Tag: K.Mahadev

  • ನಿನ್ನ ಮನೆ ಹಾಳಾಗಲಿ, ನಿನ್ನ ವಂಶ ನಾಶವಾಗಲಿ: ವೆಂಕಟೇಶ್‌ ವಿರುದ್ಧ ಶಾಸಕ ಕೆ. ಮಹದೇವ್ ಕಿಡಿ

    ನಿನ್ನ ಮನೆ ಹಾಳಾಗಲಿ, ನಿನ್ನ ವಂಶ ನಾಶವಾಗಲಿ: ವೆಂಕಟೇಶ್‌ ವಿರುದ್ಧ ಶಾಸಕ ಕೆ. ಮಹದೇವ್ ಕಿಡಿ

    ಮೈಸೂರು: ನಿನ್ನ ಮನೆ ಹಾಳಾಗಲಿ, ನಿನ್ನ ವಂಶ ನಾಶವಾಗಲಿ ಎಂದ ಮಾಜಿ ಶಾಸಕ ವೆಂಕಟೇಶ್‌ (Venkatesh) ವಿರುದ್ಧ ಜೆಡಿಎಸ್ (JDS) ಶಾಸಕ ಕೆ ಮಹದೇವ್ (K Mahadev) ಆಕ್ರೋಶ ಹೊರಹಾಕಿದರು.

    ಪಿರಿಯಾಪಟ್ಟಣದ (Periyapatna) ನಾಡ ಅಧಿದೇವತೆ ಮಸಣಿಮ್ಮ ದೇವಾಲಯ ವಾರ್ಷಿಕೋತ್ಸವದ ನಡೆಯುತ್ತಿರುವ ಸಂದರ್ಭದಲ್ಲಿ ಹಾಲಿ ಶಾಸಕ ಹಾಗೂ ಮಾಜಿ ಶಾಸಕರ ನಡುವೆ ಆಣೆ ಪ್ರಮಾಣದ ವಾರ್ ನಡೆಯುತ್ತಿದೆ. ಮಸಣಿಮ್ಮ ದೇವಾಲಯದ ಹಣವನ್ನು ಶಾಸಕ ಕೆ.ಮಹದೇವ್ ಅವರು ದುರುಪಯೋಗ ಮಾಡಿದ್ದಾರೆ ಎಂದು ಮಾಜಿ ಶಾಸಕ ವೆಂಕಟೇಶ್ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮಾಜಿ ಶಾಸಕ ವೆಂಕಟೇಶ್ ಅವರ ವಿರುದ್ಧ ಶಾಸಕ ಮಹದೇವ್‌ ವಾಗ್ದಾಳಿ ನಡೆಸಿದರು.

    ಈ ಬಗ್ಗೆ ಮಾತನಾಡಿದ ಶಾಸಕ, ದೇವಾಲಯ ಹಣದಲ್ಲಿ ಒಂದು ರೂ. ಲೂಟಿ ಮಾಡಿದ್ರು ಆ ದೇವತೆ ತನಗೆ ಶಿಕ್ಷೆ ನೀಡಲಿ. ಮಾಜಿ ಶಾಸಕ ವೆಂಕಟೇಶ್‌ ಅವರಿಗೆ ನಾನು ಬಹಿರಂಗವಾಗಿ ಆಹ್ವಾನ ನೀಡುತ್ತಿದ್ದೇನೆ‌. ದೇವಾಲಯಕ್ಕೆ ಇಬ್ಬರು ಬಂದು ತಾಯಿ ಎದುರು ಇಬ್ಬರು ಹೂವಿನ ಹಾರ ಹಾಕಿಕೊಂಡು ಆಣೆ ಪ್ರಮಾಣ ಮಾಡೋಣ. ನಾನು ಏನನ್ನಾದರೂ ಹಣ ಲೂಟಿ ಮಾಡಿದರೇ ನನ್ನ ವಂಶ ನಾಶವಾಗಲಿ. ಆರೋಪದಲ್ಲಿ ಹುರುಳು ಇಲ್ಲದಿದ್ದರೇ ನಿನ್ನ ವಂಶ ಹಾಳಾಗಲಿ, ನಿನ್ನ ಮನೆ ಹಾಳಾಗಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಮಾರ್ಚ್ 11ಕ್ಕೆ ಇಡಿ ಮುಂದೆ ಹಾಜರಾಗಲಿದ್ದಾರೆ KCR ಪುತ್ರಿ ಕವಿತಾ

