Tag: Kaiva

  • ಕಿವಿ ಮೇಲೆ ಫ್ಲವರ್- ಹೊಸ ಲುಕ್‌ನಲ್ಲಿ ಮೇಘಾ ಶೆಟ್ಟಿ ಮಿಂಚಿಂಗ್

    ಕಿವಿ ಮೇಲೆ ಫ್ಲವರ್- ಹೊಸ ಲುಕ್‌ನಲ್ಲಿ ಮೇಘಾ ಶೆಟ್ಟಿ ಮಿಂಚಿಂಗ್

    ಸ್ಯಾಂಡಲ್‌ವುಡ್ (Sandalwood) ಬ್ಯೂಟಿ ಮೇಘಾ ಶೆಟ್ಟಿ (Megha Shetty) ಅವರು ಸದ್ಯ ಡಿಮ್ಯಾಂಡ್‌ನಲ್ಲಿರುವ ನಟಿ. ‘ಕೈವ’ (Kaiva) ಸಿನಿಮಾ ನಂತರ ಸಾಕಷ್ಟು ಆಫರ್ಸ್ ಬಾಚಿಕೊಳ್ತಿರೋ ಮೇಘಾ ಇದೀಗ ಹೊಸ ಲುಕ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಪೋಸ್ ಕೊಟ್ಟಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಬ್ರೈಡಲ್ ಪಾರ್ಟಿ ಸಂಭ್ರಮದಲ್ಲಿ ಆಶಿಕಾ ರಂಗನಾಥ್ ಸಹೋದರಿ ಅನುಷಾ

    ಕಪ್ಪು ಬಣ್ಣ ಡ್ರೆಸ್‌ನಲ್ಲಿ ಮೇಘಾ ಶೆಟ್ಟಿ ಮುದ್ದಾಗಿ ಫೋಟೋಶೂಟ್ ಮಾಡಿಸಿದ್ದಾರೆ. ಕಿವಿ ಮೇಲೆ ಫ್ಲವರ್ ಇಟ್ಟುಕೊಂಡಿರೋ ಫೋಟೋ ಶೇರ್ ಮಾಡಿರೋ ಮೇಘಾಗೆ ಅತಿಲೋಕ ಸುಂದರಿ ಎಂದು ಅಭಿಮಾನಿಗಳು ಕಾಮೆಂಟ್‌ ಮಾಡುವ ಮೂಲಕ ಹಾಡಿಹೊಗಳುತ್ತಿದ್ದಾರೆ. ನಟಿಯ ಮೂಗುತಿ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

    ‘ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್ ಮೂಲಕ ಟಿವಿ ಜಗತ್ತಿಗೆ ಪರಿಚಿತರಾದ ಮೇಘಾ ಶೆಟ್ಟಿ ಅವರು ಈಗ ಬೆಳ್ಳಿತೆರೆಯಲ್ಲಿ ಸಾಲು ಸಾಲು ಸಿನಿಮಾಗಳನ್ನು ಮಾಡ್ತಿದ್ದಾರೆ. ಅನು ಸಿರಿಮನೆ ಎಂಬ ಪಾತ್ರದ ಮೂಲಕ ಕಿರುತೆರೆ ಮನೆ ಮಾತಾಗಿದ್ದ ನಟಿ ಈಗ ಸ್ಯಾಂಡಲ್‌ವುಡ್‌ನಲ್ಲಿ ಮಿಂಚ್ತಿದ್ದಾರೆ.

    ದಿಲ್‌ಪಸಂದ್, ತ್ರಿಬಲ್ ರೈಡಿಂಗ್, ‘ಕೈವ’ ಸಿನಿಮಾಗಳಲ್ಲಿ ನಟಿಸುವ ಮೂಲಕ ನಾಯಕಿಯಾಗಿ ಮೇಘಾ ಸದ್ದು ಮಾಡಿದ್ದಾರೆ. ಸದ್ಯ ವಿನಯ್ ರಾಜ್‌ಕುಮಾರ್‌ಗೆ (Vinay Rajkumar) ನಾಯಕಿಯಾಗಿ ‘ಗ್ರಾಮಾಯಣ’ (Gramayana Film) ಚಿತ್ರದಲ್ಲಿ ಮೇಘಾ ಶೆಟ್ಟಿ ನಟಿಸುತ್ತಿದ್ದಾರೆ.

