Tag: Kabini

  • ಕೆಆರ್‌ಎಸ್‌ನಿಂದ 1.50 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ – ಕಬಿನಿಯಿಂದ 80,000 ಕ್ಯುಸೆಕ್‌ ನೀರು ಹೊರಕ್ಕೆ

    ಕೆಆರ್‌ಎಸ್‌ನಿಂದ 1.50 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ – ಕಬಿನಿಯಿಂದ 80,000 ಕ್ಯುಸೆಕ್‌ ನೀರು ಹೊರಕ್ಕೆ

    ಮಂಡ್ಯ: ಕೇರಳದ ವಯನಾಡು ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರದ ಕಾರಣ ಕೆಆರ್‌ಎಸ್ (KRS)-ಕಬಿನಿ ಒಳಹರಿವು ಕ್ಷಣ ಕ್ಷಣಕ್ಕೂ ಹೆಚ್ತಿದೆ. ಹೀಗಾಗಿ ಮಂಗಳವಾರ ಸಂಜೆ 7 ಗಂಟೆಯಿಂದ 1.50 ಲಕ್ಷ ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ. ಜೊತೆಗೆ ಕಬಿನಿಯಿಂದಲೂ (Kabini) 80 ಸಾವಿರ ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ.

    ಹೊರಹರಿವಿನ ಪ್ರಮಾಣ 2 ಲಕ್ಷ ಕ್ಯುಸೆಕ್‌ಗಿಂತಲೂ ಅಧಿಕವಾಗಿದೆ. ಹೀಗಾಗಿ ನದಿಪಾತ್ರದ ಕಾವೇರಿ ನಿಗಮ ಎಚ್ಚರಿಕೆಯ ಸಂದೇಶ ನೀಡಿದೆ. ನದಿ ಪಾತ್ರಕ್ಕೆ ಹೋಗ್ಬೇಡಿ. ಆಸ್ತಿಪಾಸ್ತಿ, ಜಾನುವಾರು ರಕ್ಷಿಸಿಕೊಳ್ಳಿ. ಸುರಕ್ಷಿತ ಪ್ರದೇಶದಲ್ಲಿರಿ ಎಂದು ಸೂಚನೆ ನೀಡಿದೆ. ಮಂಡ್ಯ ಜಿಲ್ಲಾಡಳಿತ ಸಹ ಜಾನುವಾರುಗಳು ಹಾಗೂ ಆಸ್ತಿ ಪಾಸ್ತಿ ರಕ್ಷಿಸಿಕೊಳ್ಳುವಂತೆ ಎಚ್ಚರಿಸಿದೆ. ಹೇಮಾವತಿ ಒಳಹರಿವು-ಹೊರಹರಿವು 80 ಸಾವಿರ ಕ್ಯೂಸೆಕ್‌ನಷ್ಟಿದೆ. ಮೆಟ್ಟೂರು ಡ್ಯಾಂ 119 ಅಡಿ ತಲುಪಿದ್ದು, ಬುಧವಾರ (ಜು.31) ಭರ್ತಿಯಾಗಲಿದೆ.

  • Dam Water Level: ಕೆಆರ್‌ಎಸ್ ಬಹುತೇಕ ಭರ್ತಿ – ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಹೇಗಿದೆ?

    Dam Water Level: ಕೆಆರ್‌ಎಸ್ ಬಹುತೇಕ ಭರ್ತಿ – ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಹೇಗಿದೆ?

    ಬೆಂಗಳೂರು: ರಾಜ್ಯದಲ್ಲಿ ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗಿರುವ ಹಿನ್ನೆಲೆಯಲ್ಲಿ ಜಲಾಶಯಗಳಿಗೆ ಜೀವಕಳೆ ಬಂದಿವೆ. ಮಂಡ್ಯದ ಕೆಆರ್‌ಎಸ್‌ ಡ್ಯಾಂ (KRS Dam) ಬಹುತೇಕ ಭರ್ತಿಯಾಗಿದೆ. 124 ಅಡಿ (49 TMC) ಪೈಕಿ 122.70 ಅಡಿ (46.567 ಟಿಎಂಸಿ) ನೀರು ಸಂಗ್ರಹವಾಗಿದೆ. ಇದರೊಂದಿಗೆ ರಾಜ್ಯದ ಪ್ರಮುಖ ಜಲಾಶಯಗಳೂ (Reservoirs) ಬಹುತೇಕ ಭರ್ತಿಯ ಹಂತ ತಲುಪಿವೆ. ಯಾವ ಜಲಾಶಯದ ನೀರಿನ ಮಟ್ಟ ಎಷ್ಟಿದೆ? ಎಂಬುದನ್ನು ತಿಳಿಯಲು ಮುಂದೆ ಓದಿ…

    ಹೇಮಾವತಿ ಜಲಾಶಯ

    ಗರಿಷ್ಠ ಮಟ್ಟ – 2,922.00 ಅಡಿ
    ನೀರಿನ ಮಟ್ಟ – 2,919.52 ಅಡಿ
    ಗರಿಷ್ಠ ಸಾಮರ್ಥ್ಯ – 37.103 ಟಿಎಂಸಿ
    ಇಂದಿನ ಸಾಮರ್ಥ್ಯ – 34.725 ಟಿಎಂಸಿ
    ಒಳಹರಿವು – 23,700 ಕ್ಯುಸೆಕ್‌
    ಹೊರಹರಿವು – 3200 ಕ್ಯುಸೆಕ್‌

