Tag: Kalaburagi Jail

  • ಸೆಂಟ್ರಲ್ ಜೈಲನ್ನೇ ಕಂಟ್ರೋಲ್ ಮಾಡೋಕೆ ಸ್ಕೆಚ್ ಹಾಕಿದ್ದ ಉಗ್ರ ಜುಲ್ಫಿಕರ್ ಜೈಲಿಂದ ಶಿಫ್ಟ್

    ಸೆಂಟ್ರಲ್ ಜೈಲನ್ನೇ ಕಂಟ್ರೋಲ್ ಮಾಡೋಕೆ ಸ್ಕೆಚ್ ಹಾಕಿದ್ದ ಉಗ್ರ ಜುಲ್ಫಿಕರ್ ಜೈಲಿಂದ ಶಿಫ್ಟ್

    ಕಲಬುರಗಿ: ಇಲ್ಲಿನ ಸೆಂಟ್ರಲ್ ಜೈಲನ್ನೇ (Kalaburagi jail) ತನ್ನ ಕಂಟ್ರೋಲ್‍ನಲ್ಲಿ ಇಟ್ಟುಕೊಳ್ಳಲು ಯತ್ನಿಸಿದ್ದ ಶಂಕಿತ ಉಗ್ರ ಜುಲ್ಫಿಕರ್ ಸೇರಿ ಆರು ಜನ ಕೈದಿಗಳ ಸ್ಥಳಾಂತರಕ್ಕೆ ಕಾರಾಗೃಹ ಇಲಾಖೆ ಮುಂದಾಗಿದೆ.

    ಕೈದಿಗಳನ್ನು ರಾಜ್ಯದ ವಿವಿಧ ಜೈಲ್‍ಗಳಿಗೆ ಸ್ಥಳಾಂತರ ಮಾಡಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಜುಲ್ಫಿಕರ್ 2013ರಲ್ಲಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿಯಾಗಿದ್ದಾನೆ. ಇನ್ನೂ ಈತನ ಜೊತೆ ಶಿವಮೊಗ್ಗದ ರೌಡಿಶೀಟರ್ ಬಚ್ಚನ್ ಸೇರಿ ಆರು ಜನ ವರ್ಗಾವಣೆಗೆ ಇಲಾಖೆ ಮುಂದಾಗಿದೆ.

    ಉಗ್ರ ಜುಲ್ಫಿಕರ್ ಬೇರೆ ಜೈಲಿಗೆ ಶಿಫ್ಟ್ ಮಾಡಲು ಎನ್‍ಐಎ ಕೋರ್ಟ್‍ನ ಅನುಮತಿ ಪಡೆಯಲಾಗಿದೆ. ಶಿವಮೊಗ್ಗ ರೌಡಿ ಶೀಟರ್ ಬಚ್ಚನ್ ಸ್ಥಳಾಂತರಕ್ಕೆ ಶಿವಮೊಗ್ಗ ಕೋರ್ಟ್ ಅನುಮತಿ ನೀಡಿದೆ. ಆರೋಪಿಗಳು ಕಲಬುರಗಿ ಸೆಂಟ್ರಲ್ ಜೈಲಿನ ವಾತವರಣವನ್ನೆ ಹಾಳು ಮಾಡಿದ್ದರು. ಜೈಲು ಅಧಿಕಾರಿಗಳ ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‍ಮೇಲ್ ಮಾಡಿ ಹೈಫೈ ಜೀವನ ನಡೆಸುತ್ತಿದ್ದರು. ಜೈಲಿಗೆ ಹೊಸ ಮುಖ್ಯ ಅಧೀಕ್ಷರು ಬರುತ್ತಿದ್ದಂತೆ ಇವರ ಹೈಫೈ ಲೈಫ್‍ಗೆ ಬ್ರೇಕ್ ಬಿದ್ದಿತ್ತು.

    ಇದರಿಂದ ಜೈಲಿನೊಳಗೆ ಆರೋಪಿಗಳು ಪ್ರತಿಭಟನೆ ಮಾಡಿದ್ದರು. ಅಲ್ಲದೇ ಜೈಲು ಅಧೀಕ್ಷಕರ ಕಾರು ಸ್ಫೋಟಿಸೋ ಬೇದರಿಕೆ ಹಾಕಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಜೈಲು ಮುಖ್ಯ ಅಧೀಕ್ಷಕಿ ಡಾ.ಅನಿತಾ ಅವರು ಆರೊಪಿಗಳನ್ನು ಬೇರೆ ಜೈಲುಗಳಿಗೆ ಸ್ಥಳಾಂತರಿಸಲು ನಿರ್ಧರಿಸಿದ್ದರು.

