Tag: justice Vishwanath Shetty

  • ನಮಗೆ ಹೆಚ್ಚು ಶಕ್ತಿಕೊಡಿ ಅಂತ ಬೇಡಿಕೊಂಡು ಹೋಗಲ್ಲ- ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿ

    ನಮಗೆ ಹೆಚ್ಚು ಶಕ್ತಿಕೊಡಿ ಅಂತ ಬೇಡಿಕೊಂಡು ಹೋಗಲ್ಲ- ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿ

    ಉಡುಪಿ: ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಿ ಎಂದು ನಾನು ಯಾರಲ್ಲಿಯೂ ಬೇಡಿಕೊಂಡು ಹೋಗಲ್ಲ. ಸರ್ಕಾರದವರಿಗೆ ಲೋಕಾಯುಕ್ತ ಬಲಪಡಿಸಬೇಕೆಂದಿದ್ದರೆ ಆ ಕೆಲಸ ಮಾಡ್ತಾರೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಹೇಳಿದ್ದಾರೆ.

    ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತರು ಭೇಟಿ ನೀಡಿ ವೈದ್ಯರು, ರೋಗಿಗಳ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ನನ್ನ ಸಾಮರ್ಥ್ಯಕ್ಕೆ ಮೀರಿ ಕೆಲಸ ಮಾಡುತ್ತಿದ್ದೇನೆ. ಈ ವಿಚಾರ ಕೋರ್ಟ್ ನಲ್ಲಿ ತೀರ್ಪಿಗೆ ಸಿದ್ಧವಾಗಿದೆ. ನಮ್ಮ ಅಭಿಪ್ರಾಯವನ್ನು ವಕೀಲರ ಮೂಲಕ ಕೋರ್ಟಿಗೆ ಮನವರಿಕೆ ಮಾಡಲಾಗಿದೆ. ಅದನ್ನೆಲ್ಲಾ ಮಾಧ್ಯಮಗಳ ಮುಂದೆ ಹಂಚಿಕೊಳ್ಳಲ್ಲ ಅಂತ ಹೇಳಿದರು.

    ನಾನಿನ್ನೂ ಸಂಪೂರ್ಣ ಗುಣಮುಖವಾಗಿಲ್ಲ:
    ಲೋಕಯುಕ್ತ ಸಂಸ್ಥೆ ರಾಜ್ಯದಲ್ಲಿ ಖಾಲಿಯಾಗಿದೆ ಎಂಬ ಭಾವನೆ ಜನರಿಗೆ ಬರಬಾರದು ಎಂಬ ಉದ್ದೇಶದಿಂದ ಸಂಪೂರ್ಣ ಗುಣಮುಖ ಆಗುವ ಮೊದಲೇ ಕೆಲಸ ಶುರು ಮಾಡಿದ್ದೇನೆ. ದೇಶದಲ್ಲಿ ಬಡವರ್ಗಕ್ಕೆ ಉತ್ತಮ ಆರೋಗ್ಯ ಸಿಗಬೇಕು. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ಕೊಡುತ್ತೇನೆ. ಉಡುಪಿ ಸರ್ಕಾರಿ ಆಸ್ಪತ್ರೆ ಭೇಟಿ ಕೊಟ್ಟಿದ್ದೇನೆ. ಹೆಚ್ಚಿನ ಸಂಖ್ಯೆಯಲ್ಲಿ ಅನಾರೋಗ್ಯ ಪೀಡಿತರು ಬಂದಿದ್ದಾರೆ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಮಾಧ್ಯಮಗಳು ಅಪಪ್ರಚಾರ ಮಾಡುವುದು ಸರಿಯಲ್ಲ. ಆಸ್ಪತ್ರೆಗಳ ಸುಧಾರಣೆಗೆ ಅವುಗಳೂ ಶ್ರಮಿಸಬೇಕು. ಉಡುಪಿಯಲ್ಲಿ ಮೂಲಭೂತ ವ್ಯವಸ್ಥೆ ಕೊರತೆಯಿದೆ. ಸಿಬ್ಬಂದಿ ಕೊರತೆ ಎದ್ದು ಕಾಣುತ್ತದೆ ಎಂದರು.

    1962 ರಲ್ಲಿ ಈ ಆಸ್ಪತ್ರೆ ಉದ್ಘಾಟನೆ ಆಗಿದೆ. 55 ವರ್ಷದಲ್ಲಿ ಆಗಬೇಕಾದ ಬೆಳವಣಿಗೆ ಆಗಿಲ್ಲ. ವೈದ್ಯರು, ರೋಗಿಗಳ ಜೊತೆ ಮಾತನಾಡಿ ಹಲವಾರು ಅಂಶಗಳನ್ನು ಸರ್ಕಾರದ ಗಮನಕ್ಕೆ ತರುತ್ತೇನೆ. ಸ್ಥಳೀಯ ಲೋಕಾಯುಕ್ತ ಅಧಿಕಾರಿಗಳು ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಯ ವ್ಯವಸ್ಥೆಗಳ ಬಗ್ಗೆ ತನಿಖೆ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

  • ಸೂಕ್ತ ಭದ್ರತೆ ಇದ್ದಿದ್ರೆ, ಲೋಕಾಯುಕ್ತರ ಮೇಲೆ ದಾಳಿ ಆಗ್ತಿರಲಿಲ್ಲ: ನಿವೃತ್ತ ಉಪಲೋಕಾಯುಕ್ತ ಸುಭಾಷ್ ಬಿ ಅಡಿ