    ಕೆಆರ್‌ಎಸ್ ಜಲಾಶಯ

    ಗರಿಷ್ಠ ಮಟ್ಟ – 124.80 ಅಡಿ.
    ಇಂದಿನ ಮಟ್ಟ – 122.70 ಅಡಿ.
    ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ.
    ಇಂದಿನ ಸಂಗ್ರಹ ಮಟ್ಟ – 46.567 ಟಿಎಂಸಿ
    ಒಳ ಹರಿವು – 69,617 ಕ್ಯುಸೆಕ್‌
    ಹೊರ ಹರಿವು – 27,184 ಕ್ಯುಸೆಕ್‌

    ಕಬಿನಿ ಜಲಾಶಯ

    ಗರಿಷ್ಟ ಮಟ್ಟ : 2,284 (19.52 ಟಿಎಂಸಿ)
    ಇಂದಿನ ಮಟ್ಟ : 2,281.23 (17,77 ಟಿಎಂಸಿ)
    ಹೊರ ಹರಿವು : 35,000 ಕ್ಯುಸೆಕ್‌
    ಒಳ ಹರಿವು : 39,000 ಕ್ಯುಸೆಕ್‌

    ಆಲಮಟ್ಟಿ ಜಲಾಶಯ

    ಗರಿಷ್ಠ ಮಟ್ಟ – 519.60 ಅಡಿ.
    ಇಂದಿನ ಮಟ್ಟ – 517.90 ಅಡಿ
    ಗರಿಷ್ಠ ಸಾಂದ್ರತೆ – 123.081 ಟಿಎಂಸಿ
    ಇಂದಿನ ಸಾಂದ್ರತೆ – 96.306 ಟಿಎಂಸಿ
    ಒಳ ಹರಿವು – 99,584 ಕ್ಯುಸೆಕ್‌
    ಹೊರ ಹರಿವು – 1,00,064 ಕ್ಯುಸೆಕ್‌

    ಹಾರಂಗಿ ಜಲಾಶಯ

    ಗರಿಷ್ಠ ಮಟ್ಟ 2,859 ಅಡಿಗಳು,
    ಇಂದಿನ ನೀರಿನ ಮಟ್ಟ 2,854.42 ಅಡಿಗಳು
    ಇಂದಿನ ಒಳಹರಿವು – 8,069 ಕ್ಯುಸೆಕ್‌
    ಇಂದಿನ ಹೊರಹರಿವು – 5,750 ಕ್ಯುಸೆಕ್‌
    ಒಟ್ಟು ಸಂಗ್ರಹ ಸಾಮರ್ಥ್ಯ – 8.5 ಟಿಎಂಸಿ
    ಇಂದಿನ ನೀರಿನ ಸಂಗ್ರಹ – 6.9 ಟಿಎಂಸಿ

    ತುಂಗಭದ್ರಾ ಜಲಾಶಯ

    ಗರಿಷ್ಠ ಮಟ್ಟ – 1,633 ಅಡಿ
    ಇಂದಿನ ಮಟ್ಟ – 1,624.13 ಅಡಿ
    ಗರಿಷ್ಠ ಸಾಂದ್ರತೆ – 105.788 ಟಿಎಂಸಿ
    ಇಂದಿನ ಸಾಂದ್ರತೆ – 73.681 ಟಿಎಂಸಿ
    ಒಳ ಹರಿವು – 1,27,792 ಕ್ಯುಸೆಕ್
    ಹೊರ ಹರಿವು – 2,727 ಕ್ಯುಸೆಕ್

    ಲಿಂಗನಮಕ್ಕಿ ಜಲಾಶಯ

    ಗರಿಷ್ಠ ಮಟ್ಟ : 1,819 ಅಡಿ
    ಇಂದಿನ ಮಟ್ಟ : 1,796.5 ಅಡಿ
    ಒಳ ಹರಿವು : 48,796.00 ಕ್ಯುಸೆಕ್‌
    ಹೊರ ಹರಿವು : 1,844 ಕ್ಯುಸೆಕ್‌

    ಭದ್ರಾ ಜಲಾಶಯ

    ಗರಿಷ್ಠ ಮಟ್ಟ: 186 ಅಡಿ
    ಇಂದಿನ ಮಟ್ಟ: 164.4 ಅಡಿ
    ಒಳ ಹರಿವು: 23,674. ಕ್ಯುಸೆಕ್
    ಹೊರ ಹರಿವು: 23,674 ಕ್ಯುಸೆಕ್‌

    ತುಂಗಾ ಜಲಾಶಯ

    ಗರಿಷ್ಠ ಮಟ್ಟ: 588.24 ಅಡಿ
    ಇಂದಿನ ಮಟ್ಟ: 588.24 ಅಡಿ
    ಒಳ ಹರಿವು: 37,290 ಕ್ಯುಸೆಕ್‌
    ಹೊರ ಹರಿವು: 37,290 ಕ್ಯುಸೆಕ್‌

  • ಕೆಆರ್‌ಎಸ್, ಕಬಿನಿಯಿಂದ ಇಂದು ತಮಿಳುನಾಡಿಗೆ 6,075 ಕ್ಯೂಸೆಕ್ ನೀರು

    ಕೆಆರ್‌ಎಸ್, ಕಬಿನಿಯಿಂದ ಇಂದು ತಮಿಳುನಾಡಿಗೆ 6,075 ಕ್ಯೂಸೆಕ್ ನೀರು

    ಮಂಡ್ಯ: ತಮಿಳುನಾಡಿಗೆ (Tamil Nadu) ನೀರು (Water) ಬಿಡುಗಡೆ ಮುಂದುವರಿಕೆಯಾಗಿದ್ದು, ಕೆಆರ್‌ಎಸ್ (KRS) ಹಾಗೂ ಕಬಿನಿ (Kabini) ಡ್ಯಾಂಗಳಿಂದ ಇಂದು 6,075 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.