  • 93 ವರ್ಷದ ಅಜ್ಜಿಗೆ ಪರೋಲ್ – ಜೈಲಲ್ಲಿ ಅಜ್ಜಿಯ ಪರಿಸ್ಥಿತಿ ಕಂಡು ಮರುಗಿದ್ದ ಉಪಲೋಕಾಯುಕ್ತ

    93 ವರ್ಷದ ಅಜ್ಜಿಗೆ ಪರೋಲ್ – ಜೈಲಲ್ಲಿ ಅಜ್ಜಿಯ ಪರಿಸ್ಥಿತಿ ಕಂಡು ಮರುಗಿದ್ದ ಉಪಲೋಕಾಯುಕ್ತ

    ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ 93 ವರ್ಷದ ಅಜ್ಜಿ ನಾಗಮ್ಮ ಅವರನ್ನು ಕಾರಾಗೃಹ ಇಲಾಖೆ ಪರೋಲ್ ಮೇಲೆ ಬಿಡುಗಡೆಗೊಳಿಸಿದೆ.

    ಇತ್ತೀಚೆಗೆ ರಾಜ್ಯದ ಉಪಲೋಕಾಯುಕ್ತ ಬಿ.ವೀರಪ್ಪ, ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಅಜ್ಜಿ ನಾಗಮ್ಮ ಪರಿಸ್ಥಿತಿ ಕಂಡು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಅಜ್ಜಿಗೆ ಪರೋಲ್ ನೀಡುವ ಕುರಿತು ಪರಿಶೀಲಿಸುವಂತೆ ಸಲಹೆ ನೀಡಿದ್ದರು.

    ಈ ಮಧ್ಯೆ ಕಾರಾಗೃಹದ ಮುಖ್ಯ ಅಧೀಕ್ಷಕಿ ಅನಿತಾ ಅವರು ಅಜ್ಜಿಯ ಅನಾರೋಗ್ಯ ಮತ್ತು ಇಳಿವಯಸ್ಸಿನಲ್ಲಿ ಕಾಡುತ್ತಿರುವ ವಯೋಸಹಜ ಕಾಯಿಲೆಗಳ ಕುರಿತು ಇಲಾಖೆಯ ಮೇಲಾಧಿಕಾರಿಗಳಿಗೆ ವರದಿ ನೀಡಿದರು. ಈ ಹಿನ್ನೆಲೆಯಲ್ಲಿ ಈಗ ಮೂರು ತಿಂಗಳ ಅವಧಿಗಾಗಿ ಪರೋಲ್ ನೀಡಿ ಅಜ್ಜಿಯನ್ನು ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ ಎಂದು ಅಧೀಕ್ಷಕಿ ಅನಿತಾ ತಿಳಿಸಿದ್ದಾರೆ.

    26 ವರ್ಷಗಳ ಹಿಂದೆ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೂರು ವರ್ಷಗಳ ಶಿಕ್ಷೆ ಪ್ರಕಟಿಸಲಾಗಿತ್ತು. ಕಳೆದೊಂದು ವರ್ಷದಿಂದ ನಾಗಮ್ಮ ಜೈಲು ವಾಸ ಅನಭವಿಸುತ್ತಿದ್ದರು. ಇತ್ತೀಚೆಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಕಾರಣ ಮಾನವೀಯತೆ ದೃಷ್ಟಿಯಿಂದ ಪರೋಲ್ ಮಂಜೂರು‌ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

  • ಬೀಡಿ, ಗುಟ್ಕಾ ಬೇಕು: ಕಲಬುರಗಿ ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಿಂದ ಪ್ರತಿಭಟನೆ

    ಬೀಡಿ, ಗುಟ್ಕಾ ಬೇಕು: ಕಲಬುರಗಿ ಜೈಲಿನಲ್ಲಿ ವಿಚಾರಣಾಧೀನ ಕೈದಿಗಳಿಂದ ಪ್ರತಿಭಟನೆ

    ಕಲಬುರಗಿ: ಬೀಡಿ, ಗುಟ್ಕಾ ಬೇಕು ಎಂದು ಕಲಬುರಗಿ ಕೇಂದ್ರ ಕಾರಾಗೃಹದ (Kalaburagi Jail) ವಿಚಾರಣಾಧೀನ ಕೈದಿಗಳು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.

