Tag: Justin Trudeau

  • ಕೆನಡಾ ನೂತನ ಪ್ರಧಾನಿಯಾಗಿ ಕಾರ್ನಿ ಪ್ರಮಾಣ ವಚನ ಸ್ವೀಕಾರ

    ಕೆನಡಾ ನೂತನ ಪ್ರಧಾನಿಯಾಗಿ ಕಾರ್ನಿ ಪ್ರಮಾಣ ವಚನ ಸ್ವೀಕಾರ

    ಒಟ್ಟಾವಾ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ (Mark Carney) ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು.

    ಈ ಮೊದಲು ಮಾರ್ಕ್ ಕಾರ್ನಿ ಬ್ಯಾಂಕ್ ಆಫ್ ಇಂಗ್ಲೆಂಡ್ ಮತ್ತು ಬ್ಯಾಂಕ್ ಆಫ್ ಕೆನಡಾದ ಅಧ್ಯಕ್ಷರಾಗಿದ್ದರು. ಜನವರಿಯಲ್ಲಿ ಜಸ್ಟಿನ್ ಟ್ರುಡೋ ರಾಜೀನಾಮೆ ನೀಡಿದ್ದ ಹಿನ್ನೆಲೆ ಇತ್ತೀಚಿಗಷ್ಟೆ ಕಾರ್ನಿ ಲಿಬರಲ್ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಇದೀಗ ಕೆನಡಾದ 24ನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.ಇದನ್ನೂ ಓದಿ: ರೈಲು ಹೈಜಾಕ್‌ನಲ್ಲಿ ಸೆರೆಯಾಗಿದ್ದ ಎಲ್ಲಾ 214 ಒತ್ತೆಯಾಳುಗಳ ಸಾಮೂಹಿಕ ಹತ್ಯೆ: ಬಿಎಲ್‌ಎ ಹೇಳಿಕೆ

    ಈ ಕುರಿತು ಮಾತನಾಡಿರುವ ಕಾರ್ನಿ, ತಮ್ಮ ಸರ್ಕಾರ ನಿರ್ಣಾಯಕವಾಗಿ ಕಾರ್ಯನಿರ್ವಹಿಸಲು ಸಿದ್ಧವಾಗಿದ್ದು, ಕೆನಡಿಯನ್ನರ ನಿರೀಕ್ಷೆ ಪೂರ್ಣಗೊಳಿಸಲಿದ್ದೇವೆ. ವೇಗವಾಗಿ ಚಲಿಸುವ, ನಮ್ಮ ಆರ್ಥಿಕತೆಯನ್ನು ಸುರಕ್ಷಿತಗೊಳಿಸುವ ಮತ್ತು ಕೆನಡಾದ ಭವಿಷ್ಯವನ್ನು ರಕ್ಷಿಸುವ ಅನುಭವಿ ಸಚಿವ ಸಂಪುಟ ನಮ್ಮದು ಎಂದಿದ್ದಾರೆ.

    2013ರಲ್ಲಿ ಲಿಬರಲ್ ಪಕ್ಷದ ನಾಯಕರಾಗಿ ಅಧಿಕಾರ ವಹಿಸಿಕೊಂಡಿದ್ದ ಜಸ್ಟಿನ್ ಟ್ರುಡೋ, 2025ರ ಜನವರಿ 6 ರಂದು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು.ಇದನ್ನೂ ಓದಿ: ರೈತ ಮುಖಂಡ ರಾಕೇಶ್ ಟಿಕಾಯತ್ ಕಾರು ಅಪಘಾತ – ಸೀಟ್‌ ಬೆಲ್ಟ್‌ ಹಾಕಿದ್ದಕ್ಕೆ ಬಚಾವ್‌

     

  • ಕೆನಡಾ ಪ್ರಧಾನಿ ಸ್ಥಾನಕ್ಕೆ ಟ್ರುಡೊ ರಾಜೀನಾಮೆ – ಭಾರತದ ಇಂಪ್ಯಾಕ್ಟ್ ಏನು?

    ಕೆನಡಾ ಪ್ರಧಾನಿ ಸ್ಥಾನಕ್ಕೆ ಟ್ರುಡೊ ರಾಜೀನಾಮೆ – ಭಾರತದ ಇಂಪ್ಯಾಕ್ಟ್ ಏನು?

    – ಕೆನಡಾ ಪ್ರಧಾನಿ ರೇಸ್‌ನಲ್ಲಿ ಮೂವರು ಭಾರತೀಯರು!

    ಕುಸಿತ ಕಂಡ ಜನಪ್ರಿಯತೆ, ಮುಂಬರುವ ಚುನಾವಣೆಯಲ್ಲಿ ಸೋಲುವ ಭೀತಿ, ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯ, ಹಳಸಿದ ಭಾರತ ಜೊತೆಗಿನ ಸಂಬಂಧ, ಕೆನಡಾ ಬಗೆಗಿನ ಅಮೆರಿಕ ನಿಲುವು… ಹೀಗೆ ಅನೇಕ ಕಾರಣಗಳು ಕೆನಡಾ ಪ್ರಧಾನಿ ಹುದ್ದಗೆ ಜಸ್ಟಿನ್ ಟ್ರುಡೊ ರಾಜೀನಾಮೆ ನೀಡುವಂತಹ ಮಾತುಗಳನ್ನಾಡಿಸಿವೆ. ದೇಶದ ಉನ್ನತ ಹುದ್ದೆಯನ್ನು ತೊರೆಯುತ್ತೇನೆ ಎಂದು ಟ್ರುಡೊ ಈಚೆಗೆ ಘೋಷಿಸಿದ್ದಾರೆ. ಅವರ ನಿಲುವು ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟುಹಾಕಿದೆ.

    ಅಷ್ಟಕ್ಕೂ ಕೆನಡಾದಲ್ಲಿ ಆಡಳಿತ ಪಕ್ಷವೊಂದರ ರಾಜಕೀಯ ಸ್ಥಿತ್ಯಂತರಕ್ಕೆ ಕಾರಣವೇನು? ಟ್ರುಡೊ ರಾಜೀನಾಮೆ ಘೋಷಿಸುವ ಒತ್ತಡ ಸೃಷ್ಟಿಯಾಗಿದ್ಯಾಕೆ? ಈ ಬೆಳವಣಿಗೆಯಲ್ಲಿ ಭಾರತದ ಇಂಪ್ಯಾಕ್ಟ್ ಇದೆಯಾ? ಟ್ರುಡೊ ರಾಜೀನಾಮೆ ನಂತರ ಮುಂದೇನು ಎಂಬ ಅನೇಕ ಪ್ರಶ್ನೆಗಳು ಮೂಡಬಹುದು. ಎಲ್ಲವನ್ನೂ ಇಲ್ಲಿ ಸಂಕ್ಷಿಪ್ತವಾಗಿ ವಿವರಿಸಲಾಗಿದೆ.

    ಕುಸಿದ ಟ್ರುಡೊ ವರ್ಚಸ್ಸು
    44 ವರ್ಷ ವಯಸ್ಸಿನ ಟ್ರುಡೊ ಅವರ ಆಶಾವಾದಿ ರಾಜಕೀಯ ಸಂದೇಶ ಮತ್ತು ಯುವ ವರ್ಚಸ್ಸು 2015ರಲ್ಲಿ ಲಿಬರಲ್ ಪಕ್ಷಕ್ಕೆ ಸಂಸತ್ತಿನಲ್ಲಿ ಅಭೂತಪೂರ್ವ ಬಹುಮತ ತಂದುಕೊಟ್ಟಿತ್ತು. ಆದರೆ, ಈಚೆಗೆ ಆಂಗಸ್ ಇನ್‌ಸ್ಟಿಟ್ಯೂಟ್ ನಡೆಸಿದ ಸಮೀಕ್ಷೆಯಲ್ಲಿ 2024ರ ಡಿಸೆಂಬರ್ ಹೊತ್ತಿಗೆ, ಅವರ ಪರವಾದ ಬೆಂಬಲ ರೇಟಿಂಗ್ ದಾಖಲೆಯ ಕನಿಷ್ಠ 24%ಗೆ ಕುಸಿದಿದೆ. ಲಿಬರಲ್ ಪಕ್ಷಕ್ಕೆ ಬೆಂಬಲ 16%ಗೆ ಇಳಿದಿದೆ. ಇದು ಪಕ್ಷಕ್ಕೆ 157 ವರ್ಷಗಳ ಇತಿಹಾಸದಲ್ಲಿ ಅತ್ಯಂತ ಕೆಟ್ಟ ಚುನಾವಣಾ ಸಾಧನೆಯಾಗಿದೆ.

    ಕಳೆದ 50 ವರ್ಷಗಳಲ್ಲಿ ಯಾವುದೇ ಕೆನಡಾದ ಪ್ರಧಾನಿ ಸತತ ಮೂರನೇ ಅವಧಿಗೆ ಗೆದ್ದಿಲ್ಲ. ಇತ್ತೀಚಿನ ವರ್ಷಗಳಲ್ಲಿ 8-9 ವರ್ಷಗಳ ಅವಧಿಯಲ್ಲಿ ಆಡಳಿತ ಪಕ್ಷದಲ್ಲಿರುವ ಜನಪ್ರತಿನಿಧಿಗಳ ಸಾಮರ್ಥ್ಯ ಕುಂದಿದೆ. ಜನರು ಒಂಬತ್ತು ವರ್ಷಗಳ ಬಳಿಕವೂ ಅವರನ್ನು ಪ್ರೀತಿಸಲು ಸಾಧ್ಯವಿಲ್ಲ. ಟ್ರುಡೊ ಸಮಯ ಮುಗಿದಿದೆ ಅಂತ ಕಳೆದ ಎರಡು ವರ್ಷಗಳಿಂದ ಸಮೀಕ್ಷಾ ತಜ್ಞರು ಹೇಳುತ್ತಿದ್ದಾರೆಂದು ಕೆನಡಾದ ಪತ್ರಕರ್ತ ಟರ‍್ರಿ ಮಿಲೆವ್ಸಿ÷್ಕ ಅಭಿಪ್ರಾಯಪಟ್ಟಿದ್ದಾರೆ.

