Tag: Kabbinale Forest

  • ಸರೆಂಡರ್ ಆಗುವವರಿಗೆ ಕೊಡೋ ಪರಿಹಾರ ನಮಗೂ ಕೊಡಿ – ನಕ್ಸಲ್‌ ವಿಕ್ರಂ ಗೌಡ ಸಹೋದರಿ ಮನವಿ

    ಸರೆಂಡರ್ ಆಗುವವರಿಗೆ ಕೊಡೋ ಪರಿಹಾರ ನಮಗೂ ಕೊಡಿ – ನಕ್ಸಲ್‌ ವಿಕ್ರಂ ಗೌಡ ಸಹೋದರಿ ಮನವಿ

    ಉಡುಪಿ: ಎನ್‌ಕೌಂಟರ್‌ (Encounter) ಆಗಿದೆ, ಜೀವವೂ ಹೋಗಿದೆ. ಜೀವ ವಾಪಸ್‌ ಕೊಡೋದಕ್ಕೆ ಸಾಧ್ಯವಿಲ್ಲ. ಸರೆಂಡರ್‌ ಕೊಡೋ ಪರಿಹಾರ ನಮಗೂ ಕೊಡಿ ಎಂದು ಮೃತ ನಕ್ಸಲ್‌ ಕಾರ್ಯಕರ್ತ ವಿಕ್ರಂ ಗೌಡ (Vikram Gowda) ಸಹೋದರಿ ಸುಗುಣ ಮನವಿ ಮಾಡಿದ್ದಾರೆ.

    ರಾಜ್ಯದಲ್ಲಿ ನಕ್ಸಲ್ ಶರಣಾಗತಿ ವಿಚಾರ ಚರ್ಚೆಯಲ್ಲಿರುವ ಸಂದರ್ಭ ಇತ್ತೀಚೆಗೆ ಎನ್‌ಕೌಂಟರ್‌ಗೆ ಬಲಿಯಾದ ನಕ್ಸಲ್‌ ಕಾರ್ಯಕರ್ತ ವಿಕ್ರಂ ಗೌಡ ಸಹೋದರಿ ಪ್ರತಿಕ್ರಿಯೆ ನೀಡಿದ್ದಾರೆ. ಅಣ್ಣನ ಜೀವ ವಾಪಸ್ ಕೊಡೋದಕ್ಕೆ ಸಾಧ್ಯವಿಲ್ಲ, ಪರಿಹಾರ ಆದ್ರೂ ನೀಡಿ ಅಂತ ಮನವಿ ಮಾಡಿದ್ದಾರೆ.

    ನಾವು ಕಷ್ಟದಲ್ಲಿದ್ದೇವೆ ಸ್ವಂತ ಮನೆಯಾಗಬೇಕಿದೆ. ಒಂದು ದಿನ ಕೆಲಸಕ್ಕೆ ಹೋಗದಿದ್ದರೂ ನಮ್ಮ ದಿನ ಸಾಗೋದಿಲ್ಲ. ಸರೆಂಡರ್ ಆಗುವವರಿಗೆ ಕೊಡೋ ಪರಿಹಾರ ನಮಗೂ ಕೊಡಿ ಸಾಕು. ನನ್ನ ಅಣ್ಣನ ಜೀವ ಕೊಡಲು ಸಾಧ್ಯವಿಲ್ಲ, ಎನ್‌ಕೌಂಟರ್ ಆಗಿದೆ ಅವರ ಜೀವ ಹೋಗಿಯಾಗಿದೆ. ಉಳಿದವರಿಗೆ ಕೊಡೋ ಪರಿಹಾರವನ್ನ ನಮಗೂ ಕೊಟ್ರೆ ಸಾಕು, ನಾವು ಕಷ್ಟದಲ್ಲಿದ್ದೇವೆ ಎಂದು ಸುಗುಣ ಕೋರಿದ್ದಾರೆ.