    70 ಕ್ಕೂ ಹೆಚ್ಚು ಕೈದಿಗಳು ಪ್ರತಿಭಟಿಸಿದ್ದಾರೆ. ಜೈಲಿನಲ್ಲಿ ಏಕಾಏಕಿ ಎಲ್ಲವೂ ಬಂದ್ ಮಾಡಿದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಮುಸ್ತಾಫಾ ಎನ್ನುವ ಕೈದಿಯ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

    ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ರಾಜ್ಯದಲ್ಲಿರುವ ಜೈಲುಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲ ವಸ್ತುಗಳನ್ನು ಜೈಲಿನಲ್ಲಿ ಮಾರಾಟ ಮಾಡದಂತೆ ಕ್ರಮವಹಿಸಲಾಗಿದೆ.

    ಇದರ ಜೊತೆಗೆ ಜೈಲಿನಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಲಬುರಗಿ ಜೈಲಿನ ಮುಖ್ಯ ಅಧೀಕ್ಷಕಿ ವಿರುದ್ಧ ಲಂಚದ ಆರೋಪ ಮಾಡಿ ಕೈದಿ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ. ಅನಾಮಧೇಯ ಮಹಿಳೆಯಿಂದ ದೂರು ಕೊಡಿಸಿ ಜೈಲು ಅಧೀಕ್ಷಕಿಗೆ ಬ್ಲ್ಯಾಕ್‌ಮೇಲ್ ಮಾಡಲಾಗಿದೆ. ಕೈದಿಗಳ ಬ್ಲ್ಯಾಕ್‌ಮೇಲ್ ಕುರಿತು ಅಧೀಕ್ಷಕಿ ಅನಿತಾ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

    ಹಣ ಕೊಟ್ಟರೆ ಜೈಲಿನಲ್ಲಿ ಎಲ್ಲವೂ ಲಭ್ಯ ಅಂತಾ ಜೈಲು ಅಧೀಕ್ಷಕಿ ವಿರುದ್ಧ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸುಪ್ರೀಂ ಕೋರ್ಟ್ ನ್ಯಾಯಧೀಶರು, ಗೃಹಸಚಿವರು, ಸಿಎಂಗೆ ಮೇಲ್ ಮಾಡಿ ದೂರಲಾಗಿತ್ತು. ನೂರ್ ಜಹಾನ್ ಶೇಖ್ ಹೆಸರಿನ ಇಮೇಲ್‌ನಿಂದ ಅನಿಸಾ ಬೇಗಂ ಎಂಬವರಿಂದ ದೂರು ನೀಡಲಾಗಿತ್ತು. ನಮ್ಮ ಸಹೋದರ ಮುಸ್ತಫಾಗೆ ಜೈಲಿನಲ್ಲಿ ಹಿಂಸಿಸಿ ಹಣದ ಬೇಡಿಕೆ ಒಡ್ಡಲಾಗಿದೆ ಎಂದು ಮಹಿಳೆ ದೂರಿದ್ದಾರೆ. ಗುಣಮಟ್ಟದ ಆಹಾರ ಕೇಳಿದ್ದಕ್ಕೆ ದೈಹಿಕವಾಗಿ ಹಿಂಸಿಸಿ 25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ಬೇರೆ ಜೈಲಿಗೆ ವರ್ಗಾಯಿಸುವುದಾಗಿ ಹೆದರಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಖೈದಿ ಜೊತೆ ಸಹೋದರಿ ಮಾತನಾಡಿರುವ ಆಡಿಯೋ ವೈರಲ್ ಆಗಿದೆ. ಆಡಿಯೋ ಹಾಗೂ ದೂರಿನ ಬಗ್ಗೆ ತನಿಖೆ ನಡೆಸಲು ಜೈಲು ಮುಖ್ಯಾಧೀಕ್ಷಕಿಯಿಂದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಲಾಗಿದೆ. ಜೈಲಿ ಅಧೀಕ್ಷಕಿ ದೂರಿನ ಬಳಿಕ ಫೋನ್ ಸ್ವಿಚ್ಚ್ ಆಫ್ ಮಾಡಿ ಅನಿಸಾ ಬೇಗಂ ಎಸ್ಕೇಪ್ ಆಗಿದ್ದಾರೆ. ಜೈಲನ್ನ ಕಟ್ಟುನಿಟ್ಟಾಗಿ ಇಟ್ಟಿದ್ದಕ್ಕೆ ಬ್ಲ್ಯಾಕ್‌ಮೇಲ್ ಮಾಡ್ತಿದ್ದಾರೆ ಎಂದು ಮುಖ್ಯ ಅಧೀಕ್ಷಕಿ ದೂರಿದ್ದಾರೆ. ಮುಸ್ತಾಫಾ ಎನ್ನುವ ಕೈದಿಯನ್ನ ಇಲ್ಲಿಯವರೆಗೂ ನೋಡೇ ಇಲ್ಲ. ನಾನು ಇಲ್ಲಿಗೆ ಬಂದು ಕೇವಲ ಒಂದು ತಿಂಗಳಾಗಿದೆ. ಇವರೆಲ್ಲಾ ಸೇರಿ ಬ್ಲ್ಯಾಕ್‌ಮೇಲ್ ಮಾಡ್ತಿದ್ದಾರೆ ಎಂದು ಅದೀಕ್ಷಕಿ ಆರೋಪಿಸಿದ್ದಾರೆ.