    ಆರ್ಥಿಕ ಸಮಸ್ಯೆಗಳಿಂದಾಗಿ ಟ್ರುಡೊ ವಿರುದ್ಧದ ಅಸಮಾಧಾನವು ದೇಶದಲ್ಲಿ ಉತ್ತುಂಗಕ್ಕೇರಿದೆ. ಅವರ ಎರಡನೇ ಅವಧಿಯಲ್ಲಿ ಒಟ್ಟಾರೆ ಆರ್ಥಿಕ ಬೆಳವಣಿಗೆ ನಿಧಾನವಾಗಿದೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ವೇತನವು ದಾಖಲೆಯ ಹಣದುಬ್ಬರವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಹಣದುಬ್ಬರವು ‘ಸರ್ಕಾರದ ಹಂತಕ’ ಎಂದು 2019ರ ವರೆಗೆ ಟ್ರುಡೊ ಅವರ ಪ್ರಧಾನಿ ಕಾರ್ಯದರ್ಶಿಯಾಗಿದ್ದ ಯುರೇಷಿಯಾ ಗ್ರೂಪ್‌ನ ರಾಜಕೀಯ ಸಲಹೆಗಾರ ಜೆರಾಲ್ಡ್ ಬಟ್ಸ್ ಹೇಳಿದ್ದರು. ಹಿಂದಿನ ಸರ್ಕಾರಗಳಂತೆಯೇ, ಟ್ರುಡೊ ಅವರು ಹಣದುಬ್ಬರ ಸಂಗತಿ ಮತ್ತು ಅಗತ್ಯವಿರುವ ಪರಿಹಾರ ಮಾರ್ಗಗಳನ್ನು ಗುರುತಿಸುವಲ್ಲಿ ವಿಫಲರಾದರು ಎಂದು ತಿಳಿಸಿದ್ದರು.

    ಇದರ ಜೊತೆಗೆ, ರಾಜಕೀಯ ಹಗರಣಗಳ ಸರಣಿಯು ಟ್ರುಡೊ ಅವರ ವೈಯಕ್ತಿಕ ಜನಪ್ರಿಯತೆ ಕುಸಿಯುವಂತೆ ಮಾಡಿತು. 2017ರಲ್ಲಿ ಹೆಚ್ಚಿನ ಗಿಫ್ಟ್ಗಳ ಸ್ವೀಕಾರ, 2020ರಲ್ಲಿ ಟ್ರುಡೊ ಕುಟುಂಬಕ್ಕೆ ಡಬ್ಲ್ಯೂಇ ಚಾರಿಟಿಯಿಂದ ಲಕ್ಷಾಂತರ ಡಾಲರ್‌ಗಳ ಪಾವತಿಯಾಗಿದೆ ಎಂಬ ಆರೋಪಗಳು ಕೇಳಿಬಂದವು. ಕೋವಿಡ್ ಸಾಂಕ್ರಾಮಿಕ ರೋಗದ ನಂತರ ದೇಶಕ್ಕೆ ವಲಸೆ ಬರುವವರ ಸಂಖ್ಯೆ ಹೆಚ್ಚಿತು. ದಾಖಲೆ ಸಂಖ್ಯೆಯ ವಲಸಿಗರಿಗೆ ಅವಕಾಶ ನೀಡುವ ಸರ್ಕಾರದ ನೀತಿಯು ಸಾರ್ವಜನಿಕ ಬೆಂಬಲವನ್ನು ಕಳೆದುಕೊಂಡಿತು. ಇದರಿಂದ ಎಚ್ಚೆತ್ತು ಟ್ರುಡೊ ವಲಸೆ ನೀತಿಯಿಂದ ಹಿಂದೆ ಸರಿದರು. ಆದರೆ, ಅಷ್ಟೊತ್ತಿಗಾಗಲೇ ಕಾಲ ಮಿಂಚಿಹೋಗಿತ್ತು.

    ಪಕ್ಷದ ಬೆಂಬಲ ಕಳೆದುಕೊಂಡ ನಾಯಕ
    ಟ್ರಡೊ ಮೈತ್ರಿಕೂಟದ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರ ಪಕ್ಷವು ಸಂಸತ್ತಿನ 338 ಸ್ಥಾನಗಳಲ್ಲಿ 153 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ಸಣ್ಣ ಪಕ್ಷಗಳ ಬೆಂಬಲದಿಂದ ಸರ್ಕಾರ ರಚನೆಗೊಂಡಿತು. ಬ್ಲಾಕ್ ಕ್ವಿಬೆಕೊಯಿಸ್ ಮತ್ತು ಜಗ್ಮೀತ್ ಸಿಂಗ್ ಅವರ ನ್ಯೂ ಡೆಮಾಕ್ರಟಿಕ್ ಪಕ್ಷ ಬೆಂಬಲ ನೀಡಿದ್ದವು. ಈಗ ಟ್ರುಡೊ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯಬೇಕೆಂದು ಅವರ ಲಿಬರಲ್ ಪಕ್ಷದೊಳಗಿನಿಂದಲೇ ದೊಡ್ಡ ಕೂಗು ಕೇಳಿಬರುತ್ತಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸುಮಾರು ಲಿಬರಲ್ ಪಕ್ಷದ ಎರಡು ಡಜನ್ ಬ್ಯಾಕ್‌ಬೆಂಚರ್‌ಗಳು, ಟ್ರುಡೊ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುವ ಪತ್ರಕ್ಕೆ ಸಹಿ ಹಾಕಿವೆ.

    ಹಣಕಾಸು ಸಚಿವ ರಾಜೀನಾಮೆ
    ಡಿಸೆಂಬರ್ ಮಧ್ಯದಲ್ಲಿ ಟ್ರುಡೊ ಅವರ ಆಪ್ತ ಸಹಾಯಕ, ಕೆನಡಾದ ಹಣಕಾಸು ಸಚಿವೆ ಕ್ರಿಸ್ಟಿಯಾ ಫ್ರೀಲ್ಯಾಂಡ್ ರಾಜೀನಾಮೆ ಕೊಟ್ಟರು. ‘ಕೆನಡಾವನ್ನು ಅಮೆರಿಕಕ್ಕೆ ವಿಲೀನಗೊಳಿಸಲಾಗುವುದು. ಯುಎಸ್ ರಾಜ್ಯವನ್ನಾಗಿ ಮಾಡಿಕೊಳ್ಳಲಾಗುವುದು’ ಎಂಬ ಟ್ರಂಪ್ ಹೇಳಿಕೆಗೆ ಕ್ರಿಸ್ಟಿಯಾ ಆಕ್ರೋಶ ಹೊರಹಾಕಿದ್ದರು. ಈ ವಿಚಾರದಲ್ಲಿ ಟ್ರುಡೊ ಅವರ ಜಾಣಕುರುಡು ನಡೆಯನ್ನೂ ಖಂಡಿಸಿದರು. ಹೊಸ ನಾಯಕರ ಹುಟ್ಟಿಗೆ ಇದು ಸರಿಯಾದ ಸಮಯ ಎಂದು ಲಿಬರಲ್ ಪಕ್ಷದ ಅನೇಕ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪತ್ರ ಬರೆದವರು ಮಾತ್ರವಲ್ಲ ಪಕ್ಷದ ಉಳಿದ ಸಂಸದರೂ ಟ್ರುಡೊಗೆ ಬೆಂಬಲ ನೀಡಲು ಹಿಂಜರಿಯುತ್ತಿದ್ದಾರೆ.

    ಮುಂದೆ ಏನಾಗುತ್ತೆ?
    ಲಿಬರಲ್ ಪಕ್ಷವು ಮತ್ತೊಬ್ಬ ನಾಯಕನನ್ನು ಆಯ್ಕೆ ಮಾಡುವವರೆಗೆ ಟ್ರುಡೊ ಪ್ರಧಾನಿಯಾಗಿ ಮುಂದುವರಿಯುತ್ತಾರೆ. ರಾಜನ ಪ್ರತಿನಿಧಿಯಾದ ಗವರ್ನರ್ ಜನರಲ್ 3ನೇ ಕಿಂಗ್ ಚಾರ್ಲ್ಸ್, ಮಾರ್ಚ್ 24 ರವರೆಗೆ ಎಲ್ಲಾ ಕಲಾಪಗಳನ್ನು ಸ್ಥಗಿತಗೊಳಿಸುವ ಮೂಲಕ ಸಂಸತ್ತನ್ನು ಮುಂದೂಡುವ ಟ್ರುಡೊ ಮನವಿಯನ್ನು ಅಂಗೀಕರಿಸಿದ್ದಾರೆ. ಇದು ಲಿಬರಲ್ ಪಕ್ಷಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಲು ಸಮಯ ನೀಡುತ್ತದೆ. ಆದರೆ, ಮುಂದಿನ ಪ್ರಧಾನಿ ಯಾರಾಗಿರಬಹುದು ಎಂಬುದು ಸ್ಪಷ್ಟವಾಗಿಲ್ಲ. ಸಾರಿಗೆ ಸಚಿವೆ ಅನಿತಾ ಆನಂದ್ ಮತ್ತು ಮಾಜಿ ಕೇಂದ್ರ ಬ್ಯಾಂಕರ್ ಮಾರ್ಕ್ ಕಾರ್ನಿ ಅವರನ್ನು ಸಂಭಾವ್ಯ ಸ್ಪರ್ಧಿಗಳೆಂದು ಗುರುತಿಸಲಾಗಿದೆ. ಸಂಸತ್ತಿನ ಚುನಾವಣೆ 2025ರ ಅಕ್ಟೋಬರ್ ಒಳಗೆ ನಡೆಯಬೇಕು. ಆದರೆ ಅದು ಇನ್ನೂ ಮುಂಚೆಯೇ ಆಗಬಹುದು. ಪ್ರಮುಖ ವಿರೋಧ ಪಕ್ಷವಾದ ಕನ್ಸರ್ವೇಟಿವ್ ಪಕ್ಷವು ಮೇ ತಿಂಗಳೊಳಗೆ ಅವಿಶ್ವಾಸ ನಿರ್ಣಯವನ್ನು ಮಂಡಿಸಲು ಸಾಧ್ಯತೆಯಿದೆ. ಇದು ಚುನಾವಣೆಗೆ ಕಾರಣವಾಗಬಹುದು. ಪಿಯರೆ ಪೊಯ್ಲಿವ್ರೆ ನೇತೃತ್ವದ ಕನ್ಸರ್ವೇಟಿವ್ ಪಕ್ಷವು ಲಿಬರಲ್ ಪಕ್ಷದವರಿಗಿಂತ 29 ಅಂಕಗಳ ಮುನ್ನಡೆಯನ್ನು ಹೊಂದಿದೆ. ಪಕ್ಷದ ನಾಯಕರಾಗಿ ಟ್ರೂಡೊ ಅವರ ನಂತರ ಯಾರು ಬಂದರೂ ಸಹ ಅವರು ಗೆಲ್ಲುವ ಸಾಧ್ಯತೆಯಿದೆ.