    ಕಳೆದ ನವೆಂಬರ್‌ 19ರಂದು ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ (Kabbinale Forest) ನಕ್ಸಲ್‌ ಕಾರ್ಯಕರ್ತ ವಿಕ್ರಂ ಗೌಡನನ್ನು ಎನ್‌ಕೌಂಟರ್‌ (Encounter) ಮಾಡಿ ಹತ್ಯೆ ಮಾಡಲಾಗಿತ್ತು.

    3 ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌:
    ವಿಕ್ರಂ ಗೌಡ ಕರ್ನಾಟಕ, ಕೇರಳ, ತಮಿಳುನಾಡು ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಆಗಿದ್ದ. ಅಲ್ಲದೇ ವಿಕ್ರಂ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಮುಖ್ಯ ಕಾರಣ ಅರಣ್ಯ ಇಲಾಖೆಯವರು ಎಂದು ಸ್ಥಳಿಯರಾದ ವಿಕ್ರಮಾರ್ಜುನ ಹೆಗ್ಗಡೆ ʻಪಬ್ಲಿಕ್‌ ಟಿವಿʼಗೆ ತಿಳಿಸಿದ್ದರು.

    ಸುಮಾರು 2002-03ರಿಂದ ಆತ ನಕ್ಸಲ್‌ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾನೆ. ‘ಕರ್ನಾಟಕ ವಿಮೋಚನಾ ಸಂಘ’ ಆರಂಭಿಸಿದಾಗ ಆತ ಅದರಲ್ಲಿ ಸೇರಿಕೊಂಡ. ಸಾಕೇತ್ ರಾಜನ್ ಬಂದ ನಂತರ ಅದು ನಕ್ಸಲ್‌ರ ಸಂಘ ಎನ್ನುವಂತದ್ದು ಗೊತ್ತಾಯಿತು. ಆರಂಭದಲ್ಲಿ ಅವರು ಲಾವಣಿ ಪದಗಳನ್ನು ಹಾಡುತ್ತಾ ಮನೆ ಮನೆಗೆ ಬರುತ್ತಿದ್ದರು. ತದನಂತರ ನಮ್ಮ ಊರಿನಲ್ಲಿ ಜನಾಭಿಪ್ರಾಯ ಸಂಗ್ರಹಿಸುತ್ತಿದ್ದರು. ನನ್ನನ್ನು ಒಮ್ಮೆ ಅವರ ಪ್ರತಿಭಟನೆಗೆ ಕರೆದಿದ್ದ ನಾನು ಹೋಗಿರಲಿಲ್ಲ. ಅದಕ್ಕಾಗಿ ನನ್ನ ಮೇಲೆ ದ್ವೇಷ ಇಟ್ಟಕೊಂಡು 2-3 ಬಾರಿ ನನ್ನ ಮನೆ ಮೇಲೆ ಪ್ರತಿಕಾರ ತೀರಿಸಲು ಮುಂದಾಗಿದ್ದ. 3-4 ಜನರ ತಂಡವನ್ನು ನಮ್ಮ ಮನೆಗೆ ದಾಳಿ ಮಾಡಲು ಕಳುಹಿಸುತ್ತಿದ್ದ. 2-3 ಬಾರಿ ನಮ್ಮ ಮನೆ ಮೇಲೆ ದಾಳಿ ಕೂಡ ಮಾಡಿದ್ದ ಎಂದು ವಿಕ್ರಮಾರ್ಜುನ ಹೇಳಿದ್ದರು.

