Tag: Kagiso Rabada

  • ಬೌಲಿಂಗ್, ಫೀಲ್ಡಿಂಗ್‍ನಲ್ಲಿ ಡೆಲ್ಲಿ ಮಿಂಚಿಂಗ್ – ರಬಾಡಾ ದಾಳಿಗೆ ರಾಜಸ್ಥಾನ್ ಆಲೌಟ್

    ಬೌಲಿಂಗ್, ಫೀಲ್ಡಿಂಗ್‍ನಲ್ಲಿ ಡೆಲ್ಲಿ ಮಿಂಚಿಂಗ್ – ರಬಾಡಾ ದಾಳಿಗೆ ರಾಜಸ್ಥಾನ್ ಆಲೌಟ್

    – ಪೆವಿಲಿಯನ್ ಪೆರೇಡ್ ನಡೆಸಿದ ರಾಯಲ್ಸ್ ಆಟಗಾರರು
    – 10 ಅಂಕದೊಂದಿಗೆ ಮೊದಲ ಸ್ಥಾನಕ್ಕೆ ಡೆಲ್ಲಿ

    ಶಾರ್ಜಾ: ಐಪಿಎಲ್ 23ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಹೀನಾಯವಾಗಿ ಸೋತಿದೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡ 46 ರನ್‍ಗಳ ಭರ್ಜರಿ ಜಯ ಸಾಧಿಸಿ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಿದೆ.

    ಇಂದು ಟಾಸ್ ಸೋತು ಬ್ಯಾಟಿಂಗ್ ಮಾಡಲು ಬಂದ ಡೆಲ್ಲಿ ತಂಡ ಮಾರ್ಕಸ್ ಸ್ಟೋಯಿನಿಸ್ ಮತ್ತು ಶಿಮ್ರಾನ್ ಹೆಟ್ಮಿಯರ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರಿನಲ್ಲಿ 184 ರನ್‍ಗಳ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ ಆರಂಭದಿಂದಲೇ ಕುಂಟುತ್ತಾ ಸಾಗಿತು. ಪರಿಣಾಮ 19.4 ಓವರಿನಲ್ಲಿ ಆಲೌಟ್ ಆಯ್ತು. 46 ರನ್‍ಗಳ ಅಂತರದಲ್ಲಿ ಗೆದ್ದ ಡೆಲ್ಲಿ 10 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಏರಿದರೆ, 8 ಅಂಕಗಳಿಸಿದ ಮುಂಬೈ 2ನೇ ಸ್ಥಾನಕ್ಕೆ ಜಾರಿತು.

    ಬ್ಯಾಟಿಂಗ್, ಬೌಲಿಂಗ್‍ನಲ್ಲಿ ಡೆಲ್ಲಿ ಕಮಾಲ್
    ಆರಂಭದಲ್ಲಿ ವಿಕೆಟ್ ಕಳೆದುಕೊಂಡರು ಡೆಲ್ಲಿ ಕೊನೆಯಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿ ಉತ್ತಮ ಮೊತ್ತ ಕಲೆಹಾಕಿತು. ಅಂತೆಯೇ ಬೌಲಿಂಗ್‍ನಲ್ಲೂ ಕಮಾಲ್ ಮಾಡಿದ ಡೆಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಡೆಲ್ಲಿ ಪರ ಉತ್ತಮವಾಗಿ ಬೌಲ್ ಮಾಡಿದ ಕಗಿಸೊ ರಬಾಡಾ ಮೂರು ವಿಕೆಟ್ ಪಡೆದರೆ ರವಿಚಂದ್ರನ್ ಅಶ್ವಿನ್ ಮತ್ತು ಮಾರ್ಕಸ್ ಸ್ಟೋಯಿನಿಸ್ ತಲಾ ಎರಡು ವಿಕೆಟ್ ಕಿತ್ತು ಮಿಂಚಿದರು. ಆಕ್ಸರ್ ಪಟೇಲ್, ಹರ್ಷಲ್ ಪಟೇಲ್ ಮತ್ತು ಅನ್ರಿಕ್ ನಾಟ್ರ್ಜೆ ಒಂದು ವಿಕೆಟ್ ಕಿತ್ತರು. ಬ್ಯಾಟಿಂಗ್‍ನಲ್ಲಿ ಕಮಾಲ್ ಮಾಡಿದ ಹೆಟ್ಮೆಯರ್ ಉತ್ತಮ ಎರಡು ಕ್ಯಾಚ್ ಹಿಡಿದರು.