    ಮಾಜಿ ಶಾಸಕ ‌ವೆಂಕಟೇಶ್‌ಗೆ ದೇವರ ಮೇಲೆ ನಂಬಿಕೆಯೇ ಇಲ್ಲ. ಒಂದು ಹಣ್ಣು ಕಾಯಿ ಮಾಡಿಸದೇ ಇರುವ ವ್ಯಕ್ತಿ ಅವರು. ನಾನು ಸಂಸ್ಕಾರ ಕುಟುಂಬದಲ್ಲಿ ಹುಟ್ಟಿರುವ ವ್ಯಕ್ತಿ ಎಂದು ಪರೋಕ್ಷವಾಗಿ ವೆಂಕಟೇಶ್‌ ಅವರನ್ನು ಟೀಕಿಸಿದರು. ಇದನ್ನೂ ಓದಿ:  ಪಾರಿವಾಳದ ಕಾಲಿನಲ್ಲಿ ಕ್ಯಾಮೆರಾ – ಬೇಹುಗಾರಿಕೆ ಶಂಕೆ

  • ಕರೆದಾಕ್ಷಣ ನೈಟ್ ಡ್ಯೂಟಿಗೆ ಬರದ್ದಕ್ಕೆ ಶಾಸಕನಿಂದ ದೂರು- ವೈದ್ಯೆ ವೀಣಾಸಿಂಗ್ ಸ್ಪಷ್ಟನೆ

    ಕರೆದಾಕ್ಷಣ ನೈಟ್ ಡ್ಯೂಟಿಗೆ ಬರದ್ದಕ್ಕೆ ಶಾಸಕನಿಂದ ದೂರು- ವೈದ್ಯೆ ವೀಣಾಸಿಂಗ್ ಸ್ಪಷ್ಟನೆ

    ಬೆಂಗಳೂರು/ಮೈಸೂರು: ಕರೆದಾಕ್ಷಣ ಮನೆಗೆ ಚಿಕಿತ್ಸೆ ನೀಡಲು ಬಂದಿಲ್ಲವೆಂದು ಆರೋಪಿಸಿ ವೈದ್ಯೆ ಡಾ. ವೀಣಾಸಿಂಗ್ ವಿರುದ್ಧ ಜೆಡಿಎಸ್ ಶಾಸಕ ಕೆ. ಮಹದೇವ್ ದೂರು ದಾಖಲಿಸಿದ್ದಾರೆ. ವೈದ್ಯೆ ಡಾ. ವೀಣಾ ಸಿಂಗ್ ಅವರು ನಡೆದ ಘಟನೆಯ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದಾರೆ.

    ಸೆಪ್ಟೆಂಬರ್ 18 ರಂದು ನಾನು ತುರ್ತು ನಿಗಾ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಸುಮಾರು 100 ಹಾಸಿಗೆಗಳಿರುವ ಆಸ್ಪತ್ರೆಯಲ್ಲಿ ನಾನೊಬ್ಬಳೇ ಅಂದು ಹಾಜರಾಗಿದ್ದೆ. ಇದೇ ದಿನ ಸಂಜೆ 5.30ಕ್ಕೆ ಹೆರಿಗೆ ರೋಗಿಯೊಬ್ಬರು ದಾಖಲಾಗಿದ್ದರು. ಅಲ್ಲದೇ 8.45ರ ಸುಮಾರಿಗೆ ಅಪಘಾತದಿಂದ ಗಾಯಗೊಂಡು ಮೂವರಿಗೆ ಚಿಕಿತ್ಸೆ ನೀಡುತ್ತಿದ್ದೆ.

