Tag: Juice shop

  • ಲೈಟರ್ ವಿಚಾರಕ್ಕೆ ಪುಂಡರ ಜಗಳ – ಮಹಿಳೆ ಜುಟ್ಟು ಎಳೆದಾಡಿ, ಪತಿ ವಿವಸ್ತ್ರಗೊಳಿಸಿ ಮಾರಣಾಂತಿಕ ಹಲ್ಲೆ

    ಲೈಟರ್ ವಿಚಾರಕ್ಕೆ ಪುಂಡರ ಜಗಳ – ಮಹಿಳೆ ಜುಟ್ಟು ಎಳೆದಾಡಿ, ಪತಿ ವಿವಸ್ತ್ರಗೊಳಿಸಿ ಮಾರಣಾಂತಿಕ ಹಲ್ಲೆ

    ಮೈಸೂರು: ಲೈಟರ್ ವಿಚಾರಕ್ಕೆ ಜಗಳ ಆಡಿದ ಕಿಡಿಗೇಡಿಗಳು ಮಹಿಳೆಯ ಕೂದಲು ಎಳೆದಾಡಿ, ಆಕೆಯ ಪತಿಯನ್ನು ವಿವಸ್ತ್ರಗೊಳಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರದ ತಿಬ್ಬಾದೇವಿ ಕಾಫಿ ಡೇ ಶಾಪ್‍ನಲ್ಲಿ ನಡೆದಿದೆ.

    ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಮೇಶ್ ಮತ್ತು ಶೋಭಾ ಹಲ್ಲೆಗೊಳಗಾದ ದಂಪತಿಯಾಗಿದ್ದು, ಈ ದಂಪತಿ ಟಿ.ನರಸೀಪುರದಲ್ಲಿ ಟೀ ಹಾಗೂ ಜ್ಯೂಸ್ ಅಂಗಡಿ ನಡೆಸುತ್ತಿದ್ದಾರೆ. ಮೊನ್ನೆ ರಾತ್ರಿ ಲೈಟರ್ ತೆಗೆದುಕೊಳ್ಳಲು ಬಂದ ಇಬ್ಬರು ಯುವಕರು ಲೈಟರ್‌ಗೆ 20 ರೂಪಾಯಿ ಕೊಡಲು ಹಿಂದೇಟು ಹಾಕಿ, ನಿಮ್ಮ ಅಂಗಡಿಯಲ್ಲಿ ಲೈಟರ್ ರೇಟ್ ಜಾಸ್ತಿ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಇದನ್ನೂ ಓದಿ: ಮೇಕೆದಾಟು ಯೋಜನೆ ವಿರೋಧಿಸಿ ಪ್ರಧಾನಿಗೆ ಸ್ಟಾಲಿನ್ ಪತ್ರ

    ನಂತರ ಕೋಪಗೊಂಡ ರಮೇಶ್ ಏರು ಧ್ವನಿಯಲ್ಲೇ ಬೇಕಾದರೆ ತೆಗೆದುಕೊಳ್ಳಿ ಇಲ್ಲವಾದರೆ ಬೇರೆ ಅಂಗಡಿಗೆ ಹೋಗಿ ಎಂದಿದ್ದಾರೆ. ಇದರಿಂದ ರೊಚ್ಚಿಗೆದ್ದ ಯುವಕರು ರಮೇಶ್ ಪತ್ನಿ ಶೋಭಾ ಕೂದಲು ಎಳೆದು ಗಲಾಟೆ ಮಾಡಿದ್ದಾರೆ. ಆಗ ಶೋಭಾ ಏಕಾಂಗಿಯಾಗಿ ಯುವಕರನ್ನು ಹೊಡೆದು ಓಡಿಸಿದ್ದಾರೆ. ಇದನ್ನೂ ಓದಿ:  ಬೆಡ್‌ಶೀಟ್‌ನಲ್ಲಿ ಆನೆ ದಂತ ಸಾಗಾಟ, ಮೂವರು ಅರೆಸ್ಟ್‌, ಓರ್ವ ಪರಾರಿ

    POLICE JEEP

    ಬೆಳಗ್ಗೆ ಮತ್ತೆ ಸ್ನೇಹಿತರೊಟ್ಟಿಗೆ ಬಂದ ಇಬ್ಬರು ಯುವಕರು. ಕಬ್ಬಿಣದ ರಾಡ್ ಹಿಡಿದು ಬಂದು ಹಲ್ಲೆ ಮಾಡಿ ಅಂಗಡಿಯಲ್ಲಿದ್ದ ಸಾಮಾನುಗಳನ್ನು ಒಡೆದು ಹಾಕಿದ್ದಾರೆ. ಏಕಾಏಕಿ ರಮೇಶ್ ಅವರನ್ನು ಅಂಗಡಿಯಿಂದ ಎತ್ತಿಕೊಂಡು ಹೋಗಿ ವಿವಸ್ತ್ರಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಇದೀಗ ಯುವಕರ ಗುಂಪಿನ ವಿರುದ್ಧ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

  • ರಾಜ್ಯದಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲ- ನಗರ ಪ್ರದೇಶದಲ್ಲಿಯೂ ಕಟ್ಟಡ ನಿರ್ಮಾಣಕ್ಕೆ ಅನುಮತಿ

