ಹುಲಿ, ಹಂದಿ, ಕುರಿ, ನಾಯಿ ಸೇರಿದಂತೆ ಇತರ ಪ್ರಾಣಿಗಳು ಅವಳಿ ಮರಿ ಹಾಕುವುದು ಸಾಮಾನ್ಯ. ಆದರೆ ಆನೆಗಳು ಅವಳಿ ಮರಿಗಳಿಗೆ ಜನ್ಮ ನೀಡುವುದು ತೀರಾ ಅಪರೂಪವಾಗಿದೆ. ಇಂತಹ ಅಪರೂಪದ ಘಟನೆಗೆ ಬಂಡೀಪುರ ಸಾಕ್ಷಿಯಾಗಿದೆ.
ಆನೆಗಳು 22 ರಿಂದ 23 ತಿಂಗಳ ಕಾಲ ಗರ್ಭ ಧರಿಸಿರುತ್ತವೆ. ನವಜಾತ ಆನೆ ಮರಿ 90 ರಿಂದ 100 ಕೆಜಿ ತೂಕ ಇರುತ್ತೆ ಎಂದು ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ. ಇದನ್ನೂ ಓದಿ: ತಾಯಿಯಾಗುತ್ತಿದ್ದಾರೆ ಚಂದ್ರನ ರಾಣಿ ಶ್ರಿಯಾ ಸರನ್
ಚಿಕ್ಕಮಗಳೂರು: ನಗರಕ್ಕೆ ಹೊಂದಿಕೊಂಡಂತಿರುವ ಬೀಕನಹಳ್ಳಿಯಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಸಾಕಾನೆಯಿಂದ ಕಾಡಾನೆಯನ್ನ ಕಾಡಿಗಟ್ಟಲು ಮುಂದಾಗಿದ್ದಾರೆ. ಈ ಎಲಿಫೆಂಟ್ ಆಪರೇಷನ್ಗೆ ಮೈಸೂರಿನ ಅಂಬಾರಿ ಆನೆಗಳಾದ ಭೀಮ ಹಾಗೂ ಅರ್ಜುನ ಆಗಮಿಸಿದ್ದು, ಕಾರ್ಯಚರಣೆ ಆರಂಭಿಸಲಾಗಿದೆ.
ತಾಲೂಕಿನ ಬೀಕನಹಳ್ಳಿ ಕಾಡಂಚಿನ ಗ್ರಾಮದಲ್ಲಿ ಕಾಡು ಹಾಗೂ ಹೊಲ-ಗದ್ದೆ, ತೋಟಗಳು ಹೊಂದಿಕೊಂಡಂತಿವೆ. ಹಾಗಾಗಿ, ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಮೀತಿ ಮೀರಿತ್ತು. ಅದರಲ್ಲೂ ಕಳೆದ ಎರಡು ತಿಂಗಳಿಂದ ಈ ಭಾಗದ ರೈತರು ಕಣ್ತುಂಬಿ ನಿದ್ದೆ ಮಾಡಿದ್ದೇ ಇಲ್ಲ. ಪಟಾಕಿ ಸಿಡಿಸಿ ಏನೇ ಮಾಡಿದರು ರೈತರು ಮನೆಗೆ ಬರುವಷ್ಟರಲ್ಲಿ ಮತ್ತದೇ ಜಾಗಕ್ಕೆ ಬಂದು ನಿಂತಿರುತ್ತಿತ್ತು. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ರಾಜ್ಯ ಕಾಂಗ್ರೆಸ್ನ ಪವರ್ ಪಾಯಿಂಟ್ಗಳಲ್ಲ: ಎಂ.ಬಿ.ಪಾಟೀಲ್
ಹಾಗಾಗಿ, ಆನೆ ಹಾವಳಿಯಿಂದ ಇಲ್ಲಿನ ರೈತರು ಕಂಗಾಲಾಗಿದ್ದರು. ಅಡಿಕೆ-ಬಾಳೆ, ತೆಂಗು, ಮೆಣಸು, ಕಾಫಿ, ಭತ್ತ ಸೇರಿದಂತೆ ಯಾವುದೇ ಬೆಳೆಗಳು ಕೂಡ ರೈತರ ಕೈ ಸೇರಿದ್ದಕ್ಕಿಂತ ಆನೆ ಕಾಲಿಗೆ ಸಿಕ್ಕಿ ಮಣ್ಣಾಗಿದ್ದೇ ಹೆಚ್ಚು. ಹಾಗಾಗಿ, ಈ ಭಾಗದ ರೈತರು ಆನೆ ಹಾವಳಿಯಿಂದ ಹೊಲ-ಗದ್ದೆ, ತೋಟಗಳತ್ತ ಮುಖ ಮಾಡೋದನ್ನೇ ಬಿಟ್ಟಿದ್ದರು.
