Tag: Kalyan Singh

  • ಬಾಬ್ರಿ ಮಸೀದಿ ವಿವಾದ: ಅಡ್ವಾಣಿ ಸೇರಿ ಹಲವು ನಾಯಕರನ್ನು ಖುಲಾಸೆಗೊಳಿಸಿದ್ದ ಅರ್ಜಿ ಆ.1ಕ್ಕೆ ವಿಚಾರಣೆ

    ಬಾಬ್ರಿ ಮಸೀದಿ ವಿವಾದ: ಅಡ್ವಾಣಿ ಸೇರಿ ಹಲವು ನಾಯಕರನ್ನು ಖುಲಾಸೆಗೊಳಿಸಿದ್ದ ಅರ್ಜಿ ಆ.1ಕ್ಕೆ ವಿಚಾರಣೆ

    ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಸೇರಿದಂತೆ ಹಲವು ನಾಯಕರನ್ನು ಖುಲಾಸೆಗೊಳಿಸಿ ಲಕ್ನೋ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಆದರೆ ಈ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯ ಅರ್ಜಿ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಆಗಸ್ಟ್ 1ರಂದು ನಡೆಸಲಿದೆ.

    ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ಬಿಜೆಪಿ ನಾಯಕರಾದ ಮುರುಳಿ ಮನೋಹರ್ ಜೋಶಿ, ಉಮಾ ಭಾರತಿ ಮತ್ತು ಇತರ ಹಲವು ನಾಯಕರನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಿತ್ತು. ಇದನ್ನೂ ಓದಿ: ಬಾಬ್ರಿ ಮಸೀದಿ ಧ್ವಂಸ ಆಕಸ್ಮಿಕ ಘಟನೆ – ಎಲ್ಲ ಆರೋಪಿಗಳು ಖುಲಾಸೆ

    ಆಗಸ್ಟ್ 1ರಂದು ಮೇಲ್ಮನವಿ ವಿಚಾರಣೆಗೆ ನಿಗದಿಪಡಿಸುವಂತೆ ನ್ಯಾಯಮೂರ್ತಿ ದಿನೇಶ್ ಕುಮಾರ್ ಸಿಂಗ್ ಅವರ ನೇತೃತ್ವದ ಏಕಸದಸ್ಯ ಪೀಠವು ಆರಂಭದಲ್ಲಿ ಆದೇಶ ಮಾಡಿತ್ತು. ಆಗಸ್ಟ್ 1ರಂದು ಈ ಮೇಲ್ಮನವಿಯನ್ನು ಮೊದಲ 10 ಪ್ರಕರಣಗಳಲ್ಲಿ ಒಂದಾಗಿ ಪಟ್ಟಿ ಮಾಡಿ ಎಂದು ನ್ಯಾಯಾಲಯ ನಿರ್ದೇಶಿಸಿತ್ತು.

    ಬಾಬ್ರಿ ಮಸೀದಿಯನ್ನು ಧ್ವಂಸ ಮಾಡಲು ಪಿತೂರಿ ನಡೆಸಲಾಗಿತ್ತು ಎಂದು ತೋರಿಸಲು ಯಾವುದೇ ದಾಖಲೆಗಳು ಇಲ್ಲ ಎಂದು ಸಿಬಿಐ ವಿಶೇಷ ನ್ಯಾಯಾಲಯವು 2020ರಲ್ಲಿ ನೀಡಿದ್ದ ತೀರ್ಪನ್ನು ಅಯೋಧ್ಯೆಯ ನಿವಾಸಿಗಳಾದ ಹಾಜಿ ಮಹಬೂಬ್ ಅಹಮದ್ ಮತ್ತು ಸಯ್ಯದ್ ಅಖ್ಲಾಖ್ ಅಹಮದ್ ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಾಬ್ರಿ ಮಸೀದಿ ಇತ್ತು, ಮುಂದೆಯೂ ಇರಲಿದೆ: ಭೂಮಿ ಪೂಜೆಗೂ ಮುನ್ನ ಓವೈಸಿ ಟ್ವೀಟ್