    ಡೆಲ್ಲಿ ನೀಡಿದ ದೊಡ್ಡ ಮೊತ್ತವನ್ನು ಬೆನ್ನಟ್ಟಲು ರಾಜಸ್ಥಾನದ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಕಣಕ್ಕಿಳಿದರು. ಆದರೆ ಮೂರನೇ ಓವರಿಗೆ ಬೌಲಿಂಗ್ ಬಂದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು, ಎಂಟು ಬಾಲಿಗೆ 13 ರನ್ ಸಿಡಿಸಿದ್ದ ಬಟ್ಲರ್ ಅವರನ್ನು ಔಟ್ ಮಾಡಿದರು. ನಂತರ ಒಂದಾದ ನಾಯಕ ಸ್ಟೀವ್ ಸ್ಮಿತ್ ಮತ್ತು ಯಶಸ್ವಿ ಜೈಸ್ವಾಲ್ ತಾಳ್ಮೆಯ ಆಟಕ್ಕೆ ಮುಂದಾದರು. ಪರಿಣಾಮ ರಾಜಸ್ಥಾನ್ ತಂಡ ಆರು ಓವರ್ ಮುಕ್ತಾಯಕ್ಕೆ ಒಂದು ವಿಕೆಟ್ ಕಳೆದುಕೊಂಡು 41 ರನ್ ಸೇರಿಸಿತು.

    ನಂತರ ಜೈಸ್ವಾಲ್ ಮತ್ತು ಸ್ಮಿತ್ 34 ಬಾಲಿನಲ್ಲಿ 42 ರನ್‍ಗಳ ಜೊತೆಯಾಟವಾಡಿದರು. ಆದರೆ 8ನೇ ಓವರಿನ ಮೊದಲ ಬಾಲಿನಲ್ಲಿ ದೊಡ್ಡ ಹೊಡೆತಕ್ಕೆ ಕೈ ಹಾಕಿದ ಸ್ಮಿತ್ ಅನ್ರಿಕ್ ನಾಟ್ರ್ಜೆ ಅವರಿಗೆ ವಿಕೆಟ್ ಒಪ್ಪಿಸಿದರು. 17 ಬಾಲಿಗೆ 24 ರನ್ ಸಿಡಿಸಿ ಬೌಂಡರಿ ಬಳಿ ಶಿಮ್ರಾನ್ ಹೆಟ್ಮಿಯರ್ ಹಿಡಿದು ಸೂಪರ್ ಕ್ಯಾಚಿಗೆ ಸ್ಮಿತ್ ಬಲಿಯಾದರು. ನಂತರ 10ನೇ ಓವರಿನ 3ನೇ ಬಾಲಿನಲ್ಲಿ ಐದು ರನ್ ಗಳಿಸಿ ಸಂಜು ಸ್ಯಾಮ್ಸನ್ ಅವರು ಪೆವಿಲಿಯನ್ ಸೇರಿದರು.

