Tag: K Sivan

  • ಶಿವನ್ ಜೊತೆ ವಿಮಾನದ ಸಿಬ್ಬಂದಿ ಸೆಲ್ಫಿ- ಇಸ್ರೋ ಅಧ್ಯಕ್ಷರ ವಿಡಿಯೋ ವೈರಲ್

    ಶಿವನ್ ಜೊತೆ ವಿಮಾನದ ಸಿಬ್ಬಂದಿ ಸೆಲ್ಫಿ- ಇಸ್ರೋ ಅಧ್ಯಕ್ಷರ ವಿಡಿಯೋ ವೈರಲ್

    ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಅಧ್ಯಕ್ಷ ಕೆ ಶಿವನ್ ಅವರು ಇಡೀ ದೇಶದ ಜನರ ಮನಸ್ಸನ್ನು ಗೆದ್ದಿದ್ದು, ಯಾವುದೇ ಸೆಲೆಬ್ರಿಟಿಗಳಿಗೆ ಕಮ್ಮಿ ಇಲ್ಲ. ಚಂದ್ರಯಾನ 2 ಉಡಾವಣೆಯ ಸಂದರ್ಭದಲ್ಲಿ ಶಿವನ್ ಹಾಗೂ ಅವರ ತಂಡ ಪಟ್ಟ ಶ್ರಮಕ್ಕೆ ದೇಶವೇ ಹೆಮ್ಮೆ ವ್ಯಕ್ತಪಡಿಸಿದೆ.

    ಶಿವನ್ ಅವರ ವಿಡಿಯೋವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಮೂಲಕ ಅವರು ಜನರ ಹೀರೋ ಎನಿಸಿಕೊಂಡಿದ್ದಾರೆ. ಶಿವನ್ ಅವರ ಸಿಂಪ್ಲಿಸಿಟಿ ಬಗ್ಗೆ ವಿಡಿಯೋವೊಂದನ್ನು ಶೆಫಾಲಿ ವೈದ್ಯ ಎಂಬವರು ತಮ್ಮ ಟ್ವಿಟ್ಟರ್‍ನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಅಲ್ಲದೆ ಇಸ್ರೋ ಅಧ್ಯಕ್ಷ ಶಿವನ್ ಅವರನ್ನು ನೋಡಿ ಹೃದಯ ತುಂಬಿ ಬಂತು ಎಂದು ಬರೆದುಕೊಂಡಿದ್ದಾರೆ.

    ವಿಡಿಯೋದಲ್ಲೇನಿದೆ..?
    90 ಸೆಕೆಂಡಿನ ಈ ವಿಡಿಯೋದಲ್ಲಿ ಶಿವನ್ ಅವರು ಇಂಡಿಗೋ ವಿಮಾನದಲ್ಲಿರುವುದನ್ನು ಕಾಣಬಹುದು. ಶಿವನ್ ಅವರನ್ನು ಗಮನಿಸಿದ ಸಿಬ್ಬಂದಿ ಅವರನ್ನು ಮುಂಬಾಗಕ್ಕೆ ಕರೆದುಕೊಂಡು ಸೆಲ್ಫಿ ತೆಗೆದುಕೊಂಡಿದ್ದಾರೆ. ಅಲ್ಲದೆ ಸಿಬ್ಬಂದಿ ಕೈಕುಲುಕಿದ್ದಾರೆ. ಈ ವೇಳೆ ಸಿಬ್ಬಂದಿ ತಮ್ಮನ್ನು ಪರಿಚಯಿಸಿಕೊಂಡಿದ್ದಾರೆ. ನಂತರ ತನ್ನ ಸೀಟ್ ಗೆ ಬಂದು ಕುಳೀತುಕೊಂಡಿದ್ದಾರೆ. ಈ ವೇಳೆ ವಿಮಾನದಲ್ಲಿದ್ದ ಸಿಬ್ಬಂದಿ ಚಪ್ಪಾಳೆ ತಟ್ಟಿ ಇಸ್ರೋ ಅಧ್ಯಕ್ಷರ ಸಿಂಪ್ಲಿಸಿಟಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಸದ್ಯ ಈ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಹರಿದಾಡುತ್ತಿದ್ದು, ಇಸ್ರೋ ಅಧ್ಯಕ್ಷ ಸರಳತೆಯನ್ನು ಕೊಂಡಾಡಿದ್ದಾರೆ.

  • ವಿಕ್ರಮ್ ಸಂಪರ್ಕಕ್ಕೆ ಇಸ್ರೋ ಜೊತೆ ನಾಸಾ ಪ್ರಯತ್ನ- ನಾಸಾ ಯಾಕೆ ಇಷ್ಟೊಂದು ಪ್ರಯತ್ನಿಸುತ್ತಿರುವುದು?

    ವಿಕ್ರಮ್ ಸಂಪರ್ಕಕ್ಕೆ ಇಸ್ರೋ ಜೊತೆ ನಾಸಾ ಪ್ರಯತ್ನ- ನಾಸಾ ಯಾಕೆ ಇಷ್ಟೊಂದು ಪ್ರಯತ್ನಿಸುತ್ತಿರುವುದು?

    – 2.1 ಕಿ.ಮೀ ಅಲ್ಲ 400 ಮೀ. ಅಂತರದಲ್ಲಿ ಮಿಸ್ ಆದ ವಿಕ್ರಮ್

    ಬೆಂಗಳೂರು: ಚಂದ್ರಯಾನ-2ನ ವಿಕ್ರಮ್ ಲ್ಯಾಂಡರ್ ಸಂಪರ್ಕಕ್ಕೆ ಇಸ್ರೋ ಪ್ರಯತ್ನಿಸುತ್ತಿದ್ದು, ಅಮೆರಿಕಾದ ನಾಸಾ ಸಹ ವಿಕ್ರಮ್ ಗೆ ಸಂದೇಶ ರವಾನಿಸಿದೆ. ಈ ಮೂಲಕ ವಿಕ್ರಮ್ ಸಂಪರ್ಕಕ್ಕೆ ನಾಸಾ ಸಹ ಮುಂದಾಗಿದೆ. ಈ ಮೊದಲು ಸಾಫ್ಟ್ ಲ್ಯಾಂಡಿಂಗ್ ವೇಳೆ ವಿಕ್ರಮ್ ಲ್ಯಾಂಡರ್ 2.1 ಕಿ.ಮೀ. ಅಂತರದಲ್ಲಿ ಸಂಪರ್ಕ ಕಳೆದುಕೊಂಡಿತ್ತು ಎಂದು ಹೇಳಲಾಗಿತ್ತು. ಆದ್ರೆ ಕೇವಲ 400 ಮೀ. ಅಂತರದಲ್ಲಿ ವಿಕ್ರಮ್ ಸಂಪರ್ಕ ಕಳೆದುಕೊಂಡಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

    ಸೆಪ್ಟೆಂಬರ್ 7ರಂದು ಚಂದ್ರನ ಮೇಲ್ಮೈ ಸ್ಪರ್ಶಿಸಬೇಕಿದ್ದ ವಿಕ್ರಮ್ ಲ್ಯಾಂಡರ್ ಅಂತಿಮ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿತ್ತು. ಇಸ್ರೋ ವಿಜ್ಞಾನಿಗಳು ಆರ್ಬಿಟರ್ ಮೂಲಕ ವಿಕ್ರಮ್ ಸಂಪರ್ಕಿಸುವ ಪ್ರಯತ್ನವನ್ನು ಮುಂದುವರಿಸಿದ್ದಾರೆ. ಇತ್ತ ನಾಸಾ ತನ್ನ ಡಿಪ್ ಸ್ಪೇಸ್ ನೆಟ್‍ವರ್ಕ್ (ಡಿಎಸ್‍ಎನ್)ನ ಜೆಟ್ ಪ್ರಪೊಲ್ಷನ್ ಲ್ಯಾಬ್ರೋಟರಿ (ಜೆಪಿಎಲ್) ಮೂಲಕ ವಿಕ್ರಮ್ ಲ್ಯಾಂಡರ್ ಗೆ ರೇಡಿಯೋ ಸಂದೇಶವನ್ನು ಕಳುಹಿಸಿದೆ. ಇಸ್ರೋ ಒಪ್ಪಿಗೆ ನೀಡಿದ ಬಳಿಕ ನಾಸಾ ವಿಕ್ರಮ್ ಗೆ ರೇಡಿಯೋ ಸಂದೇಶವನ್ನು ಕಳುಹಿಸುವ ಮೂಲಕ ಸಂಪರ್ಕಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ವಿಕ್ರಮ್ ಲ್ಯಾಂಡರ್ ಸ್ಥಳದ ಮಾಹಿತಿ ಲಭ್ಯ: ಇಸ್ರೋ

    14 ದಿನದಲ್ಲಿ ಸಿಗುತ್ತಾ ಸಂಪರ್ಕ?
    ವಿಕ್ರಮ್ ಸಂಪರ್ಕ ಸಿಗುವ ನಿರೀಕ್ಷೆಗಳು ಕಡಿಮೆ ಆಗುತ್ತಿವೆ ಎನ್ನಲಾಗುತ್ತಿದೆ. ಚಂದ್ರನ ಮೇಲ್ಮೈನಲ್ಲಿದೆ ಎನ್ನಲಾಗಿರುವ ವಿಕ್ರಮ್ ನಿಗೆ ಕೇವಲ 14 ದಿನ ಮಾತ್ರ ಸೂರ್ಯ ಬೆಳಕು ಸಿಗಲಿದೆ. ಅಂದ್ರೆ 14 ದಿನಗಳವರೆಗೆ ಇಸ್ರೋ ಸಂಪರ್ಕ ಸಾಧಿಸಲು ಪ್ರಯತ್ನಿಸಬಹುದು. ಒಂದು ವೇಳೆ ವಿಕ್ರಮ್ ಲ್ಯಾಂಡರ್ ನಲ್ಲಿರುವ ಉಪಕರಣಗಳು ಹಾನಿಗೊಳಗಾದ್ರೆ ಸಂಪರ್ಕ ಸಾಧಿಸುವುದು ಕಷ್ಟವಾಗಲಿದೆ. ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡು 6 ದಿನಗಳು ಕಳೆದಿವೆ. 14 ದಿನಗಳ ಬಳಿಕ ಅತಿ ದೊಡ್ಡ ರಾತ್ರಿಯ ದಿನ ಬರಲಿದೆ. ಒಂದು ವೇಳೆ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್ ಮಾಡಿದ್ದರೂ ಈ ದಿನ ವಿಜ್ಞಾನಿಗಳು ಅತ್ಯಂತ ಕಷ್ಟವಾಗಿರುತಿತ್ತು. ಹಾಗಾಗಿ ಸೆಪ್ಟೆಂಬರ್ 21ರೊಳಗೆ ವಿಕ್ರಮ್ ಲ್ಯಾಂಡರ್ ಸಂಪರ್ಕಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಇದನ್ನೂ ಓದಿ:   ಅಂತಿಮ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡ ವಿಕ್ರಮ್ ಲ್ಯಾಂಡರ್ ನ ಕ್ಷಣಕ್ಷಣದ ಕೌತುಕ