  • ಧನ್ವೀರ್ ನಟನೆಯ ‘ಕೈವ’ ಚಿತ್ರದ ಟೀಸರ್ ರಿಲೀಸ್

    ಧನ್ವೀರ್ ನಟನೆಯ ‘ಕೈವ’ ಚಿತ್ರದ ಟೀಸರ್ ರಿಲೀಸ್

    ವೀಂದ್ರಕುಮಾರ್ ನಿರ್ಮಾಣದ, ಜಯತೀರ್ಥ (Jayathirtha) ನಿರ್ದೇಶನದ ಹಾಗೂ ಧನ್ವೀರ್ (Dhanveer) ನಾಯಕರಾಗಿ ನಟಿಸಿರುವ ‘ಕೈವ’ (Kaiva) ಚಿತ್ರದ ಆಕ್ಷನ್ ಟೀಸರ್ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಅಭಿಷೇಕ್ ಅಂಬರೀಶ್ ಹಾಗೂ ದಿನಕರ್ ತೂಗುದೀಪ ಈ ಚಿತ್ರದ ಆಕ್ಷನ್ ಟೀಸರ್ (Teaser) ಬಿಡುಗಡೆ ಮಾಡಿ ಶುಭ ಕೋರಿದರು. ನಿರ್ದೇಶಕ ಮದಗಜ ಮಹೇಶ್ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

    ಕೈವ ಇದು ಒಬ್ಬ ವ್ಯಕ್ತಿಯ ಹೆಸರು. 1983 ರಲ್ಲಿ ಬೆಂಗಳೂರಿನ ತಿಗಳಪೇಟೆಯಲ್ಲಿ ನಡೆದ ನೈಜಘಟನೆ ಆಧರಿಸಿದ ಚಿತ್ರ. ಬೆಂಗಳೂರು ಕರಗದಲ್ಲಿ ಹುಟ್ಟಿದ ಪ್ರೇಮಕಥೆಯೇ ಚಿತ್ರದ ಪ್ರಮುಖ ಕಥಾವಸ್ತು. ನನಗೆ  ಮಾರ್ಚುರಿಯಲ್ಲಿ ಕೆಲಸ ಮಾಡುವವರಿಂದ ಈ ಕಥೆ ಸಿಕ್ಕಿತು. ಆನಂತರ ತಿಗಳರಪೇಟೆಗೆ ಹೋಗಿ ಅಲ್ಲಿ  ಈ ಘಟನೆ ಬಗ್ಗೆ ಕುಲಂಕುಶವಾಗಿ ತಿಳಿದುಕೊಂಡೆ. ಈ ಘಟನೆ ಕಂಡಿದ್ದ ಅನೇಕರು ಈಗಲೂ ಇದ್ದಾರೆ. ಇದೇ ಇಸವಿಯಲ್ಲಿ ನಡೆದ ಗಂಗಾರಾಮ್ ಕಟ್ಡಡದ ದುರಂತಕ್ಕು ಹಾಗೂ  ಈ ಚಿತ್ರದ ಕಥೆಗೂ ಸಂಬಂಧವಿದೆ. ಚಿತ್ರದ ನಾಯಕನಾಗಿ ಧನ್ವೀರ್ ಅಭಿನಯಿಸಿದ್ದಾರೆ. ನಾಯಕಿಯಾಗಿ ಮೇಘ ಶೆಟ್ಟಿ ನಟಿಸಿದ್ದಾರೆ. ದಿನಕರ್ ತೂಗುದೀಪ್ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಿನಕರ್ ತೂಗುದೀಪ, ರಾಘು ಶಿವಮೊಗ್ಗ ಸೇರಿದಂತೆ ಐದು ಜನ ನಿರ್ದೇಶಕರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಶ್ವೇತಪ್ರಿಯ ಛಾಯಾಗ್ರಹಣ ಮಾಡಿದ್ದಾರೆ. ಮೈಸೂರಿನಲ್ಲಿ ನಲವತ್ತೆಂಟು ದಿನಗಳ ಚಿತ್ರೀಕರಣ ನಡೆದಿದೆ. ಕೆಲವು ಭಾಗಗಳನ್ನು ಬೆಂಗಳೂರಿನ ತಿಗಳರಪೇಟೆಯಲ್ಲಿ ಚಿತ್ರೀಕರಿಸಲಾಗಿದೆ. ಡಿಸೆಂಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಜಯತೀರ್ಥ ತಿಳಿಸಿದರು.

