Tag: Kalabaragi

  • ಪುನೀತ್ ರಾಜ್‌ಕುಮಾರ್‌ರನ್ನು ಮರಳಿ ಕಳುಹಿಸು – ಅಭಿಮಾನಿಯಿಂದ ದೇವರಿಗೆ ಪತ್ರ

    ಪುನೀತ್ ರಾಜ್‌ಕುಮಾರ್‌ರನ್ನು ಮರಳಿ ಕಳುಹಿಸು – ಅಭಿಮಾನಿಯಿಂದ ದೇವರಿಗೆ ಪತ್ರ

    ಕಲಬುರಗಿ: ಕನ್ನಡ ಚಿತ್ರರಂಗದ ಮೇರು ನಟ ಯುವರತ್ನ ಪುನೀತ್ ರಾಜ್‍ಕುಮಾರ್ ನಮ್ಮನ್ನೆಲ್ಲ ಅಗಲಿ ತಿಂಗಳುಗಳು ಉರುಳಿವೆ. ಆದರೆ, ಅಪ್ಪು ನೆನಪಲ್ಲಿ ಅದೆಷ್ಟೋ ಒಳ್ಳೆ ಕಾರ್ಯಗಳು ನಿತ್ಯವೂ ನಡೆಯುತ್ತಿವೆ. ಅಭಿಮಾನಿಗಳ ಹೃದಯದಲ್ಲಿ ಅಪ್ಪು ಅಜರಾಮರವಾಗಿದ್ದು, ಅದಕ್ಕೆ ಸಾಕ್ಷಿ ಎಂಬಂತೆ ಪುನೀತ್ ರಾಜ್‍ಕುಮಾರ್ ಅವರನ್ನು ಮರಳಿ ಕಳುಹಿಸು ಪ್ರಭುವೇ ಎಂದು ಅಪ್ಪು ಅಭಿಮಾನಿಯೊಬ್ಬರು ಬರೆದಿರುವ ಚೀಟಿ ದೇವರ ಹುಂಡಿಯಲ್ಲಿ ಸಿಕ್ಕಿದೆ.

    ಕಲಬುರಗಿಯ ಅಫಜಲಪುರ ತಾಲೂಕಿನ ಸುಪ್ರಸಿದ್ಧ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನದ ಹುಂಡಿಯಲ್ಲಿ ಪುನೀತ್ ರಾಜ್‍ಕುಮಾರ್ ಅವರನ್ನು ಮರಳಿ ಕಳುಹಿಸು ಪ್ರಭು ಎಂದು ಅಭಿಮಾನಿ ಬರೆದಿರುವ ಚೀಟಿ ದೇವಸ್ಥಾನದ ಹುಂಡಿ ಎಣಿಕೆ ಸಂದರ್ಭದಲ್ಲಿ ದೊರೆತಿದೆ. ಅಪ್ಪು ಅವರನ್ನು ಮತ್ತೆ ಕಳುಹಿಸಿ ಎಂದು ದೇವರ ಮೊರೆ ಹೋಗಿರುವ ಈ ವಿಚಾರ ಭಾವನಾತ್ಮಕವಾಗಿದೆ. ಇದನ್ನೂ ಓದಿ: ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ಕಪಾಳಮೋಕ್ಷ: ಅತ್ಯುತ್ತಮ ನಟ ಆಸ್ಕರ್ ವಿಜೇತ ವಿಲ್ ಸ್ಮಿತ್ ಉಗ್ರತಾಪ

    ಸದ್ಯ ಇತ್ತೀಚೆಗಷ್ಟೇ ಪುನೀತ್ ರಾಜ್‍ಕುಮಾರ್ ಅವರ ಜೇಮ್ಸ್ ಸಿನಿಮಾ ಬಿಡುಗಡೆಗೊಂಡಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಿನಿಮಾದಲ್ಲಿ ಅಪ್ಪು ಡ್ಯಾನ್ಸ್, ಫೈಟ್ ನೋಡಿ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಜೇಮ್ಸ್ ಸಿನಿಮಾಕ್ಕೆ ನಿರ್ದೇಶಕ ಚೇತನ್ ಆ್ಯಕ್ಷನ್ ಕಟ್ ಹೇಳಿದ್ದು, ಅಪ್ಪುಗೆ ಜೋಡಿಯಾಗಿ ಪ್ರಿಯಾ ಆನಂದ್ ಕಾಣಿಸಿಕೊಂಡಿದ್ದಾರೆ. ಅಲ್ಲದೇ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಶರತ್ ಕುಮಾರ್, ಪ್ರಿಯಾ ಆನಂದ್, ಸಾಧು ಕೋಕಿಲಾ, ಶ್ರೀಕಾಂತ್, ಆದಿತ್ಯ ಮೆನನ್ ಸೇರಿದಂತೆ ಹಲವಾರು ಕಲಾವಿದರೂ ಅಭಿನಯಿಸಿದ್ದಾರೆ. ಇದನ್ನೂ ಓದಿ: ಜೇಮ್ಸ್ ಸಿನಿಮಾ ನೋಡೋಕೆ 10 ಅಲ್ಲ, 100 ಕಾರಣ

  • ಆ ಯುವತಿ ಯಾರು ಎಂದು ನನಗೆ ಗೊತ್ತಿಲ್ಲ: ಸ್ನೇಹಲ್ ಲೋಖಂಡೆ

    ಆ ಯುವತಿ ಯಾರು ಎಂದು ನನಗೆ ಗೊತ್ತಿಲ್ಲ: ಸ್ನೇಹಲ್ ಲೋಖಂಡೆ

    ಕಲಬುರಗಿ: ಆ ಯುವತಿ ಯಾರು ಎಂದು ನನಗೆ ಗೊತ್ತಿಲ್ಲ. ನನ್ನ ಮಾನಹಾನಿಯಾಗುತ್ತಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರೂ ಆಗಿರುವ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ಹೇಳಿದ್ದಾರೆ.

