Tag: kaifiyat express

  • ನೈತಿಕ ಹೊಣೆ ಹೊತ್ತು  ರೈಲ್ವೇ ಸಚಿವ ಸುರೇಶ್ ಪ್ರಭು ರಾಜೀನಾಮೆ? ಮೋದಿ ಹೇಳಿದ್ದೇನು?

    ನೈತಿಕ ಹೊಣೆ ಹೊತ್ತು ರೈಲ್ವೇ ಸಚಿವ ಸುರೇಶ್ ಪ್ರಭು ರಾಜೀನಾಮೆ? ಮೋದಿ ಹೇಳಿದ್ದೇನು?

    ನವದೆಹಲಿ: ಒಂದು ವಾರದೊಳಗಡೆ ಎರಡು ರೈಲು ದುರಂತ ಸಂಭವಿಸಿ ಟೀಕೆಗೆ ಒಳಗಾಗಿರುವ ಸುರೇಶ್ ಪ್ರಭು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

    ಕೈಫಿಯತ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ 70 ಜನ ಗಾಯಗೊಂಡಿರುವ ಘಟನೆಯ ಬಳಿಕ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸುರೇಶ್ ಪ್ರಭು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

    ಭೇಟಿ ವೇಳೆ ಸ್ವಲ್ಪ ಸಮಯ ಕಾಯಿರಿ ಎನ್ನುವುದಾಗಿ ಮೋದಿ ನನಗೆ ಹೇಳಿದ್ದಾರೆ ಎಂದು ಸುರೇಶ್ ಪ್ರಭು ಟ್ವೀಟ್ ಮಾಡಿದ್ದಾರೆ.

    ಉತ್ತರ ಪ್ರದೇಶದ ರೈಲು ದುರಂತದ ಬಳಿಕ ಸರಣಿ ಟ್ವೀಟ್ ಮಾಡಿರುವ ಸುರೇಶ್ ಪ್ರಭು ಅವರು ಘಟನೆಯಿಂದ ನನಗೆ ತುಂಬಾ ನೋವಾಗಿದೆ. ಕಳೆದ ಮೂರು ವರ್ಷ ನಾನು ರೈಲ್ವೇಯ ಬೆಳವಣಿಗೆ ತುಂಬಾ ಶ್ರಮ ಪಟ್ಟಿದ್ದೇನೆ. ಕಳೆದ ಎರಡು ದಶಕಗಳಿಂದ ಹದೆಗೆಟ್ಟಿದ್ದ ರೈಲ್ವೇಯನ್ನು ಮೇಲಕ್ಕೆ ಎತ್ತಲು ಮೋದಿ ಸರ್ಕಾರ ತುಂಬಾ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

    ಉತ್ಕಲ್ ರೈಲು ದುರಂತ ನೆನಪು ಮಾಸುವ ಮುನ್ನವೇ ಉತ್ತರ ಪ್ರದೇಶದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಕೈಫಿಯತ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ 70 ಜನ ಗಾಯಗೊಂಡಿರುವ ಘಟನೆ ಮಂಗಳವಾರ ಅವೌರೇಯಾ ಜಿಲ್ಲೆಯಲ್ಲಿ ನಡೆದಿದೆ. ಶನಿವಾರ ಉತ್ಕಲ್ ರೈಲು ದುರಂತ ಸಂಭವಿಸಿ 22 ಮಂದಿ ಮೃತಪಟ್ಟಿದ್ದರು.

    ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೂರು ವರ್ಷಗಳ ಕಾಲ ರೈಲ್ವೇ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಸುರೇಶ್ ಪ್ರಭು ಅವರು ಖಾಸಗಿ ಸಂಸ್ಥೆಗಳು ನಡೆಸುವ ‘ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಚಿವರ’ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತಿದ್ದರು. ಇತ್ತೀಚೆಗೆ ಇಂಡಿಯಾ ಟುಡೇ ಅವರು ಮೋದಿ ಸಂಪುಟದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಟಾಪ್ -5 ಮಂತ್ರಿಗಳ ಪಟ್ಟಿಯಲ್ಲೂ ಸುರೇಶ್ ಪ್ರಭು ಸ್ಥಾನವನ್ನು ಪಡೆದುಕೊಂಡಿದ್ದರು.

    ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ರೈಲು ದುರಂತ ಸಂಭವಿಸಿದ್ದು ಹೇಗೆ ವಿಡಿಯೋ ನೋಡಿ

  • ಉತ್ತರ ಪ್ರದೇಶದಲ್ಲಿ ಮತ್ತೊಂದು ರೈಲು ದುರಂತ: ಹಳಿ ತಪ್ಪಿದ ಕೈಫಿಯತ್ ಎಕ್ಸ್ ಪ್ರೆಸ್, 70 ಮಂದಿಗೆ ಗಾಯ

    ಉತ್ತರ ಪ್ರದೇಶದಲ್ಲಿ ಮತ್ತೊಂದು ರೈಲು ದುರಂತ: ಹಳಿ ತಪ್ಪಿದ ಕೈಫಿಯತ್ ಎಕ್ಸ್ ಪ್ರೆಸ್, 70 ಮಂದಿಗೆ ಗಾಯ

    ಲಕ್ನೋ: ಉತ್ಕಲ್ ರೈಲು ದುರಂತದ ನೆನಪು ಮಾಸುವ ಮುನ್ನವೇ ಉತ್ತರ ಪ್ರದೇಶದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಕೈಫಿಯತ್ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ 70 ಜನ ಗಾಯಗೊಂಡಿರುವ ಘಟನೆ ಮಂಗಳವಾರ ಅವೌರೇಯಾ ಜಿಲ್ಲೆಯಲ್ಲಿ ನಡೆದಿದೆ.

    ಮಾನವ ರಹಿತ ಸಿಗ್ನಲ್ ನಲ್ಲಿ ಪಲ್ಟಿಯಾಗಿದ್ದ ಮರಳಿನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ರೈಲು ಅಜಮ್‍ಘಡದಿಂದ ದೆಹಲಿಗೆ ಸಂಚರಿಸುತ್ತಿದ್ದಾಗ ಬುಧವಾರ ನಸುಕಿನ ಜಾವ 2.50ಕ್ಕೆ ಪಟ ಮತ್ತು ಅಚಲ್ಡ ರೈಲ್ವೇ ನಿಲ್ದಾಣದ ಮಧ್ಯೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಉತ್ತರ ಕೇಂದ್ರ ವಲಯದ ಅಧಿಕಾರಿ ತಿಳಿಸಿದ್ದಾರೆ.

    ಒಂದು ಬೋಗಿ ಸಂಪೂರ್ಣವಾಗಿ ತಿರುಗಿದ್ದರೆ, ಏಳು ಬೋಗಿಗಳು ಹಳಿ ತಪ್ಪಿದೆ. ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರೈಲ್ವೇ ಸಚಿವ ಸುರೇಶ್ ಪ್ರಭು ಟ್ವೀಟ್ ಮಾಡಿ ಘಟನೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿಲಾಗಿದೆ ಎಂದು ಹೇಳಿದ್ದಾರೆ.

    ಘಟನೆ ಬಗ್ಗೆ ವಿವರಣೆ ಪಡೆಯಲು ಉತ್ತರ ಪ್ರದೇಶದ ಮುಖ್ಯಮಂತ್ರಿಯಾದ ಯೋಗಿ ಅದಿತ್ಯನಾಥ್ ಹಿರಿಯ ಅಧಿಕಾರಿಗಳ ಹತ್ತಿರ ಮಾತನಾಡಿದ್ದಾರೆ. ಪೊಲೀಸ್ ಹೆಚ್ಚುವರಿ ನಿರ್ದೇಶಕ ಅಧಿಕಾರಿಯಾದ ಆನಂದ್ ಕುಮಾರ್ ಪ್ರತಿಕ್ರಿಯಿಸಿ, ಮರಳಿನ ಲಾರಿ ಹಳಿ ಪ್ರವೇಶಿಸಿ ಪಲ್ಟಿಯಾಗಿದ್ದು ಹೇಗೆ ಎನ್ನುವುದರ ಬಗ್ಗೆ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

    ಶನಿವಾರ ಪಶ್ಚಿಮ ಉತ್ತರ ಪ್ರದೇಶದ ಕತೌಲಿಯ ಹತ್ತಿರ ಕಾಳಿಂಗ ಎಕ್ಸ್‍ಪ್ರೆಸ್ ಹಳಿ ತಪ್ಪಿ 23 ಜನ ಸಾವನ್ನಪ್ಪಿ, 150 ಕ್ಕಿಂತಲೂ ಹೆಚ್ಚಿನ ಮಂದಿಗೆ ಗಾಯವಾಗಿತ್ತು. ವಿಶ್ವದ 4ನೇ ಅತಿ ದೊಡ್ಡ ರೈಲ್ವೇ ಜಾಲವನ್ನು ಭಾರತ ಹೊಂದಿದ್ದು, ಪ್ರತಿ ದಿನ 2.2 ಕೋಟಿ ಜನ ರೈಲಿನಲ್ಲಿ ಸಂಚರಿಸುತ್ತಾರೆ.