    ತಾವು ಐತಿಹಾಸಿಕ ಧಾರ್ಮಿಕ ಸ್ಥಳವಾದ ಬಾಬ್ರಿ ಮಸೀದಿ ಧ್ವಂಸದ ಸಂತ್ರಸ್ತರಾಗಿದ್ದು, ಆ ಘಟನೆಗೆ ಸಾಕ್ಷಿಗಳಾಗಿದ್ದೇವೆ. ಆ ಸಂದರ್ಭದಲ್ಲಿ ನಡೆದ ದೊಂಬಿ ಗಲಭೆಗಳಿಂದ ಆರ್ಥಿಕವಾಗಿ ಸಾಕಷ್ಟು ನಷ್ಟ ಅನುಭವಿಸಿದ್ದೇವೆ ಎಂದು ಅರ್ಜಿದಾರರು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

    2021ರಲ್ಲೇ ಪರಿಷ್ಕರಣಾ ಮನವಿ ಸಲ್ಲಿಸಲಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಸಯ್ಯದ್ ಫರ್ಮಾನ್ ಅಲಿ ನಖ್ವಿ ಅವರು ಪೀಠಕ್ಕೆ ತಿಳಿಸಿದರು. ಸಿಆರ್‌ಪಿಸಿ ಸೆಕ್ಷನ್ 372ಗೆ ತಿದ್ದುಪಡಿಯಾಗಿರುವುದರಿಂದ ಅರ್ಜಿಯನ್ನು ಮೇಲ್ಮನವಿಯಾಗಿ ಪರಿಗಣಿಸುವಂತೆ ಕೋರಿದ್ದರು.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಧ್ವಜದ ಮೇಲೆ ಬಿಜೆಪಿ ಬಾವುಟ – ಕಾಂಗ್ರೆಸ್, ಟಿಎಂಸಿ ಪ್ರಶ್ನೆ

    ರಾಷ್ಟ್ರಧ್ವಜದ ಮೇಲೆ ಬಿಜೆಪಿ ಬಾವುಟ – ಕಾಂಗ್ರೆಸ್, ಟಿಎಂಸಿ ಪ್ರಶ್ನೆ

    – ಕಲ್ಯಾಣ್ ಸಿಂಗ್ ಪಾರ್ಥಿವ ಶರೀರದ ಮೇಲೆ ಹಾಕಲಾಗಿದ್ದ ಧ್ವಜ

    ಲಕ್ನೋ: ರಾಷ್ಟ್ರಧ್ವಜದ ಮೇಲೆ ಬಿಜೆಪಿ ಬಾವುಟ ಹಾಕಿರೋದನ್ನು ಕಾಂಗ್ರೆಸ್ ಮತ್ತು ಟಿಎಂಸಿ ಖಂಡಿಸಿದ್ದು, ಕಮಲ ನಾಯಕರನ್ನು ಪ್ರಶ್ನೆ ಮಾಡಿದ್ದಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಲ್ಯಾಣ್ ಸಿಂಗ್ ಶನಿವಾರ ರಾತ್ರಿ ನಿಧನರಾಗಿದ್ದರು. ಭಾನುವಾರ ಲಕ್ನೋ ನಗರದ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಇರಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರದ ಮೇಲೆ ಗೌರವ ಪೂರ್ವಕಗಾಗಿ ರಾಷ್ಟ್ರಧ್ವಜ ಹಾಕಲಾಗಿತ್ತು. ಇದರ ಮೇಲೆಯೇ ಬಿಜೆಪಿ ಧ್ವಜ ಹಾಕಿರೋದು ವಿವಾದಕಕ್ಕೆ ಕಾರಣವಾಗಿದೆ. ರಾಷ್ಟ್ರಧ್ವಜಕ್ಕೆ ಬಿಜೆಪಿ ಅವಮಾನಿಸಿದೆ. ಮಾತೃಭೂಮಿಗೆ ಗೌರವ ತೋರುವ ಹೊಸ ಆಯಾಮ ಎಂದು ಟಿಎಂಸಿ ಖಾರವಾಗಿ ಟೀಕಿಸಿದೆ.