    ಪ್ರಾಧಿಕಾರ ಹಾಗೂ ಸುಪ್ರೀಂ ಆದೇಶದಂತೆ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ. ಕೆಆರ್‌ಎಸ್‌ನಿಂದ 3,575 ಕ್ಯೂಸೆಕ್, ಕಬಿನಿಯಿಂದ 2,500 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. 2 ಡ್ಯಾಂಗಳಿಂದ ತಮಿಳುನಾಡಿಗೆ ಇಂದು 6,075 ಕ್ಯೂಸೆಕ್ ನೀರು ಬಿಡಲಾಗುತ್ತಿದೆ.

    ಬಿಳುಗುಂಡ್ಲುಗೆ 5 ಸಾವಿರ ಕ್ಯೂಸೆಕ್ ನೀರು ತಲುಪಬೇಕು ಎಂದರೆ ಕನಿಷ್ಠ ಒಂದಿಂದ ಒಂದೂವರೆ ಸಾವಿರ ಕ್ಯೂಸೆಕ್ ಹೆಚ್ಚುವರಿ ನೀರು ಬಿಡಬೇಕು. ಹೀಗಾಗಿ ಪ್ರತಿನಿತ್ಯದ ಕೋಟಾ 5 ಸಾವಿರ ನೀರು ತಲುಪಿಸಲು ಡ್ಯಾಂಗಳಿಂದ 6,075 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಕೆಆರ್‌ಎಸ್ ಡ್ಯಾಂನಿಂದ ನದಿ ಹಾಗೂ ನಾಲೆಗಳಿಗೆ ಸೇರಿ 5,691 ಕ್ಯೂಸೆಕ್ ಹೊರ ಹರಿವು ಇದ್ದು, ಕಬಿನಿಯಲ್ಲಿ ನದಿಗೆ ಮಾತ್ರ 2,500 ಕ್ಯೂಸೆಕ್ ನೀರು ಬಿಡುಗಡೆಯಾಗಿದೆ. ಇದನ್ನೂ ಓದಿ: ಕಾವೇರಿಗಾಗಿ ಶುಕ್ರವಾರ ಕರ್ನಾಟಕ ಬಂದ್- 100ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ

    ಕೆಆರ್‌ಎಸ್ ಡ್ಯಾಂ ಇಂದಿನ ನೀರಿನ ಮಟ್ಟ:
    ಗರಿಷ್ಠ ಮಟ್ಟ – 124.80 ಅಡಿ
    ಇಂದಿನ ಮಟ್ಟ – 97 ಅಡಿ
    ಒಳ ಹರಿವು – 7,451 ಕ್ಯೂಸೆಕ್
    ಹೊರ ಹರಿವು – 5,691 ಕ್ಯೂಸೆಕ್
    ಗರಿಷ್ಠ ಸಂಗ್ರಹ ಸಾಮರ್ಥ್ಯ – 49.452 ಟಿಎಂಸಿ
    ಇಂದು ಸಂಗ್ರಹ ಇರುವ ನೀರು – 20.548 ಟಿಎಂಸಿ ಇದನ್ನೂ ಓದಿ: ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ: ಸಿದ್ದರಾಮಯ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭುಗಿಲೆದ್ದ ಆಕ್ರೋಶದ ನಡುವೆಯೂ ತಮಿಳುನಾಡಿಗೆ ನೀರು; KRS ನೀರಿನ ಮಟ್ಟ 96 ಅಡಿಗೆ ಕುಸಿತ

    ಭುಗಿಲೆದ್ದ ಆಕ್ರೋಶದ ನಡುವೆಯೂ ತಮಿಳುನಾಡಿಗೆ ನೀರು; KRS ನೀರಿನ ಮಟ್ಟ 96 ಅಡಿಗೆ ಕುಸಿತ

    ಮಂಡ್ಯ: ಸುಪ್ರೀಂ ಕೋರ್ಟ್ (Supreme Court) ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದು, KRS ಜಲಾಶಯದ ನೀರಿನ ಮಟ್ಟ 96.90 ಅಡಿಗೆ ಕುಸಿದಿದೆ.

    ನಿನ್ನೆ ತಮಿಳುನಾಡಿಗೆ (TamilNadu) 2,673 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು, ಇಂದು 3,000 ಕ್ಯೂಸೆಕ್‌ಗೆ ಏರಿಕೆಯಾಗಿದೆ. ತಮಿಳುನಾಡಿಗೆ ಕೆಆರ್‌ಎಸ್‌ನಿಂದ ಬಿಡುಗಡೆ ಮಾಡಲಾದ ನೀರಿನ ಪ್ರಮಾಣದಲ್ಲಿ 300 ಕ್ಯೂಸೆಕ್‌ನಷ್ಟು ಹೆಚ್ಚುವರಿ ನೀರು ಹರಿಸಲಾಗಿದೆ. ಇದನ್ನೂ ಓದಿ: ಇಂದು ಮಂಡ್ಯ, ಮದ್ದೂರ್ ಬಂದ್- ಪೊಲೀಸ್ ಬಿಗಿ ಭದ್ರತೆ