    ನಾಸಾ ಕ್ಯಾಲಿಫೋರ್ನಿಯಾದ ಅಂತರೀಕ್ಷ ಕೇಂದ್ರದಿಂದ ತನ್ನ ಡಿಎಸ್‍ಎನ್ ಮೂಲಕ ವಿಕ್ರಮ್ ನಿಗೆ ರೇಡಿಯೋ ಸಂದೇಶ ಕಳುಹಿಸಿದೆ. 12 ಕಿಲೋವ್ಯಾಟ್ ರೇಡಿಯೋ ಫ್ರಿಕ್ವಿನ್ಸಿ ಮೂಲಕ ವಿಕ್ರಮ್ ನನ್ನ ಸಂಪರ್ಕಿಸಲು ಡಿಎಸ್‍ಎನ್ ಸತತವಾಗಿ ಪ್ರಯತ್ನಿಸುತ್ತಿದೆ. ಲ್ಯಾಂಡರ್ ಗೆ ಸಿಗ್ನಲ್ ಕಳುಹಿಸಿದಾಗ ಚಂದ್ರ ಒಂದು ರೇಡಿಯೋ ರಿಫ್ಲೆಕ್ಟರ್ ರೀತಿ ಕೆಲಸ ಮಾಡುತ್ತದೆ. ಕಳುಹಿಸಿದ ಸಿಗ್ನಲ್ ಮಾದರಿಯನ್ನು ಭೂಮಿಗೂ ಕಳುಹಿಸುತ್ತದೆ. ಇದನ್ನೂ ಓದಿ: ವಿಕ್ರಮ್ ಸಂಪರ್ಕ ಕಡಿತಕ್ಕೆ ಎಕ್ಸ್ಟ್ರಾ ಬ್ರೇಕ್ ಕಾರಣ ಶಂಕೆ- ಇತ್ತ ನಾಸಾ ಶ್ಲಾಘನೆ

    ಚಂದ್ರಯಾನ-2 ಮೇಲ್ಯಾಕೆ ನಾಸಾಗೆ ಆಸಕ್ತಿ?
    ಚಂದ್ರಯಾನ-2 ಯೋಜನೆ ಬಗ್ಗೆ ನಾಸಾ ಹೆಚ್ಚು ಆಸಕ್ತಿಯನ್ನು ಹೊಂದಿದ್ದು, ಇಸ್ರೋದಿಂದ ಒಪ್ಪಿಗೆ ಪಡೆದ ಮರುಕ್ಷಣದಿಂದ ವಿಕ್ರಮ್ ಸಂಪರ್ಕಕ್ಕೆ ಪ್ರಯತ್ನಿಸುತ್ತಿದೆ. ವಿಕ್ರಮ್ ಮೇಲೆ ಪ್ಯಾಸಿವ್ ಪೆಲೋಡ್ ಲೇಸರ್ ರಿಫ್ಲೇಕ್ಟರ್ ಅಳವಡಿಸಲಾಗಿದೆ. ಇದರ ಮೂಲಕ ಲ್ಯಾಂಡರ್ ನಿಗದಿತ ಸ್ಥಳ ಮತ್ತು ಅಲ್ಲಿಯ ಮಾಹಿತಿ ಲಭ್ಯವಾಗಲಿದೆ. ಚಂದ್ರನ ದಕ್ಷಿಣ ಧ್ರುವ ಮತ್ತು ಭೂಮಿಯ ನಡುವಿನ ನಿಗದಿತ ಅಂತರ ತಿಳಿಯಲಿದೆ. ಇದರಿಂದ ನಾಸಾಗೆ ಭವಿಷ್ಯದ ಯೋಜನೆಗಳಿಗೆ ಹೆಚ್ಚು ಅನಕೂಲವಾಗಲಿದೆ.

    ಚಂದ್ರಯಾನ-2ರ ಆರ್ಬಿಟರ್ 8 ಸುಧಾರಿತ ಪೇಲೋಡ್ ಒಳಗೊಂಡಿದ್ದರಿಂದ ಮಹತ್ವದ ಮಾಹಿತಿ ಮತ್ತು ಡೇಟಾ ಲಭ್ಯವಾಗಲಿದೆ. ಆರ್ಬಿಟರ್ ನಿಂದ ಸಿಕ್ಕಿರುವ ಚಂದ್ರನ 3ಡಿ ಮ್ಯಾಪಿಂಗ್ ಡೇಟಾಗಾಗಿ ನಾಸಾ ತುದಿಗಾಲಿನಲ್ಲಿ ನಿಂತಿದೆ. ಇದರ ಜೊತೆಗೆ ಈಗಾಗಲೇ ಚಂದ್ರಯಾನ-2 ಚಂದ್ರನ ದಕ್ಷಿಣ ಧ್ರುವದ ಹಲವು ಚಿತ್ರಗಳು, ವಾತಾವರಣದ ಮಾಹಿತಿಯನ್ನು ಇಸ್ರೋಗೆ ಕಳುಹಿಸಿದೆ. ಈ ಎಲ್ಲ ಮಾಹಿತಿಗಳು ನಾಸಾಗೆ ದೊರಕಿದ್ದಲ್ಲಿ, ಅದು ಕೈಗೊಂಡಿರುವ 2024ರ ಚಂದ್ರನ ದಕ್ಷಿಣ ಧ್ರುವ ತಲುಪುವ ಯೋಜನೆಯ ತಯಾರಿಗೆ ಸಹಾಯವಾಗಲಿದೆ. ದಕ್ಷಿಣ ಧ್ರುವದ ಫೋಟೋಗಳು ಲಭ್ಯವಾದ್ರೆ ನಾಸಾಗೆ ಹೆಚ್ಚು ಅನುಕೂಲವಾಗಲಿದೆ. ಇದನ್ನೂ ಓದಿ:  ಭಾರತದ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಆಗುತ್ತಿದೆ: ಭೂತಾನ್ ಪ್ರಧಾನಿ

    ಚೀನಾದಲ್ಲೂ ಅಧ್ಯಯನ:
    ಭಾರತ ದಕ್ಷಿಣ ಧ್ರುವ ತಲುಪಲು ಪ್ರಯತ್ನ ನಡೆಸುತ್ತಿದೆ. ವಿಕ್ರಮ್ ಲ್ಯಾಂಡರ್ ಹಾರ್ಡ್ ಲ್ಯಾಂಡಿಂಗ್ ಪರಿಣಾಮ ಅಂತಿಮ ಕ್ಷಣದ ಕೆಲ ಮಾಹಿತಿ ಅಲಭ್ಯವಾಗಿದೆ. ಆದರೂ ಚಂದ್ರನಲ್ಲಿಯ ಅನೇಕ ಮಾಹಿತಿಗಳು ಇಸ್ರೋಗೆ ದೊರಕಿವೆ. ಇತ್ತ ನಾಸಾ ಸಹ ಚಂದ್ರಯಾನಕ್ಕೆ ಸಿದ್ಧಗೊಳ್ಳುತ್ತಿದೆ. ಭಾರತದ ನೆರೆಯ ರಾಷ್ಟ್ರ ಸಹ ಚಂದ್ರನ ಅಂಗಳ ತಲುಪಲು ತಯಾರಿ ನಡೆಸುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಚಂದ್ರಯಾನವನ್ನು ಟೀಕಿಸಿದ ಪಾಕ್ ಸಚಿವನ ಚಳಿ ಬಿಡಿಸಿದ ನೆಟ್ಟಿಗರು

  • ವಿಕ್ರಮ್ ಲ್ಯಾಂಡರ್ ಸ್ಥಳದ ಮಾಹಿತಿ ಲಭ್ಯ: ಇಸ್ರೋ

    ವಿಕ್ರಮ್ ಲ್ಯಾಂಡರ್ ಸ್ಥಳದ ಮಾಹಿತಿ ಲಭ್ಯ: ಇಸ್ರೋ

    ಬೆಂಗಳೂರು: ವಿಕ್ರಮ್ ಲ್ಯಾಂಡರ್ ಸ್ಥಳದ ಮಾಹಿತಿ ಲಭ್ಯವಾಗಿದೆ ಎಂದು ಇಸ್ರೋ ಅಧ್ಯಕ್ಷ ಕೆ.ಶಿವನ್ ತಿಳಿಸಿದ್ದಾರೆ. ಚಂದ್ರನ ಮೇಲ್ಮೈ ಸ್ಪರ್ಶಿಸಬೇಕಿದ್ದ ವಿಕ್ರಮ್ ಲ್ಯಾಂಡರ್ ಅಂತಿಮ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿತ್ತು.

    ಆರ್ಬಿಟರ್ ವಿಕ್ರಮ್ ಲ್ಯಾಂಡರ್ ನ ಥರ್ಮಲ್ ಫೋಟೋವನ್ನು ಕ್ಲಿಕ್ಕಿಸಿದೆ. ಆದರೆ ಇದೂವರೆಗೂ ವಿಕ್ರಮ್ ಲ್ಯಾಂಡರ್ ಸಂಪರ್ಕ ಸಾಧ್ಯವಾಗಿಲ್ಲ. ಸಂಪರ್ಕಿಸುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ತಂಡ ವಿಕ್ರಮ್ ಲ್ಯಾಂಡರ್ ಸಂಪರ್ಕಿಸಲು ನಿರಂತರವಾಗಿ ಶ್ರಮಿಸುತ್ತಿದ್ದು, ಶೀಘ್ರದಲ್ಲಿಯೇ ಸಂಪರ್ಕ ಸಾಧ್ಯವಾಗಲಿದೆ ಎಂದು ಶಿವನ್ ಭರವಸೆ ನೀಡಿದ್ದಾರೆ. ಇದನ್ನೂ ಓದಿ:  ಭಾರತದ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಆಗುತ್ತಿದೆ: ಭೂತಾನ್ ಪ್ರಧಾನಿ

    ಮುಂದಿನ ಮೂರು ದಿನಗಳಲ್ಲಿ ವಿಕ್ರಮ್ ಲ್ಯಾಂಡರ್ ಎಲ್ಲಿದೆ ಮತ್ತು ಹೇಗಿದೆ ಎಂಬಿತ್ಯಾದಿಗಳ ವಿಷಯಗಳ ಮಾಹಿತಿ ಸಿಗಲಿದೆ ಎಂದು ಹಲವು ವಿಜ್ಞಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದರು. ಹಿರಿಯ ವಿಜ್ಞಾನಿಯೊಬ್ಬರು, ಮುಂದಿನ ಮೂರು ದಿನಗಳಲ್ಲಿ ವಿಕ್ರಮ್ ಲ್ಯಾಂಡರ್ ಸಂಪರ್ಕ ಸಿಗುವ ಸಾಧ್ಯತೆಗಳಿವೆ. ವಿಕ್ರಮ್ ಲ್ಯಾಂಡರ್ ಸಂಪರ್ಕ ಕಳೆದುಕೊಂಡು ಸ್ಥಳ ತಲುಪಲು ಆರ್ಬಿಟರ್ ಗೆ ಮೂರು ದಿನ ಸಮಯ ಬೇಕಾಗುತ್ತದೆ. ಕೊನೆಯ ಕ್ಷಣದಲ್ಲಿ ವಿಕ್ರಮ್ ತನ್ನ ಪಥ ಬದಲಿಸಿದ್ದರಿಂದ ಸಂಪರ್ಕ ಕಡಿತಗೊಂಡಿತು ಎಂದು ವಿವರಿಸಿದ್ದರು.