    ನಂತರ ಬಂದ ಮಹಿಪಾಲ್ ಲೋಮರ್ ಅವರು ಕೇವಲ ಒಂದು ರನ್ ಗಳಿಸಿ ಬಂದ ದಾರಿಯಲ್ಲೇ ಪೆವಿಲಯನ್ ಸೇರಿದರು. ಈ ಮೂಲಕ 12 ಓವರ್ ಮುಕ್ತಾಯಕ್ಕೆ ರಾಜಸ್ಥಾನ್ ತಂಡ ನಾಲ್ಕು ವಿಕೆಟ್ ಕಳೆದುಕೊಂಡು 82 ರನ್ ಸೇರಿಸತು. ಆದರೆ 12ನೇ ಓವರಿನ ಮೊದಲ ಬಾಲಿನಲ್ಲೇ 36 ಬಾಲಿಗೆ 34 ರನ್ ಸಿಡಿಸಿ ಆಡುತ್ತಿದ್ದ ಯಶಸ್ವಿ ಜೈಸ್ವಾಲ್ ಅವರು ಮಾರ್ಕಸ್ ಸ್ಟೋಯಿನಿಸ್ ಅವರ ಎಸೆತಕ್ಕೆ ಬೌಲ್ಡ್ ಆದರು.

    ಜೈಸ್ವಾಲ್ ಔಟ್ ಆದ ನಂತರ ಕಣಕ್ಕಿಳಿದ ಆಂಡ್ರ್ಯೂ ಟೈ ಅವರು ಲೆಗ್ ಸೈಡ್ ಕಡೆ ದೊಡ್ಡ ಹೊಡೆತಕ್ಕೆ ಕೈಹಾಕಿ ಕಗಿಸೊ ರಬಾಡಾ ಹಿಡಿದ ಡೇಯ್ ಕ್ಯಾಚಿಗೆ ಬಲಿಯಾದರು. ನಂತರ 14ನೇ ಓವರಿನ 5ನೇ ಬಾಲಿನಲ್ಲಿ ಎರಡು ರನ್ ಹೊಡೆದು ಜೋಫ್ರಾ ಆರ್ಚರ್ ಅವರು ಔಟ್ ಆಗಿ ಡಗೌಟ್ ಸೇರಿದರು. ನಂತರ 17ನೇ ಓವರ್ ಎರಡನೇ ಬಾಲಿನಲ್ಲಿ ಶ್ರೇಯಾಸ್ ಗೋಪಾಲ್ ಅವರು ಔಟ್ ಆದರು. ನಂತರ ಬಮದ ಯಾವ ಬ್ಯಾಟ್ಸ್ ಮ್ಯಾನ್ ಕೂಡ ಕ್ರೀಸಿನಲ್ಲಿ ನಿಲ್ಲಲಿಲ್ಲ.

  • ಕೊಹ್ಲಿ ಒಬ್ಬ ಅಪ್ರಬುದ್ಧ ಆಟಗಾರ – ರಬಾಡ

    ಕೊಹ್ಲಿ ಒಬ್ಬ ಅಪ್ರಬುದ್ಧ ಆಟಗಾರ – ರಬಾಡ

    ನವದೆಹಲಿ: ಕೊಹ್ಲಿ ಪಂದ್ಯದ ಸಮಯದಲ್ಲಿ ಎದುರಾಳಿಗಳನ್ನು ನಿಂದಿಸುತ್ತಾರೆ. ಆದರೆ ಎದುರಾಳಿಗಳು ನಿಂದಿಸಿದಾಗ ಕೋಪಗೊಳ್ಳುತ್ತಾರೆ. ಹೀಗಾಗಿ ಅವರೊಬ್ಬ ಅಪ್ರಬುದ್ಧ ಆಟಗಾರ ಎಂದು ದಕ್ಷಿಣ ಆಫ್ರಿಕಾದ ಯುವ ವೇಗಿ ಕಗಿಸೋ ರಬಾಡ ಅವರು ಹೇಳಿದ್ದಾರೆ.

    ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯದ ವೇಳೆ ಆಕ್ರಮಣಕಾರಿ ವ್ಯಕ್ತಿತ್ವ ತೋರುವ ವಿಚಾರದ ಬಗ್ಗೆ ಮಾತನಾಡಿರುವ ರಬಾಡ ಐಪಿಎಲ್ ವೇಳೆ ತಮ್ಮ ಮತ್ತು ಕೊಹ್ಲಿ ನಡುವಿನ ಘಟನೆಯನ್ನು ಹಂಚಿಕೊಂಡಿದ್ದಾರೆ.