    ಮತ್ತೊಂಡೆದೆ ಕೆಆರ್‌ಎಸ್ ಜಲಾಶಯದ (KRS Reservoir) ಹೊರ ಹರಿವಿನ ಪ್ರಮಾಣ ಹೆಚ್ಚಾಗಿದ್ದರೂ ಒಳಹರಿವಿನ ಪ್ರಮಾಣ ಮಾತ್ರ ಕಡಿಮೆಯಾಗಿದೆ. ನಿನ್ನೆ 5,845 ಕ್ಯೂಸೆಕ್ ಇದ್ದ ಒಳ ಹರಿವಿನ ಪ್ರಮಾಣ ಇಂದು 5,147 ಕ್ಯೂಸೆಕ್‌ಗೆ ಇಳಿಕೆಯಾಗಿದೆ. ಇದರಿಂದ 124.80 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದ ಮಟ್ಟ 96.90 ಅಡಿಗೆ ಕುಸಿದಿದೆ. ಇದನ್ನೂ ಓದಿ: ತೀವ್ರ ಆಕ್ರೋಶದ ನಡುವೆಯೂ KRS, ಕಬಿನಿಯಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು

    ಕೆಆರ್‌ಎಸ್ ಇಂದಿನ ನೀರಿನ ಮಟ್ಟ
    ಗರಿಷ್ಟ ಮಟ್ಟ: 124.80 ಅಡಿಗಳು
    ಇಂದಿನ ಮಟ್ಟ: 96.90 ಅಡಿಗಳು
    ಗರಿಷ್ಠ ಸಂಗ್ರಹ: 49.452 ಟಿಎಂಸಿ
    ಇಂದಿನ ಸಂಗ್ರಹ: 20.477 ಟಿಎಂಸಿ
    ಒಳಹರಿವು: 5,147 ಕ್ಯೂಸೆಕ್
    ಹೊರಹರಿವು: 6,034 ಕ್ಯೂಸೆಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತೀವ್ರ ಆಕ್ರೋಶದ ನಡುವೆಯೂ KRS, ಕಬಿನಿಯಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು

    ತೀವ್ರ ಆಕ್ರೋಶದ ನಡುವೆಯೂ KRS, ಕಬಿನಿಯಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು

    ಮಂಡ್ಯ: ತಮಿಳುನಾಡಿಗೆ (Tamil Nadu) ನೀರು ಹರಿಸಬೇಕೆಂಬ ಸುಪ್ರೀಂ ಕೋರ್ಟ್ (Supreme Court) ಆದೇಶದ ಬೆನ್ನಲ್ಲೇ ಮಂಡ್ಯ (Mandya) ಜಿಲ್ಲೆಯಲ್ಲಿ ಅನ್ನದಾತರ ಆಕ್ರೋಶ ಭುಗಿಲೆದ್ದಿದೆ. ಈ ನಡುವೆಯೂ ತಮಿಳುನಾಡಿಗೆ ಕಾವೇರಿ ಹರಿದಿದ್ದು, ಶುಕ್ರವಾರವೂ 5 ಸಾವಿರ ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ.

    ತಮಿಳುನಾಡಿಗೆ ಕೆಆರ್‌ಎಸ್ ಜಲಾಶಯದಿಂದ (KRS Reservoir) 3 ಸಾವಿರ ಕ್ಯೂಸೆಕ್ ನೀರುಬಿಡುಗಡೆ ಮಾಡಲಾಗಿದೆ. ಸೀಪೇಜ್ ಹಾಗೂ ನಾಲೆಗೆ ಹರಿಸಿರುವ ನೀರಿಲ್ಲೇ 3 ಸಾವಿರ ತಮಿಳುನಾಡಿಗೆ ಹರಿಸಲಾಗಿದ್ದು, ಉಳಿದ 2 ಸಾವಿರ ಕ್ಯೂಸೆಕ್ ನೀರನ್ನ ನೀರು ಕಬಿನಿಯಿಂದ (Kabini Reservoir) ಹರಿಸಲಾಗಿದೆ. ಒಟ್ಟಾರೆಯಾಗಿ ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಮತ್ತು ನಾಲೆಗಳಿಗೆ ಸೇರಿ 5,734 ಕ್ಯೂಸೆಕ್ ನೀರು ಬಿಡಲಾಗಿದೆ.

    ಕೆಆರ್‌ಎಸ್ ಜಲಾಶಯದ ಒಳ ಹರಿವು 5,845 ಕ್ಯೂಸೆಕ್ ಇದ್ದು, ಡ್ಯಾಂನ ಇಂದಿನ ನೀರಿನ ಮಟ್ಟ 97.02 ಅಡಿಗೆ ಕುಸಿದಿದೆ. ಡ್ಯಾಂನ ಇಂದಿನ ಸಾಂದ್ರತೆ 20.563 ಟಿಎಂಸಿ ಇದೆ. ಇದನ್ನೂ ಓದಿ: ಕಾವೇರಿ ಹೋರಾಟಕ್ಕೆ ನೇರವಾಗಿ ಇಳಿದ ನಟ ಅಭಿಷೇಕ್ ಅಂಬರೀಶ್

    ಇನ್ನೂ ಮಂಡ್ಯದಲ್ಲಿ ಅನ್ನದಾತರ ಆಕ್ರೋಶ ಭುಗಿಲೆದ್ದಿದ್ದು, ಶುಕ್ರವಾರವೂ (ಇಂದು) ಜಿಲ್ಲೆಯ ಹಲವೆಡೆ ಸುಪ್ರೀಂ ತೀರ್ಪಿನ ವಿರುದ್ಧ ಪ್ರತಿಭಟನೆ ಕೈಗೊಳ್ಳಲಾಗಿದೆ. ರೈತರ ಹೋರಾಟಕ್ಕೆ ಇಂದು ಸಂಸದೆ ಸುಮಲತಾ ಪುತ್ರ ಅಭಿಷೇಕ್ ಅಂಬರೀಶ್ ಸಾಥ್ ನೀಡಿದ್ದು, ಹೋರಾಟದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಶಿವಶಕ್ತಿ ಬಿಂದುವಿನಲ್ಲಿ ಲ್ಯಾಂಡರ್, ರೋವರ್ – ವಿಕ್ರಮ್, ಪ್ರಗ್ಯಾನ್‌ಗೆ ಸಿಗುತ್ತಾ ಮರುಜೀವ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • KRS ನಲ್ಲಿ ನೀರಿನ ಕೊರತೆ – ಕುಡಿಯುವ ನೀರಿಗೆ ಶುರುವಾಯ್ತು ಆತಂಕ!