    ವಿಕ್ರಮ್ ಸಂಪರ್ಕ ಕಡಿತಕ್ಕೆ ಎಕ್ಸ್ಟ್ರಾ ಬ್ರೇಕ್ ಕಾರಣ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಆರ್ಬಿಟರ್‍ನಿಂದ ಸಾಫ್ಟ್ ಲ್ಯಾಂಡಿಂಗ್ ಮಾಡುವಾಗ ಎಕ್ಸ್ಟ್ರಾ ಹಾರ್ಡ್ ಥ್ರಸ್ಟರ್ ನಿಂದ ಒತ್ತಡ ಹೆಚ್ಚಾಗಿದೆ. ಹಾಗಾಗಿ, ಸಂಪರ್ಕ ಕಡಿತವಾಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ತಡರಾತ್ರಿಯಿಂದ ಬೆಳಗ್ಗೆ 10 ಗಂಟೆಯವರೆಗೆ ಸಂಪರ್ಕ ಸಾಧಿಸಲು ವಿಜ್ಞಾನಿಗಳ ಶತಪ್ರಯತ್ನ 

    ಆರಂಭದಲ್ಲಿ ಥ್ರಸ್ಟರ್ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ವಿಜ್ಞಾನಿಗಳು ಭಾವಿಸಿದ್ದರು. ಆದರೀಗ, ಡೇಟಾ ಪರಿಶೀಲನೆಯಲ್ಲಿ ಥ್ರಸ್ಟರ್ ಒತ್ತಡ ತಂದಿದೆ ಎನ್ನಲಾಗ್ತಿದೆ. ಚಂದ್ರಯಾನ 2 ಲ್ಯಾಂಡರ್ ಜೊತೆ ಮತ್ತೆ ಸಂಪರ್ಕ ಸಾಧಿಸಲು ಮುಂದಿನ 14 ದಿನಗಳ ಕಾಲ ನಿರಂತರ ಪ್ರಯತ್ನ ನಡೆಸಲಾಗುತ್ತಿದೆ. ಚಂದ್ರನನ್ನು ಸುತ್ತುತ್ತಿರುವ ಆರ್ಬಿಟರ್ 7 ವರ್ಷಗಳ ಕಾಲ ತನ್ನ ಕೆಲಸ ಮಾಡಲಿದೆ. ಯೋಜನೆ ಶೇ.90 ರಿಂದ 95ರಷ್ಟು ಯಶಸ್ವಿಯಾಗಿದೆ ಅಂತ ಇಸ್ರೋ ಹೇಳಿದೆ.

    ಈ ಮಧ್ಯೆ, ಇಸ್ರೋಗೆ ಅಮೆರಿಕದ ನಾಸಾ ಧೈರ್ಯ ತುಂಬಿದೆ. ಬಾಹ್ಯಾಕಾಶ ಭಾರೀ ಕಷ್ಟಕರ. ಆದರೂ, ಭಾರತದ ಸಾಧನೆ ಏನೂ ಕಡಿಮೆಯಲ್ಲ. ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುವ ಯತ್ನವನ್ನು ನಾವು ಶ್ಲಾಘಿಸುತ್ತೇವೆ. ನಿಮ್ಮ ಕಾರ್ಯದಿಂದ ನಾವು ಸ್ಫೂರ್ತಿ ಪಡೆದಿದ್ದೇವೆ. ಮುಂಬರುವ ದಿನಗಳಲ್ಲಿ ಒಟ್ಟಾಗಿ ಶ್ರಮಿಸುವ ಅವಕಾಶಕ್ಕಾಗಿ ಎದುರು ನೋಡುತ್ತಿದ್ದೇವೆ ಎಂದು ನಾಸಾ ಟ್ವೀಟ್ ಮಾಡಿದೆ. ಇದನ್ನೂ ಓದಿ:  ರೈತನ ಮಗ ಇಸ್ರೋ ರಾಕೆಟ್ ಮ್ಯಾನ್ ಆದ ಕಥೆ ಓದಿ

    ಚಂದ್ರಯಾನ-2 ಪಯಣ:
    ಶನಿವಾರ ಬೆಳಗಿನ ಜಾವ 1.39ಕ್ಕೆ ಲ್ಯಾಂಡರ್ ಚಂದ್ರನತ್ತ ಇಳಿಯುವ ಕೊನೆಯ ಸಿದ್ಧತೆ ಆರಂಭಗೊಂಡಿತ್ತು. ಇಸ್ರೋ ನಿಗದಿಪಡಿಸಿದ ಪಥದಲ್ಲೇ ಲ್ಯಾಂಡರ್ ಚಲಿಸುತಿತ್ತು. 1.48 ಕೇವಲ 6.ಕಿ.ಮೀ ದೂರದಲ್ಲಿತ್ತು. ಕೊನೆಯ ಹಂತದಲ್ಲಿ ಲ್ಯಾಂಡರ್ ವೇಗೋತ್ಕರ್ಷವನ್ನು ಕಳೆದುಕೊಂಡಿತು. ದೊಡ್ಡ ಪರದೆಯಲ್ಲಿ ಕೆಂಪು ಬಣ್ಣದ ರೇಖೆ ಸಾಗಬೇಕಾದ ದಾರಿ ತೋರಿಸುತ್ತಿದ್ದರೆ ಹಸಿರು ಬಣ್ಣ ಟ್ರಾಜೆಕ್ಟರಿ ರೇಖೆ ಕೆಂಪು ಬಣ್ಣದ ಮೇಲೆಯೇ ಹೋಗುತಿತ್ತು. 1.55ಕ್ಕೆ ಹಸಿರು ಬಣ್ಣದ ಟ್ರಾಜೆಕ್ಟರಿ ರೇಖೆ ಕೆಂಪು ಬಣ್ಣವನ್ನು ಬಿಟ್ಟು ಬೇರೆ ಕಡೆ ಹೋಗುವುದನ್ನು ನೋಡುತ್ತಿದ್ದ ವಿಜ್ಞಾನಿಗಳು ಆಂತಕಕ್ಕೆ ಒಳಗಾದರು. ಅಲ್ಲಿಯವರೆಗೆ ಸಂಭ್ರಮದಲ್ಲೇ ಇದ್ದ ವಿಜ್ಞಾನಿಗಳು ಲ್ಯಾಂಡರಿನಿಂದ ಬರುತ್ತಿರುವ ಸಿಗ್ನಲ್ ನೋಡಿ ಮುಖದಲ್ಲಿದ್ದ ಸಂಭ್ರಮ ಮರೆಯಾಗಿ ಆತಂಕ ಹೆಚ್ಚಾಯಿತು. ಏನು ನಡೆಯುತ್ತಿದೆ ಎನ್ನುವುದು ಯಾರಿಗೂ ತಿಳಿಯಲಿಲ್ಲ. ಕೊನೆಗೆ 2.17 ಕ್ಕೆ ಇಸ್ರೋ ಅಧ್ಯಕ್ಷ ಶಿವನ್ 2.1 ಕಿ.ಮೀ ದೂರದಲ್ಲಿದ್ದಾಗ ವಿಕ್ರಮ್ ಸಂಪರ್ಕ ಕಡಿತಗೊಂಡಿದೆ ಎಂದು ಬಹಳ ಗದ್ಗದಿತವಾಗಿ ಪ್ರಕಟಿಸಿ, ಸಂಪರ್ಕ ಸಾಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಅಂತಿಮ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡ ವಿಕ್ರಮ್ ಲ್ಯಾಂಡರ್ ನ ಕ್ಷಣಕ್ಷಣದ ಕೌತುಕ

    ವಿಡಿಯೋ ವೈರಲ್: ಮಂಗಳಯಾನ ಗುರಿ ಮುಟ್ಟದ್ದಕ್ಕೆ  ಬೇಸರದಲ್ಲಿದ್ದ ಶಿವನ್ ಅವರನ್ನು ಪ್ರಧಾನಿ ಮೋದಿ ಸಮಾಧಾನ ಪಡಿಸುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಇಸ್ರೋ ಕಚೇರಿಯಿಂದ ಹೊರ ಬರುತ್ತಲೇ ಪ್ರಧಾನಿ ಮೋದಿ ಅವರನ್ನು ನೋಡಿ ಇಸ್ರೋ ಮುಖ್ಯಸ್ಥ ಕೆ.ಶಿವನ್ ಕಣ್ಣೀರಿಟ್ಟರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಶಿವನ್ ಅವರನ್ನು ಅಪ್ಪಿ ಬೆನ್ನು ತಟ್ಟಿ ಸಮಾಧಾನಪಡಿಸಿದರು. ಇದನ್ನೂ ಓದಿ: ಮೋದಿ ಆಲಂಗಿಸಿ ಕಣ್ಣೀರಿಟ್ಟ ಶಿವನ್

  • ವಿಕ್ರಮ್ ಸಂಪರ್ಕ ಕಡಿತಕ್ಕೆ ಎಕ್ಸ್ಟ್ರಾ ಬ್ರೇಕ್ ಕಾರಣ ಶಂಕೆ- ಇತ್ತ ನಾಸಾ ಶ್ಲಾಘನೆ

    ವಿಕ್ರಮ್ ಸಂಪರ್ಕ ಕಡಿತಕ್ಕೆ ಎಕ್ಸ್ಟ್ರಾ ಬ್ರೇಕ್ ಕಾರಣ ಶಂಕೆ- ಇತ್ತ ನಾಸಾ ಶ್ಲಾಘನೆ

    ಬೆಂಗಳೂರು: ವಿಕ್ರಮ್ ಸಂಪರ್ಕ ಕಡಿತಕ್ಕೆ ಎಕ್ಸ್ಟ್ರಾ ಬ್ರೇಕ್ ಕಾರಣ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಆರ್ಬಿಟರ್​ನಿಂದ ಸಾಫ್ಟ್ ಲ್ಯಾಂಡಿಂಗ್ ಮಾಡುವಾಗ ಎಕ್ಸ್ಟ್ರಾ ಹಾರ್ಡ್ ಥ್ರಸ್ಟರ್ ನಿಂದ ಒತ್ತಡ ಹೆಚ್ಚಾಗಿದೆ. ಹಾಗಾಗಿ, ಸಂಪರ್ಕ ಕಡಿತವಾಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

    ಆರಂಭದಲ್ಲಿ ಥ್ರಸ್ಟರ್ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ವಿಜ್ಞಾನಿಗಳು ಭಾವಿಸಿದ್ದರು. ಆದರೀಗ, ಡೇಟಾ ಪರಿಶೀಲನೆಯಲ್ಲಿ ಥ್ರಸ್ಟರ್ ಒತ್ತಡ ತಂದಿದೆ ಎನ್ನಲಾಗ್ತಿದೆ. ಚಂದ್ರಯಾನ 2 ಲ್ಯಾಂಡರ್ ಜೊತೆ ಮತ್ತೆ ಸಂಪರ್ಕ ಸಾಧಿಸಲು ಮುಂದಿನ 14 ದಿನಗಳ ಕಾಲ ನಿರಂತರ ಪ್ರಯತ್ನ ಮಾಡುವುದಾಗಿ ಇಸ್ರೋ ಅಧ್ಯಕ್ಷ ಕೆ.ಶಿವನ್ ಹೇಳಿದ್ದಾರೆ.