    ನಕಲಿ ದೇಶಭಕ್ತಿ ಅನಾವರಣ ಎಂದ ಕಾಂಗ್ರೆಸ್: ಬಿಜೆಪಿಗರು ಯಾವ ಪರಿಸ್ಥಿತಿಯಲ್ಲೂ ಪಕ್ಷದ ಹಾಗೂ ಮೋದಿಯ ‘ಬ್ರಾಂಡಿಂಗ್’ ಮಾಡುವ ಅವಕಾಶ ಬಿಡರು, ಶವವಾದರೂ ಸರಿಯೇ! ಕಲ್ಯಾಣ್ ಸಿಂಗ್‍ರ ಮೃತದೇಹಕ್ಕೆ ಹೊದಿಸಿದ್ದ ರಾಷ್ಟ್ರಧ್ವಜದ ಮೇಲೆ ಬಿಜೆಪಿ ಧ್ವಜ ಹಾಕುವ ಮೂಲಕ ರಾಷ್ಟ್ರಧ್ವಜದ ಮೇಲಿರುವ ತಮ್ಮ ಸುಪ್ತದ್ವೇಷ ಹೊರಹಾಕಿ ಜೆ.ಪಿ.ನಡ್ಡಾ ಅವಮಾನಿಸಿದ್ದಾರೆ. ಬಿಜೆಪಿಯ ನಕಲಿ ದೇಶಭಕ್ತಿ ಅನಾವರಣಗೊಂಡಿದೆ ಎಂದು ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ. ಇದನ್ನೂ ಓದಿ: ಪಂಜಶೀರ್ ವಶಕ್ಕೆ ಮುಂದಾಗಿದ್ದ 300 ತಾಲಿಬಾನಿಗಳು ಮಟಾಷ್!

    ಭಾರತದ ತ್ರಿವರ್ಣ ಧ್ವಜದ ಮೇಲೆ ರಾಜಕೀಯ ಪಕ್ಷವೊಂದರ ಬಾವುಟ ಇರಿಸೋದು ಸರಿಯೇ? ಈ ಫೋಟೋ ನೋಡಿದ ಮೇಲೆ ಯಾವುದೋ ಒಂದು ಪಕ್ಷದ ಧ್ವಜ ರಾಷ್ಟ್ರ ಧ್ವಜಕ್ಕಿಂತ ದೊಡ್ಡದು ಆಯ್ತಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ ಎಂದು ಯುಥ್ ಕಾಂಗ್ರೆಸ್ ಅಧಕ್ಷ ಬಿ.ವಿ.ಶ್ರೀನಿವಾಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕೋವಿಡ್ ಕಾಲಘಟ್ಟದಲ್ಲಿ ಹೊಸ ಮನ್ವಂತರ – ಇಂದಿನಿಂದ ರಾಜ್ಯದಲ್ಲಿ ಶಾಲೆ-ಕಾಲೇಜು ಓಪನ್

  • ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಇನ್ನಿಲ್ಲ

    ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಇನ್ನಿಲ್ಲ

    ನವದೆಹಲಿ: ಬಿಜೆಪಿ ನಾಯಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್(89) ನಿಧನರಾಗಿದ್ದಾರೆ.

    ಅನಾರೋಗ್ಯದಿಂದ ಬಳಲುತ್ತಿದ್ದ ಅವರು ರಾಜೀವ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

    ಇದ್ದಕ್ಕಿದ್ದಂತೆ ದೇಹ ಊದಿಕೊಂಡು, ಪ್ರಜ್ಞಾ ಹೀನರಾಗಿದ್ದ ಹಿನ್ನೆಲೆಯಲ್ಲಿ ಜುಲೈ 4ರಂದು ಕಲ್ಯಾಣ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

    ಬಾಬ್ರಿ ಮಸೀದಿ ಧ್ವಂಸ ಸಂದರ್ಭದಲ್ಲಿ ಸಿಎಂ ಆಗಿದ್ರು. ಇನ್ನು ಕಲ್ಯಾಣ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ, ಯುಪಿ ಸಿಎಂ ಆದಿತ್ಯ ನಾಥ್, ಮಾಜಿ ಸಿಎಂ ಬಿಎಸ್‍ವೈ, ಸಿಎಂ ಬೊಮ್ಮಾಯಿ ಸೇರಿದಂತೆ ಗಣ್ಯಾತಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರ 3 ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ. ಸೋಮವಾರ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ.

  • ಕಲ್ಯಾಣ್ ಸಿಂಗ್ ಆರೋಗ್ಯ ಗಂಭೀರ-ವೆಂಟಿಲೇಟರ್ ಅಳವಡಿಕೆ

    ಕಲ್ಯಾಣ್ ಸಿಂಗ್ ಆರೋಗ್ಯ ಗಂಭೀರ-ವೆಂಟಿಲೇಟರ್ ಅಳವಡಿಕೆ

    ಲಕ್ನೋ: ಅನಾರೋಗ್ಯದಿಂದ ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ಅವರನ್ನು ಮಂಗಳವಾರ ರಾತ್ರಿಯಿಂದ ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ಹಲವು ಬಿಜೆಪಿ ನಾಯಕರು ಈಗಾಗಲೇ ಕಲ್ಯಾಣ್ ಸಿಂಗ್ ಅವರಿರುವ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಆಷಾಢ ಮಾಸ – 1000 ಕೆ.ಜಿ ಮೀನು, 10 ಕುರಿ ಮಗಳಿಗೆ ಗಿಫ್ಟ್ ಕೊಟ್ಟ ತಂದೆ

    ಇದ್ದಕ್ಕಿದ್ದಂತೆ ದೇಹ ಊದಿಕೊಂಡು, ಪ್ರಜ್ಞಾ ಹೀನರಾದ ಹಿನ್ನೆಲೆಯಲ್ಲಿ ಜುಲೈ 4ರಂದು ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕಲ್ಯಾಣ್ ಸಿಂಗ್ ಅವರ ಆರೋಗ್ಯದ ಬಗ್ಗೆ ತಜ್ಞ ವೈದ್ಯರ ತಂಡ ನಿರಂತರವಾಗಿ ಗಮನ ಹರಿಸುತ್ತಿದೆ. ಕಾರ್ಡಿಯಾಲಜಿ, ನೆಫ್ರಾಲಜಿ, ನ್ಯೂರಾಲಜಿ, ಎಂಡೋಕ್ರಿನಾಲಜಿ ವೈದ್ಯರು ಸಿಂಗ್ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ಇಟ್ಟಿದ್ದಾರೆ.

    ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಅಸ್ಥಿರವಾಗಿದೆ. ಉಸಿರಾಟದ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಸಂಜಯ್ ಗಾಂಧಿ ಆಸ್ಪತ್ರೆ ವೈದ್ಯರು ನಿನ್ನೆ ಸಂಜೆ ತಿಳಿಸಿದ್ದಾರೆ. ನಿನ್ನೆ ಸಂಜೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಕೂಡ ಆಸ್ಪತ್ರೆಗೆ ತೆರಳಿ ಕಲ್ಯಾಣ್ ಸಿಂಗ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದರು. ಈಗಾಗಲೇ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕರು ಕಲ್ಯಾಣ್ ಸಿಂಗ್ ಅವರಿರುವ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