    KRS ನಲ್ಲಿ ನೀರಿನ ಕೊರತೆ – ಕುಡಿಯುವ ನೀರಿಗೆ ಶುರುವಾಯ್ತು ಆತಂಕ!

    ಮಂಡ್ಯ: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಬಳಿಕ ಇದೀಗ ಮೈಸೂರು (Mysuru) ಜನತೆಗೂ ಕುಡಿಯುವ ನೀರಿಗೆ (Drinking Water) ಕ್ಷಾಮ ಉಂಟಾಗುವ ಭೀತಿ ಶುರುವಾಗಿದೆ.

    ಈ ಬಾರಿ ಮುಂಗಾರು ಕೈಕೊಟ್ಟಿದ್ದು, ಕೆಆರ್‌ಎಸ್ (KRS) ಜಲಾಶಯದ ಒಡಲು ಬರಿದಾಗಿದೆ. ಇದರಿಂದ ಮಂಡ್ಯ ಜಿಲ್ಲೆಯ ರೈತರು (Mandya Farmers) ಬೆಳೆ ಬೆಳೆಯೋದಕ್ಕೂ ನೀರಿಲ್ಲದೇ ಆತಂಕಗೊಂಡಿದ್ದಾರೆ. ಇದನ್ನೂ ಓದಿ: ಬೆಂ-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ 2ನೇ ಹಂತದ ಟೋಲ್ ಆರಂಭ- ಮೊದಲ ದಿನವೇ ಕೈಕೊಟ್ಟ ಸ್ಕ್ಯಾನರ್

    ಕಳೆದ ವರ್ಷ ಜುಲೈ ತಿಂಗಳ ವೇಳೆಗೆಲ್ಲಾ ರೈತರು ಕಬ್ಬು, ಭತ್ತ ಬಿತ್ತನೆ ಕಾರ್ಯದಲ್ಲಿ ತೊಡಗುತ್ತಿದ್ದರು. ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆ ಗರಿಗೆದರುತ್ತಿತ್ತು. ಆದ್ರೆ ಈ ಬಾರಿ ಬಿತ್ತನೆ ಕಾರ್ಯವೂ ಇಲ್ಲದೇ, ಕುಡಿಯುವ ನೀರಿಗೂ ಸಮಸ್ಯೆಯಾಗುವ ಪರಿಸ್ಥಿತಿ ಬಂದೊದಗಿದೆ. ಇದನ್ನೂ ಓದಿ: ಬೆಂ-ಮೈ ಹೆದ್ದಾರಿ ಪರಿಶೀಲನೆ – ಇನ್ನು ಮುಂದೆ ಟೋಲ್ ಬಳಿ ಡ್ರಿಂಕ್ ಆಂಡ್ ಡ್ರೈವ್ ತಪಾಸಣೆ: ಅಲೋಕ್ ಕುಮಾರ್

    ಬಿತ್ತನೆ ಕಾರ್ಯಕ್ಕೆ ಮುಂದಾಗದಂತೆ ಅಧಿಕಾರಿಗಳಿಂದಲೂ ಸೂಚನೆ ನೀಡಲಾಗಿದೆ. ಕಾವೇರಿ ನೀರಾವರಿ ನಿಗಮದ ಸೂಪರ್ಡೆಂಟ್ ಇಂಜಿನಿಯರ್ ಆನಂದ್ ಬಿತ್ತನೆ ಕಾರ್ಯದಲ್ಲಿ ತೊಡಗದಂತೆ ಮನವಿ ರೈತರಿಗೆ ಮನವಿ ಮಾಡಿದ್ದಾರೆ. ಮುಂದೆ ಮಳೆ ನೋಡಿಕೊಂಡು ಬಿತ್ತನೆ ಕಾರ್ಯ ಶುರು ಮಾಡಿ, ಈಗಿನ ಪರಿಸ್ಥಿತಿಯಲ್ಲಿ ಬೆಳೆಗೆ ನೀರು ಹರಿಸಲು ಸಾಧ್ಯವಾಗುವುದಿಲ್ಲ ಎಂದು ಮನವರಿಕೆ ಮಾಡಿದ್ದಾರೆ.

    ಮೈಸೂರು ಜನ ಕುಡಿಯುವ ನೀರಿಗಾಗಿ ಕೆಆರ್‌ಎಸ್ ಜೊತೆಗೆ ಕಬಿನಿ ಜಲಾಶಯದ ನೀರನ್ನ ಅವಲಂಬಿಸಿದ್ದಾರೆ. ಮೈಸೂರು ನಗರ ಪ್ರದೇಶಗಳಿಗೆ ನಿತ್ಯ ಕುಡಿಯಲು ಬರೋಬ್ಬರಿ 305 ಎಂಎಲ್‌ಡಿ ನೀರು ಬೇಕು. ಆದ್ರೆ ಜಲಾಶಯದಲ್ಲಿ ನೀರಿನ ಕೊರತೆ ಭಾರೀ ಪ್ರಮಾಣದಲ್ಲಿ ಉಂಟಾಗಿದ್ದು, ಸದ್ಯದಲ್ಲೇ ಮಳೆಯಾಗದಿದ್ದರೇ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 20 ದಿನ ನೋ ಪ್ರಾಬ್ಲಂ – ಮಳೆ ಬಾರದೆ ಇದ್ರೆ ಮೈಸೂರಿಗೆ ಕುಡಿಯುವ ನೀರಿಗೆ ಹಾಹಾಕಾರ ನಿಶ್ಚಿತ!