    ಚಂದ್ರನನ್ನು ಸುತ್ತುತ್ತಿರುವ ಆರ್ಬಿಟರ್ 7 ವರ್ಷಗಳ ಕಾಲ ತನ್ನ ಕೆಲಸ ಮಾಡಲಿದೆ. ಯೋಜನೆ ಶೇ.90 ರಿಂದ 95ರಷ್ಟು ಯಶಸ್ವಿಯಾಗಿದೆ ಅಂತ ಇಸ್ರೋ ಹೇಳಿದೆ. ಇದನ್ನೂ ಓದಿ: ರೈತನ ಮಗ ಇಸ್ರೋ ರಾಕೆಟ್ ಮ್ಯಾನ್ ಆದ ಕಥೆ ಓದಿ

    ಈ ಮಧ್ಯೆ, ಇಸ್ರೋಗೆ ಅಮೆರಿಕದ ನಾಸಾ ಧೈರ್ಯ ತುಂಬಿದೆ. ಬಾಹ್ಯಾಕಾಶ ಭಾರೀ ಕಷ್ಟಕರ. ಆದರೂ, ಭಾರತದ ಸಾಧನೆ ಏನೂ ಕಡಿಮೆಯಲ್ಲ. ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿಯುವ ಯತ್ನವನ್ನು ನಾವು ಶ್ಲಾಘಿಸುತ್ತೇವೆ. ನಿಮ್ಮ ಕಾರ್ಯದಿಂದ ನಾವು ಸ್ಫೂರ್ತಿ ಪಡೆದಿದ್ದೇವೆ. ಮುಂಬರುವ ದಿನಗಳಲ್ಲಿ ಒಟ್ಟಾಗಿ ಶ್ರಮಿಸುವ ಅವಕಾಶಕ್ಕಾಗಿ ಎದುರು ನೋಡುತ್ತಿದ್ದೇವೆ ಎಂದು ನಾಸಾ ಟ್ವೀಟ್ ಮಾಡಿದೆ. ಇದನ್ನೂ ಓದಿ: ಮತ್ತೆ ಲ್ಯಾಂಡರ್ ಜೊತೆ ಸಂಪರ್ಕ – ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ

  • ಮತ್ತೆ ಲ್ಯಾಂಡರ್ ಜೊತೆ ಸಂಪರ್ಕ – ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ

    ಮತ್ತೆ ಲ್ಯಾಂಡರ್ ಜೊತೆ ಸಂಪರ್ಕ – ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ

    ನವದೆಹಲಿ: ಇಸ್ರೋ ವಿಜ್ಞಾನಿಗಳು ಮತ್ತೆ ವಿಕ್ರಂ ಲ್ಯಾಂಡರ್ ಜೊತೆ ಸಂಪರ್ಕ ಸಾಧಿಸುತ್ತಾರೆ ಎಂದು ಖ್ಯಾತ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ.

    ಈ ಹಿಂದೆ ಹಲವು ವಿಚಾರಗಳನ್ನು ಮೊದಲೇ ಊಹಿಸಿ ಪ್ರಸಿದ್ಧಿ ಪಡೆದಿರುವ ಅನಿರುದ್ಧ ಕುಮಾರ್ ಮಿಶ್ರಾ ಅವರು ಈ ಭವಿಷ್ಯವನ್ನು ನುಡಿದಿದ್ದಾರೆ. ನನ್ನ ಲೆಕ್ಕಾಚಾರದ ಪ್ರಕಾರ ಸೆ.20ರ ವರೆಗೆ ವಿಕ್ರಂ ಲ್ಯಾಂಡರ್ ಜೊತೆ ಮತ್ತೆ ಸಂವಹನ ಸಾಧಿಸುವ ಸಾಧ್ಯತೆ ಹೆಚ್ಚಿದೆ. ಇಸ್ರೋ ವಿಜ್ಞಾನಿಗಳು ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯನಿರತರಾಗಿದ್ದಾರೆ. ಇವರಿಗೆ ನನ್ನ ಶುಭ ಹಾರೈಕೆಗಳು ಎಂದು ಟ್ವೀಟ್ ಮಾಡಿದ್ದಾರೆ.

    ಇವರ ಟ್ವೀಟ್ ಅನ್ನು 1 ಸಾವಿರಕ್ಕೂ ಹೆಚ್ಚು ಜನ ರೀ ಟ್ವೀಟ್ ಮಾಡಿದ್ದರೆ ನಾಲ್ಕು ಸಾವಿರಕ್ಕೂ ಹೆಚ್ಚು ಜನ ಲೈಕ್ ಮಾಡಿದ್ದಾರೆ.

    https://twitter.com/Anirudh_Astro/status/1170217193809817601

    ನಿಜವಾದ ಭವಿಷ್ಯಗಳು:
    ಅಮೆರಿಕದ ದೊಡ್ಡ ಮಟ್ಟದಲ್ಲಿ ಚಂಡಮಾರುತ ಆಗಸ್ಟ್ ಕೊನೆಯಲ್ಲಿ ಬೀಸಲಿದೆ ಎಂದು ಜೂನ್ 28 ರಂದು ಭವಿಷ್ಯ ನುಡಿದಿದ್ದರು. ಈ ಭವಿಷ್ಯ ನಿಜವಾಗಿದೆ ಎಂದು ತೋರಿಸಲು ಬಹಾಮ ದ್ವೀಪದ 50 ಸಾವಿರ ಮನೆಗಳ ಪೈಕಿ ಶೇ.70 ರಷ್ಟು ಮನೆಗಳು ಜಲಾವೃತಗೊಂಡಿದೆ ಎಂಬುದನ್ನು ಬ್ಲೂಮ್ ಬರ್ಗ್ ವರದಿ ಮಾಡಿದೆ ಎಂದು ಸೆ.5 ರಂದು ಟ್ವೀಟ್ ಮಾಡಿದ್ದರು.

    ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದು ಸೋನಿಯಾ ಗಾಂಧಿ ಅವರನ್ನು ಹಂಗಾಮಿಯಾಗಿ ಮತ್ತೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಆದರೆ ಅನಿರುದ್ಧ ಕುಮಾರ್ ಅವರು 2017ರ ಅಕ್ಟೋಬರ್ ನಲ್ಲಿ, ಕಾಂಗ್ರೆಸ್ ಸದ್ಯದ ಸ್ಥಿತಿ ನೋಡಿದರೆ ಮಹಿಳೆಯರು ಅಧ್ಯಕ್ಷರಾಗುವ ಸಾಧ್ಯತೆಯಿದೆ. ನನ್ನ ಪ್ರಕಾರ ಸೋನಿಯಾ ಗಾಂಧಿಯವರೇ ಮೂರು ವರ್ಷಗಳ ಕಾಲ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು 2017ರ ಅಕ್ಟೋಬರ್ ನಲ್ಲೇ ತಿಳಿಸಿದ್ದರು.

    https://twitter.com/Anirudh_Astro/status/1160491776945221632

    ಈ ವರ್ಷದ ಜೂನ್ ತಿಂಗಳಿನಲ್ಲಿ ಅಮಿತ್ ಶಾ ಅವರ ಬಗ್ಗೆ ಭವಿಷ್ಯ ನುಡಿದಿದ್ದ ಅವರು, ಜೂನ್ 2019 ರಿಂದ ಮಾರ್ಚ್ 2020ರ ಅವಧಿ ಒಳಗಡೆ ಅಮಿತ್ ಶಾ ಪಶ್ಚಿಮ ಬಂಗಾಳ, ಕಾಶ್ಮೀರ, ನಕ್ಸಲ್ ಸಮಸ್ಯೆ ಬಗ್ಗೆ ಬಹಳ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದರು.

    https://twitter.com/Anirudh_Astro/status/1158418640523448320

    ಸದ್ಯ ಈಗ ಭಾರತದ ಆರ್ಥಿಕತೆ ಕುಸಿಯುತ್ತಿದ್ದರೂ ನವೆಂಬರ್ ಬಳಿಕ ಚೇತರಿಕೆ ಕಾಣಲಿದೆ. 2025ರ ವರೆಗೆ ಭಾರತ ಉತ್ತಮ ಪ್ರಗತಿಯನ್ನು ಕಾಣಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

    2019ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ ಪ್ರಧಾನಿಯಾಗಲಿದ್ದಾರೆ. ಬಿಜೆಪಿ ಏಕಾಂಗಿಯಾಗಿ 300ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಅನಿರುದ್ಧ ಕುಮಾರ್ ಮಿಶ್ರಾ ಭವಿಷ್ಯ ನುಡಿದಿದ್ದರು. ಆದರೆ ಈ ಬಾರಿಯ ಐಪಿಎಲ್ ಬಗ್ಗೆ ಹೇಳಿದ್ದ ಭವಿಷ್ಯ ಸುಳ್ಳಾಗಿತ್ತು. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದರು.

    https://twitter.com/Anirudh_Astro/status/1131881712055726080

    ರಾತ್ರಿ ಏನಾಯ್ತು?
    1.39ಕ್ಕೆ ಲ್ಯಾಂಡರ್ ಚಂದ್ರನತ್ತ ಇಳಿಯುವ ಕೊನೆಯ ಸಿದ್ಧತೆ ಆರಂಭಗೊಂಡಿತ್ತು. ಇಸ್ರೋ ನಿಗದಿ ಪಡಿಸಿದ ಪಥದಲ್ಲೇ ಲ್ಯಾಂಡರ್ ಚಲಿಸುತಿತ್ತು. 1.48 ಕೇವಲ 6.ಕಿ.ಮೀ ದೂರದಲ್ಲಿತ್ತು. ಕೊನೆಯ ಹಂತದಲ್ಲಿ ಲ್ಯಾಂಡರ್ ವೇಗೋತ್ಕರ್ಷವನ್ನು ಕಳೆದುಕೊಂಡಿತು. ದೊಡ್ಡ ಪರದೆಯಲ್ಲಿ ಕೆಂಪು ಬಣ್ಣದ ರೇಖೆ ಸಾಗಬೇಕಾದ ದಾರಿ ತೋರಿಸುತ್ತಿದ್ದರೆ ಹಸಿರು ಬಣ್ಣ ಟ್ರಾಜೆಕ್ಟರಿ ರೇಖೆ ಕೆಂಪು ಬಣ್ಣದ ಮೇಲೆಯೇ ಹೋಗುತಿತ್ತು. 1.55ಕ್ಕೆ ಹಸಿರು ಬಣ್ಣದ ಟ್ರಾಜೆಕ್ಟರಿ ರೇಖೆ ಕೆಂಪು ಬಣ್ಣವನ್ನು ಬಿಟ್ಟು ಬೇರೆ ಕಡೆ ಹೋಗುವುದನ್ನು ನೋಡುತ್ತಿದ್ದ ವಿಜ್ಞಾನಿಗಳು ಆಂತಕಕ್ಕೆ ಒಳಗಾದರು. ಅಲ್ಲಿಯವರೆಗೆ ಸಂಭ್ರಮದಲ್ಲೇ ಇದ್ದ ವಿಜ್ಞಾನಿಗಳು ಲ್ಯಾಂಡರಿನಿಂದ  ಬರುತ್ತಿರುವ ಸಿಗ್ನಲ್ ನೋಡಿ ಮುಖದಲ್ಲಿದ್ದ ಸಂಭ್ರಮ ಮರೆಯಾಗಿ ಆತಂಕ ಹೆಚ್ಚಾಯಿತು. ಏನು ನಡೆಯುತ್ತಿದೆ ಎನ್ನುವುದು ಯಾರಿಗೂ ತಿಳಿಯಲಿಲ್ಲ. ಕೊನೆಗೆ 2.17 ಕ್ಕೆ ಇಸ್ರೋ ಅಧ್ಯಕ್ಷ ಶಿವನ್ 2.1 ಕಿ.ಮೀ ದೂರದಲ್ಲಿದ್ದಾಗ ವಿಕ್ರಮ್ ಸಂಪರ್ಕ ಕಡಿತಗೊಂಡಿದೆ ಎಂದು ಬಹಳ ಗದ್ಗದಿತವಾಗಿ ಪ್ರಕಟಿಸಿ, ಸಂಪರ್ಕ ಸಾಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.