  • Public TV Impact | ಕಲಬುರಗಿ ಸೆಂಟ್ರಲ್‌ ಜೈಲ್‌ನ ಇಬ್ಬರು ಅಧಿಕಾರಿಗಳು ಅಮಾನತು

    Public TV Impact | ಕಲಬುರಗಿ ಸೆಂಟ್ರಲ್‌ ಜೈಲ್‌ನ ಇಬ್ಬರು ಅಧಿಕಾರಿಗಳು ಅಮಾನತು

    ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ (Kalaburagi Central Jail) ಕೈದಿಗಳ ಬಿಂದಾಸ್ ಲೈಫ್ ಪ್ರಕರಣವನ್ನು ಸಿಸಿಬಿಗೆ (CCB) ವರ್ಗಾಯಿಸಿದ ಬೆನ್ನಲ್ಲೇ ಜೈಲಿನ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲರ್‌ಗಳಾದ ಶೆಹನಾಜ್ ಹಾಗೂ ಪಾಂಡುರಂಗ ಇಬ್ಬರನ್ನು ಅಮಾನತುಗೊಳಿಸಿ ಕಾರಾಗೃಹ ಇಲಾಖೆಯ ಡಿಜಿ ಆದೇಶ ಹೊರಡಿಸಿದ್ದಾರೆ.

    ಕೇಂದ್ರ ಕಾರಾಗೃಹದ ಕರ್ಮಕಾಂಡದ ಬಗ್ಗೆ ‘ಪಬ್ಲಿಕ್ ಟಿವಿ’ (Public TV) ವಿಸ್ತೃತ ವರದಿ ಮಾಡಿತ್ತು. ಇದರ ಬೆನ್ನಲ್ಲೇ ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿತ್ತು. ಬಳಿಕ ಜೈಲಿನ ಮೇಲೆ ಪೊಲೀಸ್ ಆಯುಕ್ತರು ದಾಳಿ ಮಾಡಿದ್ದರು. ದಾಳಿ ವೇಳೆ ಎರಡು ಮೊಬೈಲ್ ಸೇರಿದಂತೆ ಸಿಗರೇಟ್, ಗುಟ್ಕಾ ಪ್ಯಾಕೆಟ್ ಪತ್ತೆಯಾಗಿತ್ತು. ಹೀಗಾಗಿ ಇಬ್ಬರು ಜೈಲರ್‌ಗಳನ್ನ ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ಜೈಲಲ್ಲಿ ಉಗ್ರನಿಂದ ಹನಿಟ್ರ್ಯಾಪ್ – ಮಾಹಿತಿ ಕಲೆಹಾಕಿದ ಎಸ್‌ಪಿ ಯಶೋಧಾ

