Tag: Kalaya Namah

  • ‘ಕಾಲಾಯ ನಮಃ’ ಚಿತ್ರಕ್ಕೆ ಒಂದಾದ ಜಗ್ಗೇಶ್-ಕೋಮಲ್

    ‘ಕಾಲಾಯ ನಮಃ’ ಚಿತ್ರಕ್ಕೆ ಒಂದಾದ ಜಗ್ಗೇಶ್-ಕೋಮಲ್

    ನಸೂಯ ಕೋಮಲ್ ಕುಮಾರ್ ನಿರ್ಮಾಣದ ಮತಿವಣನ್ ನಿರ್ದೇಶನದ ‘ಕಾಲಾಯ ನಮಃ’ (Kalaya Namah) ಚಿತ್ರದಲ್ಲಿ ಬಹಳ ದಿನಗಳ ನಂತರ ಸಹೋದರರಾದ ಜಗ್ಗೇಶ್ (Jaggesh) ಹಾಗೂ ಕೋಮಲ್ (Komal) ಅಭಿನಯಿಸುತ್ತಿದ್ದಾರೆ. ಇವರಿಬ್ಬರು ಭಾಗವಹಿಸಿರುವ ಹಾಡೊಂದರ ಚಿತ್ರೀಕರಣ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಚಿತ್ರರಂಗದ ಸದಸ್ಯರು ಮಾಹಿತಿ ನೀಡಿದ್ದಾರೆ.

    ನಾನು ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದೇನೆ. ಕೋಮಲ್, ಉತ್ತಮ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ನಾನು ಆವತ್ತಿನಿಂದ ಹೇಳುತ್ತಿದ್ದೇನೆ. ಕೋಮಲ್ ಅದ್ಭುತ ಕಲಾವಿದ ಎಂದು. ಇದರಲ್ಲಿ ನಾನು, ಕೋಮಲ್ ಹಾಗೂ ನನ್ನ ಮಗ ಯತಿರಾಜ್ ಮೂರು ಜನ ನಟಿಸಿದ್ದೇವೆ. ಇತ್ತೀಚೆಗೆ ಬರುತ್ತಿರುವ ಅನೇಕ ಚಿತ್ರಗಳು ಯಶಸ್ವಿಯಾಗುತ್ತಿದೆ. ಕಾಲಾಯ ನಮಃ ಸಹ ಪ್ರಚಂಡ ಯಶಸ್ಸು ಕಾಣಲಿ ಎಂದು ಜಗ್ಗೇಶ್ ಹಾರೈಸಿದರು. ಇದನ್ನೂ ಓದಿ:ಸಿನಿಮಾ ಬಿಟ್ಟು ರಾಜಕೀಯದತ್ತ ರಮ್ಯಾ ಕೃಷ್ಣನ್? ಸ್ಪಷ್ಟನೆ ನೀಡಿದ ನಟಿ

    ಇದು ನಮ್ಮ ಸಂಸ್ಥೆಯ ಚಿತ್ರ. ನನ್ನ ಹೆಂಡತಿ ಅನಸೂಯ ಅವರು ನಿರ್ಮಾಪಕರು ಎಂದು ಮಾತು ಆರಂಭಿಸಿದ ಕೋಮಲ್ ಕುಮಾರ್, ಕಾಲಾಯ ನಮಃ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈಗ ಹಾಡಿನ ಚಿತ್ರೀಕರಣ ನಡೆಯುತ್ತಿದೆ. ಈ ಹಾಡಿನ ಚಿತ್ರೀಕರಣದಲ್ಲಿ ನಮ್ಮ ಅಣ್ಣ ಜಗ್ಗೇಶ್, ನಾನು ಹಾಗೂ ಮುಂಬೈ ನಟಿಯೊಬ್ಬರು ಪಾಲ್ಗೊಂಡಿದ್ದೇವೆ. ಯೋಗರಾಜ್ ಭಟ್ ಈ ಹಾಡನ್ನು ಬರೆದಿದ್ದಾರೆ. ಎಮಿಲ್ ಸಂಗೀತ ನೀಡಿದ್ದಾರೆ. ಭೂಷಣ್ ಮಾಸ್ಟರ್ ನೃತ್ಯ ಸಂಯೋಜನೆ ಮಾಡುತ್ತಿದ್ದಾರೆ. ನಾಯಕಿಯಾಗಿ ಆಸಿಯಾ ಫಿರ್ದೋಸ್ ನಟಿಸಿದ್ದಾರೆ. ಜಗ್ಗೇಶ್, ಪ್ರಕಾಶ್ ರೈ, ಸುಚೇಂದ್ರ ಪ್ರಸಾದ್, ಶೈನ್ ಶೆಟ್ಟಿ, ಯತಿರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.  ಅಂದುಕೊಂಡ ಹಾಗೆ ಆದರೆ, ಅಕ್ಟೋಬರ್ ಅಥವಾ ನವೆಂಬರ್ ನಲ್ಲಿ ಚಿತ್ರವನ್ನು ನಿಮ್ಮ ಮುಂದೆ ತರುತ್ತೇವೆ ಎಂದರು.