    ಕೊಹ್ಲಿ ಪಂದ್ಯದ ವೇಳೆ ಎದುರಾಳಿಗಳನ್ನು ನಿಂದಿಸುತ್ತಾರೆ. ಆದರೆ ಯಾರದರು ಅವರನ್ನು ನಿಂದಿಸಿದರೆ ಕೋಪಗೊಳ್ಳುತ್ತಾರೆ. ಇದೇ ರೀತಿ ಐಪಿಎಲ್‍ನಲ್ಲಿ ಡೆಲ್ಲಿ ಕ್ಯಾಪಿಟಲ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯವೊಂದರಲ್ಲಿ ನನ್ನ ಎಸೆತಕ್ಕೆ ಬೌಂಡರಿ ಬಾರಿಸಿದ ಕೊಹ್ಲಿ ಅವರು ನನ್ನನ್ನು ನಿಂದಿಸಿ ಮಾತನಾಡಿದರು. ನಂತರ ಎಸೆದ ಎಸೆತ ಡಾಟ್ ಅದ ಕಾರಣ ನಾನು ಅವರನ್ನು ನಿಂದಿಸಿದೆ. ಇದನ್ನು ಸಹಿಸಿಕೊಳ್ಳದ ಕೊಹ್ಲಿ ನನ್ನ ಮೇಲೆ ಕೋಪಗೊಂಡರು ಎಂದು ವಿವರಿಸಿದರು.

    ವಿರಾಟ್ ಒಬ್ಬ ಅತ್ಯುತ್ತಮ ಆಟಗಾರ. ಒಳ್ಳೆಯ ಬ್ಯಾಟ್ಸ್‌ಮನ್ ಆಕ್ರಮಣಕಾರಿ ಆಟದ ಮೂಲಕ ತಂಡಕ್ಕೆ ಗೆಲುವು ತಂದು ಕೊಡುವ ಅದ್ಭುತ ಆಟಗಾರ. ಆದರೆ ಎದುರಾಳಿಗಳನ್ನು ಜರಿಯುವ ಅವರು ಎದುರಾಳಿಗಳ ಜರಿಯುವಿಕೆಯನ್ನು ಸ್ವೀಕಾರ ಮಾಡುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ರಬಾಡ ಅವರು 2018ರಲ್ಲಿ ಕೊಹ್ಲಿ ಅವರನ್ನು ಹಿಂದಿಕ್ಕಿ ಐಸಿಸಿಯ ವರ್ಷದ ಆಟಗಾರ ಪ್ರಶಸ್ತಿ ಮತ್ತು ಆದೇ ವರ್ಷ ಅತ್ಯುತ್ತಮ ಟೆಸ್ಟ್ ಆಟಗಾರ ಪ್ರಶಸ್ತಿಯನ್ನು ಕಸಿದುಕೊಂಡಿದ್ದರು.

    ಈ ವಿಚಾರದ ಬಗ್ಗೆ ಮಾತನಾಡಿದ ರಬಾಡ, ಕೊಹ್ಲಿ ಅವರು ಕಳೆದ ಐದು ವರ್ಷದಿಂದ ಭಾರತೀಯ ಕ್ರಿಕೆಟ್‍ನ ಆಧಾರ ಸ್ತಂಭ ಅವರು ಈ ಎಲ್ಲಾ ಪ್ರಶಸ್ತಿಗಳಿಗೂ ಅರ್ಹರಾಗಿದ್ದಾರೆ. ಕೊಹ್ಲಿ ಅವರು ಆಡುವ ಆಟದ ವಿಷಯದಲ್ಲಿ ನೀವು ತಪ್ಪು ಹುಡುಕಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    2019ರ ವಿಶ್ವಕಪ್‍ನ ತನ್ನ ಮೊದಲ ಪಂದ್ಯವನ್ನು ಕೊಹ್ಲಿ ನೇತೃತ್ವದ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಜೂನ್ 5 ರಂದು ಆಡಲಿದೆ.