    ರಾಜ್ಯದಲ್ಲಿ ಲಾಕ್‍ಡೌನ್ ಮತ್ತಷ್ಟು ಸಡಿಲ- ನಗರ ಪ್ರದೇಶದಲ್ಲಿಯೂ ಕಟ್ಟಡ ನಿರ್ಮಾಣಕ್ಕೆ ಅನುಮತಿ

    – ಐಸ್‍ಕ್ರೀಂ, ಜ್ಯೂಸ್, ಪುಸ್ತಕ ಮಾರಾಟಕ್ಕೆ ಗ್ರೀನ್ ಸಿಗ್ನಲ್

    ಬೆಂಗಳೂರು: ಕೇಂದ್ರ ಸರ್ಕಾರದ ಬುಧವಾರ ನೀಡಿದ್ದ ಮಾರ್ಗಸೂಚಿಗಳ ಅನ್ವಯ ಒಂದಿಷ್ಟು ಕೊರೊನಾ ಲಾಕ್‍ಡೌನ್ ನಿಯಮಗಳನ್ನು ಸಡಿಲ ಮಾಡಿದ್ದ ರಾಜ್ಯ ಸರ್ಕಾರ, ಇವತ್ತು ಇನ್ನೊಂದಿಷ್ಟು ವಿನಾಯಿತಿ ನೀಡಿ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ.

    ಬೆಂಗಳೂರು ಸೇರಿದಂತೆ ನಗರ ಹಲವು ನಗರಗಳಲ್ಲಿ ಕೊರೊನಾ ಸೋಂಕಿನ ತೀವ್ರತೆ ಕಡಿಮೆ ಆಗದಿದ್ದರೂ ರಾಜ್ಯ ಸರ್ಕಾರ ರಿಸ್ಕ್ ತೆಗೆದುಕೊಂಡಂತೆ ಕಾಣುತ್ತಿದೆ. ಮೊಬೈಲ್ ಅಂಗಡಿ, ಜ್ಯೂಸ್ ಅಂಗಡಿ, ಕಟ್ಟಡ ನಿರ್ಮಾಣ ಹೀಗೆ ಹಲವುಗಳಿಗೆ ಮಹಾನಗರ, ನಗರಸಭೆಗಳ ವ್ಯಾಪ್ತಿಯಲ್ಲಿ ಷರತ್ತುಬದ್ಧ ಅನುಮತಿ ನೀಡಿದೆ.

    ಬೆಂಗಳೂರು ಸೇರಿದಂತೆ ಮಹಾನಗರ, ನಗರಸಭೆಗಳ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಬುಧವಾರ ಅವಕಾಶ ನೀಡಿರಲಿಲ್ಲ. ಇದಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು. ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯುಡಿಯೂರಪ್ಪ ನೇತೃತ್ವದ ಸರ್ಕಾರ ಮಣಿದಂತೆ ಕಾಣುತ್ತಿದೆ. ರಾಜ್ಯ ಸರ್ಕಾರ ಇವತ್ತು ನೀಡಿರುವ ಲಾಕ್‍ಡೌನ್ ವಿನಾಯ್ತಿಗಳನ್ನು ಘೋಷಿಸಿದೆ.

    ಲಾಕ್‍ಡೌನ್‍ನಿಂದ ಮತ್ತಷ್ಟು ವಿನಾಯ್ತಿ..!
    * ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣ
    * ಕಾರ್ಮಿಕರು ಸೈಟ್‍ನಲ್ಲಿಯೇ ಇರಬೇಕು (ಕಾರ್ಮಿಕರಿಗೆ ಅಲ್ಲಿಯೇ ಉಳಿದುಕೊಳ್ಳಲು ಅಗತ್ಯ ಸೌಲಭ್ಯ ಕಲ್ಪಿಸಬೇಕು, ಹೊರಗಿನಿಂದ ಕಾರ್ಮಿಕರನ್ನು ಕರೆಸುವಂತಿಲ್ಲ)
    * ನೀರು ಪೂರೈಕೆ ಮತ್ತು ಒಳಚರಂಡಿ ರಿಪೇರಿ
    * ಟೆಲಿಕಾಮ್, ಕೇಬಲ್ ಸಂಬಂಧಿ ಕೆಲಸಗಳು

    * ಬ್ಯಾಂಕೇತರ ಹಣಕಾಸು ಸಂಸ್ಥೆಗಳು
    * ಸಹಕಾರ ಬ್ಯಾಂಕ್/ಸೊಸೈಟಿಗಳು
    * ಸ್ಟೇಷನರಿ ಮತ್ತು ಬುಕ್ ಶಾಪ್
    * ಎಲೆಕ್ಟ್ರಿಕ್ ಅಂಗಡಿ (ಫ್ಯಾನ್ ಮಾರಲು ಅವಕಾಶ)
    * ನಗರ ಪ್ರದೇಶದಲ್ಲಿ ಆಹಾರ ಸಂಸ್ಕರಣೆ ಘಟಕ (ಬ್ರೆಡ್, ಹಾಲು, ಬೇಳೆ, ಫ್ಲೋರ್‍ಮಿಲ್)
    * ಪ್ರಿಪೇಡ್ ಮೊಬೈಲ್ ರಿಚಾರ್ಜ್‍ಗೆ ಅಂಗಡಿ
    * ಐಸ್ ಕ್ರರೀಂ, ಡ್ರೈ ಫ್ರೂಟ್ಸ್, ಜ್ಯೂಸ್ ಅಂಗಡಿ (ಪಾರ್ಸಲ್‍ಗಷ್ಟೇ ಅವಕಾಶ)
    * ಹಿರಿಯ ನಾಗರಿಕರು ಇರುವ ಮನೆಗಳಿಗೆ ಸಹಾಯಕಿಯರು