Tag: K. Raghupathi Bhat

  • ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಾಗೋದಾದ್ರೆ ಸ್ವಾಗತಿಸುತ್ತೇನೆ: ರಘುಪತಿ ಭಟ್

    ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆಯಾಗೋದಾದ್ರೆ ಸ್ವಾಗತಿಸುತ್ತೇನೆ: ರಘುಪತಿ ಭಟ್

    ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿ ಸೇರ್ಪಡೆ ಆದರೆ ಸ್ವಾಗತ ಮಾಡುತ್ತೇನೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.

    ಪ್ರಮೋದ್ ಅವರು ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗುವ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಮೋದ್ ಬಿಜೆಪಿಗೆ ಬರುವ ಬಗ್ಗೆ ನನಗೆ ಮಾಹಿತಿ ಇಲ್ಲ. ನಮ್ಮ ಬಳಿ ಕೇಳಿ ಯಾರನ್ನೂ ಪಕ್ಷಕ್ಕೆ ತೆಗೆದುಕೊಳ್ಳುವುದಿಲ್ಲ. ಅವರು ಬಿಜೆಪಿ ಸೇರ್ಪಡೆ ಆದರೆ ಸ್ವಾಗತ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ಜಗನ್ ಆದೇಶಕ್ಕೆ ನಿಟ್ಟುಸಿರಿಟ್ಟ ತೆಲುಗು ಚಿತ್ರರಂಗ

    ಆಗ ಚುನಾವಣಾ ಸಂಧರ್ಭದಲ್ಲಿ ನಾನು ಅವರನ್ನು ವಿರೋಧ ಮಾಡಿದ್ದೆ. ಯಾಕೆಂದರೆ ಆಗ ನಾನು ಟಿಕೆಟ್ ಆಕಾಂಕ್ಷಿ ಆದ ಕಾರಣ ಸ್ವಾಭಾವಿಕವಾಗಿ ವಿರೋಧ ಇತ್ತು ಎಂದರು. ಇದನ್ನೂ ಓದಿ: ಸೈನ್ ಭಾಷೆ ಅರ್ಥಮಾಡಿಕೊಳ್ಳುವ ಎಐ ಮಾದರಿಯನ್ನು ರಚಿಸಿದ 20 ವರ್ಷದ ಯುವತಿ

    ಈ ವಿಚಾರವನ್ನು ಪ್ರಮೋದ್ ಮಧ್ವರಾಜ್ ಸಿಕ್ಕಾಗ ಕೇಳುತ್ತೇನೆ. ಪ್ರಮೋದ್ ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತ, ಪಕ್ಷ ಗಟ್ಟಿಯಾಗುತ್ತದೆ. ಈಗ ನಮ್ಮ ಬುಡ ಗಟ್ಟಿಯಿದೆ ಸಮಸ್ಯೆ ಇಲ್ಲ. ಅವರಿಗೆ ಪಕ್ಷದ ಗೇಟ್ ಓಪನ್ ಇದ್ದು, ಅವರು ಬರಬಹುದು ಎಂದರು.

  • ಉಡುಪಿಯ 2 ಸಾವಿರ ಎಕ್ರೆ ಹಡಿಲು ಭೂಮಿಯಲ್ಲಿ ಬೇಸಾಯ- ಕೊರೊನಾ ಕಾಲದಲ್ಲಿ ಸ್ವಾವಲಂಬಿ ಯೋಜನೆ

    ಉಡುಪಿಯ 2 ಸಾವಿರ ಎಕ್ರೆ ಹಡಿಲು ಭೂಮಿಯಲ್ಲಿ ಬೇಸಾಯ- ಕೊರೊನಾ ಕಾಲದಲ್ಲಿ ಸ್ವಾವಲಂಬಿ ಯೋಜನೆ

    ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ 2000 ಎಕ್ರೆ ಹಡಿಲು ಭೂಮಿಯನ್ನು, ಈ ಮಳೆಗಾಲದ ಆರಂಭದಲ್ಲಿ ಬಿತ್ತನೆ ಮಾಡಿ ಬೆಳೆ ತೆಗೆಯುವ ಯೋಜನೆ ಆರಂಭವಾಗಿದೆ. ಉಡುಪಿಯ ಎಲ್ಲಾ ನಗರಸಭೆ ಅವಾರ್ಡ್ ಮತ್ತು ಪಂಚಾಯತ್ ಗಳಲ್ಲಿ ಭೂಮಿಯನ್ನು ಗುರುತು ಮಾಡಲಾಗಿದೆ.