     

  • ತಡರಾತ್ರಿಯಿಂದ ಬೆಳಗ್ಗೆ 10 ಗಂಟೆಯವರೆಗೆ ಸಂಪರ್ಕ ಸಾಧಿಸಲು ವಿಜ್ಞಾನಿಗಳ ಶತಪ್ರಯತ್ನ

    ತಡರಾತ್ರಿಯಿಂದ ಬೆಳಗ್ಗೆ 10 ಗಂಟೆಯವರೆಗೆ ಸಂಪರ್ಕ ಸಾಧಿಸಲು ವಿಜ್ಞಾನಿಗಳ ಶತಪ್ರಯತ್ನ

    ಬೆಂಗಳೂರು: ಐತಿಹಾಸಿಕ ಸಾಧನೆ ಮಾಡಲು ಹೊರಟ್ಟಿದ್ದ ಇಸ್ರೋ ವಿಜ್ಞಾನಿಗಳು ತಡರಾತ್ರಿಯಿಂದ ಬೆಳಗ್ಗೆ 10 ಗಂಟೆಯವರೆಗೆ ಕೇಂದ್ರದಿಂದ ಕದಲದೇ ಸಂಪರ್ಕ ಸಾಧಿಸಲು ಕಸರತ್ತು ನಡೆಸುತ್ತಿದ್ದರು.

    ಹೌದು. 3.84 ಲಕ್ಷ ಕಿ.ಮೀ ಕ್ರಮಿಸಿ ಚಂದ್ರನ ಅಂಗಳ ತಲುಪಬೇಕಿದ್ದ ಲ್ಯಾಂಡರ್ ನಿಗದಿತ ಪಥದಲ್ಲೇ ಸಾಗುತಿತ್ತು. ಕೌಂಟ್ ಡೌನ್ ಆರಂಭಗೊಂಡ ಬಳಿಕ ಲ್ಯಾಂಡರ್ ನಿಗದಿತ ಪಥದಲ್ಲಿ ಹೋಗುವುದನ್ನು ಗಮನಿಸಿದ ವಿಜ್ಞಾನಿಗಳು ಸಂತೋಷದಲ್ಲಿದ್ದರು. ಆದರೆ 1.50ರ ವೇಳಗೆ ಚಂದ್ರನ ದಕ್ಷಿಣ ಧ್ರುವದಿಂದ 2.1 ಕಿ.ಮೀ ಎತ್ತರದಲ್ಲಿದ್ದಾಗ ಸಂಪರ್ಕ ಕಳೆದುಕೊಂಡಿತು.

    ತಡರಾತ್ರಿ 1.50ಕ್ಕೆ ಸಂಪರ್ಕ ಕಳೆದುಕೊಂಡರೂ ಬೆಳಗ್ಗೆ 10 ಗಂಟೆಯವರೆಗೆ ವಿಜ್ಞಾನಿಗಳು ಕೇಂದ್ರವನ್ನು ಬಿಟ್ಟು ತೆರಳದೇ ಹೇಗಾದರೂ ಮಾಡಿ ವಿಕ್ರಂ ಲ್ಯಾಂಡರ್ ಸಂಪರ್ಕ ಸಾಧಿಸಲು ಶತಪ್ರಯತ್ನ ನಡೆಸುತ್ತಿದ್ದರು. ಮುಖ್ಯವಾಗಿ ಇಸ್ರೋ ಅಧ್ಯಕ್ಷ ಕೆ. ಶಿವನ್ ಮತ್ತು ಯೋಜನಾ ನಿರ್ದೇಶಕಿ ಎಂ ವನಿತಾ, ಮಿಷನ್ ನಿರ್ದೇಶಕಿ ರಿತು ಕರಿಧಾಲ್ ಕಂಟ್ರೋಲ್ ಕೊಠಡಿಯಲ್ಲೇ ಆಶಾಭಾವನೆಯಿಂದ ಪ್ರಯತ್ನ ನಡೆಸುತ್ತಿದ್ದರು.

    ನಡೆದಿದ್ದು ಏನು?
    1.39ಕ್ಕೆ ಲ್ಯಾಂಡರ್ ಚಂದ್ರನತ್ತ ಇಳಿಯುವ ಕೊನೆಯ ಸಿದ್ಧತೆ ಆರಂಭಗೊಂಡಿತ್ತು. ಇಸ್ರೋ ನಿಗದಿ ಪಡಿಸಿದ ಪಥದಲ್ಲೇ ಲ್ಯಾಂಡರ್ ಚಲಿಸುತಿತ್ತು. 1.48 ಕೇವಲ 6.ಕಿ.ಮೀ ದೂರದಲ್ಲಿತ್ತು. ಕೊನೆಯ ಹಂತದಲ್ಲಿ ಲ್ಯಾಂಡರ್ ವೇಗೋತ್ಕರ್ಷವನ್ನು ಕಳೆದುಕೊಂಡಿತು. ದೊಡ್ಡ ಪರದೆಯಲ್ಲಿ ಕೆಂಪು ಬಣ್ಣದ ರೇಖೆ ಸಾಗಬೇಕಾದ ದಾರಿ ತೋರಿಸುತ್ತಿದ್ದರೆ ಹಸಿರು ಬಣ್ಣ ಟ್ರಾಜೆಕ್ಟರಿ ರೇಖೆ ಕೆಂಪು ಬಣ್ಣದ ಮೇಲೆಯೇ ಹೋಗುತಿತ್ತು. 1.55ಕ್ಕೆ ಹಸಿರು ಬಣ್ಣದ ಟ್ರಾಜೆಕ್ಟರಿ ರೇಖೆ ಕೆಂಪು ಬಣ್ಣವನ್ನು ಬಿಟ್ಟು ಬೇರೆ ಕಡೆ ಹೋಗುವುದನ್ನು ನೋಡುತ್ತಿದ್ದ ವಿಜ್ಞಾನಿಗಳು ಆಂತಕಕ್ಕೆ ಒಳಗಾದರು. ಅಲ್ಲಿಯವರೆಗೆ ಸಂಭ್ರಮದಲ್ಲೇ ಇದ್ದ ವಿಜ್ಞಾನಿಗಳು ಲ್ಯಾಂಡರಿನಿಂದ ಬರುತ್ತಿರುವ ಸಿಗ್ನಲ್ ನೋಡಿ ಮುಖದಲ್ಲಿದ್ದ ಸಂಭ್ರಮ ಮರೆಯಾಗಿ ಆತಂಕ ಹೆಚ್ಚಾಯಿತು. ಏನು ನಡೆಯುತ್ತಿದೆ ಎನ್ನುವುದು ಯಾರಿಗೂ ತಿಳಿಯಲಿಲ್ಲ. ಕೊನೆಗೆ 2.17 ಕ್ಕೆ ಇಸ್ರೋ ಅಧ್ಯಕ್ಷ ಶಿವನ್ 2.1 ಕಿ.ಮೀ ದೂರದಲ್ಲಿದ್ದಾಗ ವಿಕ್ರಮ್ ಸಂಪರ್ಕ ಕಡಿತಗೊಂಡಿದೆ ಎಂದು ಬಹಳ ಗದ್ಗದಿತವಾಗಿ ಪ್ರಕಟಿಸಿ, ಸಂಪರ್ಕ ಸಾಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.

    ವಿಡಿಯೋ ವೈರಲ್: ಮಂಗಳಯಾನ ಗುರಿ ಮುಟ್ಟದಕ್ಕೆ ಬೇಸರದಲ್ಲಿದ್ದ ಶಿವನ್ ಅವರನ್ನು ಪ್ರಧಾನಿ ಮೋದಿ ಸಮಾಧಾನ ಪಡಿಸುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ. ಇಸ್ರೋ ಕಚೇರಿಯಿಂದ ಹೊರ ಬರುತ್ತಲೇ ಪ್ರಧಾನಿ ಮೋದಿ ಅವರನ್ನು ನೋಡಿ ಇಸ್ರೋ ಮುಖ್ಯಸ್ಥ ಕೆ.ಶಿವನ್ ಕಣ್ಣೀರಿಟ್ಟರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಶಿವನ್ ಅವರನ್ನು ಅಪ್ಪಿ ಬೆನ್ನು ತಟ್ಟಿ ಸಮಾಧಾನ ಪಡಿಸಿದರು.

    ನಿಮ್ಮ ಜೊತೆ ಭಾರತವಿದೆ: ಬೆಳಗ್ಗೆ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕಳೆದ ಕೆಲವು ದಿನಗಳಿಂದ ಇಸ್ರೋ ವಿಜ್ಞಾನಿಗಳು ನಿದ್ದೆ ಮಾಡಿಲ್ಲ ಎಂದು ಎಲ್ಲರಿಗೂ ಗೊತ್ತು. ಬೆಳಗ್ಗಿನ ಜಾವ ನಿಮ್ಮ ಮುಖದಲ್ಲಿ ಬೇಸರ ಭಾವ ನೋಡಿದಾಗ ಹೆಚ್ಚು ಕಾಲ ನಾನು ಅಲ್ಲಿ ಉಳಿಯಲಿಲ್ಲ. ದಿಢೀರ್ ಅಂತ ಸಂಪರ್ಕ ಕಡಿತಗೊಂಡಾಗ ನಿಮ್ಮೆಲ್ಲರ ಮುಖದಲ್ಲಿ ನಿರಾಸೆ ಮೂಡಿತು. ನಾನು ನಿಮ್ಮೆಲ್ಲರ ಮನಸ್ಸು ಅರ್ಥ ಮಾಡಿಕೊಂಡಿದ್ದೇನೆ. ಇಂದು ನಮಗೆ ಕೊನೆ ಹಂತದಲ್ಲಿ ಸಣ್ಣದೊಂದು ಅಡೆಯುಂಟಾಗಿದೆ. ಚಂದ್ರಯಾನ ಚಂದ್ರನನ್ನ ಅಪ್ಪಿಕೊಳ್ಳುವ ನಮ್ಮ ಇಚ್ಛಾಶಕ್ತಿ ಮತ್ತಷ್ಟು ಪ್ರಬಲಗೊಂಡಿದೆ. ಸಣ್ಣದೊಂದು ಅಡೆ ತಡೆಯಿಂದ ನಾವು ಹಿಂಜರಿಯದೇ ಅದರ ಪರಿಹಾರಕ್ಕಾಗಿ ಮುಂದಿನ ದಿನ ಕೆಲಸ ಮಾಡಬೇಕಿದೆ. ಕವಿಗಳು ಚಂದ್ರನ ಬಗ್ಗೆ ಹಲವು ಕವಿತೆಗಳನ್ನು ಬರೆದಿದ್ದಾರೆ. ಮುಂದಿನ ದಿನಗಳಲ್ಲಿ ಚಂದ್ರಯಾನದ ಬಗ್ಗೆ ಕವನಗಳನ್ನು ಬರೆಯಲಿದ್ದಾರೆ. ಇಸ್ರೋ ವಿಜ್ಞಾನಿಗಳ ಸಾಧನೆಯ ಬಗ್ಗೆ ನಮಗೆಲ್ಲರಿಗೂ ಇದೆ. ಚಂದ್ರನನ್ನ ಮುಟ್ಟುವ ಆಸೆ ಇನ್ನಷ್ಟು ಹೆಚ್ಚಾಗಿದೆ ಎಂದರು.