    ಕೆನಡಾ-ಭಾರತ ತಿಕ್ಕಾಟ
    ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಏಜೆಂಟರ ಕೈವಾಡವಿದೆ ಎಂದು ಟ್ರೂಡೊ ಆರೋಪಿಸಿದ್ದರಿಂದ (ಸೆಪ್ಟೆಂಬರ್ 2023ರಿಂದ) ಭಾರತ-ಕೆನಡಾ ಸಂಬಂಧಗಳು ಹದಗೆಟ್ಟಿತು. ಆಗಿನಿಂದ ಉಭಯ ದೇಶಗಳ ನಡುವಿನ ರಾಜತಾಂತ್ರಿಕತೆಯಲ್ಲಿ ಬಿಕ್ಕಟ್ಟು ತಲೆದೋರಿದೆ. ಎರಡೂ ದೇಶಗಳು ತಮ್ಮ ರಾಯಭಾರಿಗಳನ್ನು ಹಿಂದಕ್ಕೆ ಕರೆಸಿಕೊಂಡಿದ್ದವು. ‘ಕೆನಡಾದಲ್ಲಿ ಹೊಸಬರು ಅಧಿಕಾರಕ್ಕೆ ಬಂದಿರುವುದರಿಂದ ಸಂಬಂಧಗಳನ್ನು ಸುಧಾರಿಸಲು ಅವಕಾಶವಿರುತ್ತದೆ. ಭಾರತವನ್ನು ದೃಷ್ಟಿಯಾಗಿಟ್ಟುಕೊಂಡು ಟ್ರುಡೊ ಈ ನಿರ್ಧಾರ ತೆಗೆದುಕೊಂಡಿದ್ದಾರೆಂದು ನಾನು ಭಾವಿಸುತ್ತೇನೆ ಎಂದು ಮಿಲೆವ್ಸ್ಕಿ ಹೇಳಿದ್ದಾರೆ.

    ಬ್ರಾಂಪ್ಟನ್‌ನಲ್ಲಿ ಸಿಖ್ ಪ್ರತ್ಯೇಕತಾವಾದಿಗಳು ಮತ್ತು ಹಿಂದೂಗಳ ನಡುವೆ ಘರ್ಷಣೆ ಮೂಲಕ ಟ್ರುಡೊ ವಿಭಜನೆಯನ್ನು ಬಿತ್ತುತ್ತಿದ್ದಾರೆ ಎಂದು ಪೊಯ್ಲಿವ್ರೆ ಆರೋಪಿಸಿದ್ದರು. ಟ್ರುಡೊ ಆಗಸ್ಟ್ನಲ್ಲಿ ಖಲಿಸ್ತಾನ್ ಪರ ಮತ್ತು ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದು ಎರಡು ದೇಶಗಳ ನಡುವಿನ ಸಂಬಂಧ ಮತ್ತಷ್ಟು ಹಳಸಲು ಕಾರಣವಾಯಿತು.

    ಕೆನಡಾ ಪ್ರಧಾನಿ ರೇಸ್‌ನಲ್ಲಿ ಭಾರತೀಯ ಸಂಜಾತರು
    ಕೆನಡಾದಲ್ಲಿ ಅಕ್ಟೋಬರ್ ಕೊನೆಯಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಮುಂಬರುವ ಚುನಾವಣೆಯಲ್ಲಿ ಲಿಬರಲ್ ಪಾರ್ಟಿ ಹೀನಾಯ ಸೋಲನುಭವಿಸಲಿದ್ದು, ಕನ್ಸರ್ವೇಟಿವ್ ಪಕ್ಷ ಅಧಿಕಾರಕ್ಕೇರಲಿದೆ ಎಂದು ಹಲವು ಸಮೀಕ್ಷೆಗಳು ತಿಳಿಸಿವೆ. ಟ್ರುಡೊ ರಾಜೀನಾಮೆ ಘೋಷಣೆ ಬೆನ್ನಲ್ಲೇ ಕೆನಡಾ ಪ್ರಧಾನಿ ಸ್ಥಾನಕ್ಕೆ ಹೊಸ ನಾಯಕರ ಹುಡುಕಾಟ ಶುರುವಾಗಿದೆ. ಪ್ರಧಾನಿ ರೇಸ್‌ನಲ್ಲಿರುವ ನಾಯಕರ ಪಟ್ಟಿಯಲ್ಲಿ ಮೂವರು ಭಾರತೀಯ ಸಂಜಾತರು ಸೇರಿರುವುದು ವಿಶೇಷ.

    ಟ್ರೂಡೊ ಅವರ ಸಂಪುಟದಲ್ಲಿ ಮಾಜಿ ರಕ್ಷಣಾ ಸಚಿವೆ ಹಾಗೂ ಪ್ರಸ್ತುತ ಸಾರಿಗೆ ಮತ್ತು ಆಂತರಿಕ ವ್ಯಾಪಾರ ಸಚಿವೆಯಾಗಿರುವ ಅನಿತಾ ಆನಂದ್ ಅವರನ್ನು ಪಕ್ಷವನ್ನು ಮುನ್ನಡೆಸುವ ಸಂಭಾವ್ಯ ಉತ್ತರಾಧಿಕಾರಿ ಎಂದು ಪರಿಗಣಿಸಲಾಗುತ್ತಿದೆ. ಅನಿತಾ ಅವರ ಪೋಷಕರು ತಮಿಳುನಾಡು ಮತ್ತು ಪಂಜಾಬ್‌ನ ಭಾರತೀಯ ವೈದ್ಯರಾಗಿದ್ದರು. 2019 ರಿಂದ 2021 ರವರೆಗೆ ಸಾರ್ವಜನಿಕ ಸೇವೆಗಳು ಮತ್ತು ಖರೀದಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ ವೈದ್ಯಕೀಯ ಉಪಕರಣಗಳನ್ನು ಪಡೆದುಕೊಳ್ಳಲು ಒಪ್ಪಂದದ ಮಾತುಕತೆ ಮುನ್ನಡೆಸಿದ್ದರಿಂದ ಆನಂದ್ ರಾಜಕೀಯದಲ್ಲಿ ಗಮನಾರ್ಹ ಅನುಭವವನ್ನು ಹೊಂದಿದ್ದಾರೆ.

    ಸಂಸದರಾಗಿರುವ ಭಾರತೀಯ ಮೂಲದ ಮತ್ತೊಬ್ಬ ವ್ಯಕ್ತಿ ಜಾರ್ಜ್ ಚಾಹಲ್ ಹೆಸರು ಕೂಡ ಪ್ರಧಾನಿ ರೇಸ್‌ನಲ್ಲಿ ಕೇಳಿಬರುತ್ತಿದೆ. ಆಲ್ಬರ್ಟಾ ಲಿಬರಲ್ ಸಂಸದರಾಗಿರುವ ಜಾರ್ಜ್ ಬಗ್ಗೆ ಹಲವು ನಾಯಕರು ಒಲವು ವ್ಯಕ್ತಪಡಿಸಿದ್ದಾರೆ. ವಕೀಲ ಮತ್ತು ಸಿಖ್ ಕಾಕಸ್ ಸಮುದಾಯದ ನಾಯಕರಾಗಿರುವ ಚಾಹಲ್, ವಾರ್ಡ್ 5 ರ ಕ್ಯಾಲ್‌ಗರಿ ನಗರ ಕೌನ್ಸಿಲರ್ ಆಗಿ ವಿವಿಧ ಸಮಿತಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ನೈಸರ್ಗಿಕ ಸಂಪನ್ಮೂಲಗಳ ಸ್ಥಾಯಿ ಸಮಿತಿಯ ಅಧ್ಯಕ್ಷರು ಮತ್ತು ಸಿಖ್ ಕಾಕಸ್‌ನ ಅಧ್ಯಕ್ಷರೂ ಆಗಿದ್ದಾರೆ.

    ಕೆನಡಾದ ಮುಂದಿನ ಪ್ರಧಾನಿಯಾಗಲು ಭಾರತೀಯ ಮೂಲದ ಕೆನಡಾದ ಸಂಸದ ಚಂದ್ರ ಆರ್ಯ ಅಧಿಕೃತವಾಗಿ ಸ್ಪರ್ಧೆಗೆ ಇಳಿದಿದ್ದಾರೆ. ನೇಪಿಯನ್ ಅನ್ನು ಪ್ರತಿನಿಧಿಸುವ ಲಿಬರಲ್ ಸಂಸದರಾದ ಆರ್ಯ, ಕೆನಡಾವನ್ನು ‘ಸಾರ್ವಭೌಮ ಗಣರಾಜ್ಯ’ ಮಾಡುವ, ನಿವೃತ್ತಿ ವಯಸ್ಸನ್ನು ಹೆಚ್ಚಿಸುವ, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರುವ ಮತ್ತು ಪ್ಯಾಲೆಸ್ತೀನ್ ರಾಜ್ಯವನ್ನು ಅಧಿಕೃತವಾಗಿ ಗುರುತಿಸುವ ತಮ್ಮ ಯೋಜನೆಗಳನ್ನು ವಿವರಿಸಿದ್ದಾರೆ. ಚಂದ್ರ ಆರ್ಯ ಕರ್ನಾಟಕದ ತುಮಕೂರು ಜಿಲ್ಲೆಯ ಸಿರಾ ತಾಲ್ಲೂಕಿನ ದ್ವಾರಲು ಗ್ರಾಮದವರು. ಧಾರವಾಡದ ಕೌಸಲಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್‌ನಿಂದ ಎಂಬಿಎ ಪದವಿ ಪಡೆದಿದ್ದಾರೆ. 2022ರಲ್ಲಿ ಕೆನಡಾದ ಪಾರ್ಲಿಮೆಂಟ್‌ನಲ್ಲಿ ಕನ್ನಡದಲ್ಲಿ ಮಾತನಾಡಿ ಚಂದ್ರ ಆರ್ಯ ಗಮನ ಸೆಳೆದಿದ್ದರು. ಅವರು ಕೂಡ ಈಗ ಕೆನಡಾ ಪ್ರಧಾನಿ ರೇಸ್‌ನಲ್ಲಿದ್ದಾರೆ.