ಮತ್ತಲವು ಬೆಳೆಗಾರರು ಒಂದು ಪ್ರಯತ್ನ ಮಾಡೋಣ ಎಂದು ತೋಟದಲ್ಲಿ ದೊಡ್ಡ-ದೊಡ್ಡ ಸಿಸ್ಟಮ್ ಇಟ್ಟು ಸದಾ ಕಾಲ ಹಾಡನ್ನು ಹಾಕುತ್ತಿದ್ದರು. ಆದರೂ ಆನೆ ಹಾವಾಳಿ ನಿಂತಿರಲಿಲ್ಲ. ಆದರೆ, ಕಳೆದ ಎರಡು ದಿನಗಳ ಹಿಂದಷ್ಟೆ ತಾಲೂಕಿನ ಆಲ್ದೂರು ಸಮೀಪ ಕಾಫಿತೋಟದಲ್ಲಿ ಮೆಣಸು ಕೊಯ್ಯುತ್ತಿದ್ದ ಮಹಿಳೆ ಮೇಲೆ ದಾಳಿ ಮಾಡಿದ ಕಾಡಾನೆ ಆಕೆಯನ್ನ ಕೊಂದು ಮತ್ತೋರ್ವನಿಗೆ ಗಂಭೀರ ಗಾಯಗೊಳಿಸುತ್ತು.
ಬೀಕನಹಳ್ಳಿಯೂ ಕಾಡಂಚಿನ ಗ್ರಾಮ ರೈತರು ಸದಾ ಕಾಲ ಓಡಾಡುತ್ತಿರುತ್ತಾರೆ ಎಂದು ಮನಗಂಡ ಅರಣ್ಯ ಇಲಾಖೆ ನಾಳೆ ಮತ್ತೊಂದು ಅನಾಹುತ ನಡೆದು ಜನರ ಆಕ್ರೋಶಕ್ಕೆ ಇಲಾಖೆ ಕಾರಣವಾಗುವುದು ಬೇಡ ಎಂದು ಆನೆ ಕಾರ್ಯಚರಣೆ ಮುಂದಾಗಿದ್ದಾರೆ. ಎರಡು ಸಾಕಾನೆ ಭೀಮ ಹಾಗೂ ಅರ್ಜುನನ ಜೊತೆ ಮೂರು ತಂಡಗಳಾಗಿರೋ ಅರಣ್ಯ ಇಲಾಖೆಯ 60 ಸಿಬ್ಬಂದಿಗಳು ಒಂಟಿ ಸಲಗವನ್ನ ಕಾಡಿಗಟ್ಟಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಂಟ ಸಮಾಜವನ್ನು ಕೇಂದ್ರ ಹಿಂದುಳಿದ ವರ್ಗಕ್ಕೆ ಸೇರಿಬೇಕು: ರಮಾನಾಥ್ ರೈ ಮನವಿ
ಒಂದೆರಡು ದಿನಗಳ ಕಾರ್ಯಾಚರಣೆಯ ಬಳಿಕ ಬೀಕನಹಳ್ಳಿ ರೈತರಿಗೆ ತಲೆನೋವಾಗಿರೋ ಕಾಡಾನೆಯನ್ನ ಕಾಡಿಗಟ್ಟಲಿದ್ದಾರೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಸಮೀಪದ ಹೊಸೂರು ಹಾಗೂ ಬೆಟ್ಟಗೇರಿ ಹಾಗೂ ದೇವರ ಪುರ ಗ್ರಾಮದ ಬಹುತೇಕ ಭಾಗದಲ್ಲಿ ಕಾಫಿ ತೋಟದಲ್ಲಿ ಬೀಡುಬಿಟ್ಟು ದಾಂಧಲೆ ನಡೆಸುತ್ತ ಸಾರ್ವಜನಿಕರ ಮೇಲೆ ದಾಳಿ ನಡೆಸುತ್ತಿರುವ ಪುಂಡಾನೆಯನ್ನು ಇಂದು ಸೆರೆ ಹಿಡಿಯಲಾಗಿದೆ. ಆದರೆ ಬೇಸರದ ಸಂಗತಿ ಎಂದರೆ ಪುಂಡಾನೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಅರ್ಜುನನ್ನು ಬಳಸಿಕೊಂಡಿದೆ.
ಪುಂಡಾನೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡು ಬಳಿಕ ಇಂದು ಸಾಕಾನೆ ಶಿಬಿರದಿಂದ ಅರ್ಜುನ ಆನೆಯನ್ನು ಬಳಸಿ ಕಾರ್ಯಚರಣೆ ಮಾಡಿ ಪುಂಡಾನೆಯನ್ನು ಸೆರೆ ಹಿಡಿಯಲಾಗಿದೆ.