  • ವಿಶ್ವ ಕ್ರಿಕೆಟ್‍ನಲ್ಲಿ ರಬಾಡ ಅತ್ಯಂತ ಕೆಟ್ಟ ಎಸೆತ – ಲೆಗ್ ಅಂಪೈರ್ ಜೊತೆ ಚರ್ಚಿಸಿ ತೀರ್ಪು ಕೊಟ್ಟ ಅಂಪೈರ್

    ವಿಶ್ವ ಕ್ರಿಕೆಟ್‍ನಲ್ಲಿ ರಬಾಡ ಅತ್ಯಂತ ಕೆಟ್ಟ ಎಸೆತ – ಲೆಗ್ ಅಂಪೈರ್ ಜೊತೆ ಚರ್ಚಿಸಿ ತೀರ್ಪು ಕೊಟ್ಟ ಅಂಪೈರ್

    ಕ್ವೀನ್ಸ್ ಲ್ಯಾಂಡ್: ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಕಗಿಸೋ ರಬಾಡ ಆಸ್ಟ್ರೇಲಿಯಾ ವಿರುದ್ಧ ಟಿ 20 ಪಂದ್ಯದಲ್ಲಿ ಕೆಟ್ಟದಾಗಿ ಬಾಲ್ ಎಸೆದು ಸುದ್ದಿಯಾಗಿದ್ದಾರೆ.

    9ನೇ ಓವರ್ ನಲ್ಲಿ ಗ್ಲೇನ್ ಮ್ಯಾಕ್ಸ್ ವೆಲ್ ಕ್ರೀಸ್ ನಲ್ಲಿದ್ದರು. ವೇಗವಾಗಿ ಬಂದ ರಬಾಡ ಬಾಲ್ ಎಸೆದಿದ್ದಾರೆ. ಎಸೆದ ಬಾಲ್ ಮೇಲಕ್ಕೆ ಹಾರಿ ಎಡಗಡೆಗೆ ಹೋಗಿ ಪಾಯಿಂಟ್ ಬಳಿ ನಿಂತಿದ್ದ ಫೀಲ್ಡರ್ ಬಳಿ ಬಿದ್ದಿದೆ.  ಬಾಲ್ ಎಲ್ಲಿಗೋ ಹೋಗಿದ್ದನ್ನು ನೋಡಿ ಎಲ್ಲರೂ ಕಕ್ಕಾಬಿಕ್ಕಿಯಾಗಿದ್ದಾರೆ.

    ಈ ಎಸೆತಕ್ಕೆ ಏನು ತೀರ್ಪು ನೀಡಬೇಕು ಅಂಪೈರ್ ಗೆ ಗೊಂದಲ ಉಂಟಾಗಿ ಲೆಗ್ ಅಂಪೈರ್ ಜೊತೆ ಚರ್ಚಿಸಿದರು. ಬಳಿಕ ಡೆಡ್ ಬಾಲ್ ಎಂದು ಘೋಷಣೆ ಮಾಡಿದರು. ಈಗ ರಬಾಡ ಎಸೆಯುತ್ತಿರುವ ವಿಡಿಯೋ ವೈರಲ್ ಆಗಿದ್ದು, ವಿಶ್ವದ ಕ್ರಿಕೆಟ್ ನ ಅಂತ್ಯ ಕೆಟ್ಟ ಎಸೆತಗಳಲ್ಲಿ ಇಂದು ಒಂದು ಹೇಳಿ ಜನ ಕಮೆಂಟ್ ಮಾಡುತ್ತಿದ್ದಾರೆ.

    ಮಳೆಯಿಂದಾಗಿ 10 ಓವರ್ ಕಡಿತಗೊಂಡಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ದಕ್ಷಿಣ ಆಫ್ರಿಕಾ 6 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯಾ ನಿಗದಿತ 10 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 87 ರನ್ ಗಳಿಸಿತು. 21 ರನ್ ಗಳಿಂದ ದಕ್ಷಿಣ ಆಫ್ರಿಕಾ ಪಂದ್ಯವನ್ನು ಜಯಗಳಿಸಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews