Tag: Kadamba

  • ಕದಂಬ ಹೋಟೆಲ್‍ಗೆ ಹುಸಿ ಬಾಂಬ್ ಬೆದರಿಕೆ ಪತ್ರ

    ಕದಂಬ ಹೋಟೆಲ್‍ಗೆ ಹುಸಿ ಬಾಂಬ್ ಬೆದರಿಕೆ ಪತ್ರ

    ಬೆಂಗಳೂರು: ರಾಮೇಶ್ವರಂ ಕೆಫೆ (Rameshwaram Cafe) ಬಾಂಬ್ ಬ್ಲಾಸ್ಟ್ ಪ್ರಕರಣದ ಬೆನ್ನಲ್ಲೇ ಇದೀಗ ಕದಂಬ ಹೋಟೆಲ್‍ಗೆ (Kadamba Hotel) ಬಾಂಬ್ ಬೆದರಿಕೆ ಹಾಕಿರುವ ಪತ್ರವೊಂದು ದೊರೆತಿದೆ.

    ಹೆಚ್ ಎಂ ಟಿ ಗ್ರೌಂಡ್ ಬಳಿ ಇರುವ ಕದಂಬ ಹೋಟೆಲ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಜಾಲಹಳ್ಳಿ ಪೊಲೀಸ್ ಸ್ಟೇಷನ್ ಗೆ ಅನಾಮಧೇಯ ಪತ್ರ ಬಂದಿದೆ. ಕೂಡಲೇ ಜಾಲಹಳ್ಳಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬಾಂಬ್ ಸ್ಕ್ವಾಡ್, ಶ್ವಾನ ದಳಗಳಿಂದ ಪರಿಶೀಲನೆ ನಡೆಸಿದ್ದಾರೆ.

    ಈ ಪತ್ರ ಪೋಸ್ಟ್ ಆಫೀಸ್ ಮೂಲಕ ಬಂದಿದ್ದು, ಅರ್ಧ ಗಂಟೆ ಮುಂಚಿತವಾಗಿ ಜಾಲಹಳ್ಳಿ ಪೊಲೀಸರು ಸ್ವೀಕರಿಸಿದ್ದರು. ಪತ್ರವು ಒಂದು ಪೇಜ್ ಇದ್ದು, ಈ ಸಂಬಂಧ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ಬಯಲಾಗಿದೆ.

    ಎಲ್ಲ ಪರಿಶೀಲನೆ ಮಾಡಲಾಗಿದೆ. ಯಾವುದೇ ರೀತಿಯ ಸ್ಫೋಟಕ ವಸ್ತುಗಳು ಇರೋದು ಪತ್ತೆ ಆಗಿಲ್ಲ. ಎಲ್ಲಾ ಪರಿಶೀಲನೆ ಮಾಡಲಾಗಿದ್ದು ಮತ್ತೊಮ್ಮೆ ಬಾಂಬ್ ಸ್ಕ್ವಾಡ್ ತಂಡದಿಂದ ಪರಿಶೀಲನೆ ಮಾಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

    ಪತ್ರದಲ್ಲಿ ಏನಿದೆ..?: ಅವಾಚ್ಯ ಶಬ್ಧಗಳಿಂದ ನಿಂದಿಸಿ ಪೊಲೀಸರಿಗೆ ಬೈದಿರುವ ಅನಾಮಿಕ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಮಾಡಿದ್ದು ನಾನೇ. ಈಗ ಈ ಹೊಟೇಲ್‍ನಲ್ಲಿ ಬಾಂಬ್ ಇಟ್ಟಿರುವುದು ಕೂಡ ನಾನೇ ಎಂದು ಹೇಳಿದ್ದಾನೆ. ಇದನ್ನೂ ಓದಿ: West Bengal: 2016 ನೇಮಕಾತಿ ರದ್ದುಗೊಳಿಸಲು ಕೋಲ್ಕತ್ತಾ ಹೈಕೋರ್ಟ್‌ ಆದೇಶ