    ನಿಮ್ಮ ಕಠಿಣ ಪರಿಶ್ರಮ ಎಲ್ಲರಿಗೂ ಗೊತ್ತಿದೆ. ಹಾಗಾಗಿ ಇಡೀ ಭಾರತ ನಮ್ಮ ಇಸ್ರೋ ವಿಜ್ಞಾನಿಗಳೊಂದಿಗೆ ಇದೆ. ಅಡೆತಡೆಗಳಿಂದ ನಿಮ್ಮ ಉತ್ಸಾಹ ಹೆಚ್ಚಾಗಿದೆ. ತೊಂದರೆಗಳು ಎದುರಾಗಿವೆ ಎಂದು ಧೃತಿಗಡೆಬಾರದು. ಸತತ ಪರಿಶ್ರಮಕ್ಕೆ ಪ್ರತಿಫಲ ಸಿಗಲಿದೆ. ವಿಫಲತೆಗೆ ಎದೆಗುಂದದೆ, ಗುರಿ ತಲುಪವಲ್ಲಿ ನಮ್ಮ ಕೆಲಸ ಆರಂಭವಾಗಬೇಕಿದೆ. ನೀವು ಮಾಡಿದ್ದನ್ನು, ಇದೂವರೆಗೂ ಯಾರು ಮಾಡಿಲ್ಲ. ನಿನ್ನೆ ರಾತ್ರಿಯೂ ಹೇಳಿದಂತೆ ನಾನು ನಿಮ್ಮೊಂದಿಗಿದ್ದೇನೆ ಎಂದು ಹೇಳಲು ಇಷ್ಟಪಡುತ್ತೇನೆ ಎಂದು ಹೇಳಿದರು.

    ಪ್ರತಿ ಸೋಲು ಹೊಸದೊಂದನ್ನು ಕಲಿಸಿಕೊಡುತ್ತದೆ. ವಿಜ್ಞಾನದಲ್ಲಿ ಎಂದು ವಿಫಲತೆ ಆಗುವುದಿಲ್ಲ. ಎಲ್ಲ ಪ್ರಯೋಗಗಳು ನಮಗೆ ಹೊಸ ವಿಷಯವನ್ನು ಕಲಿಸಿಕೊಡುತ್ತೇವೆ. ಚಂದ್ರಯಾನದ ಕೊನೆಯ ಯಾನ ನಮ್ಮ ಯೋಜನೆಯಂತೆ ನಡೆಯಲಿಲ್ಲ ಎಂದು ನಿರಾಸೆಗೊಳ್ಳಬೇಡಿ. ನಮ್ಮ ಆರ್ಬಿಟರ್ ಚಂದ್ರನ ಕಕ್ಷೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಘರ್ಷ, ಸಂಕಷ್ಟಗಳೇ ಹೊಸ ಅವಿಷ್ಕಾರಕ್ಕೆ ನಾಂದಿಯಾಗಲಿದೆ. ನಿಮ್ಮೆಲ್ಲರ ದಶಕಗಳ ಪರಿಶ್ರಮದಿಂದ ಇಂದು ಸ್ಪೇಸ್ ಸೈನ್ಸ್ ನಲ್ಲಿ ನಾವು ಮೊದಲಿಗರಾಗಿದ್ದೇವೆ. ಚಂದ್ರಯಾನ-2 ಮಿಷನ್ ಕೊನೆ ಹಂತ ಬೇಸರ ತಂದಿರಬಹುದು. ಆದ್ರೆ ನಮ್ಮ ಚಂದ್ರಯಾನದ ಪ್ರಯಾಣ ಅದ್ಧೂರಿಯಾಗಿತ್ತು. ಜ್ಞಾನಕ್ಕಿಂತ ದೊಡ್ಡ ಶಿಕ್ಷಣ ವಿಜ್ಞಾನ. ಮುಂದಿನ ಎಲ್ಲ ಯೋಜನೆಗಳಿಗೆ ಶುಭವಾಗಲಿ ಎಂದು ಪ್ರಧಾನಿಗಳು ಹಾರೈಸಿದರು.

    ನನಗಿಂತ ನಿಮ್ಮ ಸಂಕಲ್ಪ ದೊಡ್ಡದಿದೆ. ಇಂದು ಬೆಳ್ಳಂಬೆಳಗ್ಗೆ ನಿಮ್ಮನ್ನು ನೋಡುವ ಮೂಲಕ ಪ್ರೇರಣೆ ಪಡೆದುಕೊಳ್ಳಲು ಬಂದಿದ್ದೇನೆ. ನಿಮ್ಮೆಲ್ಲರಿಂದ  ಪಡೆದ ಪ್ರೇರಣೆ ನಾನು ಮರೆಯಲಾರೆ. ನಿಮ್ಮ ಸಂಕಲ್ಪ, ಕೆಲಸ ಹೀಗೆ ಮುಂದುವರಿಯಲಿ ಎಂದು ಶುಭಕೋರಿದರು.

  • ಮೋದಿ ಆಲಂಗಿಸಿ ಕಣ್ಣೀರಿಟ್ಟ ಶಿವನ್

    ಮೋದಿ ಆಲಂಗಿಸಿ ಕಣ್ಣೀರಿಟ್ಟ ಶಿವನ್

    ಬೆಂಗಳೂರು: ಚಂದ್ರಯಾನ-2 ಕೊನೆ ಕ್ಷಣದಲ್ಲಿ ನಿರಾಸೆಯುಂಟು ಮಾಡಿತು. ಇಂದು ಬೆಳಗ್ಗೆ ಇಸ್ರೋ ಕಚೇರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರು ವಿಜ್ಞಾನಿಗಳು ಮತ್ತು ದೇಶವನ್ನುದ್ದೇಶಿಸಿ ಮಾತನಾಡಿದರು. ಇಸ್ರೋ ಕಚೇರಿಯಿಂದ ಹೊರ ಬರುತ್ತಲೇ ಪ್ರಧಾನಿ ಮೋದಿ ಅವರನ್ನು ಇಸ್ರೋ ಮುಖ್ಯಸ್ಥ ಕೆ.ಶಿವನ್ ಆಲಂಗಿಸಿ ಕಣ್ಣೀರಿಟ್ಟರು.

    ಕೆ.ಶಿವನ್ ಅವರನ್ನು ಆಲಂಗಿಸಿಕೊಂಡು ಪ್ರಧಾನಿಗಳು ಧೈರ್ಯ ತುಂಬಿದರು. ತಮ್ಮ ಭಾಷಣದಲ್ಲಿಯೂ ವಿಜ್ಞಾನಿಗಳ ಕೆಲಸಕ್ಕೆ ಮೆಚ್ಚುಗೆ ಸೂಚಿಸಿದ ಪ್ರಧಾನಿಗಳು, ಅಮೃತ ಸಂತಾನಕ್ಕೆ ತಡೆ ಇಲ್ಲ. ನೀವು ಪ್ರೇರಣೆಯ ಚಿಲುಮೆಗಳು. ಹಾಗಾಗಿ ಬೆಳ್ಳಂಬೆಳಗ್ಗೆ ನಿಮ್ಮ ದರ್ಶನದ ಮೂಲಕ ಪ್ರೇರಣೆ ಪಡೆಯಲು ನಾನು ಬಂದಿದ್ದೇನೆ ಎಂದು ವಿಜ್ಞಾನಿಗಳಿಗೆ ಧೈರ್ಯ ತುಂಬಿದರು.

    ನಿಮ್ಮ ಕಠಿಣ ಪರಿಶ್ರಮ ಎಲ್ಲರಿಗೂ ಗೊತ್ತಿದೆ. ಹಾಗಾಗಿ ಇಡೀ ಭಾರತ ನಮ್ಮ ಇಸ್ರೋ ವಿಜ್ಞಾನಿಗಳೊಂದಿಗೆ ಇದೆ. ಅಡೆತಡೆಗಳಿಂದ ನಿಮ್ಮ ಉತ್ಸಾಹ ಹೆಚ್ಚಾಗಿದೆ. ತೊಂದರೆಗಳು ಎದುರಾಗಿವೆ ಎಂದು ಧೃತಿಗಡೆಬಾರದು. ಸತತ ಪರಿಶ್ರಮಕ್ಕೆ ಪ್ರತಿಫಲ ಸಿಗಲಿದೆ. ವಿಫಲತೆಗೆ ಎದೆಗುಂದದೆ, ಗುರಿ ತಲುಪವಲ್ಲಿ ನಮ್ಮ ಕೆಲಸ ಆರಂಭವಾಗಬೇಕಿದೆ. ನೀವು ಮಾಡಿದ್ದನ್ನು, ಇದೂವರೆಗೂ ಯಾರು ಮಾಡಿಲ್ಲ. ನಿನ್ನೆ ರಾತ್ರಿಯೂ ಹೇಳಿದಂತೆ ನಾನು ನಿಮ್ಮೊಂದಿಗಿದ್ದೇನೆ ಎಂದು ಹೇಳಲು ಇಷ್ಟಪಡುತ್ತೇನೆ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ಹೇಳಿದರು.

  • ಇಸ್ರೋ ಶ್ರಮಕ್ಕೆ ಅಭಿನಂದನೆ

    ಇಸ್ರೋ ಶ್ರಮಕ್ಕೆ ಅಭಿನಂದನೆ

    ಬೆಂಗಳೂರು: ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್ ಕೊನೆ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿದೆ. ಹಾಗಾಗಿ ಇಸ್ರೋ ವಿಜ್ಞಾನಿಗಳು ಈ ಕುರಿತು ಅಧ್ಯಯನ ನಡೆಸುತ್ತಿದ್ದಾರೆ. ಇಸ್ರೋ ಸಾಧನೆಗೆ ದೇಶದೆಲ್ಲಡೆ ಮೆಚ್ಚುಗೆ ವ್ಯಕ್ತವಾಗಿದ್ದು, ಅಭಿನಂದನೆಯ ಮಹಾಪೂರವೇ ಹರಿದು ಬರುತ್ತಿದೆ. ಚಂದ್ರಯಾನದ ಅಂತಿಮ ಕ್ಷಣ ಕಣ್ತುಂಬಿಕೊಳ್ಳಲು ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಸಹ ವಿಜ್ಞಾನಿಗಳಿಗೆ ಧೈರ್ಯ ತುಂಬಿದ್ದಾರೆ. ಉಳಿದಂತೆ ಎಲ್ಲ ರಾಜಕೀಯ ನಾಯಕರು, ಗಣ್ಯರು ಸಹ ಇಸ್ರೋ ವಿಜ್ಞಾನಿಗಳ ಸಾಧನೆಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ.