    ಇದೊಂದು ಸಮಯದ ಸುತ್ತ ನಡೆಯುವ ಕಥೆ. ಜಗ್ಗೇಶ್, ಕೋಮಲ್ ಅವರು ಸೇರಿದಂತೆ ಎಲ್ಲಾ ಕಲಾವಿದರು ಚೆನ್ನಾಗಿ ನಟಿಸಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ಮತಿವಣನ್ (Mathivanan). ಛಾಯಾಗ್ರಹಣದ ಬಗ್ಗೆ ಛಾಯಾಗ್ರಾಹಕ ರಾಕೇಶ್ ಸಿ ತಿಲಕ್ ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಮಲ್ ನಟನೆಯ ‘ಕಾಲಾಯ ನಮಃ’ ಅಡ್ಡದಲ್ಲಿ ಕಾಣಿಸಿಕೊಂಡ ಪ್ರಕಾಶ್ ರೈ

    ಕೋಮಲ್ ನಟನೆಯ ‘ಕಾಲಾಯ ನಮಃ’ ಅಡ್ಡದಲ್ಲಿ ಕಾಣಿಸಿಕೊಂಡ ಪ್ರಕಾಶ್ ರೈ

    ನಪ್ರಿಯ ಹಾಸ್ಯನಟ ಕೋಮಲ್ ಕುಮಾರ್, ಐದು ವರ್ಷಗಳ ನಂತರ ನಾಯಕರಾಗಿ ನಟಿಸುತ್ತಿರುವ ಚಿತ್ರ ‘ಕಾಲಾಯಾ ನಮಃ’ ಪ್ರಸ್ತುತ ಈ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈಗ ಮತ್ತೊಂದು ಖುಷಿಯ ವಿಚಾರವೆಂದರೆ, ತಮ್ಮ ನಟನೆಯ ಮೂಲಕ ಭಾರತದಾದ್ಯಂತ ಹೆಸರು ಮಾಡಿರುವ ಬಹುಭಾಷಾ ನಟ ಪ್ರಕಾಶ್ ರೈ ‘ಕಾಲಾಯಾ ನಮಃ’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.  ಪ್ರಕಾಶ್ ರೈ ಅವರ ಅಭಿನಯದ ಸನ್ನಿವೇಶಗಳ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ.

    ಕೋಮಲ್ ಹಲವು ವರ್ಷಗಳ ನಂತರ ಮತ್ತೆ ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿರುವುದು ಅವರ ಅಭಿಮಾನಿಗಳಿಗೆ ಸಹಜವಾಗಿಯೇ ಸಂಭ್ರಮ ತಂದಿದೆ. ಬಹುತೇಕ ಹಾಸ್ಯ ಪಾತ್ರಗಳ ಮೂಲಕವೇ ಗುರುತಿಸಿಕೊಂಡಿದ್ದ ಅವರು, ಆನಂತರ ಒಂದಷ್ಟು ಸಾಹಸ ಪ್ರಧಾನ ಚಿತ್ರಗಳಲ್ಲೂ ಕಾಣಿಸಿಕೊಂಡಿದ್ದರು. ಸಿನಿಮಾ ರಂಗದಲ್ಲಿ ಏರುಗತಿಯಲ್ಲಿ ಇರುವಾಗಲೇ, ಹಲವು ಎಡವಟ್ಟುಗಳನ್ನು ಮಾಡಿಕೊಂಡ ಪರಿಣಾಮ, ಚಿತ್ರಗಳು ಸೋಲು ಕಂಡವು. ಆನಂತರ ಅವರು ಸಿನಿಮಾ ರಂಗದಿಂದಲೇ ದೂರ ಉಳಿದುಕೊಂಡರು. ಇದನ್ನೂ ಓದಿ:ನಾವಿನ್ನೂ ಮಗುವಿಗೆ ಸಿದ್ಧರಿಲ್ಲ: ಚಂದನ್ ಶೆಟ್ಟಿ ಪ್ರತಿಕ್ರಿಯೆ