    ಬೆಚ್ಚಿ ಬಿದ್ದ ಜನ: ಕದಂಬ ಹೋಟೆಲ್‍ನಲ್ಲಿ ಸೀಮಂತ ಕಾರ್ಯಕ್ರಮ ನಡೆಯುತ್ತಿತ್ತು. ಇದೇ ವೇಳೆ ಏಕಾಏಕಿ ಶ್ವಾನದಳದೊಂದಿಗೆ ಎಂಟ್ರಿ ಕೊಟ್ಟ ಪೊಲೀಸರು ಬಾಂಬ್ ಇದೆ ಎಂದು ಹೇಳಿದ್ದಾರೆ. ಇದರಿಂದ ಭಯಭೀತರಾದ ಜನ ಹೋಟ್‍ನಿಂದ ಹೊರಕ್ಕೆ ಓಡಿ ಬಂದಿದ್ದಾರೆ.

    ಸೀಮಂತ ಕಾರ್ಯಕ್ರಮ ಇತ್ತು ತುಂಬಾ ಖುಷಿಯಾಗಿದ್ದೆ. ಪೊಲೀಸರು ಬಂದು ಬಾಂಬ್ ಇದೆ ಅಂತ ಹೇಳಿದ್ರು ಭಯ ಆಯ್ತು. ಎಲ್ಲಾ ಹೊರಗಡೆ ಬಂದ್ವಿ ಇದರಿಂದ ತುಂಬಾ ಬೇಜಾರಾಗಿದೆ. ಕಾರ್ಯಕ್ರಮ ಮಾಡಿಕೊಳ್ಳಲು ಖುಷಿ ಇತ್ತು. ಆದರೆ ಎಂಜಾಯ್ ಮಾಡಲು ಆಗಲಿಲ್ಲ ತುಂಬಾ ಬೇಜಾರಾಗಿದೆ ಎಂದು ಸೀಮಂತ ಮಾಡಿಕೊಳ್ಳುವ ಹೆಣ್ಮಗಳು ಬೇಸರ ವ್ಯಕ್ತಪಡಿಸಿದ್ದಾರೆ.

  • ಕದಂಬ ನೌಕಾನೆಲೆಯ ವೈಮಾನಿಕ ಸಮಿಕ್ಷೆ ನಡೆಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

    ಕದಂಬ ನೌಕಾನೆಲೆಯ ವೈಮಾನಿಕ ಸಮಿಕ್ಷೆ ನಡೆಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

    ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ ಇಂದು ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಭೇಟಿ ನೀಡಿದರು. ನೌಕಾಪಡೆಯ ಮುಖ್ಯಸ್ಥ, ಅಡ್ಮಿರಲ್ ಕರಂಬೀರ್ ಸಿಂಗ್‍ರೊಂದಿಗೆ ಗೋವಾದಿಂದ ಹೆಲಿಕಾಪ್ಟರ್ ಮೂಲಕ ಐಎನ್‍ಎಸ್ ಕದಂಬ ನೌಕಾನೆಲೆಯ ಹೆಲಿಪ್ಯಾಡ್‍ಗೆ ಆಗಮಿಸುವ ವೇಳೆ ಕದಂಬ ನೌಕಾನೆಲೆಯ ಎರಡನೇಯ ಹಂತದ ವಿಸ್ತರಣಾ ಕಾಮಗಾರಿಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು.

    ನೌಕಾನೆಲೆಗೆ ಆಗಮಿಸಿದ ರಕ್ಷಣಾ ಸಚಿವರನ್ನ ವೆಸ್ಟರ್ನ್ ನೇವಲ್ ಕಮಾಂಡ್, ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್, ವೈಸ್ ಅಡ್ಮಿರಲ್ ಆರ್.ಹರಿ ಕುಮಾರ್ ಮತ್ತು ಕರ್ನಾಟಕ ನೌಕಾ ಪ್ರದೇಶದ ಧ್ವಜ ಅಧಿಕಾರಿ, ರಿಯರ್ ಅಡ್ಮಿರಲ್ ಮಹೇಶ್ ಸಿಂಗ್ ಸ್ವಾಗತಿಸಿದರು. ಬಳಿಕ ನೌಕಾಪ್ರದೇಶದ ಸರ್ವೇಕ್ಷಣೆ ನಡೆಸಿದ ಸಚಿವ ರಾಜನಾಥ ಸಿಂಗ್ ರಿಗೆ ಅಧಿಕಾರಿಗಳು ಎರಡನೇಯ ಹಂತದ ಕಾಮಗಾರಿ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಹಡಗುಗಳ ರಿಪೇರಿ ಕಾರ್ಯ ಕೈಗೊಳ್ಳುವ ಲಿಫ್ಟಿಂಗ್ ಯಂತ್ರಗಳ ಸಾಮರ್ಥ್ಯವನ್ನು ಪ್ರದರ್ಶಿಸಲಾಯಿತು. ಇದನ್ನೂ ಓದಿ: ಕೋವಿಡ್ ವಾರ್ಡ್‍ನಲ್ಲಿ ಆಮ್ಲಜನಕ ಸೋರಿಕೆ ತಡೆಗೆ ನೌಕಾದಳದ ತಾಂತ್ರಿಕ ತಂಡ ನಿಯೋಜನೆ