    20 ದಿನ ನೋ ಪ್ರಾಬ್ಲಂ – ಮಳೆ ಬಾರದೆ ಇದ್ರೆ ಮೈಸೂರಿಗೆ ಕುಡಿಯುವ ನೀರಿಗೆ ಹಾಹಾಕಾರ ನಿಶ್ಚಿತ!

    – ಕಳೆದ ವರ್ಷ ಸೌಂದರ್ಯ ರಾಶಿಯಾಗಿದ್ದ ಕೆಆರ್‌ಎಸ್ ಈಗ ಖಾಲಿ

    ಮೈಸೂರು/ಮಂಡ್ಯ: ರಾಜ್ಯ ರಾಜಧಾನಿ ನಂತರ ಮೈಸೂರು (Mysuru) ಜಿಲ್ಲೆಗೂ ಈಗ ಕುಡಿಯುವ ನೀರಿನ ಕ್ಷಾಮ ಉಂಟಾಗೋ ಭೀತಿ ಉಂಟಾಗಿದೆ. ಕಾವೇರಿ ಕೊಳ್ಳದಲ್ಲಿ ನಿರೀಕ್ಷಿತ ಮಟ್ಟಕ್ಕೆ ಬಾರದ ಮುಂಗಾರು ಮಳೆಯ ಪರಿಣಾಮ ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗುವ ದಿನಗಳು ಹತ್ತಿರದಲ್ಲೆ ಇವೆ. ಹೀಗಾಗಿ ರೈತರ ಜೊತೆಗೆ ನಗರ ವಾಸಿಗಳಲ್ಲೂ ಆತಂಕ ಹೆಚ್ಚಾಗಿದೆ.

    ಕುಡಿಯುವ ನೀರಿಗಾಗಿ ಕೆಆರ್‌ಎಸ್ (KRS) ಜೊತೆಗೆ ಕಬಿನಿ ಜಲಾಶಯದ ನೀರನ್ನು ಮೈಸೂರಿಗರು ಅವಲಂಬಿಸಿದ್ದಾರೆ. ಮೈಸೂರು ನಗರ ಪ್ರದೇಶಗಳಲ್ಲಿ ನಿತ್ಯ ಕುಡಿಯಲು ಬರೋಬ್ಬರಿ 305 ಎಂಎಲ್‌ಡಿ ನೀರು ಬೇಕು. ಸದ್ಯ ನಗರಕ್ಕೆ ಅಗತ್ಯದಷ್ಟು ಕುಡಿಯುವ ನೀರು ಸರಬರಾಜು ಆಗುತ್ತಿದೆ. ಈಗ ಜಲಾಶಯದಲ್ಲಿ ಇರುವ ನೀರಿನಲ್ಲಿ 20 ದಿನಕ್ಕೆ ಕುಡಿಯುವ ನೀರಿಗೆ ಸಮಸ್ಯೆ ಇಲ್ಲ.

    ಮೈಸೂರು ಜನರು ಕಬಿನಿ ಜಲಾಶಯಕ್ಕಿಂತ ಕಾವೇರಿ ಜಲಾಶಯದ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಕೆಆರ್‌ಎಸ್ ಅಣೆಕಟ್ಟಿನಿಂದ ಮೈಸೂರಿಗೆ ನಿತ್ಯ ಬರೋಬ್ಬರಿ 245 ಎಂಎಲ್‌ಡಿ ನೀರು ಪೂರೈಕೆ ಆಗುತ್ತಿದೆ. ಕಬಿನಿ ಅಣೆಕಟ್ಟಿನಿಂದ 60 ಎಂಎಲ್‌ಡಿ ನೀರು ಪೂರೈಕೆ ಆಗುತ್ತಿದೆ.

    ಕೆಆರ್‌ಎಸ್ ಈಗ ಖಾಲಿ ಖಾಲಿ:
    ಹಳೆ ಮೈಸೂರು ಭಾಗದ ಜೀವನಾಡಿ ಕೆಆರ್‌ಎಸ್ ಡ್ಯಾಂ ನೀರು ಹಾಗೂ ಹಸಿರಿನ ಸೌಂದರ್ಯದಿಂದ ಕಳೆದ ವರ್ಷ ಸರ್ಗಕ್ಕೆ ಕಿಚ್ಚು ಹಚ್ಚುವಂತೆ ಇತ್ತು. ಆದರೆ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕಾವೇರಿ ತಾಯಿಯ ಸೌಂದರ್ಯ ಅಕ್ಷರಶಃ ಕಳೆಗುಂದಿದೆ.