    ನರೇಂದ್ರ ಮೋದಿ: ದೇಶದ ಮಹತ್ವಾಕಾಂಕ್ಷಿ ಚಂದ್ರಯಾನ 2 ವಿಕ್ರಮ್ ಲ್ಯಾಂಡರ್ ಕೊನೆ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡು ಇಡೀ ಇಸ್ರೋ ವಿಜ್ಞಾನಿಗಳ ತಂಡ ನಿರಾಶೆಯಲ್ಲಿದ್ದಾಗ ಪ್ರಧಾನಮಂತ್ರಿ ನರೇಂದ್ರ ಮೋದಿ ಧೈರ್ಯ ತುಂಬಿದರು. ಇಸ್ರೋ ಅಧ್ಯಕ್ಷ ಕೆ. ಶಿವನ್ ಪ್ರಧಾನಿ ಮೋದಿ ಬಳಿ ಬಂದು ಕೆಲವು ಮಾಹಿತಿ ನೀಡಿದರು. ನಂತರ ಮೋದಿ ಎದ್ದು ನಿಂತು ತಲೆ ಕೆಡಿಸಿಕೊಳ್ಳಬೇಡಿ ಎಂದು ಧೈರ್ಯ ತುಂಬಿ ಕೆ.ಶಿವನ್ ಅವರ ಬೆನ್ನು ತಟ್ಟಿದರು. ನಮ್ಮ ಸಾಧನೆ ಕಡಿಮೆಯದ್ದೇನಲ್ಲ, ಧೈರ್ಯವಾಗಿರಿ. ಜೀವನದಲ್ಲಿ ಏರಿಳಿತ ಸಾಮಾನ್ಯ. ಎಲ್ಲರ ಮುಖದಲ್ಲಿ ಆತಂಕ ಕಾಣಿಸುತ್ತಿತ್ತು. ದೇಶ ನಿಮ್ಮ ಬಗ್ಗೆ ಹೆಮ್ಮೆಯಿಂದ ನೋಡುತ್ತದೆ. ಇದರಿಂದ ಸಾಕಷ್ಟು ಕಲಿತಿದ್ದೇವೆ. ನಿಮ್ಮ ಜತೆ ಸದಾ ನಾನಿರುತ್ತೇನೆ ಎಂದು ಮೋದಿ ಅಭಯ ನೀಡಿದರು. ದೇಶ ನಿಮ್ಮ ಸಾಧನೆಗೆ ಹೆಮ್ಮೆ ಪಡುತ್ತದೆ. ಅಭಿನಂದನೆಗಳು. ಬಹಳಷ್ಟು ಕಲಿಯುವುದಿದೆ. ನಮ್ಮ ಕೆಲಸಗಳು ಸಾಕಷ್ಟಿವೆ. ಧೈರ್ಯದಿಂದ ಮುನ್ನುಗೋಣ. ಎಲ್ಲರಿಗೂ ಒಳ್ಳೆಯದಾಗಲಿ, ಆಲ್ ದ ಬೆಸ್ಟ್ ಎಂದು ಮೋದಿ ಎಲ್ಲರಿಗೂ ಧೈರ್ಯ ತುಂಬಿದರು. ಇದನ್ನು ಟ್ವಿಟರ್ ನಲ್ಲೂ ಹಂಚಿಕೊಂಡಿದ್ದಾರೆ.

    ರಾಹುಲ್ ಗಾಂಧಿ: ಇಸ್ರೋ ವಿಜ್ಞಾನಿಗಳಿಗೆ ಸಂಸದ ರಾಹುಲ್ ಗಾಂಧಿ ಅಭಿನಂದನೆ ಸಲ್ಲಿಸಿದ್ದಾರೆ. ನಿಮ್ಮ ಪರಿಶ್ರಮ ವ್ಯರ್ಥವಾಗಲ್ಲ. ಬಾಹ್ಯಾಕಾಶದಲ್ಲಿ ಸಾಧನೆ ಮಾಡಲು ಇದೊಂದು ಮೈಲಿಗಲ್ಲು ಎಂದು ಶುಭಕೋರಿದ್ದಾರೆ.

    ಅಮಿತ್ ಶಾ: ಇಸ್ರೋ ವಿಜ್ಞಾನಿಗಳಿಗೆ ಗೃಹ ಸಚಿವ ಅಮಿತ್ ಶಾ ಅಭಿನಂದನೆ ಸಲ್ಲಿಸಿದ್ದಾರೆ. ಇಡೀ ದೇಶವೇ ಹೆಮ್ಮ ಪಡುವಂತಹ ಕೆಲಸ ಮಾಡಿದ್ದೀರ ಎಂದು ಟ್ವೀಟ್ ಮೂಲಕ ಇಸ್ರೋ ವಿಜ್ಞಾನಿಗಳಿಗೆ ಧೈರ್ಯ ತುಂಬಿದ್ದಾರೆ.

    ನಿರ್ಮಲಾ ಸೀತಾರಾಮನ್: ಇಸ್ರೋದ ಸಾಧನೆಗೆ ಬಗ್ಗೆ ಕೇಂದ್ರ ಸಚಿವೆ ಸಚಿವ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯಿಸಿದ್ದಾರೆ. ಸಾವು ನಿಮ್ಮೊಂದಿಗೆ ಇದ್ದೇವೆ.. ಎಲ್ಲಾ ವಯೋಮಾನದವನ್ನು ಒಟ್ಟಿಗೆ ಸೇರಿಸಿ ನಬೋ ಮಂಡಲದ ಸಾಧನೆ ಮಾಡಿದ್ದೀರಿ. ಸದ್ಯ ಸಂಪರ್ಕ ಕಡಿತಗೊಂಡರೂ ಮುಂದೆ ನೀವು ಯಶಸ್ವಿ ಆಗುತ್ತಿರ ಎಂದು ಟ್ವೀಟ್ ಮಾಡಿದ್ದಾರೆ.

  • ಅಂತಿಮ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡ ವಿಕ್ರಮ್ ಲ್ಯಾಂಡರ್ ನ ಕ್ಷಣಕ್ಷಣದ ಕೌತುಕ

    ಅಂತಿಮ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡ ವಿಕ್ರಮ್ ಲ್ಯಾಂಡರ್ ನ ಕ್ಷಣಕ್ಷಣದ ಕೌತುಕ

    ಬೆಂಗಳೂರು: ಚಂದ್ರನ ಮೇಲ್ಮೈ ತಲುಪುವಲ್ಲಿ ಯಶಸ್ವಿಯಾದ ಚಂದ್ರಯಾನ್-2 ನೌಕೆ ಅಲ್ಲಿಂದ ಮಹತ್ವಾಕಾಂಕ್ಷಿ ವಿಕ್ರಮ ಲ್ಯಾಂಡರ್ ನನ್ನು ಚಂದ್ರನ ಮೇಲೆ ಸ್ಪರ್ಶಿಸುವ ಸಂಪರ್ಕ ಕಳೆದುಕೊಂಡಿದೆ. ಕೊನೆ ಹಂತದಲ್ಲಿ ವಿಕ್ರಮ್ ಲ್ಯಾಂಡರ್ ನಲ್ಲಿದ್ದ ಸಿಗ್ನಲ್ ಕಡಿತವಾಗಿದೆ. ಈ ಲ್ಯಾಂಡಿಂಗ್ ಆಗುವ ಪ್ರಕ್ರಿಯೆ ಭಾರೀ ಕೌತುಕ, ಕಾತುರ, ಬೆರಗು, ರೋಮಾಂಚನ, ಆತಂಕ, ಹತಾಶೆಯಿಂದ ಕೂಡಿತ್ತು. ಹಾಗಾದರೆ, ರಾತ್ರಿ ಪ್ರಧಾನಿ ಮೋದಿ ಅವರು ಇಸ್ರೋದ ಇಸ್ಟ್ರಾಕ್ ಕೇಂದ್ರ ತಲುಪಿದ ಕ್ಷಣದಿಂದ ಅವರು ಹೊರಗೆ ಬರೋವರೆಗೆ ಏನೆಲ್ಲಾ ಆಯ್ತು ಅನ್ನೋದರ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

    ವಿಕ್ರಮ್ ಕ್ಷಣಕ್ಷಣದ ಕೌತುಕ
    * 1.23 – ವಿಕ್ರಮ್ ಲ್ಯಾಂಡಿಂಗ್ ಪ್ರಕ್ರಿಯೆ ವೀಕ್ಷಣೆಗೆ ಸಕಲ ಸಿದ್ಧತೆ
    * 1.26 – ಇಸ್ರೋ ಕೇಂದ್ರಕ್ಕೆ ಪ್ರಧಾನಿ ಮೋದಿ ಆಗಮನ ( ಪೀಣ್ಯದಲ್ಲಿರುವ ಇಸ್ರೋ ಕೇಂದ್ರ ಕಚೇರಿಗೆ ಮೋದಿ ಎಂಟ್ರಿ. ಇಸ್ರೋ ಅಧ್ಯಕ್ಷ ಕೆ.ಶಿವನ್ ಹೂ ನೀಡಿ ಸ್ವಾಗತ. ಮಾಜಿ ಅಧ್ಯಕ್ಷರು, ಹಿರಿಯ ವಿಜ್ಞಾನಿಗಳಿಗೆ ಕೈ ಕುಲುಕಿ ತಮ್ಮ ಆಸನದಲ್ಲಿ ಆಸೀನ)
    * 1.37 – ವಿಕ್ರಮ್ ಲ್ಯಾಂಡರ್ ನ ಲ್ಯಾಂಡಿಂಗ್ ಪ್ರಕ್ರಿಯೆ ಆರಂಭ ಯಶಸ್ವಿ
    * 1.43 – ಚಂದ್ರನ ದಕ್ಷಿಣ ಧ್ರುವದತ್ತ ವಿಕ್ರಮ್ ಪ್ರಯಾಣ
    * 1.46 – ಲ್ಯಾಂಡ್ ಆಗುವ ಸ್ಥಳದಿಂದ 70 ಕಿ.ಮೀ. ದೂರದಲ್ಲಿದ್ದ ವಿಕ್ರಮ್
    * 1.50 – ಚಂದ್ರನತ್ತ ವಿಕ್ರಮ್ ಲ್ಯಾಂಡರ್ ಯಶಸ್ವಿ ಪಯಣ – ಇಸ್ರೋ ಕೇಂದ್ರ ಕಚೇರಿಯಲ್ಲಿ ಕಿವಿಗಡಚಿಕ್ಕುವ ಚಪ್ಪಾಳೆ. ಎಲ್ಲರ ಮುಖದಲ್ಲೂ ಸಂಭ್ರಮಾಚರಣೆ.