    ಇದೇ ಸಮಯದಲ್ಲಿ ಹೆರಿಗೆಗೆ ಆಗಮಿಸಿದ್ದ ರೋಗಿಯೊಬ್ಬರಿಗೆ ನೋವು ಕಾಣಿಸಿಕೊಂಡಿತ್ತು. ನಾನು ಅವರಿಗೆ ಹೆರಿಗೆ ಕೊಠಡಿಯಲ್ಲಿ ಚಿಕಿತ್ಸೆ ನೀಡುತ್ತಿದ್ದೆ. ಈ ವೇಳೆ ಆಸ್ಪತ್ರೆ ಸಿಬ್ಬಂದಿ ಗಿರಿಜಾ ಎಂಬವರು ಬಂದು, ಎಂಎಲ್‍ಎ ಅವರಿಗೆ ಹುಷಾರಿಲ್ಲ ಎಂದು ಆಟೋ ಚಾಲಕರೊಬ್ಬರು ಬಂದಿದ್ದಾರೆ ಎಂದು ಹೇಳಿದರು. ಕೂಡಲೇ ನಾನು ಅವರ ಬಳಿ ಹೋಗಿ ವಿಚಾರಿಸಿದಾಗ, ಆಟೋ ಚಾಲಕ ಶಾಸಕರಿಗೆ ಹುಷಾರಿಲ್ಲ ಬೇಗ ನನ್ನ ಜೊತೆ ಬನ್ನಿ ಎಂದು ಹೇಳಿದರು.

    ಆದರೆ ಆಸ್ಪತ್ರೆಯಲ್ಲಿ ಹೆರಿಗೆ ರೋಗಿ ಹಾಗೂ ಅಪಘಾತದಿಂದ ಗಾಯಗೊಂಡಿದ್ದವರಿಗೆ ನಾನು ಚಿಕಿತ್ಸೆ ನೀಡುತ್ತಿದ್ದೆ. ಹೀಗಾಗಿ ಶಾಸಕರ ಆರೋಗ್ಯ ತಪಾಸಣೆಗೆ ಹೋಗಲು ನಾನು ಕೂಡಲೇ ನಮ್ಮ ಮೆಡಿಕಲ್ ಆಫೀಸರ್ ಗೆ ಕರೆ ಮಾಡಿ ವಿಚಾರಿಸಿದೆ. ಅವರು ಆಟೋ ಚಾಲಕನೊಂದಿಗೆ ಮಾತನಾಡಲು ಫೋನ್ ಕೊಡಿ ಎಂದು ಹೇಳಿದರು. ಆದರೆ ಆರೋಗ್ಯಾಧಿಕಾರಿಯ ಜೊತೆ ಮಾತನಾಡಲು ಆಟೋ ಚಾಲಕ ನಿರ್ಲಕ್ಷ್ಯಿಸಿ, ಶಾಸಕರನ್ನು ಆಸ್ಪತ್ರೆಗೆ ಕರೆದುಕೊಂಡು ಬರುತ್ತಿನಿ ಎಂದು ತರಾತುರಿಯಲ್ಲಿ ಹೊರಟು ಹೋದರು. ಇದನ್ನೂ ಓದಿ: ಕರೆದಾಕ್ಷಣ `ನೈಟ್ ಡ್ಯೂಟಿ’ಗೆ ಬಾರದ ವೈದ್ಯೆ ವಿರುದ್ಧ ಜೆಡಿಎಸ್ ಶಾಸಕ ದೂರು!

    ಶಾಸಕರಿಗೆ ಹುಷಾರಿಲ್ಲ ಅವರು ಆಸ್ಪತ್ರೆಗೆ ಬರುತ್ತಾರೆಂದು ತಿಳಿದು, ನಾನು ಹಾಗೂ ಆಸ್ಪತ್ರೆಯ ಸಿಬ್ಬಂದಿ ಐಸಿಯು ಅನ್ನು ಸಿದ್ಧಪಡಿಸಿಕೊಂಡು ಅವರಿಗಾಗಿ ಕಾಯುತ್ತಿದ್ದೆವು. ಆದರೆ ಆಟೋ ಚಾಲಕ ಶಾಸಕ ಅನಾರೋಗ್ಯದ ತೀವ್ರತೆಯ ಬಗ್ಗೆ ನನಗೆ ನಿಖರವಾದ ಯಾವುದೇ ಮಾಹಿತಿ ನೀಡಿರಲಿಲ್ಲ. ಇದಾದ ನಂತರ ಸೆಪ್ಟೆಂಬರ್ 19 ರಂದು ಸ್ಥಳೀಯ ಪತ್ರಿಕೆಗಳಲ್ಲಿ ಶಾಸಕರ ಆರೋಗ್ಯ ವಿಚಾರಿಸದ ವೈದ್ಯೆ ಎಂದು ಪ್ರಕಟಿಸಿದ್ದಾಗ, ನನಗೆ ಶಾಸಕರ ಆರೋಗ್ಯದ ತೀವ್ರತೆಯ ಬಗ್ಗೆ ಅರಿವಾಯಿತು ಎಂದು ತಿಳಿಸಿದರು. ಇದನ್ನೂ ಓದಿ: ಜೆಡಿಎಸ್ ಶಾಸಕನೊಂದಿಗೆ ಕಿರಿಕ್- ಡಾ.ವೀಣಾಸಿಂಗ್ ಪಿರಿಯಾಪಟ್ಟಣದಿಂದ ಎತ್ತಂಗಡಿ?

    ಇದಾದ ಕೂಡಲೇ ಅದೇ ದಿನ ಸಂಜೆ ನಮ್ಮ ಹಿರಿಯ ಅಧಿಕಾರಿಗಳು, ನೋಡಲ್ ಅಧಿಕಾರಿಗಳೊಂದಿಗೆ ಶಾಸಕರ ಮನೆಗೆ ಹೋಗಿ ನಡೆದ ಅಚಾತುರ್ಯದ ಬಗ್ಗೆ ವಿವರಿಸಿದೆವು. ಅಲ್ಲದೇ ಆಸ್ಪತ್ರೆಯಲ್ಲಿನ ರೋಗಿಗಳ ಬಗ್ಗೆಯೂ ಮಾಹಿತಿ ನೀಡಿದೆವು. ಆದರೆ ಶಾಸಕರು ನಮ್ಮ ಮಾತನ್ನು ಅರ್ಥಮಾಡಿಕೊಳ್ಳುವ ಸ್ಥಿತಿಯಲ್ಲಿರಲಿಲ್ಲ, ಅಲ್ಲದೇ ಅವರು ಈ ಬಗ್ಗೆ ನನ್ನ ವಿರುದ್ಧ ದೂರನ್ನು ನೀಡಿದ್ದಾರೆ. ಪುನಃ ನಾನು ಅವರನ್ನು ಭೇಟಿ ಮಾಡಿದಾಗ ಅವರು ದಾಖಲಿಸಿರುವ ದೂರನ್ನು ವಾಪಸ್ ಪಡೆದುಕೊಳ್ಳುತ್ತೇನೆ ಎಂದು ಹೇಳಿದರೇ ಹೊರತು, ಕ್ಷಮಾಪಣಾ ಪತ್ರ ನೀಡುವಂತೆ ಹೇಳಿರಲಿಲ್ಲ ಎಂದು ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=LsbzC-2HiOA