    ಜೊತೆಗೆ ನೌಕಾ ಜಟ್ಟಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನ ಪರಿಶೀಲಿಸಿದರು. ಬಳಿಕ ನೌಕಾನೆಲೆ ಸಿಬ್ಬಂದಿಗಾಗಿ ನೂತನವಾಗಿ ನಿರ್ಮಿಸಲಾದ ವಸತಿಗೃಹಕ್ಕೆ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದು ಅಲ್ಲಿನ ಮೂಲಭೂತ ಸೌಕರ್ಯಗಳು, ಇಂಧನ ದಕ್ಷತೆ, ತ್ಯಾಜ್ಯ ನಿರ್ವಹಣೆ ಹಾಗೂ ಪರಿಸರ ಸ್ನೇಹಿ ವ್ಯವಸ್ಥೆಗಳನ್ನು ವೀಕ್ಷಿಸಿದರು. ಈ ವೇಳೆ ನೌಕಾನೆಲೆಯ ಎರಡನೇಯ ಹಂತದ ಕಾಮಗಾರಿಯ ಕಾಂಟ್ರ್ಯಾಕ್ಟರ್, ಎಂಜಿನಿಯರ್, ಅಧಿಕಾರಿಗಳು ಹಾಗೂ ನೌಕಾನೆಲೆ ಸಿಬ್ಬಂದಿಯೊಂದಿಗೂ ರಾಜನಾಥ್ ಸಿಂಗ್ ಮಾತುಕತೆ ನಡೆಸಿದರು. ಇದನ್ನೂ ಓದಿ: ಕದಂಬ ನೌಕಾನೆಲೆಗೆ ಸಂಸದೀಯ ಸಮಿತಿ ಸದಸ್ಯರ ಭೇಟಿ

  • ಕದಂಬ ನೌಕಾನೆಲೆಗೆ ಸಂಸದೀಯ ಸಮಿತಿ ಸದಸ್ಯರ ಭೇಟಿ

    ಕದಂಬ ನೌಕಾನೆಲೆಗೆ ಸಂಸದೀಯ ಸಮಿತಿ ಸದಸ್ಯರ ಭೇಟಿ

    – ರಾಹುಲ್ ಗಾಂಧಿ, ಪ್ರತಾಪ್ ಸಿಂಹ ಗೈರು

    ಕಾರವಾರ: ಕದಂಬ ನೌಕಾದಳದ ಎರಡನೇ ಹಂತದ ಕಾಮಗಾರಿ ಪರಿಶೀಲನೆಗೆ ಕೇಂದ್ರ ಸರ್ಕಾರದ ಸಂಸದೀಯ ರಕ್ಷಣಾ ಸ್ಥಾಯಿ ಸಮಿತಿ ಸದಸ್ಯರು ಇಂದು ಕಾರವಾರದ ಅರಗದಲ್ಲಿರುವ ಕದಂಬ ನೌಕಾ ನೆಲೆಗೆ ಭೇಟಿ ನೀಡಿದರು.