    * 1.52 – ವಿಕ್ರಮ್ ಲ್ಯಾಂಡರ್ ನ ವೇಗ ತಗ್ಗಿಸುವ ಕೆಲಸ ( 1.52ಕ್ಕೆ ಸರಿಯಾಗಿ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈ ಮೇಲೆ ಇಳಿಯಬೇಕಿತ್ತು)
    * 1.57 – ವಿಕ್ರಮ್ ಲ್ಯಾಂಡ್ ಆಯ್ತಾ ಇಲ್ವಾ ಅಂತ ವಿಜ್ಞಾನಿಗಳಲ್ಲಿ ಆತಂಕ
    * 2.02 – ಮಾನಿಟರಿಂಗ್ ರೂಮ್‍ನಿಂದ ಹೊರ ಬಂದ ಪ್ರಧಾನಿ
    * 2.04 – ಲ್ಯಾಂಡರ್ ನಿಂದ ಇಸ್ರೋಗೆ ಸಿಗದ ಸಿಗ್ನಲ್
    * 2.07 – ಚಂದ್ರನ ಮೇಲ್ಮೈನಲ್ಲಿ 2.1 ಕಿ.ಮೀ.ನಲ್ಲಿ ಮಿಷನ್ ಕಂಟ್ರೋಲ್ & ವಿಕ್ರಮ್ ಲ್ಯಾಂಡರ್ ನಡುವಿನ ಸಂಪರ್ಕ ಕಡಿತ
    * 2.10 – ಆರ್ಬಿಟರ್ ನೊಂದಿಗೆ ಸಂವಹನ ಸಂಪರ್ಕ ಯಥಾಸ್ಥಿತಿ. ಆದರೆ ವಿಕ್ರಮ ಸಂಪರ್ಕ ಕಡಿತ
    * 2.17 – ಕೊನೆ ಕ್ಷಣದಲ್ಲಿ ವಿಕ್ರಮ್ ಸಂಪರ್ಕ ಕಡಿತ ಅಂತ ಇಸ್ರೋ ಅಧ್ಯಕ್ಷ ಶಿವನ್ ಹೇಳಿಕೆ
    * 2.22 – ಸಾಧನೆ ಸಣ್ಣದಲ್ಲ. ಧೃತಿಗೆಡಬೇಡಿ ಅಂತ ವಿಜ್ಞಾನಿಗಳಿಗೆ ಧೈರ್ಯ ತುಂಬಿದ ಪ್ರಧಾನಿ
    * 3.15 – ವಿಕ್ರಮ್ ಲ್ಯಾಂಡರ್ ನಿಂದ ಸಿಗ್ನಲ್ ಸಿಕ್ಕಿಲ್ಲ. ಡೇಟಾ ವಿಶ್ಲೇಷಣೆ ನಡೀತಿದೆ ಎಂದ ಇಸ್ರೋ
    * 3.31 – ಚಂದ್ರಯಾನ-2 ಯೋಜನೆಯ ಫಲಿತಾಂಶ ಸದ್ಯಕ್ಕೆ ತಡೆ

    ಮೊದಲ ಹಂತದ ಪ್ರಕ್ರಿಯೆಗಳೂ ಯಶಸ್ವಿಯಾಗಿತ್ತು. ಬರೋಬ್ಬರಿ 47 ದಿನಗಳ ನಂತರ ಮುಂಜಾನೆ 1 ಗಂಟೆ 37 ನಿಮಿಷಕ್ಕೆ ಸರಿಯಾಗಿ ಚಂದ್ರನ ಮೇಲ್ಮೈನತ್ತ ಲ್ಯಾಂಡರ್ ತನ್ನ ಪಯಣ ಆರಂಭಿಸಿತ್ತು. ಈ ಘಟ್ಟ ಅತ್ಯಂತ ಸೂಕ್ಷ್ಮ ಘಟ್ಟ ಎಂಬುದಾಗಿ ಇಸ್ರೋ ಅಧ್ಯಕ್ಷ ಕೆ. ಶಿವನ್ ಹೇಳಿದ್ದರು. ಹೀಗಿದ್ದರೂ ಲ್ಯಾಂಡರ್ ಚಂದ್ರನತ್ತ ಯೋಜನೆಯಂತೆ ತನ್ನ ಚಲನೆ ಆರಂಭಿಸಿದ್ದರಿಂದ ಇಸ್ರೋ ಕೇಂದ್ರ ಕಚೇರಿಯಲ್ಲಿ ಸಂಭ್ರಮ ಮನೆ ಮಾಡಿತ್ತು.

    ಲ್ಯಾಂಡರ್ ನಲ್ಲಿದ್ದ ಎಂಜಿನ್‍ಗಳನ್ನು ಚಾಲನೆಗೊಳಿಸಿ, ಅದರ ವೇಗವನ್ನೂ ಹಂತ ಹಂತವಾಗಿ ಯಶಸ್ವಿಯಾಗಿ ತಗ್ಗಿಸಲಾಗಿತ್ತು. ಆದರೆ ಇನ್ನೇನು ಚಂದ್ರನ ಮೇಲ್ಮೈನ್ನು ತಲುಪಲು ಕೇವಲ 2.1 ಕಿಲೋ ಮೀಟರ್ ಇದೆ ಎನ್ನುವಾಗ ಲ್ಯಾಂಡರ್ ಇಸ್ರೋದ ಸಂಪರ್ಕ ಕಡಿದುಕೊಂಡಿತು. ಸ್ವಲ್ಪ ಹೊತ್ತು ಏನಾಗುತ್ತಿದೆ ಎಂಬುದೇ ಇಸ್ರೋ ಕಚೇರಿಯಲ್ಲಿದ್ದವರಿಗೆ ತಿಳಿಯದಾಯಿತು. ಇಸ್ರೋ ಕಚೇರಿಯಲ್ಲಿದ್ದ ಪ್ರಧಾನಿ, ವಿಜ್ಞಾನಿಗಳ ಮುಖದಲ್ಲಿ ದುಗುಡ, ಆತಂಕದ ಕ್ಷಣಗಳು ಎದ್ದು ಕಾಣಿಸುತ್ತಿತ್ತು. ಸ್ವಲ್ಪ ಹೊತ್ತಿನ ನಂತರ ಬೇಸರದಿಂದ ಭಾರವಾದ ಹೆಜ್ಜೆಗಳನ್ನು ಹಾಕುತ್ತಾ ಬಂದ ಅಧ್ಯಕ್ಷ ಕೆ. ಶಿವನ್ ನಡೆದುದನ್ನು ವಿವರಿಸಿ, ಸಿಕ್ಕಿರುವ ಮಾಹಿತಿಗಳನ್ನು ನಾವು ವಿಶ್ಲೇಷಿಸುತ್ತಿದ್ದೇವೆ ಎಂದರು.

  • ಇದೊಂದು ಐತಿಹಾಸಿಕ ಕ್ಷಣ – ನಮ್ಮ ಕೆಲಸ ಮುಗಿದಿಲ್ಲ: ಇಸ್ರೋ ಅಧ್ಯಕ್ಷ

    ಇದೊಂದು ಐತಿಹಾಸಿಕ ಕ್ಷಣ – ನಮ್ಮ ಕೆಲಸ ಮುಗಿದಿಲ್ಲ: ಇಸ್ರೋ ಅಧ್ಯಕ್ಷ

    ಶ್ರೀಹರಿಕೋಟಾ: ವಿಶ್ವವೇ ಭಾರತದಂತಹ ತಿರುಗಿ ನೋಡುವಂತೆ ಮಾಡಲು ಇಸ್ರೋ ಮತ್ತೊಮ್ಮೆ ಯಶಸ್ವಿಯಾಗಿದ್ದು, ಭಾರತದ ಬಹು ನಿರೀಕ್ಷಿತ ಚಂದ್ರಯಾನ 2 ಯೋಜನೆ ಯಶಸ್ವಿಯಾಗಿ ನಭಕ್ಕೆ ಚಿಮ್ಮುವ ಮೂಲಕ ಆರಂಭಗೊಂಡಿದೆ. ಇದೇ ಸಂದರ್ಭದಲ್ಲಿ ಮಾತನಾಡಿದ ಇಸ್ರೋ ಅಧ್ಯಕ್ಷ ಕೆ. ಶಿವನ್ ಯೋಜನೆಯಲ್ಲಿ ಪಾಲ್ಗೊಂಡ ತಂಡವನ್ನು ಅಭಿನಂದಿಸಿದ್ದಾರೆ.

    ತಮ್ಮ ಕುಟುಂಬಗಳನ್ನು ಮರೆತು ಕಾರ್ಯ ನಿರ್ವಹಿಸಿದ್ದ ಪರಿಣಾಮ ಯೋಜನೆ ಯಶಸ್ವಿಯಾಗಿದೆ. ಯೋಜನೆ ಯಶಸ್ವಿಗೆ ಕಾರಣರಾದ ಎಲ್ಲರಿಗೂ ಸೆಲ್ಯೂಟ್ ಮಾಡುವ ಕರ್ತವ್ಯ ನನ್ನದು ಎಂದರು.

    ನಮ್ಮ ಕೆಲಸ ಇಲ್ಲಿಗೆ ಮುಗಿದಿಲ್ಲ ಇದು ಕೇವಲ ಆರಂಭಿಕ ಬಹುದೊಡ್ಡ ಯಶಸ್ವಿಯಾಗಿದ್ದು, ಮುಂದಿನ 24 ಗಂಟೆಗಳ ಕಾಲ ನಮಗೆ ಬಹುಮುಖ್ಯವಾಗಿದೆ. ಭೂ ಕಕ್ಷೆಗೆ ಸೇರಲು ಮಿಷನ್ ಯಶಸ್ವಿಯಾಗಿದ್ದು, ಐತಿಹಾಸ ಪಯಣದ ಆರಂಭವಾಗಿದ್ದು, ಯೋಜನೆ ಹೊಸ ಸಂಗತಿಗಳ ಮೇಲೆ ಬೆಳಕು ಚೆಲ್ಲಲಿದೆ. ಈ ಯೋಜನೆಗೆ ಇಸ್ರೋ, ಭಾರತ ಮಾತ್ರವಲ್ಲದೇ ಇಡೀ ವಿಶ್ವವೇ ಎದುರು ನೋಡುತಿತ್ತು ಎಂದು ಹೇಳಿದರು.

    ಸದ್ಯ ಪಡೆದಿರುವ ಮಾಹಿತಿಯ ಅನ್ವಯ ಎಲ್ಲವೂ ನಿಗದಿಯಂತೆ ನಡೆದಿದೆ. ಮುಂದಿನ ಯೋಜನೆಗೆ ನಮ್ಮ ಕೆಲಸ ಇಂದಿನಿಂದಲೇ ಆರಂಭವಾಗಲಿದೆ. ಈ ಹಿಂದೆ ನಮಗೇ ಸ್ವಲ್ಪ ಹಿನ್ನಡೆ ಆಗಿದ್ದರೂ ಕೂಡ ಮತ್ತೆ ಸ್ಪಿಡ್ ನಲ್ಲಿ ಬೌನ್ಸ್ ಬ್ಯಾಕ್ ಮಾಡಿದ್ದೇವೆ. ಇದು ನಮಗೆ ಬೋನಸ್ ರೀತಿ ಆಗಿದೆ. ಮುಂದಿನ ಒಂದೂವರೆ ತಿಂಗಳಿನಲ್ಲಿ 15 ಪ್ರಮುಖ ಹಂತಗಳನ್ನು ದಾಟಬೇಕಾಗುತ್ತದೆ. ಈ ಯಶಸ್ಸು ಎಲ್ಲರಿಗೂ ಸಲ್ಲುತ್ತದೆ ಎಂದರು.