  • ವಿಕ್ರಂ ಗೌಡನದ್ದು ಫೇಕ್ ಎನ್‌ಕೌಂಟರ್‌ – ಸಿಎಂ, ಗೃಹ ಸಚಿವರ ವಿರುದ್ಧ ಮಾಜಿ ನಕ್ಸಲ್ ಕಿಡಿ

    ವಿಕ್ರಂ ಗೌಡನದ್ದು ಫೇಕ್ ಎನ್‌ಕೌಂಟರ್‌ – ಸಿಎಂ, ಗೃಹ ಸಚಿವರ ವಿರುದ್ಧ ಮಾಜಿ ನಕ್ಸಲ್ ಕಿಡಿ

    – ಪೊಲೀಸರ ಕಥೆ ಗೊತ್ತಿರೋರು ಎನ್‌ಕೌಂಟರ್‌ ಅಂತ ಒಪ್ಪಲ್ಲ

    ಚಿಕ್ಕಮಗಳೂರು: ನಕ್ಸಲ್ ನಾಯಕ ವಿಕ್ರಂ ಗೌಡನ (Vikram Gowda) ಹತ್ಯೆ ತೀವ್ರ ಖಂಡನೀಯ, ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಎನ್‌ಕೌಂಟರ್‌ ಸಮರ್ಥಿಸಿಕೊಂಡಿರುವುದು ದುರಾದೃಷ್ಟಕರ ಎಂದು ಮಾಜಿ ನಕ್ಸಲ್ ನಿಲಗುಳಿ ಪದ್ಮನಾಭ್ (Nilaguli Padmanab) ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಚಿಕ್ಕಮಗಳೂರು (Chikkamagaluru) ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಕ್ರಂ ಗೌಡನ ಹತ್ಯೆ ಅತ್ಯಂತ ಖಂಡನೀಯ, ಯಾರೂ ಒಪ್ಪುವಂತದ್ದಲ್ಲ. ಸತ್ಯವನ್ನು ತಿಳಿದುಕೊಳ್ಳದೆ ಒಮ್ಮುಖ ವರದಿ ನೋಡಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಹತ್ಯೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವುದು ಯಾರೂ ಒಪ್ಪುವುದಿಲ್ಲ. ಪೊಲೀಸರ ಎನ್‌ಕೌಂಟರ್‌ (Police Encounter) ಕಥೆ ಗೊತ್ತಿರೋರು ಯಾರೂ ಇದನ್ನ ಎನ್‌ಕೌಂಟರ್‌ ಅಂತ ಒಪ್ಪಿಕೊಳ್ಳುವುದಿಲ್ಲ. ಇದನ್ನ ಪ್ರಜಾತಂತ್ರವಾದಿಯೂ ಒಪ್ಪುವ ವಿಚಾರವೇ ಅಲ್ಲ. ಹತ್ಯೆ ಕಪೋಲ ಕಲ್ಪಿತವಾಗಿ ಸೃಷ್ಟಿ ಮಾಡಿರುವ ಎನ್‌ಕೌಂಟರ್‌. ಎಲ್ಲೋ ಹಿಡಿದು ಹಿಂಸೆ ನೀಡಿ ಸಾಯಿಸಿ ಕೊನೆಗೆ ಉಡುಪಿಯ ಪೀತಬೈಲಿಗೆ ತಂದು ಮೃತದೇಹ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

    ಹತ್ಯೆ ಮಾಡಿ ಎಂದು ಸಂವಿಧಾನ ಹೇಳಿಲ್ಲ:
    ಹತ್ಯೆಯ ಬಗ್ಗೆ ಮಾಧ್ಯಮದವರಿಗೂ ತಿಳಿಯದಂತೆ ಯಾರಿಗೂ ಮುಖ ತೋರಿಸದೆ, ಎಲ್ಲಾ ವಿಚಾರವನ್ನು ವಂಚಿಸಿದ್ದಾರೆ. ಆರೋಪಿಯನ್ನು ಕೊಲೆ ಮಾಡಿ ಎಂದು ಸಂವಿಧಾನ (Constitution) ಕೂಡ ಹೇಳಿಲ್ಲ. ವಿಕ್ರಂ ಗೌಡನ ಎನ್‌ಕೌಂಟರ್‌ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: Naxal Encounter| 3 ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ನಕ್ಸಲ್‌ ನಾಯಕ ವಿಕ್ರಂ ಗೌಡ ಯಾರು?

