Tag: k.r.pet

  • ಡಿ.ಕೆ.ಶಿವಕುಮಾರ್‌ಗಿಂತ ಫೈಟರ್ ರವಿ ಹೆಚ್ಚಾ? – ಡಿಕೆಶಿಗೆ ಅಶ್ವಥ್ ನಾರಾಯಣ್ ಟಾಂಗ್

    ಡಿ.ಕೆ.ಶಿವಕುಮಾರ್‌ಗಿಂತ ಫೈಟರ್ ರವಿ ಹೆಚ್ಚಾ? – ಡಿಕೆಶಿಗೆ ಅಶ್ವಥ್ ನಾರಾಯಣ್ ಟಾಂಗ್

    ಮಂಡ್ಯ: ಡಿ.ಕೆ.ಶಿವಕುಮಾರ್‌ಗಿಂತ (D.K.Shivakumar) ಫೈಟರ್ ರವಿ (Fighter Ravi) ಹೆಚ್ಚಾ? ಕಮ್ಮಿನಾ ಜಾಸ್ತಿನಾ ಎಂದು ಪ್ರಶ್ನಿಸುವ ಮೂಲಕ ಡಿಕೆಶಿಗೆ ಸಚಿವ ಅಶ್ವಥ್ ನಾರಾಯಣ್ (Ashwath Narayan) ಟಾಂಗ್ ಕೊಟ್ಟರು. ಆ ಮೂಲಕ ರೌಡಿಶೀಟರ್‌ಗೆ ಮೋದಿ (Narendra Modi) ನಮಸ್ಕರಿಸಿದ್ದನ್ನು ಸಮರ್ಥಿಸಿಕೊಂಡರು.

    ಮಂಡ್ಯದ (Mandya) ಕೆ.ಆರ್.ಪೇಟೆಯಲ್ಲಿ (K.R.Pet) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿಯ ಚರ್ಚೆಗಳು ಬೇಡ. ಕೆಲವು ಸಂದರ್ಭದಲ್ಲಿ ತಪ್ಪು ಆಗಿರುತ್ತದೆ. ಇವತ್ತು ಜವಾಬ್ದಾರಿಯುತವಾಗಿ ನಡೆದುಕೊಳ್ತಿದ್ದಾರೆ. ತಪ್ಪುಗಳನ್ನ ಸರಿಪಡಿಸಿಕೊಳ್ಳಲು ಅವಕಾಶ ಇದೆ. ಸಮಾಜ, ಕಾನೂನು, ಸಂವಿಧಾನದಲ್ಲಿ ಅವಕಾಶ ಇದೆ. ಅವರ ಜೀವನ ಸಂಪೂರ್ಣ ಸುಧಾರಣೆ ಆಗಿದೆ. ಒಮ್ಮೆ ಮಾಡಿದ ತಪ್ಪನ್ನೇ ಜೀವನ ಪೂರ್ತಿ ಹೇಳುತ್ತಿದ್ದರೆ ಪರಿವರ್ತನೆ ಸಾಧ್ಯವಿಲ್ಲ. ಮತ್ತೆ ಮತ್ತೆ ಆತ ಬದುಕಲು ಯೋಗ್ಯವಿಲ್ಲ ಅನ್ನೋ ರೀತಿಯಲ್ಲಿ ಬಿಂಬಿಸಬಾರದು ಎಂದು ಕಾಂಗ್ರೆಸ್ (Congress) ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಆಜಾನ್ ಹೇಳಿಕೆ ವಿರುದ್ಧ ಎಷ್ಟೇ ಪ್ರತಿರೋಧ ಬಂದ್ರೂ ನಾನು ಜನ ಸಾಮಾನ್ಯನ ನೋವು ಹೇಳೋನೆ: ಈಶ್ವರಪ್ಪ

    ಇತಿಹಾಸದಲ್ಲಿ ಉರಿಗೌಡ, ನಂಜೇಗೌಡರು ಇದ್ದರು ಎಂಬ ಸಂಪೂರ್ಣ ನಂಬಿಕೆ ನಮ್ಮದು. ಹೀಗಾಗಿ ನಮಗೆ ಉರಿಗೌಡ, ನಂಜೇಗೌಡರ ಮೇಲೆ ಅಭಿಮಾನವಿದೆ. ಅವರಿಬ್ಬರೂ ನರಹಂತಕ, ಮತಾಂಧನಾಗಿದ್ದ ಟಿಪ್ಪುವಿನಿಂದ (Tipu Sultan) ಮೈಸೂರು (Mysuru) ಪ್ರಾಂತ್ಯದ ಜನರನ್ನು ರಕ್ಷಣೆ ಮಾಡಿರುವುದು ನಮಗೆ ಹೆಮ್ಮೆ. ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಅವರ ರಕ್ಷಣೆಯಲ್ಲಿ ಇವರಿದ್ದರು. ಹೀಗಾಗಿ ನಾವು ಇವರ ಬಗ್ಗೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದೇವೆ. ಕಾಂಗ್ರೆಸ್‌ನವರಿಗೆ ಈ ಬಗ್ಗೆ ಅಭ್ಯಂತರವಿದ್ದರೆ ನನಗೆ ಗೊತ್ತಿಲ್ಲ ಎಂದರು. ಇದನ್ನೂ ಓದಿ: ಪ್ರಧಾನಿ ಉದ್ಘಾಟಿಸಿದ ಮೈಸೂರು-ಬೆಂಗಳೂರು ಹೈವೇ ಈಗಾಗ್ಲೇ ಕಿತ್ತು ಹೋಗಿದೆ: ಬಿ.ಕೆ ಹರಿಪ್ರಸಾದ್