    ಟ್ರಂಪ್ ಕಾರ್ಡ್
    ಕೆನಡಾವನ್ನು ಅಮೆರಿಕದ ಜೊತೆಗೆ ವಿಲೀನಗೊಳಿಸಿ ರಾಷ್ಟ್ರದ 51ನೇ ರಾಜ್ಯವನ್ನಾಗಿಸಲಾಗುವುದು ಎಂದು ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿದ್ದರು. ಕಳೆದ ವರ್ಷದ ನವೆಂಬರ್ ಕೊನೆಯಲ್ಲಿ ಪ್ರಧಾನಿ ಜಸ್ಟಿನ್ ಟ್ರುಡೊ ಜೊತೆಗಿನ ಮಾರ್-ಎ-ಲಾಗೊದಲ್ಲಿ ನಡೆಸಿದ ಔತಣ ಕೂಟದಲ್ಲಿ ಟ್ರಂಪ್ ಮೊದಲ ಬಾರಿಗೆ ತಮಾಷೆಯಾಗಿ ಹೇಳಿದ್ದರು. ಈ ರೀತಿ ಹೇಳಿಕೆ ನೀಡುವಾಗ ಟ್ರಂಪ್ ನಗುತ್ತಿದ್ದರೆಂದು ಪ್ರತ್ಯಕ್ಷದರ್ಶಿಗಳ ಅಭಿಪ್ರಾಯಪಟ್ಟಿದ್ದಾರೆ. ಆದರೆ, ಈ ವಿಚಾರವನ್ನು ಕೆನಡಾ ಆಡಳಿತ ಪಕ್ಷದ ನಾಯಕರು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಟ್ರಂಪ್ ಮಾತಿನಲ್ಲಿ ಮಿತ್ರರಾಷ್ಟçವನ್ನು ದುರ್ಬಲಗೊಳಿಸುವ ಉದ್ದೇಶವಿದೆ ಎಂದು ಕೆನಡಾದ ಹಣಕಾಸು ಸಚಿವರು ಅಸಮಾಧಾನ ಹೊರಹಾಕಿದ್ದಾರೆ.

    ಅಷ್ಟೇ ಅಲ್ಲ, ಈ ಹಿಂದಿನಿಂದಲೂ ಕೆನಡಾ ಮೇಲೆ ಟ್ರಂಪ್ ಕಾರ್ಡ್ ಬಳಕೆಯಾಗಿದೆ. ಟ್ರಂಪ್ ಅವರ ಮೊದಲ ಅವಧಿಯಲ್ಲಿ (2016 ರಿಂದ) ಉಕ್ಕು ಮತ್ತು ಅಲ್ಯೂಮಿನಿಯಂ ಮೇಲಿನ ಸುಂಕ ವಿಧಿಸುವುದು ಸೇರಿದಂತೆ ‘ಅಮೆರಿಕ ಮೊದಲು’ ನೀತಿಯಿಂದಾಗಿ ಕೆನಡಾ ಜೊತೆಗಿನ ಸಂಬಂಧ ಹದಗೆಟ್ಟಿತ್ತು. ಈಗ ಮತ್ತೆ ಅಮೆರಿಕ ಅಧ್ಯಕ್ಷರಾಗಿ ಟ್ರಂಪ್ ಚುನಾಯಿತರಾಗಿದ್ದಾರೆ. ಗೆಲುವಿನ ಬೆನ್ನಲ್ಲೇ, ಕೆನಡಾದ ಎಲ್ಲ ಉತ್ಪನ್ನಗಳ ಮೇಲೆ ಶೇ.25 ರಷ್ಟು ಸುಂಕ ಹೇರುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದಾರೆ. ಟ್ರಂಪ್ ಗೆಲುವು ಒಟ್ಟಾರೆಯಾಗಿ ಕೆನಡಾದಲ್ಲಿ ಟ್ರುಡೊ ರಾಜಕೀಯ ಕಂಪನಕ್ಕೆ ಕಾರಣವಾಗಿದೆ.

  • ಕೆನಡಾ ಪ್ರಧಾನಿ ರೇಸ್‌ನಲ್ಲಿ ಕನ್ನಡಿಗ ಚಂದ್ರ ಆರ್ಯ!

    ಕೆನಡಾ ಪ್ರಧಾನಿ ರೇಸ್‌ನಲ್ಲಿ ಕನ್ನಡಿಗ ಚಂದ್ರ ಆರ್ಯ!

    ಒಟ್ಟಾವಾ: ಕೆನಡಾದ ಪ್ರಧಾನಿ ಸ್ಥಾನದ ಪೈಪೋಟಿಯಲ್ಲಿ ಕರ್ನಾಟಕ ಮೂಲದ ಚಂದ್ರ ಆರ್ಯ ಅವರ ಹೆಸರು ಕೇಳಿಬಂದಿದೆ.

    ಕೆನಡಾದ ಪ್ರಧಾನ ಮಂತ್ರಿ ಹುದ್ದೆಗೆ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಅವರು ಘೋಷಿಸಿದ್ದಾರೆ. ಲಿಬರಲ್ ಪಕ್ಷದ ಸಂಸದರಾಗಿರುವ ಅವರು, ದೇಶವನ್ನು ಸಾರ್ವಭೌಮ ಗಣರಾಜ್ಯವನ್ನಾಗಿ ಪರಿವರ್ತಿಸುವ ಭರವಸೆ ನೀಡಿದ್ದಾರೆ. ಇನ್ನೂ, ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿದ ನಂತರ ಆಡಳಿತಾರೂಢ ಲಿಬರಲ್ ಪಕ್ಷದ ನಾಯಕ ಮತ್ತು ಪ್ರಧಾನಿ ಸ್ಥಾನದಿಂದ ಕೆಳಗಿಳಿಯಲು ಜಸ್ಟಿನ್ ಟ್ರುಡೊ ಸೋಮವಾರ ನಿರ್ಧಾರ ಪ್ರಕಟಿಸಿದ್ದರು. ಇದಾದ ಬಳಿಕ ಈ ಬೆಳವಣಿಗೆಯಾಗಿದೆ.

    ಆರ್ಯ ಚಂದ್ರ ಅವರು, ನಿವೃತ್ತಿ ವಯಸ್ಸನ್ನು ಹೆಚ್ಚಿಸುವುದು, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸುವುದು ಮತ್ತು ಪ್ಯಾಲೆಸ್ತೇನ್‌ನ್ನು ಒಂದು ರಾಜ್ಯವಾಗಿ ಗುರುತಿಸುವುದು ಸೇರಿದಂತೆ ಮಹತ್ವಾಕಾಂಕ್ಷೆಯ ನೀತಿ ಪ್ರಸ್ತಾಪಗಳನ್ನು ಉಮೇದುವಾರಿಕೆ ಬಳಿಕ ವಿವರಿಸಿದ್ದಾರೆ.

    ರಾಷ್ಟ್ರವನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯದ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸಲು ಹೆಚ್ಚು ಪರಿಣಾಮಕಾರಿ ಸರ್ಕಾರವನ್ನು ಮುನ್ನಡೆಸಲು ಕೆನಡಾದ ಮುಂದಿನ ಪ್ರಧಾನಿಯಾಗಲು ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಅವರು ಎಕ್ಸ್‌ನಲ್ಲಿ ಹೇಳಿಕೊಂಡಿದ್ದಾರೆ.

    ನಮ್ಮ ಮಕ್ಕಳು ಮತ್ತು ಮೊಮ್ಮಕ್ಕಳ ಹಿತದೃಷ್ಟಿಯಿಂದ, ನಾವು ಸಂಪೂರ್ಣವಾಗಿ ಅಗತ್ಯವಾದ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಲಿಬರಲ್ ಪಕ್ಷದ ಮುಂದಿನ ನಾಯಕರಾಗಿ ಆಯ್ಕೆಯಾದರೆ, ನನ್ನ ಜ್ಞಾನ ಮತ್ತು ಪರಿಣತಿಯ ಮೇಲೆ ಉತ್ತಮ ಆಡಳಿತ ನೀಡುತ್ತೇನೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

    ಆರ್ಯ ಅವರು 2015 ರಲ್ಲಿ ಮೊದಲ ಬಾರಿಗೆ ಹೌಸ್ ಆಫ್ ಕಾಮನ್ಸ್‌ಗೆ ಆಯ್ಕೆಯಾದರು ಮತ್ತು 2019 ರಲ್ಲಿ ಮರು ಆಯ್ಕೆಯಾದರು. 2022 ರಲ್ಲಿ ಹೌಸ್ ಆಫ್ ಕಾಮನ್ಸ್‌ನಲ್ಲಿ ಮಾತೃಭಾಷೆ ಕನ್ನಡದಲ್ಲಿ ಮಾತನಾಡುವ ಮೂಲಕ ಗಮನ ಸೆಳೆದರು. ಹಿಂದೂ ಕೆನಡಿಯನ್ನರ ಪರವಾಗಿ ವಾದಿಸುವ ವಕೀಲರಾಗಿ, ಆರ್ಯ ಆಗಾಗ ದೃಢವಾದ ನಿಲುವುಗಳನ್ನು ತೆಗೆದುಕೊಂಡಿದ್ದಾರೆ.