    ಕೈವ ನನ್ನ ನಟನೆಯ ನಾಲ್ಕನೇ ಚಿತ್ರ ಎಂದು ಮಾತು ಆರಂಭಿಸಿದ ನಾಯಕ ಧನ್ವೀರ್, ಈ ಕಥೆ ಎಲ್ಲ ಕಡೆ ಸುತ್ತಿ ದ್ರೌಪದಿ ತಾಯಿ ಆಶೀರ್ವಾದದಿಂದ ನನ್ನ ಬಳಿ ಬಂತು. ಜಯತೀರ್ಥ ಅವರು ತುಂಬಾ ಅದ್ಛುತವಾಗಿ ನಿರ್ದೇಶನ ಮಾಡಿದ್ದಾರೆ. ಸಿನಿಮಾ ನೋಡಿದವರು ಚಿತ್ರ ಚೆನ್ನಾಗಿದೆ ಎನ್ನುತ್ತಿದ್ದಾರೆ. ನಿಮ್ಮ  ಪ್ರೋತ್ಸಾಹವಿರಲಿ ಎಂದರು.

    ದಿನಕರ್ ತೂಗುದೀಪ್ ರವರು ಮಾತನಾಡುತ್ತಾ, ನನಗೆ ಸಂಭಾಷಣೆಕಾರ ರಘು ನಿಡವಳ್ಳಿ,  ನಿರ್ದೇಶಕ ಜಯತೀರ್ಥ ಅವರು  ಭೇಟಿಯಾಗಬೇಕಂತೆ ಅಂದರು. ಆಗ ಜಯತೀರ್ಥ ಅವರು ಈ ಪಾತ್ರದ ಬಗ್ಗೆ ಹೇಳಿದರು. ನನ್ನ ಪಾತ್ರ ನೋಡಿದವರು ನಮ್ಮ ತಂದೆ ತೂಗುದೀಪ ಶ್ರೀನಿವಾಸ್ ಅವರ ಹಾಗೆ ಕಾಣುತ್ತಿರಾ ಎನ್ನುತ್ತಿದ್ದಾರೆ. ಅದು ನಮ್ಮ ತಂದೆಯವರ ಆಶೀರ್ವಾದ. ನಮ್ಮ ಅಮ್ಮ ಕೂಡ ನನ್ನ ಪಾತ್ರ ನೋಡಿ ಸಂತೋಷಪಟ್ಟರು ಎಂದು ತಿಳಿಸಿದರು.

    ನಾಯಕಿ ಮೇಘ ಶೆಟ್ಟಿ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ನಟ ರಾಘು ಶಿವಮೊಗ್ಗ, ಸಂಭಾಷಣೆಕಾರ ರಘು ನಿಡವಳ್ಳಿ ಹಾಗೂ ಕಾರ್ಯಕಾರಿ ನಿರ್ಮಾಪಕರಾದ ಬಾಲಕೃಷ್ಣ ಹಾಗೂ ಕೃಷ್ಣ ಅವರು ಚಿತ್ರದ ಕುರಿತು ಮಾತನಾಡಿದರು.

  • ವರ್ಕೌಟ್ ಫೋಟೋ ಹಂಚಿಕೊಂಡ ‘ಜೊತೆ ಜೊತೆಯಲಿ’ ನಟಿ

    ವರ್ಕೌಟ್ ಫೋಟೋ ಹಂಚಿಕೊಂಡ ‘ಜೊತೆ ಜೊತೆಯಲಿ’ ನಟಿ

    ಟಿ ಮೇಘಾ ಶೆಟ್ಟಿ (Megha Shetty) ಅವರು ಸದ್ಯ ವರ್ಕೌಟ್ ಮೂಡ್‌ನಲ್ಲಿದ್ದಾರೆ. ಜನಪ್ರಿಯ ‘ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್ ಮುಗಿದ ಮೇಲೆ ತಮ್ಮ ಫಿಟ್‌ನೆಸ್ ಕಡೆ ಹೆಚ್ಚು ಗಮನ ನೀಡುತ್ತಿದ್ದಾರೆ. ಸದ್ಯ ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ನಟಿ ಹಂಚಿಕೊಂಡಿದ್ದಾರೆ.

