Tag: Justice Sanjiv Khanna

  • ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕಾರ

    ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕಾರ

    ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾ.ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

    ನ್ಯಾ.ಖನ್ನಾ ಅವರ ಹೆಸರನ್ನು ನ್ಯಾ.ಡಿವೈ ಚಂದ್ರಚೂಡ್ ಅವರು ಶಿಫಾರಸು ಮಾಡಿದ್ದರು. ಇವರು ಮುಂದಿನ ವರ್ಷ ಮೇ 13 ರವರೆಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ನ್ಯಾ.ಚಂದ್ರಚೂಡ್ ಅವರು ನ.10 ರಂದು ಹುದ್ದೆಯಿಂದ ನಿವೃತ್ತರಾದರು.

    ಪ್ರಮಾಣವಚನ ಸ್ವೀಕಾರದ ವೇಳೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಖರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮಾಜಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಉಪಸ್ಥಿತರಿದ್ದರು.

    ಮೇ 14, 1960 ರಲ್ಲಿ ಜನಿಸಿದ್ದ ನ್ಯಾ.ಸಂಜೀವ್ ಖನ್ನಾ ಅವರು, ದೆಹಲಿ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದ್ದರು. ಕೆಲವು ಕಾಲ ವಕೀಲರಾಗಿ, ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ (NALSA) ಕಾರ್ಯನಿರ್ವಾಹಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

    ಜನವರಿ 2019 ರಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ನೇಮಕಗೊಂಡರು. ಈ ಅವಧಿಯಲ್ಲಿ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಅವರ ಜಾಮೀನು ಅರ್ಜಿಗಳ ವಿಚಾರಣೆ ಸೇರಿದಂತೆ ಹಲವಾರು ರಾಜಕೀಯವಾಗಿ ಸೂಕ್ಷ್ಮ ಪ್ರಕರಣಗಳ ಪೀಠಗಳ ನೇತೃತ್ವ ವಹಿಸಿದ್ದರು.

    ಸಂವಿಧಾನ ಪೀಠದ ಭಾಗವಾಗಿ, ನ್ಯಾ.ಖನ್ನಾ ಅವರು ಆರ್ಟಿಕಲ್ 370ರ ರದ್ದು ಮತ್ತು ಚುನಾವಣಾ ಬಾಂಡ್‌, ಎಲೆಕ್ಟ್ರಾನಿಕ್ ಮತಯಂತ್ರಗಳು ಮತ್ತು ಮತದಾರರ ದೃಢೀಕೃತ ಪೇಪರ್ ಆಡಿಟ್ ಸಂಬಂಧಿಸಿದ ಪ್ರಕರಣಗಳ ವಿಚಾರಣೆ ನಡೆಸಿದ್ದಾರೆ.

  • ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನ್ಯಾ.ಸಂಜೀವ ಖನ್ನಾ ಪ್ರಮಾಣವಚನ

    ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನ್ಯಾ.ಸಂಜೀವ ಖನ್ನಾ ಪ್ರಮಾಣವಚನ

    ನವದೆಹಲಿ: ಸುಪ್ರೀಂಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ ಖನ್ನಾ (Justice Sanjiv Khanna) ಇಂದು (ನ.11) ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ಇಂದು ರಾಷ್ಟ್ರಪತಿ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಲಿರುವ ನ್ಯಾ.ಸಂಜೀವ ಖನ್ನಾ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಪ್ರಮಾಣ ವಚನ ಬೋಧಿಸಲಿದ್ದಾರೆ.ಇದನ್ನೂ ಓದಿ: ಚಳಿಗಾಲದಲ್ಲಿ ಅಯೋಧ್ಯೆ ರಾಮನನ್ನು ಬೆಚ್ಚಗಿಡಲು ಚಾದರ, ಪಶ್ಮಿನಾ ಶಾಲು, ಹೀಟರ್‌ ವ್ಯವಸ್ಥೆ

    ಎರಡು ವರ್ಷಗಳ ಅವಧಿಯ ಬಳಿಕ ಹಾಲಿ ಸಿಜೆಐ ಡಿವೈ ಚಂದ್ರಚೂಡ್ (DY Chandrachud) ಅವರು ಭಾನುವಾರ ತಮ್ಮ ಅಧಿಕಾರದಿಂದ ನಿವೃತ್ತಿ ಹೊಂದಿದರು. ಅವರ ಶಿಫಾರಸಿನ ಮೇರೆಗೆ ಅ.24 ರಂದು ನ್ಯಾ.ಸಂಜೀವ ಖನ್ನಾ ಅವರನ್ನು ಮುಖ್ಯ ನ್ಯಾರ್ಯಮೂರ್ತಿಯಾಗಿ ನೇಮಕ ಮಾಡುವ ಕುರಿತು ಅಧಿಕೃತವಾಗಿ ಪ್ರಕಟಿಸಲಾಗಿತ್ತು. ಸೋಮವಾರ ಅಧಿಕಾರ ಸ್ವೀಕರಿಸಲಿರುವ ನ್ಯಾ.ಖನ್ನಾ 2025ರ ಮೇ.31ರವರೆಗೆ ಅಧಿಕಾರದಲ್ಲಿರಲಿದ್ದಾರೆ.

    2019ರ ಜನವರಿಯಿಂದ ಸುಪ್ರೀಂ ಕೋರ್ಟ್‌ನ ನ್ಯಾಯಧೀಶರಾಗಿ ಸೇವೆ ಸಲ್ಲಿಸಿದ ನ್ಯಾ.ಖನ್ನಾ ಅವರು, ಸುಪ್ರೀಂ ಕೋರ್ಟ್‌ನ ಭಾಗವಾಗಿ ಹಲವಾರು ಪ್ರಮುಖ ತೀರ್ಪುಗಳನ್ನು ನೀಡಿದ್ದಾರೆ. ಚುನಾವಣಾ ಬಾಂಡ್‌ಗಳ ಯೋಜನೆ ರದ್ದು, ಭಾರತದ ಸಂವಿಧಾನದ 370ನೇ ವಿಧಿಯ ರದ್ದತಿಯನ್ನು ಎತ್ತಿಹಿಡಿದ ಸಂವಿಧಾನ ಪೀಠದ ಭಾಗವಾಗಿದ್ದರು.

    ಇನ್ನೂ ಜುಲೈನಲ್ಲಿ ಅವರ ನೇತೃತ್ವದ ಪೀಠವು ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಗಿನ ದೆಹಲಿ (Delhi) ಮುಖ್ಯಮಂತ್ರಿಯಾಗಿದ್ದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ (AAP Arvind Kejrival) ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು.ಇದನ್ನೂ ಓದಿ: ಕ್ಯೂಬಾದಲ್ಲಿ ಒಂದೇ ಗಂಟೆಯಲ್ಲಿ 2 ಪ್ರಬಲ ಭೂಕಂಪ