    2024 ರಲ್ಲಿ ಸಂಸತ್ತಿನ ಹೊರಗೆ ‘ಓಂ’ ಚಿಹ್ನೆಯನ್ನು ಹೊಂದಿರುವ ಕೇಸರಿ ಧ್ವಜವನ್ನು ಹಾರಿಸಿದ್ದರು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಹಿಂದೂ ಸಮುದಾಯ ರಾಜಕೀಯದಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಲು ಅವರು ಈ ಸಂದರ್ಭವನ್ನು ಬಳಸಿಕೊಂಡಿದ್ದರು.

    ತುಮಕೂರು ಮೂಲದ ಆರ್ಯ ಅವರು, ಧಾರವಾಡದಲ್ಲಿರುವ ಕೌಸಾಲಿ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಿಂದ ಎಂಬಿಎ ಪದವಿ ಪಡೆದಿದ್ದಾರೆ. ಅವರು 20 ವರ್ಷಗಳ ಹಿಂದೆ ಒಟ್ಟಾವಾಕ್ಕೆ ತೆರಳಿದ್ದರು. ರಾಜಕೀಯ ಪ್ರವೇಶಿಸುವ ಮೊದಲು ಎಂಜಿನಿಯರ್, ಹೂಡಿಕೆ ಸಲಹೆಗಾರ ಮತ್ತು ಉದ್ಯಮಿಯಾಗಿ ಕೆಲಸ ಮಾಡಿದ್ದರು.

  • ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ರಾಜೀನಾಮೆ!

    ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ರಾಜೀನಾಮೆ!

    ಒಟ್ಟಾವಾ: ಖಲಿಸ್ತಾನಿ (Khalistani) ಉಗ್ರ ಸಂಘಟನೆಯ ವಿಚಾರದಲ್ಲಿ ಭಾರತದೊಂದಿಗೆ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದ ಕೆನಡಾದ (Canada) ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

    ಸ್ಥಳೀಯ ಕಾಲಮಾನ ಬೆಳಗ್ಗೆ ರೈಡೋ ಕಾಟೇಜ್‌ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲದೇ ಗವರ್ನರ್ ಜನರಲ್ ಅವರಿಗೆ ಸಂಸತ್ತನ್ನು ಮಾರ್ಚ್‌ 24ರ ವರೆಗೆ ಮುಂದೂಡುವಂತೆ ವಿನಂತಿಸಿದ್ದಾರೆ ಎಂದು ವರದಿಯಾಗಿದೆ.

    ರಾಜೀನಾಮೆ ಬಳಿಕ ಟ್ರುಡೋ ಹೇಳಿದ್ದೇನು?
    ಪಕ್ಷದೊಳಗಿನ ಆಂತರಿಕ ಕದನಗಳಿಂದಾಗಿ ರಾಜೀನಾಮೆ ನೀಡುವ ನಿರ್ಧಾರ ಕೈಗೊಳ್ಳಲಾಯಿತು. ಕನ್ಸರ್ವೇಟಿವ್ ಪಕ್ಷದ ಮುಖ್ಯಸ್ಥ ಪಿಯರ್ ಪೊಯ್ಲಿವ್ರೆ ತಮ್ಮ ಉತ್ತರಾಧಿಕಾರಿಯಾಗಲು ಉತ್ಸಾಹಿಯಾಗಿದ್ದಾರೆ. ಆದ್ರೆ ಕೆನಡಾವನ್ನು ಮುನ್ನಡೆಸಲು ಆತ ಸರಿಯಾದ ವ್ಯಕ್ತಿಯಲ್ಲ ಎಂದು ಜಸ್ಟಿನ್‌ ಟ್ರುಡೋ ಹೇಳಿದ್ದಾರೆ.

    ರಾಜೀನಾಮೆಗೆ ಕಾರಣ ಏನು?
    ಟ್ರುಡೋ ಅವರು 2013 ರಲ್ಲಿ ಲಿಬರಲ್ ನಾಯಕರಾಗಿ ಅಧಿಕಾರ ವಹಿಸಿಕೊಂಡರು. ಅಕ್ಟೋಬರ್ ಅಂತ್ಯದಲ್ಲಿ ಕೆನಡಾದಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಲಿಬರಲ್‌ ಪಕ್ಷ ಹೀನಾಯವಾಗಿ ಸೋಲಲಿದೆ ಎಂದು ಸಮೀಕ್ಷೆಗಳು ಈಗಾಗಲೇ ಭವಿಷ್ಯ ನುಡಿದಿವೆ. ಇತ್ತೀಚಿನ ಚುನಾವಣೆಗಳಲ್ಲಿ ಲಿಬರಲ್‌ ಪಕ್ಷದ ಕಳಪೆ ಸಾಧನೆಗೆ ಟ್ರುಡೋ ಅವರ ನಾಯಕತ್ವವೇ ಕಾರಣ ಎಂದು ಸದಸ್ಯರು ಬಹಿರಂಗವಾಗಿಯೇ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಟ್ರುಡೋ ಪ್ರತಿನಿಧಿಸುತ್ತಿರುವ ಲಿಬರಲ್ ಪಕ್ಷದ ಸಂಸದರೇ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವಂತೆ ತಿರುಗಿಬಿದ್ದು, ರಾಜೀನಾಮೆಗೆ ಆಗ್ರಹಿಸಿದ್ದರು.

    ಅಲ್ಲದೇ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಜಸ್ಟಿನ್ ಟ್ರುಡೋ ನೇರವಾಗಿ ಆರೋಪಿಸಿದ್ದರು. ಆದರೆ ಅಕ್ಟೋಬರ್‌ 16 ರಂದು ನಾವು ಯಾವುದೇ ಪುರಾವೆಯನ್ನು ಭಾರತಕ್ಕೆ ನೀಡಿಲ್ಲ ಎಂದು ಟ್ರುಡೋ (Justin Trudeau) ಅಧಿಕೃತವಾಗಿ ಒಪ್ಪಿಕೊಳ್ಳುವ ಮೂಲಕ ಸೆಲ್ಫ್‌ ಗೋಲ್‌ ಹೊಡೆದಿದ್ದರು. ಇದರಿಂದಾಗಿ ಕೆನಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸುವಂತಾಗಿತ್ತು. ಖಲಿಸ್ತಾನಿ ಪರ ಟ್ರುಡೋ ಬ್ಯಾಟಿಂಗ್‌ ಮಾಡುತ್ತಿರುವುದಕ್ಕೆ ಸ್ವಪಕ್ಷೀಯರಿಂದಲೇ ಆಕ್ಷೇಪ ವ್ಯಕ್ತವಾಗಿತ್ತು.

  • ಭಾರತದ ಜೊತೆ ಚೇಷ್ಟೆ ಮಾಡುತ್ತಿದ್ದ ಕೆನಡಾ ಪ್ರಧಾನಿ ಟ್ರುಡೋ ಇಂದೇ ರಾಜೀನಾಮೆ?

    ಭಾರತದ ಜೊತೆ ಚೇಷ್ಟೆ ಮಾಡುತ್ತಿದ್ದ ಕೆನಡಾ ಪ್ರಧಾನಿ ಟ್ರುಡೋ ಇಂದೇ ರಾಜೀನಾಮೆ?

    ಒಟ್ಟಾವಾ: ಖಲಿಸ್ತಾನ (Khalistan) ಉಗ್ರ ಸಂಘಟನೆಯ ವಿಚಾರ ಹಿಡಿದುಕೊಂಡು ಭಾರತದೊಂದಿಗೆ ಚೇಷ್ಟೆ ಮಾಡಿದ್ದ ಕೆನಡಾದ (Canada) ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಇಂದು ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ.

    ಟ್ರುಡೋ ಪ್ರತಿನಿಧಿಸುತ್ತಿರುವ ಲಿಬರಲ್ ಪಕ್ಷದ ಸಂಸದರೇ ಈಗ ಪ್ರಧಾನಿ ವಿರುದ್ಧ ತಿರುಗಿ ಬಿದ್ದಿದ್ದು ರಾಜೀನಾಮೆಗೆ ಆಗ್ರಹಿಸಿದ್ದಾರೆ ಎಂದು ವರದಿಯಾಗಿದೆ. ಟ್ರುಡೋ  ಯಾವಾಗ ರಾಜೀನಾಮೆ ಘೋಷಿಸುತ್ತಾರೆ ಎಂಬುದು ಖಚಿತವಾಗಿ ತಿಳಿದಿಲ್ಲ. ಬುಧವಾರದ ಪಕ್ಷದ ರಾಷ್ಟ್ರೀಯ ಸಭೆ ನಡೆಯುವ ಮೊದಲೇ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಟ್ರಂಪ್‌ ಪ್ರಮಾಣವಚನ ಸಮಾರಂಭ – 8.57 ಕೋಟಿ ದೇಣಿಗೆ ನೀಡಲಿದ್ದಾರೆ ಟಿಮ್‌ ಕುಕ್‌

    ಪಕ್ಷದ ಆಂತಂರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕಾಏಕಿ ರಾಜೀನಾಮೆ ಘೋಷಣೆ ಮಾಡುತ್ತಾರಾ ಅಥವಾ ಹೊಸ ನಾಯಕತ್ವ ಆಯ್ಕೆವರೆಗೂ ಪ್ರಧಾನಿಯಾಗಿ ಮುಂದುವರೆಯುತ್ತಾರೋ ಇನ್ನೂ ಸ್ಪಷ್ಟವಾಗಿಲ್ಲ . ಇದನ್ನೂ ಓದಿ: ಮಾರುತಿಯ 40 ವರ್ಷದ ಓಟಕ್ಕೆ ಟಾಟಾ ಬ್ರೇಕ್‌ – ಪಂಚ್‌ ದೇಶದ ನಂ.1 ಕಾರು!

    ಟ್ರುಡೋ ಅವರು 2013 ರಲ್ಲಿ ಲಿಬರಲ್ ನಾಯಕರಾಗಿ ಅಧಿಕಾರ ವಹಿಸಿಕೊಂಡರು. ಅಕ್ಟೋಬರ್ ಅಂತ್ಯದಲ್ಲಿ ಕೆನಡಾದಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಲಿಬರಲ್‌ ಪಕ್ಷ ಹೀನಾಯವಾಗಿ ಸೋಲಲಿದೆ ಎಂದು ಸಮೀಕ್ಷೆಗಳು ಈಗಾಗಲೇ ಭವಿಷ್ಯ ನುಡಿದಿವೆ.