    ‘ಜೊತೆ ಜೊತೆಯಲಿ’ ಸೀರಿಯಲ್ ಮೂಲಕ ಟಿವಿ ಕಿರುತೆರೆಗೆ ಲಗ್ಗೆಯಿಟ್ಟ ನಟಿ ಮೇಘಾ ಅವರು ಸೀರಿಯಲ್ ಜೊತೆ ಸಿನಿಮಾಗಳನ್ನು ಮಾಡುತ್ತಾ ನಾಲ್ಕು ವರ್ಷ ಕಿರುತೆರೆಯಲ್ಲಿ ರಂಜಿಸಿದ್ದರು. ಅಭಿಮಾನಿಗಳ ನೆಚ್ಚಿನ ಸೀರಿಯಲ್‌ಗೆ ಬ್ರೇಕ್ ಬಿದ್ದಿದೆ. ಅನು ಸಿರಿಮನೆ (Anu Sirimane)  ಪಾತ್ರಕ್ಕೂ ಕೂಡ ತೆರೆ ಬಿದ್ದಿದೆ.

    ಸೀರಿಯಲ್ ಮುಗಿದ ಬಳಿಕ ತಮ್ಮ ಮುಂದಿನ ಸಿನಿಮಾಗಳ ಕಡೆ ಗಮನ ನೀಡುತ್ತಿದ್ದಾರೆ. ಸದ್ಯ ವೆಕೇಷನ್ ಮೂಡ್‌ನಲ್ಲಿರುವ ನಟಿ ಮೈಸೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಡೈಲಿ ಜಿಮ್ ವರ್ಕೌಟ್ ಮಾಡುತ್ತಾ ಬೆವರಿಳಿಸುತ್ತಿದ್ದಾರೆ. ಮೇಘಾ ಲುಕ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಮೇಕಪ್ ಇಲ್ಲದೇ ಕೂಡ ನಟಿ ಮುದ್ದಾಗಿ ಕಾಣಿಸುತ್ತಿದ್ದಾರೆ. ಇದನ್ನೂ ಓದಿ:‘ಕಡ್ಡಿಪುಡಿ’ ಚಂದ್ರು ವಿರುದ್ಧ ಠಾಣೆ ಮೆಟ್ಟಿಲೇರಿದ ‘ರೊಮಿಯೋ’ ಖ್ಯಾತಿಯ ಪಿಸಿ ಶೇಖರ್

    ಮೇಘಾ ಶೆಟ್ಟಿ ಅವರು ತ್ರಿಬಲ್ ರೈಡಿಂಗ್, ದಿಲ್ ಪಸಂದ್ ಚಿತ್ರಗಳಲ್ಲಿ ಈಗಾಗಲೇ ನಟಿಸಿ ಸೈ ಎನಿಸಿಕೊಂಡಿದ್ದಾರೆ. ‘ಕೈವ’ ಮತ್ತು ‘ಆಪರೇಷನ್ ಲಂಡನ್ ಕೆಫೆ’ ಚಿತ್ರಗಳು ಈ ವರ್ಷ ತೆರೆಗೆ ಬರಲಿದೆ.

  • ಬೆಂಗಳೂರಿಗರನ್ನೇ ಬೆಚ್ಚಿಬೀಳಿಸಿದ ಘಟನೆಯನ್ನು ಸಿನಿಮಾ ಮಾಡ್ತಿದ್ದಾರೆ ನಿರ್ದೇಶಕ ಜಯತೀರ್ಥ

    ಬೆಂಗಳೂರಿಗರನ್ನೇ ಬೆಚ್ಚಿಬೀಳಿಸಿದ ಘಟನೆಯನ್ನು ಸಿನಿಮಾ ಮಾಡ್ತಿದ್ದಾರೆ ನಿರ್ದೇಶಕ ಜಯತೀರ್ಥ

    ಬೆಲ್ ಬಾಟಮ್ ಚಿತ್ರ ಖ್ಯಾತಿಯ ನಿರ್ದೇಶಕ ಜಯತೀರ್ಥ (Jayathirtha) ಇದೀಗ ಮತ್ತೊಂದು ಸಿನಿಮಾವನ್ನು ಕೈಗೆತ್ತಿಕೊಂಡಿದ್ದು, ಈ ಬಾರಿ ಅವರು ನೈಜ ಘಟನೆಯನ್ನು ಆಧರಿಸಿದ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. 1983ರಲ್ಲಿ ನಡೆದ ರೋಚಕ ಘಟನೆಯನ್ನು ತಮ್ಮ ಹೊಸ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದು 1983 ಸೆಪ್ಟೆಂಬರ್ 13 ರಂದು ಮಧ್ಯಾಹ್ನ 3.20ಕ್ಕೆ ಬೆಂಗಳೂರಿಗರನ್ನೇ ಬೆಚ್ಚಿಬೀಳಿಸಿದ ಘಟನೆ ಇದಾಗಿದೆಯಂತೆ. ಈ ಘಟನೆ ನಡೆದರೂ, ಆಕೆ ಕೈವನಿಗಾಗಿ ಕಾಯುತ್ತಿದ್ದಳು ಎಂದು ಕುತೂಹಲದ ಟ್ಯಾಗ್ ಲೈನ್ ಕೂಡ ನೀಡಿದ್ದಾರೆ.

