Tag: K. Chandrasekhara Rao

  • ಎಸ್‍ಟಿ ಮೀಸಲಾತಿಯನ್ನು ಶೇ.6 ರಿಂದ ಶೇ.10ಕ್ಕೆ ಹೆಚ್ಚಿಸುತ್ತೇವೆ: ಕೆಸಿಆರ್

    ಎಸ್‍ಟಿ ಮೀಸಲಾತಿಯನ್ನು ಶೇ.6 ರಿಂದ ಶೇ.10ಕ್ಕೆ ಹೆಚ್ಚಿಸುತ್ತೇವೆ: ಕೆಸಿಆರ್

    ಹೈದರಾಬಾದ್: ತೆಲಂಗಾಣ (Telangana) ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ (ಕೆಸಿಆರ್) (Chief Minister K Chandrashekar Rao) ಅವರು ಪರಿಶಿಷ್ಟ ಪಂಗಡಗಳ(Scheduled Tribes) ಮೀಸಲಾತಿಯನ್ನು (Reservations)  ಶೇ. 4 ರಿಂದ ಶೇ. 10ಕ್ಕೆ ಏರಿಸುವುದಾಗಿ ಘೋಷಿಸಿದ್ದಾರೆ. ಮುಂದಿನ ವಾರದೊಳಗೆ ಈ ನೀತಿ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

    ಹೈದರಾಬಾದ್‍ನ ಎನ್‍ಟಿಆರ್ (NTR) ಕ್ರೀಡಾಂಗಣದಲ್ಲಿ ಶನಿವಾರ ನಡೆದ ‘ಬುಡಕಟ್ಟು ಆತ್ಮೀಯ ಸಮ್ಮೇಳನ’ದಲ್ಲಿ (Tribal Athmiya Sammelanam) ಮಾತನಾಡಿದ ಅವರು, ನಾನು ಇಂದು ತುಂಬಾ ಸಂತೋಷವಾಗಿದ್ದೇನೆ. ಎಲ್ಲಾ ಬುಡಕಟ್ಟು ಮತ್ತು ಆದಿವಾಸಿ ಬುಡಕಟ್ಟು ಜನಾಂಗದವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು. ಆದಿವಾಸಿಗಳು ಮತ್ತು ಆದಿವಾಸಿಗಳಿಗಾಗಿ ಹೈದರಾಬಾದ್ ನಗರದ ಹೃದಯಭಾಗದಲ್ಲಿರುವ ಬಂಜಾರಾ ಹಿಲ್ಸ್‌ನಲ್ಲಿ 60 ಕೋಟಿ ರೂಪಾಯಿ ವೆಚ್ಚದಲ್ಲಿ ಕುಮ್ರಂ ಭೀಮ್ ಆದಿವಾಸಿ (Kumram Bheem Adivasi ) ಮತ್ತು ಸೇವಾಲಾಲ್ ಬಂಜಾರ (Sewalal Banjara Bhavans) ಭವನಗಳನ್ನು ಪ್ರಾರಂಭಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಯುಪಿ ಸಚಿವರಿಗೆ 500 ರೂ. ದಂಡ

    ನಂತರ ಎಸ್‍ಟಿ ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸುವಂತೆ ತೆಲಂಗಾಣ ವಿಧಾನಸಭೆಯಲ್ಲಿ (Telangana assembly) ನಿರ್ಣಯ ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ. ಆದರೆ ಇದನ್ನು ಪ್ರಧಾನಿ ಮೋದಿಯವರೇ (Prime Minister Modi), ನೀವೇಕೆ ಒಪ್ಪಿಕೊಳ್ಳುತ್ತಿಲ್ಲ? ನಾನು ನಿನ್ನನ್ನು ಕೈಮುಗಿದು ಕೇಳುತ್ತಿದ್ದೇನೆ. ನಮ್ಮ ಬುಡಕಟ್ಟು ಮಸೂದೆಯನ್ನು (Tribal Bill) ಅಂಗೀಕರಿಸಿ ಮತ್ತು ರಾಷ್ಟ್ರಪತಿಗಳಿಗೆ ಕಳುಹಿಸಿ. ರಾಷ್ಟ್ರಪತಿಯೂ ಆದಿವಾಸಿಗಳ ಮಗಳು. ಆದ್ದರಿಂದ ಈ ಮಸೂದೆಯನ್ನು ಅವರು ಕಡೆಗಣಿಸುವುದಿಲ್ಲ ಎಂದರು. ಇದನ್ನೂ ಓದಿ: ಮೈಸೂರು ಜಿಲ್ಲೆ ಶಾಲೆಗಳಿಗೆ ಸೆ.26 ರಿಂದ ಅ.9ರವರೆಗೂ ದಸರಾ ರಜೆ ಘೋಷಣೆ