    snehal lokhande

    ಮದುವೆಯಾಗುವುದಾಗಿ ನಂಬಿಸಿ ವಂಚಿಸಿರುವುದಾಗಿ ಯುವತಿಯೊಬ್ಬಳು ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ವಿರುದ್ಧ ಗಂಭೀರವಾಗಿ ಆರೋಪಿಸಿದ್ದಳು. ಯುವತಿ ದೆಹಲಿ ಮೂಲದವಳಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮುರುಗೇಶ್ ನಿರಾಣಿ ಅವರಿಗೆ ಟ್ವಿಟ್ಟರ್ ಮೂಲಕ ಪತ್ರ ಬರೆದು ಲಗತ್ತಿಸಿದ್ದಾಳೆ. ಆ ಪತ್ರದಲ್ಲಿ 2017ರ ಬ್ಯಾಚ್‍ನ ಐಎಎಸ್ ಅಧಿಕಾರಿ ಲೋಖಂಡೆಯು ತನ್ನ ಜೊತೆಗೆ ಹೋಟೆಲ್‍ಗಳಲ್ಲಿ ಕಾಲ ಕಳೆದ, ಹೊರಗಡೆ ಸುತ್ತಾಡಿದ, ವಾಟ್ಸಾಪ್‍ಗಳಲ್ಲಿ ಚಾಟ್ ಮಾಡಿದ್ದ ಬಗ್ಗೆ ದಿನಾಂಕ, ಸ್ಥಳ ಸಮೇತ ವಿವರಿಸಿದ್ದು, ವಾಟ್ಸಾಪ್ ಚಾಟ್ ಅನ್ನು ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಳು. ದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಮೋಸ – ಕಲಬುರಗಿ ಪಾಲಿಕೆ ಆಯುಕ್ತ ಸ್ನೇಹಲ್ ವಿರುದ್ಧ ದೂರು

    ಈ ಕುರಿತಂತೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಆ ಯುವತಿ ಯಾರು ಎಂದು ನನಗೆ ಗೊತ್ತಿಲ್ಲ. ನನ್ನ ಮಾನಹಾನಿಯಾಗುತ್ತಿದೆ. ನಾನು ಈ ಕುರಿತಂತೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸುತ್ತೇನೆ. ಕಲಬುರಗಿ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದೇನೆ. ಮಾಹಿತಿ ಕೂಡ ನೀಡಿದ್ದೇನೆ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವತಿ ನನ್ನ ವಿರುದ್ಧ ಮಾಡಿರುವ ಆರೋಪಗಳೆಲ್ಲಾ ಸುಳ್ಳು. ವಾಟ್ಸಾಪ್ ಚಾಟ್, ಫೋಟೋ ಎಲ್ಲವೂ ಕೂಡ ಫೇಕ್. ನನ್ನ ಫೋಟೋ ಅವರಿಗೆ ಹೇಗೆ ಸಿಕ್ಕಿತು ನನಗೆ ಗೊತ್ತಿಲ್ಲ. ಆ ಯುವತಿ ಬರೆದಿರುವ ಪತ್ರವನ್ನು ಓದಿದ್ದೇನೆ. ಅದೆಲ್ಲಾವೂ ಕೂಡ ಸುಳ್ಳು. ಕುಟುಂಬಸ್ಥರಾಗಲಿ, ಜಿಲ್ಲಾಧಿಕಾರಿ ಮತ್ತು ಪೊಲೀಸ್ ಕಮೀಷನರ್ ಯಾರು ಕೂಡ ಸಂಧಾನ ಮಾಡಲು ಪ್ರಯತ್ನಿಸಿಲ್ಲ ಎಂದು ಹೇಳಿದ್ದಾರೆ. ದನ್ನೂ ಓದಿ: ಮದುವೆ ಆಗುವಂತೆ ಯುವತಿಗೆ ಬ್ಲಾಕ್‍ಮೇಲ್- ಠಾಣೆ ಮೆಟ್ಟಿಲೇರಿದ ಪ್ರಕರಣ

    ಮತ್ತೊಂದೆಡೆ ಕಲಬುರಗಿ ಪೊಲೀಸ್ ಆಯುಕ್ತ ರವಿಕುಮಾರ್ ಅವರು, ಯುವತಿ ನಮಗೆ ಲಿಖಿತ ದೂರು ನೀಡಿಲ್ಲ. ಆದರೆ ಐಎಎಸ್ ಅಧಿಕಾರಿ ಸ್ನೇಹಲ್ ಲೋಖಂಡೆ ದೂರು ನೀಡಿದ್ದಾರೆ. `ಯುವತಿ, ಆಕೆಯ ತಂದೆ-ತಾಯಿ ನಮ್ಮನ್ನು ಭೇಟಿ ಆಗಿದ್ದರು. ಆದರೆ ಈ ಘಟನೆ ದೆಹಲಿಯಲ್ಲಿ ಆಗಿರುವ ಕಾರಣ, ದೆಹಲಿಯಲ್ಲಿಯೇ ದೂರು ನೀಡಬೇಕೆಂದು ಹೇಳಿದ್ದೇವೆ ಎಂದು ಹೇಳಿದ್ದಾರೆ.