    ಕಳೆದ ವರ್ಷ ಇದೇ ದಿನದ ಆಸುಪಾಸಿನಲ್ಲಿ ಕೆಆರ್‌ಎಸ್ ಡ್ಯಾಂ ದೃಶ್ಯ ನೋಡಿದ್ರೆ ಕಣ್ಣಾಯಿಸಿದ ದೂರವೆಲ್ಲಾ ನೀರು, ಅದರ ಸುತ್ತೇಲ್ಲಾ ಹಸಿರಿನ ರಾಶಿ. ಈ ನೀರು ಮತ್ತು ಹಸಿರು ಎಂಬ ಎರಡು ಆಭರಣಗಳನ್ನು ಧರಿಸಿ ಕಾವೇರಿ ಮಾತೆ ಸೌಂದರ್ಯದ ದೇವತೆಯ ರೀತಿ ಕಂಗೊಳಿಸುತ್ತಾ ಇದ್ದಳು. ಇದನ್ನೂ ಓದಿ: ಧಾರವಾಡ-ಬೆಂಗಳೂರು ನಡುವೆ ಸಂಚರಿಸೋ ವಂದೇ ಭಾರತ್ ರೈಲಿಗೆ ಇಂದು ಮೋದಿ ಚಾಲನೆ

    ಆದ್ರೆ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ದಿನೇ ದಿನೇ ಕುಸಿತ ಕಾಣುತ್ತಿದೆ. ಇದರಿಂದ ನೀರಿನ ಸಮಸ್ಯೆ ಎದುರಾಗಬಹುದು ಎಂಬ ಆತಂಕ ಒಂದು ಕಡೆ ಇದ್ರೆ, ಇನ್ನೊಂದೆಡೆ ಸೌಂದರ್ಯ ದೇವತೆ ರೀತಿಯಲ್ಲಿ ಕಂಗೊಳಿಸುತ್ತಿದ್ದ ಕಾವೇರಿ ಮಾತೆ ಕಳೆಗುಂದಿದ್ದಾಳೆ. ಇದನ್ನೂ ಓದಿ: PSI scam – ಇಂದು ಹೈಕೋರ್ಟ್‍ನಲ್ಲಿ ಮರುಪರೀಕ್ಷೆ ಅರ್ಜಿ ವಿಚಾರಣೆ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಕಬಿನಿಯಿಂದ 38 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ- 50ಕ್ಕೂ ಹೆಚ್ಚು ಹಳ್ಳಿಗಳ ಪ್ರಮುಖ ಮಾರ್ಗ ಬಂದ್

    ಕಬಿನಿಯಿಂದ 38 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ- 50ಕ್ಕೂ ಹೆಚ್ಚು ಹಳ್ಳಿಗಳ ಪ್ರಮುಖ ಮಾರ್ಗ ಬಂದ್

    ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆಯ ಕಬಿನಿ ಜಲಾಶಯ ಭರ್ತಿಯಾಗಿದೆ. ಕಬಿನಿ ಜಲಾಶಯದ 4 ಕ್ರೆಸ್ಟ್ ಗೇಟ್‍ಗಳ ಮೂಲಕ ಒಟ್ಟು 38 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.

    ಜಲಾಶಯದ ಒಳ ಹರಿವು ಇನ್ನೂ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ 2 ಅಡಿ ಭರ್ತಿ ಮಾಡದೆ ನೀರಿನ ಹೊರ ಹರಿವು ಹೆಚ್ಚು ಮಾಡಲಾಗಿದೆ. ಜಲಾಶಯದ ಸುರಕ್ಷತಾ ದೃಷ್ಟಿಯಿಂದ ನೀರಿನ ಒಳ ಹರಿವು ಕಡಿಮೆ ಆಗುವವರೆಗೂ ಇದೇ ರೀತಿ ಎರಡು ಅಡಿ ಬಾಕಿ ಉಳಿಸಿಕೊಳ್ಳಲಾಗುತ್ತದೆ. ಈ ನೀರು ನಂಜನಗೂಡು ಮೂಲಕ ಟಿ. ನರಸೀಪುರದ ಸಂಗಮ ಸೇರಿ ಅಲ್ಲಿಂದ ಗಗನಚುಕ್ಕಿ ಹಾದು ತಮಿಳುನಾಡು ಸೇರುತ್ತದೆ. ಇದನ್ನೂ ಓದಿ: ಅನ್ನ ಹಾಕಿದ ಮನೆಗೆ ದ್ರೋಹ ಬಗೆದ – ಪ್ರೇಯಸಿಗಾಗಿ ಮಾಲೀಕರಿಗೆ ಉಂಡೆ ನಾಮ ಹಾಕಿದ ಖದೀಮ

    ಕಬಿನಿ ಜಲಾಶಯದಿಂದ 38 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದ್ದು, ಇದರಿಂದ ಈ ಭಾಗದ ಹಲವು ಸೇತುವೆಗಳು ಮುಳುಗಡೆಯಾಗಿವೆ. ಪ್ರಮುಖವಾಗಿ ಬಿದರಹಳ್ಳಿ, ಎನ್. ಬೇಗೂರು ಪಂಚಾಯಿತಿ ವ್ಯಾಪ್ತಿಯ 50ಕ್ಕೂ ಹಳ್ಳಿಗಳ ಪ್ರಮುಖ ಸಂಪರ್ಕ ಮಾರ್ಗವೇ ಬಂದ್ ಆಗಿದೆ. ಇದರಿಂದ ಈ ಹಳ್ಳಿಯ ಜನರು ತಾತ್ಕಾಲಿಕ ವಾಗಿ ಪರ್ಯಾಯ ಮಾರ್ಗ ಬಳಸುತ್ತಿದ್ದಾರೆ. ಇದನ್ನೂ ಓದಿ: ರಾಷ್ಟ್ರೀಯ ಹೊಸ ಲಾಂಛನಕ್ಕೆ ವಿಪಕ್ಷಗಳ ಆಕ್ರೋಶ – ಆಕ್ರಮಣಕಾರಿ ಲಾಂಛನ ಅಂತ ಕಟು ಟೀಕೆ

    Live Tv
    [brid partner=56869869 player=32851 video=960834 autoplay=true]

  • ಕಬಿನಿ ಜಲಾಶಯದಲ್ಲಿ ಅಧಿಕ ನೀರು ಹೊರಕ್ಕೆ- ನಂಜನಗೂಡಿನಲ್ಲಿ ಪ್ರವಾಹ ಭೀತಿ

    ಕಬಿನಿ ಜಲಾಶಯದಲ್ಲಿ ಅಧಿಕ ನೀರು ಹೊರಕ್ಕೆ- ನಂಜನಗೂಡಿನಲ್ಲಿ ಪ್ರವಾಹ ಭೀತಿ

    ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆಯ ಕಬಿನಿ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಬಿಡುತ್ತಿರುವ ಪರಿಣಾಮ ಕಪಿಲಾ ನದಿ ತುಂಬಿ ಹರಿಯುತ್ತಿದ್ದು ಪ್ರವಾಹ ಭೀತಿ ಸೃಷ್ಟಿಯಾಗಿದೆ.