    ಸರ್ಕಾರದಿಂದ ಏನೂ ಪ್ರಯೋಜನ ಇಲ್ಲ:
    ಇನ್ನೂ ಸರ್ಕಾರ ನಕ್ಸಲರಿಗೆ (Naxal) ಮುಖ್ಯವಾಹಿನಿಗೆ ಬನ್ನಿ ಅನ್ನುತ್ತೆ. ಬಂದರೆ ಸರ್ಕಾರದಿಂದ ಏನೂ ಪ್ರಯೋಜನ ಇಲ್ಲ. ಕನ್ಯಾಕುಮಾರಿ ಮುಖ್ಯ ವಾಹಿನಿಗೆ ಬಂದು 8 ವರ್ಷವಾಯ್ತು. ನಾನು ಅತೀ ಕಷ್ಟದಲ್ಲಿದ್ದೇನೆ. ಮನೆ ಕೊಡಲಿಲ್ಲ, ನನ್ನ ಗುಡಿಸಲಿಗೆ ಕರೆಂಟ್ ಕೊಡ್ಲಿಲ್ಲ. ಕೇಸ್‌ಗಳು ಹಾಗೆಯೇ ಇವೆ. ವಾರಕ್ಕೆ ಮೂರು-ನಾಲ್ಕು ದಿನ‌ ಕೋರ್ಟ್‌ಗೆ ಅಲೆಯುತ್ತಿದ್ದೇನೆ. ಕನ್ಯಾಕುಮಾರಿ ಏಳೂವರೆ ವರ್ಷಗಳಿಂದ ಜೈಲಿನಲ್ಲಿದ್ದಾರೆ. ಇದು ಮುಖ್ಯವಾಹಿನಿನಾ? ಜೈಲಿನಲ್ಲಿರೋದು ಮುಖ್ಯವಾಹಿನಿಯಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ವಿಕ್ರಂ ಗೌಡ ನಕ್ಸಲ್ ತಂಡ ಸೇರಿದ್ದು ಹೇಗೆ? ಮನೆ ಮನೆಗೆ ಹೇಗೆ ಬರುತ್ತಿದ್ದರು? – ಸ್ಥಳೀಯರು ಬಿಚ್ಚಿಟ್ಟ ಸತ್ಯ ಓದಿ

  • ವಿಕ್ರಂಗೌಡ ಹತ್ಯೆ | ನಕ್ಸಲ್ ಚಟುವಟಿಕೆ ನಿಗ್ರಹಿಸಲು ಎನ್‌ಕೌಂಟರ್: ಸಿದ್ದರಾಮಯ್ಯ

    ವಿಕ್ರಂಗೌಡ ಹತ್ಯೆ | ನಕ್ಸಲ್ ಚಟುವಟಿಕೆ ನಿಗ್ರಹಿಸಲು ಎನ್‌ಕೌಂಟರ್: ಸಿದ್ದರಾಮಯ್ಯ

    ಬೆಂಗಳೂರು: ವಿಕ್ರಂಗೌಡ (Vikram Gowda) ಹಲವು ನಕ್ಸಲ್ (Naxal)  ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

    ನಗರದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ನಕ್ಸಲ್ ವಿಕ್ರಂಗೌಡ ಎನ್‌ಕೌಂಟರ್‌ನಲ್ಲಿ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನಗಳನ್ನು ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿಕ್ರಂಗೌಡಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಶರಣಾಗಿರಲಿಲ್ಲ ಹೀಗಾಗಿ ಎನ್‌ಕೌಂಟರ್ ಮಾಡಲಾಗಿದೆ ಎಂದು ಸಮರ್ಥನೆ ನೀಡಿದ್ದಾರೆ.

    ವಿಕ್ರಂಗೌಡನನ್ನು ಹಿಡಿದವರಿಗೆ ಕೇರಳ ಸರ್ಕಾರ 25 ಲಕ್ಷ ರೂ. ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ಬಹುಮಾನವನ್ನು ಘೋಷಿಸಿತ್ತು ಎಂದು ಇದೇ ವೇಳೆ ತಿಳಿಸಿದ್ದಾರೆ.

