Tag: kacha badam

  • ಕಾರ್ ಅಪಘಾತದ ಬಗ್ಗೆ ಹೊಸ ಹಾಡು ರಚಿಸಿದ ಕಚ್ಚಾ ಬಾದಮ್ ಗಾಯಕ ಭುಬನ್

    ಕಾರ್ ಅಪಘಾತದ ಬಗ್ಗೆ ಹೊಸ ಹಾಡು ರಚಿಸಿದ ಕಚ್ಚಾ ಬಾದಮ್ ಗಾಯಕ ಭುಬನ್

    ಕೋಲ್ಕತ್ತಾ: ತನ್ನ ಕಾರು ಅಪಘಾತಕ್ಕೀಡಾದ ಬಗ್ಗೆಯೇ ಕಚ್ಚಾ ಬಾದಮ್ ಗಾಯಕ ಭುಬನ್ ಬದ್ಯಾಕರ್ ಅವರು ಹೊಸ ಹಾಡು ರಚಿಸಿದ್ದಾರೆ. ಈ ಹಾಡು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

    ಭುವನ್ ಅವರು ಸೆಕೆಂಡ್ ಹ್ಯಾಂಡ್ ಕಾರನ್ನು ಖರೀದಿಸಿದ್ದರು. ಡ್ರೈವಿಂಗ್ ಕಲಿಯುವಾಗ ದುರಾದೃಷ್ಟವಶಾತ್ ಗೋಡೆಗೆ ಡಿಕ್ಕಿ ಹೊಡೆದು ಅಪಘಾತವಾಗಿದ್ದು, ಈ ವೇಳೆ ಅವರು ಅಪಘಾತದಿಂದ ಪಾರಾಗಿದ್ದರು. ಈ ಅಪಘಾದ ಕುರಿತಾಗಿ ಭುಬನ್ ಬದ್ಯಾಕರ್ ಅವರು ತಮ್ಮ  ಕ್ರಿಯಾಶೀಲತೆ ಮೂಲಕವಾಗಿ ದೇವರು ಹೇಗೆ ಅವರನ್ನು ರಕ್ಷಿಸಿದ ಎನ್ನುವ ಕುರಿತಾಗಿ ಹಾಡಿದ್ದಾರೆ.

    ಕಡಲೆ ಕಾಯಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಭುಬನ್ ಅವರು ಕಚ್ಚಾ ಬದಾಮ್ ಹಾಡು ಹಾಡಿ ರಾತ್ರಿ ಬೆಳಗಾವುದೊರಳಗೆ ಭಾರೀ ಫೇಮಸ್ ಆಗಿದ್ದರು. ಇವರ ಹಾಡು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಅಲ್ಲದೆ ಅನೇಕ ಮಂದಿ ರೀಲ್ಸ್ ಕೂಡ ಮಾಡುತ್ತಿದ್ದಾರೆ. ಹಳೆಯ ಚೈನ್, ಮೊಬೈಲ್‍ಗಳನ್ನು ತೆಗೆದುಕೊಂಡು ಅದಕ್ಕೆ ಪ್ರತಿಯಾಗಿ ಭುಬನ್ ಕಡಲೆಕಾಯಿ ನೀಡುತ್ತಿದ್ದರು. ಹಾಡಿನ ಸಾಹಿತ್ಯ ಕೂಡ ಅದೇ ಅರ್ಥವನ್ನು ನೀಡಿತ್ತು. ತಾನು ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆದಿರುವುದಕ್ಕೆ ಖುಷಿ ಇದೆ ಎಂದಿದ್ದಾರೆ. ಅಲ್ಲದೆ ಆ ಬಳಿಕ ಅವರಿಗೆ ಸಿನಿಮಾ ಹಾಡುಗಳನ್ನು ಹಾಡುವ ಅವಕಾಶವು ದೊರೆಯಿತು. ಇದನ್ನೂ ಓದಿ: ಅವಧಿಗೂ ಮುನ್ನವೇ ರಾಜ್ಯದಲ್ಲಿ ಚುನಾವಣೆ ಬರುವ ಸಾಧ್ಯತೆ: ಹೆಚ್‍ಡಿಕೆ

    ಇತ್ತೀಚೆಗೆ ಭುಬನ್ ಅವರು ಕೋಲ್ಕತ್ತಾದ ಪಬ್‍ನಲ್ಲಿ ಹಾಡು ಹಾಡಲು ತೆರಳಿದ್ದರು. ರಾಕ್ ಸ್ಟಾರ್‍ನಂತೆ ಡ್ರೆಸ್ಸಿಂಗ್ ಮಾಡುವ ಮೂಲಕ ನ್ಯೂ ಲುಕ್‍ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದರು. ಇತ್ತೀಚೆಗೆ ಪಶ್ಚಿಮ ಬಂಗಾಳದ ಪೊಲೀಸರು ಕೂಡ ಭುಬನ್ ಅವರನ್ನು ಸನ್ಮಾನ ಮಾಡಿದ್ದರು.

