Tag: kalladka prabhakar

  • ರಮಾನಾಥ ರೈಗೆ ಗೃಹ ಖಾತೆ: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದು ಹೀಗೆ

    ರಮಾನಾಥ ರೈಗೆ ಗೃಹ ಖಾತೆ: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದು ಹೀಗೆ

    ಚಿಕ್ಕಮಗಳೂರು: ರಮಾನಾಥ ರೈ ಗೃಹ ಸಚಿವ ಆಗುವುದು ನನಗೆ ಸಂತೋಷ ತಂದಿದೆ ಎಂದು ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಹೇಳಿದರು.

    ಮೂಡಿಗೆರೆಯ ಸಾರ್ವಜನಿಕ ಗಣಪತಿ ಸೇವಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಮಾನಾಥ ರೈ ಅವರು ಸಿಟ್ಟಿನಿಂದ, ದ್ವೇಷದಿಂದ, ಆವೇಷದಿಂದ ಧರ್ಮವಿರೋಧಿ ಕೆಲಸ ಮಾಡಬಾರದು. ಏಕೆಂದರೆ ಗೃಹ ಅಂದರ ಮನೆ, ಮನೆ ಆನಂದ, ಸಂತೋಷ ನೀಡುವಂತಹ ಜಾಗ. ರೈ ಅವರಿಗೆ ಇಡೀ ರಾಜ್ಯವೇ ಮನೆ ಇದ್ದ ಹಾಗೆ. ಎಲ್ಲರಿಗೂ ಸುಖ, ಶಾಂತಿ, ನೆಮ್ಮದಿ ನೀಡಿ ರಾಜಕೀಯ ವೈರತ್ವ ಮರೆತು ಕೆಲಸ ಮಾಡಲಿ ಎಂದು ರೈ ಅವರಿಗೆ ಸಲಹೆ ನೀಡಿದರು.

    ಕೊಲ್ಲೂರು ದೇವಾಲಯದಿಂದ ಕಲ್ಲಡ್ಕ ಶ್ರೀರಾಮ ಶಾಲೆಗೆ ಅನುದಾನ ನಿಲ್ಲಿಸಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ನಾನು ಕಾನೂನು ಸಮರ ನಿಲ್ಲಿಸೋದು ಇಲ್ಲ, ಅವರ ಕಾಲಿಗೂ ಬೀಳೋದಿಲ್ಲ. ಸರ್ಕಾರ ಮಕ್ಕಳಿಗೆ ಮೋಸ ಮಾಡುತ್ತಿದೆ ಎಂದು ಹೇಳಿದರು.

    ಸಿದ್ದರಾಮಯ್ಯ ನಾನು ಅಹಿಂದ ಸಿಎಂ ಎಂದು ಹೇಳುತ್ತಾರೆ. ಆದರೆ ಕಲ್ಲಡ್ಕ ಶಾಲೆಯಲ್ಲಿ ಶೇ.94 ರಷ್ಟು ಅಹಿಂದ ಮಕ್ಕಳಿದ್ದಾರೆ. ಈ ಸರ್ಕಾರ ಮಕ್ಕಳ ಹೊಟ್ಟೆ ಮೇಲೆ ಹೊಡೆದಿದೆ. ಇದು ಅಧರ್ಮದಲ್ಲಿ ನಡೆಯುತ್ತಿರೋ ಸರ್ಕಾರ. ಇವರಿಗೆ ರಾಜಕೀಯ ದ್ವೇಷವಿದ್ದರೆ ಅಖಾಡಕ್ಕೆ ಬರಲಿ ಹೋರಾಡೋಣ. ಅದನ್ನು ಬಿಟ್ಟು ಮಕ್ಕಳ ಜೊತೆ ಹೋರಾಡಬಾರದು ಯಾರೇ ಆಗಲಿ ಯಾವ ಪಕ್ಷದವರೇ ಆಗಲಿ, ಮಕ್ಕಳ ಅನ್ನಕ್ಕೆ ಕನ್ನ, ಕಲ್ಲು ಹಾಕಬಾರದು ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದರು.