ಒಂಟಿ ಸಲಗ ಸೆರೆ ಹಿಡಿಯಲು ಅರ್ಜುನ, ಕೃಷ್ಣ, ಗೋಪಾಲಸ್ವಾಮಿ, ಗಣೇಶ, ಹರ್ಷ ಎಂಬ 5 ಸಾಕಾನೆಗಳನ್ನು ಬಳಸಲಾಗಿದೆ. ಮತ್ತಿಗೋಡು ಸಾಕಾನೆ ಶಿಬಿರ ಹಾಗೂ ದುಬಾರೆ ಸಾಕಾನೆ ಶಿಬಿರಗಳಿಂದ ಸಾಕಾನೆಗಳನ್ನು ಕರೆತರಲಾಗಿತ್ತು. ಪ್ರತಿ ಬಾರಿ ಮೈಸೂರು ದಸರಾದಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನನಿಗೆ 60 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಿವೃತ್ತಿ ನೀಡಲಾಗಿತ್ತು. ಆದರೆ ಇಂದು ಪುಂಡಾನೆ ಸೆರೆಗೆ ಅರ್ಜುನ ಆನೆಯನ್ನು ಅರಣ್ಯ ಇಲಾಖೆ ಬಳಸಿಕೊಂಡಿದೆ.
ಒಂಟಿ ಸಲಗ ಕಳೆದ ಸುಮಾರು ತಿಂಗಳಿನಿಂದ ಹೊಸೂರು ಭಾಗದ ಕಾಫಿ ತೋಟಗಳಲ್ಲಿ ಬೀಡುಬಿಟ್ಟು ದಾಂಧಲೆ ನಡೆಸುತ್ತಿತ್ತು. ಇದರ ಉಪಟಳದಿಂದ ಗ್ರಾಮಸ್ಥರು ಭಯಭೀತರಾಗಿದ್ದರು. ಈ ಹಿನ್ನೆಲೆಯಲ್ಲಿ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳ ಪೈಕಿ ಪುಂಡಾನೆಯನ್ನು ಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಕೈಗೊಂಡಿತ್ತು. 50 ಜನ ಸಿಬ್ಬಂದಿ, ಅರಣ್ಯಾಧಿಕಾರಿಗಳು, ವನ್ಯಜೀವಿ ವೈದ್ಯಾಧಿಕಾರಿಗಳು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು. ಎಲ್ಲರ ಪ್ರಯತ್ನದಿಂದಾಗಿ ದೇವರಪುರದ ಕಾಫಿ ತೋಟದಲ್ಲಿ ಪುಂಡಾನೆಯನ್ನು ಸೆರೆ ಹಿಡಿಯಲಾಗಿದು.
ಹಾಸನ: ಜಿಲ್ಲೆಯ ಸಕಲೇಶಪುರ, ಆಲೂರು ಮತ್ತು ಬೇಲೂರು ತಾಲೂಕಗಳಲ್ಲಿ ಆನೆಗಳ ಹಾವಳಿ ಮುಂದುವರಿದಿದ್ದು, ಕೆಲದಿನಗಳಿಂದ ಗಂಡಾನೆಯೊಂದು ಜಿಲ್ಲೆಯ ಸಕಲೇಶ್ಪುರ ತಾಲೂಕಿನ ಹೆತ್ತೂರು ಬಳಿ ಬಂದು ಗ್ರಾಮದ ಬಳಿಯೇ ಓಡಾಡಿಕೊಂಡಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಈ ವೇಳೆ ಮರವೇರಿ ಕೂತು ಆನೆ ವೀಕ್ಷಿಸುತ್ತಿದ್ದ ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಆನೆಯ ಚಲನವಲನವನ್ನು ವಿಡಿಯೋ ಮಾಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆಯೂ ಸಕಲೇಶ್ ಪುರ ತಾಲೂಕಿನ ನಿಡನೂರು ಗ್ರಾಮದಲ್ಲಿ ಕಾಡಾನೆಗಳ ಹಿಂಡೊಂದು ಪ್ರತ್ಯಕ್ಷವಾಗಿ ಅಪಾರ ಪ್ರಮಾಣದ ಬೆಳೆ ನಾಶ ಮಾಡಿತ್ತು.
ಆಲೂರು ಸಕಲೇಶಪುರ ತಾಲೂಕಿನ ಗಡಿಭಾಗವಾದ ನಿಡನೂರು ಸಮೀಪ ಬಹುದಿನಗಳಿಂದ ಕಾಡಾನೆಗಳ ಹಿಂಡು ಕಾಣಿಸಿಕೊಳ್ಳುತ್ತಿದ್ದು, ಮಲ್ಲಿಕ್ ಎಂಬವರ ಕಾಫಿ ತೋಟ ಹಾಗೂ ಗದ್ದೆಯಲ್ಲಿ ದಾಂಧಲೆ ನಡೆಸಿ ಅಪಾರ ಪ್ರಮಾಣದ ಬೆಳೆ ನಾಶ ಮಾಡಿದ್ದವು. ನಿರಂತರವಾಗಿ ಮಲೆನಾಡು ಭಾಗದಲ್ಲಿ ಆನೆ ಮತ್ತು ಮಾನವನ ನಡುವಿನ ಸಂಘರ್ಷ ಮುಂದುವರಿದಿದ್ದು, ರೈತರು ಭಯದ ವಾತಾವರಣದಲ್ಲಿ ಜೀವಿಸುವಂತಾಗಿದೆ. ಕಾಡಾನೆಗಳ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಹಲವಾರು ಪ್ರತಿಭಟನೆಗಳು ಮಾಡಿದ್ದರೂ ಸಹ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.