  • ಕಚ್ಚಾ ಬದಾಮ್ ಎಂದು ಹಾಡಿದ್ದವನ ಆತಂಕವೇನು ಗೊತ್ತಾ?

    ಕಚ್ಚಾ ಬದಾಮ್ ಎಂದು ಹಾಡಿದ್ದವನ ಆತಂಕವೇನು ಗೊತ್ತಾ?

    ಕೋಲ್ಕತ್ತ: ರಾತ್ರೋರಾತ್ರಿ ಸ್ಟಾರ್ ಆಗಿರುವ ಎಷ್ಟೋ ಉದಾಹರಣೆಗಳು ನಮ್ಮ ಮುಂದೆ ಇವೆ. ಹೀಗೆ ಕಡಲೆಕಾಯಿ ಮಾರುತ್ತಾ ಜೀವನ ಸಾಗಿಸುತ್ತಿದ್ದ ಭುಬನ್ ಅವರು ಹಾಡಿದ್ದ ಒಂದು ಹಾಡು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆದರೆ ಈ ಸ್ಟಾರ್ ಪಟ್ಟ ಭುಬನ್ ಅವರಿಗೆ ಒಂದು ಆತಂಕವನ್ನುಂಟು ಮಾಡಿದೆ.

    ನಾನು ಕಲಾವಿದನಾಗಿ ಉಳಿಯಲು ಬಯಸುತ್ತೇನೆ. ನಾನೀಗ ಸೆಲಬ್ರೆಟಿಯಾಗಿದ್ದೇನೆ. ನಾನೊಬ್ಬ ಸೆಲೆಬ್ರಿಟಿಯಾಗಿ ಕಡಲೆಕಾಯಿ ಮಾರಲು ಹೊರಟರೆ ಅವಮಾನ ಎದುರಿಸಬೇಕಾಗುತ್ತದೆ. ನಾನು ಕಡಲೆಕಾಯಿ ಮಾರಾಟ ಮಾಡುವುದಿಲ್ಲ ಎಂದು  ಭುಬನ್ ಅವರು ಆತಂಕವ್ಯಕ್ತ ಪಡಿಸಿದ್ದಾರೆ.

    ಹಳೆಯ ಚೈನ್, ಮೊಬೈಲ್‍ಗಳನ್ನು ತೆಗೆದುಕೊಂಡು ಅದಕ್ಕೆ ಪ್ರತಿಯಾಗಿ ಕಡಲೆಕಾಯಿ ನೀಡುತ್ತಿದ್ದರು ಭುಬನ್. ಈ ಹಾಡಿನ ಸಾಹಿತ್ಯ ಕೂಡ ಅದೇ ಅರ್ಥವನ್ನು ನೀಡುತ್ತದೆ. ಅವರಿಗೆ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆದಿರುವುದಕ್ಕೆ ಖುಷಿ ಇದೆ. ಇತ್ತೀಚೆಗೆ ಪಶ್ಚಿಮ ಬಂಗಾಳ ಪೊಲೀಸರು ಭುಬನ್ ಅವರನ್ನು ಸನ್ಮಾನಿಸಿದ್ದಾರೆ. ಇವರ ಒಂದು ಹಾಡು ಸೋಶಿಯಲ್ ಮೀಡಿಯಾದಲ್ಲಿ ಕಮಾಲ್ ಮಾಡಿದೆ. ಇದನ್ನೂ ಓದಿ:  ಹರ್ಷನ ಒಂದೊಂದು ರಕ್ತದ ಹನಿಯೂ ವ್ಯರ್ಥವಾಗದಂತೆ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಶಪಥ ಮಾಡ್ತೇವೆ: ಪ್ರಮೋದ್ ಮುತಾಲಿಕ್