    ಮೂಡಿಗೆರೆಯ ಹ್ಯಾಂಡ್ ಪೋಸ್ಟ್‍ನಿಂದ ಬೈಕ್ ಜಾಥಾ ಮಾಡುವ ಮೂಲಕ ಪ್ರಭಾಕರ್ ಭಟ್ ಅವರನ್ನು ಸ್ವಾಗತಿಸಿಕೊಂಡರು. ಕಲ್ಲಡ್ಕ ಪ್ರಭಾಕರ್ ಭಟ್ ಮೆರವಣಿಗೆಗಾಗಿ ಸ್ಥಳೀಯರು ತೆರೆದ ಜೀಪ್ ಸಿದ್ಧಪಡಿಸಿಕೊಂಡಿದ್ದರು. ಆದರೆ ಪ್ರಭಾಕರ್ ಭಟ್ ಮೆರವಣಿಗೆಯಲ್ಲಿ ಪಾಲ್ಗೊಳ್ಳದೆ ತಮ್ಮ ಕಾರಿನಲ್ಲಿ ನೇರವಾಗಿ ರಂಗಮಂದಿರದ ಬಳಿ ಬಂದು ಗಣಪತಿಯ ಹೋಮ-ಹವನ ಪೂಜೆಯಲ್ಲಿ ಪಾಲ್ಗೊಂಡು ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು.

    ನಗರದಾದ್ಯಂತ 800 ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಅನೇಕ ಷರತ್ತು ವಿಧಿಸಿ ಕಲ್ಲಡ್ಕ ಪ್ರಭಾಕರ್ ಭಟ್ ಆಗಮನಕ್ಕೆ ಪೊಲೀಸರು ಅನುವು ಮಾಡಿಕೊಟ್ಟಿದ್ದರು.

  • ಕಲ್ಲಡ್ಕ ಪ್ರಭಾಕರ್ ಶಾಲೆಗೆ ಬರುತ್ತಿದ್ದ ಅನುದಾನ ಕಡಿತಗೊಳಿಸಿದ ಸರ್ಕಾರ

    ಕಲ್ಲಡ್ಕ ಪ್ರಭಾಕರ್ ಶಾಲೆಗೆ ಬರುತ್ತಿದ್ದ ಅನುದಾನ ಕಡಿತಗೊಳಿಸಿದ ಸರ್ಕಾರ

    ಮಂಗಳೂರು: ಕಲ್ಲಡ್ಕ ಪ್ರಭಾಕರ್ ನೇತೃತ್ವದ ಎರಡು ಶಾಲೆಗಳಿಗೆ ಬರುತ್ತಿದ್ದ ಅನುದಾನವನ್ನು ಸಿಎಂ ಸಿದ್ದರಾಮಯ್ಯ ಸರ್ಕಾರ ಕಡಿತಗೊಳಿಸಿದೆ.

    ಬಂಟ್ವಾಳದಲ್ಲಿ ನಡೆದ ಕೋಮುಗಲಭೆ ವೇಳೆ ಸರ್ಕಾರ ಹಾಗೂ ಕಲ್ಲಡ್ಕ ಪ್ರಭಾಕರ್ ನಡುವೆ ದೊಡ್ಡ ಸಂಘರ್ಷವೇ ನಡೆದಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುತ್ತಿದ್ದ ಶ್ರೀರಾಮ ವಿದ್ಯಾ ಹಾಗೂ ಶ್ರೀದೇವಿ ವಿದ್ಯಾ ಕೇಂದ್ರಕ್ಕೆ ಬರುತ್ತಿದ್ದ ಅನುದಾನವನ್ನು ಕಡಿತಗೊಳಿಸಿದ್ದಾರೆ.