    ಸಿಸಿಬಿ ಅಧಿಕಾರಿಗಳಿಂದ ಮುಂದುವರಿದ ಶೋಧ:
    ಕಲಬುರಗಿ ಸೆಂಟ್ರಲ್‌ ಜೈಲಲ್ಲಿ ಕೈದಿಗಳ ಬಿಂದಾಸ್ ಲೈಫ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳು 2ನೇ ದಿನವಾದ ಶನಿವಾರವೂ ಜೈಲಿನಲ್ಲಿ ಶೋಧಕಾರ್ಯ ಮುಂದುವರಿಸಿದ್ದಾರೆ. ಕಾರಾಗೃಹ ಇಲಾಖೆ ಡಿಜಿ ಕಚೇರಿಯ ಎಸ್ಪಿ ಯಶೋಧಾ ನೇತೃತ್ವದಲ್ಲಿ ಶೋಧ ನಡೆಯುತ್ತಿದೆ. ಈಗಾಗಲೇ ಜೈಲಿನ ಅಧಿಕಾರಿಗಳ ತನಿಖೆ ನಡೆಸಿರುವ ಎಸ್ಪಿ ಯಶೋಧಾ ಅವರು, ಶನಿವಾರ ಜೈಲಿನ ವಾರ್ಡನ್ ಸೇರಿ ಹಲವರ ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

    ತನಿಖೆ ಸಿಸಿಬಿಗೆ ವರ್ಗಾಯಿಸಿದ್ದೇಕೆ?
    ಜೈಲಿನಲ್ಲಿದ್ದುಕೊಂಡೇ ವೀಡಿಯೋ ಕಾಲ್ ಮಾಡಿದ್ದ ಕೈದಿ ಸಾಗರ್, ಸೋನು, ವಿಶಾಲ್ ಸೇರಿದಂತೆ ಏಳು ಜನರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ತ್ವರಿತ ಹಾಗೂ ಕುಲಂಕಷ ತನಿಖೆಗಾಗಿ ಸಿಸಿಬಿಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ. ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾಧೀನ ಕೈದಿಗಳಿಬ್ಬರು ಕೆಲ ಕೈದಿಗಳನ್ನು ವೀಡಿಯೋ ಕಾಲ್ ನೆಪದಲ್ಲಿ ಹನಿಟ್ರ್ಯಾಪ್‌ಗೆ ಕೆಡವಿ, ಅವರಿಗೆ ಹಣದ ಬೆದರಿಕೆ ಒಡ್ಡಿದ ಆರೋಪವೂ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಜೈಲಿನ ಕೈದಿಯೊಬ್ಬರ ಫೋನ್ ಕರೆಯ ಸಂಭಾಷಣೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್ – ಪ್ರಕರಣ ಸಿಸಿಬಿಗೆ ವರ್ಗಾವಣೆ

  • ಕಲಬುರಗಿ ಸೆಂಟ್ರಲ್ ಜೈಲಲ್ಲಿ ಉಗ್ರನಿಂದ ಹನಿಟ್ರ್ಯಾಪ್ – ಮಾಹಿತಿ ಕಲೆಹಾಕಿದ ಎಸ್‌ಪಿ ಯಶೋಧಾ

    ಕಲಬುರಗಿ ಸೆಂಟ್ರಲ್ ಜೈಲಲ್ಲಿ ಉಗ್ರನಿಂದ ಹನಿಟ್ರ್ಯಾಪ್ – ಮಾಹಿತಿ ಕಲೆಹಾಕಿದ ಎಸ್‌ಪಿ ಯಶೋಧಾ

    ಕಲಬುರಗಿ: ಇಲ್ಲಿನ ಸೆಂಟ್ರಲ್ ಜೈಲಿನಲ್ಲಿ (Kalaburagi Jail) ನಡೆದಿದೆ ಎನ್ನಲಾದ ಹನಿಟ್ರ್ಯಾಪ್ (Honey Trap) ಹಾಗೂ ಬ್ಲ್ಯಾಕ್‍ಮೇಲ್ ಪ್ರಕರಣದ ವಿಚಾರವಾಗಿ ಕಾರಾಗೃಹ ಎಡಿಜಿಪಿ ಕಚೇರಿಯ ಎಸ್ಪಿ ಯಶೋಧಾ ಅವರು ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಜೈಲಿನಲ್ಲಿರುವ ಮಲ್ಲೇಶ್ವರಂ ಸ್ಫೋಟ ಪ್ರಕರಣದ (Malleswaram Blast Case) ಆರೋಪಿ ಜುಲ್ಫೀಕರ್ ಹಾಗೂ ಆತನ ಗ್ಯಾಂಗ್‍ನ ಬಗ್ಗೆ `ಪಬ್ಲಿಕ್ ಟಿವಿ’ ವರದಿ ಮಾಡಿತ್ತು. ವರದಿ ಬೆನ್ನಲ್ಲೇ ಬೆಂಗಳೂರಿನಿಂದ ಕಲಬುರಗಿಗೆ ಆಗಮಿಸಿದ ಯಶೋಧಾ ಅವರು ಕಾರಾಗೃಹ ಅಧೀಕ್ಷಕರು ಹಾಗೂ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್ – ಪ್ರಕರಣ ಸಿಸಿಬಿಗೆ ವರ್ಗಾವಣೆ