    ಬುಡಕಟ್ಟು ಜನಾಂಗದ ಸಮಸ್ಯೆಗಳ ಬಗ್ಗೆ ಮಾತನಾಡುವ ಅನೇಕ ಬುಡಕಟ್ಟು ಕಾರ್ಮಿಕರು (Tribal Workers), ಬುದ್ಧಿಜೀವಿಗಳು, ಕವಿಗಳು ಮತ್ತು ಬರಹಗಾರರಾಗಿದ್ದಾರೆ. 58 ವರ್ಷಗಳಿಂದ ತೆಲಂಗಾಣಕ್ಕಾಗಿ ಜಾತಿ, ಧರ್ಮ ರಹಿತ ಹೋರಾಟ ನಡೆಸಿ ಪ್ರತ್ಯೇಕ ರಾಜ್ಯವನ್ನು ಪಡೆದಿದ್ದೇವೆ. ಹಿಂದಿನ ರಾಜ್ಯದಲ್ಲಿ ಬುಡಕಟ್ಟು ಜನಸಂಖ್ಯೆಯು ಶೇ. 6 ರಷ್ಟಿತ್ತು ಮತ್ತು ಬುಡಕಟ್ಟು ಜಾತಿಯು ಕೇವಲ ಶೇ. 5 ಮೀಸಲಾತಿಯನ್ನು ಪಡೆದಿದೆ. ಆದರೆ ತೆಲಂಗಾಣದಲ್ಲಿ ಜನಸಂಖ್ಯೆಯ ಆಧಾರದ ಮೇಲೆ ಅವರ ಮೀಸಲಾತಿಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • 75ನೇ ಸ್ವಾತಂತ್ರ್ಯ ದಿನಾಚರಣೆ – 1 ಕೋಟಿಗೂ ಹೆಚ್ಚು ರಾಷ್ಟ್ರಧ್ವಜ ವಿತರಿಸಲಿರುವ ತೆಲಂಗಾಣ ಸರ್ಕಾರ

    75ನೇ ಸ್ವಾತಂತ್ರ್ಯ ದಿನಾಚರಣೆ – 1 ಕೋಟಿಗೂ ಹೆಚ್ಚು ರಾಷ್ಟ್ರಧ್ವಜ ವಿತರಿಸಲಿರುವ ತೆಲಂಗಾಣ ಸರ್ಕಾರ

    ಹೈದರಾಬಾದ್: ತೆಲಂಗಾಣ ಸರ್ಕಾರವು 75ನೇ ಸ್ವಾತಂತ್ರ್ಯ ದಿನಾಚರಣೆಗೆ ಒಂದು ಕೋಟಿಗೂ ಹೆಚ್ಚು ರಾಷ್ಟ್ರಧ್ವಜಗಳನ್ನು ವಿತರಿಸಲಿದೆ.