    ಸೂಕ್ತ ಭದ್ರತೆ ಇದ್ದಿದ್ರೆ, ಲೋಕಾಯುಕ್ತರ ಮೇಲೆ ದಾಳಿ ಆಗ್ತಿರಲಿಲ್ಲ: ನಿವೃತ್ತ ಉಪಲೋಕಾಯುಕ್ತ ಸುಭಾಷ್ ಬಿ ಅಡಿ

    ಬಾಗಲಕೋಟೆ: ಸೂಕ್ತ ಭದ್ರತೆ ಇದ್ದಿದ್ದರೆ ಲೋಕಾಯುಕ್ತರ ಮೇಲೆ ದಾಳಿ ಆಗ್ತಿರಲಿಲ್ಲ, ಲೋಕಾಯುಕ್ತರಿಗೆ ಈ ಗತಿಯಾದರೆ ಇನ್ನೂ ಸಾಮಾನ್ಯ ಜನರ ಸ್ಥಿತಿ ಏನಾಗಬೇಡ ಎಂದು ನಿವೃತ್ತ ಉಪ ಲೋಕಾಯುಕ್ತ ಸುಭಾಷ್ ಬಿ ಅಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಪ್ರತಿಕ್ರಿಯಿಸಿದ ಅವರು, ಲೋಕಾಯುಕ್ತರಿಗೆ ಸೂಕ್ತ ಭದ್ರತೆಯನ್ನ ಒದಗಿಸಬೇಕು. ಭದ್ರತೆಗೆ ಕೇವಲ ಪೊಲೀಸರನ್ನ ನಿಯೋಜನೆ ಮಾಡಿದ್ರೆ ಸಾಲದು, ಪರಿಣಿತ ಪೊಲೀಸರನ್ನ ನಿಯೋಜಿಸಬೇಕು. ಅಲ್ಲಿದ್ದ ಪೊಲೀಸರಿಗೆ ಲಾಠಿ, ಕೋಲು ಹಿಡಿಯೋದನ್ನ ಬಿಟ್ಟರೆ ಬೇರೆ ಯಾವ ಅನುಭವ ಗೊತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಲೋಕಾಯುಕ್ತರಿಗೆ ಎಲ್ಲೆಲ್ಲಿ ಇರಿಯಲಾಗಿದೆ? ಈಗ ಹೇಗಿದ್ದಾರೆ: ಮಲ್ಯ ಆಸ್ಪತ್ರೆ ವೈದ್ಯರು ಹೇಳ್ತಾರೆ ಓದಿ

    ಹೈಕೋರ್ಟ್, ಸುಪ್ರೀಂ ಕೋರ್ಟ್ ಸೇರಿದಂತೆ ಹಲವು ಪ್ರಮುಖ ಸಂಸ್ಥೆಗಳಿಗೆ ಈಗ ಸೆಕ್ಯೂರಿಟಿ ನೀಡಬೇಕಿದೆ. ಲೋಕಾಯುಕ್ತ ಸಂಸ್ಥೆಯ ಭದ್ರತೆಯನ್ನ ಕಡೆಗಣಿಸಿದ್ದೇ ಈ ಅನಾಹುತಕ್ಕೆ ಕಾರಣವಾಗಿದೆ. ಲೋಕಾಯುಕ್ತ ಸಂಸ್ಥೆ ಇರುವುದು ಜನರಿಗಾಗಿ, ಇಲ್ಲಿ ಎಲ್ಲಾ ರೀತಿಯ ಜನ್ರು ಲೋಕಾಯುಕ್ತರ ಬಳಿ ಬರುತ್ತಿರುತ್ತಾರೆ. ಕೆಲವೊಮ್ಮೆ ಕೆಟ್ಟ ಜನರೂ ಬರ್ತಾರೆ, ಅಂತಹ ಜನರು ಬಂದಾಗ ಸೆಕ್ಯೂರಿಟಿ ಅವಶ್ಯಕವಾಗಿದೆ. ಇಂತಹ ಅನಾಹುತಗಳನ್ನು ತಪ್ಪಿಸಲು ಜನರನ್ನು ಲೋಕಾಯುಕ್ತರಿಂದ ದೂರ ಇಟ್ಟರೆ ಅದರಿಂದ ದುಷ್ಪರಿಣಾಮಗಳೇ ಹೆಚ್ಚಾಗುತ್ತದೆ. ಆದ್ದರಿಂದ ಜನರಿಗೆ ಲೋಕಾಯುಕ್ತರನ್ನ ಭೇಟಿ ಮಾಡಲು ಅವಕಾಶವನ್ನ ಕೊಡಬೇಕು ಎಂದು ಹೇಳಿದರು. ಇದನ್ನೂ ಓದಿ: ಇದು ಸರ್ಕಾರ ಏನ್ರೀ? ಮೊದಲು ಈ ಸರ್ಕಾರ ತೊಲಗಬೇಕು: ಮಾಜಿ ಉಪಲೋಕಾಯುಕ್ತ ಚಂದ್ರಶೇಖರಯ್ಯ

    ಹಲ್ಲೆಗೆ ಒಳಗಾಗಿರುವ ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಸದ್ಯ ಮಲ್ಯ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ರಾಜ್ಯ ಸರ್ಕಾರವೂ ಲೋಕಾಯುಕ್ತ ಕಚೇರಿಗೆ ಬಿಗಿ ಭದ್ರತೆಯನ್ನ ಹೆಚ್ಚಿಸಲು ಸುತ್ತೋಲೆಯನ್ನ ಹೊರಡಿಸಿದೆ.