    ಕಳೆದ ಹತ್ತು ವರ್ಷಗಳಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ಈ ಶಾಲೆಗಳಿಗೆ ಅನುದಾನ ನೀಡಲಾಗ್ತಿತ್ತು. ಈ ಎರಡು ಶಾಲೆಗಳನ್ನು ಕೊಲ್ಲೂರು ಮೂಕಾಂಬಿಕಾ ದೇವಾಲಯ ದತ್ತು ಪಡೆದುಕೊಂಡಿತ್ತು. ಕಳೆದ ಹತ್ತು ವರ್ಷಗಳಲ್ಲಿ ಕೊಲ್ಲೂರು ದೇಗುಲದಿಂದ 2.83 ಕೋಟಿ ಅನುದಾನ ನೀಡಲಾಗಿತ್ತು. ಕಲ್ಲಡ್ಕ ವಿದ್ಯಾಕೇಂದ್ರಕ್ಕೆ 2.32 ಕೋಟಿ ರೂ. ನೆರವು ಲಭಿಸಿತ್ತು. ಹಾಗೆ ಬಂಟ್ವಾಳದ ಪುಣಚ ಶ್ರೀದೇವಿ ವಿದ್ಯಾಕೇಂದ್ರಕ್ಕೆ 50.72 ಲಕ್ಷ ನೆರವು ಲಭಿಸಿತ್ತು.

    ಇದೀಗ ಕೊಲ್ಲೂರು ದೇಗುಲ ದತ್ತು ತೆಗೆದುಕೊಂಡಿದ್ದ ಆದೇಶ ಹಿಂದಕ್ಕೆ ಪಡೆಯಲಾಗಿದ್ದು, ದೇವಸ್ಥಾನದ ದುಡ್ಡು ಶಾಲೆಗೆ ನೀಡಬಾರದೆಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

  • ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇವತ್ತು ಕೊನೆಯ ದಿನ: ಮಂಗಳೂರು ಮುಸ್ಲಿಮ್ಸ್ ಪೇಜ್

    ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇವತ್ತು ಕೊನೆಯ ದಿನ: ಮಂಗಳೂರು ಮುಸ್ಲಿಮ್ಸ್ ಪೇಜ್

    ಮಂಗಳೂರು: “ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‍ಗೆ ಇಂದು ಕೊನೆಯ ದಿನ” ಎಂದು ಮಂಗಳೂರು ಮುಸ್ಲಿಮ್ ಹೆಸರಿನಲ್ಲಿರುವ ಫೇಸ್‍ಬುಕ್ ಪೇಜ್ ನಲ್ಲಿ ಸ್ಟೇಟಸ್ ಅಪ್‍ಡೇಟ್ ಆಗಿದೆ.

    ಭಯೋತ್ಪಾದಕ ಕಲ್ಲಡ್ಕ ಪ್ರಭಾಕರ ಭಟ್ಟ ಸತ್ತರೆ ಅವನಿಗೆ ರಾಷ್ಟ್ರ ಧ್ವಜ ಹಾಕಿ ಗೌರವಿಸುತ್ತಿರೋ ಇಲ್ಲಾ ಕೇಸರಿ ಧ್ವಜ ಹಾಕುತ್ತಿರೋ? ಇವತ್ತು ಅವನ ಕೊನೆಯ ದಿನ..ತೀರ್ಮಾನಿಸಿ ಎಂದು ಈ ಎಫ್‍ಬಿ ಪೇಜ್‍ನಲ್ಲಿ ಸ್ಟೇಟಸ್ ಹಾಕಲಾಗಿದೆ.

    ಈ ಪೇಜ್ ನಲ್ಲಿ ರಾಜ್ಯಸರ್ಕಾರ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದ್ದು, ಬಂಟ್ವಾಳದಲ್ಲಿ ಪ್ರತಿಭಟನೆ ಮುಂದಾದ ಸಂಘ ಪರಿವಾರದ ವ್ಯಕ್ತಿಗಳನ್ನು ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಲಾಗಿದೆ.