    ಜುವಾಲ್ ಓರಮ್ ಅಧ್ಯಕ್ಷತೆಯಲ್ಲಿ ಆಗಮಿಸಿದ ಮೂವತ್ತು ಜನರ ಕಮಿಟಿಯಲ್ಲಿ ರಾಜ್ಯಸಭಾ ಸದಸ್ಯ ಶರದ್ ಪವಾರ್, ವಿಜಯೇಂದ್ರ ಸಿಂಗ್, ಡಾ.ಅಶೋಕ್, ವಾಜಪೇಯಿ, ಪ್ರೇಮಚಂದ್ ಗುಪ್ತಾ, ಸಂಸದರಾದ ಕುಮಾರ್ ಡ್ಯಾನಿಷ್ ಅಲಿ, ಅಜಯ್ ಭಟ್, ಕರ್ನಾಟಕದ ಅಣ್ಣಾಸಾಬ್ ಜೊಲ್ಲೆ, ರಾಮ್ ಶಂಕರ್ ಕಟಾರಿಯ, ಪಿ.ಆರ್.ಫಣಿವೇಂದ್ರ ಮುಂತಾದವರು ಆಗಮಿಸಿದ್ದಾರೆ. ಇಂದು ಕದಂಬ ನೌಕಾ ನೆಲೆಯಲ್ಲಿ ಎರಡನೇ ಹಂತದ ಕಾಮಗಾರಿ ಹಾಗೂ ಭದ್ರತೆ ಕುರಿತು ಸಭೆ ನಡೆಸಿ ಮಾಹಿತಿ ಪಡೆಯಲಿದ್ದಾರೆ.

    ರಾಹುಲ್ ಗಾಂಧಿ, ಪ್ರತಾಪ್ ಸಿಂಹ ಗೈರು:
    ಏಷ್ಯದ ಎರಡನೇ ಅತೀ ದೊಡ್ಡ ನೌಕಾನೆಲೆ ಎಂಬ ಖ್ಯಾತಿ ಹೊಂದಿರುವ ಕಾರವಾರದ ಕದಂಬ ನೌಕಾ ನೆಲೆಯಲ್ಲಿ 2018 ರಲ್ಲಿ ಎರಡನೇ ಹಂತದ 13,500 ಕೋಟಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭವಾಗಿದೆ. ಇದರ ಖರ್ಚು ವೆಚ್ಚ, ಕಾಮಗಾರಿ ಗುಣಮಟ್ಟ, ಪ್ರಸಕ್ತ ಸ್ಥಿತಿಗಳ ಬಗ್ಗೆ ಅಧ್ಯಯನ ನೆಡೆಸಿ ಕಮಿಟಿಯು ಸರ್ಕಾರಕ್ಕೆ ವರದಿ ಸಲ್ಲಿಸುತ್ತದೆ. ಜೊತೆಗೆ ಹಣ ಬಿಡುಗಡೆ ಮತ್ತು ಗುಣಮಟ್ಟದಲ್ಲಿ ಸಹ ಈ ಸಮಿತಿಯ ಪಾತ್ರ ಮುಖ್ಯವಾಗಿರುತ್ತದೆ. ಆದ್ರೆ ಈ ಸಮಿತಿಯಲ್ಲಿದ್ದ ರಾಹುಲ್ ಗಾಂಧಿ ಹಾಗೂ ಪ್ರತಾಪ್ ಸಿಂಹ ಸೇರಿದಂತೆ ಅನೇಕ ಸಂಸದರು ಹಾಗೂ ರಾಜ್ಯಸಭಾ ಸದಸ್ಯರು ಗೈರಾಗಿದ್ದಾರೆ.

    ಗೋವಾದಿಂದ ಆಗಮಿಸಿರುವ ಈ ಕಮಿಟಿಯಲ್ಲಿ ಅಧಿಕಾರಿಗಳು ಸೇರಿ ಒಟ್ಟು ಮೂವತ್ತು ಜನರಿದ್ದು, ಇಂದು ಕದಂಬ ನೌಕಾನೆಲೆಯಲ್ಲಿ ಸಭೆ ನಡೆಸಿ ಕಾಮಗಾರಿ ಪರಿಶೀಲನೆ ಕೈಗೊಂಡು ಸಂಜೆ ಆರು ಗಂಟೆಗೆ ಗೋವಾಕ್ಕೆ ಮರಳಲಿದ್ದಾರೆ.