    ಇದೀಗ ಮತ್ತೆ ಹೊಸ ಸಿನಿಮಾದ ಮೂಲಕ ವಾಪಸ್ಸಾಗಿದ್ದಾರೆ. ಎಲ್ಲ ಎಚ್ಚರಿಕೆಗಳನ್ನು ತಗೆದುಕೊಂಡು ಈ ಸಿನಿಮಾವನ್ನು ಮಾಡುತ್ತಿದ್ದಾರೆ. ಅನುಸೂಯ ಕೋಮಲ್ ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮತಿವಣನ್ ನಿರ್ದೇಶಿಸುತ್ತಿದ್ದಾರೆ. ಎಮಿಲ್ ಸಂಗೀತ ನಿರ್ದೇಶನ ಹಾಗೂ ರಾಕೇಶ್ ಸಿ ತಿಲಕ್ ಛಾಯಾಗ್ರಹಣ ಈ ಚಿತ್ರಕ್ಕಿದೆ. ಕೋಮಲ್ ಕುಮಾರ್,  ಆಸಿಯಾ ಫಿರ್ದೋಸ್, ಪ್ರಕಾಶ್ ರೈ, ಸುಚೀಂದ್ರ ಪ್ರಸಾದ್, ತಿಲಕ್, ಯತಿರಾಜ್ ಜಗ್ಗೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಕಾಲಾಯ ನಮಃ’ ಸಿನಿಮಾ ಮೂಲಕ ಕೋಮಲ್ ಕಮ್ ಬ್ಯಾಕ್

    ‘ಕಾಲಾಯ ನಮಃ’ ಸಿನಿಮಾ ಮೂಲಕ ಕೋಮಲ್ ಕಮ್ ಬ್ಯಾಕ್

    ಹಾಸ್ಯ ಕಲಾವಿದನಾಗಿ ಜನಪ್ರಿಯರಾಗಿರುವ ನಟ ಕೋಮಲ್ ಕುಮಾರ್, ನಾಯಕನಾಗೂ ಸೈ ಎನಿಸಿಕೊಂಡವರು. ಕಳೆದ ಕೆಲವು ವರ್ಷಗಳಿಂದ ಕೋಮಲ್ ಕುಮಾರ್  ಚಿತ್ರರಂಗದಿಂದ ದೂರವಿದ್ದರು. ಈಗ “ಕಾಲಾಯ ನಮಃ” ಚಿತ್ರದ ಮೂಲಕ ಕೋಮಲ್ ಕುಮಾರ್ ಚಿತ್ರರಂಗಕ್ಕೆ ಮರಳಿ ಬರುತ್ತಿದ್ದಾರೆ. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ.

    ಮನುಷ್ಯನ ಜೀವನದಲ್ಲಿ ಗ್ರಹಗಳ ಪ್ರಭಾವ ಅಪಾರ. ನನ್ನ ಜೀವನದಲ್ಲೂ ಹಾಗೆ. ನಮ್ಮ ಅಣ್ಣ ಜಗ್ಗೇಶ್ ಅವರು, ಕೆಲವು ವರ್ಷಗಳ ಹಿಂದೆ ನನ್ನ ಜಾತಕ ನೋಡಿ, ನಿನಗೆ ಈಗ ಕೇತು ದೆಸೆ ನಡೆಯುತ್ತಿದೆ. ಹಾಗಾಗಿ ಸ್ವಲ್ಪ ಹುಷಾರಾಗಿರು ಅಂದಿದ್ದರು. ಹಾಗಾಗಿ ಐದು ವರ್ಷದಿಂದ ನಾನು ಯಾವುದೇ ಚಿತ್ರಗಳಲ್ಲಿ ಕಾಣಿಸಿಕೊಂಡಿಲ್ಲ.‌ ನಮ್ಮ ಊರಿನ ದೇವರಾದ ಕಾಲಭೈರವನ ಉಪಾಸನೆ ಮಾಡುತ್ತಿದೆ. ಈಗ ಕಾಲ ಕೂಡಿ ಬಂದಿದೆ. “ಕಾಲಾಯ ನಮಃ” ಶುರುವಾಗಿದೆ. ಕಾಲಭೈರವ ದೇವರ ಭಕ್ತನಾದ ನನ್ನ ಸಿನಿಮಾ ಶೀರ್ಷಿಕೆ ಕೂಡ, ಕಾಲದಿಂದಲೇ ಶುರುವಾಗುತ್ತಿರುವುದು ಕಾಕತಾಳೀಯ. ಕಾಲ ನಿಲುವುದಿಲ್ಲ. ಕಾಲ ಯಾರಿಗೂ ಕಾಯುವುದಿಲ್ಲ. ಈ ರೀತಿ ಕಾಲದ ಬಗ್ಗೆ ನಮ್ಮ ಸಿನಿಮಾ ಸಾಗುತ್ತದೆ. ನನ್ನ ಪತ್ನಿ ಅನಸೂಯ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.  ಮತಿವಣನ್ ನಿರ್ದೇಶಿಸುತ್ತಿದ್ದಾರೆ.‌ ನನ್ನ ಅಣ್ಣ ಜಗ್ಗೇಶ್ ಅವರ ಸಹಕಾರವಿದೆ. ಅಸಿಯಾ ಫಿರ್ದೋಸಿ, ಸುಚೇಂದ್ರ ಪ್ರಸಾದ್,‌ ತಿಲಕ್ ಹಾಗೂ ನನ್ನ ಅಣ್ಣ ಜಗ್ಗೇಶ್ ಅವರ‌ ಪುತ್ರ ಯತಿರಾಜ್ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ.‌ ನಾನು ನಟಿಸಿರುವ 2020 ಚಿತ್ರ ಕೂಡ ಸದ್ಯದಲ್ಲೇ ತೆರೆಗೆ ಬರುತ್ತಿದೆ‌ ಎಂದು ಕೋಮಲ್ ಕುಮಾರ್ ವಿವರಣೆ ನೀಡಿದರು.

