್, ಅಶ್ವಥ್ ನಾರಾಯಣ್ ಹಾಗೂ ನಟ ದರ್ಶನ್ ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾದ್ರು.

    ಇತ್ತ ಬೆಂಗಳೂರಿನ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜಾ ಸಲ್ಲಿಸಲಾಗ್ತಿದೆ. ಮಲ್ಲೇಶ್ವರದ ಕಾಡುಮಲ್ಲೆಶ್ವರ ದೇವಾಲಯದಲ್ಲಿ ಶಿವರಾತ್ರಿ ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾದ್ರು. ಇನ್ನು, ನಗರದ ಹಲವೆಡೆ ಶಿವರಾತ್ರಿ ಪ್ರಯುಕ್ತ ಹಲವು ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ. ಇದನ್ನೂ ಓದಿ: ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆ ನೆರವೇರಿಸಿದ ಹಿಂದೂಗಳು

    i