    ಅಂದಹಾಗೆ ಈ ಹೊಸ ಸಿನಿಮಾಗೆ ಕೈವ (Kaiva) ಎಂದು ಹೆಸರಿಟ್ಟಿರುವ ನಿರ್ದೇಶಕರು, ಆ ಘಟನೆ ನಡೆದಾಗ ಆಕೆ ಕೈವನಿಗಾಗಿ ಕಾಯುತ್ತಿದ್ದಳು. ಅವನು ಬಂದೇ ಬರುತ್ತಾನೆ ಎನ್ನುವ ನಂಬಿಕೆ ಆಕೆಗಿತ್ತು ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಕೈವ ಚಿತ್ರದ ಫಸ್ಟ್ ಲುಕ್ ರಿಲೀಸ್ ಮತ್ತು ಮುಹೂರ್ತ ಸಮಾರಂಭ ಇಂದು ನಡೆದಿದ್ದು, ಕಂಠೀರವ ಸ್ಟುಡಿಯೋ ಬಳಿ ಇರುವ ಡಾ.ರಾಜ್ ಕುಮಾರ್ ಪುಣ್ಯಭೂಮಿಯಲ್ಲಿ ಈ ಕಾರ್ಯಕ್ರಮ ನಡೆದಿದೆ. ಇದನ್ನೂ ಓದಿ:ಸೋಮಣ್ಣ – ಗುರೂಜಿ ಗೆಲುವು ನೋಡಿ, ಗಳಗಳನೆ ಅತ್ತ ಸಾನ್ಯ ಅಯ್ಯರ್

    ಬಜಾರ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಧನ್ವೀರ್ (Dhanvir) ಈ ಚಿತ್ರಕ್ಕೆ ನಾಯಕ. ಇಂದು ಇವರ ಹುಟ್ಟು ಹಬ್ಬವೂ ಆಗಿರುವುದರಿಂದ ಹೊಸ ರೀತಿಯ ಗಿಫ್ಟ್ ನೀಡಿದ್ದಾರೆ ಜಯತೀರ್ಥ. 1983ರ ಕಾಲಘಟ್ಟದಲ್ಲಿ ಈ ಕಥೆ ನಡೆಯುವುದರಿಂದ ಬೆಂಗಳೂರನ್ನು ಮರುಸೃಷ್ಟಿ ಮಾಡಲಾಗುತ್ತಿದೆಯಂತೆ. ಅಲ್ಲದೇ, ಕರಗ ಸೇರಿದಂತೆ ಬೆಂಗಳೂರಿನ ಸಂಪ್ರದಾಯಿಕ ಉತ್ಸವವನ್ನು ಚಿತ್ರಕ್ಕಾಗಿ ಬಳಕೆ ಮಾಡಲಾಗುತ್ತಿದೆಯಂತೆ.

    ಈ ಘಟನೆ ತಿಗಳರ ಪೇಟೆಯಲ್ಲಿ ನಡೆದಿರುವುದರಿಂದ, ಸಂಪೂರ್ಣವಾಗಿ ಈ ಪೇಟೆಯ ಸುತ್ತಮುತ್ತಲು ಕಥೆ ಇರಲಿದೆಯಂತೆ. ಧ್ವನಿರ್ ನಾಯಕನಾಗಿ ನಟಿಸುತ್ತಿದ್ದರೆ, ಮೇಘಾ ಶೆಟ್ಟಿ (Megha Shetty) ನಾಯಕಿಯಂತೆ. ಈ ಜೋಡಿ ರೆಟ್ರೊ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಬಡತನದ ಜೋಡಿಯೊಂದು, ಶ್ರೀಮಂತರ ಕಿರುಕುಳಕ್ಕೆ ಹೇಗೆ ತಿರುಗಿ ಬೀಳುತ್ತಾರೆ ಎನ್ನುವುದೇ ಸಿನಿಮಾದ ಕಥೆ.

    Live Tv
    [brid partner=56869869 player=32851 video=960834 autoplay=true]