    ಉಡುಪಿಯಲ್ಲಿ ಹಮ್ಮಿಕೊಂಡಿರುವ ಹಡಿಲು ಭೂಮಿ ಕೃಷಿ ಅಂದೋಲನದಡಿ ಕೇದರೋತ್ತಾನ ಯೋಜನೆಗೆ ಸಿದ್ಧತೆ ನಡೆಯುತ್ತಿದೆ. ಮೂಡುಸಗ್ರಿ ವಾರ್ಡಿನ ಹಡಿಲು ಭೂಮಿ ಕೃಷಿ ಚಟುವಟಿಕೆಗಳನ್ನು ಶಾಸಕ ಕೆ. ರಘುಪತಿ ಭಟ್ ವೀಕ್ಷಣೆ ಮಾಡಿದರು. ಈಗ ಕೃಷಿಭೂಮಿ ಸುತ್ತಮುತ್ತಲಿನ ತೋಡುಗಳನ್ನು ಅಭಿವೃದ್ಧಿಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ

    ಮೂಡುಸಗ್ರಿಯ 1.50 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದೆ. ಊರಿನ ಹಿರಿಯರು, ಭೂ ಮಾಲಕರು ಉತ್ಸಾಹದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಯುವಕರು ಕೊರೊನಾ ಕಾಲದಲ್ಲಿ ಬೇಸಾಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

    ಪರ್ಕಳ ವಾರ್ಡಿನಲ್ಲಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಸುಮಾರು 200 ಎಕರೆ ಹಡಿಲು ಭೂಮಿ ಕೃಷಿ ಮಾಡಲಾಗುತ್ತಿದೆ. ಇಲ್ಲಿನ ಸ್ಥಳೀಯರು ಹಡಿಲು ಗದ್ದೆಯಲ್ಲಿ ತುಂಬಿಕೊಂಡಿರುವ ಪ್ಲಾಸ್ಟಿಕ್ ಬಾಟಲಿ ಗಳನ್ನು ತೆಗೆದು ಉಳುಮೆ ಕೆಲಸಕ್ಕೆ ಗದ್ದೆಯನ್ನು ಹದ ಮಾಡಿದರು. ರೈತರು ಸತ್ಯಾನ ವಹಿಸುತ್ತಿರುವ ಸವಾಲು ಕೃಷಿ ಇಲಾಖೆಯಿಂದ ಬೇಕಾಗಿರುವ ಸಾಮಾಗ್ರಿಗಳು ಬಿತ್ತನೆಬೀಜ ದ ಬಗ್ಗೆ ಮಾಹಿತಿಗಳನ್ನು ಶಾಸಕ ರಘುಪತಿ ಭಟ್ ಸಂಗ್ರಹಿಸಿದರು.

    ಶಾಸಕ ರಘುಪತಿ ಭಟ್ ಮಾತನಾಡಿ, ಸಾಂಕ್ರಾಮಿಕ ಕೊರೊನಾ ಇರುವುದರಿಂದ ಲಾಕ್‍ಡೌನ್ ಆಗಿದೆ. ಕೃಷಿ ಚಟುವಟಿಕೆಗೆ ಅವಕಾಶ ಇದೆ. ಹಡಿಲು ಬಿದ್ದಿರುವ ಫಲವತ್ತಾದ ಭೂಮಿಯಲ್ಲಿ ಮತ್ತೆ ಬೆಳೆಸುವುದು ನಮ್ಮ ಆಲೋಚನೆ. ಪ್ರತಿವರ್ಷ ಒಂದೆರಡು ಸಾವಿರ ಎಕರೆ ಹಡಿಲು ಭೂಮಿಯನ್ನು ಗುರುತಿಸಿ ಅಲ್ಲಿ ಹಸಿರು ಬಳಸುತ್ತೇವೆ. ನಮ್ಮ ಅನ್ನವನ್ನು ನಾವು ಬೆಳೆದರೆ ಅದಕ್ಕಿಂತ ದೊಡ್ಡ ಸ್ವಾವಲಂಬಿ ಬದುಕು, ಆತ್ಮನಿರ್ಭರತೆ ಮತ್ತೊಂದು ಕೆಲಸ ಇಲ್ಲ ಎಂದರು.

    ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ನಗರ ಸಭಾ ಸದಸ್ಯರಾದ ಮಂಜುನಾಥ್ ಮಣಿಪಾಲ್, ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಡಿಸೋಜ, ಸ್ಥಳೀಯರಾದ ರಂಜಿತ್ ಶೆಟ್ಟಿ ಮತ್ತು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕೆಂಪೇಗೌಡ, ಕೃಷಿ ವಿಜ್ಞಾನ ಕೇಂದ್ರದ ಹಿರಿಯ ಕ್ಷೇತ್ರ ಅಧಿಕಾರಿಗಳಾದ ಶಂಕರ್ ಹಾಗೂ ಸ್ಥಳೀಯ ಕೃಷಿಕರು ಉಪಸ್ಥಿತರಿದ್ದರು.