    ಕೇವಲ ಚುನಾವಣೆ ಇಟ್ಟುಕೊಂಡು ಮತಕ್ಕಾಗಿ ಕೀಳು ಮಟ್ಟಕ್ಕೆ ಇಳಿಯುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಉರಿಗೌಡ, ನಂಜೇಗೌಡ ನಮ್ಮ ಹೆಮ್ಮೆ, ನಮ್ಮ ಅಭಿಮಾನ. ನಾವು ರಾಜಕೀಯಕ್ಕಾಗಿ ಏನನ್ನೂ ಮಾಡುವುದಿಲ್ಲ. ಜನರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಬೇಕಾ ಅಥವಾ ಟಿಪ್ಪು ಬೇಕಾ? ಕಾಂಗ್ರೆಸ್ ಪಕ್ಷದವರು ವಿಶ್ವಕಂಡ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ನೆನಪು ಮಾಡಿಕೊಳ್ಳಬೇಕು. ಯಾಕೋ ಗೊತ್ತಿಲ್ಲ, ಕಾಂಗ್ರೆಸ್‌ನವರಿಗೆ ಟಿಪ್ಪು ಸುಲ್ತಾನ್ ನೆನಪಾಗುತ್ತಾನೆ. ಮತದಾರ ಪ್ರಭುಗಳು ಜಾಗರೂಕತೆಯಿಂದ ಇದಕ್ಕೆ ಉತ್ತರ ಕೊಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: 2024ಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ದೀಪ‌ ಹಚ್ಚುವುದಕ್ಕೂ ಯಾರೂ ಸಿಗುವುದಿಲ್ಲ: ಕಾರಜೋಳ 

    ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಸಾವರ್ಕರ್ ನಮ್ಮ ಹೆಮ್ಮೆ. ಅಂತಹ ಪರಿಸ್ಥಿತಿಯಲ್ಲಿ ಈಗಿನ ಒಬ್ಬ ರಾಜಕಾರಣಿ ಒಂದು ದಿನ ಅಂಡಮಾನ್‌ನಲ್ಲಿರಲಿ. ಇವರ ತ್ಯಾಗ, ಬಲಿದಾನ, ಶೌರ್ಯ, ಪರಾಕ್ರಮ, ಸಾಮಾಜಿಕ ಕಾಳಜಿ ಸೇರಿದಂತೆ ಎಲ್ಲಾ ವ್ಯಕ್ತಿತ್ವ ಗೊತ್ತಾಗುತ್ತದೆ. ಮಹಾನ್ ಪುರುಷರ ಬಗ್ಗೆ ಹೇಳುವವನು ತಮ್ಮ ಕಾರ್ಯಗಳ ಬಗ್ಗೆ ನೋಡಬೇಕು. ಸಿದ್ದರಾಮಯ್ಯ ಯಾವತ್ತೂ ತಮ್ಮ ಆಡಳಿತ, ಅಭಿವೃದ್ಧಿಯ ಬಗ್ಗೆ ಎಲ್ಲಿಯೂ ಮಾತನಾಡುವುದಿಲ್ಲ. ಕೇವಲ ಈ ಭಾಗ್ಯ ಕೊಟ್ಟೆ, ಆ ಭಾಗ್ಯ ಕೊಟ್ಟೆ ಎನ್ನುತ್ತಾರೆ. ಇವರಿಗಿಂತ ಚನ್ನಾಗಿ ನಮ್ಮ ಸರ್ಕಾರದಲ್ಲಿ ಭಾಗ್ಯಗಳನ್ನು ಕೊಟ್ಟಿದ್ದೇವೆ. ಭ್ರಷ್ಟಾಚಾರದಲ್ಲಿ ಇದ್ದವರು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಇನ್ನಿತರರು. ಭ್ರಷ್ಟಾಚಾರದ ಪಕ್ಷ ಕಾಂಗ್ರೆಸ್ ಪಕ್ಷ ಎಂದು ಹರಿಹಾಯ್ದರು. ಇದನ್ನೂ ಓದಿ: ರಸ್ತೆ ಮಧ್ಯೆಯೇ ಯಡಿಯೂರಪ್ಪರನ್ನ ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು

    ನಮ್ಮ ಪಕ್ಷದಲ್ಲಿ ಯಾವುದೇ ಆಂತರಿಕ ಭಿನ್ನಮತವಿಲ್ಲ. ಸೋಮಣ್ಣನಾಗಲಿ ಯಾರಾಗಲಿ ಯಾವುದೇ ಭಿನ್ನಮತವಿಲ್ಲ. ಕಾಂಗ್ರೆಸ್‌ನವರು ಅವರಿಗೆ ಅರ್ಜಿ ಹಾಕಿ ರಿಜೆಕ್ಟ್ ಆಗಿದ್ದಾರೆ. ಕಾಂಗ್ರೆಸ್ ಪಕ್ಷ ಚಿಂತಾಜನಕವಾಗಿದೆ. ಕಾಂಗ್ರೆಸ್ ಪಕ್ಷ ಹಾಗೂ ನಾಯಕರಿಗೆ ಇಡೀ ದೇಶ ಹಾಗೂ ಕರ್ನಾಟಕದಲ್ಲಿ ಭವಿಷ್ಯವಿಲ್ಲ. ಇವರು ಇನ್ಯಾರಿಗೆ ಭವಿಷ್ಯ ಕೊಡುತ್ತಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಬ್ರಿಟಿಷರಿಂದ ಟಿಪ್ಪು ಮಕ್ಕಳು ಪಿಂಚಣಿ ಪಡೆಯುತ್ತಿದ್ದರು- ಬಿಜೆಪಿ  