    ಹಾಡಿನ ಸಾಹಿತ್ಯ ಅರ್ಥವಾಗದಿದ್ದರೂ, ಭುಬನ್ ಹಾಡಿದ ರೀತಿ ಎಲ್ಲರಿಗೂ ಇಷ್ಟವಾಗಿತ್ತು. ಹೀಗಾಗಿ, ಸೋಶಿಯಲ್ ಮೀಡಿಯಾದಲ್ಲಿ ಈ ಹಾಡು ಸಖತ್ ಸೌಂಡ್ ಮಾಡುತ್ತಿದೆ. ಭುಬನ್ ಕರೆಸಿ ಕಚ್ಚಾ ಬಾದಾಮ್.. ಹಾಡನ್ನು ರೆಕಾರ್ಡ್ ಮಾಡಿ, ಸಾಂಗ್ ಒಂದನ್ನು ಬಿಡಲಾಗಿದೆ. ಹೀಗಾಗಿ ಅವರನ್ನು ನೋಡುವ ದೃಷ್ಟಿ ಈಗ ಬದಲಾಗಿದೆ. ಈಗ ಅವರು ಮತ್ತೆ ಕಡಲೆಕಾಯಿ ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

  • ಕಚ್ಚಾ  ಬಾದಾಮ್ ಹಾಡಿ ಟ್ರೋಲಾದ ರಾನು ಮಂಡಲ್

    ಕಚ್ಚಾ ಬಾದಾಮ್ ಹಾಡಿ ಟ್ರೋಲಾದ ರಾನು ಮಂಡಲ್

    ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ಕಚ್ಚಾ ಬಾದಾಮ್ ಹಾಡನ್ನು ನೀವು ಕೇಳಿದ್ದಿರಾ?. ಆದರೆ ಇದೇ ಹಾಡನ್ನು ರಾನು ಮಂಡಲ್ ಹಾಡಿ ಟ್ರೋಲ್‍ಗೆ ಒಳಗಾಗಿದ್ದಾರೆ.

    ಪಶ್ಚಿಮ ಬಂಗಾಳದ ಕಡಲೆಕಾಯಿ ವ್ಯಾಪಾರಿ ಭೂಬನ್ ಬದ್ಯಾಕರ್ ಹಾಡಿದ ಈ ಹಾಡು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್‍ನಲ್ಲಿದೆ. ಕಚ್ಚಾ ಬಾದಾಮ್ ಹಾಡಿನ ಡಿಜೆ ಸೇರಿದಂತೆ ಹಲವು ವರ್ಶನ್‍ಗಳು ಬಂದಿವೆ.

    ಈ ಹಿಂದೆ ಒಂದೇ ಒಂದು ಹಾಡಿನಿಂದ ಸೆನ್ಸೇಶನ್ ಆಗಿದ್ದ ರಾನು ಮಂಡಲ್ ಈ ವೈರಲ್ ಹಾಡನ್ನು ಹಾಡಿದ್ದಾರೆ. ರಾನು ಗಾಯನದ ಕಚ್ಚಾ ಬಾದಾಮ್ ಹಾಡು ಕೂಡಾ ಈಗ ವೈರಲ್ ಆಗುತ್ತಿದೆ. ಈ ವಿಡೀಯೋಗೆ ನೆಟ್ಟಿಗರು ಮಾತ್ರ ವಿಭಿನ್ನವಾಗಿ ಕಾಮೆಂಟ್ ಮಾಡುತ್ತಿದ್ದಾರೆ. ಓಂ ಶಾಂತಿ ಬಾದಾಮ್, ಆರ್‌ಐಪಿ ಬಾದಾಮ್ ಸಾಂಗ್ ಎಂದೆಲ್ಲಾ ಟ್ರೋಲ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಇನ್‌ಸ್ಟಾಗ್ರಾಮ್ ನಲ್ಲಿ ಟ್ರೆಂಡ್ ಆಯ್ತು ಕಡಲೆಕಾಯಿ ಮಾರುವವನ ಹಾಡು