  • ಸೈನಿಕರ ಡ್ರೆಸ್ ಹಾಕ್ಕೊಂಡು ಪೋಸ್ ನೀಡಿ ಸೈನಿಕರಿಗೆ ಮೋದಿಯಿಂದ ದ್ರೋಹ: ಎಚ್.ಕೆ.ಪಾಟೀಲ್ ಕಿಡಿ

    ಸೈನಿಕರ ಡ್ರೆಸ್ ಹಾಕ್ಕೊಂಡು ಪೋಸ್ ನೀಡಿ ಸೈನಿಕರಿಗೆ ಮೋದಿಯಿಂದ ದ್ರೋಹ: ಎಚ್.ಕೆ.ಪಾಟೀಲ್ ಕಿಡಿ

    ಗದಗ: ಸೈನಿಕರ ಡ್ರೆಸ್ ಹಾಕಿಕೊಂಡು ಪೋಸ್ ನೀಡಿ ಸೈನಿಕರಿಗೆ ದ್ರೋಹಮಾಡಿದ್ದಾರೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನ ಚುನಾವಣೆ ಪ್ರಚಾರದಿಂದ ತಿರಸ್ಕರಿಸುವಂತೆ ಕೇಂದ್ರ ಚುನಾವಣೆ ಆಯೋಗಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ ಪಾಟೀಲ್ ಆಗ್ರಹಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಒಟ್ಟಾಗಿ ಚುನಾವಣೆ ಎದುರಿಸುತ್ತಿದೆ. ಕರ್ನಾಟಕದಲ್ಲಿ 20 ಕ್ಷೇತ್ರದಲ್ಲಿ ಮೈತ್ರಿ ಪಕ್ಷ ಗೆಲ್ಲುವ ನಿರೀಕ್ಷೆ ಇದೆ. ಕಾಂಗ್ರೆಸ್ ಪ್ರಣಾಳಿಕೆ ಬಂದ ನಂತರ ಬಿಜೆಪಿ ಸಂಪೂರ್ಣವಾಗಿ ತತ್ತರಿಸಿ ಹೋಗಿದೆ. ಕಾಂಗ್ರೆಸ್ ಪ್ರಣಾಳಿಕೆಗೆ ಉತ್ತರಿಸುವ ನೈತಿಕ ಶಕ್ತಿ ಬಿಜೆಪಿ ಕಳೆದುಕೊಂಡಿದೆ. ಹಾಗೆಯೇ ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಮೋದಿ, ಅಮಿತ್ ಶಾ ಪ್ರಶ್ನೆ ಮಾಡಲಿ. ಆದ್ರೆ ಕಾಂಗ್ರೆಸ್ ಪ್ರಣಾಳಿಕೆ ಮೇಲೆ ಮಾತನಾಡುವ ನೈತಿಕತೆ ರಾಜೀವ್ ಕುಮಾರ್ ಗೆ  ಏನಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷರ ವಿರುದ್ಧ ಎಚ್.ಕೆ ಪಾಟೀಲ್ ಕಿಡಿಕಾರಿದರು.

    ಬಿಜೆಪಿ ನಾಯಕರು ಅರಾಜಕತೆ ನಡೆಸಿದ್ದಾರೆ. ಸಾರ್ವಜನಿಕ ಭಾಷಣದಲ್ಲಿ ಯೋಗಿ ಆದಿತ್ಯನಾಥ್ ಮರ್ಯಾದೆ ಕಳೆಯುವ ಮಾತುಗಳನ್ನಾಡಿದ್ದಾರೆ. ಮೋದಿ ಸೇನೆ ರಾಷ್ಟ್ರಕ್ಕೆ ರಕ್ಷಣೆ ಕೊಡ್ತಿದೆ ಎಂಬ ದೇಶದ್ರೋಹಿ ಹೇಳಿಕೆ ನೀಡಿದ್ದಾರೆ. ಮೋದಿ ಸೇನೆ ಅಲ್ಲ, ಅದು ಭಾರತದ ಸೇನೆ. ಸಂವಿಧಾನದ ಉನ್ನತ ಹುದ್ದೆಯಲ್ಲಿರುವ ಯೋಗಿ ಆದಿತ್ಯನಾಥ್ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಚುನಾವಣೆ ಮುಗಿಯುವವರೆಗೂ ಯೋಗಿ ಆದಿತ್ಯನಾಥ್ ಎಲ್ಲೂ ಮಾತನಾಡದಂತೆ ಚುನಾವಣೆ ಆಯೋಗ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

    ರಾಜಸ್ಥಾನ ರಾಜ್ಯಪಾಲ ಕಲ್ಯಾಣ್‍ಸಿಂಗ್ ಬಿಜೆಪಿ ಪರ ಬ್ಯಾಟಿಂಗ್ ನಡೆಸಿದ್ದಾರೆ. ಚುನಾವಣೆ ಮುಗಿಯುವ ವರೆಗೂ ಕಲ್ಯಾಣ್‍ಸಿಂಗ್ ಅವರ ಮಾತುಗಳ ಮೇಲೂ ನಿರ್ಬಂಧ ಹೇರಬೇಕೆಂದು ಅವರು ರಾಷ್ಟ್ರಪತಿಗಳಲ್ಲಿ ಮನವಿ ಮಾಡುವುದಾಗಿ ಹೇಳಿದರು.