    ಕೈದಿ ಸಾಗರ್ ಎಂಬಾತನನ್ನು ವಿಡಿಯೋ ಕರೆ ಮೂಲಕ ಹನಿಟ್ರ್ಯಾಪ್ ಜಾಲಕ್ಕೆ ದೂಡಲಾಗಿತ್ತು. ಈ ಪ್ರಕರಣ ಮುಚ್ಚಿ ಹಾಕಲು 50,000 ರೂ. ನೀಡುವಂತೆ ಆತನಿಗೆ ಬ್ಲ್ಯಾಕ್‍ಮೇಲ್ ಮಾಡಲಾಗಿತ್ತು. ಈ ವಿಚಾರವನ್ನು ಸಾಗರ್ ಆತನ ಸಹೋದರನೊಂದಿಗೆ ಹೇಳಿಕೊಂಡಿದ್ದ.

    ಇದೇ ಪ್ರಕರಣ ಬಳಸಿಕೊಂಡು ಜೈಲಿನ ಸಿಬ್ಬಂದಿಗೂ ಬ್ಲ್ಯಾಕ್‍ಮೇಲ್ ಮಾಡಲು ಜುಲ್ಫಿಕರ್ ಯತ್ನಿಸಿದ್ದಾನೆ ಎನ್ನಲಾಗುತ್ತಿದೆ. ಇದರಿಂದ ಕಾರಾಗೃಹ ಇಲಾಖೆ ಮುಜುಗರಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ತಕ್ಷಣ ಎಸ್ಪಿ ಯಶೋಧಾ ಅವರನ್ನು ಘಟನೆಯ ಮಾಹಿತಿ ಕಲೆಹಾಕಲು ಕಳಿಸಿದೆ. ಇದನ್ನೂ ಓದಿ: ಮಲ್ಲೇಶ್ವರಂ ಸ್ಫೋಟದಲ್ಲಿ ಭಾಗಿಯಾಗಿದ್ದ ಉಗ್ರನಿಂದ ಕಲಬುರಗಿ ಸೆಂಟ್ರಲ್ ಜೈಲಿನಿಂದಲೇ ಹನಿಟ್ರ್ಯಾಪ್?

  • ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್ – ಪ್ರಕರಣ ಸಿಸಿಬಿಗೆ ವರ್ಗಾವಣೆ

    ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್ – ಪ್ರಕರಣ ಸಿಸಿಬಿಗೆ ವರ್ಗಾವಣೆ

    ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

    ಕೇಂದ್ರ ಕಾರಾಗೃಹದ ಕರ್ಮಕಾಂಡದ ಬಗ್ಗೆ ‘ಪಬ್ಲಿಕ್ ಟಿವಿ’ ವಿಸ್ತೃತ ವರದಿ ಮಾಡಿತ್ತು. ಇದರ ಬೆನ್ನಲ್ಲೇ ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿದೆ. ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ಜೈಲಲ್ಲಿ ಉಗ್ರನಿಂದ ಹನಿಟ್ರ್ಯಾಪ್ – ಮಾಹಿತಿ ಕಲೆಹಾಕಿದ ಎಸ್‌ಪಿ ಯಶೋಧಾ

    ಬಳಿಕ ಜೈಲಿನ ಮೇಲೆ ಪೊಲೀಸ್ ಆಯುಕ್ತರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಎರಡು ಮೊಬೈಲ್ ಸೇರಿದಂತೆ ಸಿಗರೇಟ್, ಗುಟ್ಕಾ ಪ್ಯಾಕೆಟ್ ಪತ್ತೆಯಾಗಿದೆ.