    ಉಡುಪಿಯ ಹೆಬ್ರಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ (Kabbinale Forest) ನಕ್ಸಲ್‌ ನಿಗ್ರಹ ದಳ (ANF) ಮತ್ತು ನಕ್ಸಲರ ಮಧ್ಯೆ ಸೋಮವಾರ ಸಂಜೆ ಗುಂಡಿನ ಕಾಳಗ ನಡೆದಿತ್ತು. ಈ ವೇಳೆ ನಕ್ಸಲ್‌ ವಿಕ್ರಂಗೌಡನನ್ನು (Vikram Gowda) ಎನ್‌ಕೌಂಟರ್‌ (Encounter) ಮಾಡಿ ಹತ್ಯೆ ಮಾಡಲಾಗಿತ್ತು.

  • ವಿಕ್ರಂ ಗೌಡ ನಕ್ಸಲ್ ತಂಡ ಸೇರಿದ್ದು ಹೇಗೆ? ಮನೆ ಮನೆಗೆ ಹೇಗೆ ಬರುತ್ತಿದ್ದರು? – ಸ್ಥಳೀಯರು ಬಿಚ್ಚಿಟ್ಟ ಸತ್ಯ ಓದಿ

    ವಿಕ್ರಂ ಗೌಡ ನಕ್ಸಲ್ ತಂಡ ಸೇರಿದ್ದು ಹೇಗೆ? ಮನೆ ಮನೆಗೆ ಹೇಗೆ ಬರುತ್ತಿದ್ದರು? – ಸ್ಥಳೀಯರು ಬಿಚ್ಚಿಟ್ಟ ಸತ್ಯ ಓದಿ

    ಉಡುಪಿ: ವಿಕ್ರಂ ಗೌಡ (Vikram Gowda) ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಮುಖ್ಯ ಕಾರಣ ಅರಣ್ಯ ಇಲಾಖೆಯವರು ಎಂದು ಸ್ಥಳಿಯರಾದ ವಿಕ್ರಮಾರ್ಜುನ ಹೆಗ್ಗಡೆ ಹೇಳಿದ್ದಾರೆ.

    ವಿಕ್ರಂಗೌಡನ ಬಗ್ಗೆ ಸ್ಥಳಿಯರಾದ ವಿಕ್ರಮಾರ್ಜುನ ಹೆಗ್ಗಡೆ ಮಾತನಾಡಿ, ಕಳೆದ ಕೆಲವು ವರ್ಷಗಳಿಂದ ನಕ್ಸಲ್‌ರ (Naxal) ಚಲನವಲನಗಳು ನಮ್ಮೂರಲ್ಲಿ ಇರಲಿಲ್ಲ. ವಿಕ್ರಂಗೌಡ ನಮ್ಮ ಊರಿನವನಾದ್ದರಿಂದ ಆತ ಹೆಚ್ಚಾಗಿ ಬರುತ್ತಿದ್ದಾನೆ ಅನ್ನುವುದು ಬಿಟ್ಟರೆ, ಬಂದ ಬಗ್ಗೆ ಖಚಿತ ಮಾಹಿತಿ ಇರಲಿಲ್ಲ. ಆತನ ತಂದೆ ತಾಯಿ ತೀರಿಕೊಂಡಿದ್ದರಿಂದ ನಮಗೆ ಆತ ಬರುವ ಹೋಗುವ ಬಗ್ಗೆ ಸುಳಿವು ಇರಲಿಲ್ಲ. ಅವನ ದೊಡ್ಡಪ್ಪ ನಮ್ಮ ಊರಿನಲ್ಲಿದ್ದಾರೆ. ಅವರು ಮಲೆಕುಡಿಯ ಸಮಾಜದಿಂದ ಬಂದವರು ಎಂದು ಹೇಳಿದರು. ಇದನ್ನೂ ಓದಿ: Naxal Encounter| 3 ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ನಕ್ಸಲ್‌ ನಾಯಕ ವಿಕ್ರಂ ಗೌಡ ಯಾರು?

    ಸುಮಾರು 2002-03ರಲ್ಲಿ ಈ ಆತ ಇಂತಹ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾನೆ. ‘ಕರ್ನಾಟಕ ವಿಮೋಚನಾ ಸಂಘ’ ಎನ್ನುವಂತಹ ತಂಡವನ್ನು ಆರಂಭಿಸಿದಾಗ ಆತ ಅದರಲ್ಲಿ ಸೇರಿಕೊಂಡ. ಆ ನಂತರ ಸಾಕೇತ್ ರಾಜನ್ ಬಂದ ನಂತರ ಅದು ನಕ್ಸಲ್‌ರ ಸಂಘ ಎನ್ನುವಂತದ್ದು ಗೊತ್ತಾಯಿತು. ಆರಂಭದಲ್ಲಿ ಅವರು ಲಾವಣಿ ಪದಗಳನ್ನು ಹಾಡುತ್ತಾ ಮನೆ ಮನೆಗೆ ಬರುತ್ತಿದ್ದರು. ತದನಂತರ ನಮ್ಮ ಊರಿನಲ್ಲಿ ಜನಾಭಿಪ್ರಾಯವನ್ನು ಸಂಗ್ರಹಿಸುತ್ತಿದ್ದರು. ನನ್ನನ್ನು ಒಮ್ಮೆ ಅವರ ಪ್ರತಿಭಟನೆಗೆ ಕರೆದಿದ್ದ ನಾನು ಹೋಗಿರಲಿಲ್ಲ. ಅದಕ್ಕಾಗಿ ನನ್ನ ಮೇಲೆ ದ್ವೇಷ ಇಟ್ಟಕೊಂಡು 2-3 ಬಾರಿ ನನ್ನ ಮನೆ ಮೇಲೆ ಪ್ರತಿಕಾರವನ್ನು ತೀರಿಸಲು ಮುಂದಾಗಿದ್ದ. 3-4 ಜನರ ತಂಡವನ್ನು ನಮ್ಮ ಮನೆಗೆ ದಾಳಿ ಮಾಡಲು ಕಳುಹಿಸುತ್ತಿದ್ದ. 2-3 ಬಾರಿ ನಮ್ಮ ಮನೆ ಮೇಲೆ ದಾಳಿ ಕೂಡ ಮಾಡಿದ್ದ ಎಂದು ತಿಳಿಸಿದರು. ಇದನ್ನೂ ಓದಿ: ಉಡುಪಿಯ ಕಬ್ಬಿನಾಲೆಯಲ್ಲಿ ಎನ್‌ಕೌಂಟರ್‌ – ನಕ್ಸಲ್‌ ನಾಯಕ ವಿಕ್ರಂ ಗೌಡ ಹತ್ಯೆ

    ವಿಕ್ರಂಗೌಡ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಮುಖ್ಯ ಕಾರಣ ಅರಣ್ಯ ಇಲಾಖೆಯವರು. ಅವರು ಆತನ ಮೆಲೆ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದರು. ಇದರಿಂದಾಗಿ ಆತ ಈ ತಂಡದಲ್ಲಿ ತೊಡಗಿಕೊಂಡು ಅಲ್ಲಿಂದ ಆತ ಆ ತಂಡದ ಜೊತೆಗೆ ಬೆಳೆದ. ವಿಕ್ರಂ ಸಾಧು ಸ್ವಭಾವದ ಹುಡುಗ. ಈ ಮಟ್ಟಕ್ಕೆ ನಕ್ಸಲ್ ನಾಯಕನಾಗುತ್ತಾನೆ ಎನ್ನುವುದು ಕನಸು ಮನಸಿನಲ್ಲೂ ಅಂದುಕೊಂಡಿರಲಿಲ್ಲ. 5ನೇ ತರಗತಿ ತನಕ ಮಾತ್ರ ಓದಿದ್ದ. ಆಮೇಲೆ ಮುಂಬೈಗೆ ಹೋಗಿ ಹೊಟೇಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ನಂತರ ಊರಿಗೆ ಬಂದು ಇಂತಹ ಕೆಲಸದಲ್ಲಿ ತೊಡಗಿಕೊಂಡ. ಆತನಿಗೆ ಅನೇಕ ಬಾರಿ ನಾನು ಬುದ್ಧಿವಾದ ಹೇಳಿದ್ದೆ ಆದರೂ ಆತ ಕೇಳಲಿಲ್ಲ ಎಂದರು.

    13 ವರ್ಷಗಳ ಬಳಿಕ ಮಲೆನಾಡು ಕರಾವಳಿಯಲ್ಲಿ ನಕ್ಸಲ್ ಎನ್‌ಕೌಂಟರ್ (Naxal Encounter) ನಡೆದಿದೆ. ಕರ್ನಾಟಕ, ಕೇರಳ, ತಮಿಳುನಾಡು ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ. ಉಡುಪಿಯ ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ ಎನ್‌ಕೌಂಟರ್ ಮಾಡಿ ವಿಕ್ರಂ ಗೌಡನನ್ನು ಹತ್ಯೆ ಮಾಡಿದೆ. ಸೋಮವಾರ ಸಂಜೆ ನಡೆದ ಗುಂಡಿನ ಕಾಳಗದಲ್ಲಿ ಎರಡು, ಮೂರು ನಕ್ಸಲರು ಗಾಯಗೊಂಡಿದ್ದು ಅವರಿಗೆ ಅರಣ್ಯದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಗ್ಯಾರಂಟಿ ಎಫೆಕ್ಟ್‌- ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ದರ ಏರಿಕೆ ಬಿಸಿ

    ಯಾರು ಈ ವಿಕ್ರಂ ಗೌಡ?
    ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಆಗಿರುವ ವಿಕ್ರಂ ಗೌಡನ ಮೂಲ ಉಡುಪಿ ಹೆಬ್ರಿ ತಾಲೂಕಿನ ಕೂಡ್ಲು ನಾಡ್ವಾಲು ಗ್ರಾಮ. ದಕ್ಷಿಣ ಭಾರತದಲ್ಲಿ ನಕ್ಸಲ್ ಸಂಘಟನೆಯ ನಾಯಕತ್ವ ತಮಿಳುನಾಡು ಮೂಲದ ಕುಪ್ಪುಸ್ವಾಮಿ ವಹಿಸಿಕೊಂಡಿದ್ದರೆ, ರಾಜ್ಯದಲ್ಲಿನ ಜವಾಬ್ದಾರಿ ವಿಕ್ರಂ ಗೌಡ ಹೆಗಲಿಗೆ ಬಿದ್ದಿತ್ತು. 20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿರುವ ವಿಕ್ರಂ ಗೌಡ ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ. ಕಾರ್ಮಿಕ ಸಂಘಟನೆಯಿಂದ ಬಂದಿದ್ದ ವಿಕ್ರಂ ಗೌಡ ಮೂರು ಬಾರಿ ಕರ್ನಾಟಕ ಪೊಲೀಸರ ಕೈಯಿಂದ ಪರಾರಿಯಾಗಿದ್ದ. 2016ರಲ್ಲಿ ಕೇರಳ ಪೊಲೀಸರಿಗೂ (Kerala Police) ಚಳ್ಳೆಹಣ್ಣು ತಿನ್ನಿಸಿದ್ದ.

    ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಸರ್ಕಾರದ ಯೋಜನೆಗೆ ವಿಕ್ರಂ ಗೌಡ ವಿರೋಧ ಹೊಂದಿದ್ದ. ಅಷ್ಟೇ ಅಲ್ಲದೇ ಈ ಯೋಜನೆಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದ್ದಕ್ಕೆ ಗೌರಿ ಲಂಕೇಶ್ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಿತ್ತಿಪತ್ರಗಳನ್ನೂ ಕೂಡ ಹಂಚಿದ್ದ. ಇದನ್ನೂ ಓದಿ: ಸೋಮವಾರ ಸಂಜೆ ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ – ದೃಢಪಡಿಸಿದ ಪರಮೇಶ್ವರ್

  • Naxal Encounter| 3 ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ನಕ್ಸಲ್‌ ನಾಯಕ ವಿಕ್ರಂ ಗೌಡ ಯಾರು?

    Naxal Encounter| 3 ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ನಕ್ಸಲ್‌ ನಾಯಕ ವಿಕ್ರಂ ಗೌಡ ಯಾರು?

    ಬೆಂಗಳೂರು/ ಉಡುಪಿ: 13 ವರ್ಷಗಳ ಬಳಿಕ ಮಲೆನಾಡು ಕರಾವಳಿಯಲ್ಲಿ ನಕ್ಸಲ್ ಎನ್‌ಕೌಂಟರ್‌ (Naxal Encounter) ನಡೆದಿದೆ. ಕರ್ನಾಟಕ, ಕೇರಳ, ತಮಿಳುನಾಡು ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ನಕ್ಸಲ್‌ ನಾಯಕ ವಿಕ್ರಂ ಗೌಡ (Vikram Gowda) ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ.

    ಉಡುಪಿಯ ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ (Kabbinale Forest) ನಕ್ಸಲ್‌ ನಿಗ್ರಹ ಪಡೆ (ANF) ಎನ್‌ಕೌಂಟರ್‌ ಮಾಡಿ ವಿಕ್ರಂ ಗೌಡನನ್ನು ಹತ್ಯೆ ಮಾಡಿದೆ.  ಸೋಮವಾರ ಸಂಜೆ  ನಡೆದ  ಗುಂಡಿನ ಕಾಳಗದಲ್ಲಿ ಎರಡು, ಮೂರು ನಕ್ಸಲರು ಗಾಯಗೊಂಡಿದ್ದು ಅವರಿಗೆ ಅರಣ್ಯದಲ್ಲಿ (Forest) ಶೋಧ ಕಾರ್ಯ ನಡೆಯುತ್ತಿದೆ.

    ಯಾರು ಈ ವಿಕ್ರಂ ಗೌಡ?
    ಕರ್ನಾಟಕದ ಮೋಸ್ಟ್ ವಾಂಟೆಡ್ ನಕ್ಸಲ್ ಆಗಿರುವ ವಿಕ್ರಂ ಗೌಡನ ಮೂಲ ಉಡುಪಿ ಹೆಬ್ರಿ ತಾಲೂಕಿನ ಕೂಡ್ಲು ನಾಡ್ವಾಲು ಗ್ರಾಮ. ದಕ್ಷಿಣ ಭಾರತದಲ್ಲಿ ನಕ್ಸಲ್ ಸಂಘಟನೆಯ ನಾಯಕತ್ವ ತಮಿಳುನಾಡು ಮೂಲದ ಕುಪ್ಪುಸ್ವಾಮಿ ವಹಿಸಿಕೊಂಡಿದ್ದರೆ, ರಾಜ್ಯದಲ್ಲಿನ ಜವಾಬ್ದಾರಿ ವಿಕ್ರಂ ಗೌಡ ಹೆಗಲಿಗೆ ಬಿದ್ದಿತ್ತು.

    20ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿರುವ ವಿಕ್ರಂ ಗೌಡ ಕಳೆದ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ. ಕಾರ್ಮಿಕ ಸಂಘಟನೆಯಿಂದ ಬಂದಿದ್ದ ವಿಕ್ರಂ ಗೌಡ ಮೂರು ಬಾರಿ ಕರ್ನಾಟಕ ಪೊಲೀಸರ ಕೈಯಿಂದ ಪರಾರಿಯಾಗಿದ್ದ. 2016ರಲ್ಲಿ ಕೇರಳ ಪೊಲೀಸರಿಗೂ ಚಳ್ಳೆಹಣ್ಣು ತಿನ್ನಿಸಿದ್ದ.

    ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಸರ್ಕಾರದ ಯೋಜನೆಗೆ ವಿಕ್ರಂ ಗೌಡ ವಿರೋಧ ಹೊಂದಿದ್ದ. ಅಷ್ಟೇ ಅಲ್ಲದೇ ಈ ಯೋಜನೆಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದ್ದಕ್ಕೆ ಗೌರಿ ಲಂಕೇಶ್ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಿತ್ತಿಪತ್ರಗಳನ್ನೂ ಕೂಡ ಹಂಚಿದ್ದ.