    ಭಾರೀ ಮಳೆಗೆ ನಂಜನಗೂಡಿನ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಹದಿನಾರು ಕಾಲು ಮಂಟಪ ಬಹುತೇಕ ಮುಳುಗಡೆಯಾಗಿದೆ. ಹೀಗಾಗಿ ಭಕ್ತರಿಗೆ ಸ್ನಾನಘಟ್ಟದಲ್ಲಿ ಸ್ನಾನಕ್ಕೆ ನಿರ್ಬಂಧ ಹೇರಲಾಗಿದೆ. ಇನ್ನೂ ಎರಡು ದಿನ ಇದೇ ಪ್ರಮಾಣದಲ್ಲಿ ನೀರಿನ ಹೊರ ಹರಿವು ಇದ್ದರೆ, ನಂಜನಗೂಡಿನ ಬಹುತೇಕ ತಗ್ಗು ಪ್ರದೇಶಗಳ ಮನೆಗಳು ಮುಳುಗಡೆಯಾಗುವುದು ನಿಶ್ಚಿತವಾಗಿದೆ. ಇದನ್ನೂ ಓದಿ: ಇಂದಿನಿಂದ ಆಗುಂಬೆ ಘಾಟಿ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ

    ಪರಶುರಾಮ ದೇವಸ್ಥಾನ ಮುಳುಗಡೆ: ಕಬಿನಿ ಜಲಾಶಯದಿಂದ ಹೆಚ್ಚಿನ ನೀರು ಹೊರ ಬಿಡುತ್ತಿರುವ ಕಾರಣ ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ. ನಂಜನಗೂಡು ಪಟ್ಟಣದ ಹೊರ ವಲಯದಲ್ಲಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ. ಪರಶುರಾಮ ದೇವರಿಗೆ ಜಲದಿಗ್ಭಂಧನ ಸೃಷ್ಟಿಯಾಗಿದ್ದು, ನೀರಿನ ಪ್ರಮಾಣ ತಗ್ಗುವವರೆಗೂ ದೇವರಿಗೆ ಪೂಜೆ ಇಲ್ಲ. ಇದನ್ನೂ ಓದಿ: ಗೊಟಬಯ ರಾಜಪಕ್ಸೆ ಇನ್ನೂ ದೇಶದಲ್ಲಿಯೇ ಇದ್ದಾರೆ: ಮಹಿಂದಾ ಯಾಪಾ ಅಬೇವರ್ಧನ

    Live Tv
    [brid partner=56869869 player=32851 video=960834 autoplay=true]

  • ಕಬಿನಿ ಶಕ್ತಿಮಾನ್ ಇನ್ನಿಲ್ಲ

    ಕಬಿನಿ ಶಕ್ತಿಮಾನ್ ಇನ್ನಿಲ್ಲ

    ಮೈಸೂರು: ಕಬಿನಿ ಶಕ್ತಿಮಾನ್ ಎಂದೇ ಪ್ರತೀತಿ ಪಡೆದಿದ್ದ ನೀಳ ದಂತದ, ಸುಂದರ ನಡಿಗೆಯ ಭೋಗೇಶ್ವರ ಹೆಸರಿನ ಆನೆ ಇಂದು ನಿಧನ ಹೊಂದಿದೆ.

    ಗುಂಡ್ರೆ ಅರಣ್ಯ ವ್ಯಾಪ್ತಿಯಲ್ಲಿ ಆನೆಯ ಕಳೆಬರಹ ಪತ್ತೆಯಾಗಿದ್ದು, ಕಬಿನಿ ಹಿನ್ನಿರಿನಲ್ಲಿ ಪ್ರವಾಸಿಗರಿಗೆ ದರ್ಶನ ನೀಡುತ್ತಿದ್ದ ಭೋಗೇಶ್ವರ ವಯೋಸಹಜ ನಿಧನ ಹೊಂದಿದೆ. ಕಬಿನಿಯ ಹಿರಿಯಣ್ಣನಿಗೆ 60 ವರ್ಷಕ್ಕೂ ಹೆಚ್ಚು ವಯಸ್ಸಾಗಿತ್ತು. ಇದನ್ನೂ ಓದಿ: ಬೂದಿಮುಚ್ಚಿದ ಕೆಂಡದಂತೆ ಭಾರತ – ಯುಪಿಯಲ್ಲಿ 250ಕ್ಕೂ ಗಲಭೆಕೋರರು ಅರೆಸ್ಟ್

    ಸುಮಾರು 4 ಅಡಿಗೂ ಉದ್ದದ ನೀಳ ದಂತ, ಸುಂದರ ನಡಿಗೆ ಮೂಲಕವೇ ಪ್ರಾಣಿ ಪ್ರೀಯರ ಮನಗೆದ್ದಿದ್ದ ಆನೆ ಇದಾಗಿತ್ತು.