    ಇತ್ತೀಚಿನ ಚುನಾವಣೆಗಳಲ್ಲಿ ಲಿಬರಲ್‌ ಪಕ್ಷದ ಕಳಪೆ ಸಾಧನೆಗೆ ಟ್ರುಡೋ ಅವರ ನಾಯಕತ್ವವೇ ಕಾರಣ ಎಂದು ಸದಸ್ಯರು ಬಹಿರಂಗವಾಗಿಯೇ ಹೇಳಿದ್ದರು.

    ಖಲಿಸ್ತಾನ್ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಆರೋಪಿಸಿದ್ದರು. ಆದರೆ ಅಕ್ಟೋಬರ್‌ 16  ರಂದು ನಾವು ಯಾವುದೇ ಪುರಾವೆಯನ್ನು ಭಾರತಕ್ಕೆ ನೀಡಿಲ್ಲ ಎಂದು  ಜಸ್ಟಿನ್‌ ಟ್ರುಡೋ (Justin Trudeau) ಅಧಿಕೃತವಾಗಿ ಒಪ್ಪಿಕೊಳ್ಳುವ ಮೂಲಕ ಸೆಲ್ಫ್‌ ಗೋಲ್‌ ಹೊಡೆದಿದ್ದರು. ಇದರಿಂದಾಗಿ ಕೆನಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸುವಂತಾಗಿತ್ತು. ಖಲಿಸ್ತಾನಿ ಪರ ಟ್ರುಡೋ ಬ್ಯಾಟಿಂಗ್‌ ಮಾಡುತ್ತಿರುವುದಕ್ಕೆ ಸ್ವಪಕ್ಷೀಯರಿಂದಲೇ ಟೀಕೆ ವ್ಯಕ್ತವಾಗಿತ್ತು.

     

  • ಭಾರತದ ಜೊತೆ ಚೇಷ್ಟೆ ಮಾಡಿದ್ದ ಟ್ರುಡೋ ಶೀಘ್ರವೇ ರಾಜೀನಾಮೆ?

    ಭಾರತದ ಜೊತೆ ಚೇಷ್ಟೆ ಮಾಡಿದ್ದ ಟ್ರುಡೋ ಶೀಘ್ರವೇ ರಾಜೀನಾಮೆ?

    ಒಟ್ಟಾವಾ: ಖಲಿಸ್ತಾನ (Khalistan) ಉಗ್ರ ಸಂಘಟನೆಯ ವಿಚಾರ ಹಿಡಿದುಕೊಂಡು ಭಾರತದೊಂದಿಗೆ ಚೇಷ್ಟೆ ಮಾಡುತ್ತಿರುವ ಕೆನಡಾದ (Canada) ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ.

    ಟ್ರುಡೋ ಪ್ರತಿನಿಧಿಸುತ್ತಿರುವ ಲಿಬರಲ್ ಪಕ್ಷದ ಸಂಸದರೇ ಈಗ ಪ್ರಧಾನಿ ವಿರುದ್ಧ ತಿರುಗಿ ಬಿದ್ದಿದ್ದು ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ ಎಂದು ವರದಿಯಾಗಿದೆ. ಉಪಪ್ರಧಾನಿ ಕ್ರಿಸ್ಟಿಯಾ ಫ್ರೀಲ್ಯಾಂಡ್ (Chrystia Freeland) ರಾಜೀನಾಮೆ ನೀಡಿದ ಬೆನ್ನಲ್ಲೇ ಈಗ ಟ್ರುಡೋ ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಿದೆ.

    ಉಪಪ್ರಧಾನಿ ಹುದ್ದೆಯೊಂದಿಗೆ ಹಣಕಾಸು ಖಾತೆಯನ್ನು ಹೊಂದಿದ್ದ ಫ್ರೀಲ್ಯಾಂಡ್ ಟ್ರುಡೋ ಸರ್ಕಾರದಲ್ಲಿ ಅತ್ಯಂತ ಶಕ್ತಿಶಾಲಿ ಸಚಿವರಾಗಿದ್ದರು. ಕಳೆದ 4 ವರ್ಷಗಳಲ್ಲಿ ಸರ್ಕಾರದಿಂದ ಹೊರಬಂದ ಎರಡನೇ ಹಣಕಾಸು ಸಚಿವೆ ಇವರಾಗಿದ್ದಾರೆ.

    ಟ್ರುಡೋ ರಾಜೀನಾಮೆ ನೀಡಲು ಚಿಂತನೆ ಮಾಡಿದ್ದಾರೆ ಮತ್ತು ಸಂಸತ್ತನ್ನು ಉದ್ದೇಶಿಸಿ ಮಾತನಾಡಲು ಮುಂದಾಗಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ಕೆನಡಾ ಮಾಧ್ಯಮವೊಂದು ವರದಿ ಮಾಡಿದೆ.

    ಕೆನಡಾದಿಂದ ಅಕ್ರಮವಾಗಿ ವಲಸಿಗರು ಅಮೆರಿಕಕ್ಕೆ ನುಸುಳುತ್ತಿದ್ದಾರೆ. ನುಸುಳುಕೋರರ ವಿರುದ್ಧ ಕೆನಡಾ ಕ್ರಮ ಕೈಗೊಳ್ಳುತ್ತಿಲ್ಲ. ತಾನು ಅಧಿಕಾರಕ್ಕೆ ಏರಿದ ಬಳಿಕ ಕೆನಡಾದಿಂದ ಆಮದಾಗುವ ವಸ್ತುಗಳ ಮೇಲೆ 25% ಆಮದು ತೆರಿಗೆ ವಿಧಿಸುವುದಾಗಿ ಟ್ರಂಪ್‌ (Donald Trump) ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಜಸ್ಟಿನ್‌ ಟ್ರುಡೋ ಕೆನಡಾದ ಗವರ್ನರ್‌ ಎಂದು ಟ್ರಂಪ್‌ ವ್ಯಂಗ್ಯವಾಡಿದ್ದಾರೆ. ಅಮೆರಿಕ ಕೆನಡಾದ ಸಂಬಂಧ ಹಾಳಾಗುತ್ತಿರುವ ಬೆನ್ನಲ್ಲೇ ಟ್ರುಡೋ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲವಾಗುತ್ತಿದೆ.

    ಕೆನಡಾದ ಪ್ರಮುಖ ವ್ಯಾಪಾರ ಪಾಲುದಾರ ಅಮೆರಿಕವಾಗಿದ್ದು ಪ್ರತಿ ವರ್ಷ ಅದರ ರಫ್ತಿನ 75 ಪ್ರತಿಶತವು ಅಮೆರಿಕಕ್ಕೆ ಹೋಗುತ್ತಿದೆ. ಕೆಲ ದಿನಗಳ ಹಿಂದೆ ಜಸ್ಟಿನ್‌ ಟ್ರುಡೋ ಟ್ರಂಪ್‌ ಅವರನ್ನು ಫ್ಲೋರಿಡಾದಲ್ಲಿ ಭೇಟಿಯಾಗಿ ಮಾತನಾಡಿದ್ದರು. ಆಮದು ಸುಂಕದ ಬಗ್ಗೆ ಟ್ರುಡೋ ಮಾತುಕತೆ ನಡೆಸಿದ್ದರೂ ಟ್ರಂಪ್‌ ಕಡೆಯಿಂದ ಯಾವುದೇ ಧನಾತ್ಮಕ ನಿರ್ಧಾರ ಪ್ರಕಟವಾಗಿಲ್ಲ.

    ಇತ್ತೀಚಿನ ಚುನಾವಣೆಗಳಲ್ಲಿ ಪಕ್ಷದ ಕಳಪೆ ಸಾಧನೆಗೆ ಟ್ರುಡೋ ಅವರ ನಾಯಕತ್ವವೇ ಕಾರಣ ಎಂದು ಸದಸ್ಯರು ಬಹಿರಂಗವಾಗಿಯೇ ಹೇಳಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ಕೆನಾಡದ ಮಾಧ್ಯಮಗಳು ವರದಿ ಮಾಡಿವೆ.

    ಖಲಿಸ್ತಾನ್ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದರು. ಆದರೆ ಅ.16 ರಂದು ನಾವು ಯಾವುದೇ ಪುರಾವೆಯನ್ನು ಭಾರತಕ್ಕೆ ನೀಡಿಲ್ಲ ಎಂದು ಕೆ ಜಸ್ಟಿನ್‌ ಟ್ರುಡೋ (Justin Trudeau) ಅಧಿಕೃತವಾಗಿ ಒಪ್ಪಿಕೊಳ್ಳುವ ಮೂಲಕ ಸೆಲ್ಫ್‌ ಗೋಲ್‌ ಹೊಡೆದಿದ್ದರು. ಇದರಿಂದಾಗಿ ಕೆನಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸುವಂತಾಗಿತ್ತು. ಖಲಿಸ್ತಾನಿ ಪರ ಟ್ರುಡೋ ಬ್ಯಾಟಿಂಗ್‌ ಮಾಡುತ್ತಿರುವುದಕ್ಕೆ ಸ್ವಪಕ್ಷೀಯರಿಂದಲೇ ಟೀಕೆ ವ್ಯಕ್ತವಾಗಿತ್ತು.

  • ಅಧಿಕಾರಕ್ಕೆ ಏರುವ ಮುನ್ನವೇ ಚೀನಾ, ಕೆನಡಾಗೆ ಟ್ರಂಪ್ ಶಾಕ್

    ಅಧಿಕಾರಕ್ಕೆ ಏರುವ ಮುನ್ನವೇ ಚೀನಾ, ಕೆನಡಾಗೆ ಟ್ರಂಪ್ ಶಾಕ್

    ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಮುನ್ನವೇ ಡೊನಾಲ್ಡ್‌ ಟ್ರಂಪ್ (Donald Trump) ಚೀನಾ, ಮೆಕ್ಸಿಕೋ ಮತ್ತು ಕೆನಡಾಗೆ ಶಾಕ್ ನೀಡಿದ್ದಾರೆ.

