Tag: Kagwad

  • ಕೈ ಶಾಸಕ ರಾಜು ಕಾಗೆ ಎದುರಿನಲ್ಲೇ ಆಪ್ತನಿಂದ ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ

    ಕೈ ಶಾಸಕ ರಾಜು ಕಾಗೆ ಎದುರಿನಲ್ಲೇ ಆಪ್ತನಿಂದ ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ

    ಚಿಕ್ಕೋಡಿ: ಕಾಗವಾಡ ಕಾಂಗ್ರೆಸ್ ಶಾಸಕ (Kagwad Congress MLA) ರಾಜು ಕಾಗೆ (Raju Kage) ಆಪ್ತನೊಬ್ಬ ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ ಹಾಕಿರುವ ಘಟನೆ ಬೆಳಗಾವಿ ಜಿಲ್ಲೆಯ ಆಥಣಿ ತಾಲೂಕಿನ ಬೆವನೂರ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಜಾತ್ರಾ ಮಹೋತ್ಸವದಲ್ಲಿ ಶಾಸಕ ರಾಜು ಕಾಗೆ ಎದುರು ಕಾಗೆ ಆಪ್ತ ಸಂತೋಷ ಚುರಮೂಲೆ ಎಂಬಾತ ರಾಜು ಕಾಗೆ ಮುಂದೆಯೇ ವಿಡಿಯೋ ಮಾಡಿ ಮಾಧ್ಯಮದವರಿಗೆ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ಅಬ್ದುಲ್‌ ಕಲಾಂ ಹೇರ್‌ ಸ್ಟೈಲ್‌ ಬಗ್ಗೆ ಮಾತನಾಡಿದ್ದಾರಾ? – ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕೆಂಡಾಮಂಡಲ

     

    ಬೆವನೂರ ಗ್ರಾಮದ ಅಮೋಸಿದ್ದೇಶ್ವರ ಜಾತ್ರೆಯಲ್ಲಿ ಪಾಲ್ಗೊಂಡಿದ್ದ  ಶಾಸಕರನ್ನು ಮೆಚ್ಚಿಸಲು ರಾಜು ಕಾಗೆಯ ಬಗ್ಗೆ ಮಾಧ್ಯಮದವರು ಬೇರೆ ದೃಷ್ಟಿಯಿಂದ ಸುದ್ದಿಗಳನ್ನು ವೈರಲ್ ಮಾಡಿದರೆ ಮನೆ ನುಗ್ಗಿ ಕೈ ಕಾಲು ಮುರಿಯುವುದಾಗಿ ಬೆದರಿಕೆ ಹಾಕಿದ್ದಾನೆ.

    ತನ್ನ ಎದುರೇ ಬೆದರಿಕೆ ಹಾಕುತ್ತಿದ್ದರೂ ಶಾಸಕರು ಮಾತ್ರ ಏನು ಮಾತನಾಡದೇ ನಿಂತಿದ್ದರು.

  • ಅಣ್ಣನ ಟೀಂಗೆ ಫುಲ್ ಟೈಮ್ ಗೇಟ್ ಪಾಸ್ ಕೊಟ್ಟು ಮನೆಗೆ ಕಳಿಸಬೇಕು: ಸತೀಶ್ ಜಾರಕಿಹೊಳಿ ಕಿಡಿ

    ಅಣ್ಣನ ಟೀಂಗೆ ಫುಲ್ ಟೈಮ್ ಗೇಟ್ ಪಾಸ್ ಕೊಟ್ಟು ಮನೆಗೆ ಕಳಿಸಬೇಕು: ಸತೀಶ್ ಜಾರಕಿಹೊಳಿ ಕಿಡಿ

    ಚಿಕ್ಕೋಡಿ (ಬೆಳಗಾವಿ): ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಆ್ಯಂಡ್ ಟೀಂಗೆ ಫುಲ್ ಟೈಮ್ ಗೇಟ್ ಪಾಸ್ ಕೊಟ್ಟು ಮನೆಯಲ್ಲಿ ಕೂರಿಸಬೇಕು ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.

    ಕಾಗವಾಡ ತಾಲೂಕಿನ ಜೂಗುಳ ಗ್ರಾಮದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಅನರ್ಹ ಶಾಸಕರಾದ ಮಹೇಶ್ ಕುಮಟಳ್ಳಿ ಹಾಗೂ ಶ್ರೀಮಂತ್ ಪಾಟೀಲ್ ಅವರ ಕ್ಯಾಪ್ಟನ್ ಕೃಪಾಮಯ ಗೋಕಾಕ್‍ನಲ್ಲಿದ್ದಾರೆ. ಉಪ ಚುನಾವಣೆಯಲ್ಲಿ ಈ ಇಬ್ಬರು ಬಿಜೆಪಿ ಅಭ್ಯರ್ಥಿಗಳು ಗೆದ್ದರೆ ರಮೇಶ್ ಜಾರಕಿಹೊಳಿ ಅವರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಬೆನ್ನು ಬೀಳುತ್ತಾರೆ. ಇವರೆಲ್ಲರೂ ಸೇರಿ ಸಿಎಂ ಯಡಿಯೂರಪ್ಪನವರ ಬಿಳಿ ಬಟ್ಟೆಗಳನ್ನ ಕರಿ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

    ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತೊಂದರೆ ಕೊಟ್ಟರು. ಸಿಎಂ ಯಡಿಯೂರಪ್ಪ ಅವರಿಗೆ ಕೊಡುವುದಿಲ್ಲ ಎನ್ನುವುದಕ್ಕೆ ಏನು ಗ್ಯಾರಂಟಿ? 10ರಿಂದ 20 ಸಾವಿರ ಕೋಟಿ ರೂ. ಕೊಡಿ ಇಲ್ಲಾ ಅಂದರೆ ಪಕ್ಷ ಬಿಟ್ಟು ಹೋಗುತ್ತೇವೆ ಎಂದು ಬ್ಲ್ಯಾಕ್‍ಮೇಲ್ ಮಾಡುವ ಶಾಸಕರು ನಮಗೆ ಬೇಡ. ಅನರ್ಹ ಶಾಸಕರದ್ದು ಸೇವಾ ಮನೋಭಾವ ಅಲ್ಲ, ಬ್ಲ್ಯಾಕ್‍ಮೇಲ್ ತಂತ್ರ ಎಂದು ಕುಟುಕಿದರು.

    ನಾವು ಸಹ ಗೋಕಾಕ್ ಕ್ಯಾಪ್ಟನ್ ರಮೇಶ್ ಜಾರಕಿಹೊಳಿ ಅವರನ್ನ ಮನೆಗೆ ಕಳುಹಿಸುತ್ತೇವೆ. ಕಾಗವಾಡ ಹಾಗೂ ಅಥಣಿ ಕ್ಷೇತ್ರದ ಮತದಾರರು ಕೂಡ ಶ್ರೀಮಂತ್ ಪಾಟೀಲ್ ಮತ್ತು ಮಹೇಶ್ ಕುಮಟಳ್ಳಿ ಅವರನ್ನು ಮನೆಗೆ ಕಳುಹಿಸಿ. ಇಂತಹ ರಾಜಕಾರಣಿಗಳಿಗೆ ಫುಲ್ ಟೈಮ್ ಗೇಟ್ ಪಾಸ್ ಕೊಟ್ಟು ಮನೆಯಲ್ಲಿ ಕೂರಿಸಬೇಕು ಎಂದು ಗುಡುಗಿದರು.