    ಕಾಂಗ್ರೆಸ್ ಪಕ್ಷವನ್ನು ಸಿ.ಡಿ ಪಾರ್ಟಿ ಎಂದೇ ಕರೆಯುವುದು. ಇವರ ಬ್ಲ್ಯಾಕ್‌ಮೇಲ್ ಎಲ್ಲಾ ಇಲ್ಲಿ ವರ್ಕೌಟ್ ಆಗುವುದಿಲ್ಲ. ಜನ ಇವರಿಗೆ 5 ರೂಪಾಯಿಯ ಕಿಮ್ಮತ್ತು ಕೊಡುವುದಿಲ್ಲ. ಅವರು ಏನಾದರು ಇಟ್ಟುಕೊಂಡಿದ್ದರೆ ಅದನ್ನು ರಿಲೀಸ್ ಮಾಡಲಿ. ಪಾಪ ಯಾಕೆ ಸ್ಟಾಕ್ ಇಟ್ಟುಕೊಂಡಿದ್ದಾರೆ? ಈ ಸಿ.ಡಿ ಪಾರ್ಟಿಯ ಬ್ಲ್ಯಾಕ್‌ಮೇಲ್ ನಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಇದೆಲ್ಲಾ ಔಟ್‌ಲೆಟ್ ಎಂದು ಹೇಳಿದರು. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ಹೆಣ್ಣಿನ ರೂಪವಷ್ಟೇ, ಅವರ ಗುಣಗಳೇ ಬೇರೆ: ರಮೇಶ್ ಜಾರಕಿಹೊಳಿ 

    ರಾಮನಗರದಲ್ಲಿ (Ramanagara) ರಾಮಮಂದಿರದ ಭೂಮಿಪೂಜೆ ವಿಚಾರವಾಗಿ ಮಾತನಾಡಿದ ಅವರು, ಭೂಮಿಪೂಜೆ ಮಾಡಬೇಕು ಅಂದುಕೊಂಡಿದ್ದೇವೆ. ಡಿಪಿಆರ್ ಇನ್ನೂ ಸಿದ್ಧವಾಗುತ್ತಿದೆ. ಡಿಪಿಆರ್ ಸಿದ್ಧವಾದ ಕೂಡಲೇ ಭೂಮಿಪೂಜೆ ಮಾಡುವುದೆಂದು ನಿರ್ಧರಿಸಿದೆ. ಚುನಾವಣೆ ನೀತಿ ಸಂಹಿತೆ ಮುಂಚೆಯೇ ಪೂಜೆ ಮಾಡಬೇಕು ಎಂದುಕೊಂಡಿದ್ದೆ. ಭೂಮಿ ಪೂಜೆ ಮಾಡಲು ನಮ್ಮ ಪಕ್ಷ ಉತ್ಸುಕವಾಗಿದೆ. ಭೂಮಿಪೂಜೆ ಕಾರ್ಯಕ್ರಮವನ್ನು ಸಿಎಂ ರೂಪುರೇಷೆ ಮಾಡುತ್ತಾರೆ. ಯಾರನ್ನು ಆಹ್ವಾನ ಮಾಡಬೇಕು ಎಂದು ಅವರು ನಿರ್ಧಾರಿಸುತ್ತಾರೆ. 19 ರಂದು ರಾಮನಗರದಲ್ಲಿ ವಿವಿಧ ಯೋಜನೆಯ ಫಲಾನುಭವಿಗಳನ್ನು ಗುರುತಿಸಲಾಗುತ್ತದೆ ಅಷ್ಟೇ. ಇನ್ನೂ ರಾಮಮಂದಿರದ ಭೂಮಿಪೂಜೆ ನಿಗದಿಯಾಗಲಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಚುನಾವಣೆ ಬಂದ್ರೆ ಕುರುಡುಮಲೆ ವಿನಾಯಕನಿಗೆ ಎಲ್ಲಿಲ್ಲದ ಬೇಡಿಕೆ

  • ಕನಸಿನ ಯೋಜನೆ ಉದ್ಘಾಟಿಸಿ ಕಾಂಗ್ರೆಸ್ ಸೇರಲು ನಾರಾಯಣಗೌಡ ತಯಾರಿ

    ಕನಸಿನ ಯೋಜನೆ ಉದ್ಘಾಟಿಸಿ ಕಾಂಗ್ರೆಸ್ ಸೇರಲು ನಾರಾಯಣಗೌಡ ತಯಾರಿ

    ಮಂಡ್ಯ: ಜೆಡಿಎಸ್‌ನಿಂದ (JDS) ಬಿಜೆಪಿಗೆ ಬಂದು ಗೆಲುವು ಪಡೆದು ಸಚಿವರಾಗಿರುವ ನಾರಾಯಣಗೌಡ (Narayana Gowda) ಮತ್ತೆ ಪಕ್ಷಾಂತರ ಮಾಡುತ್ತಾರೆ ಎಂದು ಅವರ ಆಪ್ತ ಮೂಲಗಳು ಖಚಿತವಾಗಿ ಹೇಳುತ್ತಿವೆ. ಮಾರ್ಚ್ 16ರಂದು ಕೆಆರ್‌ಪೇಟೆಯಲ್ಲಿ (K.R.Pet) ಜರುಗುವ ನಾರಾಯಣಗೌಡರ ಕನಸಿನ ಎರಡು ಸರ್ಕಾರಿ ಕಾರ್ಯಕ್ರಮವನ್ನು ಮುಗಿಸಿ ಕೈ ಪಕ್ಷ ಸೇರಲಿದ್ದಾರೆ ಎನ್ನಲಾಗುತ್ತಿದೆ.

    ಜೆಡಿಎಸ್‌ನಲ್ಲಿ ತಮ್ಮನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಜೆಡಿಎಸ್‌ನಿಂದ ಬಿಜೆಪಿ (BJP) ಪಕ್ಷಾಂತರ ಮಾಡುವ ಮೂಲಕ ಸಮ್ಮಿಶ್ರ ಸರ್ಕಾರವನ್ನು ಕೆಡಿವಿದ ಶಾಸಕರ ಪೈಕಿ ಮಂಡ್ಯ (Mandya) ಜಿಲ್ಲೆಯ ಕೆಆರ್‌ಪೇಟೆ ಕ್ಷೇತ್ರದ ಶಾಸಕ ನಾರಾಯಣಗೌಡ ಸಹ ಒಬ್ಬರು. ಜೆಡಿಎಸ್‌ನಿಂದ ಬಿಜೆಪಿಗೆ ಹೋದ ಕಾರಣ ನಾರಾಯಣಗೌಡರ ಶಾಸಕ ಸ್ಥಾನ ಅನರ್ಹಗೊಂಡಿತು. ಬಳಿಕ ಕೆಆರ್‌ಪೇಟೆ ಉಪಚುನಾವಣೆಯಲ್ಲಿ ನಾರಾಯಣಗೌಡ ಗೆಲುವು ಪಡೆಯುವ ಮೂಲಕ ಮಂಡ್ಯ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ಬಿಜೆಪಿಯ ಗೆಲುವಿಗೆ ಪಾತ್ರರಾದರು. ಬಳಿಕ ನಾರಾಯಣಗೌಡರಿಗೆ ಬಿಜೆಪಿ ಎರಡು ಖಾತೆಯನ್ನು ನೀಡುವ ಮೂಲಕ ಸಚಿವರನ್ನಾಗಿ ಮಾಡಿತು. ಇದೀಗ ನಾರಾಯಣಗೌಡರಿಗೆ ಪಕ್ಷದಲ್ಲಿ ಏನಾಯಿತು ಏನೋ ಗೊತ್ತಿಲ್ಲ. ಬಿಜೆಪಿ ತೊರೆದು ಕಾಂಗ್ರೆಸ್‌ (Congress) ಸೇರುತ್ತೇನೆ ಎನ್ನುತ್ತಿದ್ದಾರೆ ಎಂದು ಅವರ ಆಪ್ತರೇ ಹೇಳುತ್ತಿದ್ದಾರೆ. ಇದನ್ನೂ ಓದಿ: ವಿಜಯೇಂದ್ರ ಏನಾದ್ರೂ ಮಾತಾಡಲಿ, ಅವರಿಗೆ ದೇವರು ಒಳ್ಳೆಯದನ್ನೇ ಮಾಡಲಿ: ಸೋಮಣ್ಣ 

    ಸಚಿವ ನಾರಾಯಣಗೌಡ ಗುರುವಾರ ಕೆಆರ್‌ಪೇಟೆಯಲ್ಲಿ ನಡೆಯುವ ಅವರ ಕನಸಿನ ಕೂಸಾದ 15 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅತ್ಯಾಧುನಿಕ ಒಳಾಂಗಣ ಕ್ರೀಡಾಂಗಣವನ್ನು (Indoor Stadium) ಉದ್ಘಾಟನೆಗೊಳಿಸಲಿದ್ದಾರೆ. ಬಳಿಕ ಎಂಜಿನಿಯರಿಂಗ್ ಕಾಲೇಜಿಗೆ ಮಾಜಿ ಸ್ಪೀಕರ್ ದಿ.ಕೃಷ್ಣ ಅವರ ಹೆಸರಿಟ್ಟು ನಾಮಕರಣ ಮಾಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಚುಂಚನಗಿರಿ ಶ್ರೀಗಳಾದ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸಿದ್ದು, ಸಚಿವ ಅಶ್ವಥ್ ನಾರಾಯಣ್ (Aahwath Narayan) ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಚಿವ ನಾರಾಯಣಗೌಡ ವಹಿಸಿಕೊಳ್ಳಲಿದ್ದಾರೆ. ಈ ಎರಡೂ ಕಾರ್ಯಕ್ರಮ ಮುಗಿದ ಬಳಿಕ ಅವರು ಕಾಂಗ್ರೆಸ್ ಕಡೆ ಒಲವು ತೋರಿಸುತ್ತಾರೆ ಎಂದು ಅವರ ಆಪ್ತರು ಹೇಳುತ್ತಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ ವೇಯಲ್ಲಿ ಅಪಘಾತ ನಿಯಂತ್ರಣಕ್ಕೆ ಹೈಟೆಕ್ ಟಚ್: ಸ್ಪೀಡ್ ಲಿಮಿಟ್ ಮೀರಿದ್ರೆ ಮನೆಗೆ ಬರುತ್ತೆ ನೋಟಿಸ್ 

    ನಾರಾಯಣಗೌಡ ಕಾಂಗ್ರೆಸ್ ಪಕ್ಷಕ್ಕೆ ಹೋದರೆ ಯುಗಾದಿ ಒಳಗೆ ಸೇರ್ಪಡೆ ಆಗುತ್ತಾರೆ ಎಂದು ಹೇಳಲಾಗುತ್ತಿದೆ. ಅವರ ಕನಸಿನ ಯೋಜನೆಗಳು ಉದ್ಘಾಟನೆಯಾಗಬೇಕೆಂದು ಇಷ್ಟು ದಿನ ಬಿಜೆಪಿಯಲ್ಲಿದ್ದಾರೆ, ಅವರ ಕನಸಿನ ಯೋಜನೆ ಲೋಕಾರ್ಪಣೆಗೊಂಡ ಬಳಿಕ ಕಾಂಗ್ರೆಸ್ ಸೇರ್ಪಡೆಗೊಳ್ಳುವುದು ಖಚಿತ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಅನ್ಯಕೋಮಿನವರ ವ್ಯಾಪಾರಕ್ಕೆ ನಿರ್ಬಂಧ ಹೇರಿ – ಈಗ ಕಿಗ್ಗಾದಲ್ಲೂ ಧರ್ಮ ದಂಗಲ್ 

    ಒಟ್ಟಾರೆ ನಾರಾಯಣಗೌಡರ ಕನಸಿನ ಯೋಜಗಳು ಲೋಕಾರ್ಪಣೆಗೊಳ್ಳುವುದರ ಜೊತೆಗೆ ಮತ್ತೆ ಅವರ ಪಕ್ಷಾಂತರ ಪರ್ವಕ್ಕೆ ನಾಂದಿ ಹಾಡುತ್ತಿವೆ. ನಾರಾಯಣಗೌಡ ತಮ್ಮ ಹೆಜ್ಜೆಯನ್ನು ಬದಲಿಸುತ್ತಾರಾ ಅಥವಾ ಬಿಜೆಪಿಯಿಂದ ಹೆಜ್ಜೆ ಕೀಳುತ್ತಾರಾ ಎಂದು ಕಾದುನೋಡಬೇಕಿದೆ. ಇದನ್ನೂ ಓದಿ: ಬೇಳೂರು ರಾಘವೇಂದ್ರ ಶೆಟ್ಟಿ ಮನೆ ಹರಾಜು – ಸೆಕ್ಯುರಿಟಿ ಗಾರ್ಡ್ ಕಣ್ತಪ್ಪಿಸಿ ಅಕ್ರಮ ಪ್ರವೇಶ

  • ಕೈತಪ್ಪಿದ ಟಿಕೆಟ್‌ – ಜೆಡಿಎಸ್‌ಗೆ ಟಕ್ಕರ್‌ ಕೊಡಲು ಅತೃಪ್ತರು ರೆಡಿ

    ಕೈತಪ್ಪಿದ ಟಿಕೆಟ್‌ – ಜೆಡಿಎಸ್‌ಗೆ ಟಕ್ಕರ್‌ ಕೊಡಲು ಅತೃಪ್ತರು ರೆಡಿ

    ಮಂಡ್ಯ: ಜೆಡಿಎಸ್‌ (JDS) ಭದ್ರಕೋಟೆ ಕೆ.ಆರ್‌.ಪೇಟೆಯಲ್ಲಿ (K.R.Pet) ದಳಪತಿಗಳಿಗೆ ಮಾಸ್ಟರ್‌ ಸ್ಟ್ರೋಕ್‌ ಗ್ಯಾರಂಟಿ ಎನ್ನುವ ವಾತಾವರಣ ಸೃಷ್ಟಿಯಾಗಿದೆ. ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಜೆಡಿಎಸ್‌ಗೆ ಟಕ್ಕರ್‌ ಕೊಡಲು ಅತೃಪ್ತರು ಸಿದ್ಧತೆ ನಡೆಸಿದ್ದಾರೆ.

    ಹೆಚ್.ಟಿ.ಮಂಜು ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಹೆಚ್.ಡಿ.ರೇವಣ್ಣ (H.D.Revanna) ಬೆಂಬಲಿಗರಾದ ದೇವರಾಜ ಮತ್ತು ತಂಡದವರು ಅಸಮಾಧಾನಗೊಂಡಿದ್ದಾರೆ. ಕಳೆದ ಉಪಚುನಾವಣೆಯ ಜೆಡಿಎಸ್‌ ಪರಾಜಿತ ಅಭ್ಯರ್ಥಿ ಬಿ.ಎಲ್.ದೇವರಾಜು (B.L.Devaraj) ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ಇದೆ. ಇದನ್ನೂ ಓದಿ: Exit Polls: ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿಗೆ ಅಧಿಕಾರ – ಮೇಘಾಲಯದಲ್ಲಿ 3ನೇ ಸ್ಥಾನ

    ಶತ್ರುಗಳ ಜೊತೆ ಸೇರಿ ಜೆಡಿಎಸ್‌ ಹಣಿಯಲು ದೇವರಾಜು ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಬಂಡಾಯ ಸಭೆ ನಡೆಸಿ ಅಭ್ಯರ್ಥಿ ಬದಲಾವಣೆಗೆ ಒತ್ತಾಯಿಸಿದರೂ ವರಿಷ್ಠರಿಂದ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಜೆಡಿಎಸ್‌ ಅಭ್ಯರ್ಥಿ ಸೋಲಿಸಲು ಭಿನ್ನಮತೀಯರು ಕಾಂಗ್ರೆಸ್ ಕದ ತಟ್ಟಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಇದಕ್ಕೆ ಸಂಬಂಧಿಸಿದಂತೆ ಮಾ.1ರಂದು ದೇವರಾಜು ಅವರು ಬೆಂಬಲಿಗರು, ಹಿತೈಷಿಗಳ ತುರ್ತು ಸಭೆ ಕರೆದಿದ್ದಾರೆ. ಅಂದೇ ತಮ್ಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿದೆ. ಈ ಹಿಂದೆಯೂ ಸಹಸ್ರಾರು ಸಂಖ್ಯೆಯ ಬೆಂಬಲಿಗರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡಿದ್ದರು. ಆದರೂ ಭಿನ್ನಮತೀಯರ ಜೊತೆ ಸಂಧಾನಕ್ಕೆ ಜೆಡಿಎಸ್‌ ವರಿಷ್ಠರು ಬರಲಿಲ್ಲ. ಹೀಗಾಗಿ ದೇವರಾಜು ಸಭೆ ನಡೆಸಿ ನಿರ್ಧಾರ ಪ್ರಕಟಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: 5 ದಿನ ಸಿಸೋಡಿಯಾ CBI ವಶಕ್ಕೆ

    ಪ್ರತಿಷ್ಠೆಗೆ ಬಿದ್ದು ಬಂಡಾಯ ಮುಖಂಡರ ಮನವೊಲಿಸಲು ಮಾಜಿ ಹೆಚ್‌.ಡಿ.ಕುಮಾರಸ್ವಾಮಿ ಮುಂದಾಗಿಲ್ಲ. ಹೀಗಾಗಿ ಜೆಡಿಎಸ್‌ ನಾಯಕರ ಕಡೆಗಣನೆಗೆ ಬೇಸತ್ತು ದೇವರಾಜು ಮತ್ತು ತಂಡದವರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ.

  • ನಾಡು, ನುಡಿಗಾಗಿ ರಾಜಕಾರಣಿಗಳು ಏನೂ ಮಾಡಿಲ್ಲ.. ಕನ್ನಡ ಕಾರ್ಯಕ್ರಮಗಳಿಗೆ ಅವರನ್ನ ಕರೆಯಲ್ಲ – ಕರವೇ ಅಧ್ಯಕ್ಷ

    ನಾಡು, ನುಡಿಗಾಗಿ ರಾಜಕಾರಣಿಗಳು ಏನೂ ಮಾಡಿಲ್ಲ.. ಕನ್ನಡ ಕಾರ್ಯಕ್ರಮಗಳಿಗೆ ಅವರನ್ನ ಕರೆಯಲ್ಲ – ಕರವೇ ಅಧ್ಯಕ್ಷ

    ಮಂಡ್ಯ: ನಾಡು, ನುಡಿಗಾಗಿ ರಾಜಕಾರಣಿಗಳು ಏನನ್ನೂ ಮಾಡಿಲ್ಲ. ಹೀಗಾಗಿ ಇನ್ಮುಂದೆ ಕನ್ನಡ ಕಾರ್ಯಕ್ರಮಗಳಿಗೆ ಅವರನ್ನು ಆಹ್ವಾನಿಸುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ (T.A.Narayana Gowda) ಹೇಳಿದ್ದಾರೆ.

    ಕೆ.ಆರ್‌. ಪೇಟೆಯಲ್ಲಿ (K.R. Pet) ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಲಿಬಾಬ ಎಂದಿದ್ದಕ್ಕೆ ಬಿಜೆಪಿ ಸಚಿವ ಕೆ.ಸಿ.ನಾರಾಯಣಗೌಡ (K.C.Narayana Gowda) ಹಾಗೂ ಜೆಡಿಎಸ್‌ ಮುಖಂಡ ಸಂತೋಷ್‌ ನಡುವೆ ವೇದಿಕೆಯಲ್ಲೇ ಜಗಳವಾಯಿತು. ಈ ವೇಳೆ ಮಧ್ಯ ಪ್ರವೇಶಿಸಿದ ಮಾತನಾಡಿದ ಕರವೇ ಅಧ್ಯಕ್ಷ, ಇನ್ಮೇಲೆ ಯಾವ ರಾಜಕಾರಣಿಗಳನ್ನೂ ಕನ್ನಡ ಕಾರ್ಯಕ್ರಮಗಳಿಗೆ ಕರೆಯಲ್ಲ. ನಾನು ನಮ್ಮ ಕಾರ್ಯಕರ್ತರಿಗೆ ರಾಜಕಾರಣಿಗಳನ್ನ ದೂರವಿಡಲು ಹೇಳಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಲಿಬಾಬಗೆ ಹೋಲಿಕೆ ವಿಚಾರಕ್ಕೆ ವೇದಿಕೆಯಲ್ಲೇ ಜೆಡಿಎಸ್ ಮುಖಂಡ, ಬಿಜೆಪಿ ಸಚಿವರ ಮಧ್ಯೆ ಫೈಟ್

    ಕೆ.ಆರ್. ಪೇಟೆಯಲ್ಲಿ ಕನ್ನಡ ವೇದಿಕೆಯನ್ನ ರಾಜಕಾರಣಕ್ಕೆ ಬಳಸಿಕೊಳ್ಳಲು ಬಂದರು. ಕಾರ್ಯಕ್ರಮವನ್ನ ರಾಜಕಾರಣದಿಂದ ಹಾಳು‌ಮಾಡಲು ನೋಡಿದರು. ಕೆ.ಆರ್. ಪೇಟೆಯಲ್ಲಿ ನಡೆಯುತ್ತಿದ್ದದ್ದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ. ಅದು ಯಾವುದೇ ರಾಜಕೀಯ ಕಾರ್ಯಕ್ರಮವಲ್ಲ. ಎಲ್ಲಾ ಪಕ್ಷದ ರಾಜಕಾರಣಿಗಳು ಕಾರ್ಯಕ್ರಮಕ್ಕೆ ಬಂದಿದ್ದರು. ಜೆಡಿಎಸ್ ಮುಖಂಡ ಸಂತೋಷ್ ರಾಜಕೀಯ ಮಾತಾಡಲು ಶುರು ಮಾಡಿದ. ಕರವೇ ಕಾರ್ಯಕ್ರಮದಲ್ಲಿ ಕನ್ನಡ, ಕರ್ನಾಟಕ ಪರ ಮಾತನಾಡಿಲ್ಲ. ಅದನ್ನ ಬಿಟ್ಟು ರಾಜಕಾರಣ ಮಾಡಲು ಶುರು ಮಾಡಿದ್ರು. ನಂತರ ನಾನು ಮೈಕ್ ತೆಗೊಂಡು ಸಚಿವ ನಾರಾಯಣಗೌಡ ಹಾಗೂ ಸಂತೋಷ್‌ ಇಬ್ಬರನ್ನೂ ಸುಮ್ಮನಾಗಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ವೇದಿಕೆಯಲ್ಲಿ ಹೊಡೆದಾಟಗಳು ಆಗುತ್ತಿದ್ವು. ಅದನ್ನ ನಾನು ತಡೆದೆ. ನೀವು ರಾಜಕೀಯ ಮಾಡಬೇಕಿದ್ರೆ ನಿಮ್ಮ ವೇದಿಕೆಗಳಲ್ಲಿ ಮಾಡಿ. ನಾಡು, ನುಡಿಗೆ ಎಲ್ಲಾ ರಾಜಕೀಯ ‌ಪಕ್ಷಗಳ ಸಾಧನೆ ಶೂನ್ಯ. ಅವರ ವೇದಿಕೆಗಳಲ್ಲಿ ರಾಜಕಾರಣ ಮಾಡಿಕೊಳ್ಳಲಿ. ಕನ್ನಡದ ಕಾರ್ಯಕ್ರಮದಲ್ಲಿ ರಾಜಕಾರಣ ಮಾಡಬಾರದು ಅನ್ನೋ ತಿಳುವಳಿಕೆ ಸಚಿವರಿಗೆ ಇರಬೇಕಿತ್ತು. ಕನ್ನಡವನ್ನ ಮರೆತು ರಾಜಕೀಯ ಕೆಸರೆರೆಚಾಟ ಮಾಡಿದ್ರು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಶಾರಿಕ್‌ನನ್ನು ವಶಕ್ಕೆ ಪಡೆದ NIA ಅಧಿಕಾರಿಗಳು

    Live Tv
    [brid partner=56869869 player=32851 video=960834 autoplay=true]

  • ಅಲಿಬಾಬಗೆ ಹೋಲಿಕೆ ವಿಚಾರಕ್ಕೆ ವೇದಿಕೆಯಲ್ಲೇ ಜೆಡಿಎಸ್ ಮುಖಂಡ, ಬಿಜೆಪಿ ಸಚಿವರ ಮಧ್ಯೆ ಫೈಟ್

    ಅಲಿಬಾಬಗೆ ಹೋಲಿಕೆ ವಿಚಾರಕ್ಕೆ ವೇದಿಕೆಯಲ್ಲೇ ಜೆಡಿಎಸ್ ಮುಖಂಡ, ಬಿಜೆಪಿ ಸಚಿವರ ಮಧ್ಯೆ ಫೈಟ್

    ಮಂಡ್ಯ: ಕನ್ನಡ ರಾಜ್ಯೋತ್ಸವ (Kannada Rajyotsava) ಸಮಾರಂಭದ ವೇದಿಕೆ ಕಾರ್ಯಕ್ರಮದಲ್ಲಿ ಅಲಿಬಾಬಗೆ ಹೋಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮುಖಂಡ ಹಾಗೂ ಬಿಜೆಪಿಯ (BJP) ಸಚಿವ ನಾರಾಯಣಗೌಡ (K.C.Narayana Gowda) ನಡುವೆ ವೇದಿಕೆಯಲ್ಲೇ ಗಲಾಟೆ ನಡೆಯಿತು. ಈ ವೇಳೆ ಮಧ್ಯ ಪ್ರವೇಶಿಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ (T.A.Narayana Gowda) ಇಬ್ಬರಿಗೂ ಕ್ಲಾಸ್ ತೆಗೆದುಕೊಂಡ ಘಟನೆ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದಿದೆ.

    ಮಂಡ್ಯ (Mandya) ಜಿಲ್ಲೆಯ ಕೆ.ಆರ್. ಪೇಟೆ (K.R. Pet) ಕ್ಷೇತ್ರದಲ್ಲಿ ಇದೀಗ ಚುನಾವಣೆಗೂ ಮುನ್ನವೇ ಕೆಸರೆರಚಾಟ ಶುರುವಾಗಿದೆ. ಕರವೇಯಿಂದ ಆಯೋಜನೆ ಮಾಡಿದ್ದ ಕನ್ನಡದ ರಾಜ್ಯೋತ್ಸವದ ವೇದಿಕೆ ಕಾರ್ಯಕ್ರಮದಲ್ಲಿ ಜೆಡಿಎಸ್ (JDS) ಮುಖಂಡ ಸಂತೋಷ್ ಹಾಗೂ ಸಚಿವ ನಾರಾಯಣಗೌಡ ನಡುವೆ ಕೆಸರೆರಚಾಟ ನಡೆಯಿತು. ಇದಕ್ಕೆ ಮಧ್ಯ ಪ್ರವೇಶ ಮಾಡಿದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ದಸರಾ ಆನೆ ಬಲರಾಮನಿಗೆ ಗುಂಡೇಟು – ಫೈರಿಂಗ್‌ ಮಾಡಿದ್ದ ವ್ಯಕ್ತಿ ಬಂಧನ

    ಕೆ.ಆರ್. ಪೇಟೆ ಉಪಚುನಾವಣೆಯಲ್ಲಿ ಸಚಿವ ನಾರಾಯಣಗೌಡ ಬಿಜೆಪಿಯಿಂದ ಗೆಲುವು ಸಾಧಿಸಿದಾಗಿನಿಂದ ಜೆಡಿಎಸ್ ಮುಖಂಡರು ನಾರಾಯಣಗೌಡ ಅವರನ್ನು ಟಾರ್ಗೆಟ್ ಮಾಡುತ್ತಾ ವಾಗ್ದಾಳಿ ಮಾಡುತ್ತಲ್ಲೇ ಇದ್ದಾರೆ. ಹಾಗೆಯೇ ಕರವೇಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಸಂತೋಷ್ ಮಾತಾನಾಡುವ ವೇಳೆ, “ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಹಾಗೇಯೇ ಕೆ.ಆರ್. ಪೇಟೆಯಲ್ಲಿ ಭ್ರಷ್ಟಾಚಾರ ಇದೆ. ಎಲ್ಲರಿಗೂ ಅಲಿಬಾಬ ಮತ್ತು 40 ಕಳ್ಳರ ಕಥೆ ಗೊತ್ತು ಅಲ್ವಾ. ಹಾಗೆಯೇ ಕೆ.ಆರ್. ಪೇಟೆಯಲ್ಲಿ ಒಬ್ಬ ಅಲಿಬಾಬ ಇದ್ದಾನೆ. ಆತ ನಾಲ್ಕು ಕಳ್ಳರನ್ನು ಸಾಕಿಕೊಂಡಿದ್ದಾನೆ ” ಎಂದು ಪರೋಕ್ಷವಾಗಿ ಸಚಿವ ನಾರಾಯಣಗೌಡಗೆ ಹೇಳಿದ್ದಾರೆ. ಸಚಿವ ನಾರಾಯಣಗೌಡ ಈ ಮಾತನ್ನು ಕೇಳಿ, “ಯಾರಿಗೆ ಹೇಳ್ತಾ ಇದೀಯಾ ನೀನು. ನಾನು ಯಾವ ಭ್ರಷ್ಟಾಚಾರ ಮಾಡಿದ್ದೀನಿ. ಏನು ಮಾತಾನಾಡುತ್ತಾ ಇದೀಯಾ” ಎಂದು ಜೆಡಿಎಸ್ ಮುಖಂಡ ಸಂತೋಷ್‌ಗೆ ವೇದಿಕೆಯಲ್ಲೇ ತರಾಟೆಗೆ ತೆಗೆದುಕೊಂಡರು.

    ಈ ಹೈಡ್ರಾಮವನ್ನು ನೋಡುವವರೆಗೆ ನೋಡಿದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ, ನಿರೂಪಕನ ಕೈಯಿಂದ ಮೈಕ್ ಕಿತ್ತುಕೊಂಡು ರಾಜಕೀಯ ಮುಖಂಡರಿಗೆ ಹಾಗೂ ಕಾರ್ಯಕ್ರಮದ ಆಯೋಜಕರಿಗೆ ಕ್ಲಾಸ್ ತೆಗೆದುಕೊಂಡರು. “ರಾಜಕೀಯ ಪಕ್ಷದವರನ್ನು ಈ ಕಾರ್ಯಕ್ರಮಕ್ಕೆ ಯಾಕೆ ಕರೆದುಕೊಂಡು ಬಂದ್ರಿ. ನಾಡು-ನುಡಿಗಾಗಿ ರಾಜಕಾರಣಿಗಳು ಏನೂ ಮಾಡಿಲ್ಲ. ನಾಡು-ನುಡಿಗೆ ರಾಜಕಾರಣಿಗಳು ಜೈಲಿಗೆ ಹೋಗಿಲ್ಲ. ಎಲ್ಲಾ ರಾಜಕಾರಣಿಗಳು ವೋಟ್ ಬ್ಯಾಂಕ್ ರಾಜಕಾರಣ ಮಾಡ್ತಾರೆ. ಎಲ್ಲಾ ಭಾಷಿಕರನ್ನು ಓಲೈಸಿಕೊಂಡು ಕನ್ನಡಿಗರನ್ನು ಮರೆಯುತ್ತಾರೆ. ಬೆಳಗಾವಿಯಲ್ಲಿ 14 ಶಾಸಕರು ಇದ್ದಾರೆ. ಒಬ್ಬ ಶಾಸಕ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಕೇಳುತ್ತಿಲ್ಲ. ಇಂತಹ ರಾಜಕೀಯ ಮುಖಂಡರನ್ನು ಈ ಕಾರ್ಯಕ್ರಮಕ್ಕೆ ಕರೆದಿದ್ದೀರಾ ಎಂದು ಆಯೋಜಕರಿಗೆ ಕ್ಲಾಸ್ ತೆಗೆದುಕೊಂಡರು. ಇದನ್ನೂ ಓದಿ: ಬಸ್ ನಿಲ್ದಾಣದಲ್ಲಿ ಅಧಿಕಾರಿಗಳಿಗೆ ಮಚ್ಚು ತೋರಿಸಿದ ಪ್ರಕರಣ – ದಂಪತಿ ವಿರುದ್ಧ ರೌಡಿಶೀಟರ್ ಕೇಸ್ ಹಾಕಿ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

  • ಅ.16ಕ್ಕೆ ಮಂಡ್ಯಗೆ ಯೋಗಿ ಆದಿತ್ಯನಾಥ್‌ ಭೇಟಿ

    ಅ.16ಕ್ಕೆ ಮಂಡ್ಯಗೆ ಯೋಗಿ ಆದಿತ್ಯನಾಥ್‌ ಭೇಟಿ

    ಮಂಡ್ಯ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಅವರು ಅ.16ರಂದು ಮಂಡ್ಯ (Mandya) ಜಿಲ್ಲೆಗೆ ಆಗಮಿಸಲಿದ್ದು, ಕೆ.ಆರ್‌.ಪೇಟೆಯಲ್ಲಿ (K.R. Pet) ನಡೆಯುವ ಮಹಾಕುಂಭಮೇಳದಲ್ಲಿ (Maha Kumbh Mela) ಪಾಲ್ಗೊಳ್ಳಲಿದ್ದಾರೆ.

    ಕೆ‌.ಆರ್‌. ಪೇಟೆಯ ತ್ರಿವೇಣಿ ಸಂಗಮದಲ್ಲಿ ಅ.13ರಿಂದ ಅ.16 ರ ವರೆಗೆ ಮಹಾಕುಂಭಮೇಳ ನಡೆಯಲಿದೆ. ಮಹಾಕುಂಭಮೇಳಕ್ಕೆ ಯೋಗಿ ಆದಿತ್ಯನಾಥ್‌ ಅವರಿಗೆ ಆಹ್ವಾನ ನೀಡಲಾಗಿದೆ. ಇದನ್ನೂ ಓದಿ: ಇಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಾಂಕೇತಿಕ ಚುನಾವಣೆ

    ನಿನ್ನೆ ಲಖನೌನಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದ ಕ್ರೀಡಾ ಸಚಿವ ನಾರಾಯಣಗೌಡ‌‌‌ (Narayana Gowda) ಅವರು, ಮಹಾಕುಂಭಮೇಳಕ್ಕೆ ಆಹ್ವಾನ ನೀಡಿದ್ದರು. ಆಹ್ವಾನ‌ ಸ್ವೀಕರಿಸಿರುವ ಯೋಗಿ ಅವರು ಮಹಾಕುಂಭಮೇಳದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.

    ಇದೇ ವೇಳೆ ಆದಿಚುಂಚನಗಿರಿ, ಧರ್ಮಸ್ಥಳದ ಇತಿಹಾಸ ಹಾಗೂ ನಾಥ ಪರಂಪರೆ ಬಗ್ಗೆ ನಾರಾಯಣಗೌಡರ ಜೊತೆ ಯೋಗಿ ಅವರು ಮಾತನಾಡಿ ತಿಳಿದುಕೊಂಡಿದ್ದಾರೆ. ಇದನ್ನೂ ಓದಿ: ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್‍ನ್ಯೂಸ್ – ಮೊದಲ ಬಾರಿಗೆ ಮಿನಿ ಎಲೆಕ್ಟ್ರಿಕ್ ಬಸ್ ಸೇವೆ

    Live Tv
    [brid partner=56869869 player=32851 video=960834 autoplay=true]