    ಜ.20 ರಂದು ತಾನು ಅಧಿಕಾರ ಸ್ವೀಕರಿಸಿದ ಕೂಡಲೇ ಮೆಕ್ಸಿಕೋ, ಕೆನಡಾದಿಂದ ಆಮದಾಗುವ ಉತ್ಪನ್ನಗಳ ಮೇಲೆ 25% ರಷ್ಟು ತೆರಿಗೆ ವಿಧಿಸುವ ಕಡತಕ್ಕೆ ಸಹಿ ಹಾಕುವುದಾಗಿ ಟ್ರಂಪ್ ಪ್ರಕಟಿಸಿದ್ದಾರೆ.

    ಕಾನೂನುಬಾಹಿರವಾದ ಮಾದಕವಸ್ತು ಸರಬರಾಜು, ವಲಸೆಗಳಿಗೆ ವಿರುದ್ಧವಾಗಿ ತಾನು ಈ ನಿರ್ಧಾರ ತೆಗೆದುಕೊಳ್ಳೋದಾಗಿ ಟ್ರಂಪ್ ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಚೀನಾ (China) ಉತ್ಪನ್ನಗಳ ಮೇಲೆ ಹೆಚ್ಚುವರಿ 10% ಸುಂಕ ವಿಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಪಾಕ್‌ ಹಿಂಸಾಚಾರಕ್ಕೆ ನಾಲ್ವರು ಸೈನಿಕರು ಸೇರಿ 5 ಸಾವು – ಸೇನೆಯಿಂದ ಕಂಡಲ್ಲಿ ಗುಂಡು ಆದೇಶ

    ಅಮೆರಿಕ (USA) ವಿಶ್ವದ ದೊಡ್ಡ ಆಮುದುದಾರ ದೇಶವಾಗಿದೆ. ಅಮರಿಕಕ್ಕೆ ಆಮದಾಗುವ ವಸ್ತುಗಳ ಪೈಕಿ ಕೆನಡಾ, ಚೀನಾ, ಮೆಕ್ಸಿಕೋದ ಪಾಲು 40% ಇದೆ.

    ಟ್ರಂಪ್ ಘೋಷಣೆ ಮಾಡಿದ ನಂತರ, ಅವರು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಅವರೊಂದಿಗೆ ಸುಮಾರು 10 ನಿಮಿಷಗಳ ಕಾಲ ವ್ಯಾಪಾರ ಮತ್ತು ಗಡಿ ಭದ್ರತೆಯ ಬಗ್ಗೆ ಚರ್ಚಿಸಿದ್ದಾರೆ. ಅಮೆರಿಕ-ಮೆಕ್ಸಿಕೋ ಗಡಿಗೆ ಹೋಲಿಸಿದರೆ ಕೆನಡಾದ ಗಡಿಯನ್ನು ದಾಟುವ ವಲಸಿಗರ ಸಂಖ್ಯೆ ಬಹಳ ಸಣ್ಣದು ಎಂದು ಟ್ರುಡೋ ಹೇಳಿರುವುದಾಗಿ ವರದಿಯಾಗಿದೆ.

     

  • Canada | ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ಖಲಿಸ್ತಾನಿ ಗುಂಪು ಅಟ್ಯಾಕ್‌ – ಜಸ್ಟಿನ್‌ ಟ್ರುಡೋ ಖಂಡನೆ

    Canada | ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ಖಲಿಸ್ತಾನಿ ಗುಂಪು ಅಟ್ಯಾಕ್‌ – ಜಸ್ಟಿನ್‌ ಟ್ರುಡೋ ಖಂಡನೆ

    ಒಟ್ಟಾವಾ: ಭಾರತ-ಕೆನಡಾ ರಾಜಕೀಯ ಬಿಕ್ಕಟ್ಟಿನ ನಡುವೆ ಹಿಂದೂಗಳ ಮೇಲೆ ಹಿಂಸಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದಲ್ಲಿ (Hindu Temple) ಭಕ್ತರ ಮೇಲೆ ಖಲಿಸ್ತಾನಿ ಉಗ್ರರು (Khalistani supporters) ಎನ್ನಲಾದ ಗುಂಪೊಂದು ದಾಳಿ ನಡೆಸಿದೆ.

    ಖಲಿಸ್ತಾನಿ ಧ್ವಜ (Khalistani Flag) ಹಿಡಿದ ಉಗ್ರರು ಎನ್ನಲಾದ ಗುಂಪು ದೇವಸ್ಥಾನಕ್ಕೆ ಲಗ್ಗೆಯಿಟ್ಟು ಭಕ್ತರ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ನಡೆಸಿದೆ. ಈ ಕುರಿತ ವೀಡಿಯೋಗಳು ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ವೀಡಿಯೋನಲ್ಲಿ ಖಲಿಸ್ತಾನಿ ಧ್ವಜ ಹಿಡಿದ ಗುಂಪು ದೊಣ್ಣೆ ಹಿಡಿದು ಜನರನ್ನು ಥಳಿಸುತ್ತಿರುವುದನ್ನು ಕಾಣಬಹುದು. ಇದನ್ನೂ ಓದಿ: ಅಮೆರಿಕದಲ್ಲಿ ಅಧ್ಯಕ್ಷರನ್ನು ಆಯ್ಕೆ ಮಾಡೋದು 7 ರಾಜ್ಯದ ಜನತೆ! – ಏನಿದು Swing States? ಯಾಕೆ ಇಷ್ಟೊಂದು ಮಹತ್ವ?

    ಹಿಂಸಾಚಾರದ ವಿಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ, ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇಂತಹ ಹಿಂಸಾಚಾರ ಕೃತ್ಯಗಳು ಸ್ವೀಕಾರಾರ್ಹವಲ್ಲ. ಪ್ರತಿಯೊಬ್ಬ ಕೆನಡಿಯನ್ನರು ತಮ್ಮ ನಂಬಿಕೆಯನ್ನು ಮುಕ್ತವಾಗಿ ಮತ್ತು ಸುರಕ್ಷಿತವಾಗಿ ಆಚರಿಸುವ ಹಕ್ಕನ್ನು ಹೊಂದಿದ್ದಾರೆ ಎಂದರಲ್ಲದೇ, ಸಮುದಾಯವನ್ನು ರಕ್ಷಿಸಲು ತತ್ವರಿತವಾಗಿ ಸ್ಪಂಧಿಸಿದ ಪೊಲೀಸರಿಗೆ ಧನ್ಯವಾದ ಹೇಳಿದ್ದಾರೆ.

    ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಖಲಿಸ್ತಾನಿ ಬೆಂಬಲಿಗರ ಗುಂಪು ದಾಳಿ ನಡೆಯುವ ಮೊದಲು 1984ರ ಸಿಖ್ ವಿರೋಧಿ ದಂಗೆಯನ್ನು ಸ್ಮರಿಸಲು ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಭಕ್ತರ ಮೇಲೆ ಹಲ್ಲೆ ನಡೆಸಿದೆ. ಇದನ್ನೂ ಓದಿ: ಮತ್ತೆ ಕ್ಯಾತೆ – ಭಾರತವನ್ನು ಸೈಬರ್‌ ಬೆದರಿಕೆ ಪಟ್ಟಿಗೆ ಸೇರಿಸಿದ ಕೆನಡಾ

    ಇನ್ನೂ ಇತ್ತೀಚೆಗೆ ಕೆನಡಾದ ರಾಷ್ಟ್ರೀಯ ಸೈಬರ್ ಬೆದರಿಕೆ ಮೌಲ್ಯಮಾಪನ (NCTA) 2025-26 ವರದಿ ಬಿಡುಗಡೆಯಾಗಿತ್ತು. ಕೆನಡಾದ ಸೈಬರ್ ಭದ್ರತೆಯ ತಾಂತ್ರಿಕ ಪ್ರಾಧಿಕಾರ ʻಸೈಬರ್ ಸೆಕ್ಯುರಿಟಿ ಕೇಂದ್ರʼ ಅಕ್ಟೋಬರ್ 30 ರಂದು ಈ ವರದಿ ಬಿಡುಗಡೆ ಮಾಡಿತು. ಈ ವರದಿಯಲ್ಲಿ ಭಾರತವನ್ನು ಸೈಬರ್‌ ದಾಳಿಯ ಪಟ್ಟಿಗೆ ಕೆನಡಾ ಸರ್ಕಾರ ಸೇರಿಸಿರುವುದಾಗಿ ಉಲ್ಲೇಖವಾಗಿತ್ತು.

  • ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ದೀಪಾವಳಿ ಆಚರಿಸಿದ ಕೆನಡಾ ಪ್ರಧಾನಿ

    ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ದೀಪಾವಳಿ ಆಚರಿಸಿದ ಕೆನಡಾ ಪ್ರಧಾನಿ

    ಒಟ್ಟೋವಾ: ಭಾರತ ಮತ್ತು ಅಮೆರಿಕ ರಾಷ್ಟ್ರಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಉದ್ವಿಗ್ನತೆಯ ಮಧ್ಯೆ ಕೆನಡಾದ (Canada) ಪ್ರಧಾನಿ ಜಸ್ಟಿನ್‌ ಟ್ರುಡೊ (Justin Trudeau) ದೀಪಾವಳಿ ಆಚರಿಸಿದ್ದಾರೆ.