    ಪಶ್ಚಿಮ ಬಂಗಾಳದ ಲಕ್ಷೀನಾರಾಯಣಪುರದ ನಿವಾಸಿ ಭುವನ್ ಬಡ್ಯಾಕರ್ ಪ್ರತೀ ದಿನ ಕಡಲೆಕಾಯಿ ಮಾರಾಟ ಮಾಡಲು ಸೈಕಲ್‍ನಲ್ಲಿ ಊರಿಂದೂರಿಗೆ ಪ್ರಯಾಣಿಸುತ್ತಾರೆ. ಕಡಲೆಕಾಯಿ ಮಾರಾಟದಿಂದ ಪ್ರತಿ ದಿನ 250 ರೂ. ಸಂಪಾದಿಸುವ ಭುವನ್ ಅವರಿಗೆ ಪತ್ನಿ ಹಾಗೂ ಮೂವರು ಮಕ್ಕಳಿದ್ದಾರೆ. ಪೇರ್ ಚುರಾ ಹಾಥೇರ್ ಬಾಲಾ ಥಾಕೆ ಜೋಡಿ ಸಿಟಿ ಗೋಲ್ಡ್ ಎರ್ ಚೈನ್ ದಿಯೆ ಜಬೆನ್ ಟೇಟ್ ಶೋಮನ್ ಶೋಮನ್ ಬಾದಾಮ್ ಪಬೆನ್. ಅಂದರೆ ನಿಮ್ಮ ಬಳಿ ಬಳೆ ಅಥವಾ ಸರ ಇದ್ದರೆ ಅವುಗಳನ್ನು ನನಗೆ ನೀಡಬಹುದು. ನಾನು ಅದಕ್ಕೆ ಸಮಾನ ಭಾಗದ ಕಡಲೆಕಾಯಿಯನ್ನು ನಿಮಗೆ ನೀಡುತ್ತೇನೆ ಎಂಬುದು ಈ ಹಾಡಿನ ಅರ್ಥ. ಇದನ್ನೂ ಓದಿ: ಶೀಘ್ರವೇ 50 ದೇಶಗಳಲ್ಲಿ ಲಭ್ಯವಾಗಲಿದೆ ಡಿಸ್ನಿ ಪ್ಲಸ್

    ಭುವನ್ ಅವರು ಈ ಹಾಡನ್ನು ಹೇಳಿಕೊಂಡು ಕಡಲೆಕಾಯಿ ಮಾರಾಟ ಮಾಡುತ್ತಿದ್ದುದನ್ನು ನಿವಾಸಿಗರು ವೀಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ. ಈ ವೀಡಿಯೋವನ್ನು ಮೊದಲ ಬಾರಿಗೆ 2021ರ ನವೆಂಬರ್‌ನಲ್ಲಿ ಹಂಚಿಕೊಳ್ಳಲಾಗಿತ್ತು. ಇದೀಗ ಕಡಲೆಕಾಯಿ ಮಾರುವವನ ಹಾಡನ್ನು ನೆಟ್ಟಿಗರು ಹಲವು ಮ್ಯೂಸಿಕ್‍ನೊಂದಿಗೆ ರಿಮಿಕ್ಸ್ ಮಾಡಿ ಇನ್‍ಸ್ಟಾಗ್ರಾಮ್‍ನಲ್ಲಿ ಡ್ಯಾನ್ಸ್‌ಗಳಿಗೆ ಬಳಸುತ್ತಿದ್ದಾರೆ. ಆದರೆ ರಾನು ಮಂಡಲ್ ಈ ಹಾಡಿನ ಮೂಲಕವಾಗಿ ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿದ್ದಾರೆ.

    ರಾನು ಮಂಡಲ್ ಅವರು ಮೊದಲ ಬಾರಿಗೆ ಏಕ್ ಪ್ರಾರ್ ಕಾ ನಗ್ಮಾ ಹೈ ಹಾಡಿನ ವೀಡಿಯೋ ನಂತರ ರಾತ್ರೋರಾತ್ರಿ ಸೋಶಿಯಲ್ ಮೀಡಿಯಾ ಸ್ಟಾರ್ ಆಗಿದ್ದರು. 2019ರಲ್ಲಿ ಆಗಸ್ಟ್‌ನಲ್ಲಿ ಪಶ್ಚಿಮ ಬಂಗಾಳದ ರಾಣಾಘಾಟ್ ನಿಲ್ದಾಣದಲ್ಲಿ  ಇಂಜಿನಿಯರ್ ಆಗಿರುವ ಅತಿಂದ್ರ ಚಕ್ರವರ್ತಿ ಅವರು ರಾನು ಮಂಡಲ್ ಅವರ ಹಾಡನ್ನು ರೆಕಾರ್ಡ್ ಮಾಡಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ರಾತ್ರೋರಾತ್ರಿ ಸ್ಟಾರ್ ಆದ ರಾನು ಮಂಡಲ್ ಹಿಮೇಶ್ ರೇಶಮಿಯಾ ಅವರ ಸಿನಿಮಾಕ್ಕೆ ಹಾಡು ಹಾಡಿದ್ದರು.