    ಜ್ಯೋತಿಷ್ಯ ಯಾರು ನಂಬುತ್ತಾರೊ, ಬಿಡುತ್ತಾರೊ ನನಗ ಗೊತ್ತಿಲ್ಲ. ಆದರೆ ನನಗೆ ನಂಬಿಕೆಯಿದೆ. ಕೋಮಲ್ ಗೆ ಕೇತುದೆಸೆ ಇದೆ. 2022 ರವರೆಗೂ ಏನು ಮಾಡಬೇಡ ಅಂದಿದೆ. ಆತ ನನ್ನ ಮಾತು ಕೇಳಿ ಹಾಗೆ ನಡೆದುಕೊಂಡ. ಈಗ ಕಾಲಭೈರವನ ದಯೆಯಿಂದ ಈ‌ ಚಿತ್ರ ಆರಂಭಿಸಿದ್ದಾನೆ. ನನ್ನ‌ ಮಗ ಯತಿರಾಜ್ ಕೂಡ ಇದರಲ್ಲಿ ಅಭಿನಯಿಸುತ್ತಿದ್ದಾನೆ ಈ ತಂಡದಿಂದ ಒಳ್ಳೆಯ ಸಿನಿಮಾ ಬರುವ ವಿಶ್ವಾಸವಿದೆ.‌‌ ಒಳ್ಳೆಯದಾಗಲಿ ಎಂದರು ಜಗ್ಗೇಶ್. ಇದನ್ನೂ ಓದಿ:ನಾವು ನಟರಿಗೆ ಹೆಚ್ಚು ಕ್ರೆಡಿಟ್ ನೀಡುತ್ತೇವೆ: ಪ್ರಿಯಾಂಕಾ ಚೋಪ್ರಾ

    “ಕಾಲಾಯ ನಮಃ” ಒಳ್ಳೆಯ ಕಥೆಯುಳ್ಳ ಚಿತ್ರ ಕೋಮಲ್ ಅವರ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಎಂದು ನಿರ್ದೇಶಕ ಮತಿವಣನ್ ತಿಳಿಸಿದರು. ಧಾರಾವಾಹಿಯಲ್ಲಿ ನಟಿಸುತ್ತಿದ್ದ ನನಗೆ ಇದು ಮೊದಲ ಸಿನಿಮಾ ಎಂದರು ನಟಿ ಆಸಿಯಾ ಫಿರ್ದೋಸ್. ಚಿಕ್ಕಪ್ಪ ನನಗೆ ಒಳ್ಳೆಯ ಪಾತ್ರ ಕೊಟ್ಟಿದ್ದಾರೆ ಧನ್ಯವಾದ ಎಂದರು ಯತಿರಾಜ್. ನಟರಾದ ಸುಚೀಂದ್ರ ಪ್ರಸಾದ್ ಹಾಗೂ ತಿಲಕ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನಿರ್ಮಾಪಕಿ ಅನಸೂಯ ಕೋಮಲ್ ಕುಮಾರ್, ಸಂಗೀತ ನಿರ್ದೇಶಕ ಎಮಿಲ್ ಹಾಗೂ ಛಾಯಾಗ್ರಾಹಕ ರಾಕೇಶ್ ಸಿ ತಿಲಕ್ ಚಿತ್ರದ ಕುರಿತು ಮಾತನಾಡಿದರು.

    Live Tv
    [brid partner=56869869 player=32851 video=960834 autoplay=true]