Tag: K G Halli

  • ಮೂರು ಕಾರಣಗಳಿಗೆ ಹೊತ್ತಿ ಉರಿಯಿತು ಬೆಂಗಳೂರು- ವಿಚಾರಣೆ ವೇಳೆ ಬಾಯಿಬಿಟ್ಟ ಕಿರಾತಕರು

    ಮೂರು ಕಾರಣಗಳಿಗೆ ಹೊತ್ತಿ ಉರಿಯಿತು ಬೆಂಗಳೂರು- ವಿಚಾರಣೆ ವೇಳೆ ಬಾಯಿಬಿಟ್ಟ ಕಿರಾತಕರು

    ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳು ಕೆಲ ವಿಚಾರಗಳನ್ನು ಬಾಯಿ ಬಿಟ್ಟಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ದೊಂಬಿ ಎಬ್ಬಿಸಿದ್ದಕ್ಕೆ ಕಾರಣಗಳನ್ನ ಕೊಟ್ಟಿದ್ದಾರೆ. ಮೂರು ಕಾರಣಗಳಿಂದಾಗಿ ಬೆಂಗಳೂರು ಹೊತ್ತಿ ಉರಿದಿದೆ ಎಂದು ತಿಳಿದು ಬಂದಿದೆ.

    ಬೆಂಗಳೂರಲ್ಲಿ ದೊಂಬಿ ಎಬ್ಬಿಸಿದ್ದಕ್ಕೆ ಕಾರಣ ಕೊಟ್ಟ ಕಿರಾತಕರು!
    1. ಎನ್‍ಆರ್ ಸಿ ಸಿಟ್ಟೇ ಬೆಂಗಳೂರು ಗಲಭೆಗೆ ಕಾರಣವಂತೆ
    2. ‘ನಮ್ಮನ್ನು ದೇಶ ಬಿಟ್ಟು ಓಡಿಸ್ತಾರೆ, ನಾವು ಹುಟ್ಟಿದ್ದು ಇಲ್ಲೇ’
    3. ‘ನಮಗೆ ಸ್ವಾತಂತ್ರ್ಯ ಇಲ್ವಾ? ನಾವ್ಯಾಕೆ ದೇಶ ಬಿಡಬೇಕು?’

    ಗಲಾಟೆ ನಡೆದ ಸ್ಥಳದಲ್ಲಿ ಮೂರು ಪ್ರಚೋದನೆಯ ಮಾತುಗಳನ್ನು ಕೇಳಿದ ಕಿಡಿಗೇಡಿಗಳು ದೊಂಬಿ ಎಬ್ಬಿಸಿದ್ದಾರೆ. ನಮ್ಮ ಕೋಪವನ್ನು ಗಲಭೆ ಮೂಲಕ ತೀರಿಸಿಕೊಂಡಿದ್ದೇವೆ ಎಂದು ಕಿಡಿಗೇಡಿಗಳು ಪೊಲೀಸರ ಮುಂದೆ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ನವೀನ್ ಆಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣದ ಕುರಿತು ಕೆಲ ಪೋಸ್ಟ್ ಮಾಡಿಕೊಂಡಿದ್ದು, ಗಲಭೆಗೆ ಕಾರಣವಾಗಿದೆ.

  • ಕೆಜಿ ಹಳ್ಳಿಯಲ್ಲಿ ಬೆಂಕಿ ಹಚ್ಚಿ ದರ್ಗಾಗೆ ಹೋದ್ರಾ ಕಿಡಿಗೇಡಿಗಳು?

    ಕೆಜಿ ಹಳ್ಳಿಯಲ್ಲಿ ಬೆಂಕಿ ಹಚ್ಚಿ ದರ್ಗಾಗೆ ಹೋದ್ರಾ ಕಿಡಿಗೇಡಿಗಳು?

    ಬೆಂಗಳೂರು: ಇತ್ತೀಚಿಗೆ ಪೊಲೀಸರನ್ನು ಅತೀ ಭೀಕರವಾಗಿ ಹತ್ಯೆ ಮಾಡಿದ್ದ ಉತ್ತರ ಪ್ರದೇಶದ ಗ್ಯಾಂಗ್‍ಸ್ಟರ್ ವಿಕಾಸ್ ದುಬೇ, ಮಾಡಿದ ಪಾಪ ತೊಳೆದುಕೊಳ್ಳಲು ತೀರ್ಥಯಾತ್ರೆ ಹೋಗಿದ್ದ. ಉಜ್ಜೈನಿನ ಮಹಾಂಕಾಳಿ ದೇಗುಲದಲ್ಲಿ ದರ್ಶನ ಪಡೆಯುವ ವೇಳೆ ಸಿಕ್ಕಿಬಿದ್ದಿದ್ದ. ಬೆಂಗಳೂರು ಗಲಭೆಯಲ್ಲಿ ಪಾಲ್ಗೊಂಡು ಸಿಕ್ಕ ಸಿಕ್ಕಿದ್ದಕ್ಕೆ ಬೆಂಕಿ ಹಚ್ಚಿದ್ದ ಪುಂಡರು ಇದೀಗ ರಾಜಧಾನಿಯಿಂದ ಎಸ್ಕೇಪ್ ಆಗಿದ್ದು, ದರ್ಗಾಗಳನ್ನು ಸುತ್ತುತ್ತಿದ್ದಾರೆ ಎನ್ನಲಾಗಿದೆ.