  • ನಾವೆಲ್ಲಾ ಬಿಜೆಪಿ ಕಾರ್ಯಕರ್ತರು, ಮೋದಿ ಪಿಎಂ ಆಗಬೇಕು: ರಾಜ್ಯಪಾಲ ಕಲ್ಯಾಣ್ ಸಿಂಗ್

    ನಾವೆಲ್ಲಾ ಬಿಜೆಪಿ ಕಾರ್ಯಕರ್ತರು, ಮೋದಿ ಪಿಎಂ ಆಗಬೇಕು: ರಾಜ್ಯಪಾಲ ಕಲ್ಯಾಣ್ ಸಿಂಗ್

    ನವದೆಹಲಿ: ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ರಾಜಸ್ಥಾನದ ರಾಜ್ಯಪಾಲ ಕಲ್ಯಾಣ್ ಸಿಂಗ್ ಕರೆ ನೀಡಿ ಚರ್ಚೆಗೆ ಗ್ರಾಸವಾಗಿದ್ದಾರೆ.

    ನಾವೆಲ್ಲಾ ಬಿಜೆಪಿ ಪಕ್ಷದ ಕಾರ್ಯಕರ್ತರಾಗಿದ್ದು, ಬಿಜೆಪಿ ಗೆಲುವು ಪಡೆಯುವುದನ್ನು ನೋಡಲು ಉತ್ಸುಕರಾಗಿದ್ದೇವೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಆಗಬೇಕು. ಇದು ದೇಶದ ಅಭಿವೃದ್ಧಿಗೆ ಬಹುಮುಖ್ಯ ಎಂದು ಕಲ್ಯಾಣ್ ಸಿಂಗ್ ಅಭಿಪ್ರಾಯ ಪಟ್ಟಿದ್ದಾರೆ.

    ಸಾಂವಿಧಾನತ್ಮಾಕ ಹುದ್ದೆಯಲ್ಲಿರುವ ರಾಜ್ಯಪಾಲರು, ಪಕ್ಷಾತೀತವಾಗಿ ಇರುವ ಮೂಲಕ ಆ ಸ್ಥಾನಕ್ಕೆ ಗೌರವ ನೀಡಬೇಕು. ಆದರೆ ಗವರ್ನರ್ ಆಗಿದ್ದುಕೊಂಡು ಕಲ್ಯಾಣ್ ಸಿಂಗ್ ಈ ರೀತಿ ಹೇಳಿಕೆ ನೀಡಿದ್ದು ಎಷ್ಟು ಸರಿ ಎಂದು ಜನ ಈಗ ಪ್ರಶ್ನೆ ಮಾಡುತ್ತಿದ್ದಾರೆ.

    ಅಂದಹಾಗೇ ಕಲ್ಯಾಣ್ ಸಿಂಗ್ ಉತ್ತರ ಪ್ರದೇಶದ ಸಿಎಂ ಆಗಿ 1991 ರಿಂದ 1992 ಸೇವೆ ಸಲ್ಲಿಸಿದ್ದರು. ಅಲ್ಲದೇ 2009ರ ಲೋಕಸಭಾ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆ ಆಗಿದ್ದರು. ಅಲ್ಲದೇ 2014 ಚುನಾವಣೆಯಲ್ಲಿ ಬಿಜೆಪಿ ಗೆಲುವು ಪಡೆದ ಹಿನ್ನೆಲೆಯಲ್ಲಿ ಕಲ್ಯಾಣ್ ಸಿಂಗ್‍ರನ್ನು ರಾಜಸ್ಥಾನದ ರಾಜ್ಯಪಾಲರಾಗಿ ನೇಮಕ ಮಾಡಲಾಗಿತ್ತು.