Tag: kallabatti

  • ಸರ್ಜಿಕಲ್ ಸ್ಪಿರಿಟ್‍ಗೆ ನೀರು ಬೆರೆಸಿ ಕಳ್ಳಬಟ್ಟಿ ಸಾರಾಯಿ ಎಂದು ಮಾರಾಟ

    ಸರ್ಜಿಕಲ್ ಸ್ಪಿರಿಟ್‍ಗೆ ನೀರು ಬೆರೆಸಿ ಕಳ್ಳಬಟ್ಟಿ ಸಾರಾಯಿ ಎಂದು ಮಾರಾಟ

    ದಾವಣಗೆರೆ: ಮದ್ಯ ಸಿಗದ್ದಕ್ಕೆ ಹಲವರು ಕಳ್ಳಬಟ್ಟಿ ಸಾರಾಯಿ ಮೊರೆ ಹೋಗುತ್ತಿದ್ದು, ಇದನ್ನೇ ಬಂಡವಾಳವನ್ನಾಗಿಸಿಕೊಂಡಿರುವ ಕೆಲವರು ಸರ್ಜಿಕಲ್ ಸ್ಪಿರಿಟ್‍ನ್ನು ಕಳ್ಳಬಟ್ಟಿ ಸರಾಯಿ ಎಂದು ನಂಬಿಸಿ ಮಾರಾಟ ಮಾಟುತ್ತಿದ್ದಾರೆ.

    ದಾವಣಗೆರೆಯಲ್ಲಿ ಸರ್ಜಿಕಲ್ ಸ್ಪಿರಿಟ್ ದಂಧೆ ಜೋರಾಗಿದ್ದು, ಸರ್ಜಿಕಲ್ ಸ್ಪೀರಿಟ್‍ನ್ನು ನೀರಿಗೆ ಬೆರೆಸಿ ಕಳ್ಳಬಟ್ಟಿ ಎಂದು ನಂಬಿಸಿ ಮಾರಾಟ ಮಾಡಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು, ಯಾರೇ ಕೇಳಿದರೂ ಸರ್ಜಿಕಲ್ ಸ್ಪಿರಿಟ್ ನೀಡದಂತೆ ಡ್ರಗ್ ಕಂಟ್ರೋಲ್ ರೂಮ್‍ಗೆ ಪತ್ರ ಬರೆಯಲಾಗಿದೆ. ಸರ್ಜಿಕಲ್ ಸ್ಪಿರಿಟ್ ಬೇಕು ಎಂದರೆ ಅವರ ಅಧಾರ್ ಕಾರ್ಡ್ ಪ್ರತಿ ಪಡೆಯಲು ಔಷಧಿ ಅಂಗಡಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅಬಕಾರಿ ಆಯುಕ್ತ ನಾಗರಾಜ್ ಮಾಹಿತಿ ನೀಡಿದ್ದಾರೆ.

    ಜಿಲ್ಲೆಯಾದ್ಯಂತ ಸಾವಿರಾರು ಲೀಟರ್ ಕಳ್ಳಬಟ್ಟಿ ನಾಶ ಮಾಡಲಾಗಿದೆ. ಆಲೂರು ಹಟ್ಟಿಯಲ್ಲೇ ಸಾವಿರ ಲೀಟರ್ ಕಳ್ಳಬಟ್ಟಿ ನಾಶ ಮಾಡಲಾಗಿದೆ. ಜಿಲ್ಲೆಯಾದ್ಯಂತ 259 ಬಾರ್ ಗಳಿದ್ದು ಕಾವಲು ಕಾಯುವಂತೆ ಮಾಲೀಕರಿಗೆ ಸೂಚನೆ ನೀಡಲಾಗಿದೆ. ಯಾರೂ ಕಳ್ಳಬಟ್ಟಿ, ಸರ್ಜಿಕಲ್ ಸ್ಪಿರಿಟ್ ಕುಡಿಯ ಬೇಡಿ. ಕುಡಿದರೆ ಬಹು ಅಂಗಾಂಗ ಸಮಸ್ಯೆ ಉಂಟಾಗುತ್ತದೆ ಎಂದು ಅಬಕಾರಿ ಆಯುಕ್ತರು ಮನವಿ ಮಾಡಿದ್ದಾರೆ.

  • ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ- 4 ಲೀಟರ್ ಸಾರಾಯಿ ವಶ

    ಕಳ್ಳಬಟ್ಟಿ ಅಡ್ಡೆ ಮೇಲೆ ದಾಳಿ- 4 ಲೀಟರ್ ಸಾರಾಯಿ ವಶ

    ಬಾಗಲಕೋಟೆ: ಒಂದೆಡೆ ಹೆದ್ದಾರಿ ಪಕ್ಕದಲ್ಲಿದ್ದ ಬಾರ್ ಗಳನ್ನು ಬಂದ್ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಇನ್ನೊಂದೆಡೆ ಅಕ್ರಮ ಮದ್ಯ ತಯಾರಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅಂತೆಯೇ ಜಿಲ್ಲೆಯಲ್ಲಿ ಕಳ್ಳಬಟ್ಟಿ ಸಾರಾಯಿ ಅಡ್ಡೆಯ ಮೇಲೆ ಪೊಲಿಸರು ದಾಳಿ ನಡೆಸಿದ ಘಟನೆ ನಡೆದಿದೆ.

    ಈ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಗೋಠೆ ಗ್ರಾಮದಲ್ಲಿ ನಡೆದಿದೆ. ಸಾವಳಗಿ ಪಿ.ಎಸ್.ಐ. ಲಕ್ಷ್ಮಿಕಾಂತ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

    ಮಾಹಿತಿ ತಿಳಿದ ಪೊಲೀಸರು ಅಡ್ಡೆಯ ಮೇಲೆ ದಾಳಿ ನಡೆಸುತ್ತಿದ್ದಂತೆಯೇ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಹೀಗಾಗಿ ಪೊಲೀಸರು ಅಂದಾಜು 4 ಲೀಟರಿನಷ್ಟು ಕಳ್ಳಬಟ್ಟಿ ಸಾರಾಯಿಯನ್ನು ವಶಕ್ಕೆ ಪಡೆದಿದ್ದಾರೆ. ಹಾಗೆಯೇ ರಸ್ತೆ ಬದಿ ಹೂತಿಟ್ಟಿದ್ದ 17 ಕೊಡ ರಾ ಮೆಟಿರಿಯಲ್‍ಗಳನ್ನು ನಾಶ ಮಾಡಿದ್ದಾರೆ.

    ಈ ಸಂಬಂಧ ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.