    ಪೋಸ್ಟ್ ನಲ್ಲಿ ಏನಿದೆ?
    ಕಲಾಯಿ ಅಸ್ರಫ್ ಅವರನ್ನು ಆರ್‍ಎಸ್‍ಎಸ್ ಸಂಘಪರಿವಾರದವರು ಭೀಕರವಾಗಿ ಕೊಲೆ ಮಾಡಿದನ್ನು ವಿರೋಧಿಸಿ ಮುಸ್ಲಿಮರು ಪ್ರತಿಭಟನೆ ನಡೆಸಲು ತಯಾರಾದಾಗ, ಇಲ್ಲಿ ನಿಷೇಧಾಜ್ಞೆ ಇದೆ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಪ್ರತಿಭಟನೆಗೆ ಮುಂದಾದರೆ ಎಲ್ಲರನ್ನೂ ಬಂಧಿಸಿ ಜೈಲಿಗೆ ಕಳುಹಿಸುತ್ತೇವೆ ಎಂದು ಕಾಂಗ್ರೆಸ್ ಸರಕಾರದ ಪೋಲೀಸ್ ಇಲಾಖೆ ಹೇಳಿತ್ತು.

    ಈಗ ಏನು ಮಾಡುತ್ತಿದೆ? ಇಷ್ಟು ಸಂಖ್ಯೆಯಲ್ಲಿ ಸಂಘಪರಿವಾರ ದವರು ಪ್ರತಿಭಟನೆಗಾಗಿ ಬಿಸಿ ರೋಡ್ ಬಂದು ಸೇರಲು ಎಲ್ಲಾ ರೀತಿಯ ಸಹಕಾರ ಪೊಲೀಸ್ ಇಲಾಖೆ ಮಾಡುವಂತೆ ಮಾಡಿದ್ದು ಪ್ರಭಾಕರ ಭಟ್ಟನಾ ಇಲ್ಲ? ಉಸ್ತುವಾರಿ ಸಚಿವರಾ? ರಾಜ್ಯದ ಜನತೆಗೆ ಕಾಂಗ್ರೆಸ್ ಸರಕಾರ ಉತ್ತರಿಸಬೇಕು.

    ನಿಷೇಧಾಜ್ಞೆ ಯನ್ನು ಲೆಕ್ಕಿಸದೆ ಸರಕಾರಕ್ಕೆ ಕಾನೂನಿಗೆ ಸವಾಲೆಸೆದು ಪ್ರತಿಭಟನೆಗಾಗಿ ಅಲ್ಲಿ ಬಂದು ಸೇರಿದ ಪ್ರತಿಯೊಬ್ಬರ ಮೇಲೂ ಕೇಸು ದಾಖಲಿಸಿ ಜೈಲಿಗೆ ಕಳುಹಿಸುವ ಧೈರ್ಯ ಕಾಂಗ್ರೆಸ್ ಸರಕಾರಕ್ಕೆ ಇದೆಯಾ? ಕಾನೂನು ಕ್ರಮವೆಲ್ಲಾ ಮುಸ್ಲಿಮರ ಮೇಲೆ ಮಾತ್ರ ಪ್ರಯೋಗಿಸಲಿಕ್ಕಾಗಿ ಮಾತ್ರ ಇರುವುದಾ ಕಾಂಗ್ರೆಸ್ ನಾಯಕರೇ ಉತ್ತರಿಸಿ.

    ಈ ಪೋಸ್ಟಿಗೆ #ಅಕ್ರವಾಗಿ_ಪ್ರತಿಭಟನೆ_ನಡೆಸಿದ_ಸಂಘಪರಿವಾರದ_ಗೂಂಡಗಳ_ಮೇಲೆ_ಲಾಠಿ_ಬೀಸಲಾಗದ_ಪೋಲಿಸರೇನು_ಗಂಡಸರಲ್ಲವೇ ಎನ್ನುವ ಹ್ಯಾಶ್ ಟ್ಯಾಗ್ ಬಳಸಲಾಗಿದೆ. ಈ ಪೋಸ್ಟಿಗೆ ಸಾಕಷ್ಟು ಪರ ವಿರೋಧ ಪ್ರತಿಕ್ರಿಯೆಗಳು ಬಂದಿದೆ.