    ದೀಪಾವಳಿಯ ಶುಭಾಶಯಗಳು! ಈ ವಾರ ಸಮುದಾಯದೊಂದಿಗೆ ಆಚರಿಸಿದ ಹಲವು ವಿಶೇಷ ಕ್ಷಣಗಳು ಎಂದು ಟ್ರೂಡೊ ಎಕ್ಸ್‌ನಲ್ಲಿನ ಪೋಸ್ಟ್‌ ಹಂಚಿಕೊಂಡಿದ್ದಾರೆ. ಆನ್‌ಲೈನ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ, ಟ್ರೂಡೊ ಅವರು ಕೆನಡಾದ ಮೂರು ಹಿಂದೂ ದೇವಾಲಯಗಳಿಂದ ಉಡುಗೊರೆಯಾಗಿ ತಮ್ಮ ಮಣಿಕಟ್ಟಿನ ಮೇಲೆ ಧಾರ್ಮಿಕ ಎಳೆಗಳನ್ನು ಕಟ್ಟಿರುವುದು ಕಂಡುಬಂದಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಅಧ್ಯಕ್ಷರನ್ನು ಆಯ್ಕೆ ಮಾಡೋದು 7 ರಾಜ್ಯದ ಜನತೆ! – ಏನಿದು Swing States? ಯಾಕೆ ಇಷ್ಟೊಂದು ಮಹತ್ವ?

    ಕಳೆದ ಕೆಲವು ತಿಂಗಳುಗಳಲ್ಲಿ ನಾನು ಮೂರು ವಿಭಿನ್ನ ಹಿಂದೂ ದೇವಾಲಯಗಳಲ್ಲಿದ್ದಾಗ ಈ ಎಳೆಗಳನ್ನು ಪಡೆದುಕೊಂಡೆ. ಎಲ್ಲರೂ ನನ್ನನ್ನು ಆಶೀರ್ವದಿಸಿದ್ದಾರೆ. ಅವುಗಳು ತಂತಾನೆ ಬೀಳುವವರೆಗೂ ನಾನು ತೆಗೆಯಲ್ಲ ಎಂದು ಟ್ರುಡೊ ತಿಳಿಸಿದ್ದಾರೆ.

    ಇಂಡೋ-ಕೆನಡಿಯನ್ ಸಮುದಾಯವಿಲ್ಲದೆ ಕೆನಡಾದಲ್ಲಿ ದೀಪಾವಳಿ ಸಾಧ್ಯವಿಲ್ಲ. ಇಂಡೋ-ಕೆನಡಿಯನ್ನರು ಕೆನಡಾದ ಅತ್ಯುತ್ತಮ ನಾಗರಿಕರು. ಕಲಾವಿದರು, ಉದ್ಯಮಿಗಳು, ವೈದ್ಯರು, ಶಿಕ್ಷಕರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ಮತ್ತೆ ಕ್ಯಾತೆ – ಭಾರತವನ್ನು ಸೈಬರ್‌ ಬೆದರಿಕೆ ಪಟ್ಟಿಗೆ ಸೇರಿಸಿದ ಕೆನಡಾ

  • ಮತ್ತೆ ಕ್ಯಾತೆ – ಭಾರತವನ್ನು ಸೈಬರ್‌ ಬೆದರಿಕೆ ಪಟ್ಟಿಗೆ ಸೇರಿಸಿದ ಕೆನಡಾ

    ಮತ್ತೆ ಕ್ಯಾತೆ – ಭಾರತವನ್ನು ಸೈಬರ್‌ ಬೆದರಿಕೆ ಪಟ್ಟಿಗೆ ಸೇರಿಸಿದ ಕೆನಡಾ

    ಒಟ್ಟಾವಾ: ಖಲಿಸ್ತಾನಿ (Khalistan) ಉಗ್ರ ಸಂಘಟನೆಯ ವಿಚಾರವನ್ನೇ ಮುಂದಿಟ್ಟುಕೊಂಡು ಭಾರತದೊಂದಿಗೆ ಪದೇ ಪದೇ ಖ್ಯಾತೆ ತೆಗೆಯುತ್ತಿರುವ ಕೆನಡಾದ (Canada), ಈಗ ಮತ್ತೊಂದು ಕುಚೇಷ್ಟೆ ಮಾಡಿದೆ. ಕೆನಡಾ ಸರ್ಕಾರ ಭಾರತವನ್ನು ಸೈಬರ್‌ ಬೆದರಿಕೆ ಪಟ್ಟಿಗೆ (Cyber Adversary Label) ಸೇರಿಸಿದೆ. ತನ್ನ ವಿರುದ್ಧ ಭಾರತ ಸರ್ಕಾರ ಪ್ರಾಯೋಜಿತ ಬೇಹುಗಾರಿಕೆ ನಡೆಯಬಹುದು ಎಂದು ಆರೋಪಿಸಿದೆ.

    ಕೆನಡಾ ಸರ್ಕಾರದ ಈ ನಡೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಕೆನಡಾದ ರಾಷ್ಟ್ರೀಯ ಸೈಬರ್ ಬೆದರಿಕೆ ಮೌಲ್ಯಮಾಪನ (NCTA) 2025-26 ವರದಿ ಬಿಡುಗಡೆಯಾಗಿದೆ. ಕೆನಡಾದ ಸೈಬರ್ ಭದ್ರತೆಯ ತಾಂತ್ರಿಕ ಪ್ರಾಧಿಕಾರ ʻಸೈಬರ್ ಸೆಕ್ಯುರಿಟಿ ಕೇಂದ್ರʼ ಅಕ್ಟೋಬರ್ 30 ರಂದು ಈ ವರದಿ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಇಸ್ರೇಲ್‌ ಮೇಲೆ ದಾಳಿ ಬೆದರಿಕೆ – ಇರಾನ್ ಸರ್ವೋಚ್ಚ ನಾಯಕನ ಎಕ್ಸ್‌ ಖಾತೆ ಅಮಾನತು

    ಅದರಲ್ಲಿ, ಚೀನಾ, ರಷ್ಯಾ, ಇರಾನ್ ಮತ್ತು ಉತ್ತರ ಕೊರಿಯಾದ ನಂತರದ ಸ್ಥಾನದಲ್ಲಿ ಭಾರತವನ್ನು ಹೆಸರಿಸಲಾಗಿದೆ. ಬೇಹುಗಾರಿಕೆ ಉದ್ದೇಶದಿಂದ ಭಾರತ ಪ್ರಾಯೋಜಿತ ವ್ಯಕ್ತಿಗಳು ಕೆನಡಾ ಸರ್ಕಾರದ ನೆಟ್‌ವರ್ಕ್‌ಗಳಿಗೆ ಬೆದರಿಕೆಯೊಡ್ಡುವ ಸಾಧ್ಯತೆ ಇದೆ ಎಂದು ಅಂದಾಜಿಸಿರುವುದಾಗಿ ವರದಿಯಲ್ಲಿ ಉಲ್ಲೇಖಿಸಿದೆ. ಅಂದಹಾಗೆ, 2018, 2020 ಮತ್ತು 2023-24ರಲ್ಲಿ ಪ್ರಕಟವಾಗಿದ್ದ ವರದಿಗಳಲ್ಲಿ ಭಾರತದ ಹೆಸರು ಉಲ್ಲೇಖವಾಗಿರಲಿಲ್ಲ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಕೆನಡಾದ ರಾಷ್ಟ್ರೀಯ ಸೈಬರ್ ಬೆದರಿಕೆ ಮೌಲ್ಯಮಾಪನ 2025-2026 ವರದಿಯನ್ನು ಟೀಕಿಸಿದ್ದಾರೆ. ಭಾರತ ಇಡೀ ವಿಶ್ವದಲ್ಲಿ ಶಾಂತಿ ಕಾಪಾಡಲು ಪ್ರಯತ್ನಿಸುತ್ತಿದೆ. ಆದ್ರೆ ಕೆನಡಾ ಯಾವುದೇ ಪುರಾವೆಗಳಿಲ್ಲದೇ ಆರೋಪ ಮಾಡಿದೆ. ಇದು ಭಾರತದ ಮೇಲೆ ಕೆನಡಾ ದಾಳಿ ಮಾಡುವ ಮತ್ತೊಂದು ತಂತ್ರಕ್ಕೆ ಉದಾಹರಣೆಯಾಗಿದೆ, ಇದು ತಪ್ಪು ಎಂದು ಹೇಳಿದ್ದಾರೆ. ಇದನ್ನೂ ಓದಿ: ಗಡಿಯಲ್ಲಿ ಶಾಂತಿ ಸ್ಥಾಪನೆಗೆ ಭಾರತ-ಚೀನಾ ಹ್ಯಾಂಡ್‌ಶೇಕ್; ಫಲ ನೀಡುತ್ತಾ ಒಪ್ಪಂದ?

    2023ರ ಜೂನ್‌ನಲ್ಲಿ ಕೆನಡಾದಲ್ಲಿ ನಡೆದಿರುವ ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಏಜೆಂಟರ ಪಾತ್ರದ ಬಗ್ಗೆ ವಿಶ್ವಾಸಾರ್ಹ ಪುರಾವೆಗಳಿವೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ (Justin Trudeau) ವರ್ಷದ ಹಿಂದೆ ಹೇಳಿದ್ದರು.

    ಟ್ರುಡೋ ಹೇಳಿಕೆಯನ್ನು ಭಾರತ ಅಲ್ಲಗಳೆದಿದೆಯಾದರೂ, ಉಭಯ ದೇಶಗಳ ಸಂಬಂಧ ಹದಗೆಟ್ಟಿದೆ. ಏತನ್ಮಧ್ಯೆ, ಸಿಖ್ ಪ್ರತ್ಯೇಕತಾವಾದಿಗಳನ್ನು ಹತ್ಯೆಗೈಯುವ ಸಂಚಿನಲ್ಲಿ ಅಮಿತ್ ಶಾ ಅವರ ಕೈವಾಡವಿದೆ ಎಂದು ಕೆನಡಾದ ಸಚಿವರೊಬ್ಬರು ಇತ್ತೀಚೆಗೆ ಆರೋಪಿಸಿರುವುದು, ಪರಿಸ್ಥಿತಿಯನ್ನು ಇನ್ನಷ್ಟು ಜಟಿಲಗೊಳಿಸಿದೆ. ಇದನ್ನೂ ಓದಿ: ಇಸ್ರೇಲ್‌ಗೆ ನಮ್ಮ ಶಕ್ತಿ ಏನೆಂದು ತೋರಿಸಬೇಕು: ಮತ್ತೆ ಯುದ್ಧದ ಎಚ್ಚರಿಕೆ ನೀಡಿದ ಇರಾನ್‌ ಸುಪ್ರೀಂ ಲೀಡರ್‌