    ಈ ಬಾರಿಯ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತೆಲಂಗಾಣ ಸರ್ಕಾರವು “ಸ್ವತಂತ್ರ ಭಾರತ ವಜ್ರೋತ್ಸವ ದ್ವಿ ಸಪ್ತಾಹಮ್” ಅನ್ನು ಎರಡು ವಾರಗಳವರೆಗೆ ಆಚರಿಸಲಿದ್ದು, 1.20 ಕೋಟಿ ರಾಷ್ಟ್ರಧ್ವಜಗಳನ್ನು ಹಾರಿಸಲು ನಿರ್ಧರಿಸಿದೆ. ಹೀಗಾಗಿ 7 ದಿನಕ್ಕೂ ಮುನ್ನವೇ 1.20 ಕೋಟಿ ರಾಷ್ಟ್ರಧ್ವಜಗಳನ್ನು ವಿತರಿಸಲಿದೆ. ಇದನ್ನೂ ಓದಿ: ಸಂಚಾರ ದಟ್ಟಣೆ ತಡೆಗೆ ಟ್ರಾಫಿಕ್ ಡೈವರ್ಟ್- ವರ್ಕೌಟ್ ಆಗ್ತಿಲ್ಲ ಅಂತಿದ್ದಾರೆ ಸವಾರರು!

    ಶನಿವಾರ ಈ ಕುರಿತಂತೆ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ (ಕೆಸಿಆರ್) ಅವರು, ರಾಷ್ಟ್ರಭಕ್ತಿಯನ್ನು ತಿಳಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ, ದೇಶಕ್ಕಾಗಿ ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗ ಮತ್ತು ಸ್ವಾತಂತ್ರ್ಯ ಹೋರಾಟದಿಂದ ಸಿಕ್ಕ ಫಲಗಳನ್ನು ಹೊಸ ಪೀಳಿಗೆಗೆ ತಿಳಿಸಬೇಕು. ರಾಜ್ಯದ ಪ್ರತಿಯೊಂದು ಮನೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಬೇಕು. ಅದಕ್ಕಾಗಿ 1.20 ಕೋಟಿ ತ್ರಿವರ್ಣ ಧ್ವಜಗಳನ್ನು ನೀಡಲಾಗುವುದು. ಮನೆ ಮನೆಗೆ ಧ್ವಜಾರೋಹಣ, ಕ್ರೀಡಾಕೂಟಗಳು, ಪ್ರಬಂಧ ರಚನೆ, ಕವಿ ಸಮ್ಮೇಳನ (ಕವಿಗಳ ಕೂಟ) ಮತ್ತು ರಾಷ್ಟ್ರೀಯತೆಯನ್ನು ಸಾರಲು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

    ಇಂದಿನ ಪೀಳಿಗೆಯವರಿಗೆ ಸ್ವಾತಂತ್ರ್ಯ ಹೋರಾಟ, ತ್ಯಾಗ, ಅಂದಿನ ರಾಷ್ಟ್ರ ನಾಯಕರು ಹಾಗೂ ಹೋರಾಟದಲ್ಲಿ ಹುತಾತ್ಮರಾದವರ ಬಗ್ಗೆ ಅರಿವು ಮೂಡಿಸಬೇಕು. ಪ್ರತಿಯೊಬ್ಬ ತೆಲಂಗಾಣ ಪ್ರಜೆಯು ವಜ್ರಮಹೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳಬೇಕು. ಸ್ವಾತಂತ್ರ್ಯ ದಿನವನ್ನು ಹಳ್ಳಿಯಿಂದ ಪಟ್ಟಣಕ್ಕೆ ಮತ್ತು ಭಾರತದ ವೈಭವದ ಸಂದೇಶವನ್ನು ಏಕ ಭಾರತವಾಗಿ ಹರಡಿ ಎಂದಿದ್ದಾರೆ. ಇದನ್ನೂ ಓದಿ: 75 ದೇಶಗಳಲ್ಲಿ ಮಂಕಿಪಾಕ್ಸ್ – ಜಾಗತಿಕ ತುರ್ತು ಪರಿಸ್ಥಿತಿ ಘೋಷಿಸಿದ WHO

    ಗದ್ವಾಲ್, ನಾರಾಯಣಪೇಟೆ, ಸಿರಿಸಿಲ್ಲಾ, ಪೋಚಂಪಲ್ಲಿ, ಭೋಂಗೀರ್ ಮತ್ತು ವಾರಂಗಲ್‍ನ ಕೈಮಗ್ಗ ಮತ್ತು ಪವರ್ ಲೂಮ್ ಕಾರ್ಮಿಕರಿಗೆ ಧ್ವಜಗಳನ್ನು ತಯಾರಿಸಲು ಆದೇಶಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]