    ಜೈಲಿನಲ್ಲಿದ್ದು ವೀಡಿಯೋ ಕಾಲ್ ಮಾಡಿದ್ದ ಸಾಗರ್, ಸೋನು, ವಿಶಾಲ್ ಸೇರಿದಂತೆ ಏಳು ಜನರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ತ್ವರಿತ ಹಾಗೂ ಕುಲಂಕಷ ತನಿಖೆಗಾಗಿ ಸಿಸಿಬಿಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ.

    ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾಧೀನ ಕೈದಿಗಳಿಬ್ಬರು ಕೆಲ ಕೈದಿಗಳನ್ನು ವೀಡಿಯೋ ಕಾಲ್ ನೆಪದಲ್ಲಿ ಹನಿಟ್ರ್ಯಾಪ್‌ಗೆ ಕೆಡವಿ, ಅವರಿಗೆ ಹಣದ ಬೆದರಿಕೆ ಒಡ್ಡಿದ ಆರೋಪವೂ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಜೈಲಿನ ಕೈದಿಯೊಬ್ಬರ ಫೋನ್ ಕರೆಯ ಸಂಭಾಷಣೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಹೈಫೈ ಆತಿಥ್ಯ

  • ಮಲ್ಲೇಶ್ವರಂ ಸ್ಫೋಟದಲ್ಲಿ ಭಾಗಿಯಾಗಿದ್ದ ಉಗ್ರನಿಂದ ಕಲಬುರಗಿ ಸೆಂಟ್ರಲ್ ಜೈಲಿನಿಂದಲೇ ಹನಿಟ್ರ್ಯಾಪ್?

    ಮಲ್ಲೇಶ್ವರಂ ಸ್ಫೋಟದಲ್ಲಿ ಭಾಗಿಯಾಗಿದ್ದ ಉಗ್ರನಿಂದ ಕಲಬುರಗಿ ಸೆಂಟ್ರಲ್ ಜೈಲಿನಿಂದಲೇ ಹನಿಟ್ರ್ಯಾಪ್?

    – ಸಹ ಕೈದಿಯ ಬೆತ್ತಲೆ ವಿಡಿಯೋ ಕಾಲ್‌ ಸ್ಕ್ರೀನ್‌ಶಾಟ್‌ ತೆಗೆದು ಬ್ಲ್ಯಾಕ್‌ಮೇಲ್

    ಕಲಬುರಗಿ: ಇಲ್ಲಿನ ಸೆಂಟ್ರಲ್ ಜೈಲಿನಿಂದ (Kalaburagi Jail) ಉಗ್ರಗಾಮಿಯೊಬ್ಬ ಇತರ ಕೈದಿಗಳನ್ನು ಹನಿಟ್ರ್ಯಾಪ್ (Honey Trap) ಖೆಡ್ಡಾಕ್ಕೆ ಕೆಡವಿ ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಆಘಾತಕಾರಿ ವಿದ್ಯಮಾನ ಬೆಳಕಿಗೆ ಬಂದಿದೆ.

    ಬೆಂಗಳೂರಿನ ಮಲ್ಲೇಶ್ವರಂ ಬಡಾವಣೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ (Malleswaram Blast Case) ಸಂಬಂಧಿಸಿದಂತೆ ಕಲಬುರಗಿ ಜೈಲಿನಲ್ಲಿರುವ ಉಗ್ರ ಜುಲ್ಫೀಕರ್ ಹಾಗೂ ಶಿವಮೊಗ್ಗದ (Shivamogga) ರೌಡಿ ಬಚ್ಚನ್ ಇಬ್ಬರೂ ಸೇರಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ತನ್ನ ಮನೆಯ ಸದಸ್ಯರೊಂದಿಗೆ ವಿಡಿಯೋ ಕರೆ ಮೂಲಕ ಮಾತನಾಡಿದ್ದ ಕೈದಿ ಸಾಗರ್, ಈ ಇಬ್ಬರೂ ಒಂದಾಗಿ ರಚಿಸಿದ ಹನಿಟ್ರ್ಯಾಪ್‌ಗೆ ಒಳಗಾಗಿರುವುದಾಗಿ ಸಹೋದರನೊಂದಿಗೆ ಮಾಹಿತಿ ಹಂಚಿಕೊಂಡಿದ್ದ. ಇದೀಗ ಈ ಆಡಿಯೋ ಸಂಭಾಷಣೆ ವೈರಲ್ ಆಗಿದೆ.