    ಗಲಭೆ ನಡೆದ ರಾತ್ರಿಯೇ ಊರು ಬಿಟ್ಟಿದ್ದ 50ಕ್ಕೂ ಹೆಚ್ಚು ಗಲಭೆಕೋರರು ಚಿಂತಾಮಣಿ ಸಮೀಪದ ಮುರುಗಮಲ್ಲದಲ್ಲಿರುವ ದರ್ಗಾಕ್ಕೆ ಹೋಗಿದ್ರು ಅನ್ನೋದನ್ನು ತಾಂತ್ರಿಕ ಅಂಶಗಳ ಮೂಲಕ ಪತ್ತೆ ಹಚ್ಚಲಾಗಿದೆ. ಪೊಲೀಸರು ಹಾರಿಸಿದ ಗುಂಡುಗಳಿಗೂ ಗಾಯಗೊಂಡವರ ಸಂಖ್ಯೆಗೂ ಮ್ಯಾಚ್ ಆಗ್ತಿಲ್ಲ. ಸುಮಾರು 15ಕ್ಕೂ ಹೆಚ್ಚು ಮಂದಿಗೆ ಗುಂಡು ತಾಕಿರೋ ಸಾಧ್ಯತೆಗಳಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಕೋಲಾರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರೋ ಅನುಮಾನ ವ್ಯಕ್ತವಾಗಿರೋದ್ರಿಂದ ಪೊಲೀಸರು ಆಸ್ಪತ್ರೆಗಳನ್ನು ಶೋಧಿಸುತ್ತಿದ್ದಾರೆ.

    ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಸದ್ಯ ಯುವಕರೇ ಕಾಣುತ್ತಿಲ್ಲ. ಗಲಾಟೆ ನಡೆದ ರಾತ್ರಿಯೇ ಮನೆ ಬಿಟ್ಟು ಶೇಕಡಾ 80 ರಷ್ಟು ಹುಡುಗರು ಹೋಗಿದ್ದಾರೆ. ಇತರೆ ಜಿಲ್ಲೆಗಳಲ್ಲಿ ಸಂಬಂಧಿಕರ ಮನೆಗಳಲ್ಲಿ, ಪ್ರಾರ್ಥನಾ ಮಂದಿರಗಳಲ್ಲಿ ಉಳಿದುಕೊಂಡಿರುವ ಸಾಧ್ಯತೆ ಇದೆ. ಕೇವಲ 20ರಷ್ಟು ಯುವಕರು ಮಾತ್ರ ತಮ್ಮ ತಮ್ಮ ಮನೆಗಳಲ್ಲಿಯೇ ಉಳಿದಿದ್ದಾರೆ.

  • ಬೆಂಕಿ ಹಚ್ಚಿದವರು ಕಿಡಿಗೇಡಿಗಳು, ಬಲಿಯಾದವರು ಇನ್ಯಾರೋ?- ಜಮೀರ್ ಅಹ್ಮದ್

    ಬೆಂಕಿ ಹಚ್ಚಿದವರು ಕಿಡಿಗೇಡಿಗಳು, ಬಲಿಯಾದವರು ಇನ್ಯಾರೋ?- ಜಮೀರ್ ಅಹ್ಮದ್

    ಬೆಂಗಳೂರು: ಕೆಜಿ ಹಳ್ಳಿಯಲ್ಲಿ ನಡೆದ ಗಲಾಟೆಯ ಬಗ್ಗೆ ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದು, ಬೆಂಕಿ ಹಚ್ಚಿದವರು ಕಿಡಿಗೇಡಿಗಳು, ಬಲಿಯಾದವರು ಇನ್ಯಾರೋ? ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

    ಟ್ವೀಟ್ 1: ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕದ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ. ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ.

    ಟ್ವೀಟ್ 2: ಗೋಲಿಬಾರ್ ನಿಂದ ಮೃತಪಟ್ಟ ಯುವಕರ ಮನೆಗೆ ನಿನ್ನೆ ಭೇಟಿ ನೀಡಿದ್ದೆ, ನಿಜಕ್ಕೂ ಅವರ ಕುಟುಂಬಗಳ ಪರಿಸ್ಥಿತಿ ಕಂಡು ಕಣ್ಣೀರು ಬಂತು. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ, ತಂಗಿಗೆ ಯಾರು ದಿಕ್ಕು? ಯಾರೋ ಕಿಡಿಗೇಡಿಗಳು ಕಲ್ಲು ತೂರಿ, ಬೆಂಕಿ ಹಚ್ಚಿದರು, ಬಲಿಯಾದವರು ಇನ್ಯಾರೋ. ಇದನ್ನೂ ಓದಿ: ಗೋಲಿಬಾರ್‌ಗೆ ಮೂವರು ಬಲಿ – ಮೃತಪಟ್ಟವರು ಯಾರು? ಉದ್ಯೋಗ ಏನು?

    ಟ್ವೀಟ್ 3: ಹಿರಿಯ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸಿ ಎಂದು ಕೈ ಮುಗಿದ್ದು ಮನವಿ ಮಾಡುತ್ತೇನೆ.

    ಮಂಗಳವಾರ ಮಧ್ಯರಾತ್ರಿ ಗಲಭೆ ನಿಯಂತ್ರಣಕ್ಕೆ ತರುವ ಸಲುವಾಗಿ ಪೊಲೀಸರು ನಡೆಸಿದ ಗೋಲಿಬಾರಿಗೆ ಮೂವರು ಬಲಿಯಾಗಿದ್ದರು. ಮೃತರನ್ನು ವಾಜಿದ್ ಖಾನ್, ಯಾಸೀನ್ ಖುರೇಷಿ ಮತ್ತು ಮೊಹ್ಮದ್ ಖಾನ್ ಎಂದು ಗುರುತಿಸಲಾಗಿದೆ.