    ಇಷ್ಟಕ್ಕೂ ಜುಲ್ಫೀಕರ್ ಮತ್ತು ಬಚ್ಚನ್ ಇತ್ತೀಚೆಗೆ ಸಾಗರ್‌ನನ್ನು ತಾವಿರುವ ಸೆಲ್‌ಗೆ ಕರೆದು ಮನೆಯ ಸದಸ್ಯರೊಂದಿಗೆ ಮಾತನಾಡುವುದಾದರೆ ವಿಡಿಯೋ ಕಾಲ್ ವ್ಯವಸ್ಥೆ ಮಾಡುವುದಾಗಿ ಹೇಳಿ ತಮ್ಮದೇ ಮೊಬೈಲ್ ಆತನಿಗೆ ನೀಡಿದ್ದಾರೆ ಎನ್ನಲಾಗಿದೆ. ತನ್ನ ತಾಯಿ ಮತ್ತು ಸಹೋದರನ ಜೊತೆ ಸಾಗರ್ ಮಾತನಾಡಿದ ಬಳಿಕ ಓರ್ವ ಅಪರಿಚಿತ ಮಹಿಳೆಯೊಂದಿಗೆ ಮಾತನಾಡಿದರೆ ಆಕೆ ಬೆತ್ತಲೆಯಾಗಿ ನಿನ್ನೊಂದಿಗೆ ಮಾತನಾಡುವುದಾಗಿ ನಂಬಿಸಿದ್ದಾರೆ. ಈ ವೇಳೆ ಸಾಗರ್ ಸಹ ಬೆತ್ತಲೆಯಾಗಿಯೇ ಮಾತನಾಡುವಂತೆ ಪುಸಲಾಯಿಸಿ ಬಳಿಕ ಅವರಿಬ್ಬರ ಮಧ್ಯದ ಸಂಭಾಷಣೆಯ ದೃಶ್ಯಾವಳಿ ಸ್ಕ್ರೀನ್ ಶಾಟ್ ಮಾಡಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ. ಈ ವಿಚಾರವನ್ನು ತನ್ನ ಸಹೋದರನ ಜೊತೆ ಸಾಗರ್‌ ಹಂಚಿಕೊಂಡಿದ್ದಾನೆ ಎಂದು ಹೇಳಲಾಗಿದೆ.

    ಬೆತ್ತಲೆಯಾಗಿ ನಡೆದ ವಿಡಿಯೊ ಸಂಭಾಷಣೆ ಸ್ಕ್ರೀನ್ ಶಾಟ್ ಮಾಡಿಕೊಂಡಿರುವ ಕುರಿತು ಸಾಗರ್‌ಗೆ ತೋರಿಸಿ ಆತನ ಬಳಿ 50,000 ರೂ. ನೀಡುವಂತೆ ಬೇಡಿಕೆಯಿಟ್ಟಿದ್ದಾನೆ. ಹಣದ ವ್ಯವಸ್ಥೆ ಮಾಡದೆ ಹೋದರೆ ಬೆತ್ತಲೆಯಾಗಿ ಮಹಿಳೆಯೊಂದಿಗೆ ಮಾತನಾಡಿರುವ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತನ್ನ ಸಹೋದರನೊಂದಿಗೆ ಚರ್ಚಿಸಿದ ವೇಳೆ ಸಾಗರ್ ಉಲ್ಲೇಖಿಸಿದ್ದಾನೆ.

    ಜುಲ್ಫೀಕರ್ ಮತ್ತು ಬಚ್ಚನ್ ಜೋಡಿ ಸಹ ಕೈದಿಗಳಷ್ಟೇ ಅಲ್ಲ, ಜೈಲಿನ ಕೆಲವು ಸಿಬ್ಬಂದಿಗೂ ಇದೇ ವಿಡಿಯೊ ತುಣುಕು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾರಾಗೃಹ ಇಲಾಖೆಯ ಅಧಿಕಾರಿಗಳು ತನಿಖೆ